Author: kannadanewsnow57

ಧಾರ್ಚುಲಾ (ಉತ್ತರಾಖಂಡ): ಹಿಮಾಲಯದ ನೆರಳಿನ ಆಳದಿಂದ ಬೆನ್ನುಮೂಳೆಯನ್ನು ನಡುಗಿಸುವ ಸಂಗತಿಯೊಂದು ಬೆಳಕಿಗೆ ಬಂದಿದೆ: ಪಿಥೋರಗಢದ ಧಾರ್ಚುಲಾದಲ್ಲಿ ಭಾರತ-ನೇಪಾಳ ಗಡಿಯ ಬಳಿ ಹೊಸದಾಗಿ ಪತ್ತೆಯಾದ ಗುಹೆಯಲ್ಲಿ ಸಾವಿರಾರು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ ಪವಿತ್ರ ಆದಿ ಕೈಲಾಸ ಮಾರ್ಗ ಮತ್ತು ಸರ್ಪ ಕಾಳಿ ನದಿಯ ಉದ್ದಕ್ಕೂ ಗರ್ಬ್ಯಾಂಗ್ ಗ್ರಾಮಕ್ಕೆ ಹತ್ತಿರದಲ್ಲಿರುವ ಈ ಗುಹೆಯು ಇತಿಹಾಸದ ಕೆಲವು ಗೊಂದಲಮಯ ರಹಸ್ಯಗಳನ್ನು ಅನ್ಲಾಕ್ ಮಾಡುವ ಸಾಮರ್ಥ್ಯವನ್ನು ಹೊಂದಿದೆ. ಈ ಅದ್ಭುತ ಆವಿಷ್ಕಾರವು 8 ನೇ ಶತಮಾನಕ್ಕಿಂತ ಹಿಂದಿನ ಪ್ರಾಚೀನ ಅವಶೇಷಗಳನ್ನು ತನಿಖೆ ಮಾಡುವ ಗುರಿಯನ್ನು ಹೊಂದಿರುವ ಇತ್ತೀಚಿನ ಉತ್ಖನನದ ಸಮಯದಲ್ಲಿ ಸಂಭವಿಸಿದೆ. ಪುರಾತತ್ವ ಒಳಸಂಚುಗಳಿಂದ ಸಮೃದ್ಧವಾಗಿರುವ ಈ ಪ್ರದೇಶವು ದೀರ್ಘಕಾಲದಿಂದ ಅಸ್ಥಿಪಂಜರದ ಅನ್ವೇಷಣೆಗಳ ಭಂಡಾರವಾಗಿದೆ, ಇದರಲ್ಲಿ ರೂಪ್ಕುಂಡ್ ಮತ್ತು ಮಲಾರಿಯಲ್ಲಿನ ಕುಖ್ಯಾತ ಆವಿಷ್ಕಾರಗಳು ಸೇರಿವೆ, ಅಲ್ಲಿ ಅಸಂಖ್ಯಾತ ಆತ್ಮಗಳ ಮೂಳೆಗಳು ಒರಟಾದ ಭೂದೃಶ್ಯದ ನಡುವೆ ಮೌನವಾಗಿ ಮಲಗಿವೆ. ಹೊಸದಾಗಿ ಗುರುತಿಸಲಾದ ಈ ಗುಹೆಯು 9 ನೇ ಶತಮಾನದಲ್ಲಿ ಆದಿ ಶಂಕರಾಚಾರ್ಯರ ಪ್ರಭಾವಕ್ಕೆ ಮುಂಚಿತವಾಗಿ ಪ್ರವರ್ಧಮಾನಕ್ಕೆ ಬಂದ ಪ್ರಾಚೀನ…

Read More

ಬೆಂಗಳೂರು : ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ಬರುವ ಪ್ರಸ್ತಾವನೆಗಳನ್ನು ಇನ್ಮುಂದೆ ಆನ್ ಲೈನ್ ತಂತ್ರಾಂಶದ ಮೂಲಕವೇ ನಿರ್ವಹಿಸುವಂತೆ ಶಾಲಾ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಅನುಕಂಪದ ನೇಮಕಾತಿ ಅರ್ಜಿಗಳನ್ನು ಪ್ರಸ್ತುತ ಭೌತಿಕವಾಗಿ ನಿರ್ವಹಣೆ ಮಾಡಲಾಗುತ್ತಿದ್ದು, ಇದರಿಂದ ಹಲವು ಪ್ರಕರಣಗಳಲ್ಲಿ ಅರ್ಜಿದಾರರಿಗೆ ಅನಗತ್ಯ ತೊಂದರೆ ಉಂಟಾಗುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಅರ್ಜಿ ವಿಲೇವಾರಿ ವಿಳಂಬವೂ ಆಗುತ್ತಿದೆ. ಹೀಗಾಗಿ ಆನ್ ಲೈನ್ ತಂತ್ರಾಂಶ ಇಇಡಿಎಸ್ ನಲ್ಲಿ ನಿರ್ವಹಣೆಯ ವ್ಯವಸ್ಥೆ ಅಭಿವೃದ್ಧಿ ಪಡಿಸಲಾಗಿದೆ. ನುಕಂಪದ ನೇಮಕಾತಿ ಅರ್ಜಿಗಳನ್ನು ಸಂಪೂರ್ಣವಾಗಿ ಆನ್‌ಲೈನ್ ತಂತ್ರಾಂಶದ ಮುಖಾಂತರ ಇಇಡಿಎಸ್ ನಲ್ಲಿ ನಿರ್ವಹಿಸಲು ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗಿದೆ ಮತ್ತು ಇಲಾಖಾ ವೆಬ್‌ಸೈಟ್ https://schooleducation.karnataka.gov.in ಭೌತಿಕವಾಗಿ ಸ್ವೀಕೃತಿಯಾಗಿ ನಿರ್ವಹಣೆ ಕ್ರಮಗಳು ಆಗುತ್ತಿದ್ದು ಇದರಿಂದ ಹಲವು ಪ್ರಕರಣಗಳಲ್ಲಿ ಅರ್ಜಿದಾರರಿಗೆ ಅನಗತ್ಯ ತೊಂದರೆಗಳಾಗುತ್ತಿರುವುದು ಗಮನಕ್ಕೆ ಬಂದಿದೆ. ಅಸಾಧಾರಣ ವಿಳಂಬವನ್ನೂ ಸಹ ಗಮನಿಸಿದ್ದು ದೂರುಗಳಿಗೆ ದಾರಿಯಾಗಿದೆ. ಇನ್ನು ಮುಂದೆ ಅರ್ಜಿದಾರರಿಗೆ ಅನುಕೂಲವಾಗುವಂತೆ ಮತ್ತು ಇಡೀ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಿರ್ವಹಿಸಬಹುದಾದ ರೀತಿಯಲ್ಲಿ ಈಗಾಗಲೇ ಆನ್‌ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು…

Read More

ನವದೆಹಲಿ: ಅಕ್ಟೋಬರ್ 22-23 ರಂದು ನಡೆಯಲಿರುವ 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಮತ್ತು ಗುಂಪಿನ ಸದಸ್ಯರು ಮತ್ತು ಇತರ ಆಹ್ವಾನಿತರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲು ಪ್ರಧಾನಿ ನರೇಂದ್ರ ಮೋದಿ ಸೋಮವಾರ ರಷ್ಯಾಕ್ಕೆ ತೆರಳಲಿದ್ದಾರೆ ಈ ವರ್ಷ ಪ್ರಧಾನಿ ಮೋದಿ ಅವರ ಎರಡನೇ ರಷ್ಯಾ ಭೇಟಿ ಇದಾಗಿದೆ. ದಕ್ಷಿಣ ಆಫ್ರಿಕಾದಲ್ಲಿ 2023 ರ ಶೃಂಗಸಭೆಯಲ್ಲಿ ಸದಸ್ಯತ್ವವನ್ನು ನೀಡಿದ ನಂತರ ಈಜಿಪ್ಟ್, ಇರಾನ್, ಇಥಿಯೋಪಿಯಾ ಮತ್ತು ಯುಎಇ ಈ ವರ್ಷ ಸೇರುವುದರೊಂದಿಗೆ ಗುಂಪನ್ನು ಒಂಬತ್ತು ಸದಸ್ಯ ರಾಷ್ಟ್ರಗಳಿಗೆ ವಿಸ್ತರಿಸಿದ ನಂತರ ಈ ಶೃಂಗಸಭೆ ಮೊದಲನೆಯದಾಗಿದೆ. ಅರ್ಜೆಂಟೀನಾ ಮತ್ತು ಸೌದಿ ಅರೇಬಿಯಾವನ್ನು ಸಹ ಆಹ್ವಾನಿಸಲಾಗಿತ್ತು ಆದರೆ ಸರ್ಕಾರ ಬದಲಾದ ನಂತರ ಮೊದಲನೆ ಸರ್ಕಾರ ನಿರಾಕರಿಸಿತು, ಆದರೆ ಎರಡನೆಯದು ಇನ್ನೂ ಪ್ರತಿಕ್ರಿಯಿಸಿಲ್ಲ. ರಷ್ಯಾದ ಅಧ್ಯಕ್ಷತೆಯಲ್ಲಿ ಕಜಾನ್ನಲ್ಲಿ ನಡೆಯುತ್ತಿರುವ 16 ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅಕ್ಟೋಬರ್ 22-23 ರಿಂದ ರಷ್ಯಾಕ್ಕೆ ಭೇಟಿ ನೀಡಲಿದ್ದಾರೆ…

Read More

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 4 ದಿನ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನ ನಾಲ್ಕು ಜಿಲ್ಲೆಗಳು, ಬೆಂಗಳೂರು ಸೇರಿ 17 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆ, ನಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 10 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ.. ಮಳೆಯ ಆರ್ಭಟದಿಂದಾಗಿ ಕಟಾವು ಹಂತಕ್ಕೆ ಬಂದಿದ್ದ ಸಾವಿರಾರು ಎಕರೆ ಬೆಳೆ ನಾಶವಾಗಿದ್ದು ರೈತರು ಕಂಗಾಲಾಗಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಲ್ಲಿ ಹಲವಡೆ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದ ಪರಿಣಾಮ ಹೊಲ, ಗದ್ದೆ, ತೋಟಗಳು ಜಲಾವೃತಗೊಂಡಿವೆ. ಅನೇಕ ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ಶಿವಮೊಗ್ಗ, ಚಿತ್ರದುರ್ಗ ಮೊದಲಾದ ಕಡೆ ಮನೆಗಳು ಕುಸಿದಿವೆ.ಅನೇಕ ಕಡೆಗಳಲ್ಲಿ ಧಾರಾಕಾರ ಮಳೆ ಆದ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಹಿನ್ನೆಲೆಯಲ್ಲಿ ಹಲವಡೆ ಅಡಿಕೆ, ಬಾಳೆ, ತೆಂಗು, ಭತ್ತ, ಉದ್ದು, ಈರುಳ್ಳಿ, ಟೊಮೆಟೊ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಧಾರವಾಡ, ಗದಗ ಸೇರಿ ಹಲವೆಡೆ ಭಾರಿ ಮಳೆಯಿಂದಾಗಿ ಬೆಳೆ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ ಮುನ್ಸೂಚನೆ ರಾಜ್ಯದಲ್ಲಿ ಇಂದಿನಿಂದ 4…

Read More

ವಾರಣಾಸಿ: ವಾರಣಾಸಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶಂಕರ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದರು, ಇದು ಈ ಪ್ರದೇಶದ ವೃದ್ಧರು ಮತ್ತು ಮಕ್ಕಳಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ ಸಿಗ್ರಾದ ಕ್ರೀಡಾ ಸಂಕೀರ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಪಿಎಂ ಮೋದಿ 23 ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸೇರಿದಂತೆ 6,700 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. “ಇಂದು ಕಾಶಿಗೆ ಬಹಳ ಶುಭ ದಿನ. ದೊಡ್ಡ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದ ನಂತರ ನಾನು ನಿಮ್ಮೆಲ್ಲರ ನಡುವೆ ಬಂದಿದ್ದೇನೆ. ವೃದ್ಧರು ಮತ್ತು ಮಕ್ಕಳು ಆರ್ ಜೆ ಶಂಕರ್ ಕಣ್ಣಿನ ಆಸ್ಪತ್ರೆಯಿಂದ ಸಾಕಷ್ಟು ಸಹಾಯ ಪಡೆಯಲಿದ್ದಾರೆ.” ಎಂದರು. ಪ್ರಧಾನಿ ಮೋದಿ ಹೇಳಿದ್ದೇನು? ಕಳೆದ ದಶಕದಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ಮಹತ್ವವನ್ನು ಪಿಎಂ ಮೋದಿ ಒತ್ತಿ ಹೇಳಿದರು. “ಹೂಡಿಕೆಯ ಮೂಲಕ ನಾಗರಿಕರ ಸೌಲಭ್ಯಗಳನ್ನು ಹೆಚ್ಚಿಸುವುದು ಮೊದಲ ಗುರಿಯಾಗಿದೆ. ಹೂಡಿಕೆಯ ಮೂಲಕ ಯುವಕರಿಗೆ ಉದ್ಯೋಗ ಒದಗಿಸುವುದು ಎರಡನೇ ಗುರಿಯಾಗಿದೆ. ಸಾರಿಗೆಯಲ್ಲಿ ನಡೆಯುತ್ತಿರುವ ಸುಧಾರಣೆಗಳನ್ನು ಎತ್ತಿ…

Read More

ಬೆಂಗಳೂರು : ಹೋಟೆಲ್ ಗ್ರಾಹಕರಿಗೆ ದೀಪಾವಳಿ ಬಳಿಕ ಶಾಕ್ ಎದುರಾಗಲಿದ್ದು, ಕಾಫಿ, ಚಹಾ ದರ 2 ರೂ. ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಭಾರತೀಯ ಕಾಫಿ ವ್ಯಾಪಾರಿ ಸಂಘ (ಐಸಿಟಿಎ) ಕೇಜಿ ಕಾಫಿ ಪುಡಿಗೆ 100 ರೂ. ವರೆಗೆ ಹೆಚ್ಚಿಸುತ್ತಿರುವುದು ಹಾಗೂ ಟೀ ಪುಡಿಯ ದರ ಸಹ ಹೆಚ್ಚಾಗಿರು ವುದು ಇದಕ್ಕೆ ಪ್ರಮುಖ ಕಾರಣವಾಗಿದೆ. ಚಹಾ-ಕಾಫಿ ಬೆಲೆ ಹೆಚ್ಚಳ, ಸಿಲಿಂಡ‌ರ್ ದರ, ಹಾಲಿನ ದರ ಹೆಚ್ಚಳದ ಪರಿಣಾಮ ಕಾಫಿ, ಟೀ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದ್ದು, ಬೆಂಗಳೂರು ನಗರದಲ್ಲಿ ಕಾಫಿ-ಚಹಾಕ್ಕೆ 15- 35 ರೂ. (ಸಾಮಾನ್ಯ ಹೊಟೆಲ್) ಇದ್ದು, ಐಷಾರಾಮಿ ಹೊಟೆಲ್, ಕೆಫೆಗಳಲ್ಲಿ ದರ 100 ರೂ. ಮೇಲಿದೆ. ಸಾಮಾನ್ಯ ಹೊಟೆಲ್‌ಗಳಲ್ಲಿ 2ವರೆಗೆ ಬೆಲೆ ಹೆಚ್ಚಿಸಲು ಚಿಂತನೆ ನಡೆದಿದೆ. ಜನವರಿಯಲ್ಲಿ ಚಿಕೋರಿ ಮಿಶ್ರಿತ ಕಾಫಿ ಪುಡಿಗೆ ಕೇಜಿಗೆ 200- 250 ರೂ. ಇತ್ತು. ಆದರೆ ಇದೀಗ ಕಾಫಿ ಪುಡಿ ಬೆಲೆ ದುಪ್ಪಟ್ಟು ಏರಿಕೆಯಾಗಿದೆ. ರೊಬುಸ್ಟಾ ಕಾಫಿ ಪುಡಿ ಬೆಲೆ ಒಂದು…

Read More

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ. ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನಸೌಧ, ಶಾಂತಿನಗರ, ಜಯನಗರ, ತ್ಯಾಗರಾಜನಗರ, ಶ್ರೀನಗರ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ಸರ್ಕಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರಸ್ತೆ, ರಾಜಾಜಿನಗರ ಹಾಗೂ ಮಲ್ಲೇಶ್ವರಂ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಜಾಲಹಳ್ಳಿ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ ರಸ್ತೆ, ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಮಹದೇವಪುರ, ಬೆಳ್ಳಂದೂರು, ಮಾರತಹಳ್ಳಿ, ಕಾಡುಬೀಸನಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜೆಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, ಆರ್.ಆರ್. ನಗರ, ಕೋಣನಕುಂಟೆ, ತಲಘಟ್ಟಪುರ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ರಾಮನಗರ, ಮಂಂಡ್ಯ, ಮೈಸೂರು, ಶಿವಮೊಗ್ಗ, ದಾವಣಗೆರೆ ಚಿತ್ರದುರ್ಗ, ದಾವಣಗೆರೆ, ಹಾವೇರಿ ಸೇರಿದಂತೆ ರಾಜ್ಯದ…

Read More

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಗಗಾಂಗೀರ್ನಲ್ಲಿ ನಿರ್ಮಾಣ ಸ್ಥಳದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಓರ್ವ ವೈದ್ಯ ಸೇರಿದಂತೆ 6 ಮಂದಿ ನಿರ್ಮಾಣ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ಭಾನುವಾರ ತಿಳಿಸಿವೆ. ಸಾವುನೋವುಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಮೂಲಗಳು ತಿಳಿಸಿವೆ. ಶೇರ್-ಎ-ಕಾಶ್ಮೀರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(SKIMS). ಸುರಂಗ ನಿರ್ಮಾಣದಲ್ಲಿ ತೊಡಗಿರುವ ಖಾಸಗಿ ಕಂಪನಿಯೊಂದರ ಕಾರ್ಮಿಕರನ್ನು ಹೊಂದಿರುವ ಕಾರ್ಮಿಕರ ಶಿಬಿರದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಡಾ.ಶಹನವಾಜ್, ಫಹೀಮ್ ನಜೀರ್, ಕಲೀಂ, ಮೊಹಮ್ಮದ್ ಹನೀಫ್, ಶಶಿ ಅಬ್ರೋಲ್, ಅನಿಲ್ ಶುಕ್ಲಾ ಮತ್ತು ಗುರ್ಮೀತ್ ಸಿಂಗ್ ಎಂದು ಗುರುತಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಅಮಾಯಕ ಕಾರ್ಮಿಕರ ಮೇಲೆ ಭೀಕರ ಮತ್ತು ಹೇಡಿತನದ ದಾಳಿ ನಡೆಸಲಾಗಿದೆ ಎಂದು ವಿವರಿಸಿದ್ದಾರೆ. ನಿರಾಯುಧ ವ್ಯಕ್ತಿಗಳ ಮೇಲಿನ ಹಲ್ಲೆಯನ್ನು ಖಂಡಿಸಿದರು. ಅಬ್ದುಲ್ಲಾ ಅವರು ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡವರ ಕುಟುಂಬಗಳಿಗೆ ತಮ್ಮ ಸಂತಾಪ…

Read More

ಬೆಂಗಳೂರು : ಅಕ್ಟೋಬರ್ 3 ರಿಂದ ಶಾಲಾ ಮಕ್ಕಳಿಗೆ ನೀಡಿದ್ದ ‘ದಸರಾ ರಜೆ’ ಅಂತ್ಯಗೊಂಡಿದ್ದು ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭಗೊಳ್ಳಲಿದೆ. ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರವರೆಗೆ ದಸರಾ ರಜೆ ಘೋಷಣೆ ಮಾಡಿತ್ತು, ಒಟ್ಟು 17 ದಿನಗಳ ಕಾಲ ಶಾಲೆಗಳಿಗೆ ದಸರಾ ರಜೆಯನ್ನು ನೀಡಲಾಗಿತ್ತು. ಅಕ್ಟೋಬರ್ 21 ರ ಇಂದಿನಿಂದ ಶಾಲೆಗಳು ಮತ್ತೆ ಆರಂಭವಾಗಲಿವೆ. 2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಘೋಷಿಸಲಾಗಿತ್ತು. ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ಒಟ್ಟು 17 ದಿನ ದಸರಾ ರಜೆ ನೀಡಲಾಗಿತ್ತು. ರಜೆಯ ಮಜಾ ನಿನ್ನೆಗೆ ಅಂತ್ಯಗೊಂಡಿದ್ದು, ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಪುನಾರಂಭಗೊಳ್ಳಲಿದೆ. ಗಾಂಧಿ ಜಯಂತಿ ಕಾರ್ಯಕ್ರಮದ ಬಳಿಕ 2024-25ನೇ ದಸರಾ ರಜೆ ಆರಂಭವಾಗಿತ್ತು. ಅಕ್ಟೋಬರ್ 21ರಿಂದ ಎರಡನೇ ಅವಧಿ ಆರಂಭವಾಗಲಿದ್ದು, 2025 ಏಪ್ರಿಲ್ 10 ರವರೆಗೆ ಶಾಲೆಗಳು ನಡೆಯಲಿವೆ ಎಂದು ಶಿಕ್ಷಣ ಇಲಾಖೆ…

Read More