Author: kannadanewsnow57

ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿ, ಮುಂಜಾನೆಯ ಆಫೀಸ್ ಗಡಿಬಿಡಿ ಮತ್ತು ಮನೆಯ ಕೆಲಸಗಳ ಒತ್ತಡದಿಂದಾಗಿ ಅನೇಕರು ಉಪಾಹಾರ (Breakfast) ಸೇವಿಸದೆ ಮನೆಯಿಂದ ಹೊರಡುತ್ತಿದ್ದಾರೆ. ಇನ್ನೂ ಕೆಲವರು ನಾಲಿಗೆಗೆ ರುಚಿ ನೀಡುವ ಪೂರಿ, ವಡೆ, ಬ್ರೆಡ್-ಜಾಮ್ಗಳಂತಹ ಆಹಾರಗಳನ್ನು ಸೇವಿಸಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಆದರೆ, ಬೆಳಗಿನ ಜಾವ ಸರಿಯಾದ ಉಪಾಹಾರ ಸೇವಿಸದಿರುವುದು ಅಥವಾ ಅನಾರೋಗ್ಯಕರ ಆಹಾರವನ್ನು ತಿನ್ನುವುದರಿಂದ ಭವಿಷ್ಯದಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ವೈದ್ಯಕೀಯ ತಜ್ಞರು ಎಚ್ಚರಿಸುತ್ತಿದ್ದಾರೆ. ನಿಮ್ಮನ್ನು ವೈದ್ಯರ ಬಳಿಗೆ ಹೋಗದಂತೆ ತಡೆದು, ಮನೆಯಲ್ಲೇ ಸಂಪೂರ್ಣ ಆರೋಗ್ಯವಾಗಿರಲು ಸಹಾಯ ಮಾಡುವ ಕೆಲವು ಪ್ರಮುಖ ಬ್ರೇಕ್ಫಾಸ್ಟ್ ನಿಯಮಗಳು ಮತ್ತು ಆಘಾತಕಾರಿ ಸತ್ಯಗಳು ಇಲ್ಲಿವೆ. ಪೂರಿ, ವಡೆ ತಿನ್ನುತ್ತಿದ್ದೀರಾ? ಎಚ್ಚರ! ಬೆಳಗ್ಗೆ ಎದ್ದ ತಕ್ಷಣ ಟಿಫಿನ್ ಸೆಂಟರ್ಗಳಿಗೆ ಮುಗಿಬಿದ್ದು ತಿನ್ನುವ ಪೂರಿ ಮತ್ತು ವಡೆಗಳಲ್ಲಿ ಕ್ಯಾಲೊರಿ ಹಾಗೂ ಸ್ಯಾಚುರೇಟೆಡ್ ಫ್ಯಾಟ್ (ಕೊಬ್ಬು) ಪ್ರಮಾಣ ತುಂಬಾ ಹೆಚ್ಚಿರುತ್ತದೆ. ಸಾಮಾನ್ಯವಾಗಿ ಒಂದು ಪ್ಲೇಟ್ ಪೂರಿ ಅಥವಾ ವಡೆ ತಿನ್ನುವುದರಿಂದ ದೇಹಕ್ಕೆ ಸುಮಾರು 500 ರಿಂದ 600…

Read More

ಬೆಳಗಾವಿ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಗೂಡ್ಸ್ ಆಟೋವೊಂದು ಬೈಕ್‌ ಗೆ ನೇರವಾಗಿ ಡಿಕ್ಕಿ ಹೊಡೆದ ಪರಿಣಾಮ, 9 ತಿಂಗಳ ಕಂದಮ್ಮ ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ರಾಯಬಾಗ ತಾಲ್ಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಮಹಾಂತೇಶ್ ಮಾನೆ (27), ಅವರ ಪತ್ನಿ ಸಾಕ್ಷಿ ಮಾನೆ (23) ಮತ್ತು ಒಂಬತ್ತು ತಿಂಗಳ ಗಂಡು ಮಗು ಸಮರ್ಥ ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಮತ್ತೊಂದು ಮಗುವಿಗೆ ಅಪಘಾತದಲ್ಲಿ ತೀವ್ರ ಸ್ವರೂಪದ ಗಾಯಗಳಾಗಿದ್ದು, ಸದ್ಯ ಮಗುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಮಹಾಂತೇಶ್ ಅವರು ತಮ್ಮ ಕುಟುಂಬದೊಂದಿಗೆ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ರಾಯಬಾಗ ಪಟ್ಟಣದ ಹೊರವಲಯದ ರಸ್ತೆಯಲ್ಲಿ ಎದುರುಗಡೆಯಿಂದ ನಿಯಮ ಮೀರಿ ರಾಂಗ್ ಸೈಡ್‌ನಲ್ಲಿ ಬಂದ ಗೂಡ್ಸ್ ಆಟೋ ಇವರ ಬೈಕ್‌ಗೆ ಜೋರಾಗಿ ಡಿಕ್ಕಿ ಹೊಡೆದಿದೆ.…

Read More

ಬೆಂಗಳೂರು:ಪತಿಯ ವೃತ್ತಿಜೀವನ ಹಾಗೂ ಸಮಾಜದಲ್ಲಿ ಆತನಿಗಿರುವ ಗೌರವಕ್ಕೆ ಕಳಂಕ ತರಬೇಕೆಂಬ ಉದ್ದೇಶದಿಂದ ಆತನ ಮೇಲಧಿಕಾರಿಗಳಿಗೆ ಸುಳ್ಳು ದೂರು ನೀಡುವುದು ಮತ್ತು ಇಲ್ಲಸಲ್ಲದ ಆರೋಪಗಳ ಪತ್ರ ಬರೆಯುವುದು ಕೇವಲ ಜಗಳವಲ್ಲ, ಅದು ಕಟು ‘ಮಾನಸಿಕ ಕ್ರೌರ್ಯ’ ಎಂದು ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪು ಪ್ರಕಟಿಸಿದೆ. ಭಾರತೀಯ ಸೇನೆಯಲ್ಲಿ ದೇಶ ಕಾಯುವ ಸೈನಿಕನೊಬ್ಬನಿಗೆ ಫ್ಯಾಮಿಲಿ ಕೋರ್ಟ್ ನೀಡಿದ್ದ ವಿಚ್ಛೇದನವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಇದನ್ನು ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಜಯಂತ್ ಬ್ಯಾನರ್ಜಿ ಹಾಗೂ ಕೆ. ರಾಜೇಶ್ ರೈ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು ಸುಪ್ರೀಂಕೋರ್ಟ್‌ನ ಹಳೆಯ ತೀರ್ಪುಗಳನ್ನು ಉಲ್ಲೇಖಿಸಿ ಈ ಐತಿಹಾಸಿಕ ಆದೇಶ ನೀಡಿದೆ. ನ್ಯಾಯಾಲಯದ ಪ್ರಕಾರ, ಪತ್ನಿಯ ನಿರಂತರ ಸುಳ್ಳು ಆರೋಪಗಳು ಮತ್ತು ಆಕೆಯ ನಡವಳಿಕೆಯಿಂದಾಗಿ ಪತಿಯು ತೀವ್ರ ಮಾನಸಿಕ ಕಿರುಕುಳ ಅನುಭವಿಸುವಂತಾಗಿದೆ. ಹೀಗಾಗಿ ಕೌಟುಂಬಿಕ ನ್ಯಾಯಾಲಯ ಈ ಹಿಂದೆ ನೀಡಿದ್ದ ವಿಚ್ಛೇದನದ ತೀರ್ಪು ಸಂಪೂರ್ಣ ನ್ಯಾಯಸಮ್ಮತವಾಗಿದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಈ ದಂಪತಿಗೆ 2008ರಲ್ಲಿ ಕೊಡಗಿನಲ್ಲಿ ಮದುವೆಯಾಗಿದ್ದು, ಇವರಿಗೊಬ್ಬ…

Read More

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವದಿಂದಾಗಿ, ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಕಳೆದ ಎರಡು ದಿನಗಳಿಂದ ಐಟಿ ಸಿಟಿಯಲ್ಲಿ ಆರಂಭವಾಗಿರುವ ಮಳೆ ಆಟ ಇಂದೂ ಮುಂದುವರಿಯಲಿದೆ. ಮಧ್ಯಾಹ್ನದ ನಂತರ ನಗರದಾದ್ಯಂತ ದಟ್ಟ ಕಾರ್ಮೋಡಗಳು ಕವಿಯಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಇದರಿಂದಾಗಿ ಬೆಂಗಳೂರಿನ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್‌ಗೆ ಕುಸಿಯಲಿದ್ದು, ಹವಾಮಾನ ಸಂಪೂರ್ಣ ತಂಪಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಬೆಳಗಿನಿಂದಲೇ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ವೇಳೆಗೆ ಭಾರಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಪ್ರಚಂಡ ಮಳೆಯಾಗುವ ಸಾಧ್ಯತೆ ಇದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ರಾಜ್ಯದ ಇತರೆ ಜಿಲ್ಲೆಗಳಲ್ಲೂ ಹವಾಮಾನ ಬದಲಾಗಲಿದ್ದು, ಬಲವಾದ ಗಾಳಿಯೊಂದಿಗೆ ಮಳೆ ಸುರಿಯುವ ಮುನ್ಸೂಚನೆ ಇದೆ. ಒಟ್ಟಾರೆಯಾಗಿ…

Read More

ಅಜ್ಮೀರ್ : ಕೆಲವೊಮ್ಮೆ ವೈದ್ಯಲೋಕದ ಸಣ್ಣ ಬೇಜವಾಬ್ದಾರಿಯೂ ರೋಗಿಗಳಿಗೆ ದೊಡ್ಡ ಕಂಟಕವಾಗಿ ಪರಿಣಮಿಸುತ್ತದೆ. ಇಂತಹದ್ದೇ ಒಂದು ಶಾಕಿಂಗ್ ಘಟನೆ ರಾಜಸ್ಥಾನದ ಅಜ್ಮೀರ್ನಲ್ಲಿ ನಡೆದಿದೆ. ಹಲ್ಲು ನೋವಿನಿಂದ ಆಸ್ಪತ್ರೆಗೆ ಬಂದ ಮಹಿಳೆಯೊಬ್ಬರಿಗೆ ದಂತ ವೈದ್ಯರು ಮರೆಯಲಾಗದ ಶಾಕ್ ನೀಡಿದ್ದಾರೆ. ಹುಳುಕಾಗಿದ್ದ ಹಲ್ಲನ್ನು ಕೀಳುವ ಬದಲಿಗೆ, ಪಕ್ಕದಲ್ಲೇ ಇದ್ದ ಆರೋಗ್ಯವಂತ ಹಲ್ಲನ್ನು ಕಿತ್ತು ಭೀಕರ ಎಡವಟ್ಟು ಮಾಡಿದ್ದಾರೆ! ಆಸ್ಪತ್ರೆಯಲ್ಲಿ ಹೈಡ್ರಾಮಾ: ರೋಗಿ ಕಂಗಾಲು! ಅಜ್ಮೀರ್ನ ಪ್ರಸಿದ್ಧ ಜವಾಹರಲಾಲ್ ನೆಹರು ಆಸ್ಪತ್ರೆಯ (JLN Hospital Ajmer) ದಂತ ವಿಭಾಗದಲ್ಲಿ ಈ ಘಟನೆ ನಡೆದಿದೆ. ಶಬಾನಾ ಖಾನ್ ಎಂಬ ಮಹಿಳೆ ಕಳೆದ ಎರಡು ತಿಂಗಳಿನಿಂದ ಅಸಹನೀಯ ಹಲ್ಲು ನೋವಿನಿಂದ ನರಳುತ್ತಿದ್ದರು. ತಪಾಸಣೆ ನಡೆಸಿದ್ದ ವೈದ್ಯರು, ಹಲ್ಲು ಪೂರ್ತಿ ಹುಳುಕಾಗಿದ್ದು ಅದನ್ನು ತೆಗೆಯಲೇಬೇಕು ಎಂದು ಸೂಚಿಸಿದ್ದರು. ವೈದ್ಯರ ಸಲಹೆಯಂತೆ ಶಬಾನಾ ಅವರು ತಮ್ಮ ಪತಿಯೊಂದಿಗೆ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದರು. ಆದರೆ ಆಪರೇಷನ್ ಥಿಯೇಟರ್ನಲ್ಲಿ ನಡೆದಿದ್ದೇ ಬೇರೆ. ವೈದ್ಯರು ನೋವಿನ ಹಲ್ಲನ್ನು ಗುರುತಿಸುವಲ್ಲಿ ಯಡವಟ್ಟು ಮಾಡಿ, ಪಕ್ಕದಲ್ಲೇ ಇದ್ದ ಗಟ್ಟಿಮುಟ್ಟಾದ…

Read More

ನವದೆಹಲಿ : ವಾಹನ ಸವಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್ (IGL) ಸಂಕುಚಿತ ನೈಸರ್ಗಿಕ ಅನಿಲ (CNG) ಬೆಲೆಯನ್ನು ಪ್ರತಿ ಕೆಜಿಗೆ 2 ರೂಪಾಯಿಯಷ್ಟು ಹೆಚ್ಚಳ ಮಾಡಿದೆ. ವಿಶೇಷವೆಂದರೆ, ಇದೇ ವಾರದಲ್ಲೇ ಸಿಎನ್‌ಜಿ ದರವನ್ನು 2 ರೂಪಾಯಿ ಹೆಚ್ಚಿಸಲಾಗಿತ್ತು, ಇದೀಗ ಮತ್ತೊಮ್ಮೆ ಬೆಲೆ ಏರಿಕೆ ಮಾಡಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಹನ ಸವಾರರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ದೆಹಲಿಯಲ್ಲಿ ಸಂಕುಚಿತ ನೈಸರ್ಗಿಕ ಅನಿಲ (CNG) ಬೆಲೆಯನ್ನು ಪ್ರತಿ ಕೆಜಿಗೆ 2 ರೂಪಾಯಿ ಹೆಚ್ಚಿಸಲಾಗಿದೆ. ಈ ಹೊಸ ಏರಿಕೆಯೊಂದಿಗೆ ದೆಹಲಿಯಲ್ಲಿ ಸಿಎನ್‌ಜಿ ದರ ಈಗ ಪ್ರತಿ ಕೆಜಿಗೆ ₹83.09 ಕ್ಕೆ ತಲುಪಿದೆ. ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್ (IGL) ಈ ಪರಿಷ್ಕೃತ ದರಗಳನ್ನು ಜಾರಿಗೆ ತಂದಿದ್ದು, ಇತ್ತೀಚಿನ ದಿನಗಳಲ್ಲಿ ಸರಣಿ ದರ ಏರಿಕೆ ಕಾಣುತ್ತಿರುವುದು ವಾಹನ ಚಾಲಕರು ಮತ್ತು ಸಾರ್ವಜನಿಕ ಸಾರಿಗೆ ಅವಲಂಬಿತರ ಜೇಬಿಗೆ ಕತ್ತರಿ ಹಾಕಿದಂತಾಗಿದೆ. ಆಟೋ, ಟ್ಯಾಕ್ಸಿ ಹಾಗೂ ವಾಣಿಜ್ಯ ವಾಹನಗಳ ನಿರ್ವಹಣಾ ವೆಚ್ಚ…

Read More

ಬೆಂಗಳೂರು :ರೈತರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ರೈತರು ಇನ್ನು ಮುಂದೆ ಮನೆಯಿಂದಲೇ ತಮಗೆ ಅಗತ್ಯವಿರುವ ರಸಗೊಬ್ಬರವನ್ನು ಖರೀದಿಸಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಹೊಸದೊಂದು ವ್ಯವಸ್ಥೆಯನ್ನು ಜಾರಿಗೆ ತಂದಿದೆ. ‘ಫರ್ಟಿಲೈಸರ್ಸ್ ಸೇಲ್ಸ್ ಅಪ್ಲಿಕೇಷನ್ ಸಿಸ್ಟಮ್’ (FSAS) ಅಡಿಯಲ್ಲಿ ‘ಫರ್ಟಿಲೈಸರ್ ಬುಕಿಂಗ್ ಆಪ್ ಫಾರ್ ಫಾರ್ಮರ್ಸ್’ (FBF) ಎಂಬ ಮೊಬೈಲ್ ಆಪ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಯೋಜನೆಯನ್ನು ದೇಶದ ಎಲ್ಲಾ ರಾಜ್ಯಗಳ ಆಯ್ದ ಎರಡು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಮುಂಗಾರು ಹಂಗಾಮಿನಲ್ಲಿ ಜಾರಿಗೊಳಿಸಲಾಗುತ್ತಿದ್ದು, ನಮ್ಮ ರಾಜ್ಯದಲ್ಲಿ ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳನ್ನು ಈ ಪ್ರಾಯೋಗಿಕ ಜಾರಿಗೆ ಆಯ್ಕೆ ಮಾಡಿಕೊಳ್ಳಲಾಗಿದೆ. ಹೇಗೆ ಕೆಲಸ ಮಾಡುತ್ತದೆ ಈ ಆಪ್? ಎಲ್‌ಪಿಜಿ ಅಡುಗೆ ಅನಿಲ (Gas) ಬುಕ್ ಮಾಡುವ ಮಾದರಿಯಲ್ಲೇ ಈ ಆಪ್ ಮೂಲಕ ಗೊಬ್ಬರವನ್ನು ಬುಕ್ ಮಾಡಬಹುದು. ರೈತರು ತಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿ ಈ ಆಪ್ ಡೌನ್‌ಲೋಡ್ ಮಾಡಿಕೊಂಡು, ಅದರಲ್ಲಿ ಆಧಾರ್ ಸಂಖ್ಯೆ ನಮೂದಿಸಿದರೆ ಎಫ್‌ಐಡಿ, ಹಿಡುವಳಿ ವಿಸ್ತೀರ್ಣ ಇತ್ಯಾದಿ ಮಾಹಿತಿ…

Read More

ಬೆಂಗಳೂರು: ರಾಜ್ಯದಲ್ಲಿ ಭೂಸ್ವಾಧೀನ ಪ್ರಕ್ರಿಯೆಗಳಲ್ಲಿ ರೈತರು ಮತ್ತು ಭೂಮಾಲೀಕರಿಗೆ ನ್ಯಾಯಯುತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಹಾಗೂ ಅನಗತ್ಯ ಕೋರ್ಟ್ ವ್ಯಾಜ್ಯಗಳನ್ನು ಕಡಿಮೆ ಮಾಡಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಭೂಸ್ವಾಧೀನ ಅಧಿಕಾರಿಗಳು ಜಮೀನಿನ ಬೆಲೆ ನಿಗದಿಪಡಿಸುವ ವಿಧಾನ ಹಾಗೂ ನ್ಯಾಯಾಲಯಗಳು ನೀಡುವ ತೀರ್ಪುಗಳ ವಿರುದ್ಧ ಮೇಲ್ಮನವಿ ಸಲ್ಲಿಸುವ ಕುರಿತು ಸರ್ಕಾರ ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಭೂಬೆಲೆ ನಿಗದಿಪಡಿಸಲು 5 ಪ್ರಮುಖ ವಿಧಾನಗಳು ಭೂಸ್ವಾಧೀನಾಧಿಕಾರಿಗಳು ಪರಿಹಾರ ಧನ ನಿಗದಿಪಡಿಸುವಾಗ ಈ ಕೆಳಗಿನ ಐದು ವಿಧಾನಗಳನ್ನು ಅನುಸರಿಸಬಹುದಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ: ಸ್ಥಳೀಯ ಪಂಚರು ನಿಗದಿಪಡಿಸಿದ ಬೆಲೆ. ಆದಾಯದ ಬಂಡವಾಳೀಕರಣ ವಿಧಾನ (Capitalization of Income Method). ತಜ್ಞರ ಅಭಿಮತ. ಭೂಮಾಲೀಕರು ಹಾಗೂ ಬೇಡಿಕೆ ಇಲಾಖೆಯವರು ಒಪ್ಪಂದದ ಮೇರೆಗೆ ಮಾತುಕತೆ ನಡೆಸಿ ನಿಗದಿಪಡಿಸಿದ ಬೆಲೆ. ಗ್ರಾಮದಲ್ಲಿ ಕಳೆದ 3 ವರ್ಷಗಳಲ್ಲಿ ಮಾರಾಟವಾದ ಜಮೀನುಗಳ ಅಂಕಿ-ಅಂಶಗಳ ಸರಾಸರಿ ಬೆಲೆ. ಗಮನಾರ್ಹ ಅಂಶ: ಸಾಮಾನ್ಯವಾಗಿ ಅಧಿಕಾರಿಗಳು 5ನೇ ವಿಧಾನವನ್ನು ಹೆಚ್ಚಾಗಿ ಬಳಸುತ್ತಿರುವುದರಿಂದ, ನೋಂದಣಿ ಬೆಲೆಗೂ ವಾಸ್ತವ ಬೆಲೆಗೂ…

Read More

ಬೆಂಗಳೂರು: ರಾಜ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿದ್ದು, ತೀವ್ರ ಆತಂಕ ಮೂಡಿಸಿವೆ. ಕೃಷಿ ಇಲಾಖೆಯ (ಬೆಳೆ ಅಭಿವೃದ್ಧಿ ಮತ್ತು ಯೋಜನೆ) ಅಪರ ಕೃಷಿ ನಿರ್ದೇಶಕರ ಕಚೇರಿಯಿಂದ ಲಭ್ಯವಾಗಿರುವ ಅಧಿಕೃತ ವರದಿಯ ಪ್ರಕಾರ, 2025-26ನೇ ಸಾಲಿನಲ್ಲಿ ನವೆಂಬರ್ 15, 2025ರ ಅಂತ್ಯಕ್ಕೆ ರಾಜ್ಯಾದ್ಯಂತ ಒಟ್ಟು 377 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ವರದಿಯಾಗಿರುವ ಒಟ್ಟು ಪ್ರಕರಣಗಳ ಪೈಕಿ 46 ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, 331 ಪ್ರಕರಣಗಳನ್ನು ತೀರ್ಮಾನಕ್ಕೆ ತೆಗೆದುಕೊಳ್ಳಲಾಗಿದೆ. ಇವುಗಳಲ್ಲಿ ಸದ್ಯಕ್ಕೆ 310 ಪ್ರಕರಣಗಳು ಪರಿಹಾರಕ್ಕೆ ಅರ್ಹ ಎಂದು ಗುರುತಿಸಲ್ಪಟ್ಟಿವೆ. ಕಲಬುರಗಿ, ಬೆಳಗಾವಿ, ಹಾವೇರಿಯಲ್ಲಿ ಅತಿ ಹೆಚ್ಚು ಪ್ರಕರಣಗಳು ರಾಜ್ಯದ ಜಿಲ್ಲಾವಾರು ಅಂಕಿ-ಅಂಶಗಳನ್ನು ಗಮನಿಸಿದರೆ, ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಹೆಚ್ಚಾಗಿರುವುದು ಕಂಡುಬಂದಿದೆ. ಕಲಬುರಗಿ ಪ್ರಥಮ ಸ್ಥಾನ: ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಒಟ್ಟು 40 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು, ಇವುಗಳಲ್ಲಿ 34 ಪ್ರಕರಣಗಳು ಪರಿಹಾರಕ್ಕೆ ಅರ್ಹವಾಗಿವೆ. ಬೆಳಗಾವಿ ದ್ವಿತೀಯ ಸ್ಥಾನ: ಬೆಳಗಾವಿ…

Read More

ಬೆಂಗಳೂರು: ರಾಜ್ಯದ ಶೈಕ್ಷಣಿಕ ವಲಯದಲ್ಲಿ ಹೊಸ ಸಂಚಲನ ಮೂಡಿಸಲು ಶಾಲಾ ಶಿಕ್ಷಣ ಇಲಾಖೆಯು ಸಜ್ಜಾಗಿದ್ದು, 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಜೂನ್ 1 ರಿಂದ ಅಧಿಕೃತವಾಗಿ ಆರಂಭವಾಗಲಿವೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ವಿಸ್ತೃತ ಸುತ್ತೋಲೆಯನ್ನು ಹೊರಡಿಸಿದ್ದು, ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 1 ರಿಂದ ಆರಂಭಿಸಿ ಜೂನ್ 30 ರೊಳಗೆ ಯಶಸ್ವಿಯಾಗಿ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದಕ್ಕೂ ಮುನ್ನವೇ, ಅಂದರೆ ಮೇ 29 ರಂದೇ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಸಹ ಶಿಕ್ಷಕರು ಶಾಲೆಗಳಿಗೆ ಕಡ್ಡಾಯವಾಗಿ ಹಾಜರಾಗಿ ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಆದೇಶಿಸಲಾಗಿದೆ. ಮಳೆಗಾಲದ ಮುನ್ನೆಚ್ಚರಿಕೆಯೊಂದಿಗೆ ಶಾಲಾ ಹಬ್ಬದ ಮುನ್ನಾದಿನದ ಸಿದ್ಧತೆ ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೆ ಮುನ್ನ ಶಾಲಾ ಆವರಣದ ಸುರಕ್ಷತೆ ಮತ್ತು ಸ್ವಚ್ಛತೆಗೆ ಅತ್ಯಂತ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮೇ 28 ರೊಳಗಾಗಿ…

Read More