Subscribe to Updates
Get the latest creative news from FooBar about art, design and business.
Author: kannadanewsnow57
BREAKING : ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜೈಲೇ ಗತಿ : ಜಾಮೀನು ಅರ್ಜಿ ವಿಚಾರಣೆ ಸೆ.23 ಕ್ಕೆ ಮುಂದೂಡಿಕೆ
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದ ಶಾಸಕ ಮುನಿರತ್ನಗೆ ಕೋರ್ಟ್ ಶಾಕ್ ನೀಡಿದ್ದು, ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 23 ಕ್ಕೆ ಮುಂದೂಡಿದೆ. ಶಾಸಕ ಮುನಿರತ್ನ ಅವರು ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಇಂದು ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಕೋರ್ಟ್ ಅರ್ಜಿ ವಿಚಾರಣೆ ವಿಚಾರಣೆ ನಡೆಸಿದ್ದು, ವಿಚಾರಣೆಯನ್ನು ಸೆಪ್ಟೆಂಬರ್ 23 ಕ್ಕೆ ಮುಂದೂಡಿದೆ. ಈ ಮೂಲಕ ಶಾಸಕ ಮುನಿರತ್ನಗೆ ಜೈಲೇ ಗತಿ ಆಗಿದೆ. 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಮನಗರ ಜಿಲ್ಲೆಯ ಕಗ್ಗಲಿಪುರ ಠಾಣೆ ಪೋಲೀಸರು ಬಿಜೆಪಿ ಶಾಸಕ ಮುನಿರತ್ನ ಅವರನ್ನು ಮತ್ತೆ ಬಂಧಿಸಿದ್ದಾರೆ.
ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ನಿನ್ನೆ ಜಾಮೀನು ಪಡೆದು ಹೊರಬಂದಿದ್ದ ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಇದೀಗ ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ರಾಮನಗರದ ರೆಸಾರ್ಟ್ ವೊಂದಕ್ಕೆ ದೂರುದಾರ ಮಹಿಳೆಯನ್ನು ಸ್ಥಳ ಮಹಜರಿಗೆ ಪೊಲೀಸರು ಕರೆದೊಯ್ದಿದ್ದಾರೆ.
ಧಾರವಾಡ : ಖಾತೆಯಲ್ಲಿ ಸಾಕಷ್ಟು ಹಣ ಇರದೇ ಇದ್ದರೂ. ಚೆಕ್ ಮಾನ್ಯ ಮಾಡಿದ ಬ್ಯಾಂಕ್ ಆಪ್ ಮಹಾರಾಷ್ಟ್ರಗೆ ಗ್ರಾಹಕರ ಆಯೋಗ ರೂ.1,40,000/- ದಂಡ ವಿಧಿಸಿದೆ. ಧಾರವಾಡದ ಕೊಟ್ಟಣದ ಓಣಿ ನಿವಾಸಿ ಸುಮನ್ ಅತ್ತಿಗೇರಿ ಎಂಬುವವರು ಎದುರುದಾರ ಬ್ಯಾಂಕ್ ಆಪ್ ಮಹಾರಾಷ್ಟ್ರದ ಗ್ರಾಹಕಳಾಗಿದ್ದು, ಆ ಬ್ಯಾಂಕಿನಲ್ಲಿ ತನ್ನ ಉಳಿತಾಯ ಖಾತೆಯನ್ನು ಹೊಂದಿ ತನ್ನ ಹಣಕಾಸಿನ ವ್ಯವಹಾರಗಳನ್ನು ಮಾಡುತ್ತಿರುತ್ತಾಳೆ. ಹೀಗಿರುವಾಗ ತನ್ನ ಪತಿಯ ಆರೋಗ್ಯದ ಖರ್ಚಿನ ಸಲುವಾಗಿ ಹಾಗೂ ಮಕ್ಕಳ ವಿಧ್ಯಾಭ್ಯಾಸಕ್ಕಾಗಿ ಸಕಾಲಧನ ಸಹಕಾರಿ ಸಂಘದಿಂದ ರೂ.80,000/- ಸಾಲ ಪಡೆದಿದ್ದು, ಆ ಮೊತ್ತವನ್ನು ಸಹಕಾರಿ ಸಂಘದವರು ತನ್ನ ಖಾತೆಗೆ ದಿನಾಂಕ:22/05/2024ರಂದು ವರ್ಗಾವಣೆ ಮಾಡಿರುತ್ತಾರೆ. ತಾನು ಆ ಹಣವನ್ನು ನಗಧೀಕರಣ ಮಾಡಿಕೊಳ್ಳಲು ದಿ:23/05/2024ರಂದು ಸದರಿ ಎದುರುದಾರ ಬ್ಯಾಂಕಿಗೆ ಹೋದಾಗ ತನ್ನ ಖಾತೆಯಲ್ಲಿ ಯಾವುದೇ ಹಣ ಜಮಾ ಇರುವುದಿಲ್ಲ ಅಂತಾ ತಿಳಿಸಿರುತ್ತಾರೆ. ತದ ನಂತರ ತನ್ನ ಬ್ಯಾಂಕ್ ಪಾಸಬುಕ್ನಲ್ಲಿ ಹಣ ಜಮೆ ಆದ ಕುರಿತು ಎದುರುದಾರರ ಗಮನಕ್ಕೆ ತಂದರೂ ಸಹ ಅವರು ತನಗೆ ಹಣ ನಗಧೀಕರಣ ಮಾಡಿಕೊಳ್ಳಲು…
ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ʻತಾಯಿ ಭುವನೇಶ್ವರಿʼ ಪ್ರತಿಮೆ ಸ್ಥಾಪನೆ ಮಾಡಿದ್ದು, ನವೆಂಬರ್ 1 ರಂದು ಪ್ರತಿಮೆ ಅನಾವರಣ ಮಾಡಲಾಗುವುದು. ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್ 1 ರಂದು ಪ್ರತಿಮೆ ಅನಾವರಣ ಮಾಡಲು ನಿರ್ಧರಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮತ್ತು ಸುವರ್ಣ ಸಂಭ್ರಮ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ. ಕನ್ನಡ ನಾಡು ಏಕೀಕರಣಗೊಂಡು, ಕರ್ನಾಟಕ ಎಂಬ ಹೆಸರು ನಾಮಕರಣವಾಗಿ 50 ವರ್ಷ ಪೂರೈಸಿರುವ ಸಂದರ್ಭದಲ್ಲಿ ಕನ್ನಡತನದ ಹೆಗ್ಗುರುತು ವಿಧಾನಸೌಧದ ಆವರಣದಲ್ಲಿರಬೇಕೆಂಬ ಉದ್ದೇಶದಿಂದ ಕನ್ನಡ ನಾಡು, ನುಡಿ, ಸಂಸ್ಕೃತಿಯ ಸಂಕೇತವಾದ ತಾಯಿ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸುಮಾರು 23 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ.
ಬೆಂಗಳೂರು : ಸರ್ಕಾರದ ಮಹತ್ತರ ಯೋಜನೆಯಾದ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕವಾಗಿ ಒಂದು ಬಾರಿಗೆ ರೂ. 5 ಸಾವಿರ ಗಳ ಸಹಾಯಧನವನ್ನು ಸರ್ಕಾರದಿಂದ ಡಿ.ಬಿ.ಟಿ ಮೂಲಕ (ನೇರ ನಗದು ವರ್ಗಾವಣೆ) ನೀಡಲಾಗುತ್ತಿದೆ. 2024-25 ನೇ ಸಾಲಿಗೆ ಸಹಾಯಧನವನ್ನು ಪಡೆಯಲು ಜಿಲ್ಲೆಯ ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ನೇಕಾರರು ಹಾಗೂ ನೇಕಾರಿಕೆ ಪೂರಕ ವೃತ್ತಿಯನ್ನು ಅವಲಂಬಿಸಿರುವ ಎಲ್ಲಾ ನೇಕಾರರು ಈ ಯೋಜನೆಯಡಿ ರೂ. 5 ಸಾವಿರ ಗಳ ವಾರ್ಷಿಕ ಒಂದು ಬಾರಿಯ ಸಹಾಯಧನ ಪಡೆಯಲು ಅರ್ಹರಿದ್ದು, ಅರ್ಜಿ ನಮೂನೆಗಳನ್ನು ತಮ್ಮ ನೇಕಾರ ಸಹಕಾರ ಸಂಘಗಳಿಂದ/ ಕಚೇರಿಯಿಂದ ಪಡೆದು ಸಂಘದ ಮೂಲಕ ಸಲ್ಲಿಸಬೇಕಿದೆ. ವೈಯಕ್ತಿಕ ನೇಕಾರರಾಗಿದ್ದಲ್ಲಿ ನೇಕಾರ್ ಸಮ್ಮಾನ್ ಅರ್ಜಿ ನಮೂನೆಗಳನ್ನು ಈ ಕಚೇರಿಯಿಂದ ಪಡೆದು ಸಲ್ಲಿಸಬಹುದಾಗಿದೆ. ಕೈಮಗ್ಗ ನೇಕಾರರಿಂದ ಸಲ್ಲಿಸಬೇಕಾದ ದಾಖಲಾತಿಗಳು: ಆಧಾರ್ ಕಾರ್ಡ್, ರೇಷನ್ ಕಾರ್ಡ್, ನೇಕಾರ್ ಸಮ್ಮಾನ್ ಐಡಿ/ ಪೆಹಚಾನ್ ಕಾರ್ಡ್, ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆ ಪಾಸ್ಬುಕ್ ಪ್ರತಿ, ಕೈಮಗ್ಗ ನೇಕಾರಿಕೆ…
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದಲಿನ ಹಳದಿ ಬೋರ್ಡ್ ಟ್ಯಾಕ್ಸಿ ಹಾಗೂ ಆಟೋ ಚಾಲಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾನಿಧಿ ಯೋಜನೆ ಸೌಲಭ್ಯಕ್ಕಾಗಿ ರಾಜ್ಯದಲ್ಲಿನ ಹಳದಿ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಚಾಲಕರು, ಪೋಷಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆಯೊಂದಿಗೆ ವೆಬ್ಸೈಟ್ https://sevasindhu.karnataka.gov.in/Sevasindhu/Kannada ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ : ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯನ್ನು ಘೋಷಿಸಿದ್ದರು, ಇದರ ಅಡಿಯಲ್ಲಿ 75,000 ಕೋಟಿ ರೂ.ಸಬ್ಸಿಡಿಯೊಂದಿಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಇದರ ಅಡಿಯಲ್ಲಿ, 1 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗುವ ಯೋಜನೆ ಇದೆ. ಅಲ್ಲದೆ, ಉಳಿದ ವಿದ್ಯುತ್ತನ್ನು ಮಾರಾಟ ಮಾಡುವ ಮೂಲಕ ನೀವು ಪ್ರಯೋಜನ ಪಡೆಯಬಹುದು. ಇದಲ್ಲದೆ, ಕೇಂದ್ರ ಸರ್ಕಾರವು ಈ ಯೋಜನೆಯಡಿ ಸಬ್ಸಿಡಿಯನ್ನು ಸಹ ನೀಡುತ್ತದೆ. ನೀವು ಸಹ ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯ ಲಾಭವನ್ನು ಪಡೆಯಲು ಬಯಸಿದರೆ, ನೀವು ಸೌರ ಫಲಕಗಳನ್ನು ಸ್ಥಾಪಿಸಬೇಕು. ಆದಾಗ್ಯೂ, ಸೌರ ಫಲಕವನ್ನು ಸ್ಥಾಪಿಸುವ ಮೊದಲು, ಕೆಲವು ವಿಶೇಷ ವಿಷಯಗಳನ್ನು ವಿವರವಾಗಿ ತಿಳಿದುಕೊಳ್ಳಬೇಕು. ಇದರಿಂದ ಯೋಜನೆಯ ಲಾಭವನ್ನು ಪಡೆಯುವಲ್ಲಿ ನೀವು ಯಾವುದೇ ರೀತಿಯ ಸಮಸ್ಯೆಯನ್ನು ಎದುರಿಸುವುದಿಲ್ಲ. ಸಂಪೂರ್ಣ ವಿವರಗಳನ್ನು ತಿಳಿದುಕೊಳ್ಳೋಣ… ಇದಕ್ಕೆ ಎಷ್ಟು ವೆಚ್ಚವಾಗುತ್ತದೆ? ನೀವು ಸೌರ ಫಲಕಗಳನ್ನು ಸ್ಥಾಪಿಸಲು ಹೊರಟರೆ, ಅದರ ವೆಚ್ಚವು…
ನವದೆಹಲಿ : ದೇಶದಲ್ಲಿ ರಸ್ತೆ ಅಪಘಾತಗಳನ್ನು ತಡೆಯಲು ಕೇಂದ್ರ ಸರ್ಕಾರ ಸಂಚಾರ ನಿಯಮಗಳನ್ನು ಬಿಗಿಗೊಳಿಸಿದೆ. ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಲಾಯಿಸಿ ಪೊಲೀಸರಿಗೆ ಸಿಕ್ಕಿಬಿದ್ದರೆ ರೂ. 5,000 ದಂಡ ವಿಧಿಸಲಾಗುವುದು. ಕೆಲವು ಪ್ರಕರಣಗಳಲ್ಲಿ ಎಫ್ ಐಆರ್ ದಾಖಲಾಗಬಹುದು. ಈ ನಿಯಮವು ದ್ವಿಚಕ್ರ ವಾಹನಗಳು ಹಾಗೂ ಸಾರಿಗೆ ವಾಹನಗಳಿಗೂ ಅನ್ವಯಿಸುತ್ತದೆ. ಸಂಚಾರ ಪೊಲೀಸರು ಮತ್ತು ಸಾರಿಗೆ ಅಧಿಕಾರಿಗಳು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಆದಾಗ್ಯೂ, ಡ್ರೈವಿಂಗ್ ಲೈಸೆನ್ಸ್ ವಿಷಯದಲ್ಲಿ ಕೆಲವು ವಿನಾಯಿತಿಗಳಿವೆ. ನಿರ್ದಿಷ್ಟವಾಗಿ ಹೇಳುವುದಾದರೆ, ಈ ನಿಬಂಧನೆಯು ಕೆಲವು ವಿಧದ ವಾಹನಗಳಿಗೆ, ವಿಶೇಷವಾಗಿ ಎಲೆಕ್ಟ್ರಿಕ್ ವಾಹನಗಳಿಗೆ ಅನ್ವಯಿಸುವುದಿಲ್ಲ. ಷರತ್ತುಬದ್ಧ ವಿನಾಯಿತಿ ದೇಶದ ಹೆಚ್ಚುತ್ತಿರುವ ಮಾಲಿನ್ಯವನ್ನು ಕಡಿಮೆ ಮಾಡಲು ಶೂನ್ಯ-ಹೊರಸೂಸುವಿಕೆ ಸಾರಿಗೆಯನ್ನು ಉತ್ತೇಜಿಸುವ ತನ್ನ ಪ್ರಯತ್ನಗಳ ಭಾಗವಾಗಿ ಭಾರತ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ (ಇವಿ) ಬಳಕೆಯನ್ನು ಲಂಗರು ಹಾಕುತ್ತಿದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾಲನಾ ಪರವಾನಗಿ ವಿಚಾರದಲ್ಲಿ ಕೆಲವು ಸಡಿಲಿಕೆಗಳನ್ನು ಮಾಡಲಾಗುತ್ತಿದೆ. ಅದೇನೆಂದರೆ.. ಇವಿ ಓಡಿಸುವವರಿಗೆ ಡ್ರೈವಿಂಗ್ ಲೈಸೆನ್ಸ್ ಕಡ್ಡಾಯವಲ್ಲ. ಆದಾಗ್ಯೂ,…
ನವದೆಹಲಿ : ಕೆಲವರು ವ್ಯಾಪಾರ ಮಾಡುತ್ತಾರೆ ಮತ್ತು ಕೆಲವರು ತಮ್ಮ ಜೀವನೋಪಾಯಕ್ಕಾಗಿ ಉದ್ಯೋಗಗಳನ್ನು ಮಾಡುತ್ತಾರೆ. ಕೆಲಸ ಮಾಡಿದರೆ ಸಂಬಳದ ಹೊರತಾಗಿ PF ಸೌಲಭ್ಯ ಸಿಗುತ್ತದೆ. ವಾಸ್ತವವಾಗಿ, ನಿಯಮಗಳ ಪ್ರಕಾರ, ಉದ್ಯೋಗದಲ್ಲಿರುವವರಿಗೆ ಪಿಎಫ್ ಖಾತೆಯನ್ನು ತೆರೆಯಲಾಗುತ್ತದೆ. ಪ್ರತಿ ತಿಂಗಳು ನೌಕರನ ಸಂಬಳದಿಂದ ನಿಗದಿತ ಮೊತ್ತವನ್ನು ಕಡಿತಗೊಳಿಸಿ ಈ ಖಾತೆಗೆ ಜಮಾ ಮಾಡಲಾಗುತ್ತದೆ ಮತ್ತು ಈ ಹಣಕ್ಕೆ ಸರ್ಕಾರವು ಬಡ್ಡಿಯನ್ನು ಸಹ ಪಾವತಿಸುತ್ತದೆ. ನಂತರ ನೀವು ಕೆಲಸ ಮುಗಿದ ನಂತರ ಈ ಹಣವನ್ನು ಹಿಂಪಡೆಯಬಹುದು, ಆದರೆ ಕೆಲಸದ ಮಧ್ಯದಲ್ಲಿಯೂ ನಿಮ್ಮ ಪಿಎಫ್ ಖಾತೆಯಿಂದ ಹಣವನ್ನು ಹಿಂಪಡೆಯಬಹುದು ಎಂದು ನಿಮಗೆ ತಿಳಿದಿದೆಯೇ? ಬಹುಶಃ ಇಲ್ಲ, ಆದ್ದರಿಂದ ಯಾವ ಕಾರಣಗಳಿಗಾಗಿ ಮತ್ತು ನಿಮ್ಮ PF ಖಾತೆಯಿಂದ ನೀವು ಹಣವನ್ನು ಹೇಗೆ ಹಿಂಪಡೆಯಬಹುದು ಎಂದು ತಿಳಿಯಿರಿ. ಈ ಕಾರಣಗಳಿಗಾಗಿ ನೀವು ಕೆಲಸ ಮಾಡುವಾಗ PF ಖಾತೆಯಿಂದ ಹಣವನ್ನು ಹಿಂಪಡೆಯಬಹುದು:- ಅನಾರೋಗ್ಯದ ಕಾರಣ ನೈಸರ್ಗಿಕ ವಿಕೋಪಗಳಿಂದಾಗಿ ಮನೆ/ಫ್ಲಾಟ್/ನಿರ್ಮಾಣ ಖರೀದಿ ಪ್ರವರ್ತಕರಿಂದ ಮನೆ/ಫ್ಲಾಟ್ ಖರೀದಿ ವಸತಿ ಗೃಹ ನಿರ್ಮಾಣಕ್ಕೆ ನಿವೇಶನ ಖರೀದಿ…
ಬೆಂಗಳೂರು : ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯ ವಿವಾದದ ನಡುವೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯು ಮಹತ್ವದ ಸುತ್ತೋಲೆ ಹೊರಡಿಸಿದ್ದು, ಮುಜರಾಯಿ ದೇಗುಗಳಲ್ಲಿ ನಂದಿನಿ ತುಪ್ಪವನ್ನು ಕಡ್ಡಾಯವಾಗಿ ಬಳಸುವಂತೆ ಆದೇಶ ಹೊರಡಿಸಿದೆ. ಹೌದು, ರಾಜ್ಯ ಧಾರ್ಮಿಕ ದತ್ತಿ ಇಲಾಖೆಯು ದೇವಸ್ಥಾನಗಳ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆಗೆ, ದಾಸೋಹ ಭವನಗಳಲ್ಲಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಿದೆ. ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಗಳ ದೇಗುಲಗಳಲ್ಲಿ ಪ್ರಸಾದ ಸೇರಿ ವಿವಿಧ ದಾಸೋಹಗಳಿಗೆ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಇಂದು ಮಹತ್ವದ ಆದೇಶ ಹೊರಡಿಸಿದೆ.














