Subscribe to Updates
Get the latest creative news from FooBar about art, design and business.
Author: kannadanewsnow57
ಕನಕಪುರ :ಉದ್ಯಮಿ ಸಿ.ಜೆ. ರಾಯ್ ಅವರ ಸಾವಿನ ಪ್ರಕರಣವನ್ನು ತನಿಖೆ ಮಾಡಿಸಿ, ಸತ್ಯಾಂಶವನ್ನು ಬಹಿರಂಗಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ಕನಕೋತ್ಸವದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ರಾಯ್ ಅವರ ಸಾವಿನ ಬಗ್ಗೆ ಕೇಳಿದಾಗ, “ಅಧಿಕಾರಿಗಳು ಅನೇಕ ಪ್ರಶ್ನೆ ಕೇಳುವಾಗ, ಐದು ನಿಮಿಷ ಸಮಯ ನೀಡಿ ಎಂದು ಹೇಳಿ ಈ ರೀತಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿದೆ. ಕೇರಳದಿಂದ ವಿಚಾರಣೆಗೆ ಒಂದು ತಂಡ ಬಂದಿತ್ತು ಎಂಬ ಮಾಹಿತಿ ಇದೆ ಎಂದರು. ಈ ಬಗ್ಗೆ ದೆಹಲಿಯಿಂದಲೂ ವರದಿ ಕೇಳಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ. ರಾಯ್ ಅವರು ಒಳ್ಳೆಯ ಉದ್ಯಮಿಗಳಾಗಿದ್ದರು, ಈ ರೀತಿ ಆಗಬಾರದಿತ್ತು ಎಂದು ಪ್ರತಿಕ್ರಿಯಿಸಿದರು.
ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಸಿಹಿಸುದ್ದಿ ನೀಡಿದ್ದು, ರೈಲ್ವೆ ನೇಮಕಾತಿ ಮಂಡಳಿ (RRB) ಗ್ರೂಪ್ D ಹುದ್ದೆಗಳಿಗೆ ಬಂಪರ್ ನೇಮಕಾತಿ ಡ್ರೈವ್ ಘೋಷಿಸುವ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. RRB ಒಟ್ಟು 22,000 ಹುದ್ದೆಗಳಿಗೆ ಖಾಲಿ ಹುದ್ದೆಗಳನ್ನು ಪ್ರಕಟಿಸಿದೆ. ಈ ನೇಮಕಾತಿಯಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಜನವರಿ 31, 2026 ರಿಂದ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 28, 2026. RRB ಗ್ರೂಪ್ D ನೇಮಕಾತಿಯು ವಿವಿಧ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳನ್ನು ಒಳಗೊಂಡಿರುತ್ತದೆ. ಈ ಹುದ್ದೆಗಳಿಗೆ ಕನಿಷ್ಠ ಶೈಕ್ಷಣಿಕ ಅರ್ಹತೆ 10 ನೇ ತರಗತಿ ಉತ್ತೀರ್ಣ ಮತ್ತು ITI ಡಿಪ್ಲೊಮಾ. ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾದ ಮತ್ತು ITI ಪದವಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯಸ್ಸಿನ ಮಿತಿಗೆ ಸಂಬಂಧಿಸಿದಂತೆ, ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 33 ವರ್ಷಗಳು. ಜನವರಿ 1, 2026 ರಿಂದ ವಯಸ್ಸನ್ನು…
ಬೆಂಗಳೂರು : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, 2002ರ ಮತದಾರರ ಪಟ್ಟಿಯನ್ನು 2025ರ ಪರಿಷ್ಕೃತ ಮತದಾರರ ಪಟ್ಟಿಗೆ ಮ್ಯಾಪಿಂಗ್ ಮಾಡುವ ಕಾರ್ಯವು ಪ್ರಗತಿಯಲ್ಲಿದೆ. ಈ ಪ್ರಕ್ರಿಯೆಯು ಪ್ರತಿಯೊಬ್ಬ ಮತದಾರರಿಗೂ ಅತೀ ಮಹತ್ವದ್ದಾಗಿದೆ. ಈ ಬಗ್ಗೆ ಈ ಕೆಳಗಿನ ಅರ್ಹ ಮತದಾರರು ಕೂಡಲೇ ಗಮನ ಹರಿಸಿ ನೀವು ಮಾಡಬೇಕಾದ ಅನಿವಾರ್ಯ ಕೆಲಸಗಳು: 2002ರ ನಂತರ ಮದುವೆಯಾಗಿ ಬಂದಿರುವವರು, ಅಥವಾ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ವಲಸೆ (ಸ್ಥಳಾಂತರ) ಗೊಂಡಿರುವವರು, ಅಥವಾ ಹೊಸದಾಗಿ ಅರ್ಹತೆ ಪಡೆದಿರುವವರು, ನಿಮ್ಮ ಮ್ಯಾಪಿಂಗ್ ಕಾರ್ಯವನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ನೀವು ಈ ಹಿಂದೆ ವಾಸವಿದ್ದ ತಮ್ಮ ಹಿಂದಿನ ವಿಧಾನಸಭಾ ಕ್ಷೇತ್ರದ ಸಂಖ್ಯೆ. ಭಾಗ ಸಂಖ್ಯೆ (Part Number) ಹಾಗೂ ತಮ್ಮ ಕ್ರಮ ಸಂಖ್ಯೆ (Serial Number ಯನ್ನು ತಿಳಿದಿರಬೇಕು. ಒಂದು ವೇಳೆ 2002ರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ, ನಿಮ್ಮ ತಂದೆ-ತಾಯಿಯವರ ಕ್ರಮ ಸಂಖ್ಯೆ ಅಥವಾ ಅಜ್ಜ-ಅಜ್ಜಿಯವರ ಕ್ರಮ ಸಂಖ್ಯೆಯೊಂದಿಗೆ (ಯಾವುದಾದರೂ ಸಂಬಂಧಿಸಿದ) ಮಾಹಿತಿಯನ್ನು ಒದಗಿಸಬೇಕು. ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಿ:…
ನೀವು ಈಗ ನಿಮ್ಮ ಆಧಾರ್ ವಿವರಗಳನ್ನು ಸುಲಭವಾಗಿ ನವೀಕರಿಸಬಹುದು. ಏಕೆಂದರೆ UIDAI (ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ) ಹೊಸ ಆಧಾರ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಪ್ರಾರಂಭಿಸಿದೆ. ಇದರ ಮೂಲಕ, ಆಧಾರ್ಗೆ ಸಂಬಂಧಿಸಿದ ಅನೇಕ ಕಾರ್ಯಗಳನ್ನು ಈಗ ಒಂದೇ ಸ್ಥಳದಲ್ಲಿ ಮಾಡಬಹುದು. ಮೊದಲ ನೋಟದಲ್ಲಿ, ಈ ಅಪ್ಲಿಕೇಶನ್ mAadhaar ನಂತೆಯೇ ಕಾಣಿಸಬಹುದು, ಆದರೆ ಕೆಲವು ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ. ಮುಖ್ಯವಾಗಿ, ನೀವು ಈಗ ಮೊಬೈಲ್ ಸಂಖ್ಯೆ ಮತ್ತು ವಿಳಾಸದಂತಹ ಪ್ರಮುಖ ವಿವರಗಳನ್ನು ಅಪ್ಲಿಕೇಶನ್ನಿಂದ ನೇರವಾಗಿ ನವೀಕರಿಸಬಹುದು. ಆದ್ದರಿಂದ, ಆಧಾರ್ನಲ್ಲಿ ನಿಮ್ಮ ಮೊಬೈಲ್ ಸಂಖ್ಯೆ ಅಥವಾ ವಿಳಾಸವನ್ನು ಹೇಗೆ ನವೀಕರಿಸುವುದು ಎಂದು ನೀವು ದೀರ್ಘಕಾಲದಿಂದ ಯೋಚಿಸುತ್ತಿದ್ದರೆ, ಆ ತೊಂದರೆ ಮುಗಿದಿದೆ. ಹೊಸ ಆಧಾರ್ ಅಪ್ಲಿಕೇಶನ್ನ ಸಹಾಯದಿಂದ, ಈ ಕಾರ್ಯವನ್ನು ನಿಮ್ಮ ಮನೆಯ ಸೌಕರ್ಯದಿಂದ ಮಾಡಬಹುದು. ಅದನ್ನು ಹೇಗೆ ಮಾಡಬೇಕೆಂದು ಇಲ್ಲಿದೆ ಮಾಹಿತಿ ಹೊಸ ಆಧಾರ್ ಅಪ್ಲಿಕೇಶನ್ನೊಂದಿಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನು ಹೇಗೆ ನವೀಕರಿಸುವುದು? ಆಧಾರ್ ಅಪ್ಲಿಕೇಶನ್ ಗೆ ಪ್ರಮುಖ ಮತ್ತು ಉಪಯುಕ್ತ ವೈಶಿಷ್ಟ್ಯವನ್ನು ಸೇರಿಸಲಾಗಿದೆ.…
ಬೆಂಗಳೂರು : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 2,846 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ. ವಿಧಾನಪರಿಷತ್ ನಲ್ಲಿ ಬಿಜೆಪಿಯ ನಿರಾಣಿ ಹಣಮಂತ್ ರುದ್ರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಳೆ ನಷ್ಟ, ಪ್ರಕೃತಿ ವಿಕೋಪ, ಸಾಲಬಾಧೆ, ಆರ್ಥಿಕ ಸಂಕಷ್ಟ, ಸಾಮಾಜಿಕ, ಕೌಟುಂಬಿಕ ಕಾರಣಗಳಿಂದಾಗಿ 2023ರ ಮೇ ನಿಂದ 2025ರ ಡಿಸೆಂಬರ್ ವರೆಗೆ ಒಟ್ಟು 2,846 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. 2024-25 ರಲ್ಲಿ ಹಾವೇರಿ 133,ಬೆಳಗಾವಿ 88, ಬೀದರ್ 70, ಧಾರವಾಡ 57, ಮೈಸೂರು 68, ಕಲಬುರಗಿ 85, ಮಂಡ್ಯ ಮತ್ತು ಶಿವಮೊಗ್ಗ ತಲಾ 51, ವಿಜಯಪುರ 49 ಸೇರಿ 1,178 ರೈತರು ಆತ್ಮಹತ್ಯೆಗೆ ಶರಣಾಗಿದ್ದು, ಈ ಪೈಕಿ 1,022 ಪ್ರಕರಣ ಅರ್ಹ ಎಂದು ಪರಿಗಣಿಸಿದೆ.2025-26ನೇ ಸಾಲಲ್ಲಿ ಡಿಸೆಂಬರ್31ರ ವೇಳೆಗೆ 414 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು 331 ಪ್ರಕರಣಗಳನ್ನು ಪರಿಹಾರಕ್ಕೆ ಅರ್ಹ ಪ್ರಕರಣವೆಂದು ಪರಿಗಣಿಸಲಾಗಿದೆ ಎಂದು ಹೇಳಿದ್ದಾರೆ. ಉಪ ವಿಭಾಗಾಧಿಕಾರಿಗಳ ಸಮಿತಿಯಲ್ಲಿ ತೀರ್ಮಾನಿಸಿ…
ಬೆಂಗಳೂರು : ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು ಖಾತಾ ವಿತರಣೆಗೆ ತಂತ್ರಾಂಶದಲ್ಲಿ ಸಮಸ್ಯೆ ಇದ್ದು, 15 -25 ದಿನಗಳಲ್ಲಿ ಸರಿಪಡಿಸಿ ಖಾತಾ ವಿತರಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬಿಜೆಪಿಯ ಕಿರಣ್ ಕುಮಾರ್ ಕೊಡ್ಲಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಭಾಗದ ಆಸ್ತಿಗಳನ್ನು ಡಿಜಿಟಲೀಕರಣ ಮಾಡಿ ಸಾರ್ವಜನಿಕರಿಗೆ ಸುಲಭವಾಗಿ ಇ-ಖಾತಾ ಸೌಲಭ್ಯ ದೊರಕುವಂತೆ ಮಾಡಬೇಕು ಎಂಬ ಉದ್ದೇಶದಿಂದ ಇ-ಸ್ವತ್ತು ಅಭಿಯಾನದಡಿ ಇ-ಸ್ವತ್ತು ತಂತ್ರಾಂಶ 2.0 ಅನ್ನು ಆರಂಭಿಸಿದೆ. ಈ ನೂತನ ಇ-ಸ್ವತ್ತು ತಂತ್ರಾಂಶ 2.0 ಅನ್ನು ಕಳೆದ ಡಿಸೆಂಬರ್ ನಲ್ಲಿ ಪ್ರಾರಂಭಿಸಲಾಗಿದೆ. ಕಳೆದ ಎರಡು ತಿಂಗಳುಗಳಲ್ಲಿ ಇ-ಸ್ವತ್ತು ತಂತ್ರಾಂಶ 1.0 & 2.0 ನಲ್ಲಿ 44,508 ಅರ್ಜಿಗಳ ಸ್ವೀಕೃತ ಮಾಡಲಾಗಿದೆ. ಅದರಲ್ಲಿ 7,978 ಅರ್ಜಿಗಳನ್ನು ಅನುಮೋದನೆ ಮಾಡಲಾಗಿದೆ. ಈ ತಂತ್ರಾಂಶದಲ್ಲಿ ಲೋಪಗಳನ್ನು ಬರುತ್ತಿದ್ದು, ಶೀಘ್ರದಲ್ಲಿಯೇ ಸರಿಪಡಿಸಲಾಗುವುದು. ನಾವು ಯಾವುದೇ ತಂತ್ರಾಂಶವನ್ನು ಅನುಷ್ಠಾನಕ್ಕೆ ತರಬೇಕು ಎಂದರೆ ಅದಕ್ಕಾಗಿ ನಾವು ಕೇಂದ್ರ ಸರ್ಕಾರದ ರಾಷ್ಟ್ರೀಯ…
ಕೊಪ್ಪಳ : ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕೊಪ್ಪಳ ನಗರದ ಬೇಲ್ದಾರ ಕಾಲೋನಿ ನಿವಾಸಿ ಮಾರುತಿ ಬೋಚನಹಳ್ಳಿ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಮತ್ತು ಕೊಪ್ಪಳ ತ್ವರಿತ ವಿಲೇವಾರಿ (ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶರು ಆರೋಪಿಗೆ ಶಿಕ್ಷೆ ವಿಧಿಸಿರುತ್ತಾರೆ. ಈ ಪ್ರಕರಣದ ಅಪ್ರಾಪ್ತ ವಯಸ್ಸಿನ ಬಾದಿತಳು ಪರಿಶಿಷ್ಟ ಜಾತಿಗೆ ಸೇರಿದವಳಾಗಿದ್ದು ದಿ: 17-02-2024ರ 6 ತಿಂಗಳ ಹಿಂದೆ ಬಾಧಿತಳು ತಮ್ಮ ಮನೆಯಲ್ಲಿರುವಾಗ ಕುರುಬ ಜನಾಂಗಕ್ಕೆ ಸೇರಿದ ಮಾರುತಿ ಬೋಚನಹಳ್ಳಿ ಇತನು ಬಾಧಿತಳ ಮನೆಗೆ ಹೋಗಿ ಮೈ ಕೈ ಮುಟ್ಟಿದ್ದು ಅವಳು ಚಿಕವಳಿದ್ದೇನೆ ಬೇಡ ಎಂದರೂ ಕೇಳದೇ ಅವಳ ಇಚ್ಚೆಗೆ ವಿರುದ್ಧವಾಗಿ ಅತ್ಯಾಚಾರ ಮಾಡಿರುತ್ತಾನೆ. ನಂತರ ದಿ: 17-02-2024 ರಂದು ಬಾಧಿತ ಬಾಲಕಿಗೆ ಕೊಪ್ಪಳ ಬಸ್ ನಿಲ್ದಾಣದಿಂದ ಅಪಹರಣ ಮಾಡಿಕೊಂಡು ಚಿಕ್ಕಸಿಂಧೋಗಿ ಗ್ರಾಮದ ಗಾಳೆಮ್ಮ ಗುಡಿ ಮುಂದೆ ಹೋಗಿ ಬಾಧಿತಳಿಗೆ ತಾಳಿ ಕಟ್ಟಿ ಬಾಲ್ಯ ವಿವಾಹವಾಗಿ ಅಲ್ಲಿಂದ ಅಳವಂಡಿ, ಮುಂಡರಗಿ, ಗದಗ ಮತ್ತು…
ಸಾರ್ವಜನಿಕರೇ ಗಮನಿಸಿ : ನಾಯಿ, ಬೆಕ್ಕು, ಇತರ ಯಾವುದೇ ಪ್ರಾಣಿಗಳು ಕಚ್ಚಿದಾಗ ತಪ್ಪದೇ `ರೇಬಿಸ್ ಚುಚ್ಚುಮದ್ದು’ ಪಡೆಯಿರಿ
ಬಳ್ಳಾರಿ : ಸಮುದಾಯಗಳಲ್ಲಿ ಹೆಚ್ಚಾಗಿ ನಾಯಿ ಕಡಿತ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು. ನಗರದ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ವಿಸಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಕಡಿಮೆಗೊಳಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಬೇಕಾದ ಜಾಗೃತಿ ಕಾರ್ಯಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಯಿ, ಬೆಕ್ಕು, ಇತರೆ ಯಾವುದೇ ಪ್ರಾಣಿಗಳು ಕಚ್ಚಿದಾಗ ರೇಬೀಸ್ ಕಾಯಿಲೆ ಬರುವ ಸಾಧ್ಯತೆಯಿದ್ದು, ಪ್ರಮುಖವಾಗಿ ನಾಯಿಗಳ ಕಡಿತದಿಂದ ಹೆಚ್ಚಿನ ಪ್ರಮಾಣದಲ್ಲಿ ರೋಗ ಹರಡುವುದರಿಂದ ನಿರ್ಲಕ್ಷ್ಯ ಮಾಡದೇ, ಕಚ್ಚಿದ ಅಥವಾ ಪರಚಿದ ಜಾಗವನ್ನು ಸೋಪು, ನೀರಿನಿಂದ ತೊಳೆದು ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೇಬೀಸ್ ಚುಚ್ಚುಮದ್ದು ಪಡೆಯಲು ಸೂಚಿಸಬೇಕು ಎಂದು ನಿರ್ದೇಶನ ನೀಡಿದರು. ಸಾರ್ವಜನಿಕರು ಸಹ ಸಾಕಿದ ಅಥವಾ ಯಾವುದೇ ಅಪರಿಚಿತ ನಾಯಿ, ಯಾವುದೇ ಪ್ರಾಣಿ ಕಚ್ಚಿದಲ್ಲಿ ನಿರ್ಲಕ್ಷ್ಯ ಮಾಡದೇ ಹತ್ತಿರದ…
ಬೆಂಗಳೂರು : ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ ಅಡಿ ನೇಮಕಾತಿಗೆ ಸಂಬಂಧಿಸಿದಂತೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಒಂದು ಬಾರಿ ಮಾತ್ರ ಅನ್ವಯಿಸಿ ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷ ಸಡಿಲಗೊಳಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ 5 ವರ್ಷಗಳಿಗೆ ಸಡಿಲಿಕೆ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 29-09-2025ರ ಆದೇಶದಲ್ಲಿ ದಿನಾಂಕ 06-09-2025ರ ಆದೇಶವನ್ನು ಹಿಂಪಡೆದು, ದಿನಾಂಕ 31-12-2027ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು…
ಭಾರತೀಯ ಅಂಚೆ ಇಲಾಖೆ (ಇಂಡಿಯಾ ಪೋಸ್ಟ್) ದೇಶಾದ್ಯಂತ ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್) ಹುದ್ದೆಗಳ ನೇಮಕಾತಿಗಾಗಿ ಬೃಹತ್ ಅಧಿಸೂಚನೆಯನ್ನು ಬಿಡುಗಡೆ ಮಾಡಲು ಸಜ್ಜಾಗಿದೆ. ಒಟ್ಟು 28,740 (ನಿರೀಕ್ಷಿತ) ಹುದ್ದೆಗಳ ಭರ್ತಿಗೆ ಜನವರಿ 31 ರಂದು ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಅದು ಪ್ರಕಟಿಸಿದೆ. ಒಟ್ಟು ಹುದ್ದೆಗಳು: 28,740 (ಅಂದಾಜು) ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ್ (ಜಿಡಿಎಸ್), ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ), ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ). ಆಯ್ಕೆ ಪ್ರಕ್ರಿಯೆ: ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. 10 ನೇ ತರಗತಿಯಲ್ಲಿ ಪಡೆದ ಅಂಕಗಳ (ಮೆರಿಟ್) ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು. ವಯೋಮಿತಿ: ಅಭ್ಯರ್ಥಿಗಳು 18 ರಿಂದ 40 ವರ್ಷ ವಯಸ್ಸಿನವರಾಗಿರಬೇಕು. (ನಿಯಮಗಳ ಪ್ರಕಾರ ಎಸ್ಸಿ, ಎಸ್ಟಿ ಮತ್ತು ಬಿಸಿಗಳಿಗೆ ವಯಸ್ಸಿನ ಸಡಿಲಿಕೆ ನೀಡಲಾಗುತ್ತದೆ). ಅಧಿಸೂಚನೆ ಮತ್ತು ಅರ್ಜಿ ಸಲ್ಲಿಕೆ ಆರಂಭ: ಜನವರಿ 31, 2026. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ…














