Author: kannadanewsnow57

ಬೆಂಗಳೂರು : ಐಪಿಎಲ್ 2025ರಲ್ಲಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ವಿಶ್ವದ ಅತ್ಯಂತ ಪ್ರಸಿದ್ಧ ಕ್ರಿಕೆಟ್ ತಂಡಗಳಲ್ಲಿ ಒಂದಾದ ಆರ್‌ಸಿಬಿ ಕೇವಲ 3 ಆಟಗಾರರನ್ನು ಮಾತ್ರ ಉಳಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ. RCB ತನ್ನ ನಾಯಕ ಫಾಫ್ ಡು ಪ್ಲೆಸಿಸ್ ಅನ್ನು ಉಳಿಸಿಕೊಳ್ಳಲಿಲ್ಲ ಎಂಬುದು ದೊಡ್ಡ ಸುದ್ದಿಯಾಗಿದೆ. ಜತೆಗೆ ಮೊಹಮ್ಮದ್ ಸಿರಾಜ್ ಕೂಡ ತಂಡದಿಂದ ಹೊರಗುಳಿದಿದ್ದಾರೆ. ಸಿರಾಜ್ ಬದಲಿಗೆ, ಬೆಂಗಳೂರು ತಂಡದಲ್ಲಿ ಕಡಿಮೆ ಅನುಭವಿ ಯುವ ಭಾರತೀಯ ಬೌಲರ್ ಅನ್ನು ಉಳಿಸಿಕೊಂಡಿದೆ. ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಕ್ಯಾಮರೂನ್ ಗ್ರೀನ್ ಅವರಂತಹ ಆಟಗಾರರಿಗೂ ಬೆಂಗಳೂರು ದಾರಿ ತೋರಿಸಿದೆ. ಆದರೆ, ಅನುಭವಿ ಆಟಗಾರ ವಿರಾಟ್ ಕೊಹ್ಲಿಗೆ ತಂಡ ಭಾರೀ ಮೊತ್ತದ ಹಣ ನೀಡಿ ಖರೀದಿಸಿದೆ. https://twitter.com/i/status/1851969064673120275 ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಮತ್ತು ಯಶ್ ದಯಾಳ್ ಸೇರಿದಂತೆ ಮೂರು ಆಟಗಾರರ ಮೇಲೆ ಮಾತ್ರ ಆರ್‌ಸಿಬಿ ವಿಶ್ವಾಸ ತೋರಿಸಿದೆ. ಆರ್‌ಸಿಬಿ ಕೇವಲ ಭಾರತೀಯ ಪ್ರತಿಭೆಗಳನ್ನು ಉಳಿಸಿಕೊಂಡಿದೆ. ಇವರಲ್ಲದೆ ಪಂಜಾಬ್ ಕಿಂಗ್ಸ್ ಈ ಕೆಲಸ ಮಾಡಿದ್ದಾರೆ. RCB…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರಿಗೆ ಆದೇಶ ಹೊರಡಿಸಿದ್ದಾರೆ. ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಆದರೇ ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ಈ ಕೆಳಗೆ ಸೂಚಿಸಿದಂತೆ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ತಿಳಿಸಿ, ನಿರ್ದೇಶಿಸಿದ್ದಾರೆ. ಹೀಗಿದೆ ನ.1ರಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿ ಡಾ. ಜಿ ಪರಮೇಶ್ವರ್ – ತುಮಕೂರು ಹೆಚ್.ಕೆ ಪಾಟೀಲ್ – ಗದಗ ಕೆ.ಹೆಚ್ ಮುನಿಯಪ್ಪ – ಬೆಂಗಳೂರು ಗ್ರಾಮಾಂತರ ರಾಮಲಿಂಗಾರೆಡ್ಡಿ – ರಾಮನಗರ ಎಂ.ಬಿ ಪಾಟೀಲ್ – ವಿಜಯಪುರ ಕೆ.ಜೆ ಜಾರ್ಜ್ – ಚಿಕ್ಕಮಗಳೂರು ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ ಹೆಚ್.ಸಿ ಮಹದೇವಪ್ಪ – ಮೈಸೂರು…

Read More

ಮುಂಬೈ : ಇಂಡಿಯನ್ ಪ್ರೀಮಿಯರ್​​ ಲೀಗ್ 2025 ರಿಟೆನ್ಶನ್ ಪಟ್ಟಿ ಪ್ರಕಟವಾಗಿದ್ದು, ಆರ್ ಸಿಬಿ ಆಟಗಾರ ವಿರಾಟ್ ಕೊಹ್ಲಿಗೆ 21 ಕೋಟಿ ರೂ. ಕೊಟ್ಟು ಆರ್ ಸಿಬಿ ಫ್ರಾಂಚೈಸಿ ಊಳಿಸಿಕೊಂಡಿದೆ.  ಮುಂಬೈ ಇಂಡಿಯನ್ಸ್ ಜಸ್ಪ್ರೀತ್ ಬುಮ್ರಿಯನ್ನು 18 ಕೋಟಿ ರೂ.ಗೆ ಉಳಿಸಿಕೊಂಡಿದೆ. ಸೂರ್ಯಕುಮಾರ್ ಯಾದವ್ ಅವರನ್ನು 16.35 ಕೋಟಿ ಹಾಗೂ ಹಾರ್ದಿಕ್ ಪಾಂಡ್ಯ ಅವರನ್ನು 16.35 ಕೋಟಿ ರೂ.ಗೆ ಉಳಿಸಿಕೊಂಡಿರುವ ಮುಂಬೈ ಇಂಡಿಯನ್ಸ್, ಮಾಜಿ ನಾಯಕ ರೋಹಿತ್ ಶರ್ಮಾಗೆ 16.30 ಕೋಟಿ ರೂ.ಗೆ ಹರಾಜಾಗಿದ್ದಾರೆ. ಮುಂಬೈ ಇಂಡಿಯನ್ಸ್  ಬುಮ್ರಾ 18 ಕೋಟಿ ಸೂರ್ಯ 16.35 ಹಾರ್ದಿಕ್ 16.35 ರೋಹಿತ್ ಶರ್ಮಾ 16.3 ತಿಲಕ್ ವರ್ಮ 8 ಚೆನ್ನೈ ಸೂಪರ್ ಕಿಂಗ್ಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮತ್ತು ಆಲ್ ರೌಂಡರ್ ರವೀಂದ್ರ ಜಡೇಜಾ ಅವರನ್ನು 18 ಕೋಟಿ ರೂ. ಮತಿಶಾ ಪತಿರಾನಾಗೆ ರೂ.13 ಕೋಟಿ ಮತ್ತು ಶಿವಂ ದುಬೆಗೆ ರೂ.12 ಕೋಟಿ ನೀಡಿದ ಸಿಎಸ್‌ಕೆ, ಮಾಜಿ ನಾಯಕ ಮಹೇಂದ್ರ…

Read More

ನವದೆಹಲಿ : ಕ್ಯಾಪ್ಟನ್ ಕೂಲ್ ಖ್ಯಾತಿಯ ಧೋನಿಯ ಅಭಿಮಾನಿಗಳಿಗೆ ಸಿಹಿಸುದ್ದಿ, ಈ ವರ್ಷದ ಐಪಿಎಲ್ ಮೆಗಾ ಹರಾಜಿಗೆ ಮುಂಚಿತವಾಗಿ ಚೆನ್ನೈ ಸೂಪರ್ ಕಿಂಗ್ಸ್ ಮಾಜಿ ನಾಯಕ ಎಂಎಸ್ ಧೋನಿಯನ್ನ ಕೇವಲ 4 ಕೋಟಿ ರೂ.ಗೆ ‘ಅನ್ಕ್ಯಾಪ್ಡ್ ಆಟಗಾರ’ ಆಗಿ ಉಳಿಸಿಕೊಂಡಿದೆ. ಕನಿಷ್ಠ ಐದು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದ ಭಾರತೀಯ ಆಟಗಾರರಿಗೆ ಅನ್ಕ್ಯಾಪ್ಡ್ ಆಟಗಾರರಾಗಿ ಹರಾಜಿಗೆ ಪ್ರವೇಶಿಸಲು ಅವಕಾಶ ನೀಡುವ ನಿಯಮವನ್ನು ಐಪಿಎಲ್ 2008 ರಲ್ಲಿ ಪುನಃಸ್ಥಾಪಿಸಿದ ನಂತರ ಇದು ಸಾಧ್ಯವಾಯಿತು. ಅನ್ಕ್ಯಾಪ್ಡ್ ಆಟಗಾರರ ಬಗ್ಗೆ ಇತ್ತೀಚಿನ ಚರ್ಚೆಗಳ ನಂತರ 2021 ರಲ್ಲಿ ರದ್ದುಪಡಿಸಲಾಗಿದ್ದ ಈ ನಿಯಮವನ್ನ ಪುನರುಜ್ಜೀವನಗೊಳಿಸಲಾಯಿತು. 2022 ರಲ್ಲಿ, ಧೋನಿಯನ್ನು ಸಿಎಸ್ಕೆ ತನ್ನ ಎರಡನೇ ಆಟಗಾರನಾಗಿ 12 ಕೋಟಿ ರೂ.ಗೆ ಉಳಿಸಿಕೊಂಡಿತು. ಸಿಎಸ್ಕೆ ತಂಡವನ್ನು ಐದು ಐಪಿಎಲ್ ಪ್ರಶಸ್ತಿಗಳಿಗೆ ಮುನ್ನಡೆಸಿದ ಧೋನಿ, ಕಳೆದ ಋತುವಿನ ಮೊದಲು ನಾಯಕತ್ವದಿಂದ ಕೆಳಗಿಳಿದು, ನಾಯಕತ್ವವನ್ನು ಋತುರಾಜ್ ಗಾಯಕ್ವಾಡ್ಗೆ ಹಸ್ತಾಂತರಿಸಿದರು. 10 ಐಪಿಎಲ್ ಫ್ರಾಂಚೈಸಿಗಳು ತಮ್ಮ ಉಳಿಸಿಕೊಂಡ ಆಟಗಾರರ ಪಟ್ಟಿಯನ್ನು ಸಲ್ಲಿಸಲು ಅಕ್ಟೋಬರ್…

Read More

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕೇವಲ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೆ ಸುಪ್ರೀಂಕೋರ್ಟ್ ಆದೇಶದಂತೆ ರಾತ್ರಿ 8 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅನುಮತಿ ಇದೆ. ಇದೆ ವೇಳೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ ಆದೇಶದಂತೆ ರಾತ್ರಿ 8 ರಿಂದ 10ರ ವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಸಂಬಂಧ ಬೆಂಗಳೂರು ಪೊಲೀಸ್‌ ಇಲಾಖೆಯು ಪಟಾಕಿ ಸಿಡಿಸುವ ಕುರಿತಾಗಿ ಮಾರ್ಗಸೂಚಿ ಪ್ರಕಟಿಸಿದೆ. ದೀಪಾವಳಿ ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ 1) ಹಸಿರು ಪಟಾಕಿಗಳನ್ನೇ ಖರೀದಿಸಿ, ಪರಿಸರ ಸ್ನೇಹಿ ದೀಪಾವಳಿ ಆಚರಿಸಬೇಕು. 2) ಹಸಿರು ಪಟಾಕಿ ಸಂದರ್ಭದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಖಚಿತಪಡಿಸಿಕೊಳ್ಳಬೇಕು. 3) ಅಧಿಕೃತ ಪರವಾನಗಿ ಪಡೆದ ಅಂಗಡಿ / ಮಳಿಗೆಗಳಿಂದಲೇ ಪಟಾಕಿ ಖರೀದಿಸಬೇಕು. 4) ಕೆಲವು ಅಂಗಡಿಗಳಲ್ಲಿ ಅನಧಿಕೃತವಾಗಿ ಪಟಾಕಿ ಮಾರಾಟ ಮಾಡುವ ಸಾಧ್ಯತೆಯಿದ್ದು, ಅಂತಹ…

Read More

ಬೆಂಗಳೂರು : ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಹೈಕೋರ್ಟ್‌ ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್‌ ಆಫ್‌ ಇನ್‌ಕ್ವೈರಿ ಆ್ಯಕ್ಟ್‌ 1952ರ ಅನ್ವಯ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಸದರಿ ಆಯೋಗವು 3 ತಿಂಗಳ ಒಳಗಾಗಿ ವರದಿ ಸಲ್ಲಿಸುವಂತೆ ಷರತ್ತು ವಿಧಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಂದಿನ ತೀರ್ಮಾನದವರೆಗೆ ರಾಜ್ಯ ಸರ್ಕಾರದ ಅಧೀನದ ಸಿವಿಲ್‌ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸದಿರುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ ಎಂದರು. ತೆಲಂಗಾಣ ಸರ್ಕಾರ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಡಿ ಅಧಿಕಾರಿಗಳು ತನಿಖೆಯನ್ನು ಕೈಗೊಂಡಿದ್ದಾರೆ. ಇದರ ಬೆನ್ನಲ್ಲೇ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ಮುಡಾದಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಜೆಪಿ ಶಾಸಕ ಶ್ರೀವತ್ಸ ಅವರು ಈ ಕೂಡಲೇ 50:50 ಅನುಪಾತದಲ್ಲಿ ಪಡೆದಂತಹ ಎಲ್ಲಾ ಅಕ್ರಮ ಸೈಟ್ ಗಳನ್ನು ರದ್ದು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಶ್ರೀವತ್ಸ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಬಿಜೆಪಿ ಶಾಸಕ ಶ್ರೀವತ್ಸ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದು, ಮೈಸೂರು ನಗರಾಭಿವೃದ್ಧಿ ಪ್ರಧಿಕಾರದಲ್ಲಿ 50:50 ಅನುಪಾತದ ಸೈಟ್ ಹಿಂಪಡೆಯಲು ಕ್ರಮ ಕೈಗೊಳ್ಳಿ ಎಂದು ಸಿಎಂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಲಿಖಿತ ರೂಪದಲ್ಲಿ ಸೂಚನೆ ಕೊಟ್ಟಿದ್ದಾರೆ. ಹಾಗಾಗಿ ಸೈಟ್ ಪಡೆದವರಿಗೆ ಇದೀಗ ಟೆನ್ಶನ್ ಶುರುವಾಗಿದೆ.

Read More

ನವದೆಹಲಿ : ನವೆಂಬರ್ 1, 2024 ರಿಂದ ಪ್ಲಾಟ್‌ಫಾರ್ಮ್ ಎರಡು ಮಹತ್ವದ ನವೀಕರಣಗಳಿಗೆ ಒಳಗಾಗುವುದರಿಂದ UPI ಲೈಟ್ ಬಳಕೆದಾರರು ಕೆಲವು ಒಳ್ಳೆಯ ಸುದ್ದಿಗಳನ್ನು ಹೊಂದಿದ್ದಾರೆ. ಮೊದಲನೆಯದಾಗಿ, ವಹಿವಾಟನ್ನು ಹೆಚ್ಚಿಸಲು ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚಿನ ನಿರ್ಧಾರಕ್ಕೆ ಧನ್ಯವಾದಗಳು, ಬಳಕೆದಾರರು ಹೆಚ್ಚಿನ ಪಾವತಿಗಳನ್ನು ಮಾಡಲು ಸಾಧ್ಯವಾಗುತ್ತದೆ. UPI ಲೈಟ್‌ಗೆ ಮಿತಿ. ಎರಡನೆಯದಾಗಿ, ಹೊಸ ಸ್ವಯಂ ಟಾಪ್-ಅಪ್ ವೈಶಿಷ್ಟ್ಯವು ನವೆಂಬರ್ 1 ರಂದು ಪ್ರಾರಂಭವಾಗಲಿದೆ. UPI ಲೈಟ್ ಬ್ಯಾಲೆನ್ಸ್ ಒಂದು ನಿರ್ದಿಷ್ಟ ಮಿತಿಗಿಂತ ಕಡಿಮೆಯಾದರೆ, ಸ್ವಯಂ ಟಾಪ್-ಅಪ್ ಸ್ವಯಂಚಾಲಿತವಾಗಿ ಹಣವನ್ನು ಸೇರಿಸುತ್ತದೆ, ಹಸ್ತಚಾಲಿತ ರೀಚಾರ್ಜ್‌ಗಳ ಅಗತ್ಯವನ್ನು ತೆಗೆದುಹಾಕುತ್ತದೆ. ಈ ವೈಶಿಷ್ಟ್ಯವು UPI ಲೈಟ್‌ನಲ್ಲಿ ತಡೆರಹಿತ ಪಾವತಿಗಳನ್ನು ಖಚಿತಪಡಿಸುತ್ತದೆ. ಸ್ವಯಂ ಟಾಪ್-ಅಪ್ ವೈಶಿಷ್ಟ್ಯವು ಯುಪಿಐ ಲೈಟ್ ಅನ್ನು ಸ್ಟ್ರೀಮ್‌ಲೈನ್ ಮಾಡಲು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ (ಎನ್‌ಪಿಸಿಐ) ನಡೆಯುತ್ತಿರುವ ಪ್ರಯತ್ನದ ಭಾಗವಾಗಿದೆ. UPI PIN ಇಲ್ಲದೆಯೇ ಸಣ್ಣ ವಹಿವಾಟುಗಳಿಗಾಗಿ ವಿನ್ಯಾಸಗೊಳಿಸಲಾದ UPI Lite, ಪ್ರಸ್ತುತ ಬಳಕೆದಾರರ ಬ್ಯಾಂಕ್ ಖಾತೆಗಳಿಂದ ಹಸ್ತಚಾಲಿತ ರೀಚಾರ್ಜ್‌ಗಳ ಅಗತ್ಯವಿದೆ.…

Read More

ಬೆಂಗಳೂರು: ನವೆಂಬರ್.1ರಂದು ಕನ್ನಡ ರಾಜ್ಯೋತ್ಸವದಂದು ಧ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೂಚಿಸಿರುವಂತೆ, ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷಗಳು ಸಂದಿರುವ ಈ ಶುಭ ಸಂದರ್ಭದಲ್ಲಿ ಎಲ್ಲಾ ಶಾಲೆಗಳಲ್ಲಿ ನವಂಬರ್-1 ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವನ್ನು ಆಚರಿಸುವುದು ಮತ್ತು ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ ಬಗ್ಗೆ ಅರಿವು ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ ಎಂದಿದ್ದಾರೆ. ಈ ಹಿನ್ನಲೆಯಲ್ಲಿ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕಡ್ಡಾಯವಾಗಿ ಧ್ವಜಸಂಹಿತೆಯನ್ವಯ ಧ್ವಜಾರೋಹಣ ಮಾಡಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ 69ನೇ ಕನ್ನಡ ರಾಜ್ಯೋತ್ಸವವನ್ನು ಯಶಸ್ವಿಯಾಗಿ ಆಚರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಪರಿಷ್ಕರಣೆ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಯಾವ ಗ್ಯಾರಂಟಿಯೂ ನಿಲ್ಲುವುದಿಲ್ಲ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲುವುದಿಲ್ಲ. ಮುಂದಿನ ಎರಡೂವರೆ ವರ್ಷವೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ . ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೇವೆ. ಹೀಗಾಗಿ ಎಂಟೂವರೆ ವರ್ಷವೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಹೇಳಿದ್ದಾರೆ. ಈ ವಿಚಾರವಾಗಿ ನಿನ್ನೆ ವಿಧಾನಸೌಧದ ಗ್ರ‍್ಯಾಂಡ್ ಮೆಟ್ಟಿಲು ಮೇಲೆ ನಡೆದ ಐರಾವತ ಕ್ಲಬ್ ಕ್ಲಾಸ್ 2.0 ಬಸ್ ಉದ್ಘಾಟನೆ ವೇಳೆ ಮಾತನಾಡಿದ ಡಿಸಿಎಂ, ಅನೇಕ ಜನರು ನನಗೆ ಮೇಲ್, ಮೆಸೇಜ್ ಮಾಡಿ ನಾವು ಟಿಕೆಟ್‌ಗೆ ಹಣ ಕೊಡುವುದಕ್ಕೆ ಸಿದ್ದವಾಗಿದ್ದೇವೆ.ನಮಗೆ ಉಚಿತ ಪ್ರಯಾಣ ಬೇಡ ಎಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್‌ಗೆ ದುಡ್ಡು ಕೊಡುತ್ತೇವೆ ಆದರೆ ಬಸ್‌ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿಕೆ ನೀಡಿದ್ದರು. ಇದೀಗ ಈ ಕುರಿತು ಸ್ಪಷ್ಟನೆ ನೀಡಿದ್ದಾರೆ.

Read More