Author: kannadanewsnow57

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ ಅವರು ಮಧ್ಯಂತರ ಜಾಮೀನು ಮೇಲೆ ಹೊರಗಡೆ ಇದ್ದಾರೆ. ಬೆನ್ನು ನೋವಿನ ಸಮಸ್ಯೆ ಕಾರಣ ತಿಳಿಸಿ ಹೈ ಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದುಕೊಂಡು ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೈಲಿನಿಂದ ಬಿಡುಗಡೆ ಆದ ಕೂಡಲೇ ಒಂದು ವಾರದ ಒಳಗೆ ನಟ ದರ್ಶನ್ ಅವರ ಆರೋಗ್ಯದ ವೈದ್ಯಕೀಯ ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಮಧ್ಯಂತರ ಜಾಮೀನು ನೀಡುವ ಸಂದರ್ಭದಲ್ಲಿ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ನಟ ದರ್ಶನ್ ಪರ ವಕೀಲರು ಹೈಕೋರ್ಟಿಗೆ ಅವರ ಆರೋಗ್ಯದ ವೈದ್ಯಕೀಯ ವರದಿ ಸಲ್ಲಿಸಿದ್ದಾರೆ. ಹೈ ಕೋರ್ಟ್ ಗೆ ಸಲ್ಲಿಸಿರುವ ವರದಿಯಲ್ಲಿ ಸರ್ಜರಿಗೆ ನಟ ದರ್ಶನ್ ಅವರು ಇನ್ನು ಒಪ್ಪಿಗೆ ಸೂಚಿಸಿಲ್ಲ. ಅತ್ಯಗತ್ಯವಾಗಿದ್ದರೆ ಮಾತ್ರ ಅವರಿಗೆ ಸರ್ಜರಿ ಮಾಡಲಾಗುತ್ತದೆ ಎಂದು ಹೈ ಕೋರ್ಟ್ ಗೆ ಸಲ್ಲಿಸಿರುವ ವರದಿ ಕುರಿತು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹಾಗಾಗಿ ನಟ ದರ್ಶನ್ ಗೆ ಇನ್ನು ಫಿಸಿಯೋಥೆರಪಿ ಮಾಡಬೇಕಾ ಅಥವಾ…

Read More

ಬೆಂಗಳೂರು : ಅನರ್ಹರು ಹೊಂದಿರುವ ಅಂತ್ಯೋದಯ (ಎಎವೈ), ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹಿಂದಿರುಗಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಈ ಮೂಲಕ ಎಲ್ಲಾ ಪಡಿತರ ಚೀಟಿದಾರರಿಗೆ ತಿಳಿಸುವುದೇನೆಂದರೆ, ಈ ಕೆಳಕಂಡ ಕುಟುಂಬಗಳು ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಹೊಂದಲು ಅನರ್ಹರಾಗಿರುತ್ತಾರೆ. 1. ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಎಲ್ಲಾ ಖಾಯಂ ನೌಕರರು ಅಂದರೆ, ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳು ಇತ್ಯಾದಿ; 2. ಆದಾಯ ತೆರಿಗೆ/ ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು. 3. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು. 4. ಜೀವನೋಪಾಯಕ್ಕಾಗಿ…

Read More

ಮುಂಬೈ: ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದ ಪ್ರತ್ಯಕ್ಷದರ್ಶಿಯೊಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದು, ವ್ಯಕ್ತಿಯೊಬ್ಬರಿಂದ ತನಗೆ ಬೆದರಿಕೆ ಕರೆ ಬಂದಿದ್ದು, 5 ಕೋಟಿ ರೂ ಕೇಳಿದ್ದಾನೆ ಎಂದಿದ್ದಾರೆ. ಈ ಘಟನೆಯಲ್ಲಿ ಕೆಲವು ಸ್ಥಳೀಯರ ಪಾತ್ರವಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಮಾಜಿ ಶಾಸಕ ಮತ್ತು ಸಚಿವ ಸಿದ್ದೀಕ್ ಅವರನ್ನು ಅಕ್ಟೋಬರ್ 12 ರಂದು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸದಸ್ಯರು ಕೊಲೆ ಮಾಡಿದ್ದರು. ಅವರ ಹತ್ಯೆಯ ನಂತರ, ಅವರ ಮಗ, ಶಾಸಕ ಜೀಶಾನ್ ಸಿದ್ದಿಕಿ ಮತ್ತು ನಟ ಸಲ್ಮಾನ್ ಖಾನ್ ಅವರಿಗೆ ಬೆದರಿಕೆಗಳು ಬಂದಿವೆ. ಅಕ್ಟೋಬರ್ 31 ರಂದು ಖಾರ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ, ಬಾಬಾ ಸಿದ್ದಿಕಿ ಅವರೊಂದಿಗೆ ಕೆಲಸ ಮಾಡುತ್ತಿದ್ದ ಮತ್ತು ಅವರನ್ನು ಗುಂಡಿಕ್ಕಿ ಕೊಂದಾಗ ಸ್ಥಳದಲ್ಲಿದ್ದ ಇಕ್ಬಾಲ್ ಶೇಖ್, 5 ಕೋಟಿ ರೂ.ಗಳನ್ನು ಪಾವತಿಸದಿದ್ದರೆ ತಾನೂ ಗುಂಡಿಕ್ಕಿ ಕೊಲ್ಲುವುದಾಗಿ ವ್ಯಕ್ತಿಯಿಂದ ಕರೆ ಬಂದಿದೆ ಎಂದು ಹೇಳಿದ್ದಾರೆ. ಕರೆ ಮಾಡಿದವನು ಶೇಖ್ ಅವರ ಕುಟುಂಬ ಸದಸ್ಯರನ್ನು ಮತ್ತು ಮಾಲ್ನ ಹೊರಗಿನ ಸ್ಥಳವನ್ನು…

Read More

ಚಿತ್ರದುರ್ಗ : ಕಳೆದ ಅಕ್ಟೋಬರ್ ಮಾಹೆಯಲ್ಲಿ ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಬೆಳೆಹಾನಿ ಆದ ರೈತರ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಚಿತ್ರದುರ್ಗ, ಚಳ್ಳಕೆರೆ, ಹಿರಿಯೂರು ಹಾಗೂ ಮೊಳಕಾಲ್ಮೂರು ತಾಲ್ಲೂಕುಗಳಲ್ಲಿ ಕಳೆದ ಅಕ್ಟೋಬರ್ ಮಾಹೆಯಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಠಿಯಿಂದ ಉಂಟಾದ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷಾ ತಂಡವು ಸ್ಥಳ ಪರಿಶೀಲನೆ ನಡೆಸಿ, ಬೆಳೆ ಹಾನಿ ಕ್ಷೇತ್ರಗಳ ಮಾಹಿತಿ ನೀಡಿದೆ. ಜಿಲ್ಲೆಯಲ್ಲಿ ಒಟ್ಟು 914.45 ಹೆಕ್ಟೇರ್ ಕೃಷಿ ಬೆಳೆ ಹಾಗೂ 241.80 ತೋಟಗಾರಿಕೆ ಬೆಳೆ ಸೇರಿ ಒಟ್ಟು 1,156.25 ಹೆಕ್ಟೇರ್ ಕ್ಷೇತ್ರದಲ್ಲಿ ಬೆಳೆ ಹಾನಿಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 172.77 ಹೆಕ್ಟೇರ್ ಕೃಷಿ, 94.50 ತೋಟಗಾರಿಕೆ ಸೇರಿ 267.27 ಹೆಕ್ಟೇರ್ ಬೆಳೆ ಹಾನಿ ಸಂಭವಿಸಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 478.47 ಹೆಕ್ಟೇರ್ ಕೃಷಿ ಬೆಳೆ, 89.40 ಹೆಕ್ಟೇರ್ ತೋಟಗಾರಿಕೆ ಸೇರಿ 567.87 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 162.50 ಹೆಕ್ಟೇರ್…

Read More

ಬೆಂಗಳೂರು : ದಿನಾಂಕ: 03.10.2024 ರಂದು ನಡೆದ ಪಿಎಸ್‌ಐ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2 ರಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ವಿವರಗಳುಳ್ಳ ತಾತ್ಕಾಲಿಕ ಅಂಕಪಟ್ಟಿಯನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ಲಿಂಕ್ ಮೂಲಕ ದಿನಾಂಕ: 09.11.2024ರ ಸಂಜೆ 5.30 ವರೆಗೂ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಬೇರೆ ಯಾವುದೇ ಇತರೆ ರೀತಿಯಲ್ಲಿ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ. ಸೂಚನೆ: ದಿನಾಂಕ 06.11.2024 ರಂದು ಪ್ರಕಟಿಸಿರುವ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಮಾತ್ರ ಲಿಂಕ್ ಮೂಲಕ ಸಲ್ಲಿಸುವುದು. ಈಗಾಗಲೇ ಕೀ ಉತ್ತರಗಳನ್ನು ಅಂತಿಮಗೊಳಿಸಿದ್ದು, ಕೀ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ. Phone: 080-23 564 583 Helpline: 080-23 460 460. e-mail: keauthority-ka@nic.in Website : http://kea.kar.nic.in 

Read More

ನವದೆಹಲಿ : ಮಹಿಳೆಯರು ಮತ್ತು ಅಪ್ರಾಪ್ತ ವಯಸ್ಕರನ್ನು ಒಳಗೊಂಡ ಲೈಂಗಿಕ ಕಿರುಕುಳ ಮತ್ತು ದೈಹಿಕ ಗಾಯಗಳ ಪ್ರಕರಣಗಳಲ್ಲಿ ತೀರ್ಪು ನೀಡುವಾಗ ಸಂತ್ರಸ್ತರಿಗೆ ಪರಿಹಾರವನ್ನು ನೀಡಲು ಆದೇಶಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶಿಸಿದೆ. ಅಲ್ಲದೆ, ಅಂತಹ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸಾಧ್ಯವಾದಷ್ಟು ಬೇಗ ಪರಿಹಾರವನ್ನು ಪಡೆಯಲು, ಸೂಚನೆಗಳನ್ನು ತ್ವರಿತವಾಗಿ ಜಾರಿಗೊಳಿಸಲು ಜಿಲ್ಲಾ ಮತ್ತು ರಾಜ್ಯ ಕಾನೂನು ಸೇವೆಗಳ ಅಧಿಕಾರಿಗಳಿಗೆ ನ್ಯಾಯಾಲಯ ಆದೇಶಿಸಿದೆ. ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ಅತ್ಯಾಚಾರ ಮತ್ತು ಹಲ್ಲೆ ಆರೋಪಿಯ ಜಾಮೀನು ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ನ್ಯಾಯಮೂರ್ತಿ ಪಂಕಜ್ ಮಿತ್ತಲ್ ಅವರ ಪೀಠವು ಈ ನಿರ್ದೇಶನಗಳನ್ನು ನೀಡಿದೆ. ) ಅಂತಹ ಪ್ರಕರಣಗಳಲ್ಲಿ, ವಿಚಾರಣಾ ನ್ಯಾಯಾಲಯವು, ಸತ್ಯ ಮತ್ತು ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ಮತ್ತು ಲಭ್ಯವಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಯನ್ನು ಅಪರಾಧಿ ಅಥವಾ ಖುಲಾಸೆಗೊಳಿಸುವಾಗ ಸಂತ್ರಸ್ತೆಗೆ ಪರಿಹಾರವನ್ನು ಆದೇಶಿಸಬೇಕು ಎಂದು ಪೀಠ ಹೇಳಿದೆ.…

Read More

ನವದೆಹಲಿ : ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುವಾಗ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸಾರ್ವಜನಿಕ ಸೇವಕರನ್ನು ವಿಚಾರಣೆಗೆ ಒಳಪಡಿಸುವ ಮೊದಲು ಪೂರ್ವಾನುಮತಿ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಅಭಯ್ ಎಸ್ ಓಕಾ ಮತ್ತು ನ್ಯಾಯಮೂರ್ತಿ ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠವು ಜಾರಿ ನಿರ್ದೇಶನಾಲಯದ (ಇಡಿ) ಮನವಿಯನ್ನು ತಿರಸ್ಕರಿಸಿತು. ಇದರಲ್ಲಿ ತೆಲಂಗಾಣ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಲಾಗಿತ್ತು. ಆಂಧ್ರಪ್ರದೇಶ ಸರ್ಕಾರದ ಇಬ್ಬರು ಹಿರಿಯ ಅಧಿಕಾರಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಇಡಿ ಪ್ರಾಸಿಕ್ಯೂಷನ್ ದೂರನ್ನು ಪರಿಗಣಿಸಿ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಾಧೀಶರು ಮತ್ತು ಸಾರ್ವಜನಿಕ ಸೇವಕರ ಪ್ರಾಸಿಕ್ಯೂಷನ್‌ಗೆ ಸಂಬಂಧಿಸಿದ CrPC ಯ ಸೆಕ್ಷನ್ 197(1) ಅನ್ನು (ಭಾರತೀಯ ನಾಗರಿಕ ರಕ್ಷಣಾ ಸಂಹಿತೆ, 2023 ರ ಸೆಕ್ಷನ್ 218 ಗೆ ಅನುಗುಣವಾಗಿ) ಪೀಠವು ಉಲ್ಲೇಖಿಸಿದೆ. ನ್ಯಾಯಾಧೀಶರು ಅಥವಾ ಮ್ಯಾಜಿಸ್ಟ್ರೇಟ್ ಅಥವಾ ಸಾರ್ವಜನಿಕ ಸೇವಕರಾಗಿರುವ ವ್ಯಕ್ತಿಯನ್ನು ಸರ್ಕಾರದ ಅನುಮತಿಯಿಲ್ಲದೆ ಅವರ ಕಚೇರಿಯಿಂದ ತೆಗೆದುಹಾಕಲು ಸಾಧ್ಯವಾಗದಿದ್ದರೆ, ಅವರು ಕಾರ್ಯನಿರ್ವಹಿಸುತ್ತಿರುವಾಗ…

Read More

ಬೆಂಗಳೂರು : ಮಾನ್ಯ ನ್ಯಾಯಾಲಯದಲ್ಲಿ ಬಿಡುಗಡೆ ಹೊಂದಿದ ಪ್ರಕರಣಗಳಲ್ಲಿ Acquittal Review Committee ಸಮಿತಿಯು ಶಿಫಾರಸ್ಸಿನ ಆಧಾರದ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳು ತನಿಖೆಯಲ್ಲಿ ಕರ್ತವ್ಯಲೋಪವೆಸಗಿರುವ ಬಗ್ಗೆ ಶಿಸ್ತು ಕ್ರಮ ಜರುಗಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪೊಲೀಸ್ ಇಲಾಖೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಅಪರಾಧ ಮೊಕದ್ದಮೆಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಅಂತಿಮ ವರದಿಗಳು ಸಲ್ಲಿಸಲ್ಪಟ್ಟ ನಂತರ ಮಾನ್ಯ ನ್ಯಾಯಾಲಯವು ವಿಚಾರಣೆ ನಡೆಸಿ ಹೊರಡಿಸುತ್ತಿರುವ ಅನೇಕ ತೀರ್ಪುಗಳಲ್ಲಿ ವಿವಿಧ ವೃಂದದ ಅಧಿಕಾರಿ/ಸಿಬ್ಬಂದಿಗಳು ಸಮರ್ಪಕವಾಗಿ ತನಿಖೆ ಮಾಡದೇ ಇರುವುದರ ಬಗ್ಗೆ ಅಥವಾ ತನಿಖೆಯಲ್ಲಿನ ಲೋಪದೋಷಗಳ ಬಗ್ಗೆ ಉಲ್ಲೇಖಿಸಲಾಗಿರುತ್ತದೆ ಮತ್ತು ಇದರಿಂದಾಗಿ ಆರೋಪಿತರುಗಳಿಗೆ ಸಂಶಯದ ಲಾಭವನ್ನು ನೀಡಿ ಪ್ರಕರಣಗಳು ಖುಲಾಸೆಯಾಗುತ್ತಿರುತ್ತವೆ. ಸರ್ಕಾರದ ಆದೇಶ ಸಂಖ್ಯೆ: ಹೆಚ್‌ಡಿ126/ಸಿಡಬ್ಲೂಪಿ/2014 0:20.10.2014 ಆದೇಶಿಸಿರುವಂತೆ ನ್ಯಾಯಾಲಯದಲ್ಲಿ ಖುಲಾಸೆಗೊಂಡ ಪ್ರಕರಣಗಳನ್ನು ಕೇಸಿನ ಕಡತದೊಂದಿಗೆ ಪರಾಮರ್ಶಿಸುವುದರ ಸಲುವಾಗಿ ರಾಜ್ಯದ ಪ್ರತಿ ವಲಯ ಮತ್ತು ನಗರ ಕಮೀಷನರೇಟ್‌ಗಳಲ್ಲಿ ಹಾಗೂ ಜಿಲ್ಲಾಘಟಕಗಳಲ್ಲಿ ಸರ್ಕಾರಿ ಅಭಿಯೋಜಕರುಗಳನ್ನು ಒಳಗೊಂಡ Acquittal Review Committee…

Read More

ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್ ಓದುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 50 ಲಕ್ಷ ರೂ.ವರೆಗೆ ಪ್ರೋತ್ಸಾಹಧನ ನೀಡಲು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ವಿದ್ಯಾರ್ಥಿಯು ಪಿಯುಸಿಯಲ್ಲಿ ಶೇಕಡ 95 ರಷ್ಟು ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ನೀಟ್ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಲಭ್ಯವಾಗದಿದ್ದಾಗ ಆಡಳಿತ ಮಂಡಳಿ ಕೋಟಾದಡಿ ಎಂಬಿಬಿಎಸ್‌ ಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಮೊದಲನೇ ವರ್ಷದ ಕಾಲೇಜು ಶುಲ್ಕ 25 ಲಕ್ಷ ರೂಪಾಯಿ ಪಾವತಿಸಲು ಪ್ರೋತ್ಸಾಹ ಧನ ಮಂಜೂರು ಮಾಡಲಾಗುವುದು. ಅದೇ ವಿದ್ಯಾರ್ಥಿಯು ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 60ರಷ್ಟು ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ ಪುನಃ 25 ಲಕ್ಷ ಪ್ರೋತ್ಸಾಹಧನ ಮಂಜೂರು ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

Read More

ಬೆಂಗಳೂರು : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ 2024-25 ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್‍ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸ್ತಕರು ವೆಬ್‍ ಸೈಟ್ www.kacdc.karnataka.gov.in ನಲ್ಲಿ ಡಿಸೆಂಬರ್ 15 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಬೆಂಗಳೂರು ದಕ್ಷಿಣ ಜಿಲ್ಲೆ, ನಂ.123/1037, 1ನೇ ಮಹಡಿ, 20ನೇ ಮುಖ್ಯ ರಸ್ತೆ, 5ನೇ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ರಾಜಾಜಿನಗರ, ಬೆಂಗಳೂರು- 560010, ಅಥವಾ ದೂರವಾಣಿ ಸಂಖ್ಯೆ: 080-23156006 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ದಕ್ಷಿಣ ಜಿಲ್ಲೆ, ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More