Author: kannadanewsnow57

ತುಮಕೂರು: ಜಿಲ್ಲೆಯಲ್ಲಿ ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಇಂದು ತುಮಕೂರು ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ಇಂದಿನ ತುಮಕೂರು ಬಂದ್ ಗೆ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದ್ದಾವೆ. ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಹೋರಾಟ ಸಮಿತಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೆ ರೈತಪರ, ಕನ್ನಡಪರ ಸಂಘಟನೆಗಳು, ವಕೀಲರ ಸಂಘ, ಹೋಟೆಲ್ ಅಸೋಷಿಯೇಷನ್ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿದ್ದಾವೆ. ಇಂದು ಬೆಳಿಗ್ಗೆ 10 ಗಂಟೆಗೆ ಟೌನ್ ಹಾಲ್ ನಿಂದ ಪ್ರತಿಭಟನೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿಭಟನಾ ಕಾರರು ತೆರಳಲಿದ್ದಾರೆ. ತುಮಕೂರು ಜಿಲ್ಲೆಯ 10 ತಾಲ್ಲೂಕುಗಳಲ್ಲೂ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗೋ ಸಾಧ್ಯತೆ ಇದೆ. ಅದರಲ್ಲೂ ಹೇಮಾವತಿ ಲಿಂಕ್ ನಾಲಾ ವ್ಯಾಪ್ತಿಯ ಗುಬ್ಬಿ, ತುರುವೇಕೆರೆ ತಾಲೂಕು ಹಾಗೂ ತುಮಕೂರು ನಗರದಲ್ಲಿ ಇಂದಿನ ಬಂದ್ ಗೆ ಅತಿಹೆಚ್ಚು ಬೆಂಬಲ ವ್ಯಕ್ತವಾಗೋ ಸಾಧ್ಯತೆ ಇದೆ. ಇಂದು ತುಮಕೂರು ನಗರ ಸೇರಿದಂತೆ 10 ತಾಲ್ಲೂಕಿನಲ್ಲಿ ಹೇಮಾವತಿ ಲಿಂಕ್ ವಿರೋಧಿಸಿ ಬಂದ್…

Read More

ಬೆಂಗಳೂರು : ಅನುಕಂಪದ ಆಧಾರದ ಮೇಲೆ ಗ್ರೂಪ್‌ ಡಿ ಹುದ್ದೆಗಳಿಗೆ ನೇಮಕಾತಿ ಸಂಬಂಧ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಪನಿರ್ದೇಶಕರುಗಳ ಮುಖಾಂತರ ಅನುಕಂಪದ ಆಧಾರದ ಮೇಲೆ ಗ್ರೂಪ್ “ಡಿ” ಹುದ್ದೆಗಳಿಗೆ ನೇಮಕಾತಿ ನೀಡುವ ಕುರಿತು ಪ್ರಸ್ತಾವನೆಗಳು ಸ್ವೀಕೃತಿಯಾಗಿರುತ್ತವೆ. ನೇಮಕಾತಿ ಕೋರಿದ ಸಮಯದಲ್ಲಿ ಅಭ್ಯರ್ಥಿಗಳು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಲು ಹಾಗೂ ಕೌನ್ಸೆಲಿಂಗ್‌ಗಾಗಿ ಕೆಳಕಂಡ ನಿಮ್ಮ ಜಿಲ್ಲೆಯ ಅಭ್ಯರ್ಥಿಗಳನ್ನು ದಿನಾಂಕ: 26.06.2024 ರಂದು ಬೆಳಿಗ್ಗೆ 11.00 ಗಂಟೆಗೆ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು-560001. ಈ ಕಛೇರಿಗೆ ತಪ್ಪದೇ ಖುದ್ದು ಹಾಜರಾಗಲು ಅಭ್ಯರ್ಥಿಗಳಿಗೆ ಸೂಚನೆ ನೀಡಿ ಅಗತ್ಯ ಕ್ರಮ ವಹಿಸಲು ತಿಳಿಸಿದೆ.‌            

Read More

ಬೆಂಗಳೂರು : ಅನೇಕ ಬಾರಿ ಬೀಗದ ಕೀಲಿ ಕಳೆದುಹೋಗುತ್ತದೆ, ಅದು ತಿಳಿದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಜನರು ಬೀಗವನ್ನು ಮುರಿಯಲು ಒತ್ತಾಯಿಸಲಾಗುತ್ತದೆ. ಮನೆಯ ಸುರಕ್ಷತೆ ಮತ್ತು ಜನರ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು, ಫಿಂಗರ್ ಪ್ರಿಂಟ್ ಬಯೋಮೆಟ್ರಿಕ್ ಪ್ಯಾಡ್ ಲಾಕ್ ಈಗ ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ಲಾಕ್ ಸಿಸ್ಟಮ್ ನಿಮ್ಮ ಬೆರಳಚ್ಚುಗಳೊಂದಿಗೆ ಲಾಕ್ ಅನ್ನು ಅನ್ಲಾಕ್ ಮಾಡುತ್ತದೆ. ಇದರರ್ಥ ನೀವು ಕೀಲಿಯನ್ನು ಇಟ್ಟುಕೊಳ್ಳುವ ತೊಂದರೆಯನ್ನು ತೊಡೆದುಹಾಕುತ್ತೀರಿ. ಆರ್ಕ್ನಿಕ್ಸ್ ರಗ್ಡ್ ಸ್ಮಾರ್ಟ್ ಫಿಂಗರ್ ಪ್ರಿಂಟ್ ಪ್ಯಾಡ್ಲಾಕ್ ಈ ಫಿಂಗರ್ ಪ್ರಿಂಟ್ ಪ್ಯಾಡ್ ಲಾಕ್ 10 ಫಿಂಗರ್ ಪ್ರಿಂಟ್ ಗಳನ್ನು ಬೆಂಬಲಿಸುತ್ತದೆ. ಅಂದರೆ, ನಿಮ್ಮ ಮನೆಯ 10 ಸದಸ್ಯರು ತಮ್ಮ ಬೆರಳಚ್ಚುಗಳನ್ನು ಸಂಪರ್ಕಿಸಬಹುದು. ಇದರ ಅನುಕೂಲವೆಂದರೆ ಲಾಕ್ ಅನ್ನು ಅನ್ಲಾಕ್ ಮಾಡುವಾಗ ಒಬ್ಬ ಸದಸ್ಯ ಲಭ್ಯವಿಲ್ಲದಿದ್ದರೆ, ಇನ್ನೊಬ್ಬರು ಅದನ್ನು ಸುಲಭವಾಗಿ ತೆರೆಯಲು ಸಾಧ್ಯವಾಗುತ್ತದೆ. ಈ ಲಾಕ್ ನಿಮಗೆ ಸಾಮಾನ್ಯ ಲಾಕ್ ಗಿಂತ ಸ್ವಲ್ಪ ಹೆಚ್ಚು ವೆಚ್ಚವಾಗುತ್ತದೆ. ಬೆಲೆಯ ಬಗ್ಗೆ ಹೇಳುವುದಾದರೆ, ಅದರ ಮೂಲ ಬೆಲೆ 6,999 ರೂ. ಆದರೆ…

Read More

ಬೆಂಗಳೂರು : ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 16 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ʻಯೆಲ್ಲೋ, ಆರೆಂಜ್‌ʼ ಅಲರ್ಟ್‌ ಘೋಷಣೆ ಮಾಡಿದೆ.ಬಾಗಲಕೋಟೆ, ಗದಗ, ದಾವಣಗೆರೆ, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ.

Read More

ನವದೆಹಲಿ : ಮೆಟಾ ತನ್ನ ಎಐ ಚಾಟ್ ಬಾಟ್ ಅನ್ನು ಭಾರತದಲ್ಲಿ ಹೊರತರಲು ಪ್ರಾರಂಭಿಸಿದೆ. ಇದರ ನಂತರ ಭಾರತೀಯ ಬಳಕೆದಾರರು ಈಗ ಮೆಟಾದ ಎಐ ಚಾಟ್ಬಾಟ್ ಅನ್ನು ಉಚಿತವಾಗಿ ಬಳಸಲು ಸಾಧ್ಯವಾಗುತ್ತದೆ. ಬಳಕೆದಾರರು ಈ ಎಐ ಚಾಟ್ಬಾಟ್ ಅನ್ನು ಫೇಸ್ಬುಕ್ ಹೊರತುಪಡಿಸಿ ಅದರ ಎಲ್ಲಾ ಪ್ಲಾಟ್ಫಾರ್ಮ್ಗಳಲ್ಲಿ ಅಂದರೆ ವಾಟ್ಸಾಪ್, ಇನ್ಸ್ಟಾಗ್ರಾಮ್ ಮತ್ತು ಮೆಸೆಂಜರ್ನಲ್ಲಿ ಹಣವನ್ನು ಖರ್ಚು ಮಾಡದೆ ಬಳಸಲು ಸಾಧ್ಯವಾಗುತ್ತದೆ. ಮೆಟಾದ ಎಐ ಚಾಟ್ಬಾಟ್ನ ವಿಶೇಷ ವೈಶಿಷ್ಟ್ಯವೆಂದರೆ ಪಠ್ಯದ ಜೊತೆಗೆ, ಇದು ಬಳಕೆದಾರರಿಗೆ ಚಿತ್ರಗಳನ್ನು ಸಹ ಉತ್ಪಾದಿಸುತ್ತದೆ. ಇದರಿಂದ ಬಳಕೆದಾರರು ತಮ್ಮ ಕೆಲಸವನ್ನು ಉತ್ತಮವಾಗಿ ಮಾಡಲು ಸಾಧ್ಯವಾಗುತ್ತದೆ. ವಾಟ್ಸಾಪ್ನಲ್ಲಿ ಮೆಟಾ ಎಐ ಅನ್ನು ನೀವು ಹೇಗೆ ಬಳಸಬಹುದು ಎಂದು ನಾವು ನಿಮಗೆ ತಿಳಿಸುತ್ತೇವೆ. ವಾಟ್ಸಾಪ್ನಲ್ಲಿ ಮೆಟಾ ಎಐ ಬಳಸುವುದು ಹೇಗೆ? ನೀವು ಸರ್ಚ್ ಬಾರ್ ನಲ್ಲಿ ಟೈಪ್ ಮಾಡಿದಾಗ, ನಿಮ್ಮ ಚಾಟ್ ಗಳು ಫಲಿತಾಂಶಗಳನ್ನು ಮತ್ತು ನೀವು ಮೆಟಾ ಎಐ ಅನ್ನು ಕೇಳಬಹುದಾದ ಪ್ರಶ್ನೆಗಳನ್ನು ತೋರಿಸುತ್ತವೆ. ನೀವು ಪ್ರಶ್ನೆ ಕೇಳದ ಹೊರತು…

Read More

ನವದೆಹಲಿ : ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯನ್ನು ಘೋಷಿಸಿದ್ದರು, ಇದರ ಅಡಿಯಲ್ಲಿ 75,000 ಕೋಟಿ ರೂ.ಸಬ್ಸಿಡಿಯೊಂದಿಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಇದರ ಅಡಿಯಲ್ಲಿ, 1 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗುವ ಯೋಜನೆ ಇದೆ. ಅಲ್ಲದೆ, ಉಳಿದ ವಿದ್ಯುತ್ತನ್ನು ಮಾರಾಟ ಮಾಡುವ ಮೂಲಕ ನೀವು ಪ್ರಯೋಜನ ಪಡೆಯಬಹುದು. ಇದಲ್ಲದೆ, ಕೇಂದ್ರ ಸರ್ಕಾರವು ಈ ಯೋಜನೆಯಡಿ ಸಬ್ಸಿಡಿಯನ್ನು ಸಹ ನೀಡುತ್ತದೆ. ನೀವು ಸಹ ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯ ಲಾಭವನ್ನು ಪಡೆಯಲು ಬಯಸಿದರೆ, ನೀವು ಸೌರ ಫಲಕಗಳನ್ನು ಸ್ಥಾಪಿಸಬೇಕು. ಆದಾಗ್ಯೂ, ಸೌರ ಫಲಕವನ್ನು ಸ್ಥಾಪಿಸುವ ಮೊದಲು, ಕೆಲವು ವಿಶೇಷ ವಿಷಯಗಳನ್ನು ವಿವರವಾಗಿ ತಿಳಿದುಕೊಳ್ಳಬೇಕು. ಇದರಿಂದ ಯೋಜನೆಯ ಲಾಭವನ್ನು ಪಡೆಯುವಲ್ಲಿ ನೀವು ಯಾವುದೇ ರೀತಿಯ ಸಮಸ್ಯೆಯನ್ನು ಎದುರಿಸುವುದಿಲ್ಲ. ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳೋಣ… ಇದಕ್ಕೆ ಎಷ್ಟು ವೆಚ್ಚವಾಗುತ್ತದೆ? ನೀವು ಸೌರ ಫಲಕಗಳನ್ನು ಸ್ಥಾಪಿಸಲು ಹೊರಟರೆ, ಅದರ ವೆಚ್ಚವು…

Read More

ಬೆಂಗಳೂರು : ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ಫುಡ್ ಪಾರ್ಕ್ ಸ್ಥಾಪಿಸುವಂತೆ ʻನಿಸ್ಸಿನ್ ಸಂಸ್ಥೆʼಗೆ ಆಹ್ವಾನ ನೀಡಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ.ಪಾಟೀಲ್‌, ರಾಜ್ಯದಲ್ಲಿ ಬಂಡವಾಳ ಹೂಡಿಕೆ ವೃದ್ಧಿಸುವ ಗುರಿಯೊಂದಿಗೆ ಜಪಾನ್ ಪ್ರವಾಸ ಕೈಗೊಂಡಿದ್ದು, 6ದಶಕಗಳ ಇತಿಹಾಸವುಳ್ಳ ನಿಸ್ಸಿನ್ ಫುಡ್ಸ್ ಕಂಪೆನಿಗೆ ಈದಿನ ಭೇಟಿ ನೀಡಿ ಶ್ರೀ ರ್ಯೋಟಾ ಕವಾವಾ, ಮಿಸ್ ಮಿಚಿಕೊ ಕಾಕುಚಿ ಮತ್ತು ಮಿಸ್ ಕಾಯಾ ತಾನಿ ಸೇರಿದಂತೆ ಪ್ರಮುಖ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಿದೆವು ಎಂದು ತಿಳಿಸಿದ್ದಾರೆ. ವಿಜಯಪುರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಫುಡ್ ಪಾರ್ಕ್ ಸ್ಥಾಪಿಸುವಂತೆ ನಿಸ್ಸಿನ್ ಸಂಸ್ಥೆಗೆ ಆಹ್ವಾನ ನೀಡಿದೆವು. ಫೆಬ್ರವರಿ 2025ರಲ್ಲಿ ಬೆಂಗಳೂರಿನಲ್ಲಿ ಜರುಗಲಿರುವ GIM2025 ರಲ್ಲಿ ‘ಇನ್ವೆಸ್ಟ್ ಕರ್ನಾಟಕ’ದಲ್ಲಿ ಪಾಲ್ಗೊಳ್ಳುವಂತೆ ಆಮಂತ್ರಣ ನೀಡಲಾಗಿದೆ ಎಂದು ಹೇಳಿದ್ದಾರೆ.

Read More

ಬೆಂಗಳೂರು: ಸೌಂದರ್ಯ ಜಗದೀಶ್ ಅವರ ಆತ್ಮಹತ್ಯೆಗೆ ಕೇಸ್​ಗೆ ಬಿಗ್​ ಟ್ವಿಸ್ಟ್ ಸಿಕ್ಕಿದೆ., ಈ ನಡುವೆ ನಟ ದರ್ಶನ್‌ ಗೆಳತಿ ಪವಿತ್ರಗೌಡ ಅವರಿಗೆ ಜಗದೀಶ್‌ ಅವರು ಎರಡು ಕೋಟಿ ಹಣವನ್ನು ನೀಡಿದ್ದಾರೆ ಎನ್ನಲಾಗಿದೆ. ಪವಿತ್ರಾಗೌಡ ಮನೆ ಖರೀದಿಗೆ ಎರಡು ಕೋಟಿ ರೂಪಾಯಿಗಳನ್ನು ಜಗದೀಶ್‌ ಸೌಂದರ್ಯ ಹಣ ಕೊಟ್ಟಿರುವ ಮಾಹಿತಿ ಬಹಿರಂಗವಾಗಿದೆ. ಆದರೆ ಸೌಂದರ್ಯ ಜಗದೀಶ್‌ ಕುಟುಂಬದವರು ಈವರೆಗೆ ಯಾವುದೇ ದೂರು ನೀಡಿಲ್ಲ ಎಂದು ಹೇಳಲಾಗಿದೆ. ಸೌಂದರ್ಯ ಜಗದೀಶ್‌ ಅವರು ಹಣ ಸಹಾಯ ಮಾಡಿದ್ರಾ ಅಥವಾ ಸಾಲ ಕೊಟ್ಟಿದ್ದಾರೋ ಎಂಬುದು ಇದುವರೆಗೆ ತಿಳಿದುಬಂದಿಲ್ಲ. ೨೦೧೭ ನವೆಂಬರ್‌ ನಲ್ಲಿ 1 ಕೋಟಿ ರೂ. ೨೦೧೮ ಜನವರಿಯಲ್ಲಿ 1 ಕೋಟಿ ರೂ.ಗಳನ್ನು ಪವಿತ್ರಾಗೌಡಗೆ ಕೊಟ್ಟಿದ್ದರು ಎನ್ನಲಾಗಿದೆ.

Read More

ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿಇಟಿ, ನೀಟ್ ಮುಖಾಂತರ ವೃತ್ತಿಪರ ಕೋರ್ಸ್‍ಗಳಿಗೆ ಪ್ರವೇಶ ಪಡೆಯಬಯಸುವ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಬೌದ್ಧರು, ಸಿಖ್ಖರು, ಪಾರ್ಸಿ ಮತ್ತು ಆಂಗ್ಲೋ ಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಂದ ಸಿಇಟಿ, ನೀಟ್ ಮುಖಾಂತರ ಎಂಬಿಬಿಎಸ್, ಬಿಡಿಎಸ್, ಬಿ.ಆಯುಷ್, ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್, ಬಿಇ, ಬ್ಯಾಚುಲರ್ ಆಫ್ ಟೆಕ್ನಾಲಜಿ ಕೋರ್ಸ್ ಫಾರ್ಮಸಿ, ಅಗ್ರಿಕಲ್ಚರಲ್ ಸೈನ್ಸ್, ವೆಟೆರಿನರಿ, ಫಾರ್ಮ್ ಸೈನ್ಸ್ ಕೋರ್ಸ್‍ಗಳಿಗೆ ಪ್ರವೇಶ ಹೊಂದುವ ವಿದ್ಯಾರ್ಥಿಗಳಿಗೆ ನಿಗಮದಿಂದ ಒದಗಿಸುವ ಅರಿವು ಯೋಜನೆಯಡಿ ಸಾಲ ಸೌಲಭ್ಯ ನೀಡಲಾಗುವುದು. ಅರ್ಜಿ ಸಲ್ಲಿಸುವವರು ನಿಗಮದ ವೆಬ್‍ಸೈಟ್ https://kmdconline.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಭರ್ತಿ ಮಾಡಿ ಅದರ ಪ್ರಿಂಟ್‍ಕಾಪಿಯನ್ನು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಸಲ್ಲಿಸಬೇಕು. ಬೇಕಾದ ದಾಖಲೆಗಳು: ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್‍ಕಾರ್ಡ್, ಜಾತಿ…

Read More

ಬಳ್ಳಾರಿ : ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮು ಅವಧಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಬೆಳೆ ವಿಮೆ ಯೋಜನೆ (ಕೆಆರ್‍ಎಸ್-ಪಿಎಂಎಫ್‍ಬಿವೈ) ಗೆ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ತಮ್ಮ ಬೆಳೆಗಳ ವಿಮೆಗೆ ನೋಂದಾಯಿಸಿಕೊಳ್ಳಬಹುದು ಎಂದು ಜಿಪಂ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ. ಪ್ರಕೃತಿ ವಿಕೋಪಗಳು, ಹವಾಮಾನ ವೈಪರೀತ್ಯಗಳಾದ ಅತಿವೃಷ್ಟಿ, ಅನಾವೃಷ್ಟಿ, ಬಿರುಗಾಳಿ, ಆಲಿಕಲ್ಲು ಮಳೆ, ಪ್ರವಾಹ ಮತ್ತು ಸಿಡಿಲಿನಿಂದ ಉಂಟಾಗುವ ಬೆಂಕಿ ಅವಘÀಡ ಇತ್ಯಾದಿ ಕಾರಣಗಳಿಂದ ಸಂಭವಿಸಬಹುದಾದ ಬೆಳೆಹಾನಿಯ ನಷ್ಟದ ಪರಿಹಾರವನ್ನು ಬೆಳೆ ವಿಮೆ ಘಟಕ(ಹಳ್ಳಿ, ಗ್ರಾಮಪಂಚಾಯಿತಿ, ಹೋಬಳಿ)ವಾರು ನಿರ್ಧರಿಸಿ ಬೆಳೆ ನಷ್ಟದ ಪರಿಹಾರ ನೀಡಲಾಗುವುದು. ವಿಮಾ ಯೋಜನೆಯಡಿ ಒಳಪಡುವ ನೀರಾವರಿ ಬೆಳೆಗಳಾದ ಕೆಂಪು ಮೆಣಸಿನಕಾಯಿ ಮತ್ತು ಈರುಳ್ಳಿ ಬೆಳೆಗಳಾಗಿವೆ. ಕೆಂಪು ಮೆಣಸಿನಕಾಯಿ: ಬಳ್ಳಾರಿ, ಕಂಪ್ಲಿ, ಕುರುಗೋಡು, ಕೋಳೂರು, ಮೋಕಾ, ರೂಪನಗುಡಿ, ಸಿರುಗುಪ್ಪ, ಕರೂರು, ತೆಕ್ಕಲಕೋಟೆ, ಹಚ್ಚೋಳ್ಳಿ, ತೋರಣಗಲ್ಲು ವಿಮೆಗೆ ಒಳಪಡುವ ಪ್ರದೇಶಗಳಾಗಿದ್ದು, ಪ್ರತಿ ಹೆಕ್ಟರ್‍ಗೆ ವಿಮಾ ಮೊತ್ತ ರೂ.1,07,500 ಹಾಗೂ ರೈತರು…

Read More