Author: kannadanewsnow57

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಹೋಟೆಲ್ ಬೆಸ್ಟಿಯನ್ ಗಾರ್ಡನ್ ಸಿಟಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ಬುಧವಾರ ಅವರ ಮುಂಬೈ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಈ ಹಿಂದೆ, ನಟಿಯ ಆತಿಥ್ಯ ವ್ಯವಹಾರಕ್ಕೆ ಸಂಬಂಧಿಸಿದ ಅದೇ ತನಿಖೆಯ ಭಾಗವಾಗಿ ಬೆಂಗಳೂರಿನಲ್ಲಿಯೂ ಶೋಧ ನಡೆಸಲಾಗಿತ್ತು. ಶಿಲ್ಪಾ ಶೆಟ್ಟಿ ಸಹ-ಮಾಲೀಕತ್ವದ ಬಾಸ್ಟಿಯನ್ ಗಾರ್ಡನ್ ಸಿಟಿ ಸೇರಿದಂತೆ ಎರಡು ಪಬ್ಗಳ ವಿರುದ್ಧ ಬೆಂಗಳೂರು ಪೊಲೀಸರು ಅನುಮತಿ ಪಡೆದ ಸಮಯವನ್ನು ಮೀರಿ ಕಾರ್ಯನಿರ್ವಹಿಸಿದ ಆರೋಪದ ಮೇಲೆ ಪ್ರಕರಣಗಳನ್ನು ದಾಖಲಿಸಿದ ಒಂದು ದಿನದ ನಂತರ ಇತ್ತೀಚಿನ ಕ್ರಮ ಕೈಗೊಳ್ಳಲಾಗಿದೆ.

Read More

ಬೆಂಗಳೂರು : ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಕೈಗೊಳ್ಳಬಹುದಾದಂತಹ ಕಾಮಗಾರಿಗಳ ಪಟ್ಟಿ ಇಲ್ಲಿದೆ. 1. ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು: ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ, ಮಾಧ್ಯಮಿಕ ಮತ್ತು ಪ್ರೌಢ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸಬಹುದಾಗಿದೆ. 1) ಶಾಲಾ ಕೊಠಡಿಗಳ ನಿರ್ಮಾಣ 2) ಕಾಂಪೌಂಡ್ ಗೋಡೆಗಳ ನಿರ್ಮಾಣ 3) ಆಟದ ಮೈದಾನಗಳ ಅಭಿವೃದ್ಧಿ 4) ಮೂಲಭೂತ ಸೌಕರ್ಯಗಳನ್ನೊಳಗೊಂಡ ಸುಸಜ್ಜಿತ ಗ್ರಂಥಾಲಯಗಳ ನಿರ್ಮಾಣ 5) ಸುಸಜ್ಜಿತ ಪ್ರಯೋಗಾಲಯಗಳ ನಿರ್ಮಾಣ 6) ಬಯಲು ರಂಗಮಂದಿರಗಳ ನಿರ್ಮಾಣ 7) ಸೈಕಲ್ ಸ್ಟ್ಯಾಂಡ್‌ಗಳ ನಿರ್ಮಾಣ 8) ಶಾಲೆಗಳ ಹತ್ತಿರ ಶಿಕ್ಷಕರಿಗೆ ವಸತಿ ಗೃಹಗಳ ನಿರ್ಮಾಣ 9) RO ಮಾದರಿಯ ಕುಡಿಯುವ ನೀರಿನ ಸೌಲಭ್ಯ ಒದಗಿಸುವುದು. 10) ಗಣಕಯಂತ್ರ ಮತ್ತು ಪ್ರಿಂಟರ್ ಇತ್ಯಾದಿಗಳನ್ನು ಒದಗಿಸುವುದು. 11) ಬೋಧನೋಪಕರಣಗಳು ಹಾಗೂ ಆಟೋಪಕರಣಗಳನ್ನು ಒದಗಿಸುವುದು. 2. ಉನ್ನತ ಶಿಕ್ಷಣ ಸರ್ಕಾರಿ ಕಾಲೇಜುಗಳು, ಸರ್ಕಾರಿ ಕೈಗಾರಿಕಾ ತರಬೇತಿ…

Read More

ನವದೆಹಲಿ : “ವಿಬಿಜಿ ರಾಮ್ಜಿ ಮಸೂದೆ” ಲೋಕಸಭೆಯಲ್ಲಿ ಅಂಗೀಕಾರವಾಗಿದ್ದು, ವ್ಯಾಪಕ ವಿರೋಧದ ಗದ್ದಲದ ನಡುವೆಯೂ ಸರ್ಕಾರ ಅಂಗೀಕಾರವನ್ನು ಖಚಿತಪಡಿಸಿಕೊಂಡಿದೆ. ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಮೇಲೂ ವಿರೋಧ ಪಕ್ಷದ ಸಂಸದರು ಕಾಗದ ಎಸೆದರು. ‘ವಿಕ್ಷಿತ್ ಭಾರತ್ – ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗಾಗಿ ಖಾತರಿ: ವಿಬಿ – ಜಿ ರಾಮ್ ಜಿ ಮಸೂದೆ, 2025’ ಲೋಕಸಭೆಯಲ್ಲಿ ಅಂಗೀಕಾರವಾಯಿತು. ಡಿಸೆಂಬರ್ 19 ರ ಬೆಳಿಗ್ಗೆ 11:00 ಕ್ಕೆ ಸದನ ಮುಂದೂಡಿಕೆ. https://twitter.com/ANI/status/2001558099195552040?s=20

Read More

ಬೆಂಗಳೂರು : ವಿದ್ಯಾರ್ಥಿನಿಲಯಗಳ ನಿರ್ವಹಣೆಯಲ್ಲಿ ನಿಲಯ ಮೇಲ್ವಿಚಾರಕರ ಪಾತ್ರ ಮುಖ್ಯವಾಗಿದ್ದು, ನಿಲಯದ ಸಮರ್ಪಕ / ಅಸಮರ್ಪಕ ನಿರ್ವಹಣೆಗೆ ನಿಲಯ ಮೇಲ್ವಿಚಾರಕರೇ ಬಹಳಮಟ್ಟಿಗೆ ಕಾರಣರಾಗಿರುತ್ತಾರೆ. ಅದ್ದರಿಂದ ಈ ಕೆಳಕಂಡ ಕರ್ತವ್ಯಗಳನ್ನು ನಿರ್ವಹಿಸುವುದು. ನಿಲಯಾರ್ಥಿಗಳ ಮೇಲ್ವಿಚಾರಣೆ:– ವಿದ್ಯಾರ್ಥಿನಿಲಯಕ್ಕೆ ಪ್ರವೇಶ ಪಡೆದ ಎಲ್ಲಾ ವಿದ್ಯಾರ್ಥಿಗಳು (ದಸರಾ ಹಾಗೂ ಇನ್ನಿತರ ದೀರ್ಘಕಾಲದ ರಜೆ ಅವಧಿಯನ್ನು ಹೊರತುಪಡಿಸಿ) ನಿಲಯದಲ್ಲಿ ವಾಸ್ತವ್ಯವಿದ್ದು, ದಿನನಿತ್ಯ ಹಾಜರಾಗುತ್ತಿರುವರೇ ಎಂಬ ಸಂಪೂರ್ಣ ಬಗ್ಗೆ ಮೇಲ್ವಿಚಾರಣೆ ಕಾಲೇಜಿಗೆ ಶಾಲೆಗೆ /ಮಾಡುವ ಜವಾಬ್ದಾರಿ ನಿಲಯಮೇಲ್ವಿಚಾರಕದ್ದಾಗಿರುತ್ತದೆ. ಗೈರು ಹಾಜರಾದಂತಹ, ಅನುಮತಿ ಇಲ್ಲದೇ ಕೇಂದ್ರಸ್ಥಾನ ಬಿಟ್ಟು ಊರಿಗೆ ఎల్లా ತರಗತಿಗಳಿಗೆ ಹೋಗುವಂತಹ, ನಿಲಯದಲ್ಲಿ ವಾಸ್ತವ್ಯವಿದ್ದು, ಶಾಲೆಗೆ ಅಥವಾ ಶಾಲೆಯ ಹಾಜರಾಗದಂತಹ ವಿದ್ಯಾರ್ಥಿಗಳ ಪಾಲಕರನ್ನು ವಿದ್ಯಾರ್ಥಿನಿಲಯಕ್ಕೆ ಕರೆಸಿ ಇಂತಹ ಸ್ವಭಾವ ನಡತೆಯನ್ನು ಮುಂದುವರೆಸಿದಲ್ಲಿ ಅಂತಹ ವಿದ್ಯಾರ್ಥಿಗಳನ್ನು ನಿಲಯದಿಂದ ಹೊರಹಾಕಲು ಮೇಲಾಧಿಕಾರಿಗಳಿಗೆ ವರದಿಮಾಡಲಾಗುವುದೆಂದು ಎಚ್ಚರಿಕೆ ನೀಡುವುದು. ಇಂತಹ ಎಚ್ಚರಿಕೆಯಿಂದಲೂ ಸುಧಾರಿಸದೇ ಇರುವಂತಹ ವಿದ್ಯಾರ್ಥಿಗಳನ್ನು ನಿಲಯದಿಂದ ತೆಗೆದುಹಾಕುವ ಕ್ರಮವನ್ನು ಕೈಗೊಳ್ಳತಕ್ಕದ್ದು. ಅಲ್ಲದೇ, ನಿಲಯಾರ್ಥಿಗಳ ವಾಸ್ತವ್ಯ, ಅವರಿಗೆ ಉತ್ತಮ / ಪೌಷ್ಠಿಕ ಆಹಾರ ನೀಡಿಕೆ, ಅವರ…

Read More

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಮತ್ತೆ 8 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ತಹಶೀಲ್ದಾರ್ ವೃಂದದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರುಗಳ ಮುಂದೆ ನಮೂದಿಸಿರುವ ಸ್ಥಳಕ್ಕೆ ವರ್ಗಾಯಿಸಿ/ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ. ಇಲ್ಲಿದೆ ವರ್ಗಾವಣೆಗೊಂಡ ತಹಶೀಲ್ದಾರ್ ಗಳ ಪಟ್ಟಿ

Read More

60 ರ ಹರೆಯದ ಕಾಣೆಯಾದ ದಂಪತಿಗಾಗಿ ಹುಡುಕಾಟವು ಉತ್ತರ ಪ್ರದೇಶದ ಜೌನ್ಪುರದಲ್ಲಿ ಪೊಲೀಸರನ್ನು ಭೀಕರ ಡಬಲ್ ಕೊಲೆಗೆ ಕರೆದೊಯ್ದಿದೆ ಮತ್ತು ತಂದೆಯ ಮೊಂಡುತನ ಮತ್ತು ಮಗನ ಕೋಪವು ದುರಂತಕ್ಕೆ ಹೇಗೆ ಕಾರಣವಾಯಿತು ಎಂಬುದರ ತಣ್ಣನೆಯ ಕಥೆಗೆ ಕಾರಣವಾಗಿದೆ. ಎಂಜಿನಿಯರ್ ಆಗಿರುವ ಅಂಬೇಶ್ ಎಂಬಾಶ್ ಎಂಬಾಷ್ ತನ್ನ ಹೆತ್ತವರಾದ ಶ್ಯಾಮ್ ಬಹದ್ದೂರ್ (62) ಮತ್ತು ಬಬಿತಾ (60) ಅವರನ್ನು ಕೊಲೆ ಮಾಡಿ ಅವರ ದೇಹಗಳನ್ನು ಗರಗಸದಿಂದ ಕತ್ತರಿಸಿ ನದಿಗೆ ಎಸೆದ ಆರೋಪದ ಮೇಲೆ ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಅಂಬೇಶ್ ಮತ್ತು ಅವರ ಪೋಷಕರು ತಮ್ಮ ಮುಸ್ಲಿಂ ಪತ್ನಿಯ ಬಗ್ಗೆ ವಾಗ್ವಾದಗಳನ್ನು ನಡೆಸುತ್ತಿದ್ದರು, ಅವರನ್ನು ಅವರು ಮನೆಗೆ ಸ್ವೀಕರಿಸಲು ನಿರಾಕರಿಸಿದ್ದರು. ಅಂಭೇಶ್ ಮತ್ತು ಅವರ ಪತ್ನಿ ಅಂತಿಮವಾಗಿ ಬೇರ್ಪಡಲು ನಿರ್ಧರಿಸಿದ್ದರು ಮತ್ತು ಜೀವನಾಂಶವನ್ನು ಪಾವತಿಸಲು ಅವರಿಗೆ ಹಣದ ಅಗತ್ಯವಿತ್ತು. ಅವನು ತನ್ನ ತಂದೆಯನ್ನು ಕೇಳಿದನು, ಆದರೆ ಅವನು ನಿರಾಕರಿಸಿದನು ಎಂದು ಆರೋಪಿಸಲಾಗಿದೆ. ಇದು ಅವರ ಕೊನೆಯ ವಾಗ್ವಾದದ ಪ್ರಚೋದಕವಾಯಿತು, ಅದು ಎರಡು ಸಾವುಗಳಲ್ಲಿ ಕೊನೆಗೊಳ್ಳುತ್ತದೆ.…

Read More

ಬೆಂಗಳೂರು : ಪಾರಿವಾಳಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ ಎಂದು ಸಚಿವ ದಿನೇಶ್ಯ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ. ಹಾಗಾಗಿ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನೂ ವಿಧಿಸಲಾಗುವುದು. ಹಾಗಾಗಿ ಈ ಕುರಿತು ನಿರ್ಲಕ್ಷ ಬೇಡ, ನಿಯಮ ಪಾಲಿಸಿ- ಶಿಕ್ಷೆಯಿಂದ ಪಾರಾಗಿ ಎಂದು ಹೇಳಿದ್ದಾರೆ. https://twitter.com/dineshgrao/status/2001513646212681966?s=20

Read More

ಹುಬ್ಬಳ್ಳಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಭುಗಿಲೆದ್ದಿದೆ. ರಾಜ್ಯದ ಹುಬ್ಬಳ್ಳಿ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯವರೆಗೆ ತೆರಳಿ, ಬಿಜೆಪಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ಕಚೇರಿ ಬಳಿ ಅಳವಡಿಸಲಾಗಿದ್ದ ಬ್ಯಾರಿಕೇಡ್ ಗಳನ್ನು ತಳ್ಳಿ ಮುನ್ನುಗ್ಗಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಯತ್ನಿಸಿದ್ದಾರೆ. ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ, ನೂಕಾಟ ತಳ್ಳಾಟ ನಡೆದಿದ್ದು, ಪರಿಸ್ಥಿತಿ ತೀವ್ರ ಸ್ವರೂಪ ಪಡೆಯುತ್ತಿದ್ದ ಬೆನ್ನಲ್ಲೇ ಪೊಲೀಸರು ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Read More

ಬೆಂಗಳೂರು : ಪಾರಿವಾಳಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ ಎಂದು ಸಚಿವ ದಿನೇಶ್ಯ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದರಿಂದ ಅವುಗಳ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಅವುಗಳ ಮಲ-ಮೂತ್ರದಿಂದ ಸೋಂಕು ಹರಡುವುದು, ಉಸಿರಾಟ ತೊಂದರೆ ಸೇರಿದಂತೆ ಶ್ವಾಸಕೋಶ ಸಂಬಂಧಿತ ಗಂಭೀರ ಆರೋಗ್ಯ ಸಮಸ್ಯೆಗಳಾಗುತ್ತಿವೆ. ಹಾಗಾಗಿ ಸರ್ಕಾರ ಹೊಸ ನಿಯಂತ್ರಣ ಮಾರ್ಗಸೂಚಿಗಳನ್ನು ಹೊರಡಿಸಿದೆ ಎಂದು ತಿಳಿಸಿದ್ದಾರೆ. https://twitter.com/dineshgrao/status/2001513646212681966?s=20  ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವಂತಿಲ್ಲ. ನಿಯಮ ಉಲ್ಲಂಘಿಸಿದರೆ ದಂಡ ಅಥವಾ ಜೈಲು ಶಿಕ್ಷೆಯನ್ನೂ ವಿಧಿಸಲಾಗುವುದು. ಹಾಗಾಗಿ ಈ ಕುರಿತು ನಿರ್ಲಕ್ಷ ಬೇಡ, ನಿಯಮ ಪಾಲಿಸಿ- ಶಿಕ್ಷೆಯಿಂದ ಪಾರಾಗಿ ಎಂದು ಹೇಳಿದ್ದಾರೆ.

Read More

ಬೆಂಗಳೂರು : 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ವಿಭಾಗದ 07 ಜಿಲ್ಲೆಗಳ 1345 ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ‘ಪರಿಹಾರ ಬೋಧನೆ” ತರಗತಿಗಳನ್ನು ಹಮ್ಮಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ಹಾಗೂ ಅನುದಾನ ಬಿಡುಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲೆ ಓದಲಾದ ಪ್ರಸ್ತಾವನೆಯಲ್ಲಿ ಕಳೆದ ಹಲವು ವರ್ಷಗಳಿಂದ ಕಲ್ಯಾಣ ಕರ್ನಾಟಕ ಪ್ರದೇಶದ 07 ಜಿಲ್ಲೆಗಳ ಫಲಿತಾಂಶ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕಡಿಮೆಯಾಗಿರುವುದು ಗಮನಿಸಬಹುದು. ಪ್ರಸಕ್ತ ಸಾಲಿನ ಫಲಿತಾಂಶ ಉತ್ತಮ ಪಡಿಸಲು ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಜಾರಿಮಾಡುವುದರ ಜೊತೆಗೆ ಕೆಕೆಆರ್ಡಿಬಿ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ) ವತಿಯಿಂದ ಫಲಿತಾಂಶ ಸುಧಾರಣೆಗಾಗಿಯೇ ದೊರೆಯುವ ಅನುದಾನ ಬಳಸಿಕೊಳ್ಳಲು ಕ್ರಿಯಾಯೋಜನೆ ರೂಪಿಸಲಾಗಿದ್ದು, ಅನುಮೋದನೆಗಾಗಿ ಸಲ್ಲಿಸಿರುತ್ತಾರೆ. ಕಲಬುರಗಿ ವಿಭಾಗದ ಎಲ್ಲಾ 1345 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಎಲ್ಲಾ ಪ್ರೌಢ ಶಾಲೆಗಳಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಮತ್ತು ಸಾಯಂಕಾಲ ವಿಶೇಷ ತರಗತಿಗಳನ್ನು ನಡೆಸಿ, ಪರಿಹಾರ ಬೋಧನೆ…

Read More