Subscribe to Updates
Get the latest creative news from FooBar about art, design and business.
Author: kannadanewsnow57
ಟೈಪ್-1 ಡಯಾಬಿಟಿಸ್ನಿಂದ (Type-1 Diabetes) ಬಳಲುತ್ತಿರುವ ಲಕ್ಷಾಂತರ ರೋಗಿಗಳ ಜೀವನದಲ್ಲಿ ಹೊಸ ಭರವಸೆ ಮೂಡಿಸುವ ನಿಟ್ಟಿನಲ್ಲಿ ವೈದ್ಯಕೀಯ ರಂಗದಲ್ಲಿ ಒಂದು ದೊಡ್ಡ ಹೆಜ್ಜೆ ಇಡಲಾಗಿದೆ. ವಿಜ್ಞಾನಿಗಳು ಪ್ರಯೋಗಾಲಯದಲ್ಲಿ ಅಭಿವೃದ್ಧಿಪಡಿಸಿರುವ ‘ಬಯೋ ಇಂಜಿನಿಯರ್ಡ್ ಮಿನಿ-ಪ್ಯಾಂಕ್ರಿಯಾಸ್’ (Bio-engineered Mini-Pancreas) ಈಗ ನೈಜ ಅಂಗದಂತೆಯೇ ಕೆಲಸ ಮಾಡುತ್ತಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರಂತರವಾಗಿ ಗಮನಿಸುತ್ತಾ, ದೇಹಕ್ಕೆ ಅಗತ್ಯವಿರುವಾಗ ಸೂಕ್ತ ಪ್ರಮಾಣದ ಇನ್ಸುಲಿನ್ ಅನ್ನು ಸ್ವಯಂಚಾಲಿತವಾಗಿ ಬಿಡುಗಡೆ ಮಾಡುತ್ತದೆ. ಇದು ಲ್ಯಾಬ್ನಲ್ಲಿ ವೈಜ್ಞಾನಿಕವಾಗಿ ಸಿದ್ಧಪಡಿಸಲಾದ ಕೃತಕ ರಚನೆಯಾಗಿದ್ದರೂ, ದೇಹದಲ್ಲಿನ ಪ್ಯಾಂಕ್ರಿಯಾಟಿಕ್ ಬೀಟಾ ಕೋಶಗಳ (Beta Cells) ಕಾರ್ಯವನ್ನೇ ಸಂಪೂರ್ಣವಾಗಿ ನಕಲು ಮಾಡುತ್ತದೆ. ಪ್ರಸ್ತುತ ಟೈಪ್-1 ಮಧುಮೇಹ ಹೊಂದಿರುವ ರೋಗಿಗಳು ಪ್ರತಿದಿನ ಇನ್ಸುಲಿನ್ ಇಂಜೆಕ್ಷನ್ಗಳ ಮೇಲೆ ಅವಲಂಬಿತರಾಗಬೇಕಿದೆ. ಆದರೆ, ಭವಿಷ್ಯದಲ್ಲಿ ಈ ಮಿನಿ-ಪ್ಯಾಂಕ್ರಿಯಾಸ್ ಅನ್ನು ರೋಗಿಯ ದೇಹದಲ್ಲಿ ಅಳವಡಿಸುವುದರಿಂದ, ಇಂಜೆಕ್ಷನ್ಗಳ ಅಗತ್ಯತೆ ಗಣನೀಯವಾಗಿ ಕಡಿಮೆಯಾಗಲಿದೆ ಅಥವಾ ಸಂಪೂರ್ಣವಾಗಿ ಮುಕ್ತಿ ಸಿಗಲಿದೆ ಎಂದು ತಜ್ಞರು ಆಶಾವಾದ ವ್ಯಕ್ತಪಡಿಸಿದ್ದಾರೆ. ವೈದ್ಯಕೀಯ ರಂಗದಲ್ಲಿ ಹೊಸ ಮೈಲಿಗಲ್ಲು..! ಲ್ಯಾಬ್ನಲ್ಲಿ ಬೆಳೆಸಿದ ಐಲೆಟ್ ಕೋಶಗಳ…
ಬೆಂಗಳೂರು: ವೇತನ ಪರಿಷ್ಕರಣೆ ಮತ್ತು ಸಂಬಳ ಹೆಚ್ಚಳದ ಬೇಡಿಕೆ ಮುಂದಿಟ್ಟು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ (KSRTC) ನೌಕರರ ಟ್ರೇಡ್ ಯೂನಿಯನ್ ಜಂಟಿ ಕ್ರಿಯಾ ಸಮಿತಿ ಘೋಷಿಸಿದ್ದ ಮುಷ್ಕರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮೇ 20ರಿಂದ ಆರಂಭವಾಗಬೇಕಿದ್ದ ಪ್ರತಿಭಟನೆ ಹಾಗೂ ಮುಷ್ಕರದ ವಿರುದ್ಧ ನೀಡಲಾಗಿದ್ದ ಮಧ್ಯಂತರ ನಿಷೇಧಾಜ್ಞೆಯನ್ನು ನ್ಯಾಯಾಲಯ ಇದೀಗ ಜೂನ್ 23ರವರೆಗೆ ವಿಸ್ತರಿಸಿದೆ. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರವಾಗಿ ಹಾಜರಾದ ಅಡ್ವೊಕೇಟ್ ಜನರಲ್, ಸಾರ್ವಜನಿಕ ಸಾರಿಗೆ ಸೇವೆ ‘ಅತ್ಯಗತ್ಯ ಸೇವೆ’ಗಳ ವ್ಯಾಪ್ತಿಗೆ ಒಳಪಡುವುದರಿಂದ ನೌಕರರು ಕಾನೂನಾತ್ಮಕವಾಗಿ ಮುಷ್ಕರ ನಡೆಸುವ ಹಕ್ಕು ಹೊಂದಿದ್ದಾರೆಯೇ ಎಂಬ ಪ್ರಶ್ನೆಯನ್ನು ಜಂಟಿ ಕ್ರಿಯಾ ಸಮಿತಿಯ ಮುಂದೆ ಪ್ರಸ್ತಾಪಿಸಿದರು. ಸಾರ್ವಜನಿಕರ ದಿನನಿತ್ಯದ ಸಂಚಾರಕ್ಕೆ ನೇರವಾಗಿ ಸಂಬಂಧಿಸಿದ ಸೇವೆಯಾಗಿರುವ ಕಾರಣ, ಸಾರಿಗೆ ನಿಗಮಗಳಲ್ಲಿ ಮುಷ್ಕರ ನಡೆದರೆ ಅದರ ಪರಿಣಾಮ ಲಕ್ಷಾಂತರ ಪ್ರಯಾಣಿಕರ ಮೇಲೆ ಬೀಳುವ ಸಾಧ್ಯತೆ ಇದೆ ಎಂದು ಸರ್ಕಾರ ತನ್ನ ವಾದದಲ್ಲಿ ಉಲ್ಲೇಖಿಸಿದೆ. ಈ ಹಿನ್ನೆಲೆಯಲ್ಲಿ, ಮುಷ್ಕರಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿಯಲ್ಲಿದ್ದ…
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದಂತ ಡಿ.ಕೆ ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಇಂದಿನಿಂದ ಡಿ.ಕೆ ಶಿವಕುಮಾರ್ ದರ್ಬಾರ್ ಆರಂಭಗೊಂಡಂತೆ ಆಗಿದೆ. ಕರ್ನಾಟಕ ರಾಜಕಾರಣದ ಧ್ರುವತಾರೆ, ಸಂಘಟನಾ ಚತುರ ಮತ್ತು ಪ್ರಸ್ತುತ ರಾಜ್ಯದ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ (D. K. Shivakumar) ಅವರ ಜೀವನ, ಸಾಧನೆ ಮತ್ತು ರಾಜಕೀಯ ಹಾದಿಯ ಸವಿಸ್ತಾರವಾದ ಪ್ರೊಫೈಲ್ ಇಲ್ಲಿದೆ. ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ಮತ್ತು ಧೀಮಂತ ಸಂಘಟನಾ ಚತುರ ಎಂದು ಗುರುತಿಸಿಕೊಂಡಿರುವ ದೊಡ್ಡಾಲಹಳ್ಳಿ ಕೆಂಪೇಗೌಡ ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದು ಒಂದು ಸುದೀರ್ಘ ರಾಜಕೀಯ ಹೋರಾಟದ ಫಲಶ್ರುತಿಯಾಗಿದೆ. ಕನಕಪುರದ ಬಂಡೆ ಎಂದೇ…
ಬೆಂಗಳೂರು: ರಾಜ್ಯದಲ್ಲಿ ಮದ್ಯ ಮಾರಾಟದ ಪ್ರಮಾಣ ಕಳೆದ ಮೇ ತಿಂಗಳಲ್ಲಿ ಗಮನಾರ್ಹವಾಗಿ ಕಡಿಮೆಯಾಗಿದ್ದು, ಇದರ ನೇರ ಪರಿಣಾಮವಾಗಿ ಅಬಕಾರಿ ಇಲಾಖೆಯ ಆದಾಯದಲ್ಲೂ ದೊಡ್ಡ ಮಟ್ಟದ ಇಳಿಕೆ ದಾಖಲಾಗಿದೆ. ಏಪ್ರಿಲ್ಗೆ ಹೋಲಿಸಿದರೆ ಮೇ ತಿಂಗಳಲ್ಲಿ ಮದ್ಯದ ಬೇಡಿಕೆ ಕುಸಿದಿರುವುದು ಅಧಿಕಾರಿಗಳ ಗಮನ ಸೆಳೆದಿದೆ. ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಏಪ್ರಿಲ್ ತಿಂಗಳಲ್ಲಿ 68.17 ಲಕ್ಷ ಬಾಕ್ಸ್ ಗಳಷ್ಟು ಮಾರಾಟವಾಗಿದ್ದ ಐಎಂಎಲ್ (Indian Made Liquor) ಮೇ ತಿಂಗಳಲ್ಲಿ 51.17 ಲಕ್ಷ ಬಾಕ್ಸ್ಗಳಿಗೆ ಇಳಿಕೆಯಾಗಿದೆ. ಇದೇ ವೇಳೆ ಬಿಯರ್ ಮಾರಾಟವೂ ಕುಸಿತ ಕಂಡಿದ್ದು, ಏಪ್ರಿಲ್ನ 50.39 ಲಕ್ಷ ಬಾಕ್ಸ್ಗಳಿಂದ ಮೇ ತಿಂಗಳಲ್ಲಿ 48.97 ಲಕ್ಷ ಬಾಕ್ಸ್ಗಳಿಗೆ ತಲುಪಿದೆ. ಮದ್ಯ ಮಾರಾಟದ ಪ್ರಮಾಣ ಕಡಿಮೆಯಾಗಿರುವುದರಿಂದ ರಾಜ್ಯ ಸರ್ಕಾರದ ಅಬಕಾರಿ ಆದಾಯಕ್ಕೂ ಹೊಡೆತ ಬಿದ್ದಿದೆ. ಏಪ್ರಿಲ್ ತಿಂಗಳಲ್ಲಿ ₹3,687 ಕೋಟಿ ಸಂಗ್ರಹವಾಗಿದ್ದ ಆದಾಯ, ಮೇ ತಿಂಗಳಲ್ಲಿ ₹3,232 ಕೋಟಿಗೆ ಇಳಿದಿದೆ. ಅಂದರೆ ಕೇವಲ ಒಂದು ತಿಂಗಳಲ್ಲೇ ಸುಮಾರು ₹455 ಕೋಟಿಯಷ್ಟು ಆದಾಯ ಕಡಿಮೆಯಾಗಿದೆ. ಮದ್ಯ ಮಾರಾಟದಲ್ಲಿ ಏಕಾಏಕಿ ಕಂಡುಬಂದ…
ನಗರ ವ್ಯಾಪ್ತಿಯಲ್ಲಿ ವಾಸವಾಗಿರುವ ಸ್ವಂತ ಮನೆ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಅಡಿಯಲ್ಲಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದ್ದು, ಫಲಾನುಭವಿಗಳ ಸಮೀಕ್ಷೆ ಮತ್ತು ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 30, 2026ರವರೆಗೆ ವಿಸ್ತರಿಸಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, ಬೆಂಗಳೂರು ವತಿಯಿಂದ ಹೊರಡಿಸಿರುವ ಸೂಚನೆಯಂತೆ, ಭಾರತ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ 2.0) ಯೋಜನೆಯಡಿ ರಾಜ್ಯದ ನಗರ ಪ್ರದೇಶಗಳಲ್ಲಿರುವ ವಸತಿ ಹಾಗೂ ನಿವೇಶನ ರಹಿತ ಕುಟುಂಬಗಳ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು. ಕೊಪ್ಪಳ ನಗರ ವ್ಯಾಪ್ತಿಯಲ್ಲಿ ಸ್ವಂತ ಮನೆ ಅಥವಾ ನಿವೇಶನ ಹೊಂದಿರದ ಅರ್ಹ ಫಲಾನುಭವಿಗಳು ನಿಗಮದ ಆನ್ಲೈನ್ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿ, ಅದರ ಸ್ವೀಕೃತಿ ಪತ್ರದೊಂದಿಗೆ ಅಗತ್ಯ ದಾಖಲಾತಿಗಳನ್ನು ಸಂಬಂಧಿತ ಕಚೇರಿಗೆ ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅರ್ಜಿ ಸಲ್ಲಿಸಲು ಕುಟುಂಬದ ಪಡಿತರ ಚೀಟಿ, ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ…
ಬೆಂಗಳೂರು: ಕರ್ನಾಟಕ ಸರ್ಕಾರದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (LADS) ಅಡಿಯಲ್ಲಿ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗಾಗಿ ಯಾವೆಲ್ಲಾ ಪ್ರಮುಖ ಕಾಮಗಾರಿಗಳನ್ನು ಕೈಗೊಳ್ಳಬಹುದು ಎಂಬ ಅಧಿಕೃತ ಮಾರ್ಗಸೂಚಿಗಳ ಪಟ್ಟಿ ಪ್ರಕಟವಾಗಿದೆ. ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ ಸೇರಿದಂತೆ ಒಟ್ಟು 15 ಪ್ರಮುಖ ಕ್ಷೇತ್ರಗಳಲ್ಲಿ ಈ ಅನುದಾನವನ್ನು ಬಳಸಲು ಸರ್ಕಾರ ಅವಕಾಶ ಕಲ್ಪಿಸಿದೆ. ಅನುಮೋದಿತ ಕಾಮಗಾರಿಗಳ ವಿವರವಾದ ವರದಿ ಕೆಳಗಿನಂತಿದೆ: ಪ್ರಾಥಮಿಕ, ಮಾಧ್ಯಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳು ಸರ್ಕಾರಿ ಮತ್ತು ಅನುದಾನಿತ ಶಾಲೆ-ಕಾಲೇಜುಗಳ ಅಭಿವೃದ್ಧಿಗೆ ವ್ಯಾಪಕ ಅವಕಾಶ ನೀಡಲಾಗಿದೆ: ಶಾಲಾ ಕೊಠಡಿಗಳು ಹಾಗೂ ಕಾಂಪೌಂಡ್ ಗೋಡೆಗಳ ನಿರ್ಮಾಣ. ಆಟದ ಮೈದಾನಗಳ ಅಭಿವೃದ್ಧಿ ಮತ್ತು ಬಯಲು ರಂಗಮಂದಿರಗಳ ನಿರ್ಮಾಣ. ಮೂಲಭೂತ ಸೌಕರ್ಯವುಳ್ಳ ಸುಸಜ್ಜಿತ ಗ್ರಂಥಾಲಯಗಳು ಮತ್ತು ಪ್ರಯೋಗಾಲಯಗಳ ಸ್ಥಾಪನೆ. ಸೈಕಲ್ ಸ್ಟ್ಯಾಂಡ್ಗಳ ನಿರ್ಮಾಣ ಹಾಗೂ ಶಾಲೆಗಳ ಹತ್ತಿರ ಶಿಕ್ಷಕರಿಗೆ ವಸತಿ ಗೃಹಗಳ ನಿರ್ಮಾಣ. RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು. ಗಣಕಯಂತ್ರ (ಕಂಪ್ಯೂಟರ್), ಪ್ರಿಂಟರ್ ಹಾಗೂ ಬೋಧನೋಪಕರಣಗಳು ಮತ್ತು ಆಟೋಪಕರಣಗಳ ಪೂರೈಕೆ.…
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ ಎರಡನೇ ಬಾರಿಗೆ ಐಪಿಎಲ್ ಮುಕುಟ ಮುಡಿಗೇರಿಸಿಕೊಂಡು ಹೊಸ ಇತಿಹಾಸ ಸೃಷ್ಟಿಸಿದೆ. ಆದರೆ, ಈ ಐತಿಹಾಸಿಕ ವಿಜಯದ ಮಹೋತ್ಸವದ ನಡುವೆಯೂ ಸಿಲಿಕಾನ್ ಸಿಟಿಯಲ್ಲಿ ಒಂದು ರೀತಿಯ ಮೌನ ಆವರಿಸಿದೆ. ಹೌದು, ಕಪ್ ಗೆದ್ದ ಸಂಭ್ರಮದ ನಡುವೆಯೇ ಇಡೀ ಆರ್ಸಿಬಿ ಬಳಗ ಕರಾಳ ದಿನವೊಂದನ್ನು ನೆನೆದು ಭಾವುಕವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತಕ್ಕೆ ವರ್ಷ ತುಂಬು: ಕಳೆದ ವರ್ಷ ಆರ್ಸಿಬಿ ತಂಡ ಚೊಚ್ಚಲ ಬಾರಿಗೆ ಟ್ರೋಫಿ ಗೆದ್ದಾಗ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಇತಿಹಾಸವೇ ಕಾಣದಂತಹ ವಿಜಯೋತ್ಸವ ನಡೆದಿತ್ತು. ಈ ವೇಳೆ ಉಂಟಾದ ಭೀಕರ ಜನದಟ್ಟಣೆ ಮತ್ತು ಕಾಲ್ತುಳಿತದ ದುರಂತದಲ್ಲಿ 11 ಜನ ಅಭಿಮಾನಿಗಳು ಉಸಿರು ಚೆಲ್ಲಿದ್ದರು. ಆ ಭೀಕರ ಘಟನೆ ನಡೆದು ಇಂದಿಗೆ ಸರಿಯಾಗಿ ಒಂದು ವರ್ಷ ಸಂದಿದೆ. ರೋಡ್ ಶೋ, ಸಾರ್ವಜನಿಕ ಸಂಭ್ರಮಾಚರಣೆ ರದ್ದು! ಆ ಕರಾಳ ದಿನದ ನೋವಿನ ನೆನಪಿನಲ್ಲಿ ಆರ್ ಸಿಬಿ ಮ್ಯಾನೇಜ್ ಮೆಂಟ್ ಈ ಬಾರಿ ಅತ್ಯಂತ…
ಭೋಪಾಲ್: ದೇಶಾದ್ಯಂತ ಭಾರಿ ವಿವಾದ ಸೃಷ್ಟಿಸಿರುವ ‘ನೀಟ್-ಯುಜಿ’ (NEET-UG) ಪರೀಕ್ಷೆ ಅಕ್ರಮ ಹಾಗೂ ಮರುಪರೀಕ್ಷೆಯ ಆತಂಕಕ್ಕೆ ಮತ್ತೊಂದು ಬಲಿಯಾಗಿದೆ. ಪರೀಕ್ಷಾ ಪತ್ರಿಕೆ ಸೋರಿಕೆ ಹಗರಣದಿಂದಾಗಿ ಪರೀಕ್ಷೆ ರದ್ದಾದ ಬೆನ್ನಲ್ಲೇ ತೀವ್ರ ಖಿನ್ನತೆಗೆ ಒಳಗಾಗಿದ್ದ ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ವಿದ್ಯಾರ್ಥಿನಿ ಆಕಾಂಕ್ಷಾ ಚತುರ್ವೇದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ನೋಟ್ ಬರೆದಿಟ್ಟು ಆಕಾಂಕ್ಷಾ ಆತ್ಮಹತ್ಯೆ ಮಾಡಿಕೊಂಡಿದ್ದು, “ನನಗೆ ಮತ್ತೊಮ್ಮೆ ಪರೀಕ್ಷೆ ಬರೆಯುವ ಧೈರ್ಯವಿಲ್ಲ” ಎಂದು ತನ್ನ ಅಳಲನ್ನು ತೋಡಿಕೊಂಡಿದ್ದಾರೆ. ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಆಕಾಂಕ್ಷಾ ಭಾಗವಹಿಸಿದ್ದರು. ಪರೀಕ್ಷೆ ಚೆನ್ನಾಗಿ ಆಗಿದ್ದರಿಂದ ಸುಮಾರು 650 ಅಂಕಗಳು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆಕೆಯ ತಂದೆ ಕೃಷ್ಣ ಕುಮಾರ್ ಚತುರ್ವೇದಿ ವೃತ್ತಿಯಲ್ಲಿ ರೈತರಾಗಿದ್ದು, ಮಗಳನ್ನು ವೈದ್ಯೆಯನ್ನಾಗಿ ಮಾಡಲು ತೀವ್ರ ಆರ್ಥಿಕ ಸಂಕಷ್ಟದ ನಡುವೆಯೂ ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ 3 ಲಕ್ಷ ರೂಪಾಯಿ ಸಾಲ ಮಾಡಿದ್ದರು. ನಾಗ್ಪುರದಲ್ಲಿ ಮಗಳಿಗೆ ಕೋಚಿಂಗ್ ಕೊಡಿಸಲು ತಂದೆ ಅಲ್ಲಿಯೇ ಅಡುಗೆಯವನಾಗಿಯೂ ಕೆಲಸ ಮಾಡುತ್ತಿದ್ದರು. ಆದರೆ, ಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ…
ಬೆಂಗಳೂರು: ವೈದ್ಯಕೀಯ ಗರ್ಭಪಾತದ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ಅತ್ಯಂತ ಐತಿಹಾಸಿಕ ಮತ್ತು ಮಹತ್ವದ ತೀರ್ಪೊಂದನ್ನು ನೀಡಿದೆ. ಗರ್ಭಪಾತ ಮಾಡಿಸಿಕೊಳ್ಳುವುದು ಮಹಿಳೆಯ ದೈಹಿಕ ಸ್ವಾಯತ್ತತೆಗೆ ಸಂಬಂಧಿಸಿದ ಹಕ್ಕು ಎಂದು ಉಚ್ಚ ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅಷ್ಟೇ ಅಲ್ಲದೆ, ಗಂಭೀರ ನರಮಂಡಲದ ಸಮಸ್ಯೆಯಿಂದ ಬಳಲುತ್ತಿರುವ 32 ವಾರಗಳ ಭ್ರೂಣವನ್ನು ಕಾನೂನಾತ್ಮಕವಾಗಿ ತೆಗೆದುಹಾಕಲು ಹಸಿರು ನಿಶಾನೆ ತೋರಿಸಿದೆ. ಸಾಮಾನ್ಯವಾಗಿ ಭಾರತೀಯ ಕಾನೂನಿನ ಪ್ರಕಾರ 24 ವಾರಗಳವರೆಗೆ ಮಾತ್ರ ವೈದ್ಯಕೀಯ ಗರ್ಭಪಾತಕ್ಕೆ ಅವಕಾಶವಿರುತ್ತದೆ. ಆದರೆ, ಈ ವಿಶೇಷ ಪ್ರಕರಣದಲ್ಲಿ ಭ್ರೂಣಕ್ಕೆ ಈಗಾಗಲೇ 32 ವಾರಗಳಾಗಿದ್ದರೂ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಏಕಸದಸ್ಯ ಪೀಠವು ಗರ್ಭಪಾತಕ್ಕೆ ವಿಶೇಷ ಅನುಮತಿ ನೀಡಿದೆ. ಹೆತ್ತವರ ನೋವು ಮತ್ತು ಆರ್ಥಿಕ ಸಂಕಷ್ಟ: ಒಂದು ವೇಳೆ ಇಂತಹ ಗಂಭೀರ ದೋಷವಿರುವ ಮಗು ಜನಿಸಿದರೆ, ಆ ಮಗು ಜೀವನಪೂರ್ತಿ ನರಳಬೇಕಾಗುತ್ತದೆ. ಅದನ್ನು ನೋಡುವ ಹೆತ್ತವರ ಮಾನಸಿಕ ಸ್ಥಿತಿ, ಮಗುವಿನ ಜೀವಮಾನದ ಕಷ್ಟ ಹಾಗೂ ಅದಕ್ಕಾಗುವ ಆರ್ಥಿಕ ಹೊರೆಯನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ತಾಯಿ ಮತ್ತು ಭ್ರೂಣದ…
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಒಳಗೆ ಮತ್ತು ಶಾಲಾ ಆವರಣದಲ್ಲಿ ಇನ್ಮುಂದೆ ಸಿನಿಮಾ, ಕಿರುಚಿತ್ರ ಹಾಗೂ ಧಾರಾವಾಹಿಗಳ ಚಿತ್ರೀಕರಣ ನಡೆಸುವುದಕ್ಕೆ ಶಾಲಾ ಶಿಕ್ಷಣ ಇಲಾಖೆಯು ಸಂಪೂರ್ಣ ನಿಷೇಧ ಹೇರಿದೆ. ಈ ಕುರಿತು ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಒಳಗೆ ಮತ್ತು ಶಾಲಾ ಆವರಣದಲ್ಲಿ ಚಲನಚಿತ್ರ, ಕಿರುಚಿತ್ರ, ಸಾಕ್ಷ್ಯಚಿತ್ರ ಹಾಗೂ ದೂರದರ್ಶನ ಧಾರಾವಾಹಿಗಳ ಚಿತ್ರೀಕರಣಕ್ಕಾಗಿ ನಿರ್ಮಾಪಕರು ಮತ್ತು ನಿರ್ದೇಶಕರಿಂದ ಅನುಮತಿ ಕೋರಿ ಇಲಾಖೆಗೆ ಹಲವಾರು ಪ್ರಸ್ತಾವನೆಗಳು ಸಲ್ಲಿಕೆಯಾಗುತ್ತಿದ್ದವು. ಆದರೆ, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶೈಕ್ಷಣಿಕ ವಾತಾವರಣದ ಹಿತದೃಷ್ಟಿಯಿಂದ ಚಿತ್ರೀಕರಣಕ್ಕೆ ಅನುಮತಿ ನೀಡಲು ಇಲಾಖೆ ನಿರಾಕರಿಸಿದೆ. ಚಿತ್ರೀಕರಣ ನಿಷೇಧಿಸಲು ಮುಖ್ಯ ಕಾರಣಗಳು: ಶಾಲಾ ಶಿಕ್ಷಣ ಇಲಾಖೆಯು ಈ ಕಠಿಣ ನಿರ್ಧಾರ ಕೈಗೊಳ್ಳಲು ಪ್ರಮುಖ ಆರು ಕಾರಣಗಳನ್ನು ಪಟ್ಟಿ ಮಾಡಿದೆ: ವಿದ್ಯಾರ್ಥಿಗಳ ಗೌಪ್ಯತೆ ಮತ್ತು ಸುರಕ್ಷತೆ: ಶಾಲೆಯಲ್ಲಿನ ವಿದ್ಯಾರ್ಥಿಗಳ ಗೌಪ್ಯತೆ ಮತ್ತು ಸುರಕ್ಷತೆಯನ್ನು ಕಾಪಾಡುವುದು ಆಯಾ ಶಾಲಾ ಮುಖ್ಯಸ್ಥರ ಹೊಣೆಯಾಗಿದ್ದು, ಚಿತ್ರೀಕರಣದಿಂದ ಇದಕ್ಕೆ…














