Author: kannadanewsnow57

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪರಕರಣದಲ್ಲಿ ಜೈಲು ಪಾಲಾಗಿರುವ ಪವಿತ್ರಾಗೌಡಗೆ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ಸಂಖ್ಯೆ ನೀಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಆರೋಪಿ ಪವಿತ್ರಾಗೌಡಗೆ ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್‌ ವಿತರಣೆ ಮಾಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಹಲವರು ಜೈಲು ಪಾಲಾಗಿದ್ದಾರೆ. ನಟ ದರ್ಶನ್‌ ಜಾಮೀನು ಪಡೆಯಲು ಅರ್ಜಿ ಸಲ್ಲಿಸಲು ವಕೀಲ ರಾಘವೇಂದ್ರ ಅವರು ಸಿದ್ದತೆ ನಡೆಸಿದ್ದು, ಈ ನಡುವೆ ಕೋರ್ಟ್‌ ನಲ್ಲಿ ದರ್ಶನ್‌ ಪರ ವಾದ ಮಂಡಿಸಲು ಹಿರಿಯ ವಕೀಲ ಸಿ.ವಿ.ನಾಗೇಶ್‌ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಈಗಾಗಲೇ ವಕೀಲ ರಾಘವೇಂದ್ರ ಅವರು ನಾಗೇಶ್‌ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ನಟ ದರ್ಶನ್‌ ಕೊಲೆ ಪ್ರಕರಣದಿಂದ ಪಾರಾಗಲು ಹಾಗೂ ಸಾಕ್ಷ್ಯ ನಾಶ ಮಾಡಲು 40 ಲಕ್ಷ ರೂಪಾಯಿ ಸಾಲ ಮಾಡಿದ್ದರು ಎಂದು ಪೊಲೀಸ್‌ ತನಿಖೆ ವೇಳೆ ತಿಳಿದುಬಂದಿದೆ.

Read More

ನವದೆಹಲಿ: ದೆಹಲಿ ಅಬಕಾರಿ ನೀತಿಯಲ್ಲಿನ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಜಾರಿ ನಿರ್ದೇಶನಾಲಯದ ಮನವಿಯನ್ನು ಆಲಿಸಿದ ಹೈಕೋರ್ಟ್, ಪ್ರಕರಣದ ವಿಚಾರಣೆಯವರೆಗೆ ಅರವಿಂದ್ ಕೇಜ್ರಿವಾಲ್ ಅವರ ಜಾಮೀನಿಗೆ ತಡೆ ನೀಡಿದೆ. ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ ಆದೇಶವನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ದೆಹಲಿ ಹೈಕೋರ್ಟ್ ಅನ್ನು ಸಂಪರ್ಕಿಸಿದೆ. ನಿವೃತ್ತ ಇಡಿ ಮತ್ತು ಸಿಬಿಐ ನ್ಯಾಯಾಧೀಶ ನಿಯಾಯ್ ಬಿಂದು ಗುರುವಾರ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದರು. ಎರಡು ದಿನಗಳ ಕಾಲ ಕೇಜ್ರಿವಾಲ್ ಮತ್ತು ಕೇಂದ್ರ ತನಿಖಾ ಸಂಸ್ಥೆ ಜಾರಿ ನಿರ್ದೇಶನಾಲಯ (ಇಡಿ) ವಾದಗಳನ್ನು ಆಲಿಸಿದ ನಂತರ ನ್ಯಾಯಾಲಯವು ಸಂಜೆ ತಡವಾಗಿ ಜಾಮೀನು ಆದೇಶವನ್ನು ಹೊರಡಿಸಿತು.

Read More

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಅರೆಸ್ಟ್‌ ಆಗಿರುವ ನಟ ದರ್ಶನ್‌ ವಿರುದ್ಧ ಪ್ರಶಾಂತ್‌ ಸಂಬರಗಿ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ನಟ ದರ್ಶನ್‌ ಸ್ಟಾರ್‌ ಹಿರೋಬ್ಬರ ಹೆಂಡತಿಗೆ ಕರೆ ಮಾಡಿ ಆವಾಜ್‌ ಹಾಕಿದ್ದರು ಎಂದು ಹೇಳಿದ್ದಾರೆ. ಈ ಕುರಿತು ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ಪ್ರಶಾಂತ್‌ ಸಂಬರಗಿ, ಮುಂದುವರಿದ ದಚ್ಚುವಿನ ಕರ್ಮ ಕಾಂಡ ಭಾಗ 3. ರೇಣುಕಾ ಸ್ವಾಮಿಗೆ ನ್ಯಾಯ ಸಿಗಲಿ. ಈ ಘಟನೆ ನಡೆದಿದ್ದು 2019 ರಲ್ಲಿ, ಈ 6 ಅಡಿ ದೈತ್ಯಾಕಾರದ ಮೃಗ ..ಸ್ನೇಹ ಮತ್ತು ಮಾನವೀಯತೆಯ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದನು. ಅವತ್ತು ಒಂದು ಕಾಲದ ಇವನ ಕುಚಿಕೋ ಸ್ಯಾಂಡಲ್‌ವುಡ್ star hero ಗೆಳೆಯನ ಹೆಂಡತಿಗೆ ರಾತ್ರಿಯಲ್ಲಿ ಬೆದರಿಕೆ ಮತ್ತು ಎಚ್ಚರಿಕೆ ಧ್ವನಿ( voice note) ಸಂದೇಶವನ್ನು ಕಳಿಸಿಬಿಟ್ಟು, ಅದರಲ್ಲಿ ಹೇಳ್ತಾನೆ ನಿಮ್ಮ ಸ್ಟಾರ್ ಪತಿ ಯಾವುದೇ ಕಾರಣಕ್ಕೂ ನನ್ನ ಅಭಿಮಾನಿ ಬಳಗವನ್ನು ಸಂಪರ್ಕಿಸದಂತೆ ನೋಡಿಕೋ ಇಲ್ಲ ಅಂದ್ರೆ ಪರಿಸ್ಥಿತಿ ನೆಟ್ಟಗಿರಲ್ಲ. ನಶೆನಲ್ಲಿ ಇವನ…

Read More

ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ನಟ ದರ್ಶನ್‌ ಪರ ವಾದಿಸಲು ಹಿರಿಯ ವಕೀಲ ಸಿ.ವಿ. ನಾಗೇಶ್‌ ಅವರನ್ನು ನೇಮಿಸಲಾಗಿದೆ. ನಟ ದರ್ಶನ್‌ ಜಾಮೀನು ಪಡೆಯಲು ಅರ್ಜಿ ಸಲ್ಲಿಸಲು ವಕೀಲ ರಾಘವೇಂದ್ರ ಅವರು ಸಿದ್ದತೆ ನಡೆಸಿದ್ದು, ಈ ನಡುವೆ ಕೋರ್ಟ್‌ ನಲ್ಲಿ ದರ್ಶನ್‌ ಪರ ವಾದ ಮಂಡಿಸಲು ಹಿರಿಯ ವಕೀಲ ಸಿ.ವಿ.ನಾಗೇಶ್‌ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಈಗಾಗಲೇ ವಕೀಲ ರಾಘವೇಂದ್ರ ಅವರು ನಾಗೇಶ್‌ ಜೊತೆಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ನಟ ದರ್ಶನ್‌ ಕೊಲೆ ಪ್ರಕರಣದಿಂದ ಪಾರಾಗಲು ಹಾಗೂ ಸಾಕ್ಷ್ಯ ನಾಶ ಮಾಡಲು 40 ಲಕ್ಷ ರೂಪಾಯಿ ಸಾಲ ಮಾಡಿದ್ದರು ಎಂದು ಪೊಲೀಸ್‌ ತನಿಖೆ ವೇಳೆ ತಿಳಿದುಬಂದಿದೆ.

Read More

ನವದೆಹಲಿ:ವಾಲ್ಮಾರ್ಟ್ ಬೆಂಬಲಿತ ಫ್ಲಿಪ್ಕಾರ್ಟ್ ತನ್ನ ತ್ವರಿತ ವಾಣಿಜ್ಯ ವಿಭಾಗವಾದ ‘ಫ್ಲಿಪ್ಕಾರ್ಟ್ ಮಿನಿಟ್ಸ್’ ಅನ್ನು ಜುಲೈನಲ್ಲಿ ಪ್ರಾರಂಭಿಸಲು ತಯಾರಿ ನಡೆಸುತ್ತಿದೆ ಎಂದು ವರದಿಯಾಗಿದೆ. ಕಳೆದ ಕೆಲವು ವರ್ಷಗಳಲ್ಲಿ ಎರಡು ಕಡಿಮೆ ಯಶಸ್ವಿ ಪ್ರಯತ್ನಗಳ ನಂತರ ತ್ವರಿತ ವಾಣಿಜ್ಯ ಕ್ಷೇತ್ರಕ್ಕೆ ಪ್ರವೇಶಿಸಲು ಫ್ಲಿಪ್ಕಾರ್ಟ್ನ ಮೂರನೇ ಪ್ರಯತ್ನ ಇದಾಗಿದೆ. “ಫ್ಲಿಪ್ಕಾರ್ಟ್ ಮಿನಿಟ್ಸ್ನೊಂದಿಗೆ, ಅದು 15 ನಿಮಿಷಗಳ ವಿತರಣೆಯ ಗುರಿಯನ್ನು ಹೊಂದಿದೆ” ಮತ್ತು ಜುಲೈ 15 ರ ಸುಮಾರಿಗೆ ಬಿಡುಗಡೆ ಸಂಭವಿಸಬಹುದು ಎಂದು  ಬಿಸಿನೆಸ್ ಟುಡೇ ವರದಿ ಮಾಡಿದೆ. ‘ಫ್ಲಿಪ್ಕಾರ್ಟ್ ಮಿನಿಟ್ಸ್’ ಮೂಲಕ, ಎಲೆಕ್ಟ್ರಾನಿಕ್ಸ್, ದಿನಸಿ ಮತ್ತು ಇತರ ಅಗತ್ಯ ವಸ್ತುಗಳ ಮೇಲೆ ಕೇಂದ್ರೀಕರಿಸುವಾಗ ಕಂಪನಿಯು ತನ್ನ ಪೂರೈಕೆ ಸರಪಳಿಯನ್ನು ಬಳಸಿಕೊಳ್ಳಲು ಯೋಜಿಸಿದೆ ಎಂದು ವರದಿ ಹೇಳಿದೆ. ಆದಾಗ್ಯೂ, ಕಂಪನಿಯು ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ಫ್ಲಿಪ್ಕಾರ್ಟ್ ಕ್ವಿಕ್ನೊಂದಿಗೆ ಜಾಗವನ್ನು ಪ್ರವೇಶಿಸುವ ಫ್ಲಿಪ್ಕಾರ್ಟ್ನ ಹಿಂದಿನ ಪ್ರಯತ್ನವು ಯೋಜಿಸಿದಂತೆ ಪ್ರಾರಂಭವಾಗದ ನಂತರ ಇದು ಬಂದಿದೆ. ನಂತರ ಕಂಪನಿಯು 90 ನಿಮಿಷಗಳ ವಿತರಣೆಯನ್ನು ಯೋಜಿಸಿತ್ತು. ಪ್ರಸ್ತುತ, ಭಾರತದಲ್ಲಿ ತ್ವರಿತ ವಾಣಿಜ್ಯ…

Read More

ಬೆಂಗಳೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧದ ಎದುರು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಯೋಗಾಸನ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್‌ ಗೆ ಕ್ರಿಕೆಟಿಗ ಮನೀಷ್‌ ಪಾಂಡ್‌ ಸಹ ಸಾಥ್‌ ನೀಡಿದ್ದಾರೆ. ಅಂತಾರಾಷ್ಟ್ರೀಯ ಯೋಗದಿನದ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಆವರಣದಲ್ಲಿ ಆಯುಷ್ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ‘ಯೋಗೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಯೋಗವು ಮನಸ್ಸು ಮತ್ತು ದೇಹವನ್ನು ಸಂಪರ್ಕಿಸುವ ಪ್ರಾಚಿನ ಕಲೆಯಾಗಿದ್ದು, ಸಾವಿರಾರು ವರ್ಷಗಳ ಹಿಂದೆಯೇ ಇದನ್ನು ಜಗತ್ತಿಗೆ ಪರಿಚಯಿಸಿದ ಹೆಗ್ಗಳಿಕೆ ಭಾರತ ದೇಶದ್ದು. ನಮಗೆ ಬಾಹ್ಯ ಸೌಂದರ್ಯ ಎಷ್ಟು ಮುಖ್ಯವೋ, ಆಂತರಿಕ ಸೌಂದರ್ಯವು ಅಷ್ಟೇ ಮುಖ್ಯವಾಗಿರುತ್ತದೆ. ಇವೆರಡನ್ನು ಚೆನ್ನಾಗಿ ಇಟ್ಟುಕೊಳ್ಳಲು ಯೋಗವು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪ್ರತಿ ನಿತ್ಯ ನಾವು ಯೋಗ ಮಾಡುವುದರಿಂದ ಉತ್ತಮವಾದ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ. ಹಾಗಾಗಿ ಯೋಗವನ್ನು ನಮ್ಮ ಜೀವನದ ಒಂದು ಭಾಗವಾಗಿ ರೂಢಿಸಿಕೊಂಡು, ಪ್ರತಿ ದಿನ ಯೋಗ ಮಾಡೋಣ ಹಾಗೂ ಆರೋಗ್ಯಕರ ಜೀವನ ಶೈಲಿಯನ್ನು ಅಳವಡಿಸಿಕೊಳ್ಳೋಣ ಎಂದು ಕರೆ ನೀಡಿದ್ದಾರೆ.…

Read More

ನವದೆಹಲಿ:ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ ನ್ಯಾಯಮೂರ್ತಿ ಸುಧೀರ್ ಕುಮಾರ್ ಜೈನ್ ನೇತೃತ್ವದ ರಜಾಕಾಲದ ಪೀಠದ ಮುಂದೆ ಈ ಮನವಿಯನ್ನು ಇಡಿ ಉಲ್ಲೇಖಿಸುವ ಸಾಧ್ಯತೆಯಿದೆ

Read More

ಬೆಂಗಳೂರು : ಜೂನ್, 26 ರಿಂದ ಜುಲೈ, 05 ರವರೆಗೆ ನಡೆಯುವ ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರದ ಸಾಮಾನ್ಯ ಮೊಬೈಲ್ ಮಾತ್ರ ಇರಿಸಿಕೊಳ್ಳಬಹುದು. ಉಳಿದಂತೆ ಎಲ್ಲಾ ಪರೀಕ್ಷಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್, ಸ್ಮಾಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ…

Read More

ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಮದ್ಯಪ್ರಿಯರಿಗೆ ಸಿಹಿ ಸುದ್ದಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಡುವೆ ಅಬಕಾರಿ ತೆರಿಗೆಯನ್ನು (ಎಇಡಿ) ಸರಕಾರ ಇಳಿಕೆ ಮಾಡುವ ಸಂಬಂಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ ಎನ್ನಲಾಗಿದೆ. ಅಬಕಾರಿ ತೆರಿಗೆ ಇಳಿಕೆ ಸಂಬಂಧ ಕರಡು ಅಧಿಸೂಚನೆ ಪ್ರಕಟಿಸಿದೆ. ಅಲ್ಲದೆ, ಈ ಅಧಿಸೂಚನೆ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಏಳು ದಿನಗಳ ಕಾಲಾವಕಾಶ ನೀಡಿದೆ. ಹೆಚ್ಚುವರಿ ಅಬಕಾರಿ ತೆರಿಗೆಯಿಂದ ರಾಜ್ಯದ ಬೊಕ್ಕಸದ ಆದಾಯಕ್ಕೆ ಹೊಡೆತ ಬೀಳುತ್ತಿದ್ದು, ಹೀಗಾಗಿ, ಸ್ಪರ್ಧಾತ್ಮಕ ದರ ನಿಗದಿಪಡಿಸಲು ಸರಕಾರ ಅಧಿಸೂಚನೆ ಹೊರಡಿಸಿದೆ.

Read More

ನವದೆಹಲಿ:ವಿಶ್ವದ ಎರಡು ಅತಿ ಹೆಚ್ಚು ಜನಸಂಖ್ಯೆಯ ದೇಶಗಳ ನಡುವೆ ನಡೆಯುತ್ತಿರುವ ಗಡಿ ಉದ್ವಿಗ್ನತೆಯಿಂದಾಗಿ ಭಾರತ ಪ್ರತಿರೋಧಿಸಿದರೂ, ನಾಲ್ಕು ವರ್ಷಗಳ ನಿಲುಗಡೆಯ ನಂತರ ನೇರ ಪ್ರಯಾಣಿಕರ ವಿಮಾನಗಳನ್ನು ಪುನರಾರಂಭಿಸಲು ಚೀನಾ ಭಾರತವನ್ನು ಒತ್ತಾಯಿಸುತ್ತಿದೆ. 2020 ರ ಜೂನ್ನಲ್ಲಿ ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ನಡೆದ ದಶಕಗಳಲ್ಲಿ ನಡೆದ ಅತಿದೊಡ್ಡ ಮಿಲಿಟರಿ ಮುಖಾಮುಖಿಯಲ್ಲಿ 20 ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡರು. ಸುದ್ದಿ ಸಂಸ್ಥೆ ರಾಯಿಟರ್ಸ್ ಪ್ರಕಾರ, ಘರ್ಷಣೆಯಲ್ಲಿ ಕನಿಷ್ಠ ನಾಲ್ಕು ಚೀನೀ ಸೈನಿಕರು ಸಾವನ್ನಪ್ಪಿದ್ದಾರೆ. ಜೂನ್ 2020 ರಲ್ಲಿ ವಿವಾದಿತ ಹಿಮಾಲಯನ್ ಗಡಿಯಲ್ಲಿ ಮಾರಣಾಂತಿಕ ಘರ್ಷಣೆಯ ನಂತರ, ಭಾರತವು ಚೀನಾದ ಹೂಡಿಕೆಗಳ ಮೇಲಿನ ನಿರ್ಬಂಧಗಳನ್ನು ಒಳಗೊಂಡ ಹಲವಾರು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿತು, ಉಭಯ ದೇಶಗಳ ನಡುವಿನ ಪ್ರಯಾಣಿಕರ ವಿಮಾನಗಳನ್ನು ನಿಲ್ಲಿಸಿತು ಮತ್ತು ಜನಪ್ರಿಯ ಅಪ್ಲಿಕೇಶನ್ಗಳನ್ನು ನಿಷೇಧಿಸಿತು. ಆದಾಗ್ಯೂ, ಉಭಯ ದೇಶಗಳ ನಡುವಿನ ಸರಕು ವಿಮಾನಗಳು ಕಾರ್ಯನಿರ್ವಹಿಸುತ್ತಲೇ ಇವೆ. ನೇರ ವಿಮಾನ ಕಾರ್ಯಾಚರಣೆಗಳು ಎರಡೂ ದೇಶಗಳಿಗೆ ಪ್ರಯೋಜನವನ್ನು ನೀಡಬಹುದು, ಆದಾಗ್ಯೂ, ಚೀನಾಕ್ಕೆ ಹೆಚ್ಚಿನ ಪಾಲು ಇದೆ, ಅದರ…

Read More