Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ರಾಜ್ಯದಾದ್ಯಂತ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆಯನ್ನು ಆರಂಭಿಸಿದೆ. 2025ನೇ ಸಾಲಿನ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ರಾಜ್ಯದ ಮೂಲೆ ಮೂಲೆಗೆ ಗಣತಿದಾರರು ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ರಾಜ್ಯದ ಜನತೆಯ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತು ಮಾಹಿತಿ ಸಂಗ್ರಹಿಸಲಿರುವ ಈ ಸಮೀಕ್ಷೆಯು ಅತ್ಯಂತ ಮಹತ್ವದ್ದಾಗಿದೆ. ಸಮಾಜದ ಎಲ್ಲಾ ವರ್ಗಗಳ ಶ್ರೇಯೋಭಿವೃದ್ಧಿಗಾಗಿ ಭವಿಷ್ಯದಲ್ಲಿ ಕೈಗೊಳ್ಳಲಿರುವ ಕಾರ್ಯಕ್ರಮಗಳ ಕುರಿತು ನಿರ್ಧಾರ ಕೈಗೊಳ್ಳಲು ಸಹಕಾರಿಯಾಗಲಿದೆ. ಕರ್ನಾಟಕದಲ್ಲಿ ಮುಸ್ಲಿಮರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಇತರ ಸಮುದಾಯಗಳ ಪೈಕಿ ಅತ್ಯಂತ ಹಿಂದುಳಿದಿರುವುದು ಸತ್ಯ. ಈ ಮೂರು ಕ್ಷೇತ್ರಗಳಲ್ಲಿ ಮುಸ್ಲಿಮರನ್ನು ಮುಂದೆ ತರಲು ರಾಜ್ಯ ಸರ್ಕಾರದ ವತಿಯಿಂದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಯೋಜನೆಗಳನ್ನು ರೂಪಿಸಲು, ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳು ಕಲ್ಪಿಸಬೇಕಿದೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ನಾವು ಭಾಗವಹಿಸಿ ನಮ್ಮ ಪರಿಸ್ಥಿತಿಯನ್ನು ಸರ್ಕಾರದ ಮುಂದೆ…
BREAKING : ಸಾಹಿತಿ `ಎಸ್.ಎಲ್ ಭೈರಪ್ಪನವರ ಸ್ಮಾರಕ’ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ |S. L. Bhyrappa
ಬೆಂಗಳೂರು : ಪದ್ಮಶ್ರೀ ಪದ್ಮಭೂಷಣ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪ (94) ಇದರ ರಾಗಿದ್ದು ಇದೀಗ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ಸಿಎಂ ಸಿದ್ದರಾಮಯ್ಯ ಅವರು ಎಸ್ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಎಸ್ ಎಲ್ ಬೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜೇತರ ಸೇರಿದಂತೆ ಹಲವರು ಆಗ್ರಹಿಸಿದ್ದರು. ಇದೀಗ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಸಿಎಂ ಸಿದ್ದರಾಮಯ್ಯ ಸಹ ಎಸ್ ಎಲ್ ಭೈರಪ್ಪ ಅವರ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ ಎಂದು ಭೈರಪ್ಪ ಅವರ ಅಂತಿಮ ದರ್ಶನ ಪಡೆದ ಬಳಿಕ ಘೋಷಣೆ ಮಾಡಿದರು. ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ…
ಬೆಂಗಳೂರು : ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪನವರ ಅಂತಿಮ ಸಂಸ್ಕಾರ ಹುಟ್ಟೂರಿನಲ್ಲೇ ಆಗಲಿ ಎಂದು ರಾಜ್ಯ ಸರ್ಕಾರಕ್ಕೆ ಸಂತೆ ಶಿವರ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಭೈರಪ್ಪನವರ ಕುಟುಂಬದರ ಅಂತ್ಯಸಂಸ್ಕಾರ ಇಲ್ಲೇ ಆಗಿದೆ, ಹಾಗಾಗಿ ಭೈರಪ್ಪನವರ ಅಂತ್ಯಸಂಸ್ಕಾರ ಗ್ರಾಮದಲ್ಲೇ ಆಗಲಿ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ. ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪ (94) ನಿಧನರಾಗಿದ್ದು ಇದೀಗ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ಸಿಎಂ ಸಿದ್ದರಾಮಯ್ಯ ಅವರು ಎಸ್ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ನಿನ್ನೆ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ಎಲ್ ಭೈರಪ್ಪ ನಿಧನರಾಗಿದರು. ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಶಿವರಾಜ ತಂಗಡಗಿ ಸೇರಿದಂತೆ ಹಲವು ಗಣ್ಯರು ಎಸ್ ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಇಂದು ಸಂಜೆ…
ನವದೆಹಲಿ: ಹಿಂದೂ ಮಹಿಳೆಯೊಬ್ಬರು ಪತಿ ಮತ್ತು ಮಕ್ಕಳನ್ನು ಬಿಟ್ಟು ವಿಲ್ ಬರೆಯದೆ ಸಾವನ್ನಪ್ಪಿದರೆ, ಆಕೆಯ ಆಸ್ತಿ ಆಕೆಯ ಪತಿಯ ಕುಟುಂಬಕ್ಕೆ ಅಲ್ಲ, ಬದಲಾಗಿ ಆಕೆಯ ಪತಿಯ ಉತ್ತರಾಧಿಕಾರಿಗಳಿಗೆ ಹೋಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ಕಾನೂನಿನಡಿಯಲ್ಲಿ ವಿವಾಹವಾದಾಗ ಆಕೆಯ “ಗೋತ್ರ” ಬದಲಾಗುತ್ತದೆ. ವಿಚಾರಣೆಯ ಸಮಯದಲ್ಲಿ, ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ಪೀಠವು ಅರ್ಜಿದಾರರಿಗೆ ಕಾನೂನಿನ ಆಧಾರವಾಗಿರುವ ಸಾಂಸ್ಕೃತಿಕ ಚೌಕಟ್ಟನ್ನು ಪರಿಗಣಿಸಲು ನೆನಪಿಸಿತು.”ನೀವು ವಾದಿಸುವ ಮೊದಲು, ದಯವಿಟ್ಟು ನೆನಪಿಡಿ. ಇದು ಹಿಂದೂ ಉತ್ತರಾಧಿಕಾರ ಕಾಯ್ದೆ. ಹಿಂದೂ ಎಂದರೆ ಏನು, ಹಿಂದೂ ಸಮಾಜವನ್ನು ಹೇಗೆ ನಿಯಂತ್ರಿಸಲಾಗುತ್ತದೆ, ಅದರ ಅರ್ಥವೇನು? ನೀವು ಆ ಎಲ್ಲಾ ಪದಗಳನ್ನು ಬಳಸಲು ಇಷ್ಟಪಡದಿರಬಹುದು… ಆದರೆ ‘ಕನ್ಯಾದಾನ’, ಒಬ್ಬ ಮಹಿಳೆ ಮದುವೆಯಾದಾಗ, ಅವಳ ಗೋತ್ರವನ್ನು ಬದಲಾಯಿಸಲಾಗುತ್ತದೆ, ಅವಳ ಹೆಸರನ್ನು ಬದಲಾಯಿಸಲಾಗುತ್ತದೆ. ಅವಳು ತನ್ನ ಗಂಡನಿಂದ ಜೀವನಾಂಶವನ್ನು ಪಡೆಯಬಹುದು…” ಎಂದು ಪೀಠವು ಗಮನಿಸಿತು. ದಕ್ಷಿಣ ಭಾರತದಲ್ಲಿನ ಧಾರ್ಮಿಕ ಆಚರಣೆಗಳನ್ನು ಎತ್ತಿ ತೋರಿಸಿದ ನ್ಯಾಯಮೂರ್ತಿ ನಾಗರತ್ನ, “ದಕ್ಷಿಣದ ವಿವಾಹಗಳಲ್ಲಿ, ಅವಳು ಒಂದು ಗೋತ್ರದಿಂದ…
ಬೆಂಗಳೂರು : ವಯಸ್ಸಾದಂತೆ ಅನೇಕ ರೀತಿಯ ಕಾಯಿಲೆಗಳ ಅಪಾಯವು ಹೆಚ್ಚಾಗುತ್ತದೆ. ಇದಕ್ಕಾಗಿಯೇ ಆರೋಗ್ಯ ತಜ್ಞರು ಎಲ್ಲಾ ಜನರು ಚಿಕ್ಕ ವಯಸ್ಸಿನಿಂದಲೇ ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಬೇಕು ಎಂದು ಸಲಹೆ ನೀಡುತ್ತಾರೆ. ನೀವು ವಯಸ್ಸಾದಂತೆ, ನಿಮ್ಮ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತದೆ, ಸ್ನಾಯು ಮತ್ತು ಮೂಳೆ ಸಮಸ್ಯೆಗಳು ಹೆಚ್ಚಾಗುತ್ತವೆ ಮತ್ತು ನೀವು ಅನೇಕ ರೋಗಗಳಿಗೆ ಹೆಚ್ಚು ಒಳಗಾಗುತ್ತೀರಿ. ವಯಸ್ಸಾದಂತೆ ದೇಹದಲ್ಲಿ ಅನೇಕ ಜೈವಿಕ ಬದಲಾವಣೆಗಳು ಸಂಭವಿಸಲು ಪ್ರಾರಂಭಿಸುತ್ತವೆ, ಇದು ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. 50 ವರ್ಷಕ್ಕಿಂತ ಮೇಲ್ಪಟ್ಟ ಜನರು ಹೃದ್ರೋಗ, ಟೈಪ್ 2 ಮಧುಮೇಹ ಮತ್ತು ದೃಷ್ಟಿ ಕಳಪೆಯಾಗುವ ಅಪಾಯವನ್ನು ಹೊಂದಿರುತ್ತಾರೆ. ಬಾಲ್ಯದಿಂದಲೇ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಸುಧಾರಿಸಿದರೆ, ಭವಿಷ್ಯದಲ್ಲಿ ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯಕವಾಗಬಹುದು. ಇದಲ್ಲದೆ, ಆರೋಗ್ಯ ತಜ್ಞರು 50 ವರ್ಷ ವಯಸ್ಸಿನ ನಂತರ ಎಲ್ಲಾ ಜನರು ಹೆಚ್ಚುವರಿ ರಕ್ಷಣೆ ನೀಡುವ ಕೆಲವು ಲಸಿಕೆಗಳನ್ನು ಪಡೆಯುವಂತೆ ಶಿಫಾರಸು ಮಾಡುತ್ತಾರೆ. 50 ವರ್ಷದ ನಂತರ ತಪ್ಪದೇ…
ಬೆಂಗಳೂರು: ರಾಜ್ಯ ಸರಕಾರದ ‘ಸಿ’ ವೃಂದದ ಮೇಲ್ಪಟ್ಟ ಎಲ್ಲ ಅಧಿಕಾರಿ, ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯಗೊಳಿಸುವ ಸಂಬಂಧದ ನಿಯಮಾವಳಿ ಅಂತಿಮಗೊಳಿಸಲಾಗಿದ್ದು, ಇಂದು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ಸಿಗುವ ಸಾಧ್ಯತೆ ಇದೆ. ರಾಜ್ಯ ಸರಕಾರದ ‘ಸಿ’ ವೃಂದ ಮೇಲ್ಪಟ್ಟ ಎಲ್ಲ ಅಧಿಕಾರಿ, ನೌಕರರಿಗೆ ಮುಂಬಡ್ತಿಗೆ ತರಬೇತಿ ಕಡ್ಡಾಯಗೊಳಿಸುವ ಮಹತ್ವದ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಕೇಂದ್ರ ನಾಗರಿಕ ಸೇವಾ ಅಧಿ ಕಾರಿಗಳಿಗೆ ಸೇವಾವಧಿ ನಡುವೆ ಲಾಲ್ ಬಹದ್ದೂರ್ ಶಾಸ್ತ್ರಿ ಅಕಾಡೆಮಿಯಲ್ಲಿ ತರಬೇತಿ ವ್ಯವಸ್ಥೆ ಇದ್ದು, ಅದೇ ಮಾದರಿಯಲ್ಲಿ ರಾಜ್ಯ ಸರಕಾರದ ಎಲ್ಲ ಅಧಿಕಾರಿ ವರ್ಗಕ್ಕೆ ತರಬೇತಿಗೆ ನಿರ್ಧರಿಸಲಾಗಿದೆ. ಮುಂಬಡ್ತಿಗಾಗಿ ಈ ತರಬೇತಿಯನ್ನು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 2026 ರ 10 ಮತ್ತು 12 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳಿಗೆ ತಾತ್ಕಾಲಿಕ ದಿನಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗಳು ಫೆಬ್ರವರಿ 17 ರಂದು ಪ್ರಾರಂಭವಾಗಲಿವೆ. 10 ನೇ ತರಗತಿ ಪರೀಕ್ಷೆಗಳು ಮಾರ್ಚ್ 9 ರಂದು ಮತ್ತು 12 ನೇ ತರಗತಿ ಪರೀಕ್ಷೆಗಳು ಏಪ್ರಿಲ್ 9, 2026 ರಂದು ಕೊನೆಗೊಳ್ಳಲಿವೆ. 10 ನೇ ತರಗತಿಯ ಮಾಧ್ಯಮಿಕ ಶಾಲಾ ಪರೀಕ್ಷೆಗಳು ಗಣಿತ ಪ್ರಮಾಣಿತ ಮತ್ತು ಮೂಲ ಪರೀಕ್ಷೆಗಳೊಂದಿಗೆ ಪ್ರಾರಂಭವಾಗಲಿವೆ. ಪರೀಕ್ಷೆಗಳು ಫೆಬ್ರವರಿ 17 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿವೆ. 10 ನೇ ತರಗತಿಯ ಪರೀಕ್ಷೆಗಳು ಭಾಷೆಗಳು ಮತ್ತು ಸಂಗೀತ ಪರೀಕ್ಷೆಗಳೊಂದಿಗೆ ಕೊನೆಗೊಳ್ಳಲಿವೆ. 12 ನೇ ತರಗತಿ ಅಥವಾ ಹಿರಿಯ ಶಾಲಾ ಪರೀಕ್ಷೆಯು ಫೆಬ್ರವರಿ 17 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ಜೈವಿಕ ತಂತ್ರಜ್ಞಾನ, ಉದ್ಯಮಶೀಲತೆ ಮತ್ತು ಸಂಕ್ಷಿಪ್ತ ರೂಪ (ಇಂಗ್ಲಿಷ್ ಮತ್ತು ಹಿಂದಿ) ಯೊಂದಿಗೆ…
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಆಧಾರ್ ಸಹಿತ ಬಯೋಮೆಟ್ರೀಕ್ ಹಾಜರಾತಿ ಕಡ್ಡಾಯಗೊಳಿಸಲಾಗಿದೆ. ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿರುವ ಕೇಂದ್ರ ಕಚೇರಿ, ಆರು ಪ್ರಾದೇಶಿಕ ಜಂಟಿ ನಿರ್ದೇಶಕರ ಕಚೇರಿ ಹಾಗೂ ಎಲ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆಧಾರ್ಸಹಿತ ಬಯೋಮೆಟ್ರಿಕ್ ಹಾಜರಾತಿ ಜಾರಿಗೊಳಿಸಲಾಗುತ್ತಿದೆ. ವೈಯಕ್ತಿಕ ವಿವರಗಳನ್ನು ಇಲಾಖೆ ಪೋರ್ಟಲ್ನಲ್ಲಿ 30ರೊಳಗೆ ನೋಂದಣಿ ಮಾಡಿಕೊಳ್ಳುವಂತೆ ಆಯುಕ್ತರು ಆದೇಶ ಹೊರಡಿಸಿದ್ದು,ಮೊಬೈಲ್ ಆ್ಯಪ್ಗಳನ್ನು ತಮ್ಮ ಮೊಬೈಲ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಂಡು ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು ಎಂದು ಸೂಚನೆ ನೀಡಲಾಗಿದೆ.
ಇತ್ತೀಚಿಗೆ ಹೃದಯಾಘಾತದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ರೆಸ್ಟೋರೆಂಟ್ ಗೆ ಬಂದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ವಿಡಿಯೋ ವೈರಲ್ ಆಗಿದೆ. 54 ಸೆಕೆಂಡುಗಳ ದುಃಖದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಹೃದಯ ವಿದ್ರಾವಕ ವಿಡಿಯೋದಲ್ಲಿ, ಕೆಲವರು ರೆಸ್ಟೋರೆಂಟ್ನಲ್ಲಿ ಕುಳಿತಿರುವುದನ್ನು ಕಾಣಬಹುದು. ಒಬ್ಬ ಮಾಣಿ ಬಂದು ಆರ್ಡರ್ ತೆಗೆದುಕೊಳ್ಳುತ್ತಾನೆ. ಅಷ್ಟರಲ್ಲಿ, ಒಬ್ಬ ಯುವಕ ತನ್ನ ಕುರ್ಚಿಯಿಂದ ಎದ್ದು ಇನ್ನೊಂದು ಬದಿಗೆ ನಡೆಯುತ್ತಾನೆ. ಇನ್ನೊಂದು ಕುರ್ಚಿಯಲ್ಲಿ ಕುಳಿತಿದ್ದ ವ್ಯಕ್ತಿ ತನ್ನ ಕುರ್ಚಿಯನ್ನು ಮುಂದಕ್ಕೆ ಎಳೆದುಕೊಂಡು ತನ್ನ ಫೋನ್ ತೆಗೆದುಕೊಂಡು ಏನೋಡುತ್ತಾನೆ. ಇಲ್ಲಿಯವರೆಗೆ, ಎಲ್ಲವೂ ಸಾಮಾನ್ಯವಾಗಿ ನಡೆಯುತ್ತಿದೆ. ಆದರೆ ಸ್ವಲ್ಪ ಸಮಯದ ನಂತರ, ಕನ್ನಡಕ ಧರಿಸಿದ ವ್ಯಕ್ತಿ ತನ್ನ ಎದೆಯ ಮೇಲೆ ಕೈ ಇಟ್ಟು ನೋಡುತ್ತಿರುವಾಗ ಮೇಜಿನ ಮೇಲೆ ಬೀಳುತ್ತಾನೆ. ಕುಟುಂಬ ಸದಸ್ಯರು ಅವನನ್ನು ಕೂರಿಸಲು ಪ್ರಯತ್ನಿಸುತ್ತಾರೆ, ಆದರೆ ಆ ವ್ಯಕ್ತಿ ಈಗಾಗಲೇ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತದೆ. ಈ ವಿಡಿಯೋ ಇಂದೋರ್ ಎಂದು ಹೇಳಲಾಗುತ್ತದೆ. ಆ ವ್ಯಕ್ತಿಯ ಹಠಾತ್…
ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಇಬ್ಬರು ಮಕ್ಕಳನ್ನು ಕೊಂದ ಘಟನೆ ನಡೆದಿದೆ. ಯಾದಗಿರಿ ತಾಲೂಕಿನ ದುಬನ್ನೂರು ಕ್ಯಾಂಪ್ನಲ್ಲಿ ಈ ಒಂದು ಘಟನೆ ನಡೆದಿದೆ. ಮೂವರ ಮಕ್ಕಳ ಪೈಕಿ ಇಬ್ಬರನ್ನು ತಂದೆ ಶರಣಪ್ಪ ಕೊಂದಿದ್ದಾನೆ. ಭಾರ್ಗವ್ (5) ಹಾಗೂ ಸಾನ್ವಿ (2) ಕೊಲೆಯಾದ ಮಕ್ಕಳು ಎಂದು ತಿಳಿದುಬಂದಿದೆ. ಇನ್ನು ಹಿರಿಯ ಮಗ ಹೇಮಂತ್ ಕೊಲೆಗೂ ಶರಣಪ್ಪ ಯತ್ನಿಸಿದ್ದ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಹಿರಿಯ ಮಗನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ ಶರಣಪ್ಪನ ಬಂಧನಕ್ಕೆ ಪೊಲೀಸರು ಬಲೇ ಬೀಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟ ಪತಿ ತನ್ನ ಪುಟ್ಟ ಮಕ್ಕಳನ್ನು ಕೊಂದು ಪರಾರಿಯಾಗಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳದಲ್ಲಿ ಕುಟುಂಬ…







