Author: kannadanewsnow57

ನವದೆಹಲಿ : ರಾಜ್ಯದ ಪಡಿತರ ಚೀಟಿದಾರರಿಗೆ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷ ಫೆಬ್ರವರಿಗೆ ಇಂದಿರಾ ಕಿಟ್ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿಯಲ್ಲಿ ‘ಇಂದಿರಾ ಗಾಂಧಿ’ ಹೆಸರಿನ ಹೊಸ ರೇಷನ್ ಕಿಟ್ ಅನ್ನು ಪರಿಚಯಿಸಲಾಗುವುದು. ಈ ಕಿಟ್‌ನಲ್ಲಿ ಬೇಳೆ, ಎಣ್ಣೆ, ಉಪ್ಪು ಮತ್ತು ಸಕ್ಕರೆ ಇರುತ್ತದೆ ಎಂದು ಸಚಿವರು ವಿವರಿಸಿದರು. ಪಡಿತರ ಚೀಟಿದಾರರ ಸಂಖ್ಯೆಗೆ ಅನುಗುಣವಾಗಿ ಮೂರು ವಿಭಾಗಗಳಾಗಿ ವಿಂಗಡಿಸಿ ಈ ಕಿಟ್‌ನಲ್ಲಿ ಆಹಾರ ಪದಾರ್ಥಗಳನ್ನು ವಿತರಿಸಲಾಗುವುದು. ಒಬ್ಬರು ಅಥವಾ ಇಬ್ಬರು ಸದಸ್ಯರಿದ್ದರೆ ಕಿಟ್‌ನಲ್ಲಿ 750 ಗ್ರಾಂ ತೊಗರಿ ಬೇಳೆ, ಅರ್ಧ ಲೀಟರ್‌ ಅಡುಗೆ ಎಣ್ಣೆ, ತಲಾ ಅರ್ಧ ಕಿಲೋ ಸಕ್ಕರೆ ಮತ್ತು ಉಪ್ಪು, ಮೂವರು ಅಥವಾ ನಾಲ್ವರು ಸದಸ್ಯರಿದ್ದರೆ ಒಂದೂವರೆ ಕಿಲೋ ಗ್ರಾಂ ತೊಗರಿ ಬೇಳೆ, ಒಂದು ಲೀಟರ್‌ ಅಡುಗೆ ಎಣ್ಣೆ, ತಲಾ ಒಂದು ಕಿಲೋ ಸಕ್ಕರೆ ಮತ್ತು ಉಪ್ಪು, ಐವರು ಅಥವಾ ಅದಕ್ಕಿಂತ…

Read More

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನಡೆದ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೋರ್ಟಿಗೆ ಟಾರ್ಸಿಟ್ ಹಾಗೂ ಸುಳ್ಳು ಸಾಕ್ಷಿ ವರದಿ ಸಲ್ಲಿಸಲಾಯಿತು ತನಿಕ ಅಧಿಕಾರಿ ಜಿತೇಂದ್ರ ಕುಮಾರ್ ನೇತೃತ್ವದಲ್ಲಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಲಾಯಿತು. ಹೌದು ಬೆಳ್ತಂಗಡಿ ಕೋರ್ಟಿಗೆ ಎಸ್ಐಟಿ ಅಧಿಕಾರಿಗಳು ಚಾರ್ಜ್ ಶೀಟ್ ಮತ್ತು ಸುಳ್ಳು ಸಾಕ್ಷಿ ವರದಿಯನ್ನು ಸಲ್ಲಿಸಿದೆ. ಸುಮಾರು 3923 ಪುಟಗಳ ವರದಿಯನ್ನು ಅಧಿಕಾರಿಗಳು ಸಲ್ಲಿ ಸಿದರು. ಸೆಕ್ಷನ್ 25 ರ ಅಡಿಯಲ್ಲಿ ಸುಳ್ಳು ಸಾಕ್ಷಿ ವರದಿ ಸಲ್ಲಿಸಿತು. , ಬೆಳ್ತಂಗಡಿಯ ಹೆಚ್ಚುವರಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದೆ. ಷಡ್ಯಂತರದಲ್ಲಿ ಬುರುಡೆ ಚಿನ್ನಯ್ಯ ಸೇರಿದಂತೆ ಆರು ಮಂದಿ ಭಾಗಿಯಾಗಿದ್ದಾರೆ ಎಂದು ಎಸ್ಐಟಿ ಚಾರ್ಜ್ ಶೀಟ್ನಲ್ಲಿ ಉಲ್ಲೇಖ ಮಾಡಿದೆ. ಚೆನ್ನಯ್ಯ, ಮಹೇಶ್ ತಿಮ್ಮರೋಡಿ, ಗಿರೀಶ್ ಮಟಣ್ಣನವರ್, ಜಯಂತ್ ಟಿ, ವಿಠ್ಠಲ್ ಗೌಡ ಹಾಗೂ ಸುಜಾತಾ ಭಟ್ ಈ ರೀತಿ ಷಡ್ಯಂತರ ರೂಪಿಸಿದ್ದರು ಎಂದು ಅಧಿಕಾರಿಗಳು ಉಲ್ಲೇಖಿಸಿದ್ದು, 7 ಫೈಲ್ಗಳಲ್ಲಿ ಎಸ್ಐಟಿ ಅಧಿಕಾರಿಗಳು ವರದಿ ತಯಾರು…

Read More

ಬೆಂಗಳೂರು : ನಟಉಪೇಂದ್ರ ಅವರು ಇತ್ತೀಚೆಗೆ ತಮಗಾದ ಸೈಬರ್ ವಂಚನೆಯ ಅನುಭವವನ್ನು ಮನಮುಟ್ಟುವಂತೆ ಹಂಚಿಕೊಂಡಿದ್ದಾರೆ. ಈ ಕುರಿತು ಬೆಂಗಳೂರು ನಗರ ಪೊಲೀಸ್ ಇಲಾಖೆಯು ಟ್ವಿಟರ್ ನಲ್ಲಿ ವಿಡಿಯೋ ಹಂಚಿಕೊಂಡಿದ್ದು, ವಾಸ್ತವ ಕಥೆ. ನಿಜವಾದ ವಂಚನೆ.ಉಪೇಂದ್ರ ಅವರು ಇತ್ತೀಚೆಗೆ ತಮಗಾದ ಸೈಬರ್ ವಂಚನೆಯ ಅನುಭವವನ್ನು ಮನಮುಟ್ಟುವಂತೆ ಹಂಚಿಕೊಂಡಿದ್ದಾರೆ — ಮತ್ತು ಪೊಲೀಸರ ತ್ವರಿತ ಕ್ರಮದಿಂದ ಆರೋಪಿ ಬೆಳಕಿಗೆ ಬಂದದ್ದು ಹೇಗೆಂದು ತಿಳಿಸಿದ್ದಾರೆ. ಈ ಸಂಭಾಷಣೆಯನ್ನು ವೀಕ್ಷಿಸಿ, ನೀವೂ ಸೈಬರ್ ಮೋಸದಿಂದ ನಿಮ್ಮನ್ನು ನೀವು ಹೇಗೆ ರಕ್ಷಿಸಿಕೊಳ್ಳಬೇಕೆಂದು ತಿಳಿಯಿರಿ. https://twitter.com/BlrCityPolice/status/1991486928701779971?s=20

Read More

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ತಮಿಳುನಾಡಿನ ಕೊಯಮತ್ತೂರಿನಲ್ಲಿ 18,000 ಕೋಟಿ ರೂಪಾಯಿಗಳ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21 ನೇ ಕಂತನ್ನು ಬಿಡುಗಡೆ ಮಾಡಿದರು, ಇದು ದೇಶಾದ್ಯಂತ 9 ಕೋಟಿಗೂ ಹೆಚ್ಚು ರೈತರಿಗೆ ಪ್ರಯೋಜನವನ್ನು ನೀಡಿತು. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ, ಅರ್ಹ ರೈತರು ಪ್ರತಿ ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳನ್ನು ಪಡೆಯುತ್ತಾರೆ, ಇದು ವಾರ್ಷಿಕವಾಗಿ 6,000 ರೂ. ಈ ಹಣವನ್ನು ಪ್ರತಿ ವರ್ಷ ಮೂರು ಕಂತುಗಳಲ್ಲಿ ನೀಡಲಾಗುತ್ತದೆ – ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. 21 ನೇ ಕಂತನ್ನು ನೇರವಾಗಿ ಫಲಾನುಭವಿಗಳ ಮೊತ್ತಕ್ಕೆ ಡಿಬಿಟಿ ಮೂಲಕ ಕಳುಹಿಸಲಾಯಿತು, ಆದರೂ ಹಲವಾರು ಅರ್ಹ ರೈತರು ಇನ್ನೂ ತಮ್ಮ ಖಾತೆಗಳಲ್ಲಿ 2000 ರೂ.ಗಳಿಗಾಗಿ ಕಾಯುತ್ತಿದ್ದಾರೆ. ಪಿಎಂ ಕಿಸಾನ್ 21 ನೇ ಕಂತು ಸಿಗದಿರುವ ಹಿಂದೆ ಹಲವು ಕಾರಣಗಳಿರಬಹುದು. ಸಾಮಾನ್ಯವಾದವುಗಳೆಂದರೆ: ಅಪೂರ್ಣ ಇ-ಕೆವೈಸಿ, ಪರಿಶೀಲಿಸದ ಭೂ ದಾಖಲೆಗಳು ಮತ್ತು ಅರ್ಜಿಯಲ್ಲಿ ತಪ್ಪಾದ…

Read More

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಶಿವಪುರ ಸಮೀಪದ ನವಿಲುಗುಡ್ಡದ ಬಂಡೆಯ ಬಳಿ ತೋಟದ ಮನೆಯ ಎದುರು ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದ ಘಟನೆ ನಡೆದಿದೆ. ಬೆಂಗಳೂರಿನ ರಾಮಚಂದ್ರಪ್ಪ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ ಧಾರವಾಡದ ಈ ದಂಪತಿ ಕೆಲಸ ಮಾಡಿಕೊಂಡಿದ್ದಾರೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕಿಯನ್ನು ಎಳೆದೊಯ್ದಿದ್ದು, ಸದ್ಯ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಸವರಾಜ ಮತ್ತು ರೇಣುಕಾ ದಂಪತಿಯ ಪುತ್ರಿ ಸಾನ್ವಿಯನ್ನು ಚಿರತೆ ಹೊತ್ತೊಯ್ದಿದಿತ್ತು. ಇದೀಗ ಪೊಲೀಸರು ಮತ್ತು ಅರಣ್ಯಇಲಾಖೆ ಸಿಬ್ಬಂದಿಗಳು ಬಾಲಕಿಯ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ.

Read More

ಬೆಂಗಳೂರು : ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯಲ್ಲಿನ ಸೋರಿಕೆಯನ್ನು ತಡೆಯಲು ‘ಎಲೆಕ್ಟ್ರಾನಿಕ್ ಪಾಯಿಂಟ್ ಆಫ್ ಸೇಲ್ಸ್’ ಎಂಬ ಮೊಬೈಲ್ ಅಪ್ಲಿಕೇಶನ್ ವ್ಯವಸ್ಥೆಯನ್ನು ಪರಿಚಯಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನಿರ್ಧರಿಸಿದೆ. ಗ್ರಾಹಕರಿಗೆ ಪಡಿತರ ವಿತರಿಸುವಾಗ ತೂಕದಲ್ಲಿ ಮೋಸವಾಗುವುದನ್ನು ತಡೆಯಲು ಕೇಂದ್ರ ಸರಕಾರದ ಸೂಚನೆ ಮೇರೆಗೆ ತೂಕದ ಯಂತ್ರವನ್ನು ಬಯೋಮೆಟ್ರಿಕ್‌ಗೆ ಸಂಯೋಜಿಸಲು ನಿರ್ಧರಿಸಲಾಗಿದೆ. ಇದರಿಂದ ತೂಕದಲ್ಲಿ ವ್ಯತ್ಯಾಸವಾದರೆ ಗ್ರಾಹಕರಿಗೆ ಗೊತ್ತಾಗಲಿದೆ. ಮೊಬೈಲ್ ಅಪ್ಲಿಕೇಶನ್, ಸರಕಾರದ ಕೇಂದ್ರೀಕೃತ ದತ್ತಾಂಶದೊಂದಿಗೆ ಸಂಪರ್ಕ ಹೊಂದಿರುತ್ತದೆ. ಈ ಕೇಂದ್ರೀಕೃತ ವ್ಯವಸ್ಥೆಯಿಂದ ಫಲಾನುಭವಿಗಳು ರಾಜ್ಯದ ಯಾವುದೇ ಪ್ರದೇಶದಲ್ಲಿ ಪಡಿತರ ಪಡೆಯುವುದನ್ನು ಖಚಿತಪಡಿಸುತ್ತದೆ. ಹೀಗಾಗಿ ಕರ್ನಾಟಕದಲ್ಲಿ ಅಳವಡಿಸಲು ತೀರ್ಮಾನಿಸಲಾಗಿದ್ದು, ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಅನುಕೂಲವಾಗುವಂತೆ ಸರಕಾರ ಹೊಸ ಮೊಬೈಲ್ ಅಪ್ಲಿಕೇಶನ್ ಪರಿಚಯಿಸಲು ಮುಂದಾಗಿದೆ.

Read More

ರಾಮನಗರ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಬುದ್ಧಿಮಾಂಧ್ಯ ಪುತ್ರಿ ಮೇಲೆ ತಂದೆಯೇ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಂದೆಯೇ ಬುದ್ಧಿಮಾಂಧ್ಯ ಪುತ್ರಿಯ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆತನ ಪತ್ನಿ ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿರುವ ಆರೋಪಿ, ಪತ್ನಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುಡಿದು ಬಂದು ಪುತ್ರಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಅಕ್ಕೂರು ಠಾಣೆ ಪೊಲೀಸರು ಪ್ರಕರಣ ದಾಖಲಾಗಿದೆ.

Read More

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳವನ್ನು ತಡೆಯಲು ಸರ್ವೋಚ್ಛ ನ್ಯಾಯಾಲಯವು ನೀಡಿರುವ ನಿರ್ದೇಶನಗಳನ್ವಯ 10 ಮತ್ತು 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು (ಮಹಿಳಾ ಮತ್ತು ಪುರುಷರು ಒಳಗೊಂಡು) ಹೊಂದಿರುವ ಪ್ರತಿ ಅಂಗಡಿ, ವಾಣಿಜ್ಯ ಸಂಸ್ಥೆ, ಕಾರ್ಖಾನೆ ಮತ್ತು ಇತರೆ ಸಂಸ್ಥೆಗಳ ಮಾಲೀಕರು/ ಪಾಲುದಾರರು/ ನಿರ್ದೇಶಕರು ತಮ್ಮ ತಮ್ಮ ಸಂಸ್ಥೆಗಳಲ್ಲಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚಿಸುವುದು ಕಡ್ಡಾಯವಾಗಿದೆ. ಹಲವು ಸಂಸ್ಥೆಗಳು ಇದುವರೆಗೂ ಸಮಿಯನ್ನು ರಚಿಸದಿರುವುದು ಅಥವಾ ರಚಿಸಿರುವ ಬಗ್ಗೆ ಮಾಹಿತಿಯನ್ನು ನೀಡದಿರುವುದು ಕಂಡುಬಂದಿದ್ದು, ನ್ಯಾಯಾಲಯದ ಸೂಚನೆಯನ್ವಯ ಕನಿಷ್ಠ 4 ಸದಸ್ಯರನ್ನೊಳಗೊಂಡ ಆಂತರಿಕ ದೂರು ಸಮಿತಿ ಅಂದರೆ ಆ ಸಮಿತಿಯ ಅಧ್ಯಕ್ಷರು-ಸಂಸ್ಥೆಯ ಹಿರಿಯ ಮಹಿಳಾ ಉದ್ಯೋಗಿಯಾಗಿರಬೇಕು, ಆ ಸಮಿತಿಯಲ್ಲಿ ಮಹಿಳಾ ಸಮಸ್ಯೆಗಳಿಗೆ ಬದ್ಧರಾಗಿರುವ ಸಾಮಾಜಿಕ ಕಾರ್ಯ ಅಥವಾ ಕಾನೂನು ಜ್ಞಾನದಲ್ಲಿ ಅನುಭವ ಹೊಂದಿರುವ ಇಬ್ಬರು ಸಂಸ್ಥೆಯ ನೌಕರರು ಸದಸ್ಯರಿರಬೇಕು ಮತ್ತು ಮಹಿಳಾ ಸಮಸ್ಯೆಗಳಿಗೆ ಬದ್ಧರಾಗಿರುವ ಒಂದು ಸರ್ಕಾರೇತರ ಸಂಸ್ಥೆ ಅಥವಾ ಸಂಘದ ವ್ಯಕ್ತಿಯಾಗಿರುವ ಒಬ್ಬರು ಬಾಹ್ಯ ಸದಸ್ಯರಿರಬೇಕು. ಒಟ್ಟಾರೆ ಆ…

Read More

ಬೆಂಗಳೂರು : ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ ಇತ್ಯಾದಿಗಳ ಅಧಿಕಾರಿ/ ನೌಕರರು ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದು ಉಪಯೋಗಿಸಿದ್ರೆ ದಂಡ ವಿಧಿಸಲಾಗುತ್ತದೆ. ಹೌದು, ಈ ಬಗ್ಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, ಕೆಲವು ಸರ್ಕಾರಿ/ಸರ್ಕಾರದ ನಿಗಮ/ಮಂಡಳಿ/ಪ್ರಾಧಿಕಾರ/ ವಿಶ್ವ ವಿದ್ಯಾಲಯ/ಸಂಸ್ಥೆಯ ಅಧಿಕಾರಿ / ನೌಕರರು ಮತ್ತು ಅವರ ಅವಲಂಬಿತ ಕುಟುಂಬ ವರ್ಗದವರು ಸರ್ಕಾರವು ಬಡತನರೇಖೆಗಿಂತ ಕೆಳಗಿರುವ ಬಡವರಿಗೆ ವಿತರಿಸುವ ಬಿ.ಪಿ.ಎಲ್. ಪಡಿತರ ಚೀಟಿಯನ್ನು ಪಡೆದುಕೊಂಡು, ಸರ್ಕಾರದಿಂದ ವಿತರಿಸುವ ಪಡಿತರ ಮತ್ತು ಇನ್ನಿತರೆ ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದು ಒಬ್ಬ ಸರ್ಕಾರಿ ನೌಕರನಿಗೆ ತರವಲ್ಲದ ವರ್ತನೆಯಾಗಿರುತ್ತದೆ. ಬಿ.ಪಿ.ಎಲ್. ಪಡಿತರ ಚೀಟಿಗಳನ್ನು ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನೀಡುವ ಸೌಲಭ್ಯವಾಗಿದ್ದು, ಇದನ್ನು ಒಬ್ಬ ಸರ್ಕಾರಿ ನೌಕರನಾಗಿ ಉಪಯೋಗಿಸಿಕೊಳ್ಳುವುದು ಅಕ್ಷಮ್ಯ ಅಪರಾಧ. ಒಬ್ಬ ಸರ್ಕಾರಿ ಅಧಿಕಾರಿ/ನೌಕರ ಸರ್ಕಾರದಿಂದ ವೇತನ ಭತ್ಯೆಗಳನ್ನು ಪಡೆಯುತ್ತಿರುವುದರಿಂದ ಯಾವ ರೀತಿಯಲ್ಲೂ ಬಡತನರೇಖೆಗಿಂತ ಕೆಳಗೆ ಬರುವುದಿಲ್ಲ. ಆದುದರಿಂದ, ಒಂದು ವೇಳೆ ಯಾವುದೇ ಸರ್ಕಾರಿ/ ಸರ್ಕಾರದ ನಿಗಮ/ಮಂಡಳಿ/ಪ್ರಾಧಿಕಾರ/ವಿಶ್ವ ವಿದ್ಯಾಲಯ/ಸಂಸ್ಥೆಯ ಅಧಿಕಾರಿ/ನೌಕರ ಅಥವಾ ಆತನ/ಆಕೆಯ ಅವಲಂಬಿತ…

Read More

ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಸ್ತಿಗಳಿಗೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಸಿ, 94-ಸಿಸಿ ಹಾಗೂ 94-ಡಿ ರಡಿಯಲ್ಲಿ ನಿವೇಶನ ಮತ್ತು ಮನೆ ನೀಡುವ ಆಸ್ತಿಗಳಿಗೆ ಇ-ಸ್ವತ್ತು ತಂತ್ರಾಂಶದ ಮೂಲಕ ನಮೂನೆ-9 ಮತ್ತು 11-ಎ ನೀಡಲು ಕೈಗೊಳ್ಳಬೇಕಾದ ಪ್ರಕ್ರಿಯೆಗಳ ಬಗ್ಗೆ ಉಲ್ಲೇಖ (1) ರಲ್ಲಿ ಸರ್ಕಾರದಿಂದ ಆದೇಶ ಹೊರಡಿಸಲಾಗಿರುತ್ತದೆ. ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಪ್ರಕರಣ 94-ಡಿ ರಡಿಯಲ್ಲಿ ಕಂದಾಯ ಇಲಾಖೆಯಿಂದ ವಿತರಣೆ ಮಾಡಲಾದ ಹಕ್ಕು ಪತ್ರಗಳಿಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಉಂಟಾದ ಗೊಂದಲಗಳಿಗೆ ಉಲ್ಲೇಖ (2) ರಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಸದರಿ ಸಭೆಯ…

Read More