Subscribe to Updates
Get the latest creative news from FooBar about art, design and business.
Author: kannadanewsnow57
ಚಿಕ್ಕಬಳ್ಳಾಪುರ: ಕೋವಿಡ್ -19 ನಿರ್ವಹಣೆಯಲ್ಲಿ ದುರುಪಯೋಗ ಖಂಡಿತವಾಗಿಯೂ ಮಾಜಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರನ್ನು ಕಾಡುತ್ತದೆ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮಂಗಳವಾರ ಹೇಳಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಮ್ಮ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಸಿಎಂ, ಡಿಸಿಎಂ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಾರೆ. ಹಗರಣವು ಅವರನ್ನು ಖಂಡಿತವಾಗಿಯೂ ಕಾಡುತ್ತದೆ” ಎಂದರು
ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯಾಧ್ಯಂತ ನಗರ, ಪಟ್ಟಣ ಪ್ರದೇಶಗಳಲ್ಲಿ 10 ಸಾವಿರ ಕ್ರೆಶ್ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ 10 ಸಾವಿರ ಕ್ರೆಶ್ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಪ್ರಾಯೋಗಿಕವಾಗಿ ರಾಜ್ಯದಲ್ಲಿ ಜಾರಿ ಮಾಡಲಾಗುತ್ತಿದೆ. ಅಂಗನವಾಡಿ ಕೇಂದ್ರಗಳ ಪಕ್ಕದಲ್ಲೇ ಪ್ರತ್ಯೇಕವಾಗಿ ಮಕ್ಕಳ ಪಾಲನಾ ಕೇಂದ್ರ ತೆರೆಯಲಾಗುತ್ತದೆ ಎಂದಿದ್ದಾರೆ. 6 ತಿಂಗಳಿನಿಂದ 3 ವರ್ಷದ ಮಕ್ಕಳನ್ನು ಇಲ್ಲಿ ಪಾಲನೆ ಮಾಡಲಾಗುತ್ತದೆ. ಮನೆಗೆಲಸ, ಕಾರ್ಖಾನೆ, ಇತರ ಕೆಲಸಗಳಿಗೆ ಹೋಗುವ ಮಹಿಳೆಯರು ತಮ್ಮ ಮಕ್ಕಳನ್ನು ಈ ಕೇಂದ್ರಗಳಲ್ಲಿ ಬಿಟ್ಟು ಹೋಗಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. https://twitter.com/KarnatakaVarthe/status/1831314134266249517
ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, “ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,” ಎಂದು ತಿಳಿಸಿದೆ. “ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಬೆಸ್ಕಾಂ ವತಿಯಿಂದ ಸಹಕಾರ ನೀಡಲಾಗುವುದು. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್ ಅವಘಡಗಳಾಗದಂತೆ ಎಚ್ಚರವಹಿಸಿ,” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಮನವಿ ಮಾಡಿದ್ದಾರೆ. ಸುರಕ್ಷತಾ ಕ್ರಮಗಳು: * ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್, ಸೀರಿಯಲ್ ಲೈಟ್ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ. * ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು…
ದಾವಣಗೆರೆ: ಶಿಶುಕ್ಷ ತರಬೇತಿ ಸಂಸ್ಥೆ, ಚೆನ್ನೈ (ದಕ್ಷಿಣ ವಲಯ) ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ವಿವೇಕಾನಂದ ಬಡಾವಣೆಯಲ್ಲಿರುವ ಬಾಪೂಜಿ ಪಾಲಿಟೆಕ್ನಿಕ್ನಲ್ಲಿ ಸೆ.12 ರ ಬೆಳಗ್ಗೆ 9.30ಕ್ಕೆ ನೇರ ಸಂದರ್ಶನದಲ್ಲಿ ಅಪ್ರೆಂಟಿಶಿಪ್ ಮೇಳ ಹಾಗೂ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಸರ್ಕಾರಿ ಕಂಪನಿಗಳು ಮತ್ತು ಬಹು ರಾಷ್ಟ್ರೀಯ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದ್ದರಿಂದ 2020 2021,2022,2023 ಮತ್ತು 2024 ಸಾಲಿನಲ್ಲಿ ತೇರ್ಗಡೆ ಹೊಂದಿದ ಯಾವುದೇ ವಿಭಾಗದ (ಟೆಕ್ನಿಕಲ್ ಅಂಡ್ ನಾನ್ ಟೆಕ್ನಿಕಲ್) ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಅಭ್ಯರ್ಥಿಗಳು ಹಾಗೂ ಬಿಎ, ಬಿ.ಎಸ್ಸಿ ಬಿಕಾಂ,ಬಿಬಿಎ ಮತ್ತು ಬಿ ಸಿ ಎ ಪದವಿ ಪಡೆದ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ಬಯೋಡೇಟಾ ಮೂರು ಸೆಟ್ಗಳು ತರಬೇಕು. ಹೆಚ್ಚಿನ ಮಾಹಿತಿಗಾಗಿ ವೆಬೈಟ್: www.boat-srp.com-Home page -News & Events section.. ವೀಕ್ಷಿಸಬಹುದು. ಹಾಗೂ ದೂ.ಸಂ: 9945251906 , 9916013954 ಸಂಪರ್ಕಿಸಬಹುದು. NATS Portal (https://nats.education.gov.in &…
ನವದೆಹಲಿ:ಆಮದುಗಳಿಂದ ಬರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಆದಾಯವು ಈ ವರ್ಷದ ಆಗಸ್ಟ್ನಲ್ಲಿ ಸಾರ್ವಕಾಲಿಕ ಗರಿಷ್ಠ 50,000 ಕೋಟಿ ರೂ.ಗೆ ತಲುಪಿದೆ, ಇದು ಆರ್ಥಿಕತೆಯಲ್ಲಿ ಹೂಡಿಕೆ ಆಧಾರಿತ ಬೇಡಿಕೆಯನ್ನು ಸೂಚಿಸುತ್ತದೆ ವಾಸ್ತವವಾಗಿ, ದೇಶೀಯ ವಹಿವಾಟುಗಳಿಂದ ತೆರಿಗೆ ಸಂಗ್ರಹದ ಪಾಲಾಗಿ ಆಮದುಗಳಿಂದ ಬರುವ ಜಿಎಸ್ಟಿ ಆದಾಯವು ಆಗಸ್ಟ್ನಲ್ಲಿ 40% ಕ್ಕೆ ತಲುಪಿದೆ, ಇದು ಏಪ್ರಿಲ್ನಲ್ಲಿ 22.7% ಮತ್ತು ಜುಲೈನಲ್ಲಿ 35.8% ರಿಂದ ತೀವ್ರವಾಗಿ ಏರಿದೆ. ಇದು ಆರ್ಥಿಕತೆಗೆ ಉತ್ತಮವಾಗಿದೆ, ಏಕೆಂದರೆ ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಏರಿಕೆ ಕಂಡ ನಂತರ ಜುಲೈ-ಆಗಸ್ಟ್ನಲ್ಲಿ ಹೂಡಿಕೆ ಚಟುವಟಿಕೆಗಳು ಬಲವಾಗಿ ಉಳಿದಿವೆ ಎಂದು ಇದು ಸೂಚಿಸುತ್ತದೆ. ಗ್ರಾಹಕ ಸರಕುಗಳ ಆಮದು ಆಂತರಿಕ ಸಾಗಣೆಯ ಪ್ರಮುಖ ಭಾಗವಾಗಿದ್ದರೂ, ಕೈಗಾರಿಕಾ ಕಚ್ಚಾ ವಸ್ತುಗಳು ಮತ್ತು ಮಧ್ಯಂತರ ಸರಕುಗಳ ಆಮದಿನ ಹೆಚ್ಚಳವು ಆಮದುಗಳಿಂದ ಜಿಎಸ್ಆರ್ ಸಂಗ್ರಹದ ಹೆಚ್ಚಳಕ್ಕೆ ಕಾರಣವಾಗಿದೆ. ಏಪ್ರಿಲ್-ಜೂನ್ನಲ್ಲಿ ಒಟ್ಟು ಸ್ಥಿರ ಬಂಡವಾಳ ರಚನೆಯು ವರ್ಷದಲ್ಲಿ 7.5% ರಷ್ಟು ದೃಢವಾಗಿ ಬೆಳೆದಿದೆ ಮತ್ತು ಒಟ್ಟು ದೇಶೀಯ ಉತ್ಪನ್ನದಲ್ಲಿ (ಜಿಡಿಪಿ) ಅದರ ಪಾಲನ್ನು…
ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವಂತ ಜನರಿಗೆ ಗುಡ್ ನ್ಯೂಸ್ ಎನ್ನುವಂತೆ ರೈಲ್ವೆ ಇಲಾಖೆಯಿಂದ 22 ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಗಣೇಶ ಚತುರ್ಥಿ, ದೀಪಾವಳಿ ಮತ್ತು ದಸರಾ ಹಬ್ಬದ ವೇಳೆ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ವಿವಿಧ ಸ್ಥಳಗಳ ನಡುವೆ ಇಪ್ಪತ್ತೆರಡು ಹಬ್ಬದ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಅವುಗಳು ಈ ಕೆಳಗಿನಂತಿವೆ ಎಂದಿದೆ. ಗಣೇಶ ಚತುರ್ಥಿ ಹಬ್ಬದ ವಿಶೇಷ ರೈಲುಗಳು: ಕ್ರ ಸಂ ರೈಲು ಸಂಖ್ಯೆ ಯಿಂದ ನಿರ್ಗಮನ ಗೆ ಆಗಮನ ದಿನಾಂಕ ಟ್ರಿಪ್ಸ್ 1. 06589 SMVT ಬೆಂಗಳೂರು 09:15 pm ಕಲಬುರಗಿ 07:40 am 05.09.24 to 07.09.24 3 2. 06590 ಕಲಬುರಗಿ 09:35 am SMVT ಬೆಂಗಳೂರು 08:00 pm 06.09.24 to 08.09.24 ದೀಪಾವಳಿ ಹಬ್ಬದ ವಿಶೇಷ ರೈಲುಗಳು: ಕ್ರ ಸಂ ರೈಲು ಸಂಖ್ಯೆ ಯಿಂದ…
ಬೆಂಗಳೂರು :ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ/ ಕಾಯಕ ಕಿರಣ/ಶಹಾಜೀರಾಜೆ ಸಮೃದ್ಧಿ ಯೋಜನೆ., ಗಂಗಾ ಕಲ್ಯಾಣ ನೀರಾವರಿ ಯೋಜನೆ/ ಜೀವಜಲ/ ಜೀಜಾವು ಜಲಭಾಗ್ಯ ಯೋಜನೆ, ಅರಿವು–ಶೈಕ್ಷಣಿಕ ಸಾಲ ಯೋಜನೆ ಸೇರಿ ಹಲವು ಯೋಜನೆಗಳಡಿ ಸಾಲ, ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ), ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಸವಿತಾ-ಸಮಾಜ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ ಅಲೆಮಾರಿ-ಅರೆಮಾರಿ ಅಭಿವೃದ್ಧಿ ನಿಗಮ (ನಿ)., ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ (ನಿ)., ಕರ್ನಾಟಕ…
ನವದೆಹಲಿ:ಪ್ಯಾರಾಲಿಂಪಿಕ್ಸ್ನಲ್ಲಿ ಪುರುಷರ ಕ್ಲಬ್ ಥ್ರೋ ಎಫ್ 51 ಸ್ಪರ್ಧೆಯಲ್ಲಿ ಭಾರತದ ಧರಮ್ಬೀರ್ ಚಿನ್ನದ ಪದಕ ಗೆದ್ದಿದ್ದಾರೆ. ಸ್ಟೇಡ್ ಡಿ ಫ್ರಾನ್ಸ್ – ಸೀಟ್ ಡಿಟಿ / ಕ್ಲಬ್ನಲ್ಲಿ ಸೆಪ್ಟೆಂಬರ್ 4 ರ ಬುಧವಾರ, ಧರಮ್ಬೀರ್ 34.92 ಮೀಟರ್ ಎಸೆಯುವ ಮೂಲಕ ಏಷ್ಯನ್ ದಾಖಲೆಯನ್ನು ಮುರಿದರು ಭಾರತದ ಮತ್ತೊಬ್ಬ ಸ್ಪರ್ಧಿ ಪ್ರಣವ್ ಸೂರ್ಮಾ 34.59 ಮೀಟರ್ ದೂರ ಜಿಗಿದು ಬೆಳ್ಳಿ ಪದಕ ಗೆದ್ದರು. ಪ್ಯಾರಾಲಿಂಪಿಕ್ಸ್ನಲ್ಲಿ ಬುಧವಾರ ನಡೆದ ಟ್ರ್ಯಾಕ್ ಮತ್ತು ಫೀಲ್ಡ್ ಸ್ಪರ್ಧೆಯಲ್ಲಿ ಭಾರತವು 1-2 ಗೋಲುಗಳಿಂದ ಪೋಡಿಯಂನಲ್ಲಿ ಮೊದಲ ಸ್ಥಾನವನ್ನು ಪಡೆಯುವ ಮೂಲಕ ಇತಿಹಾಸವನ್ನು ಬರೆದಿದೆ. ಧರಮ್ಬೀರ್ ಗೆದ್ದ ಚಿನ್ನದ ಪದಕವು ಚತುಷ್ಕೋನ ಕ್ರೀಡಾ ಪ್ರದರ್ಶನದ ಇತಿಹಾಸದಲ್ಲಿ ಕ್ಲಬ್ ಥ್ರೋನಲ್ಲಿ ಭಾರತದ ಮೊದಲ ಪದಕವಾಗಿದೆ. 35 ವರ್ಷದ ಧರಮ್ಬೀರ್ 2021 ರ ಟೋಕಿಯೊ ಪ್ಯಾರಾಲಿಂಪಿಕ್ಸ್ನಿಂದ ತಮ್ಮ ಪ್ರಯತ್ನವನ್ನು ಸುಮಾರು 10 ಮೀಟರ್ಗಳಷ್ಟು ಉತ್ತಮಪಡಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ಪ್ಯಾರಾಲಿಂಪಿಕ್ಸ್ನಲ್ಲಿ ಹರ್ವಿಂದರ್ ಸಿಂಗ್ ದೇಶದ ಮೊದಲ ಬಿಲ್ಲುಗಾರಿಕೆ ಚಿನ್ನದ ಪದಕ ಗೆದ್ದ ಸ್ವಲ್ಪ…
ಬೆಂಗಳೂರು: ಕೃಷಿ ಇಲಾಖೆಯು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೃಷಿ ಇಲಾಖೆಯಿಂದ 2024-25 ನೆ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪ್ಸೆಟ್ (ಗರಿಷ್ಠ 10 ಎಚ್ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರು ಸೆಪ್ಟೆಂಬರ್ 25, 2024 ರೊಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಹೇಗೆ? ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಾಸ್ ಪೋರ್ಟ್ ಸೈಜ್ ಪೋಟೊ, ಪಹಣಿ, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು…
ಬೆಂಗಳೂರು : ಶಿಕ್ಷಕರ ದಿನಾಚರಣೆಯಂದೇ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇತರೆ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕಾನೂನು ತೊಡಕು ಮತ್ತಿತ್ತರ ವಿಷಯಗಳ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು. ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ. ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ…












