Subscribe to Updates
Get the latest creative news from FooBar about art, design and business.
Author: kannadanewsnow57
ಬೆಳಗಾವಿ : ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಅವರ ಉತ್ತರ. ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆಯ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಜಾಗೃತದಳ (ವಿಜಿಲೆನ್ಸ್) ಘಟಕವನ್ನು ಪೊಲೀಸ್ ಅಧೀಕ್ಷಕರು / ಪೊಲೀಸ್ ಉಪ ಅಧೀಕ್ಷಕರು ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರ ನೇತೃತ್ವದಲ್ಲಿ ರಚಿಸಲಾಗಿದೆ ಹಾಗೂ ಪ್ರತಿ ಜಿಲ್ಲಾಮಟ್ಟದಲ್ಲಿ ಜಾಗೃತದಳ ಪೊಲೀಸ್ ಠಾಣೆಗಳಲ್ಲಿ ಪೊಲೀಸ್ ಇನ್ಸ್ಪೆಕ್ಟರ್ / ಸಬ್ ಇನ್ಸ್ಪೆಕ್ಟರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಮತ್ತು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಾಗೃತದಳವು ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು. ಜಾಗೃತದಳವು ನಿಯಮಿತವಾಗಿ…
ಬೆಂಗಳೂರು : ಬಡತನ ರೇಖೆಗಿಂತ ಕೆಳಗಿರುವ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಮಾಸಾಶನ ನೀಡುವ “ಮನಸ್ವಿನಿ” ಯೋಜನೆಯನ್ನು ಅನುಷ್ಟಾನಗೊಳಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಆರ್ಥಿಕ ಭದ್ರತೆಯನ್ನೊದಗಿಸಿ, ಸಹಾಯ ನೀಡುವ ಉದ್ದೇಶದಿಂದ, ಬಡತನ ರೇಖೆಗಿಂತ ಕೆಳಗಿರುವ 40 ರಿಂದ 64 ವರ್ಷದೊಳಗಿರುವ ಅವಿವಾಹಿತ ಹಾಗೂ ವಿಚ್ಚೇದಿತ ‘ಮಹಿಳೆಯರಿಗೆ ರೂ.500ಗಳ ಮಾಸಾಶನ… ನೀಡಲು “ಮನಸ್ವಿನಿ” ಯೋಜನೆಯನ್ನು ಸರ್ಕಾರ 2013-14 ನೇ ಸಾಲಿನ ಅಯವ್ಯಯದಲ್ಲಿ ಘೋಷಿಸಿದೆ. 65ಕ್ಕಿಂತ ಹೆಚ್ಚು ವಯಸ್ಸಾದ ಅವಿವಾಹಿತ ಹಾಗೂ ವಿಚ್ಛೇದಿತ ಮಹಿಳೆಯರು ಇಂದಿರಾಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಯೋಜನೆಯಡಿ ಪ್ರಯೋಜನ ಪಡೆಯಬಹುದಾಗಿರುತ್ತದೆ. ಈ ಹಿನ್ನಲೆಯಲ್ಲಿ ಕೆಳಕಂಡ ಆದೇಶ. ಸರ್ಕಾರದ ಆದೇಶ ಸಂಖ್ಯೆ: ಆರ್ಡಿ 94 ಡಿಎಸ್ಪಿ 2013, ಬೆಂಗಳೂರು. 2:01/08/2013. ರಾಜ್ಯದಲ್ಲಿನ ಬಡತನ ರೇಖೆಗಿಂತ ಕೆಳಗಿರುವ 40 ರಿಂದ 64. ವರ್ಷದೊಳಗಿರುವ ಅವಿವಾಹಿತ ಹಾಗೂ ವಿಚ್ಚೇದಿತ ಮಹಿಳೆಯರಿಗೆ ಆರ್ಥಿಕ ಸಹಾಯವನ್ನು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಜೂಪಿಟರ್ ಟೆಕ್ನಾಲಜಿಸ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಬೆಂಗಳೂರಿನ ಆನೇಕಲ್ ನ ಜಿಗಣಿ ಕೈಗಾರಿಕಾ ಪ್ರದೇಶದ ಜೂಪಿಟರ್ ಟೆಕ್ನಾಲಜಿಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮುಂಜಾನೆ 4 ಗಂಟೆಗೆ ಅವಘಡ ಸಂಭವಿಸಿದ್ದು, ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.
ನೀವು ಖರೀದಿಸುವ ಬೆಲ್ಲವು ಬಣ್ಣಬಣ್ಣದ್ದಾಗಿದೆಯೇ? ಅಥವಾ ಆಕರ್ಷಕವಾದ ತಿಳಿ ಹಳದಿ ಬಣ್ಣದ್ದಾಗಿದೆಯೇ? ಬೆಲ್ಲದ ಬಣ್ಣ ವ್ಯತ್ಯಾಸದ ಹಿಂದಿನ ರಹಸ್ಯ ಮತ್ತು ಅದರ ತಯಾರಿಕೆಯಲ್ಲಿ ಬಳಸುವ ರಾಸಾಯನಿಕಗಳ ತಿಳಿಯಿರಿ ಪೋಷಕಾಂಶಗಳಿಂದ ತುಂಬಿರುವ ಮೂಲ ಬೆಲ್ಲವನ್ನು ಹೇಗೆ ಗುರುತಿಸುವುದು ಎಂದು ತಿಳಿದುಕೊಳ್ಳುವುದು ಆರೋಗ್ಯಕರ ಜೀವನಕ್ಕೆ ಬಹಳ ಮುಖ್ಯ. ಬಿಳಿ ಬೆಲ್ಲ: ಇದು ಆರೋಗ್ಯಕ್ಕೆ ಹಾನಿಕಾರಕವೇ? ನೋಡಲು ತುಂಬಾ ಆಕರ್ಷಕವಾಗಿರುವ ಬಿಳಿ ಅಥವಾ ತಿಳಿ ಹಳದಿ ಬೆಲ್ಲವನ್ನು ತಯಾರಿಸುವಾಗ ಹೆಚ್ಚಾಗಿ ರಾಸಾಯನಿಕಗಳನ್ನು ಬಳಸಲಾಗುತ್ತದೆ. ರಾಸಾಯನಿಕಗಳ ಬಳಕೆ: ಬೆಲ್ಲಕ್ಕೆ ಮಸುಕಾದ ಬಣ್ಣ ಮತ್ತು ಹೊಳಪನ್ನು ನೀಡಲು ಸೋಡಿಯಂ ಬೈಕಾರ್ಬನೇಟ್ ಮತ್ತು ಕ್ಯಾಲ್ಸಿಯಂ ಕಾರ್ಬೋನೇಟ್ನಂತಹ ರಾಸಾಯನಿಕಗಳನ್ನು ಸೇರಿಸಲಾಗುತ್ತದೆ. ಪರಿಣಾಮ: ಇದು ಬೆಲ್ಲದಲ್ಲಿರುವ ನೈಸರ್ಗಿಕ ಪೋಷಕಾಂಶಗಳನ್ನು ನಾಶಪಡಿಸುವುದಲ್ಲದೆ, ಈ ರಾಸಾಯನಿಕ ಅವಶೇಷಗಳು ದೇಹಕ್ಕೆ ಹಾನಿಕಾರಕವಾಗಬಹುದು. ಅದಕ್ಕಾಗಿಯೇ ಬಿಳಿ ಬೆಲ್ಲವನ್ನು ತಪ್ಪಿಸುವುದು ಒಳ್ಳೆಯದು. ಕೆಂಪು ಅಥವಾ ಗಾಢ ಬೆಲ್ಲ: ಮೂಲ ಗಾಢ ಕಂದು ಅಥವಾ ಕಪ್ಪು ಬಣ್ಣದ ಬೆಲ್ಲವನ್ನು ಮೂಲ ಮತ್ತು ಆರೋಗ್ಯಕರವೆಂದು ಪರಿಗಣಿಸಲಾಗುತ್ತದೆ. ತಯಾರಿಸುವ ವಿಧಾನ: ಯಾವುದೇ ರಾಸಾಯನಿಕಗಳಿಲ್ಲದೆ ನೈಸರ್ಗಿಕವಾಗಿ…
ಕೆಲವೊಮ್ಮೆ ಪೊಲೀಸ್ ಠಾಣೆಗಳಲ್ಲಿ ರಾಜಕೀಯ ಒತ್ತಡಕ್ಕೋ, ಇಲ್ಲವೇ ಮೇಲಾಧಿಕಾರಿಗಳ ಮೌಖಿಕ ಸೂಚನೆಗೋ ಮಣಿದು ಅಮಾಯಕರ ಮೇಲೆ ಎಫ್ಐಆರ್ ದಾಖಲಿಸುವ ಘಟನೆಗಳು ನಡೆಯುತ್ತವೆ. ಠಾಣಾಧಿಕಾರಿಗಳು (SHO) ತಮ್ಮ ಮನಸ್ಸಾಕ್ಷಿ ಮತ್ತು ಕಾನೂನು ಬದಿಗಿಟ್ಟು, ಕೇವಲ “ಹೇಳಿದ ಕೆಲಸ” ಮಾಡಲು ಹೋದಾಗ ಇಂತಹ ತಪ್ಪುಗಳಾಗುತ್ತವೆ. ನಿಮ್ಮ ಮೇಲೂ ಇಂತಹದೇ “ಸುಳ್ಳು ಕೇಸ್” ದಾಖಲಾಗಿದ್ದರೆ ಹೆದರಬೇಡಿ. ಮಾಹಿತಿ ಹಕ್ಕು ಕಾಯಿದೆ (RTI) ಅಡಿಯಲ್ಲಿ ಈ ಕೆಳಗಿನ ಕೇಳ್ವಿಗಳನ್ನು ಕೇಳಿ, ಪೊಲೀಸರ ನಿದ್ದೆ ಗೆಡಿಸಿ! ಕೇಳಬೇಕಾದ ಮಾಹಿತಿಗಳು ಇಲ್ಲಿವೆ: ೧. ನನ್ನ ಮೇಲೆ ಎಫ್ಐಆರ್ ದಾಖಲಿಸಲು ಮೇಲಾಧಿಕಾರಿಗಳು ಲಿಖಿತ ಇಲ್ಲವೇ ಬಾಯಿ ಮಾತಿನ (ಮೌಖಿಕ) ಮೂಲಕ ನಿರ್ದೇಶನ ನೀಡಿದ್ದರೆ, ಅದರ ವಿವರ ಮತ್ತು ದಾಖಲೆಗಳನ್ನು ಕೊಡಿ. ೨. ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಪ್ರಕರಣಗಳಲ್ಲಿ ಎಫ್ಐಆರ್ಗೂ ಮುನ್ನ “ಪ್ರಾಥಮಿಕ ಪರಿಶೀಲನೆ” (Preliminary Enquiry) ನಡೆಸಬೇಕು. ನನ್ನ ಪ್ರಕರಣದಲ್ಲಿ ಇದು ನಡೆದಿದ್ದರೆ ಅದರ ವರದಿ ಮತ್ತು ಟಿಪ್ಪಣಿ (Noting) ಕೊಡಿ. ೩. ಸದರಿ ಎಫ್ಐಆರ್ ದಾಖಲಾದ ದಿನಾಂಕ ಮತ್ತು…
ಬೆಳಗಾವಿ : ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳ ಹೆಸರಿನಲ್ಲಿ 10 ಲಕ್ಷ ರೂ. ಠೇವಣಿ ಇಡಬೇಕೆಂಬ ಪ್ರಸ್ತಾಪ ವಿಧಾನಪರಿಷತ್ ನಲ್ಲಿ ಕೇಳಿಬಂದಿದೆ. ರೈತರಿಗೆ, ಕೂಲಿ ಕಾರ್ಮಿಕರಿಗೆ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ. ಇಂತಹ ಯುವಕರನ್ನು ಮದುವೆಯಾಗುವ ಹೆಣ್ಣುಮಕ್ಕಳ ಹೆಸರಿನಲ್ಲಿ 10 ಲಕ್ಷ ರೂ. ಠೇವಣಿ ಇಡಬೇಕೆಂಬ ಪ್ರಸ್ತಾಪ ವಿಧಾನ ಪರಿಷತ್ನಲ್ಲಿ ಕೇಳಿಬಂದಿದ್ದು, ಇದಕ್ಕೆ ಪಕ್ಷಾತೀತವಾಗಿ ಸದಸ್ಯರು ಟೇಬಲ್ ತಟ್ಟಿ ಬೆಂಬಲ ವ್ಯಕ್ತಪಡಿಸಿದರು. ಕಾಂಗ್ರೆಸ್ ನ ಪುಟ್ಟಣ್ಣ, ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದರು. ರೈತರ ಮಕ್ಕಳು ಹಾಗೂ ಕೂಲಿ ಕಾರ್ಮಿಕರಿಗೆ ಮದುವೆಯಾಗಲು ಹೆಣ್ಣು ಮಕ್ಕಳು ಸಿಗುತ್ತಿಲ್ಲ. ವ್ಯವಸಾಯ ಮಾಡುವ ಗಂಡುಮಕ್ಕಳು ನಮಗಾಗಿ ಮಠ ಕಟ್ಟಿಕೊಡಿ ಎಂದು ಒತ್ತಾಯಿಸುತ್ತಿರುವುದನ್ನು, ಪವಿತ್ರ ಕ್ಷೇತ್ರಗಳಿಗೆ ಪಾದಯಾತ್ರೆ ಕೈಗೊಳ್ಳುತ್ತಿರುವುದನ್ನು ಕೇಳಿದ್ದೇವೆ. ಹಾಗಾಗಿ ಸರ್ಕಾರ ಮದುವೆ ಆಗದ ಕೃಷಿಕ ಯುವಕರಿಗೆ ಯೋಜನೆ ರೂಪಿಸಬೇಕು ಎಂದು ಹೇಳಿದರು. ರೈತರನ್ನು ಮದುವೆಯಾಗುವ ಹೆಣ್ಣುಮಕ್ಕಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ಕನಿಷ್ಠ 10 ಲಕ್ಷ ರೂ.ಗಳನ್ನು ಆಕೆ ಹೆಸರಿಗೆ ಬ್ಯಾಂಕ್ ಠೇವಣಿ ಇಟ್ಟು,ಭದ್ರತೆ ಒದಗಿಸಿ ಭರವಸೆ ಮೂಡಿಸಬೇಕೆಂದು…
ನವದೆಹಲಿ : ನೀವು ಪ್ರತಿದಿನ UPI ಬಳಸಿ ಪಾವತಿಗಳನ್ನು ಮಾಡುತ್ತಿದ್ದರೆ, ಈ ಸುದ್ದಿ ನಿಮಗೆ ವಿಶೇಷವಾಗಿದೆ. ಆನ್ಲೈನ್ ಪಾವತಿ ಬಳಕೆದಾರರಿಗಾಗಿ, Google ಭಾರತದಲ್ಲಿ Flex by Google Pay ಎಂಬ ಹೊಸ ಡಿಜಿಟಲ್ ಕ್ರೆಡಿಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿದೆ. ಇದು UPI ಯಂತೆಯೇ ಸರಳವಾಗಿದೆ ಆದರೆ ಕ್ರೆಡಿಟ್ ಕಾರ್ಡ್ನ ಅನುಕೂಲವನ್ನು ನೀಡುತ್ತದೆ. ಹೌದು, QR ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಅಥವಾ ಆನ್ಲೈನ್ ಪಾವತಿಗಳನ್ನು ಮಾಡುವ ಮೂಲಕ, ಬಳಕೆದಾರರು ಭೌತಿಕ ಕಾರ್ಡ್ ಇಲ್ಲದೆಯೇ ಕ್ರೆಡಿಟ್ ಪಾವತಿಗಳನ್ನು ಮಾಡಬಹುದು. ಆಕ್ಸಿಸ್ ಬ್ಯಾಂಕ್ನ ಸಹಯೋಗದೊಂದಿಗೆ ಪರಿಚಯಿಸಲಾದ ಈ ಹೊಸ ವೈಶಿಷ್ಟ್ಯವು ತ್ವರಿತ ಪಾವತಿಗಳನ್ನು ಸುಗಮಗೊಳಿಸುವುದಲ್ಲದೆ ಪ್ರತಿ ಪಾವತಿಯಲ್ಲೂ ಪ್ರತಿಫಲಗಳನ್ನು ನೀಡುತ್ತದೆ. ಇದು Google ನ ಡಿಜಿಟಲ್ ಕ್ರೆಡಿಟ್ ಉತ್ಪನ್ನವಾಗಿದ್ದು, ಆಕ್ಸಿಸ್ ಬ್ಯಾಂಕ್ನ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗಿದೆ. ಈ Flex ಕ್ರೆಡಿಟ್ ಕಾರ್ಡ್ನ ದೊಡ್ಡ ಹೈಲೈಟ್ ಎಂದರೆ ಇದು ಸಂಪೂರ್ಣವಾಗಿ ಡಿಜಿಟಲ್ ಮತ್ತು Google Pay ಅಪ್ಲಿಕೇಶನ್ನೊಂದಿಗೆ ಸಂಯೋಜಿಸಲ್ಪಟ್ಟಿದೆ. UPI ಮತ್ತು ಕ್ರೆಡಿಟ್ ಕಾರ್ಡ್ಗಳ…
ನವದೆಹಲಿ: ವಿಚ್ಛೇದನ ಪ್ರಕ್ರಿಯೆಗಳ ಮೇಲೆ ಗಮನಾರ್ಹ ಪರಿಣಾಮ ಬೀರುವ ತೀರ್ಪಿನಲ್ಲಿ, ದೆಹಲಿ ಹೈಕೋರ್ಟ್ ಪರಸ್ಪರ ಒಪ್ಪಿಗೆಯ ಮೇಲೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಮೊದಲು ಒಂದು ವರ್ಷದ ಅವಧಿಗೆ ಪ್ರತ್ಯೇಕವಾಗಿ ವಾಸಿಸುವ ಶಾಸನಬದ್ಧ ಅವಶ್ಯಕತೆ ಕಡ್ಡಾಯವಲ್ಲ ಮತ್ತು ಸೂಕ್ತ ಪ್ರಕರಣಗಳಲ್ಲಿ ಕುಟುಂಬ ನ್ಯಾಯಾಲಯ ಮತ್ತು ಹೈಕೋರ್ಟ್ನಿಂದ ಮನ್ನಾ ಮಾಡಬಹುದು ಎಂದು ಹೇಳಿದೆ. ನ್ಯಾಯಾಲಯದ ಪ್ರಕಾರ, ಪರಸ್ಪರ ಒಪ್ಪಿಗೆಯ ವಿಚ್ಛೇದನಗಳಲ್ಲಿ ಅಂತಹ ನಮ್ಯತೆ ಲಭ್ಯವಿರುವಾಗ, ವಿವಾದಿತ ಪ್ರಕರಣಗಳಲ್ಲಿಯೂ ಸಹ ಅದನ್ನು ನಿರಾಕರಿಸಲು ಯಾವುದೇ ಕಾನೂನು ಸಮರ್ಥನೆ ಇಲ್ಲ. HMA ಯ ಸೆಕ್ಷನ್ 13B(1) ರ ಅಡಿಯಲ್ಲಿ ಒಂದು ವರ್ಷದ ಬೇರ್ಪಡಿಕೆ ಅವಧಿಯ ಮನ್ನಾ, ಸೆಕ್ಷನ್ 13B(2) ರ ಅಡಿಯಲ್ಲಿ ಎರಡನೇ ಅರ್ಜಿಯನ್ನು ಸಲ್ಲಿಸಲು ಆರು ತಿಂಗಳ ಕೂಲಿಂಗ್-ಆಫ್ ಅವಧಿಯ ಮನ್ನಾ ಮತ್ತು ಸೆಕ್ಷನ್ 13B(1) ರ ಅಡಿಯಲ್ಲಿ ಒಂದು ವರ್ಷದ ಮನ್ನಾ ಮತ್ತು ಸೆಕ್ಷನ್ 13B(2) ರ ಅಡಿಯಲ್ಲಿ ಆರು ತಿಂಗಳ ಅವಧಿಯ ಮನ್ನಾವನ್ನು ಪರಸ್ಪರ ಸ್ವತಂತ್ರವಾಗಿ ಪರಿಗಣಿಸಬೇಕೆಂದು ಅದು ಹೇಳಿದೆ. ಆದಾಗ್ಯೂ, ನ್ಯಾಯಾಲಯವು ಕೇವಲ…
ಬೆಳಗಾವಿ : ರಾಜ್ಯ ಸರ್ಕಾರವು ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದು, 1600 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಖಾಲಿ ಇರುವ 1600 ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದಿನ ಸರ್ಕಾರದಲ್ಲಿ 545 ಪಿ.ಎಸ್.ಐ ನೇಮಕಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಸದ್ಯ ಸರ್ಕಾರ 947 ಪಿ.ಎಸ್.ಐ ಹುದ್ದೆಗಳನ್ನು ಭರ್ತಿ ಮಾಡಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಸರ್ಕಾರದಿಂದ ನೇರವಾಗಿ /ಪರೋಕ್ಷವಾಗಿ ನೇಮಕಗೊಂಡಿರುವ ಎಲ್ಲಾ `ಎ’, ‘ಬಿ’ ಮತ್ತು ‘ಸಿ’ ಗುಂಪಿನ ಅರ್ಹ ಅಧಿಕಾರಿಗಳು/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳುವಲ್ಲಿ ಕಾಲಾವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಪತ್ರದಲ್ಲಿ ಎಲ್ಲಾ ಅರ್ಹ “ಎ”, “ಬಿ” ಮತ್ತು “ಸಿ” ಗುಂಪಿನ ಅಧಿಕಾರಿಗಳು/ನೌಕರರಿಗೆ ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ದಿನಾಂಕ: 15.12.2025 ರೊಳಗಡೆ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ತಿಳಿಸಲಾಗಿತ್ತು. ಆದರೆ, ಹಲವು ಅಧಿಕಾರಿಗಳು/ನೌಕರರು ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವಲ್ಲಿ ಇನ್ನೂ ಹೆಚ್ಚಿನ ಕಾಲಾವಕಾಶ ಕೋರಿದ್ದರಿಂದ, ‘ಎ’ ಮತ್ತು “ಬಿ” ಗುಂಪಿನ ಅಧಿಕಾರಿಗಳಿಗೆ ಹಾಗೂ ‘ಸಿ’ ಗುಂಪಿನ ನೌಕರರಿಗೆ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳಲು ದಿನಾಂಕ: 16.01.2026ರ ವರೆಗೆ ಕಾಲಾವಕಾಶವನ್ನು ವಿಸ್ತರಿಸಲಾಗಿದೆ.














