Author: kannadanewsnow57

ಅಧಿಕ ರಕ್ತದೊತ್ತಡ, ಮಧುಮೇಹ ಮತ್ತು ಅಧಿಕ ತೂಕ ಹೊಂದಿರುವವರಲ್ಲಿ ಮಾತ್ರ ಹೃದಯಾಘಾತ ಸಂಭವಿಸುತ್ತದೆ ಎಂದು ಜನರು ನಂಬುತ್ತಿದ್ದರು. ಆದರೆ ಈಗ ಹೃದಯಾಘಾತದ ಮಾದರಿ ಬದಲಾಗಿದೆ. ನಿಯಮಿತವಾಗಿ ವ್ಯಾಯಾಮ ಮಾಡುವ ಆರೋಗ್ಯವಂತ ಜನರ ಮೇಲೂ ಹೃದಯಾಘಾತಗಳು ಪರಿಣಾಮ ಬೀರುತ್ತಿವೆ. ಇತ್ತೀಚೆಗೆ ಬೆಳಿಗ್ಗೆ ನಡೆಯುತ್ತಿದ್ದಾಗ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು ಹಲವರನ್ನು ಆಘಾತಗೊಳಿಸಿದೆ. ಉತ್ತರ ಪ್ರದೇಶದಲ್ಲಿ ನಡೆದ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ವಾಕಿಂಗ್‌ಗೆ ಹೋಗುತ್ತಿದ್ದ 28 ವರ್ಷದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಲಿಯಾದ ವ್ಯಕ್ತಿಯನ್ನು ರಾಷ್ಟ್ರೀಯ ಲೋಕದಳ ಕಾರ್ಯಕರ್ತ ಅಮಿತ್ ಚೌಧರಿ ಎಂದು ಗುರುತಿಸಲಾಗಿದೆ. https://twitter.com/i/status/1903476308350546301 ಚೌಧರಿ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿಯೊಬ್ಬ ಅವರ ಬಳಿಗೆ ಬಂದು ಸ್ವಾಗತಿಸುತ್ತಾ, ಭುಜ ತಟ್ಟಿ ಹೊರಟು ಹೋಗುತ್ತಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಅದಾದ ನಂತರ, ಅವರಿಗೆ ಇದ್ದಕ್ಕಿದ್ದಂತೆ ಹೃದಯಾಘಾತವಾಯಿತು. ತೀವ್ರ ಸಂಕಷ್ಟದಲ್ಲಿ, ಅವರು ಬೆಂಬಲಕ್ಕಾಗಿ ಮನೆಯ ಎದುರಿನ ಗೋಡೆಯನ್ನು ಹಿಡಿದುಕೊಳ್ಳಲು ಪ್ರಯತ್ನಿಸಿದರು. ಆದರೆ ಯಾವುದೇ…

Read More

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ 2024-25 ನೇ ಸಾಲಿನ ಐಐಎಸ್ಸಿ, ಐಐಟಿ ಮತ್ತು ಎನ್ಐಟಿ( IISc, IIT, NIT ) ಸಂಸ್ಥೆಗಳ ಮೂಲಕ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಆಂಡ್ ಮಷೀನ್ ಲರ್ನಿಂಗ್ ಮುಂತಾದ ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡಗಳ ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 11 ಕಡೆಯ ದಿನವಾಗಿದ್ದು ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕಚೇರಿಯಿಂದ ಅರ್ಜಿ ನಮೂನೆ ಪಡೆದು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 200 ಇಂಜಿನಿಯರಿಂಗ್ ಪದವೀಧರರಿಗೆ ರೂ.15000/- ಗಳ ಶಿಷ್ಯ ವೇತನ/ತರಬೇತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪರಿಶಿಷ್ಟ ವರ್ಗಗಳ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಸ್ ಜಿ ಶ್ರೀನಿವಾಸ್ ತಿಳಿಸಿದ್ದಾರೆ.

Read More

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಆಸ್ತಿಗಳಿಗೆ ಇ–ಖಾತಾ ಮಾಡಿಸಲು ಹೊಸ ವೆಬ್ ಸೈಟ್ ಆರಂಭಿಸಲಾಗಿದ್ದು, ಖಾತೆ ಇಲ್ಲದವರೂ ಸಹ ಇ–ಖಾತಾ ಪಡೆಯಬಹುದಾಗಿದೆ. ಇ-ಅಸ್ತಿ ಪಡೆಯಲು ಸರಳ ವಿಧಾನಗಳು ಸರ್ಕಾರದಿಂದ ವಿತರಿಸಿದ ಯಾವುದೇ ಬಗೆಯ ಗುರುತಿನ ಚೀಟಿ. ಆಸ್ತಿ ಮಾಲಿಕರ ಫೋಟೊ. ಮಾಲಿಕತ್ವ ದೃಡಿಕರಿಸುವ ನೋಂದಾಯಿತ ದಾಖಲೆಗಳು ಸ್ವತ್ತಿನ ಋಣಭಾರ ಪ್ರಮಾಣ ಪತ್ರ ಸ್ವತ್ತಿನ ಛಾಯಾ ಚಿತ್ರ ಆಸ್ತಿ ತೆರಿಗೆ ಪಾವತಿಸಿದ ರಶೀದಿ ಈ ಮೇಲಿನ ದಾಖಲೆಗಳೊಂದಿಗೆ ಸಂಭದಿಸಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ ಇ-ಖಾತೆ ದಾಖಲೆಯನ್ನು ಪಡೆದುಕೊಳ್ಳಬಹುದು. ಈಗಾಗಲೇ ಇರುವ ಕೈಬರಹ ಖಾತೆಗೆ ಇ-ಆಸ್ತಿ ಖಾತೆಯನ್ನು ಪಡೆಯಿರಿ. ಮಾಲೀಕರ ಆಧಾರ್ ಕಾರ್ಡ್, ಆಸ್ತಿ ತೆರಿಗೆ ಐಡಿ, ಮಾರಾಟ / ರಿಜಿಸ್ಟರ್ ಡೀಡ್ ಸಂಖ್ಯೆ, ಬೆಸ್ಕಾಂ ಖಾತೆಯ ಸಂಖ್ಯೆ (ಖಾಲಿ ನಿವೇಶನವಿದ್ದರೆ ಅಗತ್ಯವಿಲ್ಲ), ಆಸ್ತಿ ಫೋಟೋ ಈ ಎಲ್ಲಾ ದಾಖಲೆಗಳು ಬಿಬಿಎಂಪಿಯಲ್ಲಿರುವ ದಾಖಲೆಗಳೊಂದಿಗೆ ಹೊಂದಾಣಿಕೆಯಾದರೆ ಕೂಡಲೇ ಅಂತಿಮ ಇ – ಖಾತಾವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಕುರಿತಂತೆ ಸಂಶಯವಿದ್ದಲ್ಲಿ ಇ –…

Read More

ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಬೆಳೆ ವಿಮೆ ಹಾಗೂ ಬೆಳೆಹಾನಿ ಸೇರಿದಂತೆ 2,36,933 ರೈತರಿಗೆ ಒಟ್ಟು ₹667.73 ಕೋಟಿ ಪರಿಹಾರ ನೀಡಲಾಗುತ್ತಿದ್ದು, ರಾಜ್ಯ ಸರ್ಕಾರದಿಂದ ಜಿಲ್ಲೆಯ ರೈತರಿಗೆ ಇಷ್ಟು ದೊಡ್ಡ ಮೊತ್ತದ ಬೆಳೆ ವಿಮೆ ಪರಿಹಾರ ನೀಡುವ ಮೂಲಕ ನೂತನ ದಾಖಲೆ ಸೃಷ್ಟಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ತೊಗರಿ, ಹೆಸರು, ಉದ್ದು, ಸೋಯಾಬೀನ್, ಹತ್ತಿ ಹಾಗೂ ಇತರೆ ಬೆಳೆಗಳನ್ನು ಬೆಳೆದಿದ್ದ ಕಲಬುರಗಿ ಜಿಲ್ಲೆಯ 2,04,073 ರೈತರು, ಬೆಳೆ ವಿಮೆ ಯೋಜನೆಯಡಿ ವಿಮೆ ಪರಿಹಾರ ಕೋರಿ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನೋಂದಾವಣೆ ಮಾಡಿಕೊಂಡಿದ್ದು, ₹575.194 ಕೋಟಿ ಬೆಳೆ ವಿಮೆ ಪರಿಹಾರ ಮಂಜೂರಾಗಿದೆ. ಜಿಲ್ಲೆಯಲ್ಲಿ 4.36 ಲಕ್ಷ ರೈತರು ತೊಗರಿ, ಹೆಸರು, ಉದ್ದು, ಸೋಯಾಬೀನ್, ಹತ್ತಿ ಮತ್ತಿತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಈ ಪೈಕಿ ಸ್ಥಳೀಯ ಪ್ರಕೃತಿ ವಿಕೋಪದಡಿ ದೂರುಗಳನ್ನು ಸಲ್ಲಿಸಿದ 2,01,847 ರೈತರಿಗೆ ಮಧ್ಯಂತರ ಪರಿಹಾರವಾಗಿ ₹76.34 ಕೋಟಿ ಪರಿಹಾರ ಈಗಾಗಲೇ ನೀಡಲಾಗಿದೆ ಎಂದು ಹೇಳಿದ್ದಾರೆ. ಜಿಲ್ಲೆಯ ರೈತರು…

Read More

ಬೆಂಗಳೂರು: ಹಾಲು ಒಕ್ಕೂಟಗಳು ಇರುವುದು ರೈತರಿಗೆ ಅನುಕೂಲ ಮಾಡುವುದಕ್ಕೆ ಮಾತ್ರ, ಲಾಭ ಮಾಡುವುದಕ್ಕಲ್ಲ. ಒಕ್ಕೂಟಗಳ ನಂದಿನಿ ದರ ಏರಿಕೆಯ ಒತ್ತಡಕ್ಕೆ ಮಣಿಯದ ಸಿಎಂ ಸಿದ್ಧರಾಮಯ್ಯ ಅವರು, ಸಚಿವ ಸಂಪುಟಕ್ಕೆ ವಿಷಯ ರವಾನೆ ಮಾಡಿ, ಸಂಪುಟ ಸಭೆಯಲ್ಲಿ ಚರ್ಚಿಸಿ ಆ ಬಳಿಕ ದರ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳುವಂತ ನಿರ್ಣಯವನ್ನು ಕೈಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರ ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಕಾವೇರಿಯಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು: • ಹಾಲಿನ ದರ ಹೆಚ್ಚಳ ಕುರಿತು ಒಕ್ಕೂಟಗಳ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಹಾಲಿನದರ ಹೆಚ್ಚಳ ಮಾಡಿದರೆ ಮೊತ್ತವನ್ನು ಸಂಪೂರ್ಣವಾಗಿ ರೈತರಿಗೆ ವರ್ಗಾವಣೆಯಾಗಬೇಕು ಎಂಬುವುದು ಸರ್ಕಾರದ ದೃಢ ನಿಲುವು ಮುಖ್ಯಮಂತ್ರಿ ಅವರು ಸ್ಪಷ್ಟಪಡಿಸಿದರು. • ಹಾಲು ಒಕ್ಕೂಟಗಳು ಖರ್ಚು ವೆಚ್ಚ ಕಡಿಮೆ ಮಾಡಬೇಕು. ಪಾರದರ್ಶಕತೆಯನ್ನು ಪಾಲಿಸಬೇಕು. ಒಕ್ಕೂಟಗಳು ಅಗತ್ಯಕ್ಕಿಂತ ಹೆಚ್ಚು ಜನರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಬಾರದು. ಇದರಿಂದಾಗಿಯೇ ವೆಚ್ಚ…

Read More

ಬೆಂಗಳೂರು : ಭಾರತೀಯ ಕ್ರಿಕೆಟ್ ಪ್ರಿಯರಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಮಾರ್ಚ್ 22 ರ ಶನಿವಾರದಿಂದ, ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಪಂದ್ಯಗಳು ಈಗ ಟಿವಿಯಲ್ಲಿ ಮಾತ್ರವಲ್ಲದೆ ದೊಡ್ಡ ಪರದೆಯ ಮೇಲೆಯೂ ಕಾಣಿಸಿಕೊಳ್ಳಲಿವೆ. ಇದಕ್ಕಾಗಿ ಪಿವಿಆರ್ ಐನಾಕ್ಸ್ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೊತೆ ಪಾಲುದಾರಿಕೆಯನ್ನು ಘೋಷಿಸಿದೆ. ಇದರ ಅಡಿಯಲ್ಲಿ, ದೇಶಾದ್ಯಂತದ ಅದರ ಅನೇಕ PVR-INOX ಚಿತ್ರಮಂದಿರಗಳಲ್ಲಿ IPL 2025 ರ ಪಂದ್ಯಗಳನ್ನು ನೇರಪ್ರಸಾರ ಮಾಡಲಾಗುತ್ತದೆ. ಮಾರ್ಚ್ 22, 2025 ರಿಂದ ದೇಶಾದ್ಯಂತದ PVR INOX ಚಿತ್ರಮಂದಿರಗಳಲ್ಲಿ ಐಪಿಎಲ್ ಪಂದ್ಯಗಳನ್ನು ನೇರ ಪ್ರಸಾರ ಮಾಡಲಾಗುವುದು ಎಂದು PVR INOX ಘೋಷಿಸಿದೆ. ಈಗ ಕ್ರಿಕೆಟ್ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರರ ಆಟವನ್ನು ದೊಡ್ಡ ಪರದೆಯ ಮೇಲೆ ವೀಕ್ಷಿಸಲು ಸಾಧ್ಯವಾಗುತ್ತದೆ. ಈ ಉಪಕ್ರಮವು ಭಾರತದ ಎರಡು ದೊಡ್ಡ ಉತ್ಸಾಹಗಳಾದ ಕ್ರಿಕೆಟ್ ಮತ್ತು ಸಿನಿಮಾವನ್ನು ಒಟ್ಟುಗೂಡಿಸುವ ಪ್ರಯತ್ನವಾಗಿದ್ದು, ಪ್ರೇಕ್ಷಕರಿಗೆ ತಲ್ಲೀನಗೊಳಿಸುವ ವೀಕ್ಷಣಾ ಅನುಭವವನ್ನು ಒದಗಿಸುತ್ತದೆ. “ಭಾರತದ ಎರಡು ದೊಡ್ಡ…

Read More

ಶಿವಮೊಗ್ಗ : ಹಲವು ದಶಕಗಳಿಂದ ಅಭಿವೃದ್ಧಿ ಕಾಣದೇ ಉಳಿದಿದ್ದ ಹಾಗೂ ಶರಾವತಿ ಮುಳುಗಡೆ ಸಂತ್ರಸ್ಥರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಪುರದಾಳು ಗ್ರಾಮದ ಬಾರೇಹಳ್ಳ ಜಲಾಶಯದ ಕೋಡಿ ದುರಸ್ತಿ ಮೂರು ಕೋಟಿ ರೂ.ಗಳ ವೆಚ್ಚದ ಕಾಮಗಾರಿಗೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರು ಚಾಲನೆ ನೀಡಿದರು. ಬಾರೇಹಳ್ಳ ಜಲಾಶಯದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯೋಜನೆಯ ವಿವರ ನೀಡಿದರು. ಇದರೊಂದಿಗೆ ಹಾಯ್ಹೊಳೆಯ ಜಲಾಶಯ ಕಾಮಗಾರಿಯನ್ನು ಮೂರು ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಎಂದರು. ದೇವರಾಜ ಅರಸುರವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಈ ಜಲಾಶಯಕ್ಕೆ ಕಾಮಗಾರಿ ನಡೆದಿತ್ತು. ಆ ಅವಧಿಯಿಂದ ಹಲವು ದಶಕಗಳು ಕಳೆದಿದ್ದರೂ ಜಲಾಶಯದ ನಿರ್ವಹಣೆ ಅಥವಾ ಮುಂದುವರೆದ ಕಾಮಗಾರಿ ನಡೆಯದಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದ ಅವರು, ತುಂಗಾ ಮೇಲ್ದಂಡೆ ಯೋಜನಾ ಶಾಖೆಯಿಂದ 3 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಮುಂದಿನ ಆರು…

Read More

ಬೆಂಗಳೂರ : ಗೃಹ ಆರೋಗ್ಯ ಯೋಜನೆಯನ್ನು ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ಜಾರಿ ಮಾಡಲಾಗುವುದು. ಜನರ ಮನೆ ಬಾಗಿಲಿಗೆ ಆರೋಗ್ಯ ಸಿಬ್ಬಂದಿಗಳು ಭೇಟಿ ನೀಡಿ, ರಕ್ತದೊತ್ತಡ, ಮಧುಮೇಹ, ಕ್ಯಾನ್ಸರ್ ಸೇರಿದಂತೆ ಮಾನಸಿಕ ಕಾಯಿಲೆಗಳ ಬಗ್ಗೆಯೂ ತಪಾಸಣೆ ನಡೆಸಲಿದ್ದಾರೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಬೃಹತ್ ಆರೋಗ್ಯ ಮೇಳಕ್ಕೆ ಚಾಲನೆ ನೀಡಿಮಾತನಾಡಿದ ಸಚಿವರು, ಆರೋಗ್ಯ ಸೇವೆಗಳನ್ನ ಬಡ ವರ್ಗದ ಜನರ ಬಳಿಗೆ ತರುವಲ್ಲಿ ಉಚಿತ ಆರೋಗ್ಯ ತಪಾಸಣಾ ಮೇಳಗಳು ಯಶಸ್ವಿಯಾಗುತ್ತಿವೆ. ದೊಡ್ಡ ಮಟ್ಟದ ಆರೋಗ್ಯ ಮೇಳಗಳನ್ನು ಗ್ರಾಮೀಣ ಪ್ತದೇಶದ ಜನರಿಗೆ ಅನುಕೂಲಪಡಿಸಲು ತಾಲೂಕುಗಳಲ್ಲಿ ನಡೆಸಲಾಗುತ್ತಿದೆ. ಕೊಳ್ಳೆಗಾಲ, ಮಾನ್ವಿ ಬಳಿಕ ಇದೀಗ ಸವದತ್ತಿಯಲ್ಲೂ ಆರೋಗ್ಯ ಮೇಳ ಯಶಸ್ವಿಯಾಗಿದೆ ಎಂದರು.‌ ಇದೇ ವೇಳೆ ಸವದತ್ತಿ ತಾಲೂಕು ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನ 46 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳುವುದಾಗಿ ಸಚಿವ ದಿನೇಶ್ ಗುಂಡೂರಾವ್…

Read More

ಹೈದರಾಬಾದ್ : ಹೈದರಾಬಾದ್‌ನ ಎಂಎಂಟಿಎಸ್ ರೈಲಿನಲ್ಲಿ ಅನಂತಪುರದ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಘಟನೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಯುವತಿ ರೈಲಿನಿಂದ ಹಾರಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಗುಂಡ್ಲಾ ಪೋಚಂಪಲ್ಲಿ ರೈಲು ನಿಲ್ದಾಣದ ಬಳಿ ಯುವತಿಯನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶನಿವಾರ ರಾತ್ರಿ ಸಿಕಂದರಾಬಾದ್‌ನಿಂದ ಮೆಡ್ಚಲ್‌ಗೆ ಹೋಗುತ್ತಿದ್ದ ಎಂಎಂಟಿಎಸ್ ರೈಲು ಬೋಗಿಯಲ್ಲಿ ಒಂಟಿಯಾಗಿದ್ದ ಯುವತಿಯ ಮೇಲೆ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದಾಗ ಈ ಘಟನೆ ಸಂಭವಿಸಿದೆ. ಯುವಕನಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ರೈಲಿನಿಂದ ಜಿಗಿದ ಸಂತ್ರಸ್ತೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಸಿಕಂದರಾಬಾದ್ ಜಿಆರ್‌ಪಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಯುವತಿ (23) ಮೆಡ್ಚಲ್‌ನಲ್ಲಿರುವ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಳೆ. ನನ್ನ ಸೆಲ್ ಫೋನ್ ಕೆಟ್ಟುಹೋದ ನಂತರ ನಾನು ಶನಿವಾರ ಎಂಎಂಟಿಎಸ್ ರೈಲಿನಲ್ಲಿ ಸಿಕಂದರಾಬಾದ್‌ಗೆ ಬಂದೆ. ತನ್ನ ಫೋನ್ ರಿಪೇರಿ ಮಾಡಿಸಿಕೊಂಡ ನಂತರ, ಅವಳು MMTS ರೈಲಿನಲ್ಲಿ ಮೆಡ್ಚಲ್‌ಗೆ ಹೊರಟಳು. ಅವಳು ಸಿಕಂದರಾಬಾದ್…

Read More

ಬೆಂಗಳೂರು : ಲಾಂಗ್ ಹಿಡಿದು ರೀಲ್ಸ್ ಮಾಡಿ ಬಂಧಿತರಾಗಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಮತ್ತು ರಜತ್ ಅವರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಿಡುಗಡೆ ಮಾಡಿದ್ದಾರೆ. ನ್ಸ್ಟಾಗ್ರಾಮ್ ನಲ್ಲಿ ರೀಲ್ಸ್ ಗೋಸ್ಕರ 18 ಸೆಕೆಂಡ್ ಗಳ ಕಾಲ ಲಾಂಗ್ ಪ್ರದರ್ಶಿಸಿ ಸಾರ್ವಜನಿಕವಾಗಿ ಭಯ ಹುಟ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಬಸವೇಶ್ವರ ಠಾಣೆ ಪೊಲೀಸರು ಬಿಗ್ ಬಾಸ್ ಖ್ಯಾತಿಯ ರಜತ್ ಮತ್ತು ವಿನಯ್ ಗೌಡನನ್ನು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದಾರೆ. ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಅವರನ್ನು ಬಂಧಿಸಲಾಗಿತ್ತು. ರೀಲ್ಸ್ ಮಾಡಲು ವಿನಯ್ ಮತ್ತು ರಜತ್ ಮಚ್ಚು ಪ್ರದರ್ಶಿಸಿದ್ದರು. ಆರೋಪಿಗಳು ಬಳಸಿದ್ದು ಫೈಬರ್ ಲಾಂಗ್ ಎಂದು ಪೊಲೀಸರು ಹೇಳಿದ್ದಾರೆ. ಇಬ್ಬರಿಗೂ ನೋಟಿಸ್ ನೀಡಿ ಇಂದು ಬೆಳಿಗ್ಗೆ 10.30 ಕ್ಕೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿ ಬಿಟ್ಟು ಕಳಿಸಲಾಗಿದೆ. ಪ್ರಕರಣ ಹಿನ್ನೆಲೆ? ಬಿಗ್ ಬಾಸ್ ಖ್ಯಾತಿಯ ರಜತ್ ಹಾಗೂ ವಿನಯ್ ಗೌಡ ಅವರು ಕೈಯಲ್ಲಿ ಲಾಂಗ್ ಹಿಡಿದುಕೊಂಡು ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ…

Read More