Author: kannadanewsnow57

ನವರಾತ್ರಿಯ ಒಂಬತ್ತು ದಿನಗಳ ಕಾಲ ಈ ಮೂರಕ್ಷರ ಮಂತ್ರವನ್ನು ಪ್ರತಿದಿನ ಮೂರು ಬಾರಿ ಜಪಿಸಿದರೆ, ಕಲಶದಿಂದ ಪೂಜಿಸಿದ ಸಂಪೂರ್ಣ ಲಾಭ ಮತ್ತು ತ್ರಿವಳಿ ದೇವತೆಯ ಕೃಪೆ ನಿಮಗೆ ಸಿಗುತ್ತದೆ. ಶರನ್ನ ನವದುರ್ಗೆಯರ ಶಕ್ತಿಯುತ ನವರಾತ್ರಿ ಮಂತ್ರ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಅಶ್ವಯುಜ ಮಾಸವು ನವದುರ್ಗೆಯರ ಪೂಜೆಗೆ ಮಂಗಳಕರವೆಂದು ಪರಿಗಣಿಸಲ್ಪಟ್ಟಂತೆ, ಅಂಬಿಗೈ ದುರ್ಗಾಪರಮೇಶ್ವರಿ ಯ ಆರಾಧನೆಗೆ ನವರಾತ್ರಿ ಮಾಸವು ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ನವರಾತ್ರಿ ಹಬ್ಬವು ಅಶ್ವಯುಜ ಕೃಷ್ಣ ಪಕ್ಷ ಮಾಸದಲ್ಲಿ ನಡೆಯುತ್ತದೆ. ನವರಾತ್ರಿಯ ದಿನಗಳು ಮೂರು ದೇವತೆಗಳಾದ ದುರ್ಗಾ, ಲಕ್ಷ್ಮಿ ಮತ್ತು…

Read More

ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಜನಪ್ರಿಯಳಾಗಿರುವ ಕಿಪ್ಪಿ ಕೀರ್ತಿ ತನ್ನ ಪ್ರಿಯತಮನ ವಿರುದ್ಧ ದೂರು ದಾಖಲಿಸಿದ್ದಾಳೆ. ಹೌದು, ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಿಯತಮ ಮುತ್ತು ಹಾಗೂ ಆತನ ಸ್ನೇಹಿತ ದಚ್ಚು ಎಂಬಾತನ ವಿರುದ್ಧ ಕಿಪ್ಪಿ ಕೀರ್ತಿ ದೂರು ದಾಖಲಿಸಿದ್ದಾಳೆ. ಸದ್ಯ ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ. ಕಿಪ್ಪಿ ಕೀರ್ತಿ ಹಾಗೂ ಸ್ನೇಹಿತರನ್ನು ಠಾಣೆಗೆ ಕರೆಸಿದ ಪೊಲೀಸರು ಮತ್ತೆ ಈ ರೀತಿ ಮಾಡಬೇಡಿ ಎಂದು ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ ಎನ್ನಲಾಗಿದೆ.

Read More

ಮಂಡ್ಯ : ಸೆಪ್ಟೆಂಬರ್ 26 ರ ಇಂದಿನಿಂದ ಅಕ್ಟೋಬರ್ 2 ರವರೆಗೆ ಕೆ.ಆರ್.ಎಸ್ ಬೃಂದಾವನಕ್ಕೆ ಆಗಮಿಸುವ ಸಾರ್ವಜನಿಕರ ವಾಹನಕ್ಕೆ ಟೋಲ್ ಹಾಗೂ ಬೃಂದಾವನ ವೀಕ್ಷಣೆಯ ಪ್ರವೇಶ ಶುಲ್ಕ ಇರುವುದಿಲ್ಲ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ‌ ರಮೇಶ ಬಾಬು ಬಂಡಿಸಿದ್ದೇಗೌಡ ಅವರು ತಿಳಿಸಿದ್ದಾರೆ. ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ “ಕಾವೇರಿ ಆರತಿ” ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26 ರ ಇಂದಿನಿಂದ ಐದು ದಿನಗಳ ಕಾಲ‌ ಕೆಆರ್ ಎಸ್ ನ ಬೃಂದಾವನ ಉದ್ಯಾನವನದಲ್ಲಿ ನೆರವೇರಲಿದೆ. ಕಾವೇರಿ ಆರತಿ ಕಾರ್ಯಕ್ರಮದ ವೀಕ್ಷಣೆಗೆ ಪ್ರತಿ ನಿತ್ಯ 8 ರಿಂದ 10 ಸಾವಿರಕ್ಕೂ ಅಧಿಕ ಪ್ರವಾಸಿಗರು ರಾಜ್ಯ, ಹೊರರಾಜ್ಯದ ನಾನಾ ಭಾಗಗಳಿಂದ ಆಗಮಿಸಿ “ಕಾವೇರಿ ಆರತಿ”ಯನ್ನು ಕಣ್ತುಂಬಿಕೊಳ್ಳಲಿದ್ದಾರೆ. ಕಾವೇರಿ ಆರತಿ ವೀಕ್ಷಿಸಲು ಆಗಮಿಸುವ ಪ್ರವಾಸಿಗರಿಗೆ ಉಚಿತವಾಗಿ ಹಂಚಲು ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಲಾಡು ಮಾಡಿಸಿದ್ದಾರೆ. ಪ್ರತಿನಿತ್ಯ ಲಾಡು ವಿತರಣೆಗೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.…

Read More

ಸಾಮಾಜಿಕ ಮಾಧ್ಯಮಗಳಲ್ಲಿ ಒಂದು ವಿಡಿಯೋ ವೇಗವಾಗಿ ವೈರಲ್ ಆಗುತ್ತಿದ್ದು, ಇದು ಒಂದು ಕುಟುಂಬವು ತಮ್ಮ ಮಗಳ ಮೊದಲ ಋತುಚಕ್ರವನ್ನು ಸ್ಮರಣೀಯ ಆಚರಣೆಯೊಂದಿಗೆ ಆಚರಿಸುವುದನ್ನು ಚಿತ್ರಿಸುತ್ತದೆ. ಈ ವೀಡಿಯೊ ಸುಂದರವಾದ ಸಂದೇಶವನ್ನು ನೀಡುತ್ತದೆ: ಈ ನೈಸರ್ಗಿಕ ಪ್ರಕ್ರಿಯೆಯನ್ನು ಮುಜುಗರಕ್ಕಿಂತ ಹೆಚ್ಚಾಗಿ ಗೌರವ ಮತ್ತು ಸಂತೋಷದಿಂದ ಸ್ವೀಕರಿಸಲಾಗುತ್ತದೆ. ಕುಟುಂಬವು ತಮ್ಮ ಮಗಳನ್ನು ಹೂವುಗಳು ಮತ್ತು ದೀಪಗಳಿಂದ ಅಲಂಕರಿಸಲ್ಪಟ್ಟ ಮನೆಗೆ ಕರೆತರುವುದನ್ನು ವೀಡಿಯೊ ತೋರಿಸುತ್ತದೆ. ಹುಡುಗಿಯ ತಂದೆ ಅವಳನ್ನು ಅಪ್ಪಿಕೊಂಡಾಗ ಅತ್ಯಂತ ಭಾವನಾತ್ಮಕ ಕ್ಷಣ ಬರುತ್ತದೆ, ಮತ್ತು ಅವರ ಎರಡೂ ಕಣ್ಣುಗಳಿಂದ ಸಂತೋಷ ಮತ್ತು ಪ್ರೀತಿಯ ಕಣ್ಣೀರು ಹರಿಯುತ್ತದೆ. ಈ ಕ್ಷಣವು ಒಬ್ಬ ತಂದೆ ತನ್ನ ಮಗಳ ಜೀವನದ ಈ ಹೊಸ ಹಂತದಲ್ಲಿ ಎಷ್ಟು ಆಳವಾಗಿ ಬೆಂಬಲಿಸುತ್ತಾರೆ ಎಂಬುದನ್ನು ತೋರಿಸುತ್ತದೆ. ನಂತರ ಕುಟುಂಬದ ಇತರ ಪುರುಷ ಸದಸ್ಯರು ಹುಡುಗಿಗೆ ನಮಸ್ಕರಿಸಿ, ಅವಳನ್ನು ಆಶೀರ್ವದಿಸಿ, ಹಣದ ಉಡುಗೊರೆಗಳನ್ನು ನೀಡುತ್ತಾರೆ. ಈ ದೃಶ್ಯವು ಈ ಕುಟುಂಬವು ಅವರ ಸಂಪ್ರದಾಯಗಳು ಮತ್ತು ಸಂಬಂಧಗಳ ಮೇಲೆ ಇರಿಸುವ ಮಹತ್ವವನ್ನು ತೋರಿಸುತ್ತದೆ. ‘its_aayushaaa’…

Read More

ನೀವು ಆಸ್ತಿಯನ್ನು ಖರೀದಿಸುವಾಗ, ಸುಗಮ ಮತ್ತು ಕಾನೂನುಬದ್ಧ ವಹಿವಾಟುಗಳಿಗೆ ಕೆಲವು ದಾಖಲೆಗಳು ಅವಶ್ಯಕ. ಗುರುತಿನ ಪುರಾವೆಯಿಂದ ಹಿಡಿದು ಸಮೀಕ್ಷೆಗಳು, ಶೀರ್ಷಿಕೆ ಪತ್ರಗಳು ಮತ್ತು ಇತರ ಆಸ್ತಿ ಸಂಬಂಧಿತ ದಾಖಲೆಗಳವರೆಗೆ, ದಾಖಲೆಗಳ ಅವಶ್ಯಕತೆಗಳನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ ಕೂಡ. ಭಾರತದಲ್ಲಿ ಆಸ್ತಿಯನ್ನು ಖರೀದಿಸಲು ಅಗತ್ಯವಾದ ದಾಖಲೆಗಳ ಪಟ್ಟಿ ಮಾರಾಟ ಪತ್ರ Encumbrance Certificate ಸ್ವಾಧೀನ ಪತ್ರ -Possession Letter ಖಾತಾ ಪ್ರಮಾಣಪತ್ರ ಶೀರ್ಷಿಕೆ ಪತ್ರ -Title Deed ಕಟ್ಟಡ ಅನುಮೋದನೆ ಯೋಜನೆ ಪವರ್ ಆಫ್ ಅಟಾರ್ನಿ (POA) ಪೂರ್ಣಗೊಳಿಸುವಿಕೆ ಪ್ರಮಾಣಪತ್ರ-Completion Certificate ಆಕ್ಯುಪೆನ್ಸಿ ಪ್ರಮಾಣಪತ್ರ ಆಕ್ಷೇಪಣೆಯಿಲ್ಲದ ಪ್ರಮಾಣಪತ್ರಗಳು (NOC ಗಳು) ಮಾರಾಟ ಮತ್ತು ಖರೀದಿ ಒಪ್ಪಂದಗಳು ಪಾವತಿ ರಶೀದಿಗಳು (ನಿರ್ಮಾಣ ಹಂತದಲ್ಲಿದೆ / ಸ್ಥಳಾಂತರಗೊಳ್ಳಲು ಸಿದ್ಧವಾಗಿದೆ) ಗುರುತು ಮತ್ತು ವಿಳಾಸ ಪುರಾವೆ ಅಡಮಾನ ದಾಖಲೆಗಳು (ಅನ್ವಯಿಸಿದರೆ) RERA (ನಿಯಂತ್ರಣ ಮತ್ತು ಅಭಿವೃದ್ಧಿ) ಕಾಯ್ದೆ, 2016 ರ ಅಡಿಯಲ್ಲಿ ಅನುಸರಣೆ ಅಗತ್ಯ ದಾಖಲೆಗಳು ನಿರ್ಮಾಣ ಹಂತದಲ್ಲಿರುವ ಆಸ್ತಿಗಾಗಿ ಸ್ಥಳಾಂತರಿಸಲು ಸಿದ್ಧವಾಗಿರುವ ಆಸ್ತಿಗಾಗಿತಾಜಾ /ಪ್ರಾಥಮಿಕ ಮಾರಾಟಮರುಮಾರಾಟ /…

Read More

ಬೆಂಗಳೂರು: ರಾಜ್ಯದ ರೈತರ ಅನುಕೂಲಕ್ಕಾಗಿ ಸರ್ಕಾರದಿಂದ ವಿವಿಧ ಯೋಜನೆಗಳಿದ್ದಾವೆ. ಅದರೊಟ್ಟಿಗೆ ರಾಜ್ಯದಲ್ಲಿ ಸಹಕಾರಿ ಸಂಸ್ಥೆಗಳಿಂದ ರೈತರಿಗೆ ವಿವಿಧ ಸಾಲಸೌಲಭ್ಯಗಳು ಕೂಡ ದೊರೆಯುತ್ತಿವೆ. ಈ ಬಗ್ಗೆ ಕಳೆದ ಮುಂಗಾರು ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ್ ಬುಡ್ನ ಸಿದ್ದಿ ಕೇಳಿದಂತ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಉತ್ತರ ನೀಡಿದ್ದಾರೆ. ಹಾಗಾದ್ರೇ ಸಹಕಾರಿ ಸಂಸ್ಥೆಗಳಿಂದ ರೈತರಿಗೆ ದೊರೆಯುವ ವಿವಿಧ ಸಾಲಗಳು ಯಾವುವು ಎನ್ನುವ ಮಾಹಿತಿ ಈ ಕೆಳಗಿದೆ. ರೈತರಿಗೆ ಸಿಗಲಿವೆ ಸಹಕಾರಿ ಸಂಸ್ಥೆಗಳಿಂದ ಈ ಸಾಲ ಸೌಲಭ್ಯಗಳು ರೂ.5 ಲಕ್ಷಗಳವರೆಗಿನ ಅಲ್ಪಾವಧಿ ಬೆಳೆ ಸಾಲವನ್ನು ಮತ್ತು ರೂ.2 ಲಕ್ಷದವರೆಗೆ ಪಶುಸಂಗೋಪನೆ, ಮೀನುಗಾರಿಕೆ ಉದ್ದೇಶಗಳಿಗೆ ದುಡಿಯುವ ಬಂಡವಾಳದ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ವಿತರಿಸುವ ಯೋಜನೆಯ ಜಾರಿಯಲ್ಲಿದೆ. ರೂ.15 ಲಕ್ಷದವರೆಗೆ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಸಾಲವನ್ನು ಶೇ.3ರ ಬಡ್ಡಿದರದಲ್ಲಿ ವಿತರಣೆ. ಸಹಕಾರಿ ಸಂಘಗಳು ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಗೋದಾಮುಗಳಲ್ಲಿ ಶೇಖರಣೆ ಮಾಡಿ, ವಿತರಿಸುವ ಅಡಮಾನ ಸಾಲವನ್ನು ಶೇ.7ರ ಬಡ್ಡಿದರದಲ್ಲಿ ನೀಡಲಾಗುತ್ತದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ,…

Read More

ಬೆಂಗಳೂರು: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಸೀರೆ ಕಳವು ಮಾಡಿದ್ದಾರೆ ಎಂದು ಆರೋಪಿಸಿ ನಡುರಸ್ತೆಯಲ್ಲೇ ಮಹಿಳೆಗೆ ಬಟ್ಟೆ ಅಂಗಡಿ ಮಾಲೀಕರೊಬ್ಬರು ಬೂಟುಕಾಲಿನಿಂದ ಒದ್ದಿದ್ದಾರೆ.‌ ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅವೆನ್ಯೂ ರಸ್ತೆಯ ಮಾಯಾ ಸಿಲ್ಕ್ ಸ್ಯಾರೀಸ್ ಅಂಗಡಿ ಮಾಲೀಕ ಬಾಬುಲಾಲ್ ಎಂಬುವರು ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ‌. ಮಾಲೀಕ ಮಾತ್ರವಲ್ಲದೇ ಅಂಗಡಿ ಸಿಬ್ಬಂದಿ ಸಹ ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನೋವಿನಿಂದ ಮಹಿಳೆ ಕಿರುಚಾಡಿ ಅಂಗಲಾಚಿದರೂ ಸಹ ಬಿಟ್ಟಿಲ್ಲ. ಮಹಿಳೆ ಮೇಲೆ ಹಲ್ಲೆ ಮಾಡಿದ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಹಲ್ಲೆಯ ವಿಡಿಯೋ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯನ್ನು ರಸ್ತೆಯಲ್ಲಿ ಎಳೆದಾಡಿ ಖಾಸಗಿ ಅಂಗಕ್ಕೆ ಮಾಲೀಕ ಒದ್ದಿದ್ದಾನೆ. ನೋವಿನಿಂದ ಗೋಳಾಡುತ್ತಿದ್ದರೂ ಬಿಡದೆ ಹಲ್ಲೆ ಮಾಡಿದ್ದಾನೆ. ಮಹಿಳೆ ಮೇಲೆ ಹಲ್ಲೆ ನಡೆಸುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಮಹಿಳೆ ರಕ್ಷಣೆಗೆ ನಿಲ್ಲಬೇಕಿದ್ದ ಪೊಲೀಸರು ಕ್ರಮ ಕೈಗೊಂಡಿಲ್ಲ. ಪೂರ್ವಾಪರ ವಿಚಾರಿಸದೇ ಮಹಿಳೆಯ…

Read More

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬಾಗಲಕೋಟೆ, ವಿಜಯನಗರ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More

ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ. ಗ್ರಾಮ ಪಂಚಾಯತ್ ನಲ್ಲಿ ಸಿಗುವ ಸೌಲಭ್ಯಗಳು ಯಾವುದು..? ಇಲ್ಲಿದೆ ಪಟ್ಟಿ

Read More

ನವದೆಹಲಿ : ಬ್ರಾಂಡೆಡ್ ಔಷಧಿಗಳ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮುಖ ಘೋಷಣೆ ಮಾಡಿದ್ದಾರೆ. ಅಕ್ಟೋಬರ್ 1, 2025 ರಿಂದ ಅಮೆರಿಕವು ಬ್ರಾಂಡೆಡ್ ಅಥವಾ ಪೇಟೆಂಟ್ ಪಡೆದ ಔಷಧಿಗಳ ಆಮದಿನ ಮೇಲೆ 100% ಸುಂಕವನ್ನು ವಿಧಿಸಲಿದೆ ಎಂದು ಅವರು ಹೇಳಿದ್ದಾರೆ. ಗುರುವಾರ ಅವರು ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆಯಾದ “ಟ್ರುತ್ ಸೋಷಿಯಲ್” ನಲ್ಲಿ ಈ ಘೋಷಣೆ ಮಾಡಿದ್ದಾರೆ. ಈ ಕ್ರಮವು ಅಮೆರಿಕದಲ್ಲಿ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸದ ಔಷಧ ಕಂಪನಿಗಳಿಗೆ ಅನ್ವಯಿಸುತ್ತದೆ ಎಂದು ಟ್ರಂಪ್ ಹೇಳಿದ್ದಾರೆ. “ಔಷಧೀಯ ಕಂಪನಿಯು ಈಗಾಗಲೇ ಅಮೆರಿಕದಲ್ಲಿ ಔಷಧೀಯ ಘಟಕವನ್ನು ನಿರ್ಮಿಸಲು ಪ್ರಾರಂಭಿಸಿದ್ದರೆ, ಈ 100% ಸುಂಕವು ಅದಕ್ಕೆ ಅನ್ವಯಿಸುವುದಿಲ್ಲ.” ಇದರರ್ಥ ಅಮೆರಿಕದಲ್ಲಿ ಕಾರ್ಖಾನೆ ಅಥವಾ ಉತ್ಪಾದನಾ ಕೇಂದ್ರದ ನಿರ್ಮಾಣ ಪ್ರಕ್ರಿಯೆಯನ್ನು ಈಗಾಗಲೇ ಪ್ರಾರಂಭಿಸಿರುವ ಕಂಪನಿಗಳು ಈ ಸುಂಕದಿಂದ ವಿನಾಯಿತಿ ಪಡೆಯುತ್ತವೆ ಎಂದು ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ. ಈ ನಿರ್ಧಾರದ ಉದ್ದೇಶವೇನು? ಟ್ರಂಪ್ ಅವರ ನಿರ್ಧಾರವು ಔಷಧೀಯ ಕಂಪನಿಗಳನ್ನು ಅಮೆರಿಕದಲ್ಲಿ ಉತ್ಪಾದಿಸಲು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿದೆ. ಇದು…

Read More