Author: kannadanewsnow57

ಬೆಂಗಳುರು : ಪತಿಯನ್ನು ಗುಂಡಿಟ್ಟು ಕೊಲ್ಲುವುದಾಗಿ ಬೆದರಿಸಿ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಮೆಲೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರಿಗೆ ಸರ್ಕಾರ ಹಂಚಿಕೆ ಮಾಡಿದ್ದ ಅತಿಥಿ ಗೃಹದಲ್ಲಿ ಅತ್ಯಾಚಾರ ಎಸಗಿರುವುದು ವಿಶೇಷ ತನಿಖಾ ದಳದ ತನಿಖೆಯಲ್ಲಿ ಬಯಲಾಗಿದೆ. ಡಿಎಸ್ ಪಕ್ಷದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 3ನೇ ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳಿಂದ 1691 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮಾಜಿ ಸಂಸದ ಪ್ರಜ್ವರ್ ರೇವಣ್ಣ ವಿರುದ್ಧ ದಾಖಲಾಗಿದ್ದಂತ 3ನೇ ಅತ್ಯಾಚಾರ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಬರೋಬ್ಬರಿ 1691 ಪುಟಗಳ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಜಿಲ್ಲಾ ಪಂಚಾಯ್ತಿ ಸದಸ್ಯ ದೂರಿನ ಪ್ರಕರಣದ ಸಂಬಂಧಿಸಿದಂತ ಚಾರ್ಜ್ ಶೀಟ್ ಇದಾಗಿದೆ. ಈ ಚಾರ್ಜ್ ಶೀಟ್ ನಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಸಂತ್ರಸ್ತೆಯ ಸೀರೆಯನ್ನು ಪ್ರಮುಖ ಸಾಕ್ಷಿಯನ್ನಾಗಿ ಎಸ್ಐಟಿ ಅಧಿಕಾರಿಗಳು ಮಾಡಿರುವುದಾಗಿ ತಿಳಿದು ಬಂದಿದೆ.

Read More

ಬೆಂಗಳೂರು: ಅನುಕಂಪದ ನೇಮಕಾತಿಯ ಉದ್ದೇಶಗಳಿಗಾಗಿ ಸೊಸೆಯನ್ನು ಕುಟುಂಬದ ಸದಸ್ಯರಾಗಿ ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸೋಮವಾರ ತೀರ್ಪು ನೀಡಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೃತ ಉದ್ಯೋಗಿಯ ಸೊಸೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಪಾಟೀಲ್ ಅವರನ್ನೊಳಗೊಂಡ ನ್ಯಾಯಪೀಠ ಈ ಆದೇಶ ನೀಡಿದೆ. ರಾಜ್ಯ ಸರ್ಕಾರದ ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗ ಮಾಡುತ್ತಿದ್ದ ತಮ್ಮ ಅತ್ತೆ ಮೃತಪಟ್ಟಿರುವ ಹಿನ್ನೆಲೆಯಲ್ಲಿ ತನಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ಕಲ್ಪಿಸಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದ ಪ್ರಿಯಾಂಕ ಹಲಮನಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳು, 2021 ಅನ್ನು ಸೊಸೆಯಂದಿರನ್ನು ಸೇರಿಸಲು ಅರ್ಥೈಸಬೇಕು ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು. ಈ ವಾದವನ್ನು ವಿರೋಧಿಸಿದ ಸರ್ಕಾರಿ ವಕೀಲರು, ಸೊಸೆಯಂದಿರನ್ನು ‘ಕುಟುಂಬ’ ಎಂದು ಪರಿಗಣಿಸುವುದು ಕಾನೂನುಗಳ “ಹಸ್ತಕ್ಷೇಪ” ಎಂದು ಹೇಳಿದರು. ನೇಮಕಾತಿಯನ್ನು ಅನುಮತಿಸಲು “ಓದುವ…

Read More

ಬೆಂಗಳೂರು : ಕರ್ನಾಟಕ ರಾಜ್ಯದ 10 ಮಹಾನಗರ ಪಾಲಿಕೆಗಳ ಖಾಯಂ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿಯ ಸೌಲಭ್ಯವನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಕ್ರಮ ಸಂಖ್ಯೆ (1) ರಲ್ಲಿ ಓದಲಾದ ದಿನಾಂಕ: 09.07.2018ರ ಆದೇಶದಲ್ಲಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯನ್ನು ಪರಿಷ್ಕರಿಸಿದ ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 06 ಎಸ್‌ಆರ್‌ಪಿ 2018, ದಿನಾಂಕ: 01.03.2018 ಮತ್ತು ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 06 ಎಸ್‌ಆರ್‌ಪಿ 2018, ದಿನಾಂಕ: 19.04.2018 ರಲ್ಲಿನ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿ / ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿ ಸೌಲಭ್ಯವನ್ನು ದಿನಾಂಕ: 01.07.2017 ರಿಂದ ಜಾರಿಗೆ ಬರುವಂತೆ ಮಂಜೂರು ಮಾಡಲಾಗಿದೆ. ಆದರೆ, ವೇತನ ಪರಿಷ್ಕರಣೆಯ ಆರ್ಥಿಕ ಸೌಲಭ್ಯವು ದಿನಾಂಕ: 01.04.2018 ರಿಂದ ಜಾರಿಗೆ ಬರುವಂತೆ ಯಥಾವತ್ತಾಗಿ ವಿಸ್ತರಿಸಿ ಆದೇಶಿಸಲಾಗಿರುತ್ತದೆ. ಮೇಲೆ ಕ್ರಮ ಸಂಖ್ಯೆ (2) ರಲ್ಲಿ ಓದಲಾದ ದಿನಾಂಕ:…

Read More

ನವದೆಹಲಿ : UPI ಬಳಕೆದಾರರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) UPI ಮೂಲಕ ಒಂದೇ ವಹಿವಾಟಿನಲ್ಲಿ 5 ಲಕ್ಷದವರೆಗೆ ವರ್ಗಾವಣೆ ಮಾಡುವ ಮಿತಿಯನ್ನು ಹೆಚ್ಚಿಸಿದೆ, ಆದರೆ ಇದು ನಿರ್ದಿಷ್ಟ ರೀತಿಯ ವಹಿವಾಟುಗಳಿಗೆ ಮಾತ್ರ. ಹೊಸ ಮಿತಿ ಏನು? ಮಿತಿ: ಸೆಪ್ಟೆಂಬರ್ 15, 2024 ರಿಂದ, ನೀವು UPI ಮೂಲಕ ಒಂದು ಬಾರಿಗೆ 5 ಲಕ್ಷದವರೆಗೆ ವರ್ಗಾಯಿಸಬಹುದು. ಇದು ಎಲ್ಲಿ ಅನ್ವಯಿಸುತ್ತದೆ: ಈ ಹೊಸ ಮಿತಿಯು ತೆರಿಗೆ ಪಾವತಿಗಳು, ಆಸ್ಪತ್ರೆ ಮತ್ತು ಶಿಕ್ಷಣ ಸೇವೆಗಳು, IPO ಗಳು ಮತ್ತು ಸರ್ಕಾರಿ ಭದ್ರತೆಗಳಿಗೆ (G Sec) ಅನ್ವಯಿಸುತ್ತದೆ. ಇದರಲ್ಲಿ ಯಾವ ವಹಿವಾಟುಗಳನ್ನು ಸೇರಿಸಲಾಗಿದೆ? ತೆರಿಗೆ ಪಾವತಿ: ನೀವು ಈಗ UPI ಮೂಲಕ ಒಂದೇ ವಹಿವಾಟಿನಲ್ಲಿ 5 ಲಕ್ಷದವರೆಗೆ ತೆರಿಗೆ ಪಾವತಿಸಬಹುದು. ಆಸ್ಪತ್ರೆಗಳು ಮತ್ತು ಕಾಲೇಜುಗಳು: 5 ಲಕ್ಷದವರೆಗಿನ ಆಸ್ಪತ್ರೆಗಳು ಮತ್ತು ಶಾಲಾ/ಕಾಲೇಜುಗಳ ಶುಲ್ಕವನ್ನು ಸಹ UPI ಮೂಲಕ ಪಾವತಿಸಬಹುದು. ಐಪಿಒ ಮತ್ತು ಸರ್ಕಾರಿ ಭದ್ರತೆಗಳು: ಈಗ ಯುಪಿಐ ಮೂಲಕ…

Read More

ಧಾರವಾಡ : ಈಗ ರೈತರು ಸಂಕಷ್ಟದಲ್ಲಿದ್ದೂ ಅನಗತ್ಯವಾಗಿ ಕೆಲವು ಬ್ಯಾಂಕ್ ಗಳು ಬೆಳೆಸಾಲ ನೀಡಲು ರೈತರಿಗೆ ಸಿಬಿಲ್ ರೇಟ್ ಕಡ್ಡಾಯ ಮಾಡುತ್ತಿವೆ. ಇದರಿಂದ ರೈತರಿಗೆ ಮತ್ತು ರೈತರು ಉತ್ಪಾದಿಸುವ ಆಹಾರದ ಮೇಲೆ ನೇರ ಪ್ರಭಾವ ಬೀರುತ್ತದೆ. ಬ್ಯಾಂಕರ್ಸ್ ಗಳು ಅನ್ವಯವಾಗದ ಕಾಯ್ದೆ, ನಿಯಮಗಳನ್ನು ಹೇಳಿ ರೈತರಿಗೆ ಬೆಳೆ ಸಾಲ ನೀಡುವಲ್ಲಿ ವಿನಾಕಾರಣ ತೊಂದರೆ ಕೊಡಬಾರದು. ಯಾವುದೇ ತಕರಾರು ಇಲ್ಲದೆ ರೈತರಿಗೆ ರೂ.10 ಲಕ್ಷ ವರೆಗೆ ಬೆಳೆಸಾಲ ನೀಡಲು ಆರ್.ಬಿ.ಐ ಮಾರ್ಗಸೂಚಿಗಳಿವೆ. ಇದನ್ನು ಬ್ಯಾಕರ್ಸ್ ಗಳು ಪಾಲನೆ ಮಾಡಬೇಕು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಅವರು ಹೇಳಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಮತಿ ಸಭೆ ಹಾಗೂ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಕೇಂದ್ರ ಸರಕಾರದಿಂದ ಸಮುದಾಯ ಮತ್ತು ವ್ಯಕ್ತಿಗತ ಯೋಜನೆಗಳನ್ನು ಸರಿಯಾಗಿ ಅನುಷ್ಠಾನಗೊಳಿಸಬೇಕು.…

Read More

ನವದೆಹಲಿ : ಭಾರತದಲ್ಲಿ ಹಬ್ಬದ ಸೀಸನ್ ಶುರುವಾಗಿದೆ. ಈ ಸಮಯದಲ್ಲಿ, ತಮ್ಮ ಗ್ರಾಹಕರಿಗೆ ಉತ್ತಮ ಸೇವೆಗಳನ್ನು ಒದಗಿಸುವ ಉದ್ದೇಶದಿಂದ.. ಈ ವಾಣಿಜ್ಯ ಕಂಪನಿಗಳು ದೊಡ್ಡ ಉದ್ಯೋಗಗಳನ್ನು ಸೃಷ್ಟಿಸುತ್ತಿವೆ. ವರದಿಯ ಪ್ರಕಾರ, ಅಮೆಜಾನ್ ಇಂಡಿಯಾ 1.1 ಲಕ್ಷಕ್ಕೂ ಹೆಚ್ಚು ಕಾಲೋಚಿತ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಘೋಷಿಸಿತು. ಮುಂಬೈ, ದೆಹಲಿ, ಪುಣೆ, ಬೆಂಗಳೂರು, ಹೈದರಾಬಾದ್, ಕೋಲ್ಕತ್ತಾ, ಲಕ್ನೋ ಮತ್ತು ಚೆನ್ನೈನಂತಹ ನಗರಗಳಲ್ಲಿ ನೇರ ಮತ್ತು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ವರದಿಯಾಗಿದೆ. ಮಹಿಳೆಯರು ಮತ್ತು ಅಂಗವಿಕಲರ ಸಂಖ್ಯೆ ದೊಡ್ಡದಾಗಿದೆ ಎಂದು ತೋರುತ್ತದೆ. ದೇಶದ ಎಲ್ಲಾ ಭಾಗಗಳ ಗ್ರಾಹಕರ ಅಗತ್ಯಗಳನ್ನು ಸಮಯೋಚಿತವಾಗಿ ಪೂರೈಸಲು ಅಮೆಜಾನ್ ಈ ಉದ್ಯೋಗಗಳನ್ನು ಸೃಷ್ಟಿಸಿದೆ. ಹಬ್ಬದ ಸಮಯದಲ್ಲಿ ಭಾರತದಾದ್ಯಂತ 1 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಅಮೆಜಾನ್ ನ ಕ್ರಮ ಶ್ಲಾಘನೀಯ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ‘ಮನ್ಸುಖ್ ಮಾಂಡವಿಯಾ’ ಹೇಳಿದ್ದಾರೆ. ಪ್ರಾಜೆಕ್ಟ್ ಆಶ್ರಯ್ ಅಮೆಜಾನ್ ಇಂಡಿಯಾ ಕೂಡ ಪ್ರಾಜೆಕ್ಟ್ ಆಶ್ರೇಯಂತಹ ಉಪಕ್ರಮಗಳನ್ನು ಪರಿಚಯಿಸಿದೆ. ಇದು ನಗರಗಳಲ್ಲಿ ಡೆಲಿವರಿ ಅಸೋಸಿಯೇಟ್‌ಗಳಿಗಾಗಿ…

Read More

ಬೆಂಗಳೂರು : ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ 2025 ರ ಅಕ್ಟೋಬರ್ 02 ರೊಳಗೆ ಜಿಲ್ಲೆಯ ಪ್ರತಿಯೊಂದು ಕುಟುಂಬದ ಒಬ್ಬರಿಗೆ ಉದ್ಯೋಗ ಸಿಗುವಂತೆ ಮಾಡುವುದು ನನ್ನ ಗುರಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೈಗಾರಿಕೆ ಕೇಂದ್ರ ಸಹಯೋಗದಲ್ಲಿ ದೇವನಹಳ್ಳಿ ಟೌನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ, ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯಿತಿಗಳಿದ್ದು, ಸುಮಾರು 2 ಲಕ್ಷ ಕುಟುಂಬಗಳಿವೆ. ಪ್ರತಿ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಿಕೊಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಉದ್ಯೋಗ ಮೇಳ ಅಯೋಜಿಸಲಾಗಿದ್ದು, ಇಂದು ಆರಂಭ, ಮುಂದಿನ ದಿನಗಳಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳ ಆಯೋಜಿಸಿ ಮನೆ ಮನೆಗೆ ಉದ್ಯೋಗ ಕಲ್ಪಿಸಿಕೊಡಲಾಗುವುದು ಎಂದು ಸಚಿವರು ಹೇಳಿದರು. ಕಂಪನಿಗಳು…

Read More

ಬೆಂಗಳೂರು: ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಹಳೇ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್‌ಎಸ್‌ಆರ್‌ಪಿ) ಅಳವಡಿಸಲು ಸೆಪ್ಟೆಂಬರ್‌ 15ರ ವರೆಗೆ ಗಡುವು ನೀಡಲಾಗಿದೆ. 2019ರ ಏಪ್ರಿಲ್‌ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬಹುದು. https://transport.karnataka.gov.in/english ಆನ್‌ಲೈನ್‌ ಮೂಲಕವೂ ನೋಂದಣಿಗೆ ಅವಕಾಶ ನೀಡಲಾಗಿದೆ. ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸದಿದ್ದರೆ 500 ರೂ.ನಿಂದ 1,000 ರೂ.ವರೆಗೆ ದಂಡ ವಿಧಿಸಲಿದೆ ಎಂದು ಹೇಳಲಾಗಿದೆ. ಆನ್‌ಲೈನ್ ಮೂಲಕ ಅಳವಡಿಕೆ ಹೇಗೆ?…

Read More

ಬೆಂಗಳೂರು : ಉಚಿತ ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 15 ರ ನಾಳೆ ಕೊನೆಯ ದಿನವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅಜರ್ಿ ಆಹ್ವಾನಿಸಲಾಗಿದೆ. ಈ ಎಲ್ಲಾ ಯೋಜನೆಗಳು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ…

Read More

ಬೆಂಗಳೂರು : ರೈತರಿಗೆ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ ಕೋಳಿ ಸಾಕಾಣಿಕೆ ನಿರ್ವಹಣೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಪಡೆಯಲು ಆಸಕ್ತಿ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮದಡಿ ಸಾಲ ಸೌಲಭ್ಯವು 2024 ಸೆಪ್ಟಂಬರ್ 15 ರಿಂದ 2025 ಮಾರ್ಚ್ 31 ರವರಗೆ ಮುಂದುವರೆಸಲಾಗುವುದು. ಆಸಕ್ತ ರೈತರು ತಮ್ಮ ಹತ್ತಿರದ ಪಶು ವೈದ್ಯಕೀಯ ಸಂಸ್ಥೆಗಳಿAದ ಅರ್ಜಿಗಳನ್ನು ಪಡೆದು ಭರ್ತಿಮಾಡಿ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ-9482943111, ಚಳ್ಳಕೆರೆ-9448816499, ಹೊಳಲ್ಕೆರೆ- 9972965479, ಹೊಸದುರ್ಗ- 9945298407, ಹಿರಿಯೂರು-9483451044, ಮೊಳಕಾಲ್ಮೂರು- 9900964820 ಗೆ ಸಂಪರ್ಕಿಸಬಹುದು ಎಂದು…

Read More