Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ: ಟ್ರಾನ್ಸ್ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆ-2026ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಈ ಸಂಬಂಧ ಕೇಂದ್ರ ಸರ್ಕಾರ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ಹಿನ್ನೆಲೆ: 2026ರ ಹೊಸ ತಿದ್ದುಪಡಿ ಮಸೂದೆಯು ಟ್ರಾನ್ಸ್ಜೆಂಡರ್ ವ್ಯಕ್ತಿಗಳು ತಮ್ಮ ಲಿಂಗ ಗುರುತಿನ ಪ್ರಮಾಣಪತ್ರವನ್ನು ಪಡೆಯಲು ‘ಕಡ್ಡಾಯವಾಗಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಬೇಕು’ ಎಂಬ ನಿಯಮವನ್ನು ಒಳಗೊಂಡಿದೆ. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಈ ನಿಯಮವು ವ್ಯಕ್ತಿಯ ‘ಸ್ವಯಂ-ನಿರ್ಣಯದ ಹಕ್ಕನ್ನು’ (Right of Self-determination) ಉಲ್ಲಂಘಿಸುತ್ತದೆ ಎಂದು ವಾದಿಸಿದ್ದಾರೆ. ನ್ಯಾಯಪೀಠದ ಪ್ರಮುಖ ಅಂಶಗಳು: ತ್ರಿಸದಸ್ಯ ಪೀಠ: ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ನೇತೃತ್ವದ ಪೀಠವು ಈ ವಿಷಯದ ಗಂಭೀರತೆಯನ್ನು ಪರಿಗಣಿಸಿ, ಇದರ ವಿಚಾರಣೆಗಾಗಿ ಸಿಜೆಐ ನೇತೃತ್ವದಲ್ಲೇ ಮೂವರು ನ್ಯಾಯಾಧೀಶರ ವಿಶೇಷ ಪೀಠವನ್ನು ರಚಿಸಿದೆ. ಅರ್ಜಿದಾರರ ವಾದ: ಲಿಂಗ ಗುರುತಿಸಿಕೊಳ್ಳುವುದು ವೈಯಕ್ತಿಕ ಆಯ್ಕೆಯಾಗಿದೆ. ಆದರೆ ಸರ್ಕಾರವು ವೈದ್ಯಕೀಯ ಚಿಕಿತ್ಸೆಯನ್ನು ಕಡ್ಡಾಯಗೊಳಿಸಿರುವುದು…
ನವದೆಹಲಿ: ಭಾರತದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮಹತ್ವದ ಸೂಚನೆಯೊಂದನ್ನು ನೀಡಿದೆ. ಇನ್ನು ಮುಂದೆ ಫಾಸ್ಟ್ಟ್ಯಾಗ್ (FASTag) ಅನ್ನು ವಾಹನದ ಮುಂಭಾಗದ ಗಾಜಿಗೆ (Windscreen) ಕಡ್ಡಾಯವಾಗಿ ಅಂಟಿಸದಿದ್ದರೆ, ಅಂತಹ ಟ್ಯಾಗ್ಗಳನ್ನು ಬ್ಲಾಕ್ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಕೈಯಲ್ಲಿ ಹಿಡಿದು ಸ್ಕ್ಯಾನ್ ಮಾಡುವುದು ಸರಿಯಲ್ಲ ರೇಡಿಯೋ ಫ್ರೀಕ್ವೆನ್ಸಿ ಐಡೆಂಟಿಫಿಕೇಶನ್ (RFID) ತಂತ್ರಜ್ಞಾನದ ಮೂಲಕ ಕಾರ್ಯನಿರ್ವಹಿಸುವ ಫಾಸ್ಟ್ಟ್ಯಾಗ್ ಅನ್ನು ಅನೇಕ ಚಾಲಕರು ವಾಹನದ ಗಾಜಿಗೆ ಅಂಟಿಸುವ ಬದಲು, ಟೋಲ್ ಪ್ಲಾಜಾ ಬಂದಾಗ ಕೈಯಲ್ಲಿ ಹಿಡಿದು ಸ್ಕ್ಯಾನ್ ಮಾಡಿಸುತ್ತಿರುವುದು ಕಂಡುಬಂದಿದೆ. ಇದು ಸರಿಯಾದ ಕ್ರಮವಲ್ಲ ಎಂದು NHAI ತನ್ನ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಸ್ಪಷ್ಟಪಡಿಸಿದೆ. ಗಾಜಿನ ಮೇಲೆ ಅಂಟಿಸುವುದರಿಂದ ಆಗುವ ಪ್ರಯೋಜನಗಳು: ತ್ವರಿತ ಸ್ಕ್ಯಾನಿಂಗ್: ವಾಹನವು ಚಲನೆಯಲ್ಲಿರುವಾಗಲೇ ಸ್ಕ್ಯಾನರ್ ಚಿಪ್ ಅನ್ನು ಗುರುತಿಸಿ ಶುಲ್ಕ ಕಡಿತಗೊಳಿಸುತ್ತದೆ. ದಟ್ಟಣೆ ನಿಯಂತ್ರಣ: ವಾಹನಗಳು ಟೋಲ್ ಬಳಿ ನಿಲ್ಲುವ ಅಗತ್ಯವಿಲ್ಲದ ಕಾರಣ ಟ್ರಾಫಿಕ್ ಸಮಸ್ಯೆ ಕಡಿಮೆಯಾಗುತ್ತದೆ. ದುರುಪಯೋಗಕ್ಕೆ ತಡೆ: ಒಂದೇ ಫಾಸ್ಟ್ಟ್ಯಾಗ್…
ನವದೆಹಲಿ : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದೆ. ಇಡೀ ದೇಶದ ಕುತೂಹಲ ಕೆರಳಿಸಿರುವ ಈ ಫಲಿತಾಂಶದಲ್ಲಿ, ಅಧಿಕಾರದ ಗದ್ದುಗೆ ಏರಲು ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳ ಅಗತ್ಯವಿದೆ? ಆಯಾ ರಾಜ್ಯಗಳ ಒಟ್ಟು ಸೀಟುಗಳು ಮತ್ತು ಮ್ಯಾಜಿಕ್ ನಂಬರ್ ಎಷ್ಟು ಎಂಬ ಮಾಹಿತಿ ಇಲ್ಲಿದೆ. 1. ತಮಿಳುನಾಡು ದಕ್ಷಿಣದ ಪ್ರಮುಖ ರಾಜ್ಯ ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ಭಾರಿ ಪೈಪೋಟಿ ಏರ್ಪಟ್ಟಿದೆ. ಒಟ್ಟು ವಿಧಾನಸಭಾ ಸ್ಥಾನಗಳು: 234 ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್: 118 ತಮಿಳುನಾಡಿನಲ್ಲಿ ಸದ್ಯ AIADM 78 ಕ್ಷೇತ್ರಗಳಲ್ಲಿ, DMK 51, TVK 104 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 2. ಪಶ್ಚಿಮ ಬಂಗಾಳ ದಶಕಗಳ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿರುವ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ. ಒಟ್ಟು ವಿಧಾನಸಭಾ ಸ್ಥಾನಗಳು: 294 ಬಹುಮತಕ್ಕೆ ಬೇಕಾದ ಮ್ಯಾಜಿಕ್ ಫಿಗರ್: 148 (ಗಮನಿಸಿ: ಫಾಲ್ತಾ ಕ್ಷೇತ್ರದಲ್ಲಿ ಮರುಮತದಾನದ…
ಬೆಂಗಳೂರು: ಸೈಬರ್ ಅಪರಾಧಿಗಳು ದಿನಕ್ಕೊಂದು ಹೊಸ ವೇಷದೊಂದಿಗೆ ಸಾರ್ವಜನಿಕರ ಬೆನ್ನಿಗೆ ಬೀಳುತ್ತಿದ್ದಾರೆ. ಈ ಹಿಂದೆ ಬ್ಯಾಂಕ್ ಕೆವೈಸಿ (KYC), ಲಾಟರಿ, ಡಿಜಿಟಲ್ ಅರೆಸ್ಟ್ ಮೂಲಕ ಸುದ್ದಿಯಾಗುತ್ತಿದ್ದ ಖದೀಮರು, ಈಗ ‘ಮಾನವೀಯತೆ’ ಮತ್ತು ‘ಎಮರ್ಜೆನ್ಸಿ’ ಹೆಸರಿನಲ್ಲಿ ಹೊಸ ಮಾದರಿಯ ವಂಚನೆಗೆ ಇಳಿದಿದ್ದಾರೆ. ಇತ್ತೀಚೆಗೆ ನಡೆದ ಘಟನೆಯೊಂದು ಸಾರ್ವಜನಿಕರು ಎಷ್ಟೊಂದು ಜಾಗರೂಕತೆಯಿಂದ ಇರಬೇಕು ಎಂಬುದಕ್ಕೆ ಕನ್ನಡಿ ಹಿಡಿದಿದೆ. ವಂಚನೆಯ ರೋಚಕ ಕಾರ್ಯಾಚರಣೆ ಹೀಗಿತ್ತು: ಘಟನೆಯ ಆರಂಭವು ಒಂದು ಸಾಮಾನ್ಯ ಟೆಕ್ಸ್ಟ್ ಮೆಸೇಜ್ನಿಂದ ಆಗುತ್ತದೆ. ವ್ಯಕ್ತಿಯ ಮೊಬೈಲ್ಗೆ “Your account is credited Rs. 2000.00” ಎಂಬ ಸಂದೇಶ ಬರುತ್ತದೆ. ಈ ಸಂದೇಶ ನೋಡಿ ಗೊಂದಲಕ್ಕೊಳಗಾಗುವಷ್ಟರಲ್ಲೇ ಅಪರಿಚಿತ ನಂಬರ್ನಿಂದ ಕರೆ ಬರುತ್ತದೆ. ಭಾವನಾತ್ಮಕ ನಾಟಕ: ಕರೆ ಮಾಡಿದ ವ್ಯಕ್ತಿ ಬಹಳ ಕಷ್ಟದಲ್ಲಿದ್ದಂತೆ ನಟಿಸುತ್ತಾ, “ನಾನು ಮೆಡಿಕಲ್ ಶಾಪ್ನಲ್ಲಿದ್ದೇನೆ, ಆತುರದಲ್ಲಿ ಹಣ ಕಳುಹಿಸುವಾಗ ಒಂದು ನಂಬರ್ ತಪ್ಪಾಗಿ ನಿಮ್ಮ ಅಕೌಂಟ್ ಗೆ ಬಂದಿದೆ. ಇದು ನನಗೆ ಜೀವನ್ಮರಣದ ಪ್ರಶ್ನೆ, ದಯವಿಟ್ಟು ವಾಪಸ್ ಮಾಡಿ” ಎಂದು ನಂಬರ್ ಸೇರಿದಂತೆ…
ನವದೆಹಲಿ: ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ “ಆಧಾರ್ ಕಾರ್ಡ್ ವಿನ್ಯಾಸ ಬದಲಾವಣೆ” ಕುರಿತಾದ ವದಂತಿಗಳಿಗೆ ಕೇಂದ್ರ ಸರ್ಕಾರ ತೆರೆ ಎಳೆದಿದೆ. ಹೊಸ ವಿನ್ಯಾಸದ ಆಧಾರ್ ಕಾರ್ಡ್ಗಳು ಬರಲಿವೆ ಎಂಬ ಸುದ್ದಿಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯ ಸ್ಪಷ್ಟಪಡಿಸಿದೆ. ವದಂತಿಗಳೇನಿದ್ದವು? ಆಧಾರ್ ಕಾರ್ಡ್ನ ಭದ್ರತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಅದರ ಸ್ವರೂಪವನ್ನು ಬದಲಿಸಲಿದೆ ಎಂದು ಹೇಳಲಾಗುತ್ತಿತ್ತು. ಹೊಸ ಕಾರ್ಡ್ನಲ್ಲಿ ಕೇವಲ ಫೋಟೋ ಮತ್ತು ಕ್ಯೂಆರ್ (QR) ಕೋಡ್ ಮಾತ್ರ ಇರಲಿದ್ದು, ತಂದೆಯ ಹೆಸರು, ವಿಳಾಸ, ಲಿಂಗ ಮತ್ತು ಹುಟ್ಟಿದ ದಿನಾಂಕದಂತಹ ವೈಯಕ್ತಿಕ ವಿವರಗಳನ್ನು ತೆಗೆದುಹಾಕಲಾಗುವುದು ಎಂಬ ವದಂತಿ ಹಬ್ಬಿತ್ತು. ಇದರಿಂದ ಆಧಾರ್ ದುರ್ಬಳಕೆಯಾದರೂ ಮಾಹಿತಿ ಸೋರಿಕೆಯಾಗುವುದಿಲ್ಲ ಎಂದು ಬಿಂಬಿಸಲಾಗಿತ್ತು. ಕೇಂದ್ರ ಸರ್ಕಾರದ ಸ್ಪಷ್ಟನೆ: ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಐಟಿ ಸಚಿವಾಲಯ, ಈ ಕೆಳಗಿನ ಪ್ರಮುಖ ಅಂಶಗಳನ್ನು ತಿಳಿಸಿದೆ: ವಿನ್ಯಾಸದಲ್ಲಿ ಬದಲಾವಣೆಯಿಲ್ಲ: ಆಧಾರ್ ಕಾರ್ಡ್ ವಿನ್ಯಾಸ ಬದಲಾಯಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ.…
ಬೆಂಗಳೂರು: ಇಂದು ಅನೇಕರು ಒಂದಕ್ಕಿಂತ ಹೆಚ್ಚು ಕ್ರೆಡಿಟ್ ಕಾರ್ಡ್ಗಳನ್ನು ಹೊಂದಿರುತ್ತಾರೆ. ಕೆಲವು ಕಾರ್ಡ್ಗಳನ್ನು ನಿಯಮಿತವಾಗಿ ಬಳಸಿದರೆ, ಇನ್ನು ಕೆಲವನ್ನು ಕೇವಲ ತುರ್ತು ಸಂದರ್ಭಗಳಿಗಾಗಿ ಅಥವಾ ಶೋಗಾಗಿ ಹಾಗೆಯೇ ಇಟ್ಟುಕೊಂಡಿರುತ್ತಾರೆ. ಆದರೆ, ದೀರ್ಘಕಾಲದವರೆಗೆ ಕ್ರೆಡಿಟ್ ಕಾರ್ಡ್ ಬಳಸದೆ ಇರುವುದು ನಿಮ್ಮ ಆರ್ಥಿಕದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಆರ್ಥಿಕ ತಜ್ಞರು ಎಚ್ಚರಿಸಿದ್ದಾರೆ. ಕ್ರೆಡಿಟ್ ಕಾರ್ಡ್ ಬಳಸದಿದ್ದರೆ ಎದುರಾಗಬಹುದಾದ ಪ್ರಮುಖ ಸಮಸ್ಯೆಗಳು ಇಲ್ಲಿವೆ: 1. ಕಾರ್ಡ್ ರದ್ದಾಗುವ ಭೀತಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿಯಮಗಳ ಪ್ರಕಾರ, ಯಾವುದೇ ಕ್ರೆಡಿಟ್ ಕಾರ್ಡ್ನಲ್ಲಿ ಸತತ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಯಾವುದೇ ವಹಿವಾಟು ನಡೆಯದಿದ್ದರೆ, ಬ್ಯಾಂಕುಗಳು ಆ ಕಾರ್ಡ್ ಅನ್ನು ನಿಷ್ಕ್ರಿಯಗೊಳಿಸುವ ಅಥವಾ ಮುಚ್ಚುವ ಅಧಿಕಾರ ಹೊಂದಿರುತ್ತವೆ. ಆದರೆ ಕಾರ್ಡ್ ಕ್ಲೋಸ್ ಮಾಡುವ 30 ದಿನಗಳ ಮೊದಲು ಬ್ಯಾಂಕ್ ನಿಮಗೆ ಈ ಬಗ್ಗೆ ಮಾಹಿತಿ ನೀಡಬೇಕಾಗುತ್ತದೆ. 2. ಸಿಬಿಲ್ (CIBIL) ಸ್ಕೋರ್ ಮೇಲೆ ಪರಿಣಾಮ ನಿಮ್ಮ ಹಳೆಯ ಕಾರ್ಡ್ ಅನ್ನು ನೀವು ಬಳಸದೇ ಇದ್ದಾಗ…
ಬೆಂಗಳೂರು: ಸಿಲಿಕಾನ್ ಸಿಟಿಯ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಕಳೆದ 15 ದಿನಗಳ ಅಂತರದಲ್ಲಿ ತರಕಾರಿ ಬೆಲೆಗಳು ಗಗನಕ್ಕೇರಿದ್ದು, ಗ್ರಾಹಕರ ಜೇಬಿಗೆ ಭಾರಿ ಕತ್ತರಿ ಬೀಳುತ್ತಿದೆ. ಕೇವಲ ಎರಡು ವಾರಗಳ ಹಿಂದೆ ಕೈಗೆಟುಕುವ ದರದಲ್ಲಿದ್ದ ತರಕಾರಿಗಳು ಈಗ ಕೊಳ್ಳಲಾಗದ ಮಟ್ಟಕ್ಕೆ ಬೆಲೆ ಏರಿಕೆ ಕಂಡಿವೆ. ಬೀನ್ಸ್ ಬೆಲೆ ಕೇಳಿ ಬೆಚ್ಚಿಬಿದ್ದ ಜನ! ಮಾರುಕಟ್ಟೆಯಲ್ಲಿ ಸದ್ಯ ಬೀನ್ಸ್ ದರ ಗ್ರಾಹಕರನ್ನು ಬೆಚ್ಚಿಬೀಳಿಸುತ್ತಿದೆ. 15 ದಿನಗಳ ಹಿಂದೆ ಪ್ರತಿ ಕೆಜಿಗೆ 60 ರೂಪಾಯಿ ಇದ್ದ ಬೀನ್ಸ್ ಬೆಲೆ ಈಗ ಬರೋಬ್ಬರಿ 160 ರೂಪಾಯಿಗೆ ತಲುಪಿದೆ. ಈ ಹಿಂದೆ 500 ರೂಪಾಯಿ ತಂದರೆ ಚೀಲ ತುಂಬಾ ತರಕಾರಿ ತರುತ್ತಿದ್ದ ಜನ, ಈಗ ಅಷ್ಟೇ ಹಣ ನೀಡಿದರೂ ಎರಡು ಪುಟ್ಟ ಬ್ಯಾಗ್ ತುಂಬಿಸಲು ಪರದಾಡುವಂತಾಗಿದೆ. ಬೆಲೆ ಏರಿಕೆಗೆ ಪ್ರಮುಖ ಕಾರಣಗಳೇನು? ಹವಾಮಾನ ವೈಪರೀತ್ಯ: ರಾಜ್ಯದಲ್ಲಿ ಸುಡುತ್ತಿರುವ ಬಿಸಿಲು ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆಗಳಿಗೆ ಭಾರಿ ಹಾನಿಯಾಗಿದೆ. ಇಳುವರಿ ಕುಸಿತ: ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರದಲ್ಲಿ ಶಾಖದ…
ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 143 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 119 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎಐಡಿಎಂಕೆ 68 ಕ್ಷೇತ್ರಗಳಲ್ಲಿ, ಡಿಎಂಕೆ 49 ಕ್ಷೇತ್ರಗಳಲ್ಲಿ, ಟಿವಿಕೆ 960 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಸ್ಸಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 69 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕೇರಳ ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಪಿಎಫ್ 89 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮ್ಯಾಜಿಕ್ ನಂಬರ್ ದಾಟಿದೆ.
ನವದೆಹಲಿ: ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಿದ್ದು, 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 128 ಕ್ಷೇತ್ರಗಳಲ್ಲಿ ಮುನ್ನಡ ಸಾಧಿಸಿದ್ದರೆ, ಟಿಎಂಸಿ 124 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎಐಡಿಎಂಕೆ 68 ಕ್ಷೇತ್ರಗಳಲ್ಲಿ, ಡಿಎಂಕೆ 49 ಕ್ಷೇತ್ರಗಳಲ್ಲಿ, ಟಿವಿಕೆ 960 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಸ್ಸಾಂ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 69 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 15 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕೇರಳ ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ನೇತೃತ್ವದ ಯುಡಿಪಿಎಫ್ 89 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಮ್ಯಾಜಿಕ್ ನಂಬರ್ ದಾಟಿದೆ.
BREAKING : ದಾವಣಗೆರೆ ವಿಧಾನಸಭೆ ಉಪಚುನಾವಣೆ ಫಲಿತಾಂಶ : ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪಗೆ ಭಾರೀ ಮುನ್ನಡೆ
ಬೆಂಗಳೂರು : ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು (ಮೇ 4) ಹೊರಬೀಳಲಿದೆ. ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಯ ನಡುವೆ ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ. ಇಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಅಧಿಕೃತ ಫಲಿತಾಂಶ ಹೊರಬೀಳುವ ಸಾಧ್ಯತೆಯಿದೆ. ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆಯಲ್ಲಿ ಸದ್ಯ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಭಾರೀ ಮುನ್ನಡೆ ಸಾಧಿಸಿದ್ದಾರೆ. ಬಾಗಲಕೋಟೆ ವಿಧಾನಸಭೆ ಉಪಚುನಾಣೆಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ನ ಉಮೇಶ್ ಮೇಟಿ ಮುನ್ನಡೆ 11 ಸಾವಿರ ಮತಗಳ ಸಾಧಿಸಿದ್ದರೆ, ಬಿಜೆಪಿಯ ವೀರಣ್ಣ ಚರಂತಿಮಠ ಹಿನ್ನಡೆ ಸಾಧಿಸಿದ್ದಾರೆ.













