Author: kannadanewsnow57

ಬೆಂಗಳೂರು : ಅಕ್ರಮ ಪಡಿತರ ಚೀಟಿಗಳನ್ನು ಗುರುತಿಸಿ ರದ್ದು ಮಾಡುವ ನಿಟ್ಟಿನಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ದಿಟ್ಟ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು. ವಿಕಾಸಸೌಧದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 13,87,639 ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ ಆರು ತಿಂಗಳಿನಿಂದ ಪಡಿತರ ಪಡೆಯದ 2,75,667, ಆದಾಯ ತೆರಿಗೆ ಪಾವತಿ ಮಾಡುವ 98,485, ಆದಾಯ ಮಿತಿ ಹೆಚ್ಚಿರುವ 10,09,478 ಪಡಿತರ ಚೀಟಿಗಳು ಸೇರಿವೆ ಎಂದರು. 2023-24ನೆ ಸಾಲಿನಲ್ಲಿ ಹೊಸ ಪಡಿತರ ಚೀಟಿ ಕೋರಿ 2,95,986 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ 2,30,549 ಅರ್ಹ ಅರ್ಜಿಗಳಿದ್ದವು. 1,48,533 ಹೊಸ ಪಡಿತರ ಚೀಟಿಗಳನ್ನು ವಿತರಣೆ ಮಾಡಿದ್ದೇವೆ. 65,437 ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. 82,016 ವಿತರಣೆಗೆ ಬಾಕಿಯಿವೆ. ಇವುಗಳನ್ನು…

Read More

ಬೆಂಗಳೂರು : ಪೊಲೀಸರು ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ ಪೊಲೀಸ್ ಸಿಬ್ಬಂದಿಗೆ ನಮನ ಸಲ್ಲಿಸಿ ಮಾತನಾಡಿದರು. ಜನರ ಪ್ರಾಣ, ಆಸ್ತಿ ರಕ್ಷಿಸುವ ಪೊಲೀಸ್ ಸಿಬ್ಬಂದಿಯ ಹಿತ ರಕ್ಷಿಸಲು ಸರ್ಕಾರ ಬದ್ದವಾಗಿದೆ. ಇದಕ್ಕಾಗಿ 2025 ರಲ್ಲಿ 10 ಸಾವಿರ ಪೊಲೀಸ್ ವಸತಿ ಮನೆಗಳ ನಿರ್ಮಾಣಕ್ಕೆ 2000 ಕೋಟಿ ನೀಡಿದ್ದೇವೆ. 200 ಕೋಟಿ ವೆಚ್ಚದಲ್ಲಿ 100 ಹೊಸ ಠಾಣೆಗಳ ನಿರ್ಮಾಣ ಆಗುತ್ತಿವೆ. ಪೊಲೀಸ್ ಮಕ್ಕಳಿಗಾಗಿ 7 ಪ್ರಮುಖ ಸ್ಥಳಗಳಲ್ಲಿ 7 ಪಬ್ಲಿಕ್ ಶಾಲೆಗಳನ್ನು ತೆರೆಯಲಾಗುತ್ತದೆ ಎಂದು ಘೋಷಿಸಿದರು. ಕಳೆದ ಒಂದು ವರ್ಷದಲ್ಲಿ ದೇಶದಲ್ಲಿ 216 ಮಂದಿ, ರಾಜ್ಯದಲ್ಲಿ 12 ಮಂದಿ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳು ಕರ್ತವ್ಯದ ಮೇಲಿದ್ದಾಗಲೇ ಹುತಾತ್ಮರಾಗಿದ್ದಾರೆ. ಇವರ ಆತ್ಮಕ್ಕೆ ನಾನು ಶಾಂತಿ ಕೋರುತ್ತಲೇ ಕುಟುಂಬದವರ ದುಃಖದಲ್ಲಿ ಭಾಗಿ ಆಗುತ್ತೇನೆ. ದೇಶದಲ್ಲಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಾಗ, ಜನರ ಪ್ರಾಣ, ಮಾನ…

Read More

ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ ಇಂದಿನಿಂದ ಅಂದರೆ ಅಕ್ಟೋಬರ್.23ರವರೆಗೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಬೆಂಗಳೂರು: “66/11ಕೆ.ವಿ ಟೆಲಿಕಾಂ” ಸ್ಟೇಷನ್ ನಲ್ಲಿ 11ಕೆ,ವಿ ಬ್ಯಾಂಕ್-2 ನ ಬ್ರೇಕರಗಳನ್ನು ಬದಲಿಸುವ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಇಂದಿನಿಂದ 23.10.2024 ರವರೆಗೆ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದಿದೆ. ಈ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: “ಓಬಳೇಶ್ ಕಾಲೋನಿ, ರ‍್ಸಸ್ ಗರ‍್ಡನ್, ರಾಯಪುರ, ಬಿನ್ನಿ ಪೇಟ್, ಪಾದರಾಯನಪುರ, ಜೆಜೆಆರ್ ನಗರ, ಗೋಪಾಲನ್ ಮಾಲ್, ಮೈಸೂರು ರಸ್ತೆ 1ನೇ, 2ನೇ, 3ನೇ ಕ್ರಾಸ್, ಮೋಮಿಂಪುರ, ಜಂಥಾ ಕಾಲೋನಿ, ಶಾಮನಾ ಗರ‍್ಡನ್, ರ‍್ಫತ್ ನಗರ, ರಂಗನಾಥ್ ಕಾಲೋನಿ, ಹೊಸಹಳ್ಳಿ ಮುಖ್ಯರಸ್ತೆ, ಪರ‍್ಕ್ ನಾವು ಬಿನ್ನಿ ಪೇಟೆ, ಅಂಜನಪ್ಪ ಗರ‍್ಡನ್, ದೊರೆಸ್ವಾಮಿ ನಗರ ಪವರ್ ಕಟ್ ಆಗಲಿದೆ. ಹೂವಿನ ಉದ್ಯಾನ, ಹೊಸ…

Read More

ನವದೆಹಲಿ : ಉತ್ತರ ಪ್ರದೇಶದ ಸಿಕಂದರಾಬಾದ್‌ನ ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮಹಿಳೆಯರು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬುಲಂದ್‌ಶಹರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಚಂದ್ರ ಪ್ರಕಾಶ್ ಸಿಂಗ್, ಆಶಾಪುರಿ ಕಾಲೋನಿಯ ಮನೆಯೊಂದರಲ್ಲಿ ರಾತ್ರಿ 8:30-9 ರ ನಡುವೆ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮಹಿಳೆಯರು ಸೇರಿದಂತೆ ಒಟ್ಟು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮನೆಯಲ್ಲಿ 18-19 ಜನರಿದ್ದರು, ಎಂಟು ಜನರನ್ನು ರಕ್ಷಿಸಲಾಗಿದ್ದು, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ತಂಡ, ಮುನ್ಸಿಪಲ್ ಕಾರ್ಪೊರೇಷನ್ ತಂಡ, ವೈದ್ಯಕೀಯ ತಂಡ, ಎನ್‌ಡಿಆರ್‌ಎಫ್ ತಂಡ ಸ್ಥಳದಲ್ಲಿದೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು “ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯವನ್ನು ಕೈಗೊಳ್ಳುವಂತೆ ನಮಗೆ ಸೂಚಿಸಿದ್ದಾರೆ. ಸ್ಫೋಟಕ್ಕೆ ಕಾರಣಗಳನ್ನು ತನಿಖೆ ಮಾಡಲಾಗುತ್ತದೆ” ಎಂದು ಜಿಲ್ಲಾಧಿಕಾರಿ ಹೇಳಿದರು.

Read More

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಹಿಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಮಳೆಗೆ ಸಾವಿರಾರು ಎಕರೆ ಬೆಳೆ ನಷ್ಟವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕಳೆದ 2-3 ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಗೆ ಸುಮಾರು 36 ಸಾವಿರ ಹೆಕ್ಟೇ‌ರ್ ಪ್ರದೇಶವ್ಯಾಪ್ತಿಯ ಬೆಳೆ ಹಾನಿಗೊಳಗಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 25 ಸಾವಿರ ಹೆಕ್ಟೇರ್ ಅಡಕೆ ಬೆಳೆಗೆ ಕೊಳೆ ರೋಗ ತಗುಲಿದೆ. 3,000 ಹೆಕ್ಟೇರ್ ಪ್ರದೇಶದಲ್ಲಿನ ಈರುಳ್ಳಿ ಬೆಳೆ ಹಾನಿಯಾಗಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನಲ್ಲಿ 850 ಎಕರೆಗೂ ಹೆಚ್ಚು ಪ್ರದೇಶವ್ಯಾಪ್ತಿಯ ಮೆಕ್ಕೆಜೋಳ ಬೆಳೆ ಹಾನಿಯಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 350 ರ್‌ಭತ್ತದ ಬೆಳೆ ಹಾನಿಯಾಗಿದ್ದರೆ, 900 ಹೆಗ್ಡೆ ಹೆಕ್ಟೇರ್‌ಗೂ ನ್‌ಗೂ ಅಧಿಕ ವ್ಯಾಪ್ತಿಯ ಮೆಕ್ಕೆಜೋಳ, ಈರುಳ್ಳಿ, ಮೆಣಸಿನಕಾಯಿ ಬೆಳೆಗಳು ಹಾನಿಗೊಳಗಾಗಿವೆ ಹಾವೇರಿ ಜಿಲ್ಲೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಎಕರೆಯಲ್ಲಿ ಬೆಳೆದಿದ್ದ ಈರುಳ್ಳಿ, ಕಡ್ಲೆ ಬೆಳೆ ಹಾನಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಲ್ಲಿ ಹಲವಡೆ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದ ಪರಿಣಾಮ ಹೊಲ,…

Read More

ಬೆಂಗಳೂರು: ರಾಜ್ಯದಲ್ಲಿ ಇ-ಖಾತಾ ಗೊಂದಲ ಬೆನ್ನಲ್ಲೇ ಸಾರ್ವಜನಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಏಕಾಏಕಿ ಸೋಮವಾರ ಬೆಳಗ್ಗೆಯಿಂದಲೇ ರಾಜ್ಯಾದ್ಯಂತ ಉಪನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ಸೇರಿದಂತೆ ಎಲ್ಲ ರೀತಿಯ ದಸ್ತಾವೇಜುಗಳ ನೋಂದಣಿ ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಕೇಂದ್ರದ ನೋಂದಣಿ ಕಾಯಿದೆ-1908ಗೆ ತಿದ್ದುಪಡಿ ತರುವ ಕರ್ನಾಟಕ ನೋಂದಣಿ ತಿದ್ದುಪಡಿ ಕಾಯಿದೆ -2023ಕ್ಕೆ ರಾಷ್ಟ್ರಪತಿಗಳು ಅ.8 ರಂದು ಅಂಕಿತ ಹಾಕಿದ್ದು, ರಾಜ್ಯ ಸರ್ಕಾರ ಅ.19 ರಂದು ಅಧಿಕೃತ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ. ಹೊಸ ನೋಂದಣಿ ತಿದ್ದುಪಡಿ ಕಾಯ್ದೆಯಲ್ಲಿ ನಕಲಿ ದಾಖಲೆ ಆಧರಿಸಿದ ನೋಂದಣಿಗೆ ಕಡಿವಾಣ ಹಾಕಲಾಗಿದೆ. ನಕಲಿ ದಸ್ತಾವೇಜು ಆಧರಿಸಿದ ನೋಂದಣಿ ಮಾಡಿದರೆ ಸಬ್ ರಿಜಿಸ್ಟ್ರಾರ್ ಗಳಿಗೆ ಮೂರು ವರ್ಷ ಶಿಕ್ಷೆ ವಿಧಿಸಲಾಗುವುದು. ಇದಕ್ಕೆ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದು ಸರ್ಕಾರದಿಂದ ಸ್ಪಷ್ಟನೆ ನಿರೀಕ್ಷಿಸಿ ನೋಂದಣಿಯನ್ನು ಸ್ಥಗಿತಗೊಳಿಸಿದ್ದಾರೆ. ` ಈ ಕುರಿತು ಪ್ರಕಟಣೆ ಹೊರಡಿಸಲಾಗಿದ್ದು, ರಿಜಿಸ್ಟ್ರೇಷನ್ ಕಾಯಿದೆ 1908ರಲ್ಲಿ 22B ಹೊಸ ಸೆಕ್ಷನ್ ಪರಿಚಯಿಸುವುದರಿಂದ ಕೇಂದ್ರ ಕಛೇರಿಯಿಂದ ಸರಿಯಾದ ನಿರ್ದೇಶನಗಳು ಬರುವವರೆಗೂ ದಸ್ತಾವೇಜುಗಳ ಪರಿಶೀಲನೆಯನ್ನು / ನೋಂದಣಿಯನ್ನು ಅನಿರ್ದಿಷ್ಟಾವಧಿವರೆಗೂ ಮುಂದೂಡುತ್ತಿದ್ದೇವೆ…

Read More

ನವದೆಹಲಿ: ಭಾರತ-ಕೆನಡಾ ರಾಜತಾಂತ್ರಿಕ ವಿವಾದದ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಭಾರತವು “ಲಘುವಾಗಿ ತೆಗೆದುಕೊಳ್ಳುವ ಸಂಬಂಧಗಳನ್ನು” ಹೊಂದಿಲ್ಲ ಮತ್ತು ಅದರ ಎಲ್ಲಾ ದ್ವಿಪಕ್ಷೀಯ ಸಂಬಂಧಗಳು ನಂಬಿಕೆ ಮತ್ತು ವಿಶ್ವಾಸಾರ್ಹತೆಯ ಮೇಲೆ ನಿರ್ಮಿಸಲ್ಪಟ್ಟಿವೆ ಎಂದು ಹೇಳಿದರು. ಭಾರತವು ಮುಂದೆ ಸಾಗಿದಾಗ ಯಾವುದೇ ಅಸೂಯೆ ಇರುವುದಿಲ್ಲ ಆದರೆ ಅದರ ಪ್ರಗತಿಯು ಜಗತ್ತಿಗೆ ಪ್ರಯೋಜನಕಾರಿಯಾಗುವುದರಿಂದ ಜಗತ್ತು ಅದರ ಬಗ್ಗೆ ಸಂತೋಷಪಡುತ್ತದೆ “ಎಂದು ಅವರು ‘ದಿ ಇಂಡಿಯಾ ಸೆಂಚುರಿ’ ಎಂಬ ಎನ್ಡಿಟಿವಿ ವಿಶ್ವ ಶೃಂಗಸಭೆಯ ಉದ್ಘಾಟನಾ ಅಧಿವೇಶನದಲ್ಲಿ ಹೇಳಿದರು. ದೇಶವು ಈಗ “ಮುಂದಾಲೋಚನೆಯ ವಿಧಾನ” ದೊಂದಿಗೆ ಮುಂದುವರಿಯುತ್ತಿದೆ ಮತ್ತು ಸರ್ಕಾರಗಳು ತಮ್ಮ ಕೆಲಸವನ್ನು ತಮ್ಮ ಹಿಂದಿನವರೊಂದಿಗೆ ಹೋಲಿಸುವ “ಸಂಪ್ರದಾಯ” ಇನ್ನು ಮುಂದೆ ಆಕರ್ಷಕವಾಗಿಲ್ಲ ಎಂದು ಪ್ರಧಾನಿ ಹೇಳಿದರು. “ಇಂದಿನಿಂದ ಯಶಸ್ಸಿನ ಮೆಟ್ರಿಕ್ ‘ನಾವು ಏನನ್ನು ಸಾಧಿಸಲು ಬಯಸುತ್ತೇವೆ’ ಆಗಿರುತ್ತದೆ. ಭಾರತವು ಈಗ ಮುಂದಾಲೋಚನೆಯ ವಿಧಾನವನ್ನು ಹೊಂದಿದೆ. 2047 ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತದ ದೃಷ್ಟಿಕೋನವು ಈ ಮನಸ್ಥಿತಿಯ ಒಂದು ಭಾಗವಾಗಿದೆ” ಎಂದು ಅವರು ಹೇಳಿದರು.…

Read More

ಬೆಂಗಳೂರು :ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ 10ನೇ ಮುಖ್ಯರಸ್ತೆ, ರಾಮಮಂದಿರ ರಸ್ತೆಯಲ್ಲಿರುವ ಶ್ರೀರಾಮಮಂದಿರ ದೇವಸ್ಥಾನದ ಬಳಿ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಇರುವುದರಿಂದ ಇಂದಿನಿಂದ3 ದಿನ ಹಲವು ಸಂಚಾರ ಮಾರ್ಗಗಳಲ್ಲಿ ಬಂದ್ ಮಾಡಲಾಗಿದೆ. ದಿನಾಂಕ: 21.10.2024 ರಿಂದ 23-10-2024 ರವರೆಗೆ ರಾಜಾಜಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ 10ನೇ ಮುಖ್ಯರಸ್ತೆ, ರಾಮಮಂದಿರ ರಸ್ತೆಯಲ್ಲಿರುವ ಶ್ರೀರಾಮಮಂದಿರ ದೇವಸ್ಥಾನದ ಬಳಿ ಶ್ರೀರಾಮಾಂಜನೇಯ ಪ್ರತಿಮೆಯ ಚರ ಪ್ರತಿಷ್ಠಾಪನಾ ಮಹೋತ್ಸವ ಇರುವುದರಿಂದ ಸುಮಾರು 20.000 ಭಕ್ತಾದಿಗಳು ಸೇರುವುದರಿಂದ ರಾಜಾಜಿನಗರದ ಹಳೇ ಪೊಲೀಸ್ ಠಾಣಾ ಸರ್ಕಲ್ ಕಡೆಯಿಂದ ರಾಮಮಂದಿರದ ಕಡೆಗೆ (10ನೇ ಮುಖ್ಯ ರಸ್ತೆ, 3ನೇ ಬ್ಲಾಕ್ ರಾಜಾಜಿನಗರ) ಹೋಗುವ ಹಾಗೂ ರಾಜಾಜಿನಗರ ಎಂಟ್ರೆನ್ಸ್ ಕಡೆಯಿಂದ ರಾಮಮಂದಿರದ ಕಡೆಗೆ ಬರುವ ಎಲ್ಲಾ ವಾಹನಗಳ ಸಂಚಾರವನ್ನು ನಿರ್ಭಂದಿಸಲಾಗಿದ್ದು, ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ. > ಇ.ಎಸ್.ಐ ಸಿಗ್ನಲ್ ಕಡೆಯಿಂದ ಬರುವ ಬಸ್‌ಗಳು/ವಾಹನಗಳು ಹಳೇ ಪೊಲೀಸ್ ಠಾಣಾ ಸರ್ಕಲ್ ಬಳಿ ಬಲ ತಿರುವು ಪಡೆದುಕೊಳ್ಳದೇ ಮುಂದೆ ಚಲಿಸಿ…

Read More

ಕೆನಡಾ: ಕೆನಡಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಉಳಿದ ರಾಜತಾಂತ್ರಿಕರಿಗೆ ಕೆನಡಾ ಸರ್ಕಾರ ನೋಟಿಸ್ ಕಳುಹಿಸಿದ್ದು, ಕೆನಡಿಯನ್ನರಿಗೆ ಯಾವುದೇ ಹಾನಿ ಮಾಡದಂತೆ ಎಚ್ಚರಿಕೆ ನೀಡಿದೆ ಎಂದು ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲೀ ತಿಳಿಸಿದ್ದಾರೆ ಯಾವುದೇ ಪುರಾವೆಗಳಿಲ್ಲದೆ ಭಾರತವನ್ನು ದೂಷಿಸಿದ್ದಾಗಿ ಪ್ರಧಾನಿ ಟ್ರುಡೊ ಒಪ್ಪಿಕೊಂಡ ನಂತರ ಜೋಲೀ ಇದನ್ನು ಹೇಳಿದ್ದಾರೆ ಎಂಬುದನ್ನು ಗಮನಿಸುವುದು ವಿಶೇಷವಾಗಿದೆ. ಖಲಿಸ್ತಾನಿ ಭಯೋತ್ಪಾದಕ ನಿಜ್ಜರ್ ಹತ್ಯೆ ತನಿಖೆಯಲ್ಲಿ ರಾಯಭಾರಿ ಮತ್ತು ಇತರ ಅಧಿಕಾರಿಗಳನ್ನು ಕೆನಡಾ ದೂಷಿಸಿದ ನಂತರ ಭಾರತವು ಆರೋಪಗಳನ್ನು ನಿರಾಕರಿಸಿದೆ ಮತ್ತು ಕೆನಡಾದಿಂದ ಹೈಕಮಿಷನರ್ ಅವರನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಿದೆ. ಏಳು ಕೆನಡಾದ ರಾಜತಾಂತ್ರಿಕರನ್ನು ಭಾರತದಿಂದ ಹೊರಹಾಕಲು ಅದು ನಿರ್ಧರಿಸಿದೆ. ನಂತರ ಕೆನಡಾ ಮೇಲಿನ ಕ್ರಮವನ್ನು ತೆಗೆದುಕೊಂಡಿತು. ಕೆನಡಾದ ರಾಷ್ಟ್ರೀಯ ಪೊಲೀಸ್ ಪಡೆ ಭಾರತೀಯ ರಾಜತಾಂತ್ರಿಕರನ್ನು ಕೆನಡಾದಲ್ಲಿ ಹತ್ಯೆ, ಕೊಲೆ ಬೆದರಿಕೆ ಮತ್ತು ಬೆದರಿಕೆಗಳೊಂದಿಗೆ ಸಂಪರ್ಕಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಜೋಲೀ ಹೇಳಿದ್ದಾರೆ. ನಮ್ಮ ಇತಿಹಾಸದಲ್ಲಿ ನಾವು ಇದನ್ನು ನೋಡಿಲ್ಲ. ಕೆನಡಾದ ನೆಲದಲ್ಲಿ ಅಂತರರಾಷ್ಟ್ರೀಯ ದಬ್ಬಾಳಿಕೆ…

Read More

ಹ್ಯೂಸ್ಟನ್: ಅಮೆರಿಕದ ಟೆಕ್ಸಾಸ್ನ ಹೂಸ್ಟನ್ನಲ್ಲಿ ಭಾನುವಾರ ರಾತ್ರಿ ಹೆಲಿಕಾಪ್ಟರ್ ಸೆಲ್ಯುಲಾರ್ ಟವರ್ಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಹ್ಯೂಸ್ಟನ್ ಅಗ್ನಿಶಾಮಕ ಇಲಾಖೆಯ ಪ್ರಕಾರ, ಸಂಜೆ 7:54 ರ ಸುಮಾರಿಗೆ (ಟೆಕ್ಸಾಸ್ ಸ್ಥಳೀಯ ಸಮಯ) ಎಂಗೆಲ್ಕೆ ಮತ್ತು ಎನ್ನಿಸ್ನ ಜನನಿಬಿಡ ಬೀದಿಯ ಬಳಿ ಈ ಘಟನೆ ಸಂಭವಿಸಿದೆ ಮಾಹಿತಿಯ ಪ್ರಕಾರ, ಖಾಸಗಿ ಹೆಲಿಕಾಪ್ಟರ್ ಆರ್ 44 ನಗರದ ಎರಡನೇ ವಾರ್ಡ್ನಲ್ಲಿ ಎಂಗೆಲ್ಕೆ ಸ್ಟ್ರೀಟ್ ಮತ್ತು ನಾರ್ತ್ ಎನ್ನಿಸ್ ಸ್ಟ್ರೀಟ್ ಜಂಕ್ಷನ್ ಬಳಿ ರೇಡಿಯೋ ಟವರ್ಗೆ ಡಿಕ್ಕಿ ಹೊಡೆದಿದೆ. ಎಲಿಂಗ್ಟನ್ ಫೀಲ್ಡ್ ನಿಂದ ಹಾರಿದ ವಿಮಾನವು ಸಂವಹನ ಗೋಪುರಕ್ಕೆ ಡಿಕ್ಕಿ ಹೊಡೆದು, ಅದು ಕುಸಿದು ಬೆಂಕಿಗೆ ಆಹುತಿಯಾಯಿತು, ಇದರ ಪರಿಣಾಮವಾಗಿ ಹೆಲಿಕಾಪ್ಟರ್ ಮತ್ತು ಗೋಪುರ ಎರಡೂ ಸಂಪೂರ್ಣವಾಗಿ ನಾಶವಾದವು. “ಅಪಘಾತದ ತನಿಖೆಗೆ ಸಹಾಯ ಮಾಡಲು ಹೂಸ್ಟನ್ ಅಗ್ನಿಶಾಮಕ ಇಲಾಖೆ ಡ್ರೋನ್ಗಳನ್ನು ಬಳಸುತ್ತಿದೆ” ಎಂದು ಎಚ್ಎಫ್ಡಿ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದೆ. ಪತ್ರಿಕಾಗೋಷ್ಠಿಯಲ್ಲಿ, ಅಗ್ನಿಶಾಮಕ ಅಧಿಕಾರಿಗಳು ಬೆಂಕಿಯನ್ನು ನಿಲ್ಲಿಸುವ ಮೊದಲು ಮೂರು…

Read More