Author: kannadanewsnow57

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4:05ಕ್ಕೆ ರಾಜಧಾನಿಯ ಲೋಕಭವನದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಅವರು ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ಭರ್ಜರಿ ಸಿದ್ಧತೆ ಡಿಕೆಶಿ ಅವರ ಪಟ್ಟಾಭಿಷೇಕದ ಹಿನ್ನೆಲೆಯಲ್ಲಿ ಲೋಕಭವನದಲ್ಲಿ ಯುದ್ಧೋಪಾದಿಯಲ್ಲಿ ಸಿದ್ಧತೆಗಳು ಆರಂಭವಾಗಿವೆ. ಲೋಕಭವನ ಹಾಗೂ ವಿಧಾನಸೌಧದ ಸುತ್ತಮುತ್ತಲ ಪ್ರದೇಶಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಕಟೌಟ್‌ಗಳು ಮತ್ತು ಬ್ಯಾನರ್‌ಗಳನ್ನು ಅಳವಡಿಸಲಾಗಿದ್ದು, ಇಡೀ ಪರಿಸರ ಹಬ್ಬದ ವಾತಾವರಣವನ್ನು ನೆನಪಿಸುತ್ತಿದೆ. ಅಭಿಮಾನಿಗಳಿಗೆ ಎಲ್‌ಇಡಿ ಪರದೆ ವ್ಯವಸ್ಥೆ ರಾಜ್ಯದ ಮೂಲೆ ಮೂಲೆಗಳಿಂದ ಹರಿದುಬರಲಿರುವ ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಅನುವಾಗುವಂತೆ ಲೋಕಭವನದ ಸುತ್ತಮುತ್ತ ಬೃಹತ್ ಎಲ್‌ಇಡಿ (LED) ಪರದೆಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಭದ್ರತೆ ಹಾಗೂ ಸುಗಮ ಸಂಚಾರಕ್ಕಾಗಿ ಪೊಲೀಸ್ ಇಲಾಖೆಯೂ ಸಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. https://twitter.com/ANI/status/2061650840835039317?ref_src=twsrc%5Etfw%7Ctwcamp%5Etweetembed%7Ctwterm%5E2061650840835039317%7Ctwgr%5E629ea387a01b37d88015ce15721d0ed1fd83e295%7Ctwcon%5Es1_c10&ref_url=https%3A%2F%2Fwww.kannadaprabha.com%2Fkarnataka%2F2026%2FJun%2F02%2Flist-of-10-12-ministers-to-be-sworn-in-with-dk-shivakumar-to-be-out-today

Read More

ನವದೆಹಲಿ: ಇರಾನ್-ಅಮೆರಿಕ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟ ಹಿನ್ನೆಲೆಯಲ್ಲಿ ಜಾಗತಿಕವಾಗಿ ಎಲ್‌ಪಿಜಿ (LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಭಾರತದ ಮೇಲೂ ಇದು ಭಾರಿ ಪ್ರಭಾವ ಬೀರಿದ್ದು, ದೇಶದಲ್ಲಿ ಎಲ್‌ಪಿಜಿ ಬಳಕೆ ಮತ್ತು ಸಬ್ಸಿಡಿಯನ್ನು ಮಿತಿಗೊಳಿಸಲು ಕೇಂದ್ರ ಸರ್ಕಾರ ಈಗ ಒಂದು ಅತ್ಯಂತ ಪ್ರಮುಖ ಹಾಗೂ ಕಠಿಣ ನಿರ್ಧಾರವನ್ನು ಕೈಗೊಂಡಿದೆ. ದೇಶಾದ್ಯಂತ ಪೈಪ್‌ಲೈನ್ ಮೂಲಕ ಸರಬರಾಜು ಆಗುವ ನೈಸರ್ಗಿಕ ಅನಿಲ (PNG) ಸಂಪರ್ಕವನ್ನು ವಿಸ್ತರಿಸಲಾಗುತ್ತಿದ್ದರೂ, ಎಲ್‌ಪಿಜಿ ಸಿಲಿಂಡರ್‌ಗಳ ಬಳಕೆ ನಿರೀಕ್ಷಿತ ಪ್ರಮಾಣದಲ್ಲಿ ಕಡಿಮೆಯಾಗಿಲ್ಲ. ಮಾರ್ಚ್ ವೇಳೆಗೆ ಬರೋಬ್ಬರಿ 6.5 ಲಕ್ಷ ಹೊಸ ಪಿಎನ್‌ಜಿ ಸಂಪರ್ಕಗಳನ್ನು ನೀಡಲಾಗಿದ್ದರೂ, ಜನರು ಹಳೆಯ ಎಲ್‌ಪಿಜಿ ಕನೆಕ್ಷನ್‌ಗಳನ್ನು ಬಿಟ್ಟುಕೊಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ‘ಡ್ಯುಯಲ್ ಗ್ಯಾಸ್ ಕನೆಕ್ಷನ್’ (ಪಿಎನ್‌ಜಿ ಮತ್ತು ಎಲ್‌ಪಿಜಿ ಎರಡನ್ನೂ ಹೊಂದುವುದು) ನಿಯಮವನ್ನು ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಜೂನ್ 1 ರಿಂದ 30 ದಿನಗಳ ಗಡುವು! ಪಿಎನ್‌ಜಿ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಜೂನ್ 1, 2026 ರಿಂದ ಅನ್ವಯವಾಗುವಂತೆ ಸರ್ಕಾರ 30 ದಿನಗಳ ಗಡುವು…

Read More

ಗದಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವೃದ್ಧ ದಂಪತಿಯ ಮೇಲೆ ದುಷ್ಕರ್ಮಿಗಳು ಕಬ್ಬಿಣದ ರಾಡ್ ಹಾಗೂ ದೊಣ್ಣೆಗಳಿಂದ ಅಮಾನುಷವಾಗಿ ಹಲ್ಲೆ ನಡೆಸಿರುವ ಘೋರ ಘಟನೆ ಗದಗ ತಾಲೂಕಿನ ಬೆಳಧಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಗಳಾದ ಕಪ್ಪತಪ್ಪ ಹೊಸಳ್ಳಿ ಹಾಗೂ ಅವರ ಪತ್ನಿ ರೇಣವ್ವ ಹೊಸಳ್ಳಿ ಹಲ್ಲೆಗೊಳಗಾದ ದುರ್ದೈವಿ ವೃದ್ಧ ದಂಪತಿಯಾಗಿದ್ದಾರೆ. ಮೊಬೈಲ್‌ನಲ್ಲಿ ಸೆರೆಯಾಯ್ತು ದೃಶ್ಯ ವೃದ್ಧ ದಂಪತಿಯನ್ನು ಅಟ್ಟಾಡಿಸಿ ಅತ್ಯಂತ ಕ್ರೂರವಾಗಿ ಹೊಡೆಯುತ್ತಿರುವ ದೃಶ್ಯಾವಳಿಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತುತ್ತು ಅನ್ನ ನೀಡುವ ಭೂಮಿಗಾಗಿ, ವಯಸ್ಸಾದವರೆಂಬ ಕರುಣೆಯೂ ಇಲ್ಲದೆ, ಮಹಿಳೆ ಎಂದೂ ನೋಡದೆ ದುಷ್ಕರ್ಮಿಗಳು ಅಮಾನವೀಯವಾಗಿ ಥಳಿಸಿದ್ದಾರೆ. ಈ ಭೀಕರ ಹಲ್ಲೆ ಘಟನೆಯು ಮೇ 28ರಂದೇ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಮೀನಿನ ಜಗಳವೇ ಈ ಘಟನೆಗೆ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ. ಸದ್ಯ ಈ ಸಂಬಂಧ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ವರ ವಿರುದ್ಧ ಕೇಸ್ ವೃದ್ಧ ದಂಪತಿಯ ಮೇಲೆ ಹಲ್ಲೆ…

Read More

ಮೈಸೂರು: ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ (DCM) ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಮೈಸೂರಿನಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದ ಪ್ರಮುಖ ವೃತ್ತವಾದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿರುವ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಹಾಗೂ ಯತೀಂದ್ರ ಅವರ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರು ಪಕ್ಷಕ್ಕಾಗಿ ಮತ್ತು ಮೈಸೂರು ಭಾಗದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ಅವರಿಗೆ ಸೂಕ್ತ ಸ್ಥಾನಮಾನ ಸಿಗಬೇಕು ಎಂಬುದು ಕಾರ್ಯಕರ್ತರ ಒತ್ತಾಯವಾಗಿದೆ. ಪ್ರತಿಭಟನೆಯ ನೇತೃತ್ವ ವಹಿಸಿರುವ ಯೂತ್ ಕಾಂಗ್ರೆಸ್ ಮುಖಂಡರು, ರಾಜ್ಯ ರಾಜಕಾರಣದಲ್ಲಿ ಯತೀಂದ್ರ ಅವರ ನಾಯಕತ್ವದ ಅಗತ್ಯತೆಯನ್ನು ಮನಗಂಡು ಕಾಂಗ್ರೆಸ್ ಹೈಕಮಾಂಡ್ ತಕ್ಷಣವೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. “ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಮೈಸೂರು ಭಾಗಕ್ಕೆ ಮತ್ತಷ್ಟು ಶಕ್ತಿ ತುಂಬಬೇಕು. ಈ ಮೂಲಕ ಹೈಕಮಾಂಡ್ ಕಾರ್ಯಕರ್ತರ ಧ್ವನಿಗೆ ಗೌರವ ನೀಡಬೇಕು,” ಎಂದು…

Read More

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಈಗ ಸಚಿವ ಸಂಪುಟ ಕಸರತ್ತು ಜೋರಾಗಿದೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಬುಧವಾರ ಯಾರೆಲ್ಲಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಕುತೂಹಲಕ್ಕೆ ಇಂದು ತೆರೆಬೀಳುವ ಸಾಧ್ಯತೆಯಿದೆ. ಮೊದಲ ಹಂತದಲ್ಲಿ 10 ರಿಂದ 12 ಶಾಸಕರಿಗೆ ಸಚಿವ ಸ್ಥಾನ ಸಿಗಲಿದ್ದು, ಅವರ ಅಂತಿಮ ಪಟ್ಟಿ ಮಂಗಳವಾರವೇ ಹೊರಬೀಳಬಹುದು ಎಂದು ಹೇಳಲಾಗುತ್ತಿದೆ. ಇನ್ನು ಬುಧವಾರ ಸಂಜೆ 4.05ಕ್ಕೆ ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ಅದ್ಧೂರಿ ಪ್ರಮಾಣವಚನ ಸಮಾರಂಭ ಆಯೋಜನೆಗೊಂಡಿದೆ. ಸಚಿವರ ಪಟ್ಟಿಗೆ ಮುದ್ರೆ ಒತ್ತಲು ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಪ್ರಮುಖ ಸಭೆ ನಡೆಯಲಿದೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಹಂಗಾಮಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಜೊತೆ ಚರ್ಚಿಸಿ ಲಿಸ್ಟ್ ಫೈನಲ್ ಮಾಡಲಿದ್ದಾರೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಕೊಟ್ಟಿರುವ 12 ಜನರ ಪಟ್ಟಿಯಲ್ಲಿ…

Read More

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿರುದ್ಧ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮತ್ತೊಮ್ಮೆ ಕಿಡಿಕಾರಿದ್ದಾರೆ. ಆರ್‌ಸಿಬಿ ಕೇವಲ ಲಾಭಕೋರ ಸಂಸ್ಥೆಯಾಗಿದೆಯೇ ಹೊರತು ಅದರಿಂದ ಯಾರಿಗೂ ನಯಾಪೈಸೆ ಪ್ರಯೋಜನವಿಲ್ಲ ಎಂದು ಅವರು ನೀಡಿರುವ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಚೇತನ್ ಅಹಿಂಸಾ ವಾದವೇನು? ಚೇತನ್ ಅವರ ಪ್ರಕಾರ, ಆರ್‌ಸಿಬಿ ಎನ್ನುವುದು ಕ್ರೀಡೆಯನ್ನು ಮೀರಿದ ಒಂದು ಪಕ್ಕಾ ವಾಣಿಜ್ಯ ಸಂಸ್ಥೆ. ಸಿಲಿಕಾನ್ ಸಿಟಿಯ ಹೆಸರನ್ನು ಬಂಡವಾಳ ಮಾಡಿಕೊಂಡು ಈ ಫ್ರಾಂಚೈಸಿ ಭಾರೀ ಪ್ರಮಾಣದ ಹಣ ಗಳಿಸುತ್ತಿದೆ. ಆದರೆ, ಈ ವ್ಯವಹಾರದಿಂದ ಕರ್ನಾಟಕಕ್ಕಾಗಲಿ ಅಥವಾ ಇಲ್ಲಿನ ಜನರಿಗಾಗಲಿ ಯಾವುದೇ ರೀತಿಯ ಆರ್ಥಿಕ ಅಥವಾ ಸಾಮಾಜಿಕ ಕೊಡುಗೆ ಸಿಗುತ್ತಿಲ್ಲ ಎಂದು ಅವರು ದೂರಿದ್ದಾರೆ. ಡಿಕೆಶಿ ಹೇಳಿಕೆಗೆ ವಿರೋಧ ಇದೇ ವಿಷಯವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಹಿಂದೆ ಆರ್‌ಸಿಬಿ ಪರವಾಗಿ ಆಡಿದ್ದ ಮಾತುಗಳನ್ನು ಚೇತನ್ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಕಳೆದೆರಡು ವರ್ಷಗಳಲ್ಲಿ ನಡೆದ ಕೆಲವೊಂದು ಕಹಿ…

Read More

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಬಳಿಯಿರುವ ಟಿ ಬೇಗೂರು ಎಂಬಲ್ಲಿ ಸಿನಿಮೀಯ ಶೈಲಿಯಲ್ಲಿ ಜ್ಯುವೆಲ್ಲರಿ ಶಾಪ್ ಒಂದಕ್ಕೆ ನುಗ್ಗಿದ ದರೋಡೆಕೋರರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ದ್ವಿಚಕ್ರ ವಾಹನದಲ್ಲಿ ಬಂದ ಮೂವರು ಅಪರಿಚಿತರು, ಆರಂಭದಲ್ಲಿ ಚಿನ್ನ ಕೊಳ್ಳುವ ಗ್ರಾಹಕರಂತೆ ನಟಿಸಿ ಅಂಗಡಿಯೊಳಗೆ ಪ್ರವೇಶಿಸಿದ್ದಾರೆ. ಸಿಬ್ಬಂದಿ ಇವರನ್ನು ನಂಬಿ ಮಾತನಾಡಿಸುವಷ್ಟರಲ್ಲಿ, ತಕ್ಷಣವೇ ತಮ್ಮ ಬಳಿಯಿದ್ದ ಮಾರಕಾಸ್ತ್ರ ಹಾಗೂ ಗನ್‌ ನಂತಹ ಆಯುಧವನ್ನು ತೋರಿಸಿ ಇಡೀ ಅಂಗಡಿಯನ್ನು ಮೌನವಾಗಿಸಿದ್ದಾರೆ. ಸಿಬ್ಬಂದಿಗೆ ಜೀವಬೆದರಿಕೆ ಹಾಕಿ ಇಡೀ ಜ್ಯುವೆಲ್ಲರಿ ಶಾಪ್ ಅನ್ನು ತಮ್ಮ ಕಂಟ್ರೋಲ್‌ಗೆ ತಗೆದುಕೊಂಡಿದ್ದಾರೆ. ಅಂಗಡಿಯಲ್ಲಿದ್ದವರನ್ನು ಹೆದರಿಸಿದ ದುಷ್ಕರ್ಮಿಗಳು ಸುಮಾರು 30 ರಿಂದ 35 ಗ್ರಾಂ ತೂಕದ ಚಿನ್ನದ ಉಂಗುರಗಳಿದ್ದ ಇಡೀ ಟ್ರೇ ಮತ್ತು ಕೌಂಟರ್‌ನಲ್ಲಿದ್ದ ನಗದನ್ನು ದೋಚಿದ್ದಾರೆ. ದರೋಡೆ ಮಾಡಿದ ತಕ್ಷಣವೇ ತಾವೇ ತಂದಿದ್ದ ಬೈಕ್ ಏರಿ ಸ್ಥಳದಿಂದ ಪರಾರಿಯಾಗಿದ್ದಾರೆ. ಪಟ್ಟಣದ ಜನನಿಬಿಡ ಪ್ರದೇಶದಲ್ಲೇ ಈ ಕೃತ್ಯ ನಡೆದಿರುವುದರಿಂದ ಸ್ಥಳೀಯ ವ್ಯಾಪಾರಿಗಳು ಹಾಗೂ ಸಾರ್ವಜನಿಕರಲ್ಲಿ ಭಾರೀ…

Read More

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕೌಶಲ್ಯ ಮಿಷನ್, ಕೊಪ್ಪಳ ಇವರ ಸಹಯೋಗದಲ್ಲಿ 30 ದಿನಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ತರಬೇತಿಯೊಂದಿಗೆ ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಚಾಲನಾ ಪರವಾನಗಿ (ಡಿಎಲ್) ಪಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ತರಬೇತಿ ಅವಧಿಯಲ್ಲಿ ಉಚಿತ ವಸತಿ ಹಾಗೂ ಊಟದ ವ್ಯವಸ್ಥೆಯೂ ಇರಲಿದೆ. ಶಿಗ್ಗಾಂವಿಯ ಗಂಗಿಬಾವಿ ರಸ್ತೆಯಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರ ಹಾಗೂ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಪ್ರಾದೇಶಿಕ ತರಬೇತಿ ಕೇಂದ್ರಗಳಲ್ಲಿ ತರಬೇತಿ ನಡೆಯಲಿದೆ. ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 20 ರಿಂದ 40 ವರ್ಷದೊಳಗಿನವರಾಗಿದ್ದು, ಕನಿಷ್ಠ ಒಂದು ವರ್ಷದ ಅನುಭವವಿರುವ ಲಘು ವಾಹನ…

Read More

ನವದೆಹಲಿ: ಭಾರತದಲ್ಲಿ ನೆಲೆಸುವ ವಿದೇಶಿ ಪ್ರಜೆಗಳ ನಿಗಾ ಮತ್ತು ವಲಸೆ ಪ್ರಕ್ರಿಯೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವಾಲಯವು (MHA) ಮಹತ್ವದ ಕ್ರಮ ಕೈಗೊಂಡಿದೆ. ‘ವಲಸೆ ಮತ್ತು ವಿದೇಶಿಗರ (ತಿದ್ದುಪಡಿ) ನಿಯಮಗಳು, 2026’ ಅನ್ನು ಜಾರಿಗೊಳಿಸಲಾಗಿದ್ದು, ವಿದೇಶಿಗರ ನೋಂದಣಿ ಪ್ರಕ್ರಿಯೆ, ತುರ್ತು ನಿಬಂಧನೆಗಳು ಮತ್ತು ಮೇಲ್ಮನವಿ ಕಾರ್ಯವಿಧಾನಗಳಲ್ಲಿ ಪ್ರಮುಖ ಬದಲಾವಣೆಗಳನ್ನು ತರಲಾಗಿದೆ. ದೇಶದ ವಲಸೆ ಆಡಳಿತವನ್ನು ಆಧುನೀಕರಿಸುವ ಮತ್ತು ನಿಯಂತ್ರಣವನ್ನು ಬಿಗಿಗೊಳಿಸುವ ಉದ್ದೇಶದಿಂದ ಈ ಹೊಸ ತಿದ್ದುಪಡಿಗಳನ್ನು ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೋಂದಣಿ ಗಡುವಿನಲ್ಲಿ ಮಹತ್ವದ ಬದಲಾವಣೆ ಹೊಸ ನಿಯಮಗಳ ಪ್ರಕಾರ, ಭಾರತದಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುವ ವಿದೇಶಿ ಪ್ರಜೆಗಳು, ತಾವು ಭಾರತಕ್ಕೆ ಬಂದಿಳಿದ 180 ದಿನಗಳ ಅವಧಿ ಮುಗಿಯುವ ಮುನ್ನವೇ ತಮ್ಮ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಾಗುತ್ತದೆ. ಈ ಹಿಂದೆ, 180 ದಿನಗಳ ಅವಧಿ ಮುಗಿದ ನಂತರವೂ ನೋಂದಣಿ ಮಾಡಿಕೊಳ್ಳಲು 14 ದಿನಗಳ ಕಾಲಾವಕಾಶ ನೀಡಲಾಗುತ್ತಿತ್ತು. ಆದರೆ ಈಗ ಆ ಹಳೆಯ ನಿಯಮವನ್ನು ರದ್ದುಗೊಳಿಸಲಾಗಿದ್ದು, 180 ದಿನಗಳ ಒಳಗಾಗಿಯೇ…

Read More

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ. ನಾಳೆ ಸಂಜೆ 4:05ಕ್ಕೆ ರಾಜಧಾನಿಯ ಲೋಕಭವನದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಅವರು ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ಭರ್ಜರಿ ಸಿದ್ಧತೆ ಡಿಕೆಶಿ ಅವರ ಪಟ್ಟಾಭಿಷೇಕದ ಹಿನ್ನೆಲೆಯಲ್ಲಿ ಲೋಕಭವನದಲ್ಲಿ ಯುದ್ಧೋಪಾದಿಯಲ್ಲಿ ಸಿದ್ಧತೆಗಳು ಆರಂಭವಾಗಿವೆ. ಲೋಕಭವನ ಹಾಗೂ ವಿಧಾನಸೌಧದ ಸುತ್ತಮುತ್ತಲ ಪ್ರದೇಶಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಬೃಹತ್ ಕಟೌಟ್‌ಗಳು ಮತ್ತು ಬ್ಯಾನರ್‌ಗಳನ್ನು ಅಳವಡಿಸಲಾಗಿದ್ದು, ಇಡೀ ಪರಿಸರ ಹಬ್ಬದ ವಾತಾವರಣವನ್ನು ನೆನಪಿಸುತ್ತಿದೆ. ಅಭಿಮಾನಿಗಳಿಗೆ ಎಲ್‌ಇಡಿ ಪರದೆ ವ್ಯವಸ್ಥೆ ರಾಜ್ಯದ ಮೂಲೆ ಮೂಲೆಗಳಿಂದ ಹರಿದುಬರಲಿರುವ ಲಕ್ಷಾಂತರ ಅಭಿಮಾನಿಗಳು ಮತ್ತು ಕಾರ್ಯಕರ್ತರಿಗೆ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಅನುವಾಗುವಂತೆ ಲೋಕಭವನದ ಸುತ್ತಮುತ್ತ ಬೃಹತ್ ಎಲ್‌ಇಡಿ (LED) ಪರದೆಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಭದ್ರತೆ ಹಾಗೂ ಸುಗಮ ಸಂಚಾರಕ್ಕಾಗಿ ಪೊಲೀಸ್ ಇಲಾಖೆಯೂ ಸಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

Read More