Subscribe to Updates
Get the latest creative news from FooBar about art, design and business.
Author: kannadanewsnow57
ಹೈದರಾಬಾದ್: ತೆಲುಗು ಚಲನಚಿತ್ರೋದ್ಯಮದಲ್ಲಿ ಮಹಿಳೆಯರ ಹಕ್ಕುಗಳಿಗಾಗಿ ವಾದಿಸುವಲ್ಲಿ ಸಮಂತಾ ರುತ್ ಪ್ರಭು ದಿಟ್ಟ ನಿಲುವನ್ನು ತೆಗೆದುಕೊಂಡಿದ್ದಾರೆ. ಇತ್ತೀಚೆಗೆ, ತೆಲುಗು ಚಲನಚಿತ್ರೋದ್ಯಮದಲ್ಲಿ (ಟಿಎಫ್ಐ) ಮಹಿಳೆಯರ ಹಕ್ಕುಗಳನ್ನು ಎತ್ತಿಹಿಡಿಯಲು ಸ್ಥಾಪಿಸಲಾದ ಬೆಂಬಲ ಗುಂಪು ದಿ ವಾಯ್ಸ್ ಆಫ್ ವುಮೆನ್ ಸಲ್ಲಿಸಿದ ಉಪಸಮಿತಿಯ ವರದಿಯನ್ನು ಬಿಡುಗಡೆ ಮಾಡುವಂತೆ ತೆಲಂಗಾಣ ಸರ್ಕಾರವನ್ನು ಒತ್ತಾಯಿಸುವ ಪ್ರಭಾವಶಾಲಿ ಇನ್ಸ್ಟಾಗ್ರಾಮ್ ಸ್ಟೋರಿಯನ್ನು ಅವರು ಹಂಚಿಕೊಂಡಿದ್ದಾರೆ. ಸಮಂತಾ ಅವರ ಸಾರ್ವಜನಿಕ ಅನುಮೋದನೆಯು ಈ ಕಾರಣಕ್ಕಾಗಿ ಗಮನಾರ್ಹ ಗಮನವನ್ನು ಸೆಳೆದಿದೆ. ಚಲನಚಿತ್ರೋದ್ಯಮದಲ್ಲಿ ಲೈಂಗಿಕ ಕಿರುಕುಳವನ್ನು ಮುಂಚೂಣಿಗೆ ತರುವಲ್ಲಿ ಕೇರಳದ ವುಮೆನ್ ಇನ್ ಸಿನೆಮಾ ಕಲೆಕ್ಟಿವ್ (ಡಬ್ಲ್ಯುಸಿಸಿ) ಪ್ರಮುಖ ಪಾತ್ರ ವಹಿಸಿದೆ ಎಂದು ಸಮಂತಾ ತಮ್ಮ ಪೋಸ್ಟ್ನಲ್ಲಿ ಶ್ಲಾಘಿಸಿದ್ದಾರೆ. “ತೆಲುಗು ಚಲನಚಿತ್ರೋದ್ಯಮದ ಮಹಿಳೆಯರಾದ ನಾವು ಹೇಮಾ ಸಮಿತಿಯ ವರದಿಯನ್ನು ಸ್ವಾಗತಿಸುತ್ತೇವೆ ಮತ್ತು ಈ ಕ್ಷಣಕ್ಕೆ ದಾರಿ ಮಾಡಿಕೊಟ್ಟ ಕೇರಳದ ಡಬ್ಲ್ಯುಸಿಸಿಯ ನಿರಂತರ ಪ್ರಯತ್ನಗಳನ್ನು ಶ್ಲಾಘಿಸುತ್ತೇವೆ” ಎಂದು ಅವರು ಬರೆದಿದ್ದಾರೆ. ಮಲಯಾಳಂ ಚಿತ್ರರಂಗದಲ್ಲಿ ಮಹಿಳಾ ಹಕ್ಕುಗಳಿಗಾಗಿ ಡಬ್ಲ್ಯುಸಿಸಿಯ ಯಶಸ್ವಿ ಸಮರ್ಥನೆಯೊಂದಿಗೆ ಹೋಲಿಕೆ ಮಾಡುವ ಮೂಲಕ, ಸಮಂತಾ ತೆಲುಗು…
ಬೆಂಗಳೂರು : ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಸೆಪ್ಟೆಂಬರ್ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು, ಅಪಾರ್ಟ್ಮೆಂಟ್ಗಳು ಹಾಗೂ ತಾತ್ಕಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್ ಪಾವತಿಸದಿದ್ದಲ್ಲಿ ಮೀಟರ್ ರೀಡಿಂಗ್ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಪ್ರಕಟಣೆ ಕೋರಿದೆ. ಈವರೆಗೆ, ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್ ಮಾಪನ ಮಾಡಿದ ಬಳಿಕ, ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲು ಲೈನ್ಮೆನ್ಗಳ ಜತೆ ಮಾಪಕ ಓದುಗರು ಮತ್ತೆ ಅದೇ ಸ್ಥಳಕ್ಕೆ ತೆರಳುತ್ತಿದ್ದರು. ಇನ್ನು ಮುಂದೆ ಮಾಪಕ ಓದುಗರೊಂದಿಗೆ ಇರುವ ಲೈನ್ಮೆನ್ಗಳು ವಿದ್ಯುತ್…
ಬೆಂಗಳೂರು : ಇಲಾಖಾ ವಿಚಾರಣೆಯಲ್ಲಿ ವಿಚಾರಣಾಧಿಕಾರಿಗಳನ್ನಾಗಿ `ನ್ಯಾಯಾಧೀಶರನ್ನು ನೇಮಕ ಮಾಡಿ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ (ಶಿಸ್ತು ನಡವಳಿಗಳು) 1965/89 ಮತ್ತು ತಿದ್ದುಪಡಿ ನಿಯಮ 2022 ರ ನಿಯಮ-6 ಮತ್ತು 6 & 8 ರಡಿಯಲ್ಲಿ ರಾಜ್ಯ ವಿವಿಧ ಘಟಕಕಗಳಲ್ಲಿ ಆದೇಶಿಸಲಾದ ಇಲಾಖಾ ವಿಚಾರಣೆಗಳಲ್ಲಿ ಪ್ರಾರಂಭಿಕ ಹಂತದಿಂದ ಅಂತಿಮ ವರದಿ ತಲುಪಿರುವುದು ಪ್ರಕರಣಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಉಲ್ಲೇಖಿತ-2 ರ ಸುತ್ತೋಲೆ ದಿನಾಂಕ: 16.05.2024 ಹಾಗೂ 23.05.2024 ರಲ್ಲಿ ಮಾರ್ಗಸೂಚಿಗಳನ್ನು ನೀಡಲಾಗಿರುತ್ತದೆ. ಸರ್ಕಾರವು ಇಲಾಖಾ ವಿಚಾರಣೆಗಳಲ್ಲಿ ಕರ್ತವ್ಯ ನಿರತ ಅಧಿಕಾರಿಗಳನ್ನು ವಿಚಾರಣಾಧಿಕಾರಿಯಾಗಿ ನೇಮಕ ಮಾಡುವುದರಿಂದ ಅವರುಗಳ ದಿನ ನಿತ್ಯದ ಕರ್ತವ್ಯದ ಜೊತೆಗೆ ಅಪರಾಧ, ಕಾನೂನು & ಸುವ್ಯವಸ್ಥೆ, ತನಿಖೆ, ಮೇಲ್ವಿಚಾರಣೆ ಮತ್ತು ಇತರೆ ಕರ್ತವ್ಯಗಳಿಗೆ ಅಡಚಣೆ ಉಂಟಾಗುತ್ತದೆ. ಇದರಿಂದಾಗಿ ಆದೇಶಿಸಲಾದ ಇಲಾಖಾ ವಿಚಾರಣೆಗಳು ಸಹ ತ್ವರಿತವಾಗಿ ಪೂರ್ಣಗೊಳ್ಳುತ್ತಿಲ್ಲ. ಈ ಅಂಶಗಳ ಹಿನ್ನಲೆಯಲ್ಲಿ ಸರ್ಕಾರವು ನಿವೃತ್ತ ನ್ಯಾಯಾಧೀಶರು, ವಿಚಾರಣಾಧಿಕಾರಿಯಾಗಿ ನೇಮಕ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಿಕೊಟ್ಟಿದ್ದು…
ನವದೆಹಲಿ: ಕಳೆದ ಕೆಲವು ವರ್ಷಗಳಿಂದ ಜಿಲ್ಲಾ ನ್ಯಾಯಾಂಗಕ್ಕೆ ಹೆಚ್ಚಿನ ಸಂಖ್ಯೆಯ ಮಹಿಳೆಯರು ಸೇರುತ್ತಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ.ಚಂದ್ರಚೂಡ್ ಶನಿವಾರ ಹೇಳಿದ್ದಾರೆ. ಜಿಲ್ಲಾ ನ್ಯಾಯಾಂಗದ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸಿಜೆಐ ಚಂದ್ರಚೂಡ್ ಮಾತನಾಡುತ್ತಿದ್ದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಭಾಗವಹಿಸಿದ್ದರು. “2023 ರಲ್ಲಿ ರಾಜಸ್ಥಾನದಲ್ಲಿ ಸಿವಿಲ್ ನ್ಯಾಯಾಧೀಶರ ಒಟ್ಟು ನೇಮಕಾತಿಯಲ್ಲಿ ಮಹಿಳೆಯರು 58% ರಷ್ಟಿದ್ದಾರೆ. 2023 ರಲ್ಲಿ ದೆಹಲಿಯಲ್ಲಿ ನೇಮಕಗೊಂಡ ನ್ಯಾಯಾಂಗ ಅಧಿಕಾರಿಗಳಲ್ಲಿ 66% ಮಹಿಳೆಯರು. ಉತ್ತರ ಪ್ರದೇಶದಲ್ಲಿ, 2022 ರ ಬ್ಯಾಚ್ನಲ್ಲಿ ಸಿವಿಲ್ ನ್ಯಾಯಾಧೀಶರ (ಕಿರಿಯ ವಿಭಾಗ) ನೇಮಕಾತಿಗಳಲ್ಲಿ 54% ಮಹಿಳೆಯರು. ಕೇರಳದಲ್ಲಿ, ಒಟ್ಟು ನ್ಯಾಯಾಂಗ ಅಧಿಕಾರಿಗಳ ಪೈಕಿ 72% ಮಹಿಳೆಯರು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು. ಆದಾಗ್ಯೂ, ಯುವ ಮಹಿಳಾ ನ್ಯಾಯಾಧೀಶರಿಗೆ ಅಗೌರವ ತೋರಿದ ಘಟನೆಯನ್ನು ಸಿಜೆಐ ಉಲ್ಲೇಖಿಸಿದರು. “ಗ್ರಾಮೀಣ ನ್ಯಾಯಾಲಯದ ಯುವ ಜಿಲ್ಲಾ ನ್ಯಾಯಾಧೀಶರು ಇತ್ತೀಚೆಗೆ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಬಾರ್ ನ ಹೆಚ್ಚಿನ…
ಕೃಷಿ ಇಲಾಖೆ ವತಿಯಿಂದ ಪ್ರಸ್ತಕ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆ ಬೆಳೆಯುವ ಹಾಗೂ ಬೆಳೆಯಲು ಇಚ್ಚಿಸಿರುವ ರೈತ ಫಲಾನುಭವಿಗಳಿಗೆ ಸಹಾಯಧನ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಶೇ.90 ರಂತೆ ಗರಿಷ್ಠ 2 ಹೆಕ್ಟೇರ್ವರೆಗೆ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲಾಗುತ್ತದೆ. ಅಲ್ಪಸಂಖ್ಯಾತ ವರ್ಗದವರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಅನುದಾನ ಮೀಸಲಿರಿಸಲಾಗಿದೆ. ಆಸಕ್ತ ರೈತರು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಿ, ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟೋಕಿಯೋ:ಮನುಷ್ಯರು ದಶಕಗಳಿಂದ ವಯಸ್ಸಾಗುವುದನ್ನು ಧಿಕ್ಕರಿಸಲು ಪ್ರಯತ್ನಿಸುತ್ತಿದ್ದಾರೆ. ಜಪಾನ್ನಲ್ಲಿ ಅಂತಹ ಒಬ್ಬ ವ್ಯಕ್ತಿ ಈಗ 12 ವರ್ಷಗಳಿಂದ ಆಘಾತಕಾರಿ ಅಭ್ಯಾಸವನ್ನು ಅಭ್ಯಾಸ ಮಾಡುತ್ತಿದ್ದಾನೆ. ತರಬೇತಿಗಾಗಿ ಹೆಚ್ಚಿನ ಗಂಟೆಗಳನ್ನು ಪಡೆಯುವ ಪ್ರಯತ್ನದಲ್ಲಿ ತಾನು ದಿನಕ್ಕೆ 30 ನಿಮಿಷಗಳನ್ನು ಮಾತ್ರ ಮಲಗುತ್ತೇನೆ ಎಂದು ಡೈಸುಕೆ ಹೋರಿ ಹೇಳಿದ್ದಾರೆ. ಅವರು ವಾರಕ್ಕೆ 16 ಗಂಟೆಗಳ ಕಾಲ ಜಿಮ್ ನಲ್ಲಿ ತರಬೇತಿ ಪಡೆಯುತ್ತಾರೆ. ತಾನು ಪಡೆಯುವ ಅಲ್ಪ ನಿದ್ರೆಯು ತನ್ನ ಆರೋಗ್ಯದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಿಲ್ಲ ಏಕೆಂದರೆ ತಾನು ತನ್ನ ಮೆದುಳು ಮತ್ತು ದೇಹವನ್ನು ಎಂದಿನಂತೆ ಕಾರ್ಯನಿರ್ವಹಿಸಲು ತರಬೇತಿ ನೀಡಿದ್ದೇನೆ ಎಂದು ಹೋರಿ ಹೇಳುತ್ತಾರೆ. ತಾನು ಎಂದಿಗೂ ದಣಿದಿಲ್ಲ ಎಂದು ಅವರು ಹೇಳುತ್ತಾರೆ. ಉತ್ತಮ ಆರೋಗ್ಯಕ್ಕಾಗಿ ರಾತ್ರಿಯಲ್ಲಿ ಕನಿಷ್ಠ ಎಂಟು ಗಂಟೆಗಳ ಕಾಲ ಮಲಗಲು ಜನರಿಗೆ ಹೇಳಲಾಗಿದ್ದರೂ, ಹೋರಿ ಈ ಕಲ್ಪನೆಯನ್ನು ಉಲ್ಲಂಘಿಸಿದ್ದಾರೆ. ಅವರು ತಮ್ಮ ದಿನಕ್ಕೆ ಹೆಚ್ಚು ಸಕ್ರಿಯ ಗಂಟೆಗಳನ್ನು ಸೇರಿಸಲು ತಮ್ಮ ನಿದ್ರೆಯ ಸಮಯವನ್ನು ಕಡಿತಗೊಳಿಸಲು ಪ್ರಾರಂಭಿಸಿದರು. ಇದು ಅವರನ್ನು ದಿನಕ್ಕೆ ಕೇವಲ…
ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಸಿಹಿಸುದ್ದಿ ನೀಡಿದ್ದು, ಆಗಸ್ಟ್ 31ಕ್ಕೆ ಕೊನೆಯ ದಿನಾಂಕವಾಗಿದ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸೆಪ್ಟೆಂಬರ್ 15ರವರೆಗೆ ಮುಂದೂಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅಜರ್ಿ ಆಹ್ವಾನಿಸಲಾಗಿದೆ. ಈ ಎಲ್ಲಾ ಯೋಜನೆಗಳು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು…
ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ತನಿಖೆಗೆ ಅನುಮತಿ ನೀಡುವಂತೆ ಕಾಂಗ್ರೆಸ್ ಇಂದು ದೂರು ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಸಚಿವ ಸಂಪುಟದ ಇತರ ಸಚಿವರು ಮತ್ತು ಕಾಂಗ್ರೆಸ್ ಶಾಸಕರು ‘ರಾಜಭವನ ಚಲೋ’ ನಡೆಸಿ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೂಟ್ ಅವರನ್ನು ಭೇಟಿಯಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ವಿರುದ್ದಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ದೂರು ನೀಡಿದ್ದಾರೆ. https://twitter.com/i/status/1829769289521340704 ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ ನೀಡಬೇಕು ಎಂದು ಮನವಿ ಮಾಡಲು ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ರಾಜಭವನ ಚಲೋ…
ನವದೆಹಲಿ: ನವದೆಹಲಿಯ ಭಾರತ್ ಮಂಟಪದಲ್ಲಿ ಜಿಲ್ಲಾ ನ್ಯಾಯಾಂಗದ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಪ್ರಧಾನಿ ಮೋದಿ, ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ಸಿಜೆಐ ಡಿ.ವೈ.ಚಂದ್ರಚೂಡ್ ಮತ್ತು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಅಧ್ಯಕ್ಷ ಕಪಿಲ್ ಸಿಬಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ಸುಪ್ರೀಂ ಕೋರ್ಟ್ನ 75 ವರ್ಷಗಳು, ಇದು ಕೇವಲ ಒಂದು ಸಂಸ್ಥೆಯ ಪ್ರಯಾಣವಲ್ಲ. ಇದು ಭಾರತದ ಸಂವಿಧಾನ ಮತ್ತು ಅದರ ಸಾಂವಿಧಾನಿಕ ಮೌಲ್ಯಗಳ ಪ್ರಯಾಣವಾಗಿದೆ. ಪ್ರಜಾಪ್ರಭುತ್ವವಾಗಿ ಭಾರತವು ಹೆಚ್ಚು ಪ್ರಬುದ್ಧವಾಗುತ್ತಿರುವ ಪ್ರಯಾಣ ಇದು. ಭಾರತದ ಜನರು ಭಾರತೀಯ ನ್ಯಾಯಾಂಗ ಮತ್ತು ಸುಪ್ರೀಂ ಕೋರ್ಟ್ ಬಗ್ಗೆ ಎಂದಿಗೂ ಅಪನಂಬಿಕೆ ಹೊಂದಿಲ್ಲ. ಆದ್ದರಿಂದ, ಸುಪ್ರೀಂ ಕೋರ್ಟ್ನ ಈ 75 ವರ್ಷಗಳು ಪ್ರಜಾಪ್ರಭುತ್ವದ ತಾಯಿಯಾಗಿ ಭಾರತದ ವೈಭವವನ್ನು ಮತ್ತಷ್ಟು ಹೆಚ್ಚಿಸುತ್ತವೆ… ನಮ್ಮ ಸಂಸ್ಥೆಯ ಮೇಲೆ ನಮಗಿರುವ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ.” ಎಂದರು.
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಪಾಲಾಗಿರುವ ನಟ ದರ್ಶನ್ ಬಗ್ಗೆ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದು, ದರ್ಶನ್ ಗೂ ಕುಟುಂಬ ಇದೆ. ಅಭಿಮಾನಿಗಳಿಗೆ ನೋವಾಗುವುದು ಬೇಡ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿರುವ ನಟ ಕಿಚ್ಚ ಸುದೀಪ್, ದರ್ಶನ್ ಗೂ ಕುಟುಂಬ ಇದೆ. ಅಭಿಮಾನಿಗಳಿಗೆ ನೋವಾಗುವುದು ಬೇಡ, ನನಗೆ ದೇಶದ ಕಾನೂನು, ಸರ್ಕಾರದ ಮೇಲೆ ನಂಬಿಕೆ ಇದೆ. ಮಾಧ್ಯಮಗಳ ಮೂಲಕ ನಮಗೆ ಎಲ್ಲಾ ವಿಚಾರ ಗೊತ್ತಾಗುತ್ತಿದೆ ಎಂದರು. ದರ್ಶನ್ ಪ್ರಕರಣದಲ್ಲಿ ಕಾನೂನು ಪ್ರಕಾರ ಏನು ಆಗಬೇಕೋ ಅದು ಆಗುತ್ತದೆ. ಪ್ರಕರಣದ ಬಗ್ಗೆ ಕೋರ್ಟ್ ನಿರ್ಧಾರ ಕೈಗೊಳ್ಳಲಿದೆ ಎಂದು ತಮ್ಮ ಮಾಜಿ ಕುಚಿಕು ಗೆಳೆಯನ ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.












