Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸುಗಳ ಆಗಸ್ಟ್ನಲ್ಲಿ ಜಾರಿಗೆ ಬರುವುದು ಖಚಿತವಾಗಿದೆ. ಏಳನೇ ವೇತನ ಆಯೋಗದ ಶಿಫಾರಸುಗಳ ಹಣಕಾಸು ಹೊಂದಾಣಿಕೆ ಕುರಿತಂತೆ ಪರಿಶೀಲನೆ ನಡೆಸಿ ಮಾಹಿತಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಸೂಚನೆಗೆ ಆರ್ಥಿಕ ಇಲಾಖೆಗೆ ಒಪ್ಪಿಗೆ ನೀಡಿದ್ದು, ಆಗಸ್ಟ್ ನಲ್ಲಿ ಏಳನೇ ವೇತನ ಆಯೋಗ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಏಳನೇ ವೇತನ ಆಯೋಗ ಶೇ.27.5 ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಹಿಂದಿನ ಸರ್ಕಾರ ಶೇ.17 ಮಧ್ಯಂತರ ಪರಿಹಾರ ನೀಡಿತ್ತು. ಇದೀಗ ಉಳಿದ ಶೇ.10.5 ಹೆಚ್ಚಳ ನೀಡಲು ನಿರ್ಧರಿಸಲಾಗಿದೆ. ವೇತನ ಹೆಚ್ಚಳಕ್ಕಾಗಿಯೇ ಬಜೆಟ್ನಲ್ಲಿ 14 ಸಾವಿರ ಕೋಟಿ ರೂ.ಗಳನ್ನು ಸರ್ಕಾರ ಮೀಸಲಿಟ್ಟಿದ್ದು, ಜು. 15 ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ಬಳಿಕ ಆದೇಶ ಪ್ರಕಟವಾಗಿ ಜಾರಿಗೆ ಬರಲಿದೆ ಹೇಳಲಾಗಿದೆ. ಇಲ್ಲಿದೆ ಕರ್ನಾಟಕ 7ನೇ ರಾಜ್ಯ ವೇತನ ಆಯೋಗ…
ಹಾವೇರಿ : ರಾಜ್ಯದಲ್ಲಿ ಡೆಂಗ್ಯೂ ಜ್ವರದ ಆರ್ಭಟದ ನಡುವೆ ಇದೀಗ ಇಲಿ ಜ್ವರದ ಭೀತಿ ಎದುರಾಗಿದ್ದು, ಹಾವೇರಿಯಲ್ಲಿ 12 ವರ್ಷದ ಬಾಲಕನಿಗೆ ʻಇಲಿ ಜ್ವರʼ ದೃಢಪಟ್ಟಿದೆ. ಹಾವೇರಿಯ ತಾಲೂಕಿನ ದೇವಿಹೊಸೂರು ಗ್ರಾಮದ 12 ವರ್ಷದ ಬಾಲಕನಿಗೆ ಇಲಿ ಜ್ವರ ಇರುವುದು ದೃಢಪಟ್ಟಿದೆ. ಹಾವೇರಿ ಜಿಲ್ಲಾಸ್ಪತ್ರೆಯಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಕೆಲದ ದಿನಗಳಿಂದ ಜ್ವರದಿಂದ ಬಳುತ್ತಿದ್ದ ಬಾಲಕನಿಗೆ ರಕ್ತ ಪರೀಕ್ಷೆ ಮಾಡಿದ್ದು, ಪರೀಕ್ಷೆಯಲ್ಲಿ ಇಲಿ ಜ್ವರ ಇರುವುದು ದೃಢಪಟ್ಟಿದೆ. ರಕ್ತ ಪರೀಕ್ಷೆ ನಂತರ ಊರಿಗೆ ಬಾಲಕನನ್ನು ಪೋಷಕರು ಕರೆದುಕೊಂಡು ಹೋಗಿದ್ದರು. ಇಲಿ ಜ್ವರ ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯ ಆರೋಗ್ಯ ಸಿಬ್ಬಂದಿಗಳು ಮತ್ತೆ ಬಾಲಕನಿಗೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಸದ್ಯ ಬಾಲಕನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಲಿ ಜ್ವರದ ಲಕ್ಷಣಗಳು ತಲೆನೋವು ವಾಕರಿಕೆ ಅಥವಾ ವಾಂತಿ ಸಂಭವ ಮೈಕೈ ನೋವು ಸೋಂಕು ಉಂಟಾದ ಎರಡು ದಿನಗಳಲ್ಲಿ ಮೈಮೇಲೆ ಗುಳ್ಳೆಗಳು ದುಗ್ಧರಸ ಗ್ರಂಥಿಗಳು ಊದಿಕೊಳ್ಳುವುದು ಕೀಲುನೋವುಗಳು ಕಾಣಿಸುವುದು ಇಲಿ ಕಚ್ಚಿದ…
ಚೆನ್ನೈ’ತಮಿಳುನಾಡಿನ ತಿರುಪುರದ ವ್ಯಕ್ತಿಯೊಬ್ಬರು ಮದುವೆಯಾಗದೆ 35 ವರ್ಷ ವಯಸ್ಸನ್ನು ತಲುಪಿದ ನಂತರ “ಡೇಟ್ ದಿ ತಮಿಳು ವೇ” ವೆಬ್ಸೈಟ್ ಮೂಲಕ ಸಂಧ್ಯಾ ಅವರನ್ನು ಪರಿಚಯ ಮಾಡಿಕೊಂಡು ಮದುವೆಯಾದರು.ಆದರೆ ಆಕೆಗೆ ಈಗಾಗಲೇ 50 ಕ್ಕೂ ಹೆಚ್ಚು ಮದುವೆಯಾದದ್ದನ್ನು ಆನಂತರ ಕಂಡುಕೊಂಡರು. ಆಧುನಿಕ ಡಿಜಿಟಲ್ ಸಾಧನಗಳು ಸಾಂಪ್ರದಾಯಿಕ ಮ್ಯಾಚ್ ಮೇಕಿಂಗ್ ಅಭ್ಯಾಸಗಳನ್ನು ಹೇಗೆ ಮರುರೂಪಿಸುತ್ತಿವೆ ಎಂಬುದನ್ನು ಎತ್ತಿ ತೋರಿಸುವ ಮೂಲಕ ವೇದಿಕೆಯು ಅವರ ಒಕ್ಕೂಟವನ್ನು ಸುಗಮಗೊಳಿಸಿತು. ಅವರ ವಿವಾಹವು ಮನುಷ್ಯನಿಗೆ ಒಂದು ಮೈಲಿಗಲ್ಲನ್ನು ಸೂಚಿಸುತ್ತದೆ, ಸಮಕಾಲೀನ ತಮಿಳು ಸಂಸ್ಕೃತಿಯಲ್ಲಿ ಮದುವೆ ಮತ್ತು ಸಂಬಂಧಗಳ ಸುತ್ತ ವಿಕಸನಗೊಳ್ಳುತ್ತಿರುವ ಸಾಮಾಜಿಕ ಮಾನದಂಡಗಳನ್ನು ಒತ್ತಿಹೇಳುತ್ತದೆ. ಮದುವೆಯಾದ ಮೂರು ತಿಂಗಳ ನಂತರ, ಆಕೆಯ ಪತಿ ನಡವಳಿಕೆಯ ಬದಲಾವಣೆಗಳನ್ನು ಗಮನಿಸಿದಾಗ ಮತ್ತು ತನ್ನ ಹೆಂಡತಿಯ ಆಧಾರ್ ಕಾರ್ಡ್ನಲ್ಲಿ ವ್ಯತ್ಯಾಸಗಳನ್ನು ಕಂಡುಕೊಂಡಾಗ, ಅವಳ ಹೆಸರು ವಿಭಿನ್ನವಾಗಿತ್ತು.ಅವರ ಸಂಬಂಧದೊಳಗೆ ಗುರುತು ಮತ್ತು ಪ್ರಾಮಾಣಿಕತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿತು. ಮದುವೆಯಾದ ಅಲ್ಪಾವಧಿಯ ನಂತರ ಅಂತಹ ಮೂಲಭೂತ ವಂಚನೆಯ ಆವಿಷ್ಕಾರವು ಅವಳನ್ನು ವಿಶ್ವಾಸದ ಸಮಸ್ಯೆಗಳು ಮತ್ತು ಅವರ…
ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕುಡಿಯುವ ನೀರಿನ ಸರಬರಾಜು ಟ್ಯಾಂಕ್ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನಿಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕೆಂದು ಸಚಿವರು ಹೇಳಿದ್ದಾರೆ. ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್ ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನೀರು ನಿಲ್ಲದಂತೆ ಕ್ರಮವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು; ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು; ಅಂಗನವಾಡಿ,…
ನವದೆಹಲಿ : ಜುಲೈ 23ರಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರದ 3.O ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದು, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆಯು ಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆ ಯಡಿ ಸದ್ಯ ಇರುವ 5 ಲಕ್ಷ ರು. ವಿಮೆ ಮೊತ್ತವನ್ನು 10 ಲಕ್ಷ ರೂ.ಗೆ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ. ಜು.23ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್ ಅವರು ಮಂಡಿಸುವ ಬಜೆಟ್ನಲ್ಲಿ ಈ ಕುರಿತು ಅಧಿಕೃತ ಘೋಷಣೆ ಹೊರಬೀಳ ಲಿದೆ ಎನ್ನಲಾಗಿದೆ. ಸದ್ಯ 16ರಿಂದ 59 ವರ್ಷ ದೊಳಗಿನವರು ಈ ಯೋಜನೆಯಡಿ ವಾರ್ಷಿಕ 5 ಲಕ್ಷ ರು. ಆರೋಗ್ಯ ವಿಮೆಗೆ (ಪ್ರತಿ ಕುಟುಂಬಕ್ಕೆ) ಅರ್ಹರಾಗಿದ್ದಾರೆ. ಈ ಯೋಜನೆಯ ಮೊತ್ತವನ್ನು 5 ಲಕ್ಷ ರೂಪಾಯಿಂದ 10 ಲಕ್ಷ ರೂಪಾಯಿಗೆ ಏರಿಕೆ ಮಾಡುವ ಸಂಬಂಧ ಕೇಂದ್ರವು ಚಿಂತನೆ ಮಾಡಿದೆ ಎಂದು ವರದಿಯಾಗಿದೆ. ಸದ್ಯ ಬಡವರಿಗೆ ಆಯುಷ್ಮಾನ್ ಭಾರತ್ ಯೋಜನೆ ಅಡಿ 5 ಲಕ್ಷ ರೂಪಾಯಿವರೆಗೆ…
ಉತ್ತರಕನ್ನಡ : ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವರುಣ ಅಬ್ಬರಿಸುತ್ತಿದ್ದು ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು, ಇಂದು ಉತ್ತರಕನ್ನಡ ಜಿಲ್ಲೆಯ ಐದು ತಾಲೂಕಿನ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಇಂದು ಕೂಡ ಮಳೆ ಮುಂದುವರೆದಿದ್ದರಿಂದ ಇಂದು 5 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.ಹೌದು ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟ, ಅಂಕೋಲ, ಭಟ್ಕಳ ತಾಲೂಕು ಹಾಗೂ ಹೊನ್ನಾವರ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮುಂದುವರೆಯಲಿದೆ. ಇಂದು ರಜೆ ನೀಡಿ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಆದೇಶ ಹೊರಡಿಸಿದ್ದಾರೆ . ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ಶಾಲಾ ಮಕ್ಕಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ ಮತ್ತು ಕಾರವಾರ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 8 ರಂದು ರಜೆ…
ನವದೆಹಲಿ: 2023-25ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಮತ್ತು 2025 ರಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ರೋಹಿತ್ ಶರ್ಮಾ ಅವರನ್ನು ಪುರುಷರ ರಾಷ್ಟ್ರೀಯ ತಂಡದ ನಾಯಕರನ್ನಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಖಚಿತಪಡಿಸಿದ್ದಾರೆ. ಭಾನುವಾರ ಹಂಚಿಕೊಂಡ ವೀಡಿಯೊ ಸಂದೇಶದಲ್ಲಿ, “ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ನಾವು ಡಬ್ಲ್ಯುಟಿಸಿ ಫೈನಲ್ ಮತ್ತು ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲುತ್ತೇವೆ ಎಂದು ನನಗೆ ವಿಶ್ವಾಸವಿದೆ” ಎಂದು ಶಾ ಹೇಳಿದರು. ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ (ಯುಎಸ್ಎ) ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಆತಿಥ್ಯದಲ್ಲಿ ಇತ್ತೀಚೆಗೆ ನಡೆದ ಟಿ 20 ವಿಶ್ವಕಪ್ 2024 ಅನ್ನು ಗೆಲ್ಲುವ ಮೂಲಕ 37 ವರ್ಷದ ಶರ್ಮಾ ನಾಯಕನಾಗಿ ತಮ್ಮ ಮೊದಲ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟ್ರೋಫಿಯನ್ನು ಗೆದ್ದರು
2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಜೂನ್ 29 ರಂದು ಬ್ರಿಡ್ಜ್ಟೌನ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾವನ್ನು 7 ರನ್ಗಳಿಂದ ಸೋಲಿಸಿತು. ಈ ಮೂಲಕ ಟೀಂ ಇಂಡಿಯಾ 2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಸಾಧನೆ ಮಾಡಿದೆ. ಇದಕ್ಕೂ ಮುನ್ನ 2007ರಲ್ಲಿ ಟಿ20 ವಿಶ್ವಕಪ್ ಗೆದ್ದಿದ್ದರು. ಜಯ್ ಶಾ ಭವಿಷ್ಯವಾಣಿ ನಿಜವಾಯ್ತು: ಅಂತಿಮ ಪಂದ್ಯದ ಗೆಲುವಿನೊಂದಿಗೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ ಅವರ ಭವಿಷ್ಯವಾಣಿ ನಿಜವಾಯಿತು. ವಾಸ್ತವವಾಗಿ, ಬಾರ್ಬಡೋಸ್ ಮೈದಾನದಲ್ಲಿ ರೋಹಿತ್ ಶರ್ಮಾ ಭಾರತದ ಧ್ವಜವನ್ನು ಹಾರಿಸುತ್ತಾರೆ ಎಂದು ಜಯ್ ಶಾ ಈಗಾಗಲೇ ಭವಿಷ್ಯ ನುಡಿದಿದ್ದರು. ನಾಯಕ ರೋಹಿತ್ ಶರ್ಮಾ ಕೂಡ ಪ್ರಶಸ್ತಿ ಗೆದ್ದ ನಂತರ ಮೈದಾನದಲ್ಲಿ ಭಾರತದ ಧ್ವಜವನ್ನು ನೆಟ್ಟರು. ಈಗ ಜಯ್ ಶಾ ಮತ್ತೊಮ್ಮೆ ದೊಡ್ಡ ಭವಿಷ್ಯ ನುಡಿದಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ…
ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆಯಾಗುತ್ತಿತ್ತು ಎಂಟು ಜನರು ಕಾಣೆಯಾಗಿದ್ದಾರೆ, ಪ್ರವಾಹದಿಂದ ಕೊಚ್ಚಿಹೋಗಿದ್ದಾರೆ ಅಥವಾ ಭೂಕುಸಿತದಲ್ಲಿ ಹೂತುಹೋಗಿದ್ದಾರೆ, ಇತರ 12 ಜನರು ಗಾಯಗೊಂಡಿದ್ದಾರೆ ಮತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ವಕ್ತಾರ ಡಾನ್ ಬಹದ್ದೂರ್ ಕರ್ಕಿ ತಿಳಿಸಿದ್ದಾರೆ. ರಕ್ಷಣಾ ಕಾರ್ಯಕರ್ತರು ಭೂಕುಸಿತವನ್ನು ತೆರವುಗೊಳಿಸಲು ಮತ್ತು ರಸ್ತೆಗಳನ್ನು ತೆರೆಯಲು ಪ್ರಯತ್ನಿಸುತ್ತಿದ್ದಾರೆ” ಎಂದು ಕರ್ಕಿ ರಾಯಿಟರ್ಸ್ಗೆ ತಿಳಿಸಿದರು, ಅವಶೇಷಗಳನ್ನು ತೆರವುಗೊಳಿಸಲು ಭಾರಿ ಉಪಕರಣಗಳನ್ನು ಬಳಸಲಾಗುತ್ತಿದೆ ಎಂದು ಹೇಳಿದರು. ಆಗ್ನೇಯ ನೇಪಾಳದಲ್ಲಿ, ಪೂರ್ವ ಭಾರತದ ರಾಜ್ಯವಾದ ಬಿಹಾರದಲ್ಲಿ ಪ್ರತಿವರ್ಷ ಮಾರಣಾಂತಿಕ ಪ್ರವಾಹಕ್ಕೆ ಕಾರಣವಾಗುವ ಕೋಶಿ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಕೋಶಿ ನದಿಯ ಹರಿವು ಹೆಚ್ಚುತ್ತಿದೆ ಮತ್ತು ಸಂಭವನೀಯ ಪ್ರವಾಹದ ಬಗ್ಗೆ ಜಾಗರೂಕರಾಗಿರಲು ನಾವು ನಿವಾಸಿಗಳನ್ನು ಕೇಳಿದ್ದೇವೆ” ಎಂದು ನದಿ ಹರಿಯುವ ಸುನ್ಸಾರಿ ಜಿಲ್ಲೆಯ ಹಿರಿಯ ಅಧಿಕಾರಿ ಬೆಡ್ ರಾಜ್ ಫುಯಾಲ್ ರಾಯಿಟರ್ಸ್ಗೆ ತಿಳಿಸಿದರು. ಕೋಶಿ ನದಿಯಲ್ಲಿ ನೀರಿನ ಹರಿವು ಸೆಕೆಂಡಿಗೆ 369,000 ಕ್ಯೂಸೆಕ್ ಆಗಿದ್ದು, ಇದು ಸಾಮಾನ್ಯ…
ಬೆಂಗಳೂರು : ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕುಡಿಯುವ ನೀರಿನ ಸರಬರಾಜು ಟ್ಯಾಂಕ್ಗಳು, ತೆರೆದ ತೊಟ್ಟಿಗಳು ಮತ್ತು ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನು ವಾರಕ್ಕೊಮ್ಮೆ ಶುಚಿಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನಿಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಮತ್ತು ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ಹಲವು ತುರ್ತು ಕ್ರಮಗಳನ್ನು ಸೂಚಿಸಿದ್ದು, ಗ್ರಾಮ ಪಂಚಾಯತಿ ಮಟ್ಟದಲ್ಲಿ ಲೋಪವಾಗದಂತೆ ಅನುಷ್ಠಾನಗೊಳಿಸಬೇಕೆಂದು ಸಚಿವರು ಹೇಳಿದ್ದಾರೆ. ಮನೆಗಳು, ಅಂಗಡಿ-ಮುಂಗಟ್ಟುಗಳು, ಹೊಟೇಲ್ ಗಳು, ವಾಣಿಜ್ಯ ಸಂಕೀರ್ಣಗಳು, ಸಾರ್ವಜನಿಕ ಸ್ಥಳಗಳು ಹಾಗೂ ಖಾಲಿ ಜಾಗಗಳಲ್ಲಿ ನೀರು ದೀರ್ಘಕಾಲ ನೀರು ನಿಲ್ಲದಂತೆ ಕ್ರಮವಹಿಸಬೇಕು ಮತ್ತು ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳುಬೇಕು; ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು; ಅಂಗನವಾಡಿ,…














