Author: kannadanewsnow57

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ನಿಗಮಗಳಾದ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.10 ಕೊನೆಯ ದಿನವಾಗಿದೆ. ಪರಿಶಿಷ್ಟ ಜಾತಿ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-1, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-2, ಉದ್ಯಮಶೀಲತಾ ಅಭಿವೃದ್ಧಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯ ಕುರಿತು ಸವಿವರವಾಗಿ ಸಮಾಜ ಕಲ್ಯಾಣ ಇಲಾಖೆಯ ಸಾಲ ಸೇವೆಗಳ ಪೋರ್ಟಲ್ ವೆಬ್‌ಸೈಟ್ https://swdcorp.karnataka.gov.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. 2023-24ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆಸಕ್ತರು https://sevasindhu.karnataka.govt.in ತಂತ್ರಾAಶದ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ…

Read More

ಬೆಂಗಳೂರು : ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಅವರ್‌ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಆ್ಯಂಬುಲೆನ್ಸ್‌ಗಳ ಸೇವೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಸಾರಿಗೆ ಇಲಾಖೆ ಸಹಕಾರದೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಡ್ ಸುರಕ್ಷತೆ ನಿಧಿಯಡಿ ಯೋಜನೆ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ ಹಂತದಲ್ಲಿ 65 ಆ್ಯಂಬುಲೆನ್ಸ್‌ಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಿಕೊಟ್ಟಿದ್ದಾರೆ. ಅಪಘಾತಕ್ಕೀಡಾದವರಿಗೆ ಆಪತ್ಬಾಂಧವನ ರೀತಿಯಲ್ಲಿ ಕಾರ್ಯನಿರ್ವಹಿಸಲಿರುವ ಈ ಆ್ಯಂಬುಲೆನ್ಸ್‌ಗಳಲ್ಲಿ 26 ಅಡ್ವಾನ್ಸ್ ಲೈಫ್ ಸಪೋರ್ಟ್ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ರಸ್ತೆ ಸಂಚಾರದಲ್ಲಿ ಹೆಚ್ಚು ಅಪಘಾತ ಸಂಭವಿಸುವ 65 ಬ್ಲಾಕ್ ಸ್ಪಾಟ್‌ಗಳನ್ನು ಗುರುತಿಸಿದ್ದು, ಅಂತಹ ಸ್ಥಳಗಳ ಹತ್ತಿರದಲ್ಲಿರುವ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಿಗೆ ಈ ಆ್ಯಂಬುಲೆನ್ಸ್‌ಗಳನ್ನು ನೀಡಲಾಗಿದೆ. * ಆ್ಯಂಬುಲೆನ್ಸ್‌ಗಳು ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳ ಸನಿಹದ ಆಸ್ಪತ್ರೆಗಳಲ್ಲಿ ತಂಗಲಿವೆ. * 65 ಹಾಟ್‌ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಆ ಸ್ಥಳಗಳ ಹತ್ತಿರದ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳಿಗೆ ಆ್ಯಂಬುಲೆನ್ಸ್‌ಗಳನ್ನು ನೀಡಲಾಗಿದೆ. * ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅಡ್ವಾನ್ಸ್‌ ಲೈಫ್ ಸಪೋರ್ಟ್…

Read More

ಲೆಬನಾನ್: ಸೆಪ್ಟೆಂಬರ್ 23 ರಂದು ಇಸ್ರೇಲ್ ಗಡಿಯ ಸಮೀಪವಿರುವ ಮರ್ಜಯೂನ್ನಿಂದ ಚಿತ್ರಿಸಿದಂತೆ, ಹೆಜ್ಬುಲ್ಲಾ ಮತ್ತು ಇಸ್ರೇಲಿ ಪಡೆಗಳ ನಡುವೆ ನಡೆಯುತ್ತಿರುವ ಗಡಿಯಾಚೆಗಿನ ಹಗೆತನದ ಮಧ್ಯೆ, ಇಸ್ರೇಲ್ ದಾಳಿಯ ನಂತರ ದಕ್ಷಿಣ ಲೆಬನಾನ್ ಮೇಲೆ ಮೋಕ್ ದಾಳಿ ನಡೆಸುತ್ತಿದೆ.  ಮಿಲಿಟರಿ ಕಾರ್ಯಾಚರಣೆಗಳ ನಾಟಕೀಯ ಉಲ್ಬಣದಲ್ಲಿ, ಇಸ್ರೇಲ್ ಹೆಜ್ಬುಲ್ಲಾ ವಿರುದ್ಧ ತನ್ನ ಅತ್ಯಂತ ವ್ಯಾಪಕವಾದ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದೆ, ಲೆಬನಾನ್ ನಾದ್ಯಂತ ನೂರಾರು ತಾಣಗಳನ್ನು ಗುರಿಯಾಗಿಸಿಕೊಂಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಲೆಬನಾನ್ ಮೂಲಗಳ ಪ್ರಕಾರ, ಇತ್ತೀಚಿನ ದಾಳಿಯು ಸುಮಾರು ಒಂದು ವರ್ಷದಲ್ಲಿ ಅತ್ಯಂತ ತೀವ್ರವಾದ ಗಡಿಯಾಚೆಗಿನ ವಿನಿಮಯಗಳ ನಡುವೆ 182 ಸಾವುಗಳಿಗೆ ಕಾರಣವಾಗಿದೆ ಎಂದು ವರದಿಯಾಗಿದೆ. ಪ್ರಸ್ತುತ ಗಾಝಾದಲ್ಲಿ ಇಸ್ರೇಲ್ನೊಂದಿಗೆ ನಡೆಯುತ್ತಿರುವ ಸಂಘರ್ಷದಲ್ಲಿ ತೊಡಗಿರುವ ಹಮಾಸ್ಗೆ ಬೆಂಬಲವಾಗಿ ಹಿಜ್ಬುಲ್ಲಾ ರಾಕೆಟ್ಗಳನ್ನು ಉಡಾಯಿಸುತ್ತಿರುವ ಇಸ್ರೇಲ್ ತನ್ನ ಉತ್ತರ ಗಡಿಯತ್ತ ತನ್ನ ಗಮನವನ್ನು ಬದಲಾಯಿಸುತ್ತಿರುವಾಗ ಈ ಸಂಘರ್ಷದ ಉಲ್ಬಣ ಕಂಡುಬಂದಿದೆ. ಇಸ್ರೇಲ್ ರಕ್ಷಣಾ ಸಚಿವ ಯೋವ್ ಶೌರ್ಯಂಟ್ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾ, “ನಾವು ಲೆಬನಾನ್ನಲ್ಲಿ ನಮ್ಮ ದಾಳಿಯನ್ನು…

Read More

ಬೆಂಗಳೂರು: ನಾಳೆ ನಗರದಲ್ಲಿ ಬೆಸ್ಕಾಂ ಇಲಾಖೆಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆ.25ರ ನಾಳೆ ಬೆಂಗಳೂರಿನ ಕೆಲ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಉಂಟಾಗಲಿದೆ. ದಿನಾಂಕ 25.09.2024 (ಬುಧುವಾರ) ಬೆಳಿಗ್ಗೆ 11;00 ಗಂಟೆಯಿAದ ಮಧ್ಯಾಹ್ನ 03:30 ಗಂಟೆಯವರೆಗೆ 66/11ಕೆವಿ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಹಳೆಹಳ್ಳಿ, ಮಾರ್ಗೊಂಡಣ ಹಳ್ಳಿ, ಗವಿಗುಡಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಅಥಮ ವಿದ್ಯಾನಗರ, ಕೆ.ಆರ್.ಸಿ ಬಸ್ ನಿಲ್ದಾಣ, ಬೈರತಿ, ಗುಬ್ಬಿ ಅಡ್ಡ ರಸ್ತೆ, ಬೈರತಿ ಬಂಡೆ, ಕ್ಯಾಲಸನಹಳ್ಳಿ, ಪೂರ್ವಾಂಕರ ಅಪಾರ್ಟ್ಮೆಂಟ್, ಮತ್ತು ಸುತ್ತಮುತ್ತಲಿನ ಪ್ರದೇಶ.” ವಿದ್ಯುತ್ ದೂರಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಗೆ ಸಂಪರ್ಕಿಸುವುದು.

Read More

ಬೆಂಗಳೂರು : ಜನರಿಗೆ ಸುಗಮ ಆಡಳಿತ ನೀಡುವ ಭಾಗವಾಗಿ ಅಕ್ಟೋಬರ್.21ರ ನಂತರ ನೋಂದಣಿ ಕಚೇರಿಗಳು ಶನಿವಾರ-ಭಾನುವಾರದ ರಜೆ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ಬಗ್ಗೆ ಮಾಹಿತಿ ನೀಡಿದ ಅವರು, “ದುಡಿಯುವ ಮಧ್ಯಮ ವರ್ಗದ ಜನ ವಾರದ ದಿನಗಳಲ್ಲಿ ತಮ್ಮ ಕೆಲಸಗಳನ್ನು ಬಿಟ್ಟು ನೋಂದಣಿ ಕಚೇರಿಗಳಿಗೆ ಆಗಮಿಸುವುದು ಕಷ್ಟ. ಅಲ್ಲದೆ, ನೋಂದಣಿಗಾಗಿ ಹೊರ ರಾಜ್ಯದಿಂದ ಆಗಮಿಸುವವರಿಗೂ ಅನಾನುಕೂಲ ಉಂಟಾಗುತ್ತಿದೆ. ಹೀಗಾಗಿ ದುಡಿಯುವ ವರ್ಗದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಎರಡನೇ-ನಾಲ್ಕನೇ ಶನಿವಾರ ಹಾಗೂ ಭಾನುವಾರಗಳಲ್ಲೂ ನೋಂದಣಿ ಕಚೇರಿಗಳನ್ನು ತೆರೆಯಲು ನಿರ್ಧರಿಸಲಾಗಿದೆ” ಎಂದರು. ಅಕ್ಟೋಬರ್ 21ರ ನಂತರ ಪ್ರತಿ ನೋಂದಣಿ ಜಿಲ್ಲೆಗಳಲ್ಲಿ ಒಂದು ರಿಜಿಸ್ಟರ್ ಕಚೇರಿ ಶನಿವಾರ ಭಾನುವಾರ ರಜಾ ದಿನಗಳಲ್ಲೂ ಕಾರ್ಯನಿರ್ವಹಿಸಲಿವೆ. ರಜೆ ದಿನಗಳಲ್ಲಿ ಯಾವ ನೋಂದಣಿ ಕಚೇರಿ ಕಾರ್ಯನಿರ್ವಹಿಸಲಿವೆ ಎಂದು ಅವಧಿಗೆ ಮೊದಲೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನೋಂದಣಿಗಾಗಿ ಸಾರ್ವಜನಿಕರು ಅರ್ಜಿ ಹಾಕಿದಾಗ ಯಾವ ಕಚೇರಿ ತೆರೆದಿರುತ್ತದೆ ಎಂಬ…

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯ ನಂತ್ರ, ಇಂದು ಮಧ್ಯಾಹ್ನ 12 ಗಂಟೆಗೆ ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದವನ್ನು ಆಲಿಸಿದ್ದಂತ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ರಾಜಕೀಯ ವಾಗ್ವಾದ, ಪ್ರತಿಭಟನೆ, ಹಲವು ರೀತಿಯ ಲೆಕ್ಕಾಚಾರಕ್ಕೆ ಕಾರಣವಾಗಿದ್ದ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ತೀರ್ಪು ಪ್ರಕಟವಾಗಲಿದೆ. ಮುಖ್ಯಮಂತ್ರಿಗಳ ಅರ್ಜಿ ಕುರಿತಾಗಿ ಘಟಾನುಘಟಿ ವಕೀಲರು ಸುದೀರ್ಘ ವಾದ –ಪ್ರತಿವಾದ ಮಂಡಿಸಿದ್ದಾರೆ. ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ತೀರ್ಪನ್ನು ಇಂದು…

Read More

ಬೆಂಗಳೂರು : ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಸಾವನ್ನಪ್ಪಿದ್ದ ಬಾಲಕ ನಿರಂಜನ್ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೃತ ಬಾಲಕ ನಿರಂಜನ್ ಕುಟುಂಬಕ್ಕೆ ರಾಜ್ಯಸರ್ಕಾರ ಹಾಗೂ ಬಿಬಿಎಂಪಿ ವತಿಯಿಂದ 5 ಲಕ್ಷ ರೂ. ಹಾಗೂ ನಮ್ಮ ಬ್ಲಾಕ್ ಕಾಂಗ್ರೆಸ್ ಕಮಿಟಿಯಿಂದ 5 ಲಕ್ಷ ಸೇರಿದಂತೆ ಒಟ್ಟು 10 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಮೃತ ಬಾಲಕ ನಿರಂಜನ್ ತಂದೆ ವಿಜಯ್, ಮೃತ ನಿರಂಜನ್ ಕಣ್ಣುಗಳನ್ನು ಲಯನ್ಸ್ ಇಂಟರ್‌ನ್ಯಾಷನಲ್‌ ಐ ಬ್ಯಾಂಕ್‌ಗೆ ದಾನ ಮಾಡಲು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ. ಈ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

Read More

ಕಾಸರಗೋಡು : ಕೇರಳದ ಕಾಸರಗೋಡು ಜಿಲ್ಲೆಯ ಚಟ್ಟಂಚಾಲ್‌ನ ಉಕ್ರಂಪಾಡಿಯ 38 ವರ್ಷದ ವ್ಯಕ್ತಿಯೊಬ್ಬರು ಶಂಕಿತ ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್‌ನಿಂದಾಗಿ ಕಣ್ಣೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಚಿಕಿತ್ಸೆ ಪಡೆಯುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಮೃತರನ್ನು ಎಂ.ಮಣಿಕಂದನ್ ಎಂದು ಗುರುತಿಸಲಾಗಿದೆ. ಮುಂಬೈನಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂದನ್ ಅವರು ಜ್ವರದಿಂದ ಅನಾರೋಗ್ಯಕ್ಕೆ ಒಳಗಾದ ನಂತರ ಮನೆಗೆ ಮರಳಿದರು ಮತ್ತು ಆರಂಭದಲ್ಲಿ ಕಾಸರಗೋಡಿನ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ಅವರ ಸ್ಥಿತಿ ಸುಧಾರಿಸಲು ವಿಫಲವಾದ ಕಾರಣ, ಅವರನ್ನು ಕಣ್ಣೂರಿನ ಆಸ್ಪತ್ರೆಗೆ ವರ್ಗಾಯಿಸಲಾಯಿತು, ಅಲ್ಲಿ ಅವರು ಶಂಕಿತ ಅಮೀಬಿಕ್ ಎನ್ಸೆಫಾಲಿಟಿಸ್ ಎಂದು ಗುರುತಿಸಲಾಯಿತು. ಅದರಂತೆ ಕಣ್ಣೂರು ಉಪ ಜಿಲ್ಲಾ ವೈದ್ಯಾಧಿಕಾರಿ ಕೆ.ಸಿ. ಸಚಿನ್, ಸೆರೆಬ್ರೊಸ್ಪೈನಲ್ ದ್ರವ (CSF) ಪರೀಕ್ಷೆಯು ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ನ ಅನುಮಾನಗಳನ್ನು ಹುಟ್ಟುಹಾಕಿದೆ. ಹೆಚ್ಚಿನ ದೃಢೀಕರಣವು ಅಮೀಬಿಕ್ ಪಿಸಿಆರ್ ಪರೀಕ್ಷೆಯ ಫಲಿತಾಂಶಗಳನ್ನು ಅವಲಂಬಿಸಿರುತ್ತದೆ ಎಂದು ಅವರು ಹೇಳಿದರು. ಮಣಿಕಂದನ್‌ಗೆ ಮಿಲ್ಟೆಫೋಸಿನ್‌ನೊಂದಿಗೆ ಚಿಕಿತ್ಸೆ ನೀಡಲಾಯಿತು, ಇದು ಸಾಮಾನ್ಯವಾಗಿ ಅಮೀಬಿಕ್ ಸೋಂಕುಗಳನ್ನು ನಿರ್ವಹಿಸಲು ಬಳಸಲ್ಪಡುತ್ತದೆ. ಕೇರಳದ ಆರೋಗ್ಯ ಇಲಾಖೆಯು ಅವರ ಚಿಕಿತ್ಸಾ…

Read More

ನವದೆಹಲಿ:ರೈಲ್ವೆ ನೇಮಕಾತಿ ಮಂಡಳಿ (ಆರ್ಆರ್ಬಿ) ಆರ್ಆರ್ಬಿ ಎನ್ಟಿಪಿಸಿ ಯುಜಿ ನೇಮಕಾತಿ 2024 ಗಾಗಿ ಆನ್ಲೈನ್ ನೋಂದಣಿಯನ್ನು ಪ್ರಾರಂಭಿಸಿದೆ. ಕೇಂದ್ರೀಕೃತ ಉದ್ಯೋಗ ಅಧಿಸೂಚನೆ ಸಂಖ್ಯೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಸಂಖ್ಯೆ. ನಾನ್-ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ (ಪದವಿಪೂರ್ವ) ಹುದ್ದೆಗಳಿಗೆ ಸಿಇಎನ್ 06/2024 ಅಧಿಕೃತ ವೆಬ್ಸೈಟ್ rrbapply.gov.in ಮೂಲಕ ನೇರ ಅರ್ಜಿ ಲಿಂಕ್ ಅನ್ನು ಪ್ರವೇಶಿಸಬಹುದು. ಈ ನೇಮಕಾತಿ ಡ್ರೈವ್ 3,445 ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 20, 2024 ಆಗಿದ್ದು, ಶುಲ್ಕ ಪಾವತಿಯ ಗಡುವನ್ನು ಅಕ್ಟೋಬರ್ 22, 2024 ಕ್ಕೆ ನಿಗದಿಪಡಿಸಲಾಗಿದೆ. ಆರ್ಆರ್ಬಿ ಎನ್ಟಿಪಿಸಿ ನೇಮಕಾತಿ 2024: ಹುದ್ದೆಗಳ ವಿವರ ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್: 2022 ಹುದ್ದೆಗಳು ಅಕೌಂಟ್ ಕ್ಲರ್ಕ್ ಕಮ್ ಟೈಪಿಸ್ಟ್: 361 ಹುದ್ದೆಗಳು ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್: 990 ಹುದ್ದೆಗಳು ಟ್ರೈನ್ಸ್ ಕ್ಲರ್ಕ್: 72 ಹುದ್ದೆಗಳು ಆರ್ಆರ್ಬಿ ಎನ್ಟಿಪಿಸಿ ನೇಮಕಾತಿ 2024: ಅರ್ಹತಾ ಮಾನದಂಡಗಳು ಪದವಿಪೂರ್ವ ಹುದ್ದೆಗಳಿಗೆ…

Read More

ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಪಠ್ಯಕ್ರಮದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ( SSLC Students ) ಅರ್ಧ ವಾರ್ಷಿಕ ಪರೀಕ್ಷೆಗೂ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನೀಡುವ ಏಕರೂಪದ ಪ್ರಶ್ನೆ ಪತ್ರಿಕೆಗೆ ಉತ್ತರ ಬರೆಯಬೇಕಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಗೂ ( SSLC Exam ) ಏಕರೂಪದ ಪ್ರಶ್ನೆ ಪತ್ರಿಕೆಯನ್ನು ಮಂಡಳಿ ನೀಡುತ್ತಿದೆ. ಕಳೆದ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಶಾಲಾ ಹಂತದಲ್ಲೇ ಪ್ರಶ್ನೆ ಪತ್ರಿಕೆ ತಯಾರಿಸಿ, ಅರ್ಧ ವಾರ್ಷಿಕ ಪರೀಕ್ಷೆ ನಡೆಸಲು ಸೂಚಿಸಲಾಗಿತ್ತು. ಆದರೇ ಈ ವರ್ಷ ಅದಕ್ಕೆ ಬ್ರೇಕ್ ಹಾಕಿದೆ. ಈ ಸಾಲಿನಿಂದ ಸರ್ಕಾರದ ನಿರ್ದೇಶನದಂತೆ ಅರ್ಧ ವಾರ್ಷಿಕ ಪರೀಕ್ಷೆಗೂ ರಾಜ್ಯಾಧ್ಯಂತ ಏಕರೂಪದ ಪ್ರಶ್ನೆಪತ್ರಿಕೆ ನೀಡಲು ಮಂಡಳಿ ತೀರ್ಮಾನಿಸಿದೆ. ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಸೆಪ್ಟೆಂಬರ್.24ರಿಂದ ಅಕ್ಟೋಬರ್ 1ರವರೆಗೆ ಎಸ್ ಎಸ್ ಎಲ್ ಸಿ ಅರ್ಧವಾರ್ಷಿಕ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ…

Read More