Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಗುರುವಾರ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದಾರೆ. ನವೆಂಬರ್ 11 ರಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗುವುದು ಎಂದು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಗುರುವಾರ ಪ್ರಕಟಿಸಿದ್ದಾರೆ. ಅದ್ರಂತೆ, ನೂತನ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭವು ನವೆಂಬರ್ 11ರಂದು ನಿಗದಿಯಾಗಿದೆ. ನ್ಯಾಯಮೂರ್ತಿ ಖನ್ನಾ ಅವರು ಈ ದಿನಾಂಕದಿಂದ ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಸಿಜೆಐ ಚಂದ್ರಚೂಡ್ ಅವರು ನವೆಂಬರ್ 10, 2024 ರಂದು ನಿವೃತ್ತರಾಗಲಿದ್ದಾರೆ. ಅಕ್ಟೋಬರ್ 17 ರಂದು ಹಾಲಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಔಪಚಾರಿಕವಾಗಿ ಶಿಫಾರಸು ಮಾಡಿದ್ದರು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2024-25ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ, ಉದ್ಯಮ ಶೀಲತಾ ಅಭಿವೃದ್ದಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಹುಬ್ಬಳ್ಳಿ ಧಾರವಾಡ ಒನ್ ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ https://sevasindhu.karnataka.gov,in ಮೂಲಕ ನವೆಂಬರ 23, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ : 9482-300-400 ಹಾಗೂ ನಿಗಮದ ವೆಬ್ಸೈಟ್, ಜಿಲ್ಲಾ ವ್ಯವಸ್ಥಾಪಕರ ಕಛೇರಿಗಳನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸ್ವಾವಲಂಬಿ ಸಾರಥಿ ಯೋಜನೆ ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ…
ಬೆಂಗಳುರು : ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯ ನೇಮಕಾತಿಗೆ ಅಕ್ಟೋಬರ್ 26, 27 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ಕಟ್ಟುನಿಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಅ.26 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಕಡ್ಡಾಯ ಕನ್ನಡ ಭಾಷೆ, ಅ.27 ರಂದು ಬೆಳಿಗ್ಗೆ 10-30ರಿಂದ 12.30ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2-30ರಿಂದ ಸಂಜೆ 4.30 ರವರೆಗೆ ಪತ್ರಿಕೆ-2ರ ಪರೀಕ್ಷೆಗಳು ನಡೆಯಲಿವೆ. ಕೇಂದ್ರದೊಳಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಂತೆ ನಿಗಾವಹಿಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ, ಕೇಂದ್ರದೊಳಗೆ ಪ್ರವೇಶ ಮಾಡುವಾಗ ಸಂಪೂರ್ಣ ತಪಾಸಣೆ ಮಾಡಿ ಭಾವಚಿತ್ರಗಳನ್ನು ಮೂಲ ದಾಖಲೆಗಳೊಂದಿಗೆ ಪರೀಕ್ಷೆ ಮಾಡಲು ಸೂಚಿಸಿ ಪ್ರಶ್ನೆ ಪತ್ರಿಕೆಯನ್ನು ಅಭ್ಯರ್ಥಿಗಳಿಗೆ ನೀಡುವಾಗ ಮತ್ತು ಉತ್ತರ ಪತ್ರಿಕೆ ವಾಪಾಸ್ ಪಡೆಯುವುದನ್ನು ಹಾಗೂ ಖಜಾನೆ ಕಳುಹಿಸುತ್ತಿರುವ ಕುರಿತು ವಿಡಿಯೋ ಮಾಡಲಾಗುತ್ತದೆ. ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ…
ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಬಸ್ ನಿಲ್ದಾಣದ ಬಳಿ ಬಿಎಂಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಆನಂದ್ (36) ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡ ಆನಂದ್ ಅವರನ್ನು ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಬೈಕ್ ಸವಾರ ಆನಂದ್ ಮತ್ತೊಂದು ವಾಹನವನ್ನು ಓವರ್ ಟೆಕ್ ಮಾಡುವಾಗ ಎದುರಿಗೆ ಬಂದ ಬಿಎಂಟಿಸಿ ಬಸ್ ಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾಸನ : ಹಾಸನದ ಹಾಸನಂಬ ದೇಗುಲದ ಗರ್ಭಗುಡಿ ಅಕ್ಟೋಬರ್ 24 ರ ನಿನ್ನೆ ಓಪನ್ ಆಗಿದೆ. ಅರಸು ವಂಶಸ್ಥರು ಬಾಳೆ ಗಿಡ ಕಡಿದ ನಂತರ ದೇಗುಲದ ಪ್ರಧಾನ ಅರ್ಚಕರು ಹಾಸನಾಂಬ ದೇಗುಲದ ಬಾಗಿಲನ್ನು ತೆರೆದರು. ಇಂದಿನಿಂದ ನವೆಂಬರ್ 3ರವರೆಗೆ ಹಾಸನಾಂಬೆ ಜಾತ್ರೆ ನಡೆಯಲಿದೆ. ಇಂದಿನಿಂದ ನವೆಂಬರ್ 2ರವರೆಗೆ ಹಾಸನಾಂಬೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರಸಿದ್ಧ ಹಾಸನಾಂಬ ದರ್ಶನೋತ್ಸವವು ಆರಂಭವಾಗಿದೆ. ಭಕ್ತಾದಿಗಳಿಗೆ ನವೆಂಬರ್ 2ರ ವರೆಗೆ ದಿನದ 24 ಗಂಟೆಯೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಬಾರಿ 20 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಒಂಬತ್ತು ದಿನಗಳ ಹಾಸನಾಂಬೆ ಉತ್ಸವಕ್ಕೆ ಜಿಲ್ಲಾಡಳಿತವು ಸೂಕ್ತ ವ್ಯವಸ್ಥೆ ಮಾಡಿದೆ. ಸಾಮಾನ್ಯ ಸರತಿ ಸಾಲು, ವಿಐಪಿ ಪಾಸ್ ಹೊಂದಿರುವ ಭಕ್ತರು ಮತ್ತು ವಿಐಪಿಗಳ ವಾಹನಗಳಿಗೆ ಪ್ರವೇಶ ಮತ್ತು ನಿರ್ಗಮನ ಜಿಲ್ಲಾಡಳಿತ ವ್ಯವಸ್ಥಿತಗೊಳಿಸಿದೆ. ಎಲ್ಲಾ ಭಕ್ತರಿಗೆ ಲಡ್ಡು ಮತ್ತು ಪ್ರಸಾದವನ್ನು ವಿತರಿಸಲು ದೇವಾಲಯದ ಪಕ್ಕದಲ್ಲಿ 24 ಕೌಂಟರ್ಗಳನ್ನು ಸ್ಥಾಪಿಸಿದೆ. ಸಮಾರಂಭಕ್ಕೆ…
ನವದೆಹಲಿ : ಡಿಜೆಯ ದೊಡ್ಡ ಶಬ್ದವು ಬಿಪಿಯನ್ನು ಹೆಚ್ಚಿಸುವುದಲ್ಲದೆ ಹೃದಯಾಘಾತಕ್ಕೂ ಕಾರಣವಾಗುತ್ತದೆ. ಮಧ್ಯಪ್ರದೇಶ ಹೈಕೋರ್ಟ್ನಲ್ಲಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಈ ವಿಷಯ ಪ್ರಸ್ತಾಪಿಸಲಾಗಿದೆ. ಜಬಲ್ಪುರದ ನಾನಾಜಿ ದೇಶಮುಖ ಪಶುವೈದ್ಯಕೀಯ ಮತ್ತು ಪಶುಸಂಗೋಪನಾ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ.ಗೋವಿಂದ್ ಪ್ರಸಾದ್ ಮಿಶ್ರಾ, 100 ವರ್ಷದ ಭಾರತೀಯ ವಾಯುಪಡೆಯ ನಿವೃತ್ತ ಅಧಿಕಾರಿ ಆರ್ಪಿ ಶ್ರೀವಾಸ್ತವ ಮತ್ತು ಇತರ ನಾಲ್ವರು ಹಿರಿಯ ನಾಗರಿಕರು ಮಧ್ಯಪ್ರದೇಶ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಡಿಜೆಗಳ ಕರ್ಕಶ ಶಬ್ದದಿಂದ ಹೃದಯಾಘಾತ ಉಂಟಾಗುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ, ಆದರೂ ಅದನ್ನು ತಡೆಯಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ ಮಧ್ಯಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಸಚ್ದೇವಾ ಮತ್ತು ವಿನಯ್ ಸರಾಫ್ ಅವರ ದ್ವಿಪೀಠದಲ್ಲಿ ಡಿಜೆಯ ಅತ್ಯಂತ ಜೋರಾಗಿ ಧ್ವನಿಯಿಂದ ಜನರು ರಕ್ತದೊತ್ತಡದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಅರ್ಜಿದಾರರ ವಕೀಲರು ಅರ್ಜಿಯಲ್ಲಿ ಪ್ರಸ್ತಾಪಿಸಲಾದ ಸಮಸ್ಯೆಗಳನ್ನು…
ಬಳ್ಳಾರಿ : ಬಳ್ಳಾರಿ (ನಗರ), ಬಳ್ಳಾರಿ (ಗ್ರಾಮಾಂತರ), ಸಂಡೂರು, ಸಿರುಗುಪ್ಪ (ಕಂಪ್ಪಿ) ಯೋಜನೆಗಳಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳ ನೇಮಕಾತಿ ಮೆರಿಟ್ ಆಧಾರದ ಮೇಲೆ ಆನ್ಲೈನ್ ಮೂಲಕ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದೆ. ಮಧ್ಯವರ್ತಿಗಳಿಂದ ಜಾಗೃತರಾಗಿರಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯ ನೇಮಕಾತಿಗಾಗಿ ಗ್ರಾಮ ಮಟ್ಟದಲ್ಲಿ, ತಾಲ್ಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಮಧ್ಯವರ್ತಿಗಳು ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆ ಕೊಡಿಸುವುದಾಗಿ ಹಣ ಕೇಳುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಹಾಗಾಗಿ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಿದಲ್ಲಿ ತಾವೇ ನೇರ ಜವಾಬ್ದಾರರಾಗಿರುತ್ತೀರಿ ಎಂದು ಅವರು ತಿಳಿಸಿದ್ದಾರೆ. ಮಧ್ಯವರ್ತಿಗಳು ಹಣವನ್ನು ಕೇಳಿದಲ್ಲಿ ಅಂತಹವರ ವಿರುದ್ಧ ಪೋಲಿಸ್ ಇಲಾಖೆಯಲ್ಲಿ ಎಫ್ಐಆರ್ ದಾಖಲಾಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದ ವಾಣಿಜ್ಯ, ವ್ಯವಹಾರ ನಡೆಸುವ ಅಂಗಡಿಗಳ ಮುಂದಿನ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭಾರತೀಯ ರಿಟೇಲರ್ಸ್ ಅಸೋಸಿಯೇಷನ್ ಸಲ್ಲಿಸಿದ ರಿಟ್ ಅರ್ಜಿಯನ್ನು ಅಂಗೀಕರಿಸುವ ಮಧ್ಯಂತರ ಆದೇಶದಲ್ಲಿ, ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದ 60 ಪ್ರತಿಶತದಷ್ಟು ಕನ್ನಡ ಚಿಹ್ನೆಯ ನಿಯಮವನ್ನು ಜಾರಿಗೆ ತರಲು ವಿಫಲವಾದ ಕಾರಣ ವ್ಯಾಪಾರ ಸಂಸ್ಥೆಗಳನ್ನು ಮುಚ್ಚುವಂತಹ “ಹಿಂದಿನ ಕ್ರಮ” ತೆಗೆದುಕೊಳ್ಳದಂತೆ ಕೇಳಿದೆ. ರಾಜ್ಯದಲ್ಲಿ ಹೊಸದಾಗಿ ಜಾರಿಗೆ ಬಂದಿರುವ ಕಾನೂನು. ಹೈಕೋರ್ಟಿನ ಏಕಸದಸ್ಯ ಪೀಠವು ಕನ್ನಡದಲ್ಲಿ 60 ಪ್ರತಿಶತದಷ್ಟು ಸೂಚನಾ ಫಲಕಗಳನ್ನು ಹೊಂದಿಲ್ಲದ ಕಾರಣಕ್ಕಾಗಿ ಉದ್ಯಮವನ್ನು ಮುಚ್ಚುವ ನಿಯಮವು “ಮುಖ್ಯವಾಗಿ ಅಸಮರ್ಥನೀಯವಾಗಿದೆ” ಎಂದು ಗಮನಿಸಿತು ಮತ್ತು ಆಕ್ಷೇಪಣೆಗಳನ್ನು ಕರೆದ ನಂತರ ಈ ವಿಷಯವನ್ನು ಪರಿಗಣಿಸುವ ಅಗತ್ಯವಿದೆ ಎಂದು ಹೇಳಿದೆ. ಯಾವುದೇ ವ್ಯಾಪಾರ ವಹಿವಾಟುಗಳನ್ನು ಮುಚ್ಚುವುದು ಮತ್ತು 60 ಪ್ರತಿಶತ ಬೋರ್ಡ್ಗಳನ್ನು ಕನ್ನಡದಲ್ಲಿ ಇರುವಂತೆ ಜಾರಿಗೊಳಿಸುವುದು ರಾಜ್ಯದ ಉದ್ದೇಶವಲ್ಲ ಎಂದು ಕಲಿತ ಅಡ್ವೊಕೇಟ್…
ನವದೆಹಲಿ:2014 ರಿಂದ ಭಾರತದಲ್ಲಿ ನಿಷೇಧಿಸಲಾಗಿದ್ದರೂ, ಚೀನಾದ ಬೆಳ್ಳುಳ್ಳಿಯನ್ನು ಮಾರುಕಟ್ಟೆಗಳು ಮತ್ತು ಮಂಡಿಗಳಲ್ಲಿ ಮೋಸದಿಂದ ಮಾರಾಟ ಮಾಡಲಾಗುತ್ತಿದೆ. ಸ್ಥಳೀಯವೆಂದು ಭಾವಿಸಿ ನೀವು ಖರೀದಿಸುತ್ತಿರುವ ಬೆಳ್ಳುಳ್ಳಿ ವಾಸ್ತವವಾಗಿ ಚೀನೀ ಬೆಳ್ಳುಳ್ಳಿಯಾಗಿರಬಹುದು, ಶಿಲೀಂಧ್ರದಿಂದ ಕಲುಷಿತವಾಗಿದೆ ಮತ್ತು ಹಾನಿಕಾರಕ ರಾಸಾಯನಿಕಗಳನ್ನು ಬಳಸಿಕೊಂಡು ಸಂಶ್ಲೇಷಿತವಾಗಿ ಉತ್ಪಾದಿಸಬಹುದು. ಚೀನಾದ ಬೆಳ್ಳುಳ್ಳಿಯಿಂದ ಉಂಟಾಗುವ ಆರೋಗ್ಯದ ಅಪಾಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿ ಉತ್ತರ ಪ್ರದೇಶದ ನಿವಾಸಿಯೊಬ್ಬರು ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಿದ್ದಾರೆ. ಯುಪಿ ಮತ್ತು ಗುಜರಾತ್ನ ಹಲವಾರು ಭಾಗಗಳಲ್ಲಿ ಚೀನಾದ ಬೆಳ್ಳುಳ್ಳಿಯನ್ನು ಈಗಾಗಲೇ ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಇತರ ಮಾರುಕಟ್ಟೆಗಳಲ್ಲಿ ಶೋಧ ನಡೆಯುತ್ತಿದೆ. ಈ ಹಾನಿಕಾರಕ ಉತ್ಪನ್ನವನ್ನು ಖರೀದಿಸುವುದನ್ನು ತಪ್ಪಿಸಲು, ತಜ್ಞರು ಸ್ಥಳೀಯ ಮತ್ತು ಚೀನೀ ಬೆಳ್ಳುಳ್ಳಿಯ ನಡುವಿನ ವ್ಯತ್ಯಾಸವನ್ನು ಗುರುತಿಸಲು ಈ ಐದು ಸಲಹೆಗಳನ್ನು ಶಿಫಾರಸು ಮಾಡುತ್ತಾರೆ. ಸ್ಥಳೀಯ ಮತ್ತು ಚೈನೀಸ್ ಬೆಳ್ಳುಳ್ಳಿಯ ನಡುವಿನ ವ್ಯತ್ಯಾಸವನ್ನು ಹೇಗೆ ಗುರುತಿಸುವುದು? ದೆಹಲಿಯ ಆಜಾದ್ಪುರ ಮಂಡಿಯ ಸಗಟು ಬೆಳ್ಳುಳ್ಳಿ ವ್ಯಾಪಾರಿ ಸುಶೀಲ್ ಕುಮಾರ್ ಗರ್ಗ್, ಚೀನೀ ಬೆಳ್ಳುಳ್ಳಿಯನ್ನು ಯುಪಿಯಲ್ಲಿ ಮಾತ್ರವಲ್ಲದೆ ಇತರ ರಾಜ್ಯಗಳ ಮಾರುಕಟ್ಟೆಗಳಲ್ಲಿಯೂ ವಿವೇಚನೆಯಿಲ್ಲದೆ ಮಾರಾಟ…
ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಕೇಂದ್ರ, ಧಾರವಾಡ) ಸಂಸ್ಥೆಯಿAದ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸುವ ಜಿಲ್ಲೆಯ ಪ.ಜಾತಿ/ಪ.ಪಂಗಡದ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ 10 ದಿನಗಳ ಉದ್ಯಮಶೀಲಾಭಿವೃದ್ದಿ ತರಬೇತಿ ಕಾರ್ಯಕ್ರಮನ್ನು ನ.15 ರಿಂದ 26 ರವರೆಗೆ ಆಯೋಜಿಸಲಾಗುವುದು. ಶಿಬಿರಾರ್ಥಿಗಳಿಗೆ ಉದ್ಯಮ ನಿರ್ವಹಣೆ, ಸರ್ಕಾರದ ಸ್ವಯಂ ಉದ್ಯೋಗ, ಉದ್ಯಮಾವಕಾಶ ಕುರಿತು ಪರಿಣಿತ ಅತಿಥಿ ಬೋಧಕರಿಂದ ಉಪನ್ಯಾಸಗಳನ್ನು ಏರ್ಪಡಿಸಲಾಗುವುದು. ಕೈಗಾರಿಕಾ ಭೇಟಿ ಮಾಡಿಸಲಾಗುವುದು. 18 ರಿಂದ 55 ವಯೋಮಿತಿ ಒಳಗಿನ 10 ನೇ ತರಗತಿ ಪಾಸಾದ ಪ.ಜಾತಿ/ಪ.ಪಂ ಮಹಿಳಾ ಉದ್ಯಮಾಕಾಂಕ್ಷಿಗಳು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, 3ನೇ ಮಹಡಿ, ಶಿವಪ್ಪನಾಯಕ ಕಾಂಪ್ಲೆಕ್ಸ್, ನೆಹರು ರಸ್ತೆ, ಶಿವಮೊಗ್ಗ, ಅವಿನಾಶ್ ಎ, ಸಿಡಾಕ್ ತರಬೇತುದಾರರು ಇವರನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಅರ್ಜಿಯೊಂದಿಗೆ 2 ಪಾಸ್ಪೋರ್ಟ್ ಅಳತೆ ಫೋಟೊ ಹಾಗೂ ಆಧಾರ್ ಕಾರ್ಡ್ನ ಪ್ರತಿ ಸಲ್ಲಿಸಬೇಕು. ತರಬೇತಿ ಉಚಿತವಾಗಿದ್ದು ತರಬೇತಿ ವೇಳೆ ಊಟೋಪಚಾರ ಒದಗಿಸಲಾಗುವುದು ಎಂದು ಸಿಡಾಕ್ ಜಂಟಿ…












