Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಆಯ್ದ 200 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಿ, ಹೆಚ್ಚುವರಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕದಲ್ಲಿ ಸುಮಾರು 47,493 ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿವೆ. ಇವುಗಳಲ್ಲಿ 19,603 ಪ್ರಾಥಮಿಕ ಶಾಲೆಗಳು, 21,676 ಹಿರಿಯ ಪ್ರಾಥಮಿಕ ಶಾಲೆಗಳು, 4,895 ಪ್ರೌಢಶಾಲೆಗಳು ಮತ್ತು 1,319 ಪದವಿಪೂರ್ವ ಕಾಲೇಜುಗಳಿರುತ್ತವೆ. ಒಟ್ಟಾರೆಯಾಗಿ ಕೇವಲ 309 ಶಾಲೆಗಳು ಎಲ್.ಕೆ.ಜಿಯಿಂದ 12ನೇ ತರಗತಿಯವರೆಗೆ ಸಂಯುಕ್ತ ವ್ಯವಸ್ಥೆಯನ್ನು ಹೊಂದಿವೆ. ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯು 2015-16ರಲ್ಲಿ 47.1 ಲಕ್ಷದಿಂದ 2025-26ರಲ್ಲಿ 38.2 ಲಕ್ಷಕ್ಕೆ (19% ಕಡಿಮೆ) ಕುಸಿದಿರುತ್ತದೆ. ಒಟ್ಟು ದಾಖಲಾತಿಯಲ್ಲಿ ಸರ್ಕಾರಿ ಶಾಲೆಗಳ ಪಾಲು 46% ರಿಂದ 38% ಕ್ಕೆ ಕುಸಿದಿರುತ್ತದೆ. ಆದರೆ ಖಾಸಗಿ ಅನುದಾನರಹಿತ ಶಾಲೆಗಳ ಪಾಲು 2015-16ರಲ್ಲಿ 36.3 ಲಕ್ಷ ವಿದ್ಯಾರ್ಥಿಗಳಿಂದ 2025-26ರಲ್ಲಿ 47 ಲಕ್ಷ ವಿದ್ಯಾರ್ಥಿಗಳಿಗೆ (29%) ಹೆಚ್ಚಾಗಿದೆ. 2025-26ನೇ ಸಾಲಿನಲ್ಲಿ 50 ಅಥವಾ ಅದಕ್ಕಿಂತ…
ಬೆಂಗಳೂರು : ಜನಸಾಮಾನ್ಯರಿಗೆ ಬಿಗ್ ಶಾಕ್, ರಾಜ್ಯದಲ್ಲಿ ಟೊಮೆಟೋ ದರ ಕೆಜಿಗೆ 100 ರೂ. ಗಡಿ ಸಮೀಪ ಬಂದಿದೆ. ಹೌದು, ಟೊಮೆಟೋ ದರ ಕಳೆದ 8-10 ದಿನಗಳಿಂದ ಹೆಚ್ಚುತ್ತಲೇ ಇದ್ದು, ಉತ್ತಮ ದರ್ಜೆ ಟೊಮೆಟೋ ಕೆ.ಜಿಗೆ ಮಾರುಕಟ್ಟೆಗಳಲ್ಲಿ 80 ರು.ಗೆ ಮಾರಾಟವಾಗುತ್ತಿದೆ. ಬೆಳೆ ಇಳುವರಿ ಕುಸಿತವಾಗಿದೆ. ಇದರಿಂದ ಮಾರುಕಟ್ಟೆಗೆ ಬರುವ ಟೊಮೆಟೊ ಪ್ರಮಾಣ ಕೂಡ ಇಳಿದಿದೆ. ಇದು ದರ ಏರಿಕೆಗೆ ಕಾರಣ ಎನ್ನಲಾಗಿದೆ. ಕಳೆದ 8-10 ದಿನಗಳಿಂದ ಟೊಮೆಟೋ ದರ ಹೆಚ್ಚುತ್ತಲೇ ಇದೆ. 100 ರೂ. ಗಡಿ ತಲುಪಿದೆ. ಉತ್ತಮ ದರ್ಜೆಯ ಟೊಮೆಟೊ ಕೆ.ಜಿಗೆ ಹಾಪ್ಕಾಮ್ಸ್ಗಳಲ್ಲಿ 80 ಕ್ಕೆಮಾರಾಟವಾಗುತ್ತಿದೆ. ಟೊಮೆಟೊ ಬೆಲೆ ಕಳೆದ ಎರಡು ವಾರದ ಹಿಂದೆ ಕೇಜಿಗೆ 15-20 ರೂ.ಗೆ ಮಾರಾಟವಾಗುತ್ತಿತ್ತು. ಆದರೆ ಪೂರೈಕೆ ಕಡಿಮೆ ಆಗುತ್ತಿದ್ದಂತೆ ಈಗ 50ರಿಂದ 90 ರೂ.ವರೆಗೆ ಏರಿಕೆ ಕಂಡಿದೆ.
ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ಸೋಮವಾರದಿಂದ ಶುರುವಾಗಲಿದೆ. ಸರ್ಕಾರ 10 ಮಸೂದೆ ಅಂಗೀಕಾರಕ್ಕೆ ಸಜ್ಜಾಗಿದೆ. ಆದರೆ, ವಿಪಕ್ಷಗಳು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ, ಮತಕಳವು ವಿಚಾರ ಪ್ರಸ್ತಾಪಿಸಿ ಗದ್ದಲ ನಡೆಸುವ ಸಾಧ್ಯತೆ ಇದೆ. ಪ್ರಮುಖ ವಿಷಯಗಳ ಚರ್ಚೆ ಬಿಹಾರ ವಿಧಾನಸಭಾ ಚುನಾವಣೆಗಳ ನಂತರ ಈ ಅಧಿವೇಶನ ನಡೆಯುತ್ತಿದ್ದು, ಇದು ವಿಶೇಷವಾಗಿ ಮಹತ್ವದ್ದಾಗಿದೆ. ಈ ಅವಧಿಯಲ್ಲಿ ವಿರೋಧ ಪಕ್ಷವು ಹಲವಾರು ವಿವಾದಾತ್ಮಕ ವಿಷಯಗಳನ್ನು ಎತ್ತುವ ನಿರೀಕ್ಷೆಯಿದೆ. ಇವುಗಳಲ್ಲಿ ರಾಷ್ಟ್ರವ್ಯಾಪಿ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಮತ ವಂಚನೆಯ ಆರೋಪಗಳು ಸೇರಿವೆ, ಇದು ಬಿಸಿ ಚರ್ಚೆಗಳಿಗೆ ಕಾರಣವಾಗಬಹುದು. ಅಧ್ಯಕ್ಷ ಮುರ್ಮು ಅವರು ಅಧಿವೇಶನದ ವೇಳಾಪಟ್ಟಿಗಾಗಿ ಸರ್ಕಾರದ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ ಎಂದು ಕಿರಣ್ ರಿಜಿಜು X ನಲ್ಲಿ ಹಂಚಿಕೊಂಡರು. ರಚನಾತ್ಮಕ ಮತ್ತು ಅರ್ಥಪೂರ್ಣವಾದ ಅಧಿವೇಶನಕ್ಕಾಗಿ ಅವರು ತಮ್ಮ ನಿರೀಕ್ಷೆಯನ್ನು ಒತ್ತಿ ಹೇಳಿದರು. ರಾಜಕೀಯ ವಾತಾವರಣ ಮತ್ತು ಇತ್ತೀಚಿನ ಘಟನೆಗಳನ್ನು ಗಮನಿಸಿದರೆ ಮುಂಬರುವ ಚರ್ಚೆಗಳು ತೀವ್ರವಾಗಿರಬಹುದು. ನಿರೀಕ್ಷಿತ ಚರ್ಚೆಗಳು ಈ ಅಧಿವೇಶನದ…
ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ಪ್ರಸ್ತುತ ಕಡಿಮೆಯಾಗಿದೆ. ಪರಿಣಾಮವಾಗಿ, ಅದರ ಉಪ ಉತ್ಪನ್ನವಾದ ದ್ರವೀಕೃತ ಪೆಟ್ರೋಲಿಯಂ ಅನಿಲದ (LPG) ಬೆಲೆಗಳು ಸಹ ಕಡಿಮೆಯಾಗುತ್ತಿವೆ. ಇದಕ್ಕಾಗಿಯೇ ಭಾರತದ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು (IOC, HPCL, ಮತ್ತು BPCL) LPG ಸಿಲಿಂಡರ್ಗಳ ಬೆಲೆಗಳನ್ನು ಸ್ವಲ್ಪ ಕಡಿಮೆ ಮಾಡಿವೆ. ಹೌದು, ಈ ಕಂಪನಿಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್ನ ಬೆಲೆಯನ್ನು ಕೇವಲ 10 ರೂಪಾಯಿಗಳಷ್ಟು ಕಡಿಮೆ ಮಾಡಿವೆ. ಹೊಸ ಬೆಲೆ ಇಂದು, ಡಿಸೆಂಬರ್ 1, 2025 ರಂದು ಜಾರಿಗೆ ಬಂದಿದೆ. ಒಂದು ತಿಂಗಳ ಹಿಂದೆ, ನವೆಂಬರ್ನಲ್ಲಿ, ಬೆಲೆಯನ್ನು 5 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿತ್ತು. ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಮಾರುಕಟ್ಟೆ ಕಂಪನಿಗಳು (IOC, BPCL, ಮತ್ತು HPCL) ಪ್ರತಿ ತಿಂಗಳ ಮೊದಲನೆಯ ದಿನದಂದು LPG ಸಿಲಿಂಡರ್ಗಳ ಬೆಲೆಗಳನ್ನು ಪರಿಶೀಲಿಸುತ್ತವೆ. ಡಿಸೆಂಬರ್ ಮತ್ತು ನವೆಂಬರ್ನಲ್ಲಿ ಬೆಲೆಗಳು ಕುಸಿದಿವೆ. ಆದಾಗ್ಯೂ, ಈ ವರ್ಷದ ಅಕ್ಟೋಬರ್ನಲ್ಲಿ, ಬೆಲೆಯನ್ನು 15.50 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಅದಕ್ಕೂ ಮೊದಲು,…
ತಮಿಳುನಾಡಿನ ಶಿವಗಂಗಾ ಜಿಲ್ಲೆಯ ತಿರುಪತ್ತೂರು ಬಳಿ ಭಾನುವಾರ ಎರಡು ಸರ್ಕಾರಿ ಬಸ್ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 11 ಜನರು ಸಾವನ್ನಪ್ಪಿದ್ದು, ಸುಮಾರು 40 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಿರುಪತ್ತೂರು ಬಳಿಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾದಾಗ ಒಂದು ಬಸ್ ಕಾರೈಕುಡಿ ಕಡೆಗೆ ಮತ್ತು ಇನ್ನೊಂದು ಬಸ್ ಮಧುರೈ ಕಡೆಗೆ ಪ್ರಯಾಣಿಸುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪರಿಣಾಮ ಎರಡೂ ಬಸ್ಗಳ ಮುಂಭಾಗ ನಜ್ಜುಗುಜ್ಜಾಗಿದ್ದು, ಹಲವಾರು ಪ್ರಯಾಣಿಕರು ಒಳಗೆ ಸಿಲುಕಿಕೊಂಡರು. ಸ್ಥಳೀಯ ನಿವಾಸಿಗಳು ಮತ್ತು ತುರ್ತು ತಂಡಗಳು ಬದುಕುಳಿದವರನ್ನು ಹೊರತೆಗೆದು ಶಿವಗಂಗೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಎಕ್ಸ್ನಲ್ಲಿ ಸಂಭವಿಸಿದ ದುರಂತದ ಬಗ್ಗೆ ಪ್ರತಿಕ್ರಿಯಿಸುತ್ತಾ, 11 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದು “ತೀವ್ರ ಆಘಾತ ಮತ್ತು ನೋವುಂಟಾಗಿದೆ” ಎಂದು ಹೇಳಿದರು. “ನಾನು ತಕ್ಷಣ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ತಿರು ಕೆ ಆರ್ ಪೆರಿಯಕರುಪ್ಪನ್ ಅವರನ್ನು ಸಂಪರ್ಕಿಸಿ, ಅಪಘಾತ ಸ್ಥಳಕ್ಕೆ ಧಾವಿಸಿ ಸಂತ್ರಸ್ತರಿಗೆ…
ಬೆಂಗಳೂರು : ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಲಿದ್ದಾರೆ. ಗ್ರಾಮಠಾಣಗಳ ಹೊರಗೆ ಭೂಪರಿವರ್ತನೆ ಮಾಡಿಸದೆ, ಮನೆ ನಿರ್ಮಿಸಿಕೊಂಡು ನೆಲೆಸಿರುವ ಜನರಿಗೆ ಕುಡಿಯುವ ನೀರು, ಬೀದಿ ದೀಪ, ನೀಡಲಾಗಿದೆ. ರಸ್ತೆ, ಚರಂಡಿ ಇತ್ಯಾದಿ ನಾಗರಿಕ ಸೌಲಭ್ಯಗಳನ್ನು ಇದರಿಂದಾಗಿ ಗ್ರಾಮ ಪಂಚಾಯತಿಗಳಿಗೆ ಆರ್ಥಿಕವಾಗಿ ಹೊರೆಯಾಗುತ್ತಿದೆ. ಈ ಕಾರಣದಿಂದಾಗಿ ರಾಜ್ಯ ಸರ್ಕಾರ ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ರಾಜ್ ಅಧಿನಿಯಮ-1993 ಪ್ರಕರಣ 199ಕ್ಕೆ ತಿದ್ದುಪಡಿ ತಂದು ಪ್ರಕರಣ 199ಬಿ ಮತ್ತು 199ಸಿ ಸೇರಿಸಿ ಏ.7ರಂದು ಅಧಿಸೂಚನೆ ಹೊರಡಿಸಿದೆ. ಇದರನ್ವಯ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ರಾಜ್ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಶುಲ್ಕ) ನಿಯಮ-2025ನ್ನು ರೂಪಿಸಿದೆ. ಹೊಸ ಆಸ್ತಿಗಳ ತೆರಿಗೆ ವ್ಯಾಪ್ತಿಗೆ ಕ್ರಮಗಳು, ತೆರಿಗೆ ನಿರ್ಧರಣಾ ವಿಧಾನಗಳ ಬಗ್ಗೆ ನಿಯಮಗಳಲ್ಲಿ ತಿಳಿಸಲಾಗಿದೆ. ಪಂಚಾಯತಿ ವ್ಯಾಪ್ತಿಯಲ್ಲಿ ಹೊಸ ಬಡಾವಣೆಗಳ…
ಬೆಂಗಳೂರು: ರಾಜ್ಯದ ವಿವಿಧ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಿರುವ ಪೂರ್ವ ಪ್ರಾಥಮಿಕ ತರಗತಿಗಳ (ಎಲ್ ಕೆಜಿ-ಯುಕೆಜಿ) ಮಕ್ಕಳಿಗೂ ಡಿ.1ರಿಂದ ಬೆಳಗ್ಗೆ ಹಾಲು, ಮಧ್ಯಾಹ್ನ ಬಿಸಿಯೂಟ ಮತ್ತು ಮೊಟ್ಟೆ, ಬಾಳೆಹಣ್ಣು ವಿತರಿಸಲು ಅನುಮತಿ ನೀಡಿ ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರಿ ಶಾಲೆಗಳಲ್ಲಿ ವಿವಿಧ ಯೋಜನೆಗಳಡಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮಾಂಕ (1)ರ ಸರ್ಕಾರದ ಆದೇಶದಲ್ಲಿ 276 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಆಹಾರದ ಪ್ರಮಾಣ ಮತ್ತು ಘಟಕ ವೆಚ್ಚಕ್ಕನುಗುಣವಾಗಿ 2019-20ನೇ ಸಾಲಿನಿಂದ ಮಧ್ಯಾಹ್ನ ಉಪಹಾರ ಯೋಜನೆಯಡಿ ಬೆಳಗಿನ ಉಪಹಾರ, ಬಿಸಿಹಾಲು ಮತ್ತು ಮಧ್ಯಾಹ್ನ ಬಿಸಿಯೂಟ ಒದಗಿಸಲು ಅನುಮೋದನೆ ನೀಡಲಾಗಿರುತ್ತದೆ.…
ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಡಿ.6ರಂದು `ದರ್ಖಾಸ್ತು ಪೋಡಿ’ ದಾಖಲೆ ವಿತರಣೆ, 3.20 ಲಕ್ಷ ಜಮೀನಿಗೆ `ಪೌತಿ ಖಾತೆ’.!
ಹಾಸನ : ಸರ್ಕಾರ ಮಾಡಿರುವ ಉತ್ತಮ ಕೆಲಸಗಳು ಜನರಿಗೆ ಕಾಣಬೇಕು ಈ ನಿಟ್ಟಿನಲ್ಲಿ ಡಿ.6 ರಂದು ಹಾಸನದಲ್ಲಿ ಆಯೋಜನೆ ಮಾಡಿರುವ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಣೆ ಮಾಡುವುದರ ಮೂಲಕ ಸಹಕರಿಸುವಂತೆ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆದ ಮುಖ್ಯಮಂತ್ರಿ ಅವರು ಡಿ.6 ರಂದು ಹಾಸನಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ, ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಹಾಗೂ ಉಪ ಮುಖ್ಯಮಂತ್ರಿಯವರು ಭಾಗವಹಿಸಲಿರುವರು ಇದೊಂದು ಸರ್ಕಾರಿ ಕಾರ್ಯಕ್ರಮ ಜಿಲ್ಲಾಡಳಿತದೊಂದಿಗೆ ವಿವಿಧ ಇಲಾಖೆಗಳು ಒಳಗೊಂಡAತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು. ಕಳೆದ ಒಂದು ವರ್ಷದಲ್ಲಿ ಆದಂತಹ ಕೆಲಸಗಳನ್ನು ಜನರಿಗೆ ಸಮರ್ಪಣೆ ಮಾಡಲಾಗುತ್ತಿದೆ ಎಂದ ಅವರು ಕಂದಾಯ ಇಲಾಖೆ ಗಣನೀಯವಾಗಿ ಪ್ರಗತಿ ಸಾಧಿಸಿದೆ ಎಂದ ಅವರು 14 ವರ್ಷದಲ್ಲಿ 2444 ರೈರಿಗೆ ಪೋಡಿ ದುರಸ್ತು ಮಾಡಿಕೊಂಡಲಾಗಿದೆ…
ಬೆಂಗಳೂರು: ರಾಜ್ಯದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮೂಲಕ ವಿವಾಹ ನೋಂದಣಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸೋ ಪ್ರಕ್ರಿಯೆ ಜಾಲ್ತಿಯಲ್ಲಿದೆ. ಇದು ಕೆಲವರಿಗೆ ತಿಳಿದಿದ್ದರೇ, ಮತ್ತೆ ಕೆಲವರಿಗೆ ತಿಳಿದಿಲ್ಲ. ನೀವು ಮ್ಯಾರೇಜ್ ಸರ್ಟಿಫಿಕೇಟ್ ಗೆ ಅರ್ಜಿ ಸಲ್ಲಿಸಬೇಕು ಅನ್ನೋ ಯೋಚನೆಯಲ್ಲಿದ್ದರೇ, ಜಸ್ಟ್ ಮನೆಯಲ್ಲೇ ಕುಳಿತು, ಆನ್ ಲೈನ್ ಮೂಲಕ ನಾವು ಹೇಳುವಂತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ. ರಾಜ್ಯ ಸರ್ಕಾರದಿಂದ ವಿವಾಹ ನೋಂದಣಿಯ ಆನ್ ಲೈನ್ ಪ್ರಕ್ರಿಯೆಯನ್ನು ಜಾರಿಗೊಳಿಸಲಾಗಿದೆ. ಆಪ್ ಲೈನ್ ಜೊತೆಗೆ, ನೀವು ರಾಜ್ಯದ ಯಾವುದೇ ಮೂಲೆಯಲ್ಲಿದ್ದರೂ, ಎಲ್ಲೇ ಮದುವೆಯಾಗಿದ್ದರೂ ಮ್ಯಾರೇಜ್ ಸರ್ಟಿಫಿಕೇಟ್ ಪಡೆಯಲು ಆನ್ ಲೈನ್ ಮೂಲಕ ಅರ್ಜಿಯನ್ನು ಕುಳಿತಲ್ಲಿಯೇ ಸಲ್ಲಿಸಬಹುದಾಗಿದೆ. ಆದರೇ ಇದಕ್ಕಾಗಿ ಕೆಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಮ್ಯಾರೇಜ್ ಸರ್ಟಿಫಿಕೇಟ್ ಪಡೆಯಲು ಈ ದಾಖಲೆಗಳು ಕಡ್ಡಾಯ ಮದುವೆ ಲಗ್ನ ಪತ್ರಿಕೆ ದಂಪತಿಗಳ ಒಂದು ಪೋಟೋ ಪತಿಯ ಆಧಾರ್ ಕಾರ್ಡ್ ಪತ್ನಿಯ ಆಧಾರ್ ಕಾರ್ಡ್ ಮೂವರು ಸಾಕ್ಷಿದಾರರ ಆಧಾರ್ ಕಾರ್ಡ್ ಈ ಮೇಲ್ಕಂಡ ದಾಖಲೆಗಳನ್ನು ಪಿಡಿಎಫ್ ಮಾಡಿ,…
ಬೆಂಗಳೂರು : ದಿತ್ವ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 2-3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಿತ್ವಾ ಚಂಡಮಾರುತದ ಪ್ರಭಾವದಿಂದ ತಮಿಳುನಾಡು, ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡು ಹಾಗೂ ಆಂಧ್ರದಗಡಿಗೆ ಹೊಂದಿಕೊಂಡಿರುವ ರಾಜ್ಯದ ಭೂ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಎರಡ್ಮೂರು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಮಂಡ್ಯ, ತುಮಕೂರು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.














