Author: kannadanewsnow57

ಅಮೃತಸರ : ಅಮೃತಸರ ಬೈಪಾಸ್‌ನಲ್ಲಿ ಬಾಂಬ್ ಇಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬ ಕೈಯಲ್ಲಿದ್ದ ಬಾಂಬ್ ಸ್ಫೋಟಗೊಂಡು ಸಾವನ್ನಪ್ಪಿದ್ದಾನೆ. ಆ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಕೆಲವು ಗಂಟೆಗಳ ನಂತರ ಅವರು ಸಾವನ್ನಪ್ಪಿದರು. ಅಮೃತಸರ ಗ್ರಾಮೀಣ ಜಿಲ್ಲೆಯ ಕಾಂಬೊ ಪೊಲೀಸ್ ಠಾಣೆ ವ್ಯಾಪ್ತಿಯ ನೌಶೇರಾ ಗ್ರಾಮದ ಸುತ್ತಲೂ ಸ್ಫೋಟ ಸಂಭವಿಸಿದೆ. ಪೊಲೀಸ್ ಅಧಿಕಾರಿಗಳು ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ತಲುಪಿ ಪ್ರದೇಶವನ್ನು ಸುತ್ತುವರೆದರು. ಮುಖ್ಯ ರಸ್ತೆಯ ಪಕ್ಕದಲ್ಲಿರುವ ಪ್ರದೇಶದಿಂದ ಹೊಗೆ ಬರುತ್ತಿರುವುದನ್ನು ದೃಶ್ಯಗಳು ತೋರಿಸಿವೆ.

Read More

ದಾವಣಗೆರೆ: ರಾಜ್ಯಾದ್ಯಂತ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಸಿಡಿಲಿಗೆ 80ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆಯ ಹೊನ್ನಾಳಿ ತಾಲೂಕಿನ ಜೀನಿಹಳ್ಳಿಯಲ್ಲಿ ಮಹೇಶಪ್ಪ ಎನ್ನುವವರಿಗೆ ಸೇರಿದ 80ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ತಡರಾತ್ರಿ ಸುರಿದ ಭಾರಿ ಮಳೆ, ಸಿಡಿಲಿಗೆ ಕೊಟ್ಟಿಗೆಯಲ್ಲಿದ್ದ ಕುರಿಗಳು ಮೃತಪಟ್ಟಿವೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್ 2025 (ಐಪಿಎಲ್ 2025) ಸಮಾರೋಪ ಸಮಾರಂಭದಲ್ಲಿ ಭಾರತೀಯ ಸಶಸ್ತ್ರ ಪಡೆಗಳಿಗೆ ಬಿಸಿಸಿಐ (ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ) ವಿಶೇಷ ಗೌರವ ಸಲ್ಲಿಸಲಿದೆ ಎಂದು ಕಾರ್ಯದರ್ಶಿ ಸೈಕಿಯಾ ದೇವಜಿತ್ ಸೈಕಿಯಾ ದೃಢಪಡಿಸಿದ್ದಾರೆ. ಆಪರೇಷನ್ ಸಿಂಧೂರ್ ಅನ್ನು ಯಶಸ್ವಿಯಾಗಿ ನಡೆಸುವಾಗ ಸಶಸ್ತ್ರ ಪಡೆಗಳ ಶೌರ್ಯವನ್ನು ಗೌರವಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತವು ಮೇ 7 ರಂದು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು, ಇದು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿಯಾಗಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ನಂತರ ಈ ಕಾರ್ಯಾಚರಣೆಯನ್ನು ನಡೆಸಲಾಯಿತು. ಸಶಸ್ತ್ರ ಪಡೆಗಳ ಶೌರ್ಯ, ಧೈರ್ಯ ಮತ್ತು ನಿಸ್ವಾರ್ಥ ಸೇವೆಯನ್ನು ಗೌರವಿಸಲು ಬಿಸಿಸಿಐ ರಾಷ್ಟ್ರದ ವೀರರ ಸಮಾರೋಪ ಸಮಾರಂಭವನ್ನು ಅರ್ಪಿಸಲು ನಿರ್ಧರಿಸಿದೆ ಎಂದು ದೇವಜಿತ್ ಸೈಕಿಯಾ ಬಹಿರಂಗಪಡಿಸಿದ್ದಾರೆ. “ನಮ್ಮ ಸಶಸ್ತ್ರ ಪಡೆಗಳ ಶೌರ್ಯ, ಧೈರ್ಯ ಮತ್ತು ನಿಸ್ವಾರ್ಥ ಸೇವೆಗೆ ಬಿಸಿಸಿಐ ನಮಸ್ಕರಿಸುತ್ತದೆ,…

Read More

ಸಾಮಾನ್ಯವಾಗಿ ಎಲ್ಲರಿಗೂ ಕೈಗಳನ್ನು ಮಡಚಿ ನಿಲ್ಲುವ ಅಭ್ಯಾಸವಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಯು ವಿಭಿನ್ನ ರೀತಿಯಲ್ಲಿ ಕೈಗಳನ್ನು ಕಟ್ಟಿ ನಿಲ್ಲುತ್ತಾರೆ ಅಥವಾ ಕುಳಿತುಕೊಳ್ಳುತ್ತಾರೆ. ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಅವರು ತೋಳುಗಳನ್ನು ಮಡಚಿ ನಿಲ್ಲುವ ಭಂಗಿಯಿಂದಲೂ ಪರೀಕ್ಷಿಸಬಹುದು ಎಂದು ನಿಮಗೆ ತಿಳಿದಿದೆಯೇ? ಹೌದು, ಸಮುದ್ರಿಕಾ, ದೃಷ್ಟಿ ಭ್ರಮೆಗಳು ಮತ್ತು ದೇಹದ ಆಕಾರದ ಮೂಲಕ ನಿಮ್ಮ ವ್ಯಕ್ತಿತ್ವವನ್ನು ನೀವು ತಿಳಿದುಕೊಳ್ಳುವಂತೆಯೇ, ನೀವು ನಿಮ್ಮ ತೋಳುಗಳನ್ನು ಮಡಚಿ ನಿಲ್ಲುವ ವಿಧಾನದ ಮೂಲಕ ನಿಮ್ಮೊಳಗೆ ಅಡಗಿರುವ ನಿಗೂಢ ಸ್ವಭಾವವನ್ನು ಸಹ ನೀವು ತಿಳಿದುಕೊಳ್ಳಬಹುದು. ನೀವು ತೋಳುಗಳನ್ನು ಕಟ್ಟಿಕೊಂಡು ನಿಲ್ಲುವ ರೀತಿ ನೀವು ಸ್ವಾರ್ಥಿಯೋ ಅಥವಾ ವಿನಮ್ರ ವ್ಯಕ್ತಿಯೋ ಎಂಬುದನ್ನು ಬಹಿರಂಗಪಡಿಸುತ್ತದೆ. ಈ ವಿಶಿಷ್ಟ ವ್ಯಕ್ತಿತ್ವ ಪರೀಕ್ಷೆಯು ಒಂದು ಮೋಜಿನ ಆಟವಾಗಿದೆ. ನೀವು ಇದರ ಬಗ್ಗೆ ಶಾಂತವಾಗಿದ್ದೀರಾ? ನೀವು ದೃಢನಿಶ್ಚಯ ಹೊಂದಿದ್ದೀರಾ ಅಥವಾ ಸಮಸ್ಯೆಗಳನ್ನು ಎದುರಿಸಲು ಕಷ್ಟಪಡುತ್ತಿದ್ದೀರಾ ಎಂಬುದನ್ನು ನಿಮ್ಮ ತೋಳುಗಳನ್ನು ಮಡಚಿ ನಿಲ್ಲುವ ಮೂಲಕ ಪರೀಕ್ಷಿಸಬಹುದು. ಆಯ್ಕೆ 1: ಆಯ್ಕೆ ಒಂದರಲ್ಲಿ ತೋರಿಸಿರುವಂತೆ ನಿಮ್ಮ ಬಲಗೈಯಿಂದ ಎಡಗೈಯನ್ನು ಹಿಡಿದುಕೊಂಡು ನಿಲ್ಲುವ…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ವ್ಯಕ್ತಿಯೋರ್ವನಿಗೆ ಕರೋನ ದೃಢಪಟ್ಟಿದೆ.  75 ವರ್ಷದ ವೃದ್ಧ ಶಿವಮೊಗ್ಗದ ಆಸ್ಪತ್ರೆಗೆ ದಾಖಲಾಗಿದ್ದು ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾವೇರಿ ಜಿಲ್ಲೆಯ ವೃದ್ಧ ಮೇ 19 ರಂದು ಹೃದಯ ಸಂಬಂಧಿ ಕಾಯಿಲೆಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು.ಅವರಿಗೆ ಕರೋನ ದೃಢಪಟ್ಟಿದೆ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದಿದ್ದ ವೃದ್ಧ ಗುಣಮುಖರಾಗಿ ಆಸ್ಪತ್ರೆಯಿಂದ ಸೋಮವಾರವಷ್ಟೆ ಬಿಡುಗಡೆಗೊಂಡು ಮನೆಗೆ ಹೋಗಿದ್ದರು. ಆದರೆ ಕೋವಿಡ್ ಟೆಸ್ಟ್ ರಿಪೋರ್ಟ್ ಬಂದಿದ್ದು ಅವರಿಗೆ ಕರೋನಾ ಇರುವುದು ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ನೀಡಿರುವ ಡಿಎಸ್‌ಒ ಡಾ. ನಾಗರಾಜ ನಾಯ್ಕ, ವೃದ್ಧನಿಗೆ ಕೊರೊನಾ ತಗುಲಿರುವುದು ನಿಜ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆದು ಮನೆಗೆ ಮರಳಿದ ಬಳಿಕ ಸೋಂಕು ದೃಢಪಟ್ಟಿದೆ. ಹಾವೇರಿ ಜಿಲ್ಲೆಯ ಡಿಎಚ್‌ಒ ಅವರಿಗೆ ಮಾಹಿತಿ ನೀಡಲಾಗಿದೆ” ಎಂದಿದ್ದಾರೆ.

Read More

ಅಮೃತಸರ : ಪಂಜಾಬ್ ನ ಅಮೃತಸರದಲ್ಲಿ ಬಾಂಬ್ ಸ್ಪೋಟ ಸಂಭವಿಸಿದೆ ಎಂದು ಎಂದು ಹೇಳಲಾಗುತ್ತಿದೆ. ಪಂಜಾಬ್ ನ ಅಮೃತಸರದಲ್ಲಿ ಬಾಂಬ್ ಸ್ಪೋಟ ಸಂಭವಿಸಿದ್ದು, ಓರ್ವ ವ್ಯಕ್ತಿಗೆ ಗಾಯವಾಗಿದೆ ಎಂದು ವರದಿಯಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು : ರಾಜ್ಯದಲ್ಲಿ‌ ವಿಶೇಷವಾಗಿ ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಕೋವಿಡ್ ನಿಯಂತ್ರಣ ಸಂಬಂಧ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ  ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದರು.‌ ಈಗಾಗಲೇ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿಯನ್ನ ಹೊರಡಿಸಿದೆ.‌ ಕೇಂದ್ರ ಸರ್ಕಾರದ ಜೊತೆ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ಮಾನಿಟರ್ ಮಾಡುತ್ತಿದ್ದಾರೆ. ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನ ಶಾಲೆಗೆ ಕಳಿಸದಂತೆ ಪೊಷಕರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಶಾಲಾ ಆಡಳಿತ ಮಂಡಳಿಯವರು ಕೂಡಾ, ಜ್ವರ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು…

Read More

ಬೆಂಗಳೂರು: ದಿನದಿಂದ ದಿನಕ್ಕೆ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾದ ಬೆನ್ನಲ್ಲೇ, ಆರೋಗ್ಯ ಇಲಾಖೆ ಸಿಬ್ಬಂದಿ ರಜಾ ಹಾಕಿ ತೆರಳದೆ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕಾರ್ಯ ನಿರ್ವಹಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೋವಿಡ್ ನಿಯಂತ್ರಣ ಸಂಬಂಧ ಬೆಂಗಳೂರಿನ ಸಿಎಂ ನಿವಾಸ ಕಾವೇರಿಯಲ್ಲಿ ಇಂದು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಎದುರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಎಂ ನಿರ್ದೇಶನ ನೀಡಿದ್ದಾರೆ ಎಂದರು.‌ ಈಗಾಗಲೇ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿಯನ್ನ ಹೊರಡಿಸಿದೆ.‌ ಕೇಂದ್ರ ಸರ್ಕಾರದ ಜೊತೆ ಇಲಾಖೆ ಅಧಿಕಾರಿಗಳು ನಿರಂತರ ಸಂಪರ್ಕದಲ್ಲಿದ್ದು, ಮಾನಿಟರ್ ಮಾಡುತ್ತಿದ್ದಾರೆ. ಮಕ್ಕಳಿಗೆ ಕೋವಿಡ್ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಜ್ವರ, ಶೀತ ಕಂಡುಬಂದ ಮಕ್ಕಳನ್ನ ಶಾಲೆಗೆ ಕಳಿಸದಂತೆ ಪೊಷಕರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಶಾಲಾ ಆಡಳಿತ ಮಂಡಳಿಯವರು ಕೂಡಾ, ಜ್ವರ ಬಂದ ಮಕ್ಕಳಿಗೆ ರಜೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎಂದು ಸಚಿವ…

Read More

ಬೆಂಗಳೂರು: ರಾಜ್ಯದಲ್ಲಿ ಮಹಾಮಳೆಗೆ ಇಂದು ಮತ್ತೆ ಮೂವರು ಬಲಿಯಾಗಿದ್ದಾರೆ. ಹಾಸನದಲ್ಲಿ ಭಾರೀ ಮಳೆಯಿಂದಾಗಿ ಚಾಲಕನಿಗೆ ರಸ್ತೆ ಕಾಣದೇ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನ ತಾಲೂಕಿನ ಬಾಗೇ ಸಮೀಪ ಅರಸು ನಗರದಲ್ಲಿ ಮಳೆಯ ಕಾರಣ ಚಾಲಕನಿಗೆ ರಸ್ತೆ ಕಾಣದೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು ಇಬ್ಬರು ಮೃತಪಟ್ಟಿದ್ದಾರೆ.  ಮತ್ತಿಬ್ಬರು ಗಾಯಗೊಂಡಿದ್ದಾರೆ. ಬೆಂಗಳೂರಿನ ದಾಸರಹಳ್ಳಿ ಮೂಲದ ಶರತ್(28), ಅಭಿಷೇಕ್(27) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಮಾಲ್ದಾರೆಯಲ್ಲಿ ಮನೆ ಬಳಿ ಕೆಲಸ ಮಾಡುತ್ತಿದ್ದಾಗ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ವಿಷ್ಣು ಬೆಳ್ಯಪ್ಪ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

Read More

ಬೆಂಗಳೂರು : ಕೊರೊನಾ ಹೆಚ್ಚಳ ಹಿನ್ನೆಲೆ ಸರ್ಕಾರ ಹೈ ಅಲರ್ಟ್ ಆಗಿದ್ದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ ಮೀಸಲಿಡಲು ಸರ್ಕಾರ ಸೂಚನೆ ನೀಡಿದೆ. ಭಾರತಕ್ಕೆ ಕೊರೋನಾ ರೂಪಾಂತರ ಹೊಸ ತಳಿ ಕಾಲಿಟ್ಟಿದ್ದು, ಇದುವರೆಗೂ ಭಾರತದದ್ಯಂತ ಒಂದು ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ ಆಗಿದ್ದು, ಇದೀಗ ರಾಜ್ಯದಲ್ಲಿ ಇಂದು 80 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಅಲ್ಲದೆ ಬೆಂಗಳೂರಿನಲ್ಲೇ ನಿನ್ನೆ 73 ಜನರಿಗೆ ಕೊರೊನ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಕೋವಿಡ್ ಆಕ್ಟಿವ್ ಪ್ರಕರಣಗಳ ಸಂಖ್ಯೆ ಇದೀಗ 80ಕ್ಕೆ ಏರಿಕೆಯಾಗಿವೆ. ದಕ್ಷಿಣ ಕನ್ನಡ ವಿಜಯನಗರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎರಡು, ಮೈಸೂರು ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಪೋಸಿಟೀವ್ ವರದಿ ಬಂದಿದ್ದು, ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. https://twitter.com/dineshgrao/status/1927017633733365982?ref_src=twsrc%5Etfw%7Ctwcamp%5Etweetembed%7Ctwterm%5E1927017633733365982%7Ctwgr%5Eb1331337a9cb42346fb89d407a0b98976a0193be%7Ctwcon%5Es1_c10&ref_url=https%3A%2F%2Fkannadadunia.com%2Fbreaking-e0b2ace0b386e0b282e0b297e0b2b3e0b382e0b2b0e0b2b2e0b38de0b2b2e0b2bf-e0b295e0b38ae0b2b0e0b38ae0b2a8e0b2be-e0b2b9e0b386e0b29a%2F

Read More