Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ಇರಾನ್-ಅಮೆರಿಕ ಸಂಘರ್ಷ ಹಾಗೂ ಹಾರ್ಮುಜ್ ಜಲಸಂಧಿ ಮುಚ್ಚಲ್ಪಟ್ಟ ಹಿನ್ನೆಲೆಯಲ್ಲಿ ಜಾಗತಿಕವಾಗಿ ಎಲ್ಪಿಜಿ (LPG) ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಭಾರತದ ಮೇಲೂ ಇದು ಭಾರಿ ಪ್ರಭಾವ ಬೀರಿದ್ದು, ದೇಶದಲ್ಲಿ ಎಲ್ಪಿಜಿ ಬಳಕೆ ಮತ್ತು ಸಬ್ಸಿಡಿಯನ್ನು ಮಿತಿಗೊಳಿಸಲು ಕೇಂದ್ರ ಸರ್ಕಾರ ಈಗ ಒಂದು ಅತ್ಯಂತ ಪ್ರಮುಖ ಹಾಗೂ ಕಠಿಣ ನಿರ್ಧಾರವನ್ನು ಕೈಗೊಂಡಿದೆ. ದೇಶಾದ್ಯಂತ ಪೈಪ್ಲೈನ್ ಮೂಲಕ ಸರಬರಾಜು ಆಗುವ ನೈಸರ್ಗಿಕ ಅನಿಲ (PNG) ಸಂಪರ್ಕವನ್ನು ವಿಸ್ತರಿಸಲಾಗುತ್ತಿದ್ದರೂ, ಎಲ್ಪಿಜಿ ಸಿಲಿಂಡರ್ಗಳ ಬಳಕೆ ನಿರೀಕ್ಷಿತ ಪ್ರಮಾಣದಲ್ಲಿ ಕಡಿಮೆಯಾಗಿಲ್ಲ. ಮಾರ್ಚ್ ವೇಳೆಗೆ ಬರೋಬ್ಬರಿ 6.5 ಲಕ್ಷ ಹೊಸ ಪಿಎನ್ಜಿ ಸಂಪರ್ಕಗಳನ್ನು ನೀಡಲಾಗಿದ್ದರೂ, ಜನರು ಹಳೆಯ ಎಲ್ಪಿಜಿ ಕನೆಕ್ಷನ್ಗಳನ್ನು ಬಿಟ್ಟುಕೊಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ‘ಡ್ಯುಯಲ್ ಗ್ಯಾಸ್ ಕನೆಕ್ಷನ್’ (ಪಿಎನ್ಜಿ ಮತ್ತು ಎಲ್ಪಿಜಿ ಎರಡನ್ನೂ ಹೊಂದುವುದು) ನಿಯಮವನ್ನು ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಜೂನ್ 1 ರಿಂದ 30 ದಿನಗಳ ಗಡುವು! ಪಿಎನ್ಜಿ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಜೂನ್ 1, 2026 ರಿಂದ ಅನ್ವಯವಾಗುವಂತೆ ಸರ್ಕಾರ 30 ದಿನಗಳ ಗಡುವು…
ನವದೆಹಲಿ: ದೆಹಲಿಯ ಮಾಳವೀಯ ನಗರದ ರೆಸ್ಟೋರೆಂಟ್ವೊಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು 11 ಜನರು ಗಾಯಗೊಂಡಿದ್ದಾರೆ. ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿಯ ‘ಲೆಮನ್ ಗ್ರೀನ್ ರೆಸ್ಟೋರೆಂಟ್’ನಲ್ಲಿ (Lemon Green Restaurant) ಈ ದುರಂತ ಸಂಭವಿಸಿದೆ. ಬುಧವಾರ ಮುಂಜಾನೆ ಸುಮಾರು 8.50ರ ಸುಮಾರಿಗೆ ರೆಸ್ಟೋರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬೆಳಗಿನ ಉಪಾಹಾರದ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ, ಘಟನೆಯ ತೀವ್ರತೆ ಹೆಚ್ಚಾಗಿದೆ ಎನ್ನಲಾಗಿದೆ. ಮುಂಜಾನೆ ಸುಮಾರು 9.45 ಕ್ಕೆ ದೆಹಲಿ ಅಗ್ನಿಶಾಮಕ ಸೇವೆಗೆ (DFS) ಕರೆ ಬಂದ ತಕ್ಷಣ, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ನೆಹರೂ ಪ್ಲೇಸ್ ಅಗ್ನಿಶಾಮಕ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಭಾಗೀಯ ಅಧಿಕಾರಿ (DO) ರವೀಂದರ್ ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ರೆಸ್ಟೋರೆಂಟ್ನ ಬೇಸ್ಮೆಂಟ್ನಲ್ಲಿ (ನೆಲಮನೆ) ಸಿಲುಕಿದ್ದ ಮೂವರನ್ನು ಸುರಕ್ಷಿತವಾಗಿ ರಕ್ಷಿಸಿ, ಕ್ಯಾಟ್ಸ್ (CATS) ಆಂಬ್ಯುಲೆನ್ಸ್ ಮೂಲಕ…
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ಇಂದು ಬೆಳಗ್ಗೆ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಡಾಲರ್ಸ್ ಕಾಲೋನಿಯಲ್ಲಿರುವ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ತೆರಳಿದ ಡಿ.ಕೆ. ಶಿವಕುಮಾರ್, ಆಹ್ವಾನ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆತ್ಮೀಯವಾಗಿ ಆಮಂತ್ರಿಸಿದರು. ಇದೀಗ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮನೆಗೆ ಭೇಟಿ ನೀಡಿ ಅವರನ್ನೂ ಆಹ್ವಾನಿಸಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದಿನ ಮಹತ್ವದ ವಿದ್ಯಮಾನವೊಂದರಲ್ಲಿ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುವಂತೆ ಸಿದ್ದರಾಮಯ್ಯ ಅವರಿಗೆ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ಇಂದು ಬೆಳಗ್ಗೆ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಗೆ ತೆರಳಿದ ಡಿ.ಕೆ. ಶಿವಕುಮಾರ್, ಆಹ್ವಾನ ಪತ್ರಿಕೆ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆತ್ಮೀಯವಾಗಿ ಆಮಂತ್ರಿಸಿದರು. ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ.ಸಿದ್ದರಾಮಯ್ಯ ನಿವಾಸ ‘ಕಾವೇರಿ’ಗೆ ತೆರಳಿ ಆಹ್ವಾನ ನೀಡಿದ ಡಿ.ಕೆ.ಶಿ. ಭೇಟಿಯ ವೇಳೆ ಡಿ.ಕೆ. ಶಿವಕುಮಾರ್ ಅವರಿಗೆ ಡಾ. ಜಿ. ಪರಮೇಶ್ವರ್ ಸಾಥ್ ನೀಡಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸುವ ಮತ್ತೊಂದು ಮಹತ್ವದ ವಿದ್ಯಮಾನ ಜರುಗಿದ್ದು,ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಸಚಿವ ಸ್ಥಾನ ಫಿಕ್ಸ್ ಆದ ಹಿನ್ನೆಲೆಯಲ್ಲಿ ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾದ ತಕ್ಷಣವೇ ಖಾದರ್ ಅವರು ತಮ್ಮ ಸ್ಪೀಕರ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ವರದಿಗಳ ಪ್ರಕಾರ, ಯು.ಟಿ. ಖಾದರ್ ಅವರು ಇಂದು ವಿಧಾನಸಭೆಯ ಉಪಸಭಾಪತಿಗಳಿಗೆ (ಡೆಪ್ಯುಟಿ ಸ್ಪೀಕರ್) ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಸಿಎಂ ಪ್ರಮಾಣವಚನ ಬೆನ್ನಲ್ಲೇ ಸಂಪುಟ ವಿಸ್ತರಣೆ ಕಸರತ್ತು ಚುರುಕಾಗಿದ್ದು, ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಸುಮಾರು 12 ರಿಂದ 13 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹಿರಿಯ ನಾಯಕ ಯು.ಟಿ. ಖಾದರ್ ಅವರಿಗೆ ಸಚಿವ ಫಿಕ್ಸ್ ಎನ್ನಲಾಗುತ್ತಿದ್ದು,…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಸಚಿವ ಸಂಪುಟ ಸೇರಲಿರುವ ನೂತನ ಸಚಿವರ ಮೊದಲ ಅಧಿಕೃತ ಪಟ್ಟಿ ಪ್ರಕಟಗೊಂಡಿದೆ. ಕಾಂಗ್ರೆಸ್ ಹೈಕಮಾಂಡ್ ಸುದೀರ್ಘ ಚರ್ಚೆಯ ಬಳಿಕ ಅಂತಿಮಗೊಳಿಸಿರುವ ಈ ಪಟ್ಟಿಯಲ್ಲಿ ಹಿರಿಯ ಮತ್ತು ಅನುಭವಿ ನಾಯಕರಿಗೆ ಮೊದಲ ಆದ್ಯತೆ ನೀಡಲಾಗಿದೆ. ನೂತನ ಸಚಿವರ ಅಧಿಕೃತ ಪಟ್ಟಿ ಇಲ್ಲಿದೆ: ಡಾ. ಜಿ. ಪರಮೇಶ್ವರ್ ಸತೀಶ್ ಜಾರಕಿಹೊಳಿ ಕೆ. ಹೆಚ್. ಮುನಿಯಪ್ಪ ಪ್ರಿಯಾಂಕ್ ಖರ್ಗೆ ಕೃಷ್ಣಬೈರೇಗೌಡ ಯು. ಟಿ. ಖಾದರ್ ಡಾ. ಯತೀಂದ್ರ ಸಿದ್ದರಾಮಯ್ಯ ಎಂ. ಬಿ. ಪಾಟೀಲ್ ಕೆ. ಜೆ. ಜಾರ್ಜ್ ಆರ್. ರಾಮಲಿಂಗಾ ರೆಡ್ಡಿ
BREAKING : ಡಿಕೆಶಿ ಮನೆಗೆ ಡಾ.ಜಿ.ಪರಮೇಶ್ವರ್ ಭೇಟಿ : ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಹೂಗುಚ್ಛ ನೀಡಿ ಶುಭ ಹಾರೈಕೆ.!
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಂಪೂರ್ಣವಾಗಿ ಸಜ್ಜಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಹಿರಿಯ ನಾಯಕ ಜಿ. ಪರಮೇಶ್ವರ್ ಅವರು ಭೇಟಿಯಾಗಿ ಅಭಿನಂದಿಸಿದ್ದಾರೆ. ಬೆಂಗಳೂರಿನಲ್ಲಿರುವ ಶಿವಕುಮಾರ್ ಅವರ ನಿವಾಸಕ್ಕೆ ಆಗಮಿಸಿದ ಪರಮೇಶ್ವರ್, ನಿಯೋಜಿತ ಮುಖ್ಯಮಂತ್ರಿಗಳಿಗೆ ಹೂಗುಚ್ಛ ನೀಡಿ ಶುಭ ಹಾರೈಸಿದರು. ಕ್ಯಾಬಿನೆಟ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ನಡೆದ ಈ ಭೇಟಿ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಇಂದು ಸಂಜೆ ಲೋಕಭವನದಲ್ಲಿ ಅದ್ಧೂರಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಡಿ.ಕೆ. ಶಿವಕುಮಾರ್ ಅವರೊಂದಿಗೆ ಅವರ ನೂತನ ಸಚಿವ ಸಂಪುಟದ ಸದಸ್ಯರು ಕೂಡ ಅಧಿಕಾರ ಸ್ವೀಕರಿಸಲಿದ್ದಾರೆ. ಸಮಾರಂಭದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಲೋಕಭವನದ ಸುತ್ತಮುತ್ತ ಭಾರಿ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ. ಪ್ರಮುಖ ನಾಯಕರು, ಗಣ್ಯರು ಹಾಗೂ…
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು (ಬುಧವಾರ) ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ. ಸಂಜೆ 4.05ಕ್ಕೆ ಲೋಕಸೌಧದ ಭವ್ಯ ಗಾಜಿನಮನೆಯಲ್ಲಿ ಈ ಅದ್ಧೂರಿ ಪ್ರಮಾಣ ವಚನ ಸಮಾರಂಭ ನೆರವೇರಲಿದ್ದು, ಇಡೀ ಸಿಲಿಕಾನ್ ಸಿಟಿ ಮದುವಣಗಿತ್ತಿಯಂತೆ ಕಂಗೊಳಿಸುತ್ತಿದೆ. ಕನಕಪುರ ಬಂಡೆಯ ಪಟ್ಟಾಭಿಷೇಕವನ್ನು ಕಣ್ತುಂಬಿಕೊಳ್ಳಲು ಇಡೀ ರಾಜ್ಯವೇ ಚಾತಕ ಪಕ್ಷಿಯಂತೆ ಕಾಯುತ್ತಿದೆ. ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ಧೀಮಂತ ಸಂಘಟನಾ ಚತುರ ಎಂದು ಗುರುತಿಸಿಕೊಂಡಿರುವ ದೊಡ್ಡಾಲಹಳ್ಳಿ ಕೆಂಪೇಗೌಡ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದು ಒಂದು ಸುದೀರ್ಘ ರಾಜಕೀಯ ಹೋರಾಟದ ಫಲಶ್ರುತಿಯಾಗಿದೆ. ಕನಕಪುರದ ಬಂಡೆ ಎಂದೇ ಖ್ಯಾತರಾಗಿರುವ ಡಿ ಕೆ ಶಿವಕುಮಾರ್ ಅವರು ಸಾಮಾನ್ಯ ಮಧ್ಯಮ ವರ್ಗದ ಕೃಷಿ ಹಿನ್ನೆಲೆಯಿಂದ ಬಂದು ಇಂದು ರಾಜ್ಯದ ಅತ್ಯುನ್ನತ ಆಡಳಿತ ಚುಕ್ಕಾಣಿ ಹಿಡಿಯುವ ಹಂತಕ್ಕೆ ತಲುಪಿದ ಹಾದಿ ರೋಚಕತೆಯಿಂದ ಕೂಡಿದೆ. ಒಕ್ಕಲಿಗ ಸಮುದಾಯದಿಂದ ರಾಜ್ಯದ ಮುಖ್ಯಮಂತ್ರಿ ಗದ್ದುಗೆ ಏರುತ್ತಿರುವ ಎಂಟನೇ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಿರುವ ಅವರ ಈ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಸಂಭವಿಸಿರುವ ಸೂಚನೆಗಳು ದೊರೆತಿವೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ನೇಮಕವಾಗಿದ್ದಾರೆ. ಹಾಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ ವೇಗ ಪಡೆದುಕೊಂಡಿತ್ತು. ಕಳೆದ ಕೆಲವು ದಿನಗಳಿಂದ ಹಲವು ನಾಯಕರ ಹೆಸರುಗಳು ಚರ್ಚೆಯಲ್ಲಿದ್ದರೂ, ಕೊನೆಗೆ ಹೈಕಮಾಂಡ್ ಬಿ.ಕೆ. ಹರಿಪ್ರಸಾದ್ ಪರ ಒಲವು ತೋರಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ಕೇಳಿಬರುತ್ತಿದೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಕುರಿತಾಗಿ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರಕ್ಕೆ ಬಂದಿದ್ದು, ಬಿ.ಕೆ. ಹರಿಪ್ರಸಾದ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸುವ ಪ್ರಕ್ರಿಯೆ ಶೀಘ್ರದಲ್ಲೇ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಮುಂದಿನ ಕೆಲ ಗಂಟೆಗಳು ಅಥವಾ ದಿನಗಳಲ್ಲಿ ಈ ಕುರಿತು ಸ್ಪಷ್ಟ ಆದೇಶ ಹೊರಬೀಳುವ ನಿರೀಕ್ಷೆ ಇದೆ.
BREAKING : ಇಂದು ಕರ್ನಾಟಕದ 25ನೇ `ಮುಖ್ಯಮಂತ್ರಿ’ ಆಗಿ ಡಿಕೆಶಿ ಪ್ರಮಾಣವಚನ : ಕಾರ್ಯಕ್ರಮದ ಆಹ್ವಾನ ಪತ್ರಿಕೆ ವೈರಲ್.!
ಬೆಂಗಳೂರು: ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ 4:05 ಕ್ಕೆ ಸರಿಯಾಗಿ ಬೆಂಗಳೂರಿನ ಲೋಕಭವನದ ಗ್ಲಾಸ್ ಹೌಸ್ನಲ್ಲಿ (ರಾಜಭವನ) ಈ ಐತಿಹಾಸಿಕ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಇಲ್ಲಿದೆ. ಕಾರ್ಯಕ್ರಮದ ಅಧಿಕೃತ ಆಮಂತ್ರಣ ಪತ್ರಿಕೆಯ ಪ್ರಕಾರ, ನಿಯೋಜಿತ ಮುಖ್ಯಮಂತ್ರಿಗಳಿಗೆ ರಾಜ್ಯಪಾಲರು ‘ಅಧಿಕಾರ ಮತ್ತು ಗೌಪ್ಯತೆಯ’ ಪ್ರಮಾಣ ವಚನ ಬೋಧಿಸಲಿದ್ದಾರೆ. ರಾಜ್ಯ ರಾಜಕಾರಣದ ಪ್ರಮುಖ ಗಣ್ಯರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಹಿತೈಷಿಗಳು ಈ ಅದ್ಧೂರಿ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಇದಕ್ಕಾಗಿ ಲೋಕಭವನದ ಗ್ಲಾಸ್ ಹೌಸ್ನಲ್ಲಿ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಅಚ್ಚುಕಟ್ಟಾಗಿ ಮಾಡಿಕೊಳ್ಳಲಾಗಿದೆ. https://twitter.com/ANI/status/2062036024092729390?s=20














