Author: kannadanewsnow57

ಬೆಂಗಳೂರು : ಕಳೆದ ಜನವರಿಯಿಂದ ಜುಲೈವರೆಗೆ ರಾಜ್ಯದಲ್ಲಿ ಬರೊಬ್ಬರಿ 2.60 ಲಕ್ಷ ಜನರಿಗೆ ನಾಯಿ ಕಚ್ಚಿದ್ದು, ಕಳೆದ ಒಂದೇ ವಾರದಲ್ಲಿ 10 ಸಾವಿರ ಜನರಿಗೆ ನಾಯಿ ಕಚ್ಚಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಇತ್ತೀಚೆಗೆ ಚಿಕ್ಕ ಮಕ್ಕಳು ಎನ್ನದೆ ಎಲ್ಲರ ಮೇಲು ಬೀದಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚಾಗಿವೆ. ಇದೀಗ ಆರೋಗ್ಯ ಇಲಾಖೆ ಬೆಚ್ಚಿಬಿಳಿಸುವ ಮಾಹಿತಿ ನೀಡಿದ್ದು, ಕಳೆದ ಆರೇ ತಿಂಗಳಲ್ಲಿ ರಾಜ್ಯದಲ್ಲಿ ಒಟ್ಟು 2.60 ಲಕ್ಷಕ್ಕೂ ಅಧಿಕ ನಾಯಿ ಕಡಿತ ಪ್ರಕರಣ, 23 ರೇಬೀಸ್ ಸಾವುಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಹೌದು 2025ರ ಜ.1ರಿಂದ ಜೂ.30ರ ನಡುವೆ 2,60 ಲಕ್ಷ ಜನರಿಗೆ  ನಾಯಿ ಕಡಿತ ವರದಿಯಾಗಿದ್ದು, ಇದೇ ಅವಧಿಯಲ್ಲಿ ಕಳೆದ ವರ್ಷ 1,69,672 ನಾಯಿ ಕಡಿತ ಮತ್ತು 18 ರೇಬೀಸ್ ಸಾವು ವರದಿಯಾಗಿದ್ದವು. 2024ರಲ್ಲಿ ರಾಜ್ಯದಲ್ಲಿ ಇಡೀ ವರ್ಷದಲ್ಲಿ 3.6 ಲಕ್ಷ ನಾಯಿ ಕಡಿತ ಹಾಗೂ 42 ರೇಬೀಸ್ ಸಾವು ಸಂಭವಿಸಿದ್ದವು. 2023ರ ಮೊದಲ ಆರು ತಿಂಗಳ…

Read More

ಬೆಂಗಳೂರು : ಹಿರಿಯ ನಾಗರಿಕರು ಸರ್ಕಾರಿ ಕಛೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸಿ, ಆಸನದ ವ್ಯವಸ್ಥೆಯನ್ನು ಮಾಡುವಂತೆ ಹಾಗೂ ಅವರುಗಳ ಮನವಿ/ ಕೋರಿಕೆಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಹಿರಿಯ ನಾಗರಿಕರಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುವಂತೆ ಸ್ಪಷ್ಟ ನಿರ್ದೇಶನದೊಂದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ನಾಗರಿಕರು ಸರ್ಕಾರಿ ಕಛೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸಿ, ಆಸನದ ವ್ಯವಸ್ಥೆಯನ್ನು ಮಾಡುವಂತೆ ಹಾಗೂ ಅವರುಗಳ ಮನವಿ/ ಕೋರಿಕೆಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಹಿರಿಯ ನಾಗರಿಕರಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುವಂತೆ ಸ್ಪಷ್ಟ ನಿರ್ದೇಶನದೊಂದಿಗೆ ಈಗಾಗಲೇ ಸುತ್ತೋಲೆ ಸಂಖ್ಯೆ ಸಿಆಸುಇ 38 ಕತವ 2021, ದಿನಾಂಕ: 21-06-2021 ನ್ನು ಹೊರಡಿಸಲಾಗಿರುತ್ತದೆ. ಆದರೆ, ಸದರಿ ಸುತ್ತೋಲೆಯನ್ನು ಪಾಲಿಸದೇ ಇರುವ ಬಗ್ಗೆ ಹಾಗೂ ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸುತ್ತಿರುವ ಕುರಿತು ದೂರುಗಳು ಸ್ವೀಕೃತವಾಗಿದ್ದರಿಂದ, ದಿನಾಂಕ: 21-06-2021ರ ಸುತ್ತೋಲೆಯನ್ನು ಅಕ್ಷರಶ:…

Read More

ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಸದರಿ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಸರಕಾರದಿಂದ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲ್ಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ. ಈ ರೀತಿಯ ಜಮೀನುಗಳನ್ನು ವಾರಸುದಾರರು ಕೂಡಲೇ ಮೃತರ ಮರಣ ಪ್ರಮಾಣ ಪತ್ರ, ವಂಶವೃಕ್ಷ, ವಾರಸುದಾರರ ಆಧಾರ್ ಕಾರ್ಡ್ ಇತ್ಯಾದಿ ಪೂರಕ ಎಲ್ಲಾ ದಾಖಲೆಗಳನ್ನು ತಮ್ಮ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮ ಆಡಳಿತಾಧಿಕಾರಿಗಳ ಹತ್ತಿರ ಸಲ್ಲಿಸಿ ಭೂ ಮಾಲೀಕರು ಮೃತರಾಗಿರುವ ಜಮೀನುಗಳ ವಾರಸುದಾರರಿಗೆ ಖಾತೆಯನ್ನು ಉಚಿತವಾಗಿ ಇ-ಪೌತಿ ಆಂದೋಲನದ ಮೂಲಕ ಪಹಣಿ ಮಾಡಿಸಿಕೊಳ್ಳಬಹುದಾಗಿರುತ್ತದೆ. ಸಾರ್ವಜನಿಕರು ಈ ಬಗ್ಗೆ ಮದ್ಯವರ್ತಿಗಳಿಗೆ ಅವಕಾಶ ಕೊಡದೇ ನೇರವಾಗಿ ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳನ್ನು ಹಾಗೂ ರಾಜಸ್ವ ನಿರೀಕ್ಷಕರನ್ನು ಭೇಟಿ ಮಾಡಿ ಉಚಿತವಾಗಿ ನಿಮ್ಮ ಜಮೀನಿನ ಖಾತೆಯನ್ನು ಬದಲಾಯಿಸಿಕೊಳ್ಳಲು ತಿಳಿಸಿದೆ. ಇ-ಪೌತಿ ಆಂದೋಲನ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಶಿವಮೊಗ್ಗ ತಾಲ್ಲೂಕಿನ ಎಲ್ಲಾ ಗ್ರಾಮಗಳ ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಲು ಹಾಗೂ ಇ-ಪೌತಿ…

Read More

ಚಿಕ್ಕಬಳ್ಳಾಪುರ: ಆಗಸ್ಟ್ 5 ರಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸ್ತಬ್ದವಾದರೆ ಖಾಸಗಿ ವಾಹನ ಬಳಕೆ ಸಿದ್ಧತೆ ನಡೆಸಲಾಗಿದೆ. ಚಿಕ್ಕಬಳ್ಳಾಪುರ ಬಸ್ ನಿಲ್ದಾಣದಲ್ಲಿ ಡಿ.ಸಿ. ಪಿ.ಎನ್ ರವೀಂದ್ರ ಅವರು ಮಾತನಾಡಿ, ಆಗಸ್ಟ್ 5 ರಿಂದ ಸಾರಿಗೆ ಸಿಬ್ಬಂದಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಸ್ತಬ್ದವಾದರೆ ಖಾಸಗಿ ವಾಹನ ಬಳಕೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಮುಷ್ಕರದ ಹಿನ್ನೆಲೆಯಲ್ಲಿ ಖಾಸಗಿ ಬಸ್, ಮಿನಿ ಬಸ್, ಮ್ಯಾಕ್ಸಿಕ್ಯಾಬ್, ಆಟೋ ಮೂಲಕ ಸೇವೆ ನೀಡಲಾಗುವುದು. ಸಾರಿಗೆ ಸಿಬ್ಬಂದಿ ಮುಷ್ಕರದಲ್ಲಿ ಭಾಗಿಯಾದರೆ ಪ್ರಯಾಣಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಖಾಸಗಿ ಶಾಲಾ ವಾಹನಗಳನ್ನು ಸಾರಿಗೆ ಸೇವೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 120 ಖಾಸಗಿ ಬಸ್, 80 ಒಪ್ಪಂದದ ಬಸ್, 219 ಮ್ಯಾಕ್ಸಿಕ್ಯಾಬ್, 581 ಶಾಲಾ ಬಸ್, 51 ಖಾಸಗಿ ಸೇವಾ ವಾಹನಗಳ ಮೂಲಕ ಸೇವೆ ಒದಗಿಸಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಖಾಸಗಿ ವಾಹನಗಳಲ್ಲಿ…

Read More

ಮೈಸೂರು : ಈ ಬಾರಿಯೂ ಅಭಿಮನ್ಯು ದಸರಾ ಜಂಬೂಸವಾರಿಯಲ್ಲಿ ಅಂಬಾರಿ ಹೊರಲಿದ್ದು, ಆಗಸ್ಟ್ 4ರ ಇಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ವಿಧ್ಯುಕ್ತವಾಗಿ ಗಜಪಯಣಕ್ಕೆ ಚಾಲನೆ ನೀಡಲಾಗುವುದು. ಮೈಸೂರು ದಸರಾ ಮಹೋತ್ಸವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ದುಬಾರೆ ಆನೆ ಶಿಬಿರದಿಂದ ಭಾನುವಾರ 4 ಆನೆಗಳನ್ನು ಹುಣಸೂರು ಬಳಿಯ ವೀರನಹೊಸಹಳ್ಳಿ ಶಿಬಿರಕ್ಕೆ ಲಾರಿಗಳಲ್ಲಿ ಸಾಗಿಸಲಾಯಿತು. ಧನಂಜಯ, ಕಂಜನ್, ಪ್ರಶಾಂತ ಮತ್ತು ಕಾವೇರಿ ಆನೆಗಳನ್ನು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಿ ಕಳುಹಿಸಲಾಯಿತು. ಇಂದು ವೀರನಹೊಸಹಳ್ಳಿಯಿಂದ ಆನೆಗಳ ಮೊದಲ ತಂಡ ಮೈಸೂರಿಗೆ ತೆರಳಲಿದೆ. ಈ ಬಾರಿಯ ಜಂಬೂಸವಾರಿಯಲ್ಲಿ ಮತ್ತೀಗೋಡು ಶಿಬಿರದ ಭೀಮ (25 ವರ್ಷ), ದುಬಾರೆ ಶಿಬಿರದ ಕಂಜನ್ (24), ಧನಂಜಯ (44) ಮತ್ತು ಪ್ರಶಾಂತ್ (53), ಬಳ್ಳೆ ಶಿಬಿರದ ಮಹೇಂದ್ರ (42), ದೊಡ್ಡಹರವೆ ಶಿಬಿರದ ಏಕಲವ್ಯ (40) ಗಂಡಾನೆಗಳು ಹಾಗೂ ದುಬಾರೆ ಶಿಬಿರದ ಕಾವೇರಿ (45) ಹಾಗೂ ಬಳ್ಳೆಯ ಲಕ್ಷ್ಮೀ (53) ಹೆಣ್ಣಾನೆಗಳು ಮೊದಲ ಹಂತದಲ್ಲಿ…

Read More

ಬೆಳಗಾವಿ : ರಾಜ್ಯದಲ್ಲೊಂದು ಹೈಟೆಕ್ ಮಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಲಿಂಬೆಹಣ್ಣು, ಮೊಸರನ್ನದ ಜೊತೆಗೆ ಸ್ಮಾರ್ಟ್ ಫೋನ್ ಇಟ್ಟು ವಾಮಾಚಾರ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೌದು, ಬೆಳಗಾವಿಯಲ್ಲೊಂದು ಹೈಟೆಕ್ ವಾಮಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದ ಹೊರವಲಯದ ರೈತ ಸದಾನಂದ ದೇಸಾಯಿ ಎನ್ನುವ ರೈತನ ಹೊಲದಲ್ಲಿ ಮೊಬೈಲ್ ಇಟ್ಟು ವಾಮಾಚಾರ ಮಾಡಲಾಗಿದೆ. ಜಮೀನಿನ ರೈತರು ರೈತ ಮುಖಂಡ ರಾಜು ಮರವೆ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಅವರು ಸ್ಥಳಕ್ಕೆ ಹೋಗಿ ನೋಡಿದಾಗ ಲಿಂಬೆಹಣ್ಣು, ಮೊಸ ಮೊಸರನ್ನ ಜೊತೆಗೆ ಸ್ಮಾರ್ಟ್ಫೋನ್ ಇರುವುದು ಕಂಡುಬಂದಿದೆ. ಮೊಬೈಲ್ ಜೊತೆಗೆ ಲಿಂಬೆಹಣ್ಣು, ತೆಂಗಿನಕಾಯಿ, ಎಲೆ ಅಡಿಕೆ, ಕ್ಯಾರ್ಬೀಜ ಹಾಕಿ, ಗಿಡಕ್ಕೆ ಗಂಟು ಕಟ್ಟಿ ವಾಮಾಚಾರ ನಡೆಸಲಾಗಿದೆ.

Read More

ಹುಬ್ಬಳ್ಳಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ವರ್ಷ ಡಿಸೆಂಬರ್ ನಲ್ಲಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಈ ಪ್ರಕರಣದ ಕುರಿತು ವಿಚಾರಣೆ ನಡೆಯುತ್ತಿದ್ದು, ಇದೇ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್ ದರ್ಶನಗೆ ಬೇಲ್ ಕೊಟ್ಟಂತೆ ನನಗೂ ಸಹ ಜಾಮೀನು ನೀಡಿ ಎಂದು ಕೋರ್ಟ್ ಮೊರೆ ಹೋಗಿದ್ದಾನೆ. ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಇಂದು ಜಾಮೀನು ಅರ್ಜಿಯ ಅಂತಿಮ ಆದೇಶ ಹೊರಬೀಳಲಿದೆ. ಈ ಬಗ್ಗೆ ನೇಹಾತಂದೆ ಬೇಸರ ವ್ಯಕ್ತಪಡಿಸಿದ್ದಾರೆ. ನಟ ದರ್ಶನ್ ತಮ್ಮ ನಟನೆ, ಒಳ್ಳೆಯ ಕೆಲಸಗಳಿಂದ ಜನರಿಗೆ ಮಾದರಿಯಾಗಬೇಕಿತ್ತು. ಆದರೆ ಕೊಲೆ ಪ್ರಕರಣದಲ್ಲಿ ಇತರೆ ಆರೋಪಿಗಳಿಗೆ ಮಾದರಿಯಾಗಿದ್ದು ನಿಜಕ್ಕೂ ನೋವಿನ ವಿಷಯ. ನನ್ನ ಮಗಳಿಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಕಣ್ಣೀರಿಟ್ಟಿದ್ದಾರೆ.

Read More

ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ.  ಈ ಸಭೆಯಲ್ಲಿ ಆ.5ರಿಂದ ಕರೆ ನೀಡಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ನಿರ್ಧಾರವಾಗಲಿದೆ. ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.5ರಂದು ಬೆಳಗ್ಗೆ 6 ಗಂಟೆಯಿಂದ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಮುಷ್ಕರ ಹೂಡುವುದಾಗಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದು, ನಾಳೆ ನಾಲ್ಕೂ ನಿಗಮಗಳಿಂದ ಒಟ್ಟು 23000 ಬಸ್ಗಳು ರಸ್ತೆಗಿಳಿವುದು ಅನುಮಾನವಾಗಿದ್ದು, 1.2 ಲಕ್ಷ ಕಾರ್ಮಿಕರು ಹೋರಾಟ ನಡೆಸಲಿದ್ದಾರೆ.

Read More

ಬೆಂಗಳೂರು : ಇಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಒಳಮೀಸಲು ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲಿಸಲಿದೆ. ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಉಪ ಪಂಗಡಗಳ ಅಂಕಿ-ಅಂಶ ಗಳ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಹೈ ಕೋರ್ಟ್ ನಿವೃತ್ತ ನ್ಯಾಯ ಮೂರ್ತಿ ಎಚ್.ಎನ್.ನಾಗಮೋಹನ ದಾಸ್ನೇತೃತ್ವದ ಏಕಸದಸ್ಯ ಆಯೋಗ ಇಂದು ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ. ವಿಧಾನಸೌಧದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಯೋಗ ತನ್ನ ವರದಿ ಸಲ್ಲಿಸಲಿದೆ. ಒಳಮೀಸಲಾತಿ ಹಿನ್ನೆಲೆಯಲ್ಲಿ ಸರ್ಕಾರದ ವಿವಿಧ ಇಲಾಖಾ ನೇಮಕಾತಿಗಳು, ಬಡ್ತಿ ವಿಚಾರಗಳಿಗೆ ಕೆಲ ತಿಂಗಳಿಂದ ತಡೆಬಿದ್ದಿದೆ.

Read More

ಬೆಂಗಳೂರು : 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪೌಷ್ಠಿಕ ಪುನಶ್ವೇತನ ಕೇಂದ್ರಗಳಲ್ಲಿ ದಾಖಲಾದ ಮಕ್ಕಳ ತಾಯಂದಿರು/ಪೋಷಕರಿಗೆ ದಿನಗೂಲಿ ನಷ್ಟಭತ್ಯೆಯನ್ನು ನೀಡಲಾಗುವುದು. ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನದ ಏಕ ಕಡತದಲ್ಲಿ ಪೌಷ್ಠಿಕ ಪುನಶ್ವೇತನ ಕೇಂದ್ರವು(NRC) ಸಾರ್ವಜನಿಕ ಆರೋಗ್ಯ ಸಂಸ್ಥೆಯ (ಆಸ್ಪತ್ರೆ) ಘಟಕವಾಗಿದ್ದು, ಇಲ್ಲಿ ತೀವು ಅಪೌಷ್ಠಿಕತೆ (SAM) ಹೊಂದಿರುವ ಮಕ್ಕಳನ್ನು ದಾಖಲಿಸಿ ಅಪೌಷ್ಠಿಕತೆಯನ್ನು ನೀಗಿಸಲು ಸೇವೆ ನೀಡಲಾಗುತ್ತಿದೆ. ಮಕ್ಕಳನ್ನು ಪೌಷ್ಠಿಕ ಪುನಶ್ಯತನ ಕೇಂದ್ರಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿರುವ SD Chart-ಪ್ರವೇಶ ಮಾನದಂಡಗಳ ಪ್ರಕಾರ ದಾಖಲಿಸಿ, ವೈದ್ಯಕೀಯ ಮತ್ತು ಪೌಷ್ಠಿಕ ಚಿಕಿತ್ಸಕ ಆರೈಕೆಯನ್ನು ಒದಗಿಸಲಾಗುತ್ತದೆ. ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಅನುದಾನಿತ 33 ಜಿಲ್ಲಾ ಮಟ್ಟದ ಪೌಷ್ಠಿಕ ಪುನಶ್ವೇತನ ಕೇಂದ್ರಗಳು ಮತ್ತು ರಾಜ್ಯ ಅನುದಾನಿತ 86 ತಾಲೂಕು ಮಟ್ಟದ ಪೌಷ್ಠಿಕ ಪುನಶ್ಯತನ ಕೇಂದ್ರಗಳು 6 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪೌಷ್ಠಿಕತೆಯುಳ್ಳ ಮಕ್ಕಳಿಗೆ ಪೌಷ್ಠಿಕ ಪುನಶ್ಚೇತನ ಸೇವೆಗಳನ್ನು…

Read More