Author: kannadanewsnow57

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಎಲ್ಲಾ ಸಚಿವರ ವಿಧಾನಸೌಧ ಮತ್ತು ವಿಕಾಸಸೌಧದ ಕೊಠಡಿ ಸಂಖ್ಯೆಗಳು, ನೇರ ದೂರವಾಣಿ ಹಾಗೂ ಆಂತರಿಕ ಸಂಪರ್ಕ ಸಂಖ್ಯೆಗಳ (Intercom) ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು ಹಾಗೂ ಆಡಳಿತಾತ್ಮಕ ಕಾರ್ಯಕಲಾಪಗಳ ಅನುಕೂಲಕ್ಕಾಗಿ ಈ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಪ್ರಮುಖ ನಾಯಕರ ಸಂಪರ್ಕ ವಿವರಗಳು ಈ ಕೆಳಗಿನಂತಿವೆ: ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ವಿವರ: ಸಿದ್ದರಾಮಯ್ಯ (ಮಾನ್ಯ ಮುಖ್ಯಮಂತ್ರಿಗಳು): ವಿಧಾನಸೌಧದ ಕೊಠಡಿ ಸಂಖ್ಯೆ 323 ರಲ್ಲಿದ್ದು, ಸಾರ್ವಜನಿಕರು ಇವರನ್ನು 22253414, 22253424, 22200204 ಸೇರಿದಂತೆ ವಿವಿಧ ನೇರ ದೂರವಾಣಿ ಸಂಖ್ಯೆಗಳ ಮೂಲಕ ಹಾಗೂ ಆಂತರಿಕ ಸಂಖ್ಯೆ 3261 ರ ಮೂಲಕ ಸಂಪರ್ಕಿಸಬಹುದಾಗಿದೆ. ಕಾವೇರಿ ನಿವಾಸದ ದೂರವಾಣಿ ಸಂಖ್ಯೆಗಳೂ ಇದರಲ್ಲಿ ಲಭ್ಯವಿವೆ. ಡಿ.ಕೆ. ಶಿವಕುಮಾರ್ (ಮಾನ್ಯ ಉಪ ಮುಖ್ಯಮಂತ್ರಿಗಳು): ವಿಧಾನಸೌಧದ ಕೊಠಡಿ ಸಂಖ್ಯೆ 335, 336, 337-337 ಎ ರಲ್ಲಿದ್ದು, ನೇರ ದೂರವಾಣಿ ಸಂಖ್ಯೆ 22258004 ಹಾಗೂ ಆಂತರಿಕ ಸಂಖ್ಯೆ 3496, 3228 ರ…

Read More

ಬೆಂಗಳೂರು: ಮುಂಗಾರು ಆಗಮನಕ್ಕೂ ಮುನ್ನ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರಿದಿದೆ. ಶನಿವಾರ ರಾಜ್ಯದ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಪ್ರತ್ಯೇಕ ಅವಘಡಗಳಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಹಲವೆಡೆ ಇನ್ನೂ 4 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಬಳ್ಳಾರಿ ತಾಲೂಕಿನ ದಾಸರನಾಗೇನಹಳ್ಳಿಯಲ್ಲಿ ಸಪೋಟ ಕೊಯ್ಯಲು ಹೊಲಕ್ಕೆ… ತೆರಳಿದ್ದ ಕೋರಿ ಗಾಡಿಲಿಂಗಪ್ಪ (32) ಎಂಬುವವರಿಗೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ಹಸುಗಳನ್ನು ಮನೆಗೆ ಕರೆತರಲು ತೆರಳಿದ್ದ ವಿನೋದಾ (42) ಎಂಬ ಮಹಿಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಎರಡು ಹಸುಗಳೂ ಸಹ ಸಿಡಿಲಿಗೆ ಬಲಿಯಾಗಿವೆ. ಚಾಮರಾಜನಗರದ ಬೇಗೂರು, ಎಚ್.ಡಿ. ಕೋಟೆ, ನಂಜನಗೂಡು ಹಾಗೂ ಕೊಳ್ಳೇಗಾಲದಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ಶುಕ್ರವಾರ ರಾತ್ರಿ ಮೈಸೂರು ನಗರದಲ್ಲಿ ಮಿಂಚು, ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ನೂರಾರು ಮರಗಳು ಹಾಗೂ ಜಾಹೀರಾತು…

Read More

ಮನೆಯಲ್ಲಿ ಏನಾದರೂ ಶುಭಕಾರ್ಯ, ದೇವಸ್ಥಾನದ ಪೂಜೆ, ಮದುವೆ ಅಥವಾ ದೂರದ ಪ್ರಯಾಣ ಇಷ್ಟಿದ್ದರೆ ಸಾಕು, ಮಹಿಳೆಯರಿಗೆ ಮೊದಲಿಗೆ ಕಾಡುವ ಚಿಂತೆ ಅಂದರೆ ಅದು ಪೀರಿಯಡ್ಸ್ (ಋತುಸ್ರಾವ). ಈ ಸಮಸ್ಯೆಯಿಂದ ಸುಲಭವಾಗಿ ಪಾರಾಗಲು ಹಲವರು ತಕ್ಷಣ ಮೆಡಿಕಲ್ ಶಾಪ್ಗೆ ಹೋಗಿ ಪೀರಿಯಡ್ಸ್ ಮುಂದೂಡುವ (Periods Postponement Pills) ಮಾತ್ರೆಗಳನ್ನು ಕೊಂಡು ನುಂಗಿಬಿಡುತ್ತಾರೆ. ಆದರೆ, ನಿಸರ್ಗದ ನಿಯಮಕ್ಕೆ ವಿರುದ್ಧವಾಗಿ ಮಾಡುವ ಈ ಸಣ್ಣ ಕೆಲಸ ದೇಹಕ್ಕೆ ಎಷ್ಟು ದೊಡ್ಡ ಮಟ್ಟದ ಹಾನಿ ಉಂಟುಮಾಡುತ್ತದೆ ಎಂದು ಎಂದಾದರೂ ಯೋಚಿಸಿದ್ದೀರಾ? ವೈದ್ಯರ ಸಲಹೆ ಇಲ್ಲದೆ ಇಷ್ಟಬಂದಂತೆ ಬಳಸುವ ಈ ಹಾರ್ಮೋನ್ ಮಾತ್ರೆಗಳು ಕೇವಲ ಮುಂದಿನ ತಿಂಗಳ ಮುಟ್ಟಿನ ಚಕ್ರವನ್ನು ಏರುಪೇರು ಮಾಡುವುದು ಮಾತ್ರವಲ್ಲ, ಪ್ರಾಣಕ್ಕೇ ಕುತ್ತು ತಂದ ಉದಾಹರಣೆಗಳು ಇವೆ. ಇತ್ತೀಚೆಗೆ ಮನೆಯಲ್ಲಿ ಶುಭಕಾರ್ಯವಿದೆ ಎಂದು ಪೀರಿಯಡ್ಸ್ ಮುಂದೂಡುವ ಮಾತ್ರೆ ತಿಂದ ಮಹಿಳೆಯೊಬ್ಬರಿಗೆ, ಕೆಲವೇ ಹೊತ್ತಿನಲ್ಲಿ ಕಾಲಿನಲ್ಲಿ ತೀವ್ರವಾದ ನೋವು ಮತ್ತು ಬಾವು ಕಾಣಿಸಿಕೊಂಡು, ನಂತರ ಆಕೆ ಮೃತಪಟ್ಟ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.…

Read More

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕರ್ನಾಟಕದ ನಾಡಗೀತೆಯಾದ “ಜಯ ಭಾರತ ಜನನಿಯ ತನುಜಾತೆ”ಯನ್ನು ಕಡ್ಡಾಯವಾಗಿ ಹಾಡುವಂತೆ ಶಾಲಾ ಶಿಕ್ಷಣ ಇಲಾಖೆಯು ಕಡಕ್ ಆದೇಶ ಹೊರಡಿಸಿದೆ. ಈ ನಿಯಮವನ್ನು ಉಲ್ಲಂಘಿಸುವ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುತ್ತೋಲೆಯಲ್ಲಿ ಎಚ್ಚರಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ರಾಜ್ಯದ ಸಂಸ್ಕೃತಿ, ಭಾಷಾ ಅಸ್ಮಿತೆ, ದೇಶಭಕ್ತಿ ಮತ್ತು ಪ್ರಾದೇಶಿಕ ಹೆಮ್ಮೆಯನ್ನು ಬೆಳೆಸುವ ಉದ್ದೇಶದಿಂದ ಈ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಸುತ್ತೋಲೆಯಲ್ಲಿರುವ ಪ್ರಮುಖ ಮಾರ್ಗಸೂಚಿಗಳು: ದಿನಚರಿಯ ಅಂಗವಾಗಿ ಗಾಯನ: ಪ್ರತಿದಿನ ಶಾಲೆಯ ಪ್ರಾರ್ಥನಾ ಸಮಯದಲ್ಲಿ ನಾಡಗೀತೆಯನ್ನು ಸಾಮೂಹಿಕವಾಗಿ, ಲಯಬದ್ಧವಾಗಿ ಮತ್ತು ಸರಿಯಾದ ಉಚ್ಚಾರಣೆಯೊಂದಿಗೆ ನಿಗದಿತ ಅವಧಿಯಲ್ಲಿ ಹಾಡಬೇಕು. ಸಂಗೀತ ಶಿಕ್ಷಕರಿಂದ ತರಬೇತಿ: ವಿದ್ಯಾರ್ಥಿಗಳು ನಾಡಗೀತೆಯನ್ನು ಶುದ್ಧ ಕನ್ನಡದಲ್ಲಿ, ಸರಿಯಾದ ಸ್ವರ ಹಾಗೂ ಲಯದೊಂದಿಗೆ ಹಾಡಲು ಅನುಕೂಲವಾಗುವಂತೆ ಶಾಲೆಯ ಸಂಗೀತ ಶಿಕ್ಷಕರ ಮೂಲಕ ಸೂಕ್ತ ತರಬೇತಿ ನೀಡಬೇಕು. ವಿಶೇಷ ದಿನಗಳಲ್ಲೂ ಕಡ್ಡಾಯ: ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ, ಕನ್ನಡ ರಾಜ್ಯೋತ್ಸವ ಸೇರಿದಂತೆ ಎಲ್ಲಾ…

Read More

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದೀರ್ಘಕಾಲದಿಂದ ಖಾಲಿ ಇರುವ ಶಿಕ್ಷಕರು ಮತ್ತು ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ. ಏನಿದೆ ಆದೇಶದಲ್ಲಿ? ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ದಿನಾಂಕ:31-12-2015 ರೊಳಗೆ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಹುದ್ದೆಗಳನ್ನು ಭರ್ತಿ ಮಾಡಲು ಉಲ್ಲೇಖಿತ ಸರ್ಕಾರದ ಆದೇಶಗಳಲ್ಲಿ ಅನುಮತಿ ನೀಡಲಾಗಿರುತ್ತದೆ. ಸದರಿ ಆದೇಶಗಳಂತೆ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ದಿನಾಂಕ 31-12-2015ರ ಪೂರ್ವದಲ್ಲಿನ ನಿಯಮಾನುಸಾರ ಅರ್ಹ ಖಾಲಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಲ್ಲಿಸಲು ತಿಳಿಸಲಾಗಿರುತ್ತದೆ. ಆದಾಗ್ಯೂ ಹಲವು ಅನುದಾನಿತ ಪ್ರೌಢ ಶಾಲೆಗಳಲ್ಲಿ ದಿನಾಂಕ 31-12-2015ರ ಪೂರ್ವದಲ್ಲಿ ಖಾಲಿಯಾಗಿರುವ ಹುದ್ದೆಗಳು ಭರ್ತಿಯಾಗದೆ ಇದ್ದರೂ ಶಾಲಾ ಆಡಳಿತ ಮಂಡಳಿಯವರು ನಿಯಮಾನುಸಾರ ಅರ್ಹ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಯಾವುದೇ ಪ್ರಸ್ತಾವನೆಗಳು ಸಲ್ಲಿಸಿರುವುದಿಲ್ಲ. ಇದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಕುಂಠಿತವಾಗಲು ಆಡಳಿತ ಮಂಡಳಿಗಳು ಕಾರಣವಾಗಿರುತ್ತಾರೆ. ಆದ್ದರಿಂದ,…

Read More

ಹೈದರಾಬಾದ್: ಕೇಂದ್ರ ಸಚಿವ ಹಾಗೂ ತೆಲಂಗಾಣ ಬಿಜೆಪಿ ಪ್ರಮುಖ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಪುತ್ರ ಬಂಡಿ ಭಗೀರಥ್ನನ್ನು ಪೋಕ್ಸೊ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. ಆದರೆ, ತನಿಖೆಗೆ ಸಹಕರಿಸಲು ತನ್ನ ಮಗ ಸ್ವತಃ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂಬ ಕೇಂದ್ರ ಸಚಿವರ ಹೇಳಿಕೆಯನ್ನು ಸೈಬರಾಬಾದ್ ಪೊಲೀಸ್ ಕಮಿಷನರ್ ರಮೇಶ್ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಆರೋಪಿಯನ್ನು ಹೈದರಾಬಾದ್ ಹೊರವಲಯದಲ್ಲಿ ಬಂಧಿಸಲಾಗಿದೆಯೇ ಹೊರತು, ಇದು ಶರಣಾಗತಿಯಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸಂತ್ರಸ್ತ ಯುವತಿ ಮತ್ತು ಆಕೆಯ ಪೋಷಕರ ಹೇಳಿಕೆಯನ್ನು ನ್ಯಾಯಾಲಯದ ಮುಂದೆ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿ ದೇಶ ಬಿಟ್ಟು ಓಡಿಹೋಗದಂತೆ ತಡೆಯಲು ಲುಕ್-ಔಟ್ (Look-out) ಸುತ್ತೋಲೆಯನ್ನು ಹೊರಡಿಸಿದ್ದರು. ಇದರ ಬೆನ್ನಲ್ಲೇ ಶನಿವಾರ ಈ ಬಂಧನ ಪ್ರಕ್ರಿಯೆ ನಡೆದಿದೆ. ತಮ್ಮ ಮಗನ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಬಂಡಿ ಸಂಜಯ್ ಕುಮಾರ್, “ನನ್ನ ಮಗ ಯಾವುದೇ ತಪ್ಪು ಮಾಡಿಲ್ಲ ಎಂದು ಸತತವಾಗಿ ಹೇಳುತ್ತಿದ್ದಾನೆ. ಕಾನೂನಿನ ಮೇಲಿನ ಗೌರವ ಮತ್ತು ತನಿಖೆಗೆ…

Read More

ಕುಷ್ಟಗಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಯಡಿ ತಮಗೆ ಸಿಗುತ್ತಿದ್ದ ಮಾಸಿಕ 2,000 ರೂಪಾಯಿ ಹಣವನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಕೊಪ್ಪಳ ಜಿಲ್ಲೆಯ ಕುಷ್ಟಗಿಯ ಮೂವರು ಮಹಿಳೆಯರು ಸ್ವಾವಲಂಬಿ ಬದುಕಿಗೆ ಮಾದರಿಯಾಗಿದ್ದಾರೆ. ಈ ಮಹಿಳೆಯರು ಒಟ್ಟಾಗಿ ರೊಟ್ಟಿ ತಯಾರಿಕಾ ಕೇಂದ್ರವನ್ನು ಆರಂಭಿಸಿದ್ದು, ಅದಕ್ಕೆ ‘ಗೃಹಲಕ್ಷ್ಮಿ ರೊಟ್ಟಿ ಕೇಂದ್ರ’ ಎಂದು ಹೆಸರಿಟ್ಟಿದ್ದಾರೆ. ಕುಷ್ಟಗಿ ಪಟ್ಟಣದ ನಿವಾಸಿಗಳಾದ ಮಕ್ತುಂಬಿ ಕೊಪ್ಪದ, ಸಾಜನಬಿ ದಾದಿಬಾಯಿ ಮತ್ತು ಹುಸೇನಬಿ ಕಮ್ಮಾರ ಎಂಬ ಮೂವರು ಮಹಿಳೆಯರೇ ಈ ಸಾಹಸಕ್ಕೆ ಕೈಹಾಕಿದ ಗೆಳತಿಯರು. ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ತಿಂಗಳು ಬರುತ್ತಿದ್ದ ಹಣವನ್ನು ಪೋಲು ಮಾಡದೆ ಉಳಿತಾಯ ಮಾಡಿದ್ದ ಈ ಮಹಿಳೆಯರು, ತಲಾ ₹58 ಸಾವಿರದಂತೆ ಒಟ್ಟು ₹1,74,000 ಹಣವನ್ನು ಒಟ್ಟುಗೂಡಿಸಿದ್ದಾರೆ. ಉಳಿದ ಮೊತ್ತವನ್ನು ತಮ್ಮ ಸ್ವಂತ ಶ್ರಮದಿಂದ ಹೊಂದಿಸಿಕೊಂಡು, ಹುಬ್ಬಳ್ಳಿಯಲ್ಲಿ ₹2 ಲಕ್ಷಕ್ಕೂ ಅಧಿಕ ವೆಚ್ಚದ ರೊಟ್ಟಿ ತಯಾರಿಕಾ ಯಂತ್ರವನ್ನು (Machine) ಖರೀದಿ ಮಾಡಿದ್ದಾರೆ. ಯಂತ್ರವನ್ನು ಅಳವಡಿಸಿಕೊಂಡು ಯಶಸ್ವಿಯಾಗಿ ಸ್ವಯಂ ಉದ್ಯೋಗ ಆರಂಭಿಸಿರುವ ಈ ಮಹಿಳೆಯರು, ಸರ್ಕಾರದ ಧನಸಹಾಯವನ್ನು…

Read More

ಹಾಸನ: ಜನಸ್ಪಂದನ ಕಾರ್ಯಕ್ರಮವನ್ನೇ ಕಾಯದೇ ಬಡವರ ಕೆಲಸವನ್ನು ಜವಾಬ್ದಾರಿಯುತವಾಗಿ ಮಾಡುವ ಮೂಲಕ ಜನರಿಗೆ ಸವಲತ್ತುಗಳನ್ನು ದೊರಕಿಸುವಂತೆ ಕಂದಾಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ. ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗಿರುವ ಅರ್ಜಿಗಳನ್ನು ವಿಲೇವಾರಿ ಮಾಡಿರುವ ಬಗ್ಗೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ಜನಸ್ಪಂದನ ಕಾರ್ಯಕ್ರಮದಲ್ಲಿ ಸ್ವೀಕರಿಸಿದ 4538 ಅರ್ಜಿಗಳಲ್ಲಿ 4444 ಅರ್ಜಿಗಳು ವಿಲೇವಾರಿಯಾಗಿದ್ದು, ಇದರಲ್ಲಿ ಕೆಲವು ಅರ್ಜಿ ಸಮರ್ಪಕವಾಗಿ ವಿಲೇವಾರಿಯಾಗಿಲ್ಲ ಎಂದರು. 94 ಸಿ ಮತ್ತು 94 ಸಿ.ಸಿ.ಗೆ ಸಂಬಂಧಿಸಿದ ಅರ್ಜಿ ಗಳ ವಿಲೇವಾರಿಗೆ ಆದ್ಯತೆ ಮೇಲೆ ಜಂಟಿ ಸರ್ವೆ ಮಾಡಿ ಜನರಿಗೆ ಹಕ್ಕು ಪತ್ರ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜನಸ್ಪಂದನ ಕಾರ್ಯಕ್ರಮ ನಡೆಸುವುದರಿಂದ ಜನರ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು ಸಹಕಾರಿ ಆಗಿದೆ ಆರ್.ಆರ್.ಟಿ. ಪ್ರಕರಣಗಳು ಸ್ವೀಕಾರ ಆಗುತ್ತಿರುವ ಅರ್ಜಿಗಳನ್ನು ನೋಡಿದರೆ ಇನ್ನೂ…

Read More

ಬೆಂಗಳೂರು: ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ಭರಪೂರ ಕೊಡುಗೆ ಸಿಕ್ಕಿದೆ. ಕರ್ನಾಟಕಕ್ಕೆ ಒಟ್ಟು 1122 ಹೆಚ್ಚುವರಿ ವೈದ್ಯಕೀಯ ಸೀಟುಗಳನ್ನು ಮಂಜೂರು ಮಾಡಲಾಗಿದ್ದು, ಇದರಲ್ಲಿ 550 ಪಿಜಿ (ಸ್ನಾತಕೋತ್ತರ) ಮತ್ತು 572 ಯುಜಿ (ಎಂಬಿಬಿಎಸ್) ಸೀಟುಗಳು ಸೇರಿವೆ. ಶನಿವಾರ ವಿಕಾಸಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಈ ಮಹತ್ವದ ವಿಷಯವನ್ನು ಪ್ರಕಟಿಸಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ರಾಜ್ಯಕ್ಕೆ ಹೆಚ್ಚುವರಿ ವೈದ್ಯಕೀಯ ಸೀಟುಗಳು ಹಂಚಿಕೆಯಾಗಿರುವುದು ಇದೇ ಮೊದಲು ಎಂದು ಅವರು ತಿಳಿಸಿದ್ದಾರೆ. ಮಂಜೂರಾಗಿರುವ ಹೆಚ್ಚುವರಿ ಸೀಟುಗಳಲ್ಲಿ ಬಹುಪಾಲು ಸೀಟುಗಳನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೇ ಹಂಚಿಕೆ ಮಾಡಲಾಗಿದೆ.ಈ ಹೆಚ್ಚುವರಿ ಸೀಟುಗಳ ಹಂಚಿಕೆಯು ರಾಜ್ಯದಲ್ಲಿ ಹೊಸದಾಗಿ 10 ವೈದ್ಯಕೀಯ ಕಾಲೇಜುಗಳನ್ನು ಸ್ಥಾಪಿಸುವುದಕ್ಕೆ ಸಮನಾಗಿದೆ ಎಂದು ಸಚಿವರು ಬಣ್ಣಿಸಿದ್ದಾರೆ. ವೈದ್ಯಕೀಯ ಮೂಲಸೌಕರ್ಯ ವೃದ್ಧಿಗಾಗಿ ಕೇಂದ್ರ ಸರ್ಕಾರ ಒಟ್ಟು ₹1090 ಕೋಟಿ ಅಭಿವೃದ್ಧಿ ಅನುದಾನ ನೀಡುತ್ತಿದ್ದು, ರಾಜ್ಯ ಸರ್ಕಾರ ತನ್ನ ಪಾಲಿನ ₹600 ಕೋಟಿಗೂ ಹೆಚ್ಚಿನ ಅನುದಾನವನ್ನು ಬಿಡುಗಡೆ ಮಾಡಲಿದೆ.…

Read More

ನವದೆಹಲಿ/ಬೆಂಗಳೂರು: ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ನೀಟ್ (NEET) ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವು ಈಗ ವಿದ್ಯಾರ್ಥಿಗಳ ಜೀವಕ್ಕೆ ಕುತ್ತು ತಂದಿದೆ. ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ, ಆಘಾತ ಹಾಗೂ ತೀವ್ರ ಮಾನಸಿಕ ಖಿನ್ನತೆಗೆ ಒಳಗಾದ ದೇಶದ ವಿವಿಧ ಭಾಗಗಳ ಒಟ್ಟು ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಕೇಡಿಸುವ ಘಟನೆ ಬೆಳಕಿಗೆ ಬಂದಿದೆ. ಮೃತರ ಪೈಕಿ ಬೆಂಗಳೂರು ಮೂಲದ ಒಬ್ಬ ವಿದ್ಯಾರ್ಥಿನಿಯೂ ಸೇರಿದ್ದಾರೆ. ಕಠಿಣ ಪರಿಶ್ರಮ ಪಟ್ಟು ರಾತ್ರಿ-ಹಗಲು ಎನ್ನದೆ ಓದಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳಿಗೆ ಪರೀಕ್ಷೆ ರದ್ದತಿ ಸುದ್ದಿ ಭಾರಿ ಆಘಾತ ನೀಡಿದೆ. ಪರೀಕ್ಷೆ ರದ್ದಾಗಿರುವುದರಿಂದ ಮತ್ತೆ ಪರೀಕ್ಷೆ ಬರೆಯಬೇಕಾದ ತೀವ್ರ ಒತ್ತಡ ಮತ್ತು ಭವಿಷ್ಯದ ಬಗೆಗಿನ ಚಿಂತೆ ವಿದ್ಯಾರ್ಥಿಗಳನ್ನು ತೀವ್ರ ನಿರಾಶೆಗೆ ತಳ್ಳಿದೆ. ಇದೇ ಖಿನ್ನತೆಯಿಂದಾಗಿ ವಿದ್ಯಾರ್ಥಿಗಳು ಈ ದುಡುಕಿನ ನಿರ್ಧಾರಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತ ವಿದ್ಯಾರ್ಥಿಗಳ ವಿವರ: ಬೆಂಗಳೂರಿನ ವಿದ್ಯಾರ್ಥಿನಿ: ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬರು ಗೋವಾದಲ್ಲಿ ಬುಧವಾರ…

Read More