Author: kannadanewsnow57

ಬೆಂಗಳೂರು : ಗ್ರಾಮ ಪಂಚಾಯತಿಗಳ ಸ್ವಂತ ಸಂಪನ್ಮೂಲ ಹೆಚ್ಚಿಸುವ ಉದ್ದೇಶದೊಂದಿಗೆ ಅಕ್ರಮ ಲೇಔಟ್‌ಗಳ ನಿವೇಶನಗಳಿಗೆ ಇ-ಖಾತಾ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಅಭಿವೃದ್ಧಿಪಡಿಸಿರುವ ಇ-ಸ್ವತ್ತು 2.0 ತಂತ್ರಾಂಶಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಇ – ಸ್ವತ್ತು ಪಡೆಯಲು ಇರುವ ಎಲ್ಲಾ ಆಡಳಿತಾತ್ಮಕ, ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ನೀಡಲು ಇ – ಸ್ವತ್ತು ಸಹಾಯವಾಣಿ 9483476000 ಸ್ಥಾಪಿಸಲಾಗಿದೆ. ಗ್ರಾಮೀಣ ಭಾಗದ ಜನರು ತಮ್ಮ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸುಲಭವಾಗಿ ಮತ್ತು ಡಿಜಿಟಲ್‌ ರೂಪದ ಇ – ಖಾತಾ ಪಡೆಯಲು ಇಲಾಖೆಯು ಅವಕಾಶ ಕಲ್ಪಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. https://twitter.com/KarnatakaVarthe/status/1995846825199403323?s=20

Read More

ಶಿವಮೊಗ್ಗ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮದುವೆಯಾದ ಮರುದಿನವೇ ಕುಸಿದು ಬಿದ್ದು ನವ ವರ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪದ ಹನುಮಂತಾಪುರದ ಯುವಕ ಮದುವೆಯಾದ ಮರುದಿನವೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಮೇಶ್(30) ಮೃತಪಟ್ಟವರು. ಭಾನುವಾರ ಹರಪನಹಳ್ಳಿ ಸಮೀಪದ ಬಂಡ್ರಿಯ ಯುವತಿಯನ್ನು ರಮೇಶ್ ಮದುವೆಯಾಗಿದ್ದರು. ವಧುವಿನ ಮನೆಗೆ ನವ ದಂಪತಿ ತೆರಳಿದ್ದಾರೆ. ದೇವರ ಕೋಣೆಗೆ ಹೋಗಿ ಕೈಮುಗಿದು ಹೊರ ಬರುತ್ತಿದ್ದಂತೆ ರಮೇಶ್ ಹೃದಯಾಘಾತದಿಂದ ಕುಸಿತು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದಾರೆ.

Read More

ಬೆಂಗಳೂರು : ಕವಿಪ್ರನಿನಿಯಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ಮ್ಯಾನ್ ಹುದ್ದೆಗಳ ನೇಮಕಾತಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಸ್ಥಳ ನಿಯುಕ್ತಿಗಾಗಿ ಕೌನ್ಸಿಲಿಂಗ್ ನಡೆಸಿ ನೇಮಕಾತಿ ಆದೇಶ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.  ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ, ಕಿರಿಯ ಸ್ಟೇಷನ್ ಪರಿಚಾರಕ (ಎನ್.ಕೆ.ಕೆ/ಕೆ.ಕೆ) ಮತ್ತು ಕಿರಿಯ ಪವರ್ಮ್ಯಾನ್(ಎನ್.ಕೆ.ಕೆ/ಕೆ.ಕೆ) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅಂತಿಮ ಆಯ್ಕೆ ಪಟ್ಟಿಗಳನ್ನು ಕ್ರಮವಾಗಿ ದಿನಾಂಕ: 06.08.2025 ಮತ್ತು 25.08.2025 ರಂದು ಕವಿಪ್ರನಿನಿ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿರುತ್ತದೆ. ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಹೊಂದಿ, ಎಲ್ಲಾ ದಾಖಲಾತಿಗಳ ನೈಜತೆ/ಸಿಂಧುತ್ವ ಪ್ರಮಾಣ ಪತ್ರ ಸ್ವೀಕೃತಗೊಂಡಿರುವ ಅಭ್ಯರ್ಥಿಗಳ ವಿವರಗಳನ್ನು ಅನುಬಂಧ-1, 2, 3 ಮತ್ತು 4 ರಲ್ಲಿ ತಿಳಿಸಲಾಗಿರುತ್ತದೆ. ಅನುಬಂಧ-1, 2, 3 ಮತ್ತು 4 ರಲ್ಲಿ ತಿಳಿಸಿರುವ ಅಭ್ಯರ್ಥಿಗಳ ಸ್ಥಳ ನಿಯುಕ್ತಿ ಹಾಗೂ ನೇಮಕಾತಿ ಆದೇಶ ಜಾರಿಗೊಳಿಸಲು, ದಿನಾಂಕ: 10.12.2025 ಮತ್ತು 11.12.2025 ಗಳಂದು కౌన్సిలింగా ನಡೆಸಲಾಗುತ್ತಿರುವುದರಿಂದ ಸದರಿ ಅಭ್ಯರ್ಥಿಗಳು ತಮ್ಮ ಮೂಲ ಗುರುತಿನ ಚೀಟಿ…

Read More

ಬೆಂಗಳೂರು : ಸಿಬ್ಬಂದಿ ಕೊರತೆಯಿಂದಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 200 ಕ್ಕೂ ಹೆಚ್ಚು ಇಂಡಿಗೋ ವಿಮಾನಗಳು ರದ್ದುಗೊಂಡಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಈ ಕುರಿತು ಇಂಡಿಗೋ ಟ್ವೀಟ್ ಮಾಡಿದ್ದು, ನಮಸ್ಕಾರ, ವಿಳಂಬಗಳು ಆತಂಕಕಾರಿ ಮತ್ತು ತೊಂದರೆದಾಯಕವಾಗಬಹುದು ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಕಾರ್ಯಾಚರಣೆಯ ಕಾರಣಗಳಿಂದಾಗಿ ನಿಮ್ಮ ವಿಮಾನ ವಿಳಂಬವಾಗಿದೆ. ನಮ್ಮ ಗ್ರಾಹಕರನ್ನು ಸಮಯಕ್ಕೆ ಸರಿಯಾಗಿ ಅವರ ಗಮ್ಯಸ್ಥಾನಗಳಿಗೆ ತಲುಪಿಸುವುದು ನಮ್ಮ ಪ್ರಯತ್ನ ಎಂದು ನಾವು ನಿಮಗೆ ಭರವಸೆ ನೀಡಲು ಬಯಸುತ್ತೇವೆ. ಉಂಟಾದ ಅನಾನುಕೂಲತೆಗೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಮತ್ತು ಮುಂಬರುವ ದಿನಗಳಲ್ಲಿ ನಿಮಗೆ ಉತ್ತಮ ಸೇವೆ ಸಲ್ಲಿಸಲು ಬಯಸುತ್ತೇವೆ ಎಂದು ಹೇಳಿದೆ. https://twitter.com/IndiGo6E/status/1995908456570912956?s=20

Read More

ನವದೆಹಲಿ : ಕೌಂಟರ್ ಗಳಲ್ಲಿ ಕಾಯ್ದಿರಿಸಿದ ಎಲ್ಲಾ ತತ್ಕಾಲ್ ಟಿಕೆಟ್ಗಳಿಗೆ ಕಡ್ಡಾಯ ಒನ್-ಟೈಮ್ ಪಾಸ್ವರ್ಡ್ (ಒಟಿಪಿ) ಪರಿಶೀಲನೆಯನ್ನು ಪರಿಚಯಿಸುವ ಮೂಲಕ ತತ್ಕಾಲ್ ಟಿಕೆಟ್ ಬುಕಿಂಗ್ ಸೌಲಭ್ಯದ ದುರುಪಯೋಗವನ್ನು ತಡೆಯಲು ಭಾರತೀಯ ರೈಲ್ವೆ ಸಚಿವಾಲಯ ಪ್ರಮುಖ ಹೆಜ್ಜೆ ಇಡುತ್ತಿದೆ. ನ್ಯಾಯಯುತ ಪ್ರವೇಶ ಮತ್ತು ಹೆಚ್ಚುವರಿ ಭದ್ರತೆಯನ್ನು ಖಾತರಿಪಡಿಸುವ ಗುರಿಯನ್ನು ಹೊಂದಿರುವ ಈ ಕ್ರಮವು ಶೀಘ್ರದಲ್ಲೇ ದೇಶಾದ್ಯಂತ ಎಲ್ಲಾ ರೈಲುಗಳನ್ನು ಒಳಗೊಳ್ಳುತ್ತದೆ. ಪ್ರಾಯೋಗಿಕ ಆಧಾರದ ಮೇಲೆ ಒಟಿಪಿ ಆಧಾರಿತ ಪರಿಶೀಲನೆಯನ್ನು ಪರಿಚಯಿಸಲಾಯಿತು ರೈಲ್ವೆ ಸಚಿವಾಲಯವು ನವೆಂಬರ್ 17 ರಂದು ಈ ಒಟಿಪಿ ಆಧಾರಿತ ತತ್ಕಾಲ್ ಟಿಕೆಟಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಿತು, ಆಯ್ದ ರೈಲುಗಳನ್ನು ಪೈಲಟ್ ಯೋಜನೆಯಾಗಿ ಪ್ರಾರಂಭಿಸಿತು. ಆರಂಭದಲ್ಲಿ ಕಡಿಮೆ ಸಂಖ್ಯೆಯ ರೈಲುಗಳಿಗೆ ಪರಿಚಯಿಸಲಾಯಿತು, ಸಕಾರಾತ್ಮಕ ಪ್ರತಿಕ್ರಿಯೆಗಳು ಮತ್ತು ಕಾರ್ಯಾಚರಣೆಯ ಕಾರ್ಯಸಾಧ್ಯತೆಯ ಆಧಾರದ ಮೇಲೆ ಈ ವ್ಯವಸ್ಥೆಯನ್ನು ಶೀಘ್ರದಲ್ಲೇ 52 ರೈಲುಗಳಿಗೆ ವಿಸ್ತರಿಸಲಾಯಿತು. ರಾಷ್ಟ್ರವ್ಯಾಪಿ ರೋಲ್ ಔಟ್ ಸನ್ನಿಹಿತವಾಗಿದೆ ಇತ್ತೀಚಿನ ಅಧಿಕೃತ ಹೇಳಿಕೆಯ ಪ್ರಕಾರ, ಮುಂದಿನ ದಿನಗಳಲ್ಲಿ ಉಳಿದ ರೈಲುಗಳಿಗೆ ಎಲ್ಲಾ ಮೀಸಲಾತಿ ಕೌಂಟರ್ಗಳಲ್ಲಿ ಒಟಿಪಿ…

Read More

ರೈತ ವಿಜ್ಞಾನಿಯಾದಾಗ ಮತ್ತು ಉದ್ಯಮಿಯಾದಾಗ ಮಾತ್ರ ಲಾಭ ಗಳಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ರೈತರು ಹೊಸ ಬೆಳೆಗಳ ಬಗ್ಗೆ ತಿಳಿದುಕೊಂಡು ವೈಜ್ಞಾನಿಕವಾಗಿ ಬೆಳೆ ಬೆಳೆದು ಲಾಭ ಪಡೆಯಬೇಕು ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕರು ಮತ್ತು ಕುಲಸಚಿವರಾದ ಡಾ.ಬಿ. ಹೇಮ್ಲಾನಾಯ್ಕ ನುಡಿದರು.  ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಅಡಿಕೆ ಸಂಶೋಧನಾ ಕೇಂದ್ರ, ಶಿವಮೊಗ್ಗ, ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ದಿ ಮಂಡಳಿ, ಹುಬ್ಬಳ್ಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಇಂಡಿಯನ್ ಸೊಸೈಟಿ ಆಫ್ ಸ್ಪೈಸಸ್, ಕ್ಯಾಲಿಕಟ್ ಮತ್ತು ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಳ್ಳಿಕೆರೆ ಇವರ ಸಹಯೋಗದಲ್ಲಿ ‘ಅಡಿಕೆಯಲ್ಲಿ ಮಿಶ್ರಬೆಳೆಯಾಗಿ ಜಾಯಿಕಾಯಿ’ ಕುರಿತು ನವುಲೆಯ ಕೃಷಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಕೃಷಿ ಹೊಟ್ಟೆ ತುಂಬಾ ಆಹಾರ ನೀಡಲು ಮಾತ್ರ ಸಾಧ್ಯ. ಕೇವಲ ಕೃಷಿ…

Read More

ಕೊಪ್ಪಳ : ಶ್ರೀ ಆಂಜನೇಯ ಸ್ವಾಮಿ ಜನ್ಮಸ್ಥಳ ಅಂಜನಾದ್ರಿಯಲ್ಲಿ ಡಿಸೆಂಬರ್ 2 ಮತ್ತು 3 ರಂದು ಎರಡು ದಿನಗಳ ಕಾಲ ನಡೆದ ಹನುಮಮಾಲಾ ಕಾರ್ಯಕ್ರಮಕ್ಕೆ ಬುಧವಾರ ತೆರೆಬಿತ್ತು. ಸಹಸ್ರಾರು ಹನುಮ ಮಾಲಾಧಾರಿಗಳು ಅಂಜನಾದ್ರಿಯಲ್ಲಿ ಹನುಮಮಾಲೆಯನ್ನು ವಿಸರ್ಜನೆ ಮಾಡಿದರು. ಮಂಗಳವಾರದಿಂದಲೇ ಆರಂಭವಾದ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮಕ್ಕೆ ಅಂಜನಾದ್ರಿಯಲ್ಲಿ ಮಂಗಳವಾರ ರಾತ್ರಿ ಮತ್ತು ಬುಧವಾರ ಬೆಳಗಿನ ಜಾವ ಹೆಚ್ಚಿನ ಸಂಖ್ಯೆಯಲ್ಲಿ ಆಂಜನೇಯ ಸ್ವಾಮಿಯ ಭಕ್ತರು ಮತ್ತು ಹನುಮಮಲಾಧಾರಿಗಳು ಆಗಮಿಸಿದ್ದರು. ಬೆಳಂ ಬೆಳಿಗ್ಗೆ ಎಲ್ಲರೂ ನೀರಿನಲ್ಲಿ ಮಿಂದೆದ್ದು `ಶ್ರೀ ರಾಮ ಜಯರಾಂ’ `ಪವನಸುತ ಆಂಜನೇಯ ಜಯ’ ಹೀಗೆ ಹಲವು ಜಯಘೋಷಗಳನ್ನು ಕೂಗುತ್ತಾ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಿ, ಹನುಮ ನಾಮವನ್ನು ಜಪಿಸುತ್ತಾ ಸರತಿ ಸಾಲಿನಲ್ಲಿ ನಿಂತು ಆಂಜನೇಯ ಸ್ವಾಮಿಯ ದರ್ಶನ ಪಡೆಯುತ್ತಿದ್ದದು ಕಂಡು ಬಂತು. ಕೊಪ್ಪಳ ಜಿಲ್ಲೆ ಮಾತ್ರವಲ್ಲದೆ ಅಕ್ಕ-ಪಕ್ಕದ ಜಿಲ್ಲೆ ಮತ್ತು ಇತರೆ ರಾಜ್ಯಗಳಿಂದಲು ಹನುಮಮಾಲಾಧಾರಿಗಳು ಆಗಮಿಸಿದ್ದರು. ರಸ್ತೆಯಗಳಲ್ಲಿ ಕಾಲ್ನಡಿಗೆ ಮುಖಾಂತರ ತಂಡೋಪ ತಂಡವಾಗಿ ಮತ್ತು ದೂರದ ಊರಿನಿಂದ ಬರುವ ಜನರು ವಾಹನಗಳಲ್ಲಿ ಬರುತ್ತಿರುವುದು ಕಂಡು…

Read More

ಬೆಂಗಳೂರು : ನೋಂದಣಿ ಮತ್ತು ನೋಂದಣಿಯೇತರ ಛಾಪಾ ಕಾಗದ ವಹಿವಾಟುಗಳಿಗೆ ಬಳಸುವ ‘ಇ– ಸ್ಟ್ಯಾಂಪ್‌’ ಬದಲಿಗೆ ‘ಡಿಜಿಟಲ್‌ ಇ– ಸ್ಟ್ಯಾಂಪ್‌’ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ನೋಂದಣಿ ಮತ್ತು ನೋಂದಣಿಯೇತರ ಛಾಪಾ ಕಾಗದ ವಹಿವಾಟುಗಳಿಗೆ ಬಳಸುವ ‘ಇ– ಸ್ಟ್ಯಾಂಪ್‌’ ಬದಲಿಗೆ ‘ಡಿಜಿಟಲ್‌ ಇ– ಸ್ಟ್ಯಾಂಪ್‌’ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಸ್ಟ್ಯಾಂಪ್ ವಂಚನೆ ಮತ್ತು ಭದ್ರತಾ ಲೋಪವನ್ನು ಸಂಪೂರ್ಣ ತೊಡೆದು ಹಾಕಲು ಈ ಹೊಸ ವ್ಯವಸ್ಥೆ ಪರಿಚಯಿಸಲಾಗಿದ್ದು, ಮುಂದಿನ ದಿನಗಳಲ್ಲಿ ‘ಡಿಜಿಟಲ್ ಇ-ಸ್ಟ್ಯಾಂಪ್‌’ ಕಡ್ಡಾಯಗೊಳಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ನಾಗರಿಕರು ಮಧ್ಯವರ್ತಿಗಳ ನೆರವಿಲ್ಲದೆ, ಮನೆಯಲ್ಲಿಯೇ ಕುಳಿತು ‘ಡಿಜಿಟಲ್‌ ಇ– ಸ್ಟ್ಯಾಂಪ್‌’ ತಯಾರಿಸಿಕೊಳ್ಳಬಹುದು. ಇಂಟರ್‌ನೆಟ್‌ ಇದ್ದರೆ 24×7 ಜಗತ್ತಿನಲ್ಲಿ ಎಲ್ಲಿಯೇ ಕುಳಿತು ಈ ಸೇವೆಯನ್ನು ಪಡೆಯಬಹುದು. ಎಲ್ಲ ಸೇವೆಗಳು ಸಂಪೂರ್ಣ ಡಿಜಿಟಲ್ ಆಗಿರಲಿದೆ. ಸುರಕ್ಷಿತ ಮತ್ತು ವೇಗವಾಗಿ ಆನ್‌ಲೈನ್‌ ಪಾವತಿ ಮಾಡಲು ಕೂಡಾ ಅವಕಾಶವಿದೆ ಎಂದು ಮಾಹಿತಿ ನೀಡಿದ್ದಾರೆ. ಡಿಜಿಟಲ್ ಸ್ಟ್ಯಾಂಪ್ ಪಡೆಯುವುದು ಹೇಗೆ? https://kaveri.karnataka.gov.in/landing-page ผล. ಒ೦ದೇ ಬಾರಿ…

Read More

ಕರ್ನಾಟಕ ಅರ್ಹತಾ ಪರೀಕ್ಷೆ 2025ರ ಅರ್ಹತಾ ಪರೀಕ್ಷೆಯು ಡಿಸೆಂಬರ್ 07, 2025 ರಂದು ನಡೆಯಲಿದ್ದು, ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯುತ್ತದೆ ಬೆಳಿಗ್ಗೆ 9. 30 ರಿಂದ 12 ಗಂಟೆವರೆಗೆ ಮತ್ತು ಮದ್ಯಾಹ್ನದ 2 ರಿಂದ 4.30 ರ ವರೆಗೆ ಪರೀಕ್ಷೆಯು ನಡೆಯುತ್ತದೆ. ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಶಿಕ್ಷಕರ ಅರ್ಹತಾ ಪರೀಕ್ಷೆಯು ಉದ್ಯೋಗ ಪಡೆಯುದಕ್ಕಾಗಿ ಅರ್ಹತಾ ಪರೀಕ್ಷೆಯಾಗಿದೆ. ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಯಾವುದೇ ರೀತಿಯ ನಕಲು ಹಾಗೂ ಮೊಬೈಲ್, ಬ್ಲೂಟೂತ್, ಸ್ಮಾರ್ಟ್ ವಾಚ್ ಸೇರಿದಂತೆ ಅತ್ಯಾಧುನಿಕ ತಾಂತ್ರಿಕ ಸಾಧನ ಸಲಕರಣೆಗಳನ್ನು ಪರೀಕ್ಷಾ ಕೊಠಡಿಗೆ ತರದಂತೆ ಮತ್ತು ಬಳಸದಂತೆ ಮುಂಜಾಗೃತೆ ವಹಿಸಬೇಕೆಂದು ತಿಳಿಸಲಾಗಿದೆ. ಪರೀಕ್ಷೆಗಾಗಿ ಸೂಕ್ತ ಭದ್ರಯೆ ಇರುವಂತೆ ಹಾಗೂ ನಿಗಧಿತ ಅವಧಿಗೆ ಪರೀಕ್ಷೆಗಳನ್ನು ಆರಂಭಿಸಿ, ನಿಗಧಿತ ಸಮಯಕ್ಕೆ ಮುಕ್ತಾಯಗೊಳಿಸಬೇಕು. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಗೊಂದಲ, ಒತ್ತಡಗಳಾಗದಂತೆ ಪರೀಕ್ಷಾ ಪೂರ್ವದಲ್ಲಿಯೆ ಪರೀಕ್ಷಾ ನಿಯಮಗಳನ್ನು ತಿಳಿಸಬೇಕು. ಪರೀಕ್ಷೆಗಳು ಸುಸೂತ್ರವಾಗಿ ಮತ್ತು ಶಾಂತಿಯುತವಾಗಿ ಜರುಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಲಾಗಿದೆ. ಟಿಇಟಿ ಪರೀಕ್ಷೆಗೆ ಹಾಜರಾಗುವಂತ…

Read More

ಬೆಂಗಳೂರು : ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಪೌಷ್ಟಿಕ ಆಹಾರದ ಇಂದಿರಾ ಕಿಟ್ ಪಡೆಯಲು ಫಲಾನುಭವಿಗಳಿಗೆ ಕ್ಯೂಆರ್ ಕೋಡ್ ಸ್ಕ್ಯಾನ್ ಕಡ್ಡಾಯ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದ್ದು, ರಾಜ್ಯದಲ್ಲಿ ಇಂದಿರಾ ಕಿಟ್ ಪಡೆಯಲು ಪ್ರತಿ ನ್ಯಾಯಬೆಲೆ ಅಂಗಡಿಯಲ್ಲಿ ಕ್ಯುಆರ್ ಸ್ಕ್ಯಾನ್ ಮಾಡಬಹುದಾದ ತಂತ್ರಾಂಶ ಅಳವಡಿಸಿ, ಸ್ಕ್ಯಾನ್ ಮಾಡಿದ ನಂತರವೇ ‘ಇಂದಿರಾ ಫುಡ್ ಕಿಟ್ ವಿತರಿಸಲು ಸೂಚಿಸಲಾಗಿದೆ. ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲು ಫಲಾನುಭವಿಗಳ ಪುನಶ್ವೇತನ, ಸಮಗ್ರ ಪೌಷ್ಟಿಕ ಆಹಾರ ಪೂರೈಕೆ ಉಪಕ್ರಮವಾಗಿ ತೊಗರಿಬೇಳೆ, ಖಾದ್ಯ ಎಣ್ಣೆ, ಸಕ್ಕರೆ, ಉಪ್ಪು ಒಳಗೊಂಡ ‘ಇಂದಿರಾ ಕಿಟ್’ ನೀಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದಿರಾ ಕಿಟ್ನಲ್ಲಿ ಏನೆಲ್ಲಾ ಸಾಮಗ್ರಿ ಸಿಗಲಿವೆ? ಈ ಯೋಜನೆಯಡಿ ಕುಟುಂಬದ ಸದಸ್ಯರ ಸಂಖ್ಯೆಗೆ ಅನುಗುಣವಾಗಿ ಐದು ಕೆಜಿ ಅಕ್ಕಿ ಬದಲಾಗಿ ತೊಗರಿ ಬೇಳೆ, ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು ನೀಡಲಾಗುವುದು. ಪ್ರತಿ ತಿಂಗಳು ಪ್ರಸ್ತುತ 1,25,08,262…

Read More