Author: kannadanewsnow57

ಬೆಂಗಳೂರು : ಇಂದು ಲೋಕಸಭೆ ಚುನಾವಣೆಯ ಫಲಿತಾಂಸ ಪ್ರಕಟವಾಗಲಿದ್ದು, ಇಂದು ಬೆಳಗ್ಗೆ ೮ ಗಂಟೆಯಿಂದ ಮತ ಎಣಿಕೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವು ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಬೆಂಗಳೂರಿನಲ್ಲಿ ನಿಗದಿಪಡಿಸಿದ ಮತ ಎಣಿಕೆ ಕೇಂದ್ರಗಳ ವ್ಯಾಪ್ತಿಯಲ್ಲಿ ವಾಹನಗಳ ಸಂಚಾರ, ವಾಹನಗಳ ಪಾರ್ಕಿಂಗ್‌ಗೆ ನಿರ್ಬಂಧ ವಿಧಿಸಲಾಗಿದೆ. ಇಂದು ಬೆಳಗ್ಗೆ 6 ರಿಂದ ಮತ ಎಣಿಕೆ ಮುಗಿಯುವವರೆಗೂ ಮತ ಎಣಿಕೆ ಕೇಂದ್ರದ ಸುತ್ತಮುತ್ತಲ ರಸ್ತೆಗಳಲ್ಲಿ ಎಲ್ಲ ರೀತಿಯ ವಾಹನಗಳ ಪಾರ್ಕಿಂಗ್ ನಿರ್ಬಂಧ ಮಾಡಲಾಗಿದೆ. ಬೆಂಗಳೂರಿನ ಮೂರು ಮತ ಎಣಿಕೆ ಕೇಂದ್ರಗಳಾಸ ಮೌಂಟ್ ಕಾರ್ಮಲ್ ಕಾಲೇಜ್, ಸೇಂಟ್ ಜೋಸೆಫ್ ಕಾಲೇಜ್ ಹಾಗೂ ಎಸ್‌ಎಸ್‌ಎಂಆರ್‌ವಿ ಕಾಲೇಜ್ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ವಸಂತನಗರ ಮೌಂಟ್ ಕಾರ್ಮೆಲ್ ಕಾಲೇಜ್ ಮತ ಎಣಿಕೆ ಕೇಂದ್ರ ಇರುವ ಹಿನ್ನೆಲೆಯಲ್ಲಿ ಅರಮನೆ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಪ್ಯಾಲೇಸ್ ರಸ್ತೆಯ ವಸಂತನಗರ ಕೆಳ ಸೇತುವೆ ಜಂಕ್ಷನ್‌ನಿಂದ ಮಿನುಗುತಾರೆ ಕಲ್ಪನಾ ಜಂಕ್ಷನ್‌ವರೆಗೂ ವಾಹನ ಸಂಚಾರಕ್ಕೆ ಅವಕಾಶವಿಲ್ಲ. ಮಿನುಗುತಾರೆ…

Read More

ನವದೆಹಲಿ:ಲೋಕಸಭಾ ಚುನಾವಣೆಯ ಮತ ಎಣಿಕೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕಾರಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂಬ ತಮ್ಮ ಹೇಳಿಕೆಯ ಬಗ್ಗೆ ವಿವರಗಳನ್ನು ಕೋರಿ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಮೂಲಗಳ ಪ್ರಕಾರ, ಸೋಮವಾರ ಚುನಾವಣಾ ಆಯೋಗಕ್ಕೆ ಬರೆದ ಪತ್ರದಲ್ಲಿ, ಚುನಾವಣಾ ಆಯೋಗವು ಕೇಳುತ್ತಿರುವ ಮಾಹಿತಿಯು “ಸೂಕ್ಷ್ಮ” ಮತ್ತು ಮಾಹಿತಿಯ ಮೂಲವನ್ನು ರಾಜಿ ಮಾಡಿಕೊಳ್ಳುತ್ತದೆ ಮತ್ತು ಅದನ್ನು ಸೇಡಿನ ಮತ್ತು ಕ್ಷುಲ್ಲಕ ಆಡಳಿತಕ್ಕೆ ಒಡ್ಡುತ್ತದೆ ಎಂದು ಅವರು ಹೇಳಿದ್ದಾರೆ. ಸಂವಿಧಾನವನ್ನು ರಕ್ಷಿಸಲು ಈ ಘೋಷಣೆ ಮಾಡಲಾಗಿದೆ, ಚುನಾವಣಾ ಆಯೋಗವೂ ರಕ್ಷಿಸಲು ಬದ್ಧವಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ. ಚುನಾವಣಾ ಆಯೋಗದ ದ್ವಂದ್ವ ನೀತಿಯನ್ನು ಪ್ರಶ್ನಿಸಿದ ಅವರು, ಬಿಜೆಪಿ ನಾಯಕರು ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು. ಲೋಕಸಭಾ ಚುನಾವಣೆಯ ಮತ ಎಣಿಕೆಗೂ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 150 ಜಿಲ್ಲಾಧಿಕಾರಿಗಳು…

Read More

ಬಳ್ಳಾರಿ : ಸಾಕಿದ ಅಥವಾ ಬೀದಿ ನಾಯಿಗಳು ಕಡಿದ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರದೆ, ಸೋಪು, ನೀರಿನಿಂದ ಗಾಯ ಅಥವಾ ಪರಚಿದ ಭಾಗವನ್ನು ತೊಳೆದು ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೇಬೀಸ್ ಚುಚ್ಚುಮದ್ದು ಪಡೆಯಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ಹೇಳಿದರು. ಅವರು ಸೋಮವಾರದಂದು, ಬಳ್ಳಾರಿಯ ಬಂಡಿಹಟ್ಟಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ವಟ್ಟಪ್ಪಕೇರಿ ಪ್ರದೇಶದಲ್ಲಿ ಕ್ಷೇತ್ರ ಭೇಟಿ ಮಾಡಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ ಮಾತನಾಡಿದರು. ನಾಯಿ, ಬೆಕ್ಕು, ಇತರೆ ಯಾವುದೇ ಪ್ರಾಣಿಗಳು ಕಚ್ಚಿದಾಗ ರೇಬೀಸ್ ಕಾಯಿಲೆ ಬರುವ ಸಾಧ್ಯತೆಯಿದ್ದು, ಮುಖ್ಯವಾಗಿ ನಾಯಿಗಳ ಕಡಿತದಿಂದ ಹೆಚ್ಚಿನ ಪ್ರಮಾಣದಲ್ಲಿ ರೋಗ ಹರಡುವುದರಿಂದ ನಿರ್ಲಕ್ಷ್ಯ ಮಾಡದೇ, ಚುಚ್ಚುಮದ್ದು ಪಡೆದು, ಸಂಭಾವ್ಯ ರೇಬಿಸ್ ಖಾಯಿಲೆ ತಡೆಯುವುದರ ಮೂಲಕ ವ್ಯಕ್ತಿಯ ಜೀವ ಕಾಪಾಡುವ ಕಾರ್ಯ ಪ್ರತಿಯೊಬ್ಬರೂ ಮಾಡಬೇಕಿದೆ ಎಂದರು. ಮನುಷ್ಯರಿಗೆ ರೇಬಿಸ್ ರೋಗವು ಶೇ.99ರಷ್ಟು ನಾಯಿ ಕಡಿತದಿಂದ ಬರುತ್ತದೆ, ಇನ್ನುಳಿದಂತೆ ಬೆಕ್ಕು ತೋಳ ನಾಯಿ ಕಾಡು ಪ್ರಾಣಿಗಳ…

Read More

ಬೆಂಗಳೂರು : ಮೀನುಗಾರಿಕೆ ಇಲಾಖೆಯು ಮೀನುಗಾರ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ವಹಿವಾಟು ವಿಸ್ತರಣೆಗೆ ನೆರವಾಗಲು ಬ್ಯಾಂಕ್‍ಗಳಲ್ಲಿ ಬಡ್ಡಿರಹಿತವಾಗಿ ರೂ.3 ಲಕ್ಷದವರೆಗೆ ಸಾಲ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಫಲಾನುಭವಿಗಳು ಕಡ್ಡಾಯವಾಗಿ ಮಹಿಳಾ ಮೀನುಗಾರರಾಗಿರಬೇಕು. ಮೀನುಗಾರರ ಸಹಕಾರ ಸಂಘದ ಸದಸ್ಯರಾಗಿರಬೇಕು. ಸಾಲವನ್ನು ಮೀನುಗಾರಿಕೆ ಚಟುವಟಿಕೆಗಳಾದ ಬಲೆಗಳ ದುರಸ್ತಿ ಮತ್ತು ಬದಲಾವಣೆ, ಮೀನುಗಾರಿಕೆ ದೋಣಿಗಳ ದುರಸ್ತಿ, ಮೀನಿನ ಒಂದು ಬೆಳೆಗೆ ಕಾರ್ಯಾಚರಣೆ ವೆಚ್ಚ, ಸಿಹಿನೀರಿನ ಸೀಗಡಿಯ ಒಂದು ಬೆಳೆಗೆ ಕಾರ್ಯಚರಣೆ ವೆಚ್ಚ ದೋಣಿಗಳು, ಬಲೆಗಳು, ಗಾಳಿಯಂತ್ರ, ಗುತ್ತಿಗೆ ಮೊತ್ತ ಮತ್ತು ಮೀನುಗಾರಿಕೆ ಅಭಿವೃದ್ಧಿ ಇವುಗಳ ಮೇಲಿನ ಹೂಡಿಕೆ, ಅಲಂಕಾರಿಕ ಮೀನುಗಳ ಉತ್ಪಾದನೆ ಮತ್ತು ಪಾಲನೆ, ಮೀನು ಮತ್ತು ಮೀನು ಉತ್ಪನಗಳ ಮಾರಾಟಕ್ಕೆ ಬಂಡವಾಳ ಇತ್ಯಾದಿಗಳಿಗೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮತ್ತು ಸಂಡೂರು ತಾಲ್ಲೂಶಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಬಹುದು ಅಥವಾ ಮೊ.9449593156 ಗೆ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪ ನಿರ್ದೇಶಕ ಶಿವಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು : ಲೋಕಸಭೆ ಸಾರ್ವತ್ರಿಕ ಚುನಾವಣೆ-2024 ರ ಹಿನ್ನಲೆಯಲ್ಲಿ ಇಂದು ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜೂ.04 ರ ಇಂದು ಬೆಳಿಗ್ಗೆ 06 ಗಂಟೆಯಿಂದ ಜೂ.05 ರ ಬೆಳಿಗ್ಗೆ 06 ಗಂಟೆಯವರೆಗೆ ಸಿಆರ್‍ಪಿಸಿ 1973 ರ ಸೆಕ್ಷನ್ 144 ರಡಿ ರಾಜ್ಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿರುತ್ತದೆ ಹಾಗೂ ಮತ ಎಣಿಕೆ ಕೇಂದ್ರದ ಸುತ್ತ-ಮುತ್ತ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದೂ ಚುನಾವಣಾ ಆಯೋಗ ಆದೇಶಿಸಿದೆ. ಮತ ಎಣಿಕೆ ನಂತರ ವಿಜಯ ಹೊಂದಿದ ಅಭ್ಯರ್ಥಿಗಳ ಬೆಂಬಲಿಗರು ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ಸಭೆ ಮತ್ತು ಇತರೆ ಕಾರ್ಯಕ್ರಮಗಳನ್ನು ನಡೆಸಿದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗವಾಗುವ ಸಾಧ್ಯತೆಗಳಿರುವುದರಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಹಿತದೃಷ್ಠಿಯಿಂದ ಪ್ರತಿಬಂಧಕಾಜ್ಞೆ ವಿಧಿಸಿ ಆದೇಶ ಜಾರಿಗೊಳಿಸಲಾಗಿದೆ. ಷರತ್ತುಗಳು: ಪ್ರತಿಬಂಧಕಾಜ್ಞೆ ಅನ್ವಯ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆ, ರಾಜಕೀಯ ಸಭೆ ಸಮಾರಂಭ, ವಾಹನ ಜಾಥಾ, ರ್ಯಾಲಿ ಮುಂತಾದ ಯಾವುದೇ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆಯನ್ನು ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರ ರಾಜಿನಾಮೆಯನ್ನು ಕೇಳಿಲ್ಲ. ಪ್ರಕರಣದ ಬಗ್ಗೆ ಈಗಾಗಲೇ ಎಸ್.ಐ.ಟಿ ತನಿಖೆ ನಡೆಸುತ್ತಿದೆ. ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದರು. ಬೆಂಗಳೂರಿನಲ್ಲಿ ಒಳ್ಳೆ ಮಳೆಯಾಗಿದ್ದು, ಮಳೆಗೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಈಗಾಗಲೇ ಸೂಚಿಸಲಾಗಿದೆ. ಮಳೆ ಜಾಸ್ತಿಯಾದಾಗ ಸಮಸ್ಯೆಗಳು ಉಂಟಾಗುತ್ತದೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಳ್ಳಲಾಗಿದೆ. ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರು ಚುನಾವಣೋತ್ತರ ಸಮೀಕ್ಷೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ನಾವು ಕನಿಷ್ಠ 15 ಸ್ಥಾನಗಳನ್ನು ಗೆಲ್ಲುತ್ತೇವೆ, ಇದು ವಾಸ್ತವ. ಆದರೆ ಸಮೀಕ್ಷಾ ವರದಿ ಇದಕ್ಕೆ ವ್ಯತಿರಿಕ್ತವಾಗಿದೆ. ಈ ಸಮೀಕ್ಷೆಯನ್ನು ನಾವು ಸಂಪೂರ್ಣ ತಳ್ಳಿಹಾಕುತ್ತೇವೆ ಎಂದು ಹೇಳಿದ್ದಾರೆ.

Read More

ನವದೆಹಲಿ:ಈ ಸಾರ್ವತ್ರಿಕ ಚುನಾವಣೆಯಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ನೀಡಿದ ಹೇಳಿಕೆಗಳ ವಿರುದ್ಧ ಚುನಾವಣಾ ಆಯೋಗ (ಇಸಿ) ಏಕೆ ನಿರ್ಣಾಯಕವಾಗಿ ಕಾರ್ಯನಿರ್ವಹಿಸಲಿಲ್ಲ ಎಂದು ಕೇಳಿದಾಗ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಬಿಜೆಪಿ ಮತ್ತು ಕಾಂಗ್ರೆಸ್ನ ಉನ್ನತ ಇಬ್ಬರು ನಾಯಕರನ್ನು ಮುಟ್ಟದಿರಲು ಉದ್ದೇಶಪೂರ್ವಕವಾಗಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು. ನಾವು ಉದ್ದೇಶಪೂರ್ವಕವಾಗಿ ನಿರ್ಧರಿಸಿದ್ದೇವೆ – ಇದು ತುಂಬಾ ದೊಡ್ಡ ರಾಷ್ಟ್ರ – ಎರಡೂ ಪಕ್ಷಗಳ ಅಗ್ರ ಇಬ್ಬರು ವ್ಯಕ್ತಿಗಳನ್ನು ನಾವು ಮುಟ್ಟಲಿಲ್ಲ. ಎರಡೂ ಪಕ್ಷದ ಅಧ್ಯಕ್ಷರನ್ನು ನಾವು ಸಮಾನವಾಗಿ ಮುಟ್ಟಿದ್ದೇವೆ” ಎಂದು ಕುಮಾರ್ ಸೋಮವಾರ (ಜೂನ್ 3) ಹೇಳಿದ್ದಾರೆ. ನಿತೀಶ್ ಕುಮಾರ್ ಅವರು ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಮತ್ತು ಕಾಂಗ್ರೆಸ್ ನ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಉಲ್ಲೇಖಿಸಿ ಎರಡೂ ಪಕ್ಷಗಳ ಉನ್ನತ ಇಬ್ಬರು ವ್ಯಕ್ತಿಗಳನ್ನು ಉಲ್ಲೇಖಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ತಿಳಿಸಿದೆ. ಏಪ್ರಿಲ್ನಲ್ಲಿ ರಾಜಸ್ಥಾನದಲ್ಲಿ ಮಾಡಿದ ಭಾಷಣದಲ್ಲಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ…

Read More

ನವದೆಹಲಿ: ದೇಶಾದ್ಯಂತ ಸುಧೀರ್ಗ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಲಿದ್ದು, 8,360 ಅಭ್ಯರ್ಥಿಗಳ ಹಣೆ ಬರಹ ನಿರ್ಧಾರವಾಗಲಿದೆ. ಭಾರತದ ಏಳು ಹಂತಗಳ ಚುನಾವಣೆ, ಇತಿಹಾಸದ ಅತಿದೊಡ್ಡ ಪ್ರಜಾಪ್ರಭುತ್ವ ಪ್ರಕ್ರಿಯೆಯಾಗಿದ್ದು, ರಾಷ್ಟ್ರದಾದ್ಯಂತ 44 ದಿನಗಳ ಮತದಾನದ ನಂತರ ಮುಕ್ತಾಯಗೊಂಡಿದೆ. ಏಪ್ರಿಲ್ 19 ರಿಂದ ಜೂನ್ 1 ರವರೆಗೆ, ಅಂದಾಜು 969 ಮಿಲಿಯನ್ ನೋಂದಾಯಿತ ಮತದಾರರು ಸುಮಾರು ಒಂದು ಮಿಲಿಯನ್ ಮತದಾನ ಕೇಂದ್ರಗಳಲ್ಲಿ ತಮ್ಮ ಮತಗಳನ್ನು ಚಲಾಯಿಸುವ ಅವಕಾಶವನ್ನು ಹೊಂದಿದ್ದರು. ಏರುತ್ತಿರುವ ತಾಪಮಾನವನ್ನು ಎದುರಿಸುವುದು ಮತ್ತು ದೂರದ ಮತ್ತು ಸವಾಲಿನ ಭೂಪ್ರದೇಶಗಳನ್ನು ತಲುಪುವುದು ಸೇರಿದಂತೆ ಈ ವ್ಯಾಪಕ ಪ್ರಕ್ರಿಯೆಯು ಜೂನ್ 4 ರ ಮಂಗಳವಾರ ಮತ ಎಣಿಕೆಯೊಂದಿಗೆ ಕೊನೆಗೊಳ್ಳಲಿದೆ. ಲೋಕಸಭಾ ಚುನಾವ್ ಫಲಿತಾಂಶ 2024: ಮತ ಎಣಿಕೆ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ? ಲೋಕಸಭೆ ಚುನಾವಣೆಯ ಮತ ಎಣಿಕೆಯು ಇಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ…

Read More

ನವದೆಹಲಿ:ಭಾರತದ ಚುನಾವಣಾ ಆಯೋಗ, ಕೇಂದ್ರ ಸಶಸ್ತ್ರ ಪಡೆಗಳು, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪೊಲೀಸರು, ನಾಗರಿಕ ಸೇವಕರು, ಜಿಲ್ಲಾಧಿಕಾರಿಗಳು, ಸ್ವಯಂಸೇವಕರು ಮತ್ತು ಚುನಾವಣೆಗಳನ್ನು ನಡೆಸುವಲ್ಲಿ ಭಾಗಿಯಾಗಿರುವ ಇತರರನ್ನು ಕಾಂಗ್ರೆಸ್ ಮುಖ್ಯಸ್ಥರು ಅಭಿನಂದಿಸಿದರು. ನವದೆಹಲಿ: ಲೋಕಸಭಾ ಚುನಾವಣಾ ಫಲಿತಾಂಶದ ಮುನ್ನಾದಿನದಂದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಸಂಜೆ ನಾಗರಿಕ ಸೇವಕರು ಮತ್ತು ಸರ್ಕಾರಿ ಅಧಿಕಾರಿಗಳಿಗೆ ಬಹಿರಂಗ ಪತ್ರ ಬರೆದು, “ಸಂವಿಧಾನಕ್ಕೆ ಬದ್ಧರಾಗಿರಿ, ತಮ್ಮ ಕರ್ತವ್ಯಗಳನ್ನು ನಿರ್ವಹಿಸಿ ಮತ್ತು ಯಾರ ವಿರುದ್ಧವೂ ಭಯ, ಒಲವು ಮತ್ತು ದುರುದ್ದೇಶವಿಲ್ಲದೆ ರಾಷ್ಟ್ರದ ಸೇವೆ ಮಾಡಿ” ಎಂದು ಕೇಳಿಕೊಂಡಿದ್ದಾರೆ. “ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಈಗ ಇಡೀ ಅಧಿಕಾರಶಾಹಿಯನ್ನು ಒತ್ತಾಯಿಸುತ್ತದೆ, ಸಂವಿಧಾನಕ್ಕೆ ಬದ್ಧರಾಗಿರಲು, ತಮ್ಮ ಕರ್ತವ್ಯಗಳನ್ನು ನಿರ್ವಹಿಸಲು ಮತ್ತು ಯಾರ ವಿರುದ್ಧವೂ ಭಯ, ಒಲವು ಮತ್ತು ದುರುದ್ದೇಶವಿಲ್ಲದೆ ರಾಷ್ಟ್ರದ ಸೇವೆ ಮಾಡಲು. ಯಾರಿಂದಲೂ ಹೆದರಬೇಡಿ. ಯಾವುದೇ ಅಸಂವಿಧಾನಿಕ ವಿಧಾನಗಳಿಗೆ ತಲೆಬಾಗಬೇಡಿ. ಈ ಎಣಿಕೆಯ ದಿನದಂದು ಯಾರಿಗೂ ಹೆದರಬೇಡಿ ಮತ್ತು ಅರ್ಹತೆಯ ಆಧಾರದ ಮೇಲೆ ನಿಮ್ಮ ಕರ್ತವ್ಯಗಳನ್ನು ನಿರ್ವಹಿಸಿ.…

Read More

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಪುರುಷತ್ವ ಪರೀಕ್ಷೆ ಒಳಪಡಿಸಲು ಎಸ್‌ ಐಟಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆ ಆವರಣದ ಆಟಲ್‌ ಬಿಹಾರಿ ವಾಜಪೇಯಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ವೈದ್ಯಕೀಯ ತಪಾಸಣೆ ನಡೆದಿದೆ. ಈ ವೇಳೆ ಪುರುಷತ್ವ ಪರೀಕ್ಷೆಗೆ ಅವರಿಂದ ವೀರ್ಯ, ಮರ್ಮಾಂಗದ ಕೂದಲು ಹಾಗೂ ರಕ್ತ ಸಂಗ್ರಹಿಸಲಾಗಿದೆ ಎಂಬ ಮಾಹಿತಿ ಬಂದಿದೆ. ಎಸ್‌ ಐಟಿ ಅಧಿಕಾರಿಗಳು ಕೋರ್ಟ್‌ ಅನುಮತಿ ಪಡೆದು ಪ್ರಜ್ವಲ್‌ ರೇವಣ್ಣ ಅವರನ್ನು ಪರುಷತ್ವ ಪರೀಕ್ಷೆಗೆ ಒಳಪಡಿಸಲು ಮುಂದಾಗಿದ್ದು, ಇದಕ್ಕಾಗಿ ತಜ್ಞರ ತಂಡ ರಚನೆಯಾಗಲಿದ್ದು, ಈ ತಜ್ಞರ ತಂಡ ತನ್ನ ವರದಿಯನ್ನು ಎಸ್‌ ಐಟಿಗೆ ಸಲ್ಲಿಸಲಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಲೈಂಗಿಕ ಕ್ರಿಯೆ ನಡೆಸಲು ದೈಹಿಕವಾಗಿ ಆರೋಪಿ ಸಾಮರ್ಥ್ಯ ಹೊಂದಿದ್ದಾನೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಪುರುಷತ್ವ ಪರೀಕ್ಷೆ ಅಗತ್ಯವಾಗಿದೆ. ಈ ಕಾರಣಕ್ಕೆ ಎಸ್‌ ಐಟಿ ಅಧಿಕಾರಿಗಳು ಪುರಷತ್ವ ಪರೀಕ್ಷೆಗೆ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

Read More