Author: kannadanewsnow57

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಾರ್ವಜನಿಕರಿಂದ ಮೊಬೈಲ್ ಕಿತ್ತುಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದ ಕಳ್ಳನೊಬ್ಬ ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿರುವ ವಿಚಿತ್ರ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ನಗರದ ರಸ್ತೆಯೊಂದರಲ್ಲಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದಾಗ, ಆರೋಪಿಯು ಅವರ ಕೈಯಲ್ಲಿದ್ದ ಮೊಬೈಲ್ ಫೋನನ್ನು ಬಲವಂತವಾಗಿ ಕಸಿದುಕೊಂಡು ವೇಗವಾಗಿ ಓಡಲು ಪ್ರಾರಂಭಿಸಿದ್ದಾನೆ. ಮೊಬೈಲ್ ಕಳೆದುಕೊಂಡ ವ್ಯಕ್ತಿ “ಕಳ್ಳ ಕಳ್ಳ” ಎಂದು ಜೋರಾಗಿ ಕಿರುಚುತ್ತಾ ಆತನನ್ನು ಬೆನ್ನಟ್ಟಿದ್ದಾರೆ. ಸಾರ್ವಜನಿಕರು ಕೂಡ ಕಳ್ಳನನ್ನು ಹಿಡಿಯಲು ಆತನ ಹಿಂದೆ ಓಡಿದ್ದಾರೆ. ಜನರು ಮತ್ತು ಸಂತ್ರಸ್ತರು ತನ್ನನ್ನು ಬೆನ್ನಟ್ಟುತ್ತಿರುವುದನ್ನು ಕಂಡು ಗಾಬರಿಗೊಂಡ ಕಳ್ಳ, ಅವರಿಂದ ತಪ್ಪಿಸಿಕೊಳ್ಳಲು ಅತ್ಯಂತ ವೇಗವಾಗಿ ಓಡಲಾರಂಭಿಸಿದ್ದಾನೆ. ಆದರೆ, ಸ್ವಲ್ಪ ದೂರ ಓಡುತ್ತಿದ್ದಂತೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡು, ರಸ್ತೆಯ ಮೇಲೆಯೇ ದಿಢೀರನೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಅಲ್ಲಿಗೆ ಧಾವಿಸಿದ ಸಾರ್ವಜನಿಕರು ಆತನನ್ನು ಪರೀಕ್ಷಿಸಿದಾಗ, ಆತ ಪ್ರಜ್ಞಾಹೀನನಾಗಿರುವುದು ತಿಳಿದುಬಂದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಆತನನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದರೆ ಆತ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಅತಿಯಾದ…

Read More

ಲಡಾಖ್: ವಿಶ್ವದ ಅತ್ಯಂತ ಸುಂದರ ಪ್ರವಾಸಿ ತಾಣಗಳಲ್ಲಿ ಒಂದಾದ ಲಡಾಖ್‌ನಲ್ಲಿ ದೇಶೀಯ ಪ್ರವಾಸಿಗರ ಗುಂಪೊಂದಕ್ಕೆ ಶಾಕಿಂಗ್ ಅನುಭವ ಎದುರಾಗಿದೆ. ಭಾರತದ ಗಡಿಯೊಳಗೆ ಬೈಕ್ ಸವಾರಿ ಮಾಡುತ್ತಿದ್ದ ಪ್ರವಾಸಿಗರ ಐಫೋನ್‌ಗಳು (iPhones) ಹಠಾತ್ತನೆ ಚೀನಾ ನೆಟ್‌ವರ್ಕ್‌ಗೆ ಕನೆಕ್ಟ್ ಆಗಿದ್ದು, ಮೊಬೈಲ್‌ನ ಸಮಯವು ಚೀನಾ ಸ್ಟ್ಯಾಂಡರ್ಡ್ ಟೈಮ್ (CST) ಗೆ ಬದಲಾಗಿದೆ! ಈ ಇಡೀ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ವೈರಲ್ ವಿಡಿಯೋದಲ್ಲೇನಿದೆ? ಬೈಕ್ ಸವಾರರು ಪರ್ವತದ ಕಣಿವೆಯೊಂದರ ಬಳಿ ನಿಂತು ತಮ್ಮ ಮೊಬೈಲ್ ಸ್ಕ್ರೀನ್ ಅನ್ನು ಕ್ಯಾಮೆರಾಗೆ ತೋರಿಸುತ್ತಿರುವ ದೃಶ್ಯ ವಿಡಿಯೋದಲ್ಲಿದೆ. “ನಾವು ಖಂಡಿತವಾಗಿಯೂ ಭಾರತದ ಭೂಭಾಗದಲ್ಲೇ ಇದ್ದೇವೆ. ಆದರೆ ಇದ್ದಕ್ಕಿದ್ದಂತೆ ನಮ್ಮ ಮೊಬೈಲ್‌ಗಳಲ್ಲಿನ ಟೈಮ್ ಜೋನ್ ಚೀನಾ ದೇಶದ ಸಮಯಕ್ಕೆ (CST) ಬದಲಾಗಿದೆ” ಎಂದು ಪ್ರವಾಸಿಗರೊಬ್ಬರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಗಮನಾರ್ಹ ಅಂಶ: ಚೀನಾ ಸ್ಟ್ಯಾಂಡರ್ಡ್ ಟೈಮ್ (CST), ಭಾರತೀಯ ಪ್ರಮಾಣಿತ ಸಮಯಕ್ಕಿಂತ (IST) 2 ಗಂಟೆ 30 ನಿಮಿಷ ಮುಂದಿರುತ್ತದೆ. ಹೀಗಾಗಿ ಪ್ರವಾಸಿಗರು ತೀವ್ರ ಗೊಂದಲಕ್ಕೆ…

Read More

ನವದೆಹಲಿ: ನಾವು ಪ್ರತಿದಿನ ಸೇವಿಸುವ ಆಹಾರ ನಮ್ಮ ಆರೋಗ್ಯವನ್ನು ಕಾಪಾಡಬೇಕು. ಆದರೆ, ಇತ್ತೀಚಿನ ವರದಿಗಳ ಪ್ರಕಾರ, ಕಲುಷಿತ ಹಾಗೂ ಅಸುರಕ್ಷಿತ ಆಹಾರವೇ ಮನುಷ್ಯನ ಪಾಲಿಗೆ ವಿಷವಾಗಿ ಪರಿಣಮಿಸುತ್ತಿದೆ. ಜಗತ್ತಿನಾದ್ಯಂತ ಪ್ರತಿ ವರ್ಷ ಅಸುರಕ್ಷಿತ ಆಹಾರ ಸೇವನೆಯಿಂದಾಗಿ ಸುಮಾರು 1.5 ಮಿಲಿಯನ್ (15 ಲಕ್ಷ) ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಆಹಾರ ಸುರಕ್ಷತೆಯ ಕೊರತೆ, ಬ್ಯಾಕ್ಟೀರಿಯಾ, ವೈರಸ್ ಮತ್ತು ರಾಸಾಯನಿಕಯುಕ್ತ ಆಹಾರ ಸೇವನೆಯಿಂದಾಗಿ ಲಕ್ಷಾಂತರ ಜನರು ತೀವ್ರ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಹಾರದ ಅಪಾಯಗಳು, ರೋಗಲಕ್ಷಣಗಳು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವುದು ಅತ್ಯಗತ್ಯವಾಗಿದೆ. ಆಹಾರ ಕಲುಷಿತಗೊಳ್ಳಲು ಪ್ರಮುಖ ಕಾರಣಗಳು (Risks): ಬ್ಯಾಕ್ಟೀರಿಯಾ ಮತ್ತು ವೈರಸ್‌ಗಳು: ಸಾಲ್ಮೊನೆಲ್ಲಾ (Salmonella), ಇ-ಕೋಲಿ (E. coli) ಮತ್ತು ನೊರೊವೈರಸ್‌ನಂತಹ ಸೂಕ್ಷ್ಮಜೀವಿಗಳು ಆಹಾರ ಮತ್ತು ನೀರಿನ ಮೂಲಕ ದೇಹವನ್ನು ಸೇರಿ ತೀವ್ರ ಹಾನಿ ಉಂಟುಮಾಡುತ್ತವೆ. ರಾಸಾಯನಿಕಗಳ ಬಳಕೆ: ಹಣ್ಣು ಮತ್ತು ತರಕಾರಿಗಳನ್ನು ಬೇಗನೆ ಪಕ್ವಗೊಳಿಸಲು ಬಳಸುವ ವಿಷಕಾರಿ ರಾಸಾಯನಿಕಗಳು ಹಾಗೂ…

Read More

ಕೊಡಗು : ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ತೀವ್ರವಾಗಿ ಕೈಕೊಟ್ಟಿದ್ದು, ಕಾವೇರಿ ನದಿಯ ಒಡಲು ಸಂಪೂರ್ಣವಾಗಿ ಬರಿದಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಜೀವನದಿ ಕಾವೇರಿಯಲ್ಲಿ ನೀರಿನ ಹರಿವು ತೀರಾ ಕ್ಷೀಣಿಸಿದ್ದು, ಕೃಷ್ಣರಾಜಸಾಗರ (KRS) ಜಲಾಶಯದತ್ತ ನೀರು ಹರಿಯುತ್ತಿಲ್ಲ. ಸಾಮಾನ್ಯವಾಗಿ ಜೂನ್ ಮೂರನೇ ವಾರದಲ್ಲಿ ಕಾವೇರಿ ನದಿಯು ಸುಮಾರು 15 ಅಡಿಗೂ ಅಧಿಕ ನೀರಿನೊಂದಿಗೆ ಭೋರ್ಗರೆದು ಹರಿಯುತ್ತಿತ್ತು. ಆದರೆ ಈ ವರ್ಷ ಕೇವಲ ಅರ್ಧದಿಂದ ಒಂದು ಅಡಿಗೆ ನೀರು ಸೀಮಿತವಾಗಿದ್ದು, ನದಿಯ ಒಡಲಿನಲ್ಲಿ ನೀರಿಗಿಂತ ಕಲ್ಲುಗಳೇ ಹೆಚ್ಚಾಗಿ ಕಾಣಿಸುತ್ತಿವೆ. ಕೊಡಗು ಮತ್ತು ಮೈಸೂರು ಗಡಿಯಲ್ಲಿರುವ ಕೊಪ್ಪ ಸೇತುವೆಯ ಬಳಿ ನೀರಿನ ಮಾಪಕದಲ್ಲಿ ತಳಮಟ್ಟದ ಸ್ಥಿತಿ ತಲುಪಿದೆ. ರಾಜ್ಯದಲ್ಲಿ ಈ ಬಾರಿ ಶೇಕಡ 60 ರಷ್ಟು ಮಳೆ ಕೊರತೆಯಾಗಿದೆ ಎಂದು ಹವಮಾನ ವರದಿಗಳು ತಿಳಿಸಿವೆ. ನೀರಿನ ಕೊರತೆಯಿಂದಾಗಿ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಕುಡಿಯುವ ನೀರು ಹಾಗೂ ಕೃಷಿ ಚಟುವಟಿಕೆಗಳಿಗೆ ತೀವ್ರ ಪರದಾಟ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತವು, ಸದ್ಯ ಲಭ್ಯವಿರುವ…

Read More

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನಡುವೆ ಮೇಕೆದಾಟು ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕಾವೇರಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಇತ್ತೀಚಿನ ರಾಜ್ಯಪಾಲರ ಭಾಷಣದ ಮೂಲಕ ತಮಿಳುನಾಡು ಸರ್ಕಾರವು ಮೇಕೆದಾಟು ಯೋಜನೆಗೆ ಮತ್ತೊಮ್ಮೆ ತನ್ನ ತೀವ್ರ ವಿರೋಧವನ್ನು ಪುನರುಚ್ಚರಿಸಿದ್ದು, ಕಾನೂನಾತ್ಮಕವಾಗಿ ಅಡ್ಡಿಪಡಿಸಲು ಮುಂದಾಗಿದೆ. ತಮಿಳುನಾಡಿನ ಈ ನಿಲುವಿಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಕ ಉತ್ತರವನ್ನೇ ನೀಡಿದ್ದಾರೆ. ತಮಿಳುನಾಡು ಸರ್ಕಾರವು ತನ್ನ ರಾಜ್ಯಪಾಲರ ಭಾಷಣವನ್ನು ಬಳಸಿಕೊಂಡು ಮೇಕೆದಾಟು ಯೋಜನೆಗೆ ಕಡ್ಡಾಯವಾಗಿ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕವು ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ತಡೆಯಲು ಕಾನೂನಾತ್ಮಕವಾಗಿ ಹೆಜ್ಜೆ ಇಡಲು ನೆರೆ ರಾಜ್ಯ ತಂತ್ರ ರೂಪಿಸುತ್ತಿದೆ. ತಮಿಳುನಾಡಿನ ಕ್ಯಾತೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿಎಂ ಡಿ.ಕೆ. ಶಿವಕುಮಾರ್, “ಮೇಕೆದಾಟು ಯೋಜನೆ ಕೇವಲ ನನಗೆ ಅಥವಾ ಕರ್ನಾಟಕಕ್ಕೆ ಮಾತ್ರ ಸಂಬಂಧಿಸಿದ್ದಲ್ಲ. ಇದು ಇಡೀ ದಕ್ಷಿಣ ಭಾರತದ ಹೆಮ್ಮೆಯ ಯೋಜನೆಯಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ವಾರ್ಷಿಕವಾಗಿ ಹರಿಸಬೇಕಾದ 177.25 ಟಿಎಂಸಿ ನೀರನ್ನು ಬಿಡಲು ಕರ್ನಾಟಕ ಎಂದಿಗೂ ಬದ್ಧವಾಗಿದೆ. ವಾಸ್ತವವಾಗಿ,…

Read More

ನವದೆಹಲಿ: ಜೂನ್ 21 ರಂದು ನಡೆಯಲಿರುವ NEET-UG 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ (ಜೂನ್ 19) ಎತ್ತಿಹಿಡಿದಿದೆ. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯ (IT Act) ಸೆಕ್ಷನ್ 69A ಅಡಿಯಲ್ಲಿ ಟೆಲಿಗ್ರಾಂನಂತಹ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರಕ್ಕೆ ಪೂರ್ಣ ಅಧಿಕಾರವಿದೆ ಎಂದು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರ ರಜಾಕಾಲದ ಪೀಠವು ತೀರ್ಪು ನೀಡಿದೆ. “ಸರ್ಕಾರದ ಆದೇಶವು ಸೂಕ್ತ ಆಧಾರಗಳಿಂದ ಕೂಡಿದೆ. ಕಾನೂನಿನ ಚೌಕಟ್ಟಿನಲ್ಲಿ ಇಂತಹ ಕ್ರಮಗಳನ್ನು ಕೈಗೊಳ್ಳುವುದು ಅಸಮಂಜಸವಲ್ಲ” ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. 150 ಮಿಲಿಯನ್ ಬಳಕೆದಾರರ ಹಕ್ಕು: ಇದಕ್ಕೂ ಮುನ್ನ ಗುರುವಾರದ ವಿಚಾರಣೆಯ ಸಂದರ್ಭದಲ್ಲಿ, “ಕೆಲವೇ ಕೆಲವು ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂಬ ಕಾರಣಕ್ಕೆ, ಭಾರತದಲ್ಲಿರುವ ಬರೋಬ್ಬರಿ 150 ಮಿಲಿಯನ್ (15 ಕೋಟಿ) ಟೆಲಿಗ್ರಾಂ ಬಳಕೆದಾರರ ಹಕ್ಕನ್ನು ಹೇಗೆ ಕಸಿದುಕೊಳ್ಳಲು…

Read More

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೆನ್ನೆ ರಾತ್ರಿ ವಿಶೇಷ ವಿಮಾನದ ಮೂಲಕ ತಿರುಪತಿಗೆ ಪ್ರಯಾಣ ಬೆಳೆಸಿದ್ದಾರೆ. ಇಂದು ಮುಂಜಾನೆ ಅವರು ತಮ್ಮ ಪತ್ನಿ ಸಮೇತರಾಗಿ ಪವಿತ್ರ ತಿರುಮಲ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪರಿಷತ್ ಚುನಾವಣೆಯಲ್ಲಿ ನಾಲ್ಕು ಅಭ್ಯರ್ಥಿಗಳು ಸಾಕು ಎಂದಿದ್ದರೂ ಸಹ, ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿ ರಾಜಕೀಯ ತಂತ್ರಗಾರಿಕೆ ನಡೆಸಲಾಗಿತ್ತು. ಈ ಚುನಾವಣಾ ಆಪರೇಷನ್ ಯಶಸ್ವಿಯಾಗಿದ್ದು, ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಅವರು ಬರೊಬ್ಬರಿ 32 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದಾರೆ. ಈ ಮಹತ್ತರ ರಾಜಕೀಯ ಯಶಸ್ಸಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ತಿರುಪತಿ ತಿಮ್ಮಪ್ಪನಿಗೆ ಕೃತಜ್ಞತೆ ಸಲ್ಲಿಸಲು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

Read More

ಮೈಸೂರು: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮೈಸೂರಿನ ಮರಿಮಲ್ಲಪ್ಪ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ಕಾಲೇಜು ಆವರಣದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಯರಗನಹಳ್ಳಿ ಗ್ರಾಮದ ವೈ.ಕೆ. ಮಾದೇಶ್ ಎಂದು ಗುರುತಿಸಲಾಗಿದೆ. ಅವರು ಮೈಸೂರಿನಲ್ಲಿ ಬಿಎಸ್ಸಿ ಓದುತ್ತಿರುವ ತಮ್ಮ ಅಕ್ಕನೊಂದಿಗೆ ವಾಸವಾಗಿದ್ದು, ಮರಿಮಲ್ಲಪ್ಪ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಶಿಕ್ಷಣ ಪಡೆಯುತ್ತಿದ್ದರು. ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ತರಗತಿಯಿಂದ ಹೊರಬಂದ ಮಾದೇಶ್, ಕಾಲೇಜಿನ ಆವರಣದಲ್ಲಿ ಇದ್ದಾಗ ಏಕಾಏಕಿ ನೆಲಕ್ಕುರುಳಿದ್ದಾರೆ. ಹಿಂಬದಿಯಿಂದ ಬರುತ್ತಿದ್ದ ಸಹಪಾಠಿಗಳು ಕೂಡಲೇ ನೆರವಿಗೆ ಧಾವಿಸಿ ಅವರನ್ನು ಎಬ್ಬಿಸಿದ್ದಾರೆ. ಆದರೆ ಕೆಲ ಹೆಜ್ಜೆಗಳು ನಡೆದ ಬಳಿಕ ಅವರು ಮತ್ತೊಮ್ಮೆ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆದೊಯ್ದರೂ ಬದುಕುಳಿಯಲಿಲ್ಲ ಘಟನೆಯನ್ನು ಗಮನಿಸಿದ ವಿದ್ಯಾರ್ಥಿಗಳು ಹಾಗೂ ಕಾಲೇಜು ಸಿಬ್ಬಂದಿ ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಇದೇ ವೇಳೆ ಪೋಷಕರಿಗೂ ಮಾಹಿತಿ ನೀಡಲಾಗಿದೆ. ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ, ಮಾದೇಶ್ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ.

Read More

ಮೈಸೂರು: ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಜೆಡಿಎಸ್ ಪಾಳಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ.ಚುನಾವಣೆಯಲ್ಲಿ ಮೈತ್ರಿಕೂಟಕ್ಕೆ ಎದುರಾದ ಹಿನ್ನಡೆ ಹಾಗೂ ಅಡ್ಡ ಮತದಾನ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ.ಅತಿಯಾದ ನಂಬಿಕೆಯೇ ನಮಗೆ ಆಘಾತ ತಂದಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ನಾಲ್ಕರಿಂದ ಐದು ಜನ ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ತಮಗೆ ಮೊದಲೇ ನಿರೀಕ್ಷೆಯಿತ್ತು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಯಾರ್ಯಾರು ಕ್ರಾಸ್ ವೋಟ್ ಮಾಡಿದ್ದಾರೆ ಎಂಬ ಸಂಪೂರ್ಣ ಮಾಹಿತಿ ನನ್ನ ಬಳಿ ಇದೆ. ಇದರಿಂದ ನಾನೇನು ವಿಚಲಿತನಾಗಿಲ್ಲ ಮತ್ತು ಇದೇನು ನನಗೆ ಅಚ್ಚರಿ ಮೂಡಿಸಿಲ್ಲ ಎಂದಿದ್ದಾರೆ. ಹೆಚ್.ಡಿ. ದೇವೇಗೌಡರು ಪಕ್ಷದ ನಾಯಕರ ಮೇಲೆ ಇಟ್ಟಿದ್ದ ಅತಿಯಾದ ವಿಶ್ವಾಸ ಮತ್ತು ಆತ್ಮೀಯತೆಯೇ ಇಂದಿನ ಪರಿಸ್ಥಿತಿಗೆ ಕಾರಣ ಎಂದ ಅವರು, ದೊಡ್ಡಗೌಡರ ಗೌರವಕ್ಕೆ ಧಕ್ಕೆ ಬರಬಾರದು ಎಂದು ಹಲವು ಬಾರಿ ಅವರ ತೀರ್ಮಾನಗಳಿಗೆ ತಲೆಬಾಗಿದ್ದಾಗಿ ಹೇಳಿದ್ದಾರೆ. ಜೆಡಿಎಸ್ ನಾಯಕ ಜಿ.ಟಿ. ದೇವೇಗೌಡರ ನಡೆ ಕುರಿತು…

Read More

ಕಲಬುರಗಿ: ಕಾಳಸಂತೆಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲು ನೆರವು ನೀಡುವ ಆರೋಪದ ಮೇಲೆ, ಪಿಎಸ್ಐ ಮತ್ತು ಹೆಡ್ ಕಾನ್ಸ್ಟೇಬಲ್ ಇಬ್ಬರು ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಕಲಬುರಗಿ ಜಿಲೆಯಲ್ಲಿ ನಡೆದಿದೆ.  ಕಲಬುರ್ಗಿ ಜಿಲ್ಲೆಯ ಎಡ್ರಾಮಿ ಪೊಲೀಸ್ ಠಾಣೆಯ ಪಿಎಸ್ ಐ ವಿಶ್ವನಾಥ್ ಮುದ್ದರೆಡ್ಡಿ ಹಾಗೂ ಹೆಡ್ ಕಾನ್ಸ್ಟೇಬಲ್ ಸಿದ್ದಣ್ಣ ಬಿರಾದಾರ್ ಲೋಕಾಯುಕ್ತ ದಾಳಿಯಲ್ಲಿ ಬಂಧನಕ್ಕೊಳಗಾದ ಅಧಿಕಾರಿಗಳಾಗಿದ್ದಾರೆ. ಪ್ರಕರಣದ ಹಿನ್ನೆಲೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಾನೂನುಬಾಹಿರವಾಗಿ ಸಾಗಿಸಲು ಅನುಕೂಲ ಮಾಡಿಕೊಡಲು ಪಿಎಸ್ ಐ ವಿಶ್ವನಾಥ್ ಅವರು ಆನಂದ್ ಕುಸ್ತಿ ಎಂಬುವವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಅಕ್ರಮ ನೆರವಿಗಾಗಿ ಬರೋಬ್ಬರಿ ₹50,000 ಲಂಚದ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಇನ್‌ಸ್ಪೆಕ್ಟರ್ ಅರುಣ್ ಮುರುಗುಂಡಿ ಅವರ ನೇತೃತ್ವದಲ್ಲಿ ನಡೆದ ಈ ಯಶಸ್ವಿ ಕಾರ್ಯಾಚರಣೆಯಲ್ಲಿ, ₹50,000 ನಗದು ಹಣದೊಂದಿಗೆ ಪಿಎಸ್ ಐ ವಿಶ್ವನಾಥ್ ಮತ್ತು ಹೆಡ್ ಕಾನ್ಸ್ಟೇಬಲ್ ಸಿದ್ದಣ್ಣ ಇಬ್ಬರನ್ನೂ ರೆಡ್‌ ಹ್ಯಾಂಡ್…

Read More