Author: kannadanewsnow57

ಹಾಸನ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ವಿಪಕ್ಷ ನಾಯಕರು ಸಿಎಂ ಸಿದ್ದರಾಮಯ್ಯ ದಸರಾ ಬಳಿಕ ರಾಜೀನಾಮೆ ನೀಡುತ್ತಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯ ರಾಜ್ಯದಲ್ಲಿ ದಲಿತ ಸಿಎಂ ಕೂಗು ಬೇರೆ ಎದ್ದಿದೆ. ಇದೀಗ ಇಂದು ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಸ್ಪೋಟಕವಾದಂತ ಹೇಳಿಕೆ ನೀಡಿದ್ದು 2028ರಲ್ಲಿ ನನಗೂ ಮುಖ್ಯಮಂತ್ರಿಯಾಗುವ ಇಚ್ಚೆ ಇದೆ ಎಂದು ತಿಳಿಸಿದರು. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಯ ಬಗ್ಗೆ ಚರ್ಚೆ ನಡೆದಿಲ್ಲ. ಆದರೆ 2028ಕ್ಕೆ ಮುಖ್ಯಮಂತ್ರಿಯಾಗುವ ಇಚ್ಚೆ ನನಗೂ ಇದೆ. ಇದನ್ನು ನನ್ನ ಮಗಳು ಕೂಡ ಹೇಳಿರಬಹುದು. ಆದರೆ ಸದ್ಯ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದು ಸಿಎಂ ಬದಲಾವಣೆ ಇಲ್ಲ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ಇನ್ನು ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಸಿಎಂ ಆಗಲು ಸಮರ್ಥರು ಎಂದು ಚಿಕ್ಕಮಂಗಳೂರು ಶಾಸಕ ಎಚ್ ಡಿ ತಮ್ಮಯ್ಯ ಹೇಳಿಕೆಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವಧಿಯ ನಂತರ ಸಿಎಂ ಆಗಲಿ…

Read More

ನವದೆಹಲಿ: ರತನ್ ಟಾಟಾ ಅವರ ನಿಧನಕ್ಕೆ ಕಾಂಗ್ರೆಸ್ ಬುಧವಾರ ಸಂತಾಪ ಸೂಚಿಸಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, “ಅವರು ವ್ಯವಹಾರ ಮತ್ತು ಲೋಕೋಪಕಾರಿ ಎರಡರಲ್ಲೂ ಶಾಶ್ವತ ಛಾಪು ಮೂಡಿಸಿದ ದೂರದೃಷ್ಟಿಯ ವ್ಯಕ್ತಿ” ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಟಾಟಾ ಅವರ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದು, ಅವರ ನಿಧನದಿಂದ ನಾವು ಭಾರತದ ಅಮೂಲ್ಯ ಪುತ್ರನನ್ನು ಕಳೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ. “ಭಾರತದ ಅಂತರ್ಗತ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಬದ್ಧತೆಯನ್ನು ಅತ್ಯುನ್ನತವಾಗಿ ಉಳಿಸಿಕೊಂಡ ಲೋಕೋಪಕಾರಿ  ಟಾಟಾ ಅವರು ನಿಸ್ಸಂದಿಗ್ಧ ಸಮಗ್ರತೆ ಮತ್ತು ನೈತಿಕ ನಾಯಕತ್ವಕ್ಕೆ ಸಮಾನಾರ್ಥಕವಾಗಿದ್ದರು” ಎಂದು ಖರ್ಗೆ ಹೇಳಿದರು. “ಅವರು ಲಕ್ಷಾಂತರ ಜನರಿಗೆ ಸ್ಫೂರ್ತಿ ಮತ್ತು ಐಕಾನ್ ಆಗಿದ್ದರು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಶ್ರೀಮಂತ ಕೊಡುಗೆ ನೀಡಿದ್ದಾರೆ ” ಎಂದು ಖರ್ಗೆ ಹೇಳಿದರು. ಟಾಟಾ ಅವರನ್ನು ಭಾರತೀಯ ಉದ್ಯಮದ ಮಹಾನ್ ವ್ಯಕ್ತಿ ಮತ್ತು ಭಾರತದ ಕಾರ್ಪೊರೇಟ್ ಭೂದೃಶ್ಯವನ್ನು ರೂಪಿಸಿದ ಲೋಕೋಪಕಾರಿ ಎಂದು ಕಾಂಗ್ರೆಸ್ ಶ್ಲಾಘಿಸಿತು. ಟಾಟಾ ಸನ್ಸ್…

Read More

ಬೆಂಗಳುರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ A3 ಹಾಗೂ A4 ಆರೋಪಿಗಳಿಗೆ ಲೊಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿವೆ. ಮುಡಾ ಹಗರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು ಇದೀಗ ಪ್ರಕರಣ A3 ಆರೋಪಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ A4 ಆರೋಪಿ ದೇವರಾಜು ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಕೋರ್ಟ್ ಆದೇಶದಂತೆ ಸಿಎಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅವರ ಪತ್ನಿ ಪಾರ್ವತಿ ಎ.2 ಆರೋಪಿಯಾಗಿದ್ದಾರೆ. ಸಿದ್ಧರಾಮಯ್ಯ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೇ, ಎ.4 ಆರೋಪಿಯನ್ನಾಗಿ ಭೂ ಮಾಲೀಕ ದೇವರಾಜು ಹಾಗೂ ಇತರರು ಎ5 ಆರೋಪಿಯನ್ನಾಗಿ ಮಾಡಿ ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

Read More

ಬೆಂಗಳೂರು : ಎಲ್ ಕೆಜಿಯಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಗಣಿತ ಕಲಿಕೆಗೆ ಮೂರು ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ಮಕ್ಕಳಿಗೆ ಮೂಲ ಗಣಿತ ಕಲಿಕೆಗೆ ಚಿಪಿ-ಪಿಲಿ ಕಾರ್ಯಕ್ರಮ, 6 ರಿಂದ 9 ನೇ ರಗತಿ ಮಕ್ಕಳಿಗೆ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಮರು ಸಿಂಚನ, 3 ರಿಂದ 8 ನೇ ತರಗತಿ ಮಕ್ಕಳಿಗೆ ವಾರಕ್ಕೊಮ್ಮೆ ಮೊಬೈಲ್ ಫೋನ್ ಮೂಲಕ ಗಣಿತ-ಗಣಕ ವಿಶೇಷ ತರಗತಿ ಕಾರ್ಯಕ್ರಮಗಳ ಜಾರಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜೆ-ಪಾಲ್ ಸೌತ್ ಏಷ್ಯಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ, ಮೊದಲ ಹಂತದಲ್ಲಿ ರಾಜ್ಯದ 93 ಬ್ಲಾಕ್ ಗಳ 9 ಸಾವಿರಕ್ಕೂ ಹೆಚ್ಚು ಶಾಲೆಗಳಲ್ಲಿ ಈ ಕಾರ್ಯಕ್ರಮಗಳು ಜಾರಿಗೆ ಬರಲಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಇತರೆ ಶಾಲೆಗಳಿಗೂ ವಿಸ್ತರಿಸುವ ಚಿಂತನೆ…

Read More

ಟೋಕಿಯೋ: ಜಪಾನ್ ಸಂಸತ್ತಿನ ಕೆಳಮನೆಯನ್ನು ಬುಧವಾರ ಅಧಿಕೃತವಾಗಿ ವಿಸರ್ಜಿಸಲಾಗಿದ್ದು, ಪ್ರಧಾನಿ ಶಿಗೆರು ಇಶಿಬಾ ಅವರು ಸದನದಲ್ಲಿ ತಮ್ಮ ಪಕ್ಷಕ್ಕೆ ಬಹುಮತ ಪಡೆಯಲು ಪ್ರಯತ್ನಿಸುತ್ತಿರುವುದರಿಂದ ಸಾರ್ವತ್ರಿಕ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ ಸಾರ್ವತ್ರಿಕ ಚುನಾವಣೆ ಅಕ್ಟೋಬರ್ 27 ರಂದು ನಡೆಯಲಿದ್ದು, ಅಕ್ಟೋಬರ್ 15 ರಂದು ಪ್ರಚಾರ ಪ್ರಾರಂಭವಾಗಲಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸೆಪ್ಟೆಂಬರ್ 27 ರಂದು ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ (ಎಲ್ಡಿಪಿ) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಶಿಬಾ ಗೆದ್ದರು ಮತ್ತು ಅಕ್ಟೋಬರ್ 1 ರಂದು ಎಲ್ಡಿಪಿ ನೇತೃತ್ವದ ಮೈತ್ರಿಕೂಟದ ನಿಯಂತ್ರಣದಲ್ಲಿರುವ ಸಂಸತ್ತಿನಲ್ಲಿ ಪ್ರಧಾನಿಯಾಗಿ ಆಯ್ಕೆಯಾದರು. ಈ ಸಮಯವು ಜಪಾನ್ ನ ಯುದ್ಧಾನಂತರದ ಇತಿಹಾಸದಲ್ಲಿ ಪ್ರಧಾನ ಮಂತ್ರಿಯೊಬ್ಬರು ಅಧಿಕಾರ ವಹಿಸಿಕೊಂಡ ಮತ್ತು ಕೆಳಮನೆಯ ವಿಸರ್ಜನೆಯ ನಡುವಿನ ಅತ್ಯಂತ ಕಡಿಮೆ ಅವಧಿಯನ್ನು ಗುರುತಿಸಿತು. 2023 ರ ಕೊನೆಯಲ್ಲಿ ಎಲ್ಡಿಪಿಯ ರಾಜಕೀಯ ನಿಧಿ ಹಗರಣ ಬೆಳಕಿಗೆ ಬಂದ ನಂತರ ನಡೆಯುತ್ತಿರುವ ಮೊದಲ ಸಾರ್ವತ್ರಿಕ ಚುನಾವಣೆ ಇದಾಗಿದೆ. ಕಳೆದ ವಾರ ಸಂಸತ್ತಿನಲ್ಲಿ ಮಾಡಿದ…

Read More

ತುಮಕೂರು : ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ತಂದಿದ್ದ ಜಲ್ಲಿಕಲ್ಲಿನಲ್ಲಿದ್ದ ಜಿಲೆಟಿನ್ ಕಡ್ಡಿ ಸ್ಪೋಟಗೊಂಡು ವಿದ್ಯಾರ್ಥಿಯ ಬೆರಳು ಕಟ್ ಆಗಿರುವ ಘಟನೆ ನಡೆದಿದೆ. ಗುಬ್ಬಿ ತಾಲೂಕಿನ ಸಿ.ಎಸ್. ಪುರ ಸಮೀಪದ ಇಡಗೂರಿನಲ್ಲಿ ಬುಧವಾರ ಈ ಘಟನೆ ನಡೆದಿದೆ. ಮೋನೀಶ್ ಗೌಡ (15) ಗಾಯಗೊಂಡ ವಿದ್ಯಾರ್ಥಿ. ಸರ್ಕಾರಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಪೆಷಲ್ ಕ್ಲಾಸ್ ನಡೆಸಲಾಗುತ್ತಿತ್ತು. ಈ ವೇಳೆಗೆ ತರಗತಿಗೆ ಆಗಮಿಸಿದ್ದ ಮೋನೀಶ್ ಗೌಡ ಜಿಲೆಟಿನ್ ಕಡ್ಡಿ ಎಳೆದಿದ್ದು, ಈ ವೇಳೆ ಸ್ಪೋಟಗೊಂಡು ವಿದ್ಯಾರ್ಥಿಯ ಬೆರಳುಗಳು ತುಂಡಾಗಿವೆ.

Read More

ತುಮಕೂರು : ನಟ ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ಚೌಡಯ್ಯ ಚಿತ್ರತಂಡಕ್ಕೆ ತುಮಕೂರು ಸಾರಿಗೆ ಇಲಾಖೆ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ತುಮಕೂರು ಸಮೀಪದ ಕೈದಾಳದ ಚಿತ್ರೀಕರಣದ ಸ್ಪಾಟ್ ಬಳಿ ಇನ್ನೋವಾ ಕಾರನ್ನು ಜಪ್ತಿ ಮಾಡಿದ್ದಾರೆ. ಹಳದಿ ಬಣ್ಣದ ಬೋರ್ಡ್ ಬದಲು ವೈಟ್ ಬೋರ್ಡ್ ಇರುವ ಇನ್ನೋವಾ ಕಾರು ಬಳಸಿದ್ದರಿಂದ ಸಾರಿಗೆ ಇಲಾಖೆ ಅಧಿಕಾರಿಗಳು ಕಾರನ್ನು ಜಪ್ತಿ ಮಾಡಿದ್ದಾರೆ. ಕರ್ನಾಟಕ ಟೂರಿಸ್ಟ್ ಡ್ರೈವರ್ಸ್ ಅಸೋಸಿಯೇಷನ್ ನೀಡಿದ್ದ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರ್ ಟಿ ಒ ಇನ್ಸ್ ಪೆಕ್ಟರ್ ಷರಿಫ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ವಾಹನ ಜಪ್ತಿ ಮಾಡಿದ್ದಾರೆ.

Read More

ಬೆಂಗಳೂರು : ಅಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2024 ರ ಮಾಹೆಯ ಪಡಿತರ ವಿತರಣೆಯಲ್ಲಿ ಅಂತ್ಯೋದಯ (ಎಎವೈ) ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ ಅಕ್ಕಿ 21 ಕೆಜಿ, ಜೋಳ 14 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪಿಎಚ್‍ಎಚ್ (ಬಿಪಿಎಲ್) ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ ಅಕ್ಕಿ 3 ಕೆಜಿ, ಜೋಳ 2 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಅಂತರರಾಜ್ಯ ಪೋರ್ಟೆಬಿಲಿಟಿ ಮೂಲಕ ಪಡಿತರ ಪಡೆಯುವವರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪಡಿತರ ಚೀಟಿದಾರರು ತಮ್ಮ ಜಾತಿ ಪ್ರಮಾಣ ಪತ್ರವನ್ನು (ಆರ್‍ಡಿ ಸಂಖ್ಯೆ ಹೊಂದಿರುವ) ತೆಗೆದುಕೊಂಡು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಅಕ್ಟೋಬರ್ ಮಾಹೆ 1ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಿಗ್ಗೆ 07…

Read More

ಮುಂಬೈ : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಟಾಟಾ ಸಮೂಹದ ಮಾಜಿ ಅಧ್ಯಕ್ಷ ರತನ್ ಟಾಟಾ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ತಮ್ಮ 87 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ರತನ್ ನೇವಲ್ ಟಾಟಾ 28 ಡಿಸೆಂಬರ್ 1937 ರಲ್ಲಿ ಜನಿಸಿದರು. ಅವರು 1990 ರಿಂದ 2012 ರವರೆಗೆ ಟಾಟಾ ಗ್ರೂಪ್‌ನ ಅಧ್ಯಕ್ಷರಾಗಿದ್ದರು ಮತ್ತು ಅಕ್ಟೋಬರ್ 2016 ರಿಂದ ಫೆಬ್ರವರಿ 2017 ರವರೆಗೆ ಹಂಗಾಮಿ ಅಧ್ಯಕ್ಷರಾಗಿದ್ದರು. 2008 ರಲ್ಲಿ ಅವರು ದೇಶದ ಎರಡನೇ ಅತ್ಯುನ್ನತ ಗೌರವ ಪದ್ಮವಿಭೂಷಣ ಪ್ರಶಸ್ತಿ ಪಡೆದಿದ್ದರು. 2000ರಲ್ಲಿ ಮೂರನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಭೂಷಣವನ್ನು ಪಡೆದಿದ್ದರು. ರತನ್ ಟಾಟಾ ಅವರು ನೇವಲ್ ಟಾಟಾ ಅವರ ಪುತ್ರರಾಗಿದ್ದರು , ಅವರನ್ನು ಜಮ್ಸೆಟ್ಜಿ ಟಾಟಾ ಅವರ ಮಗ ರತನ್ಜಿ ಟಾಟಾ ಅವರು ದತ್ತು ಪಡೆದರು. ಅವರು ಟಾಟಾ ಗ್ರೂಪ್ ಸಂಸ್ಥಾಪಕರಾಗಿದ್ದರು . ಅವರು ಕಾರ್ನೆಲ್ ಯೂನಿವರ್ಸಿಟಿ ಕಾಲೇಜ್ ಆಫ್ ಆರ್ಕಿಟೆಕ್ಚರ್‌ನಿಂದ ಆರ್ಕಿಟೆಕ್ಚರ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಆದರೆ ಟಾಟಾ ಗ್ರೂಪ್‌ನ ಈ…

Read More

ಬೆಂಗಳೂರು : ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಬುಧವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರತನ್ ಟಾಟಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. https://twitter.com/siddaramaiah/status/1844089149025845362?ref_src=twsrc%5Egoogle%7Ctwcamp%5Eserp%7Ctwgr%5Etweet

Read More