Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಕಲ್ಲು ತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಾಗಮಂಗಲ ಗಲಭೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದರು. ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ…
ಮಂಡ್ಯ : ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 6 ಎಫ್ ಐಆರ್ ದಾಖಲಾಗಿದ್ದು, 52 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ್ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಂಡ್ಯ ಎಸ್ ಪಿ ಮಲ್ಲಿಕಾರ್ಜುನ, ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಹತೋಟಿಗೆ ಬಂದಿದೆ. ಅಂಗಡಿಗಳು ಓಪನ್ ಆಗುತ್ತಿವೆ. ಪರಿಸ್ಥಿತಿ ಯಥಾಸ್ಥಿತಿಗೆ ಮರಳುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಗಲಭೆಗೆ ಸಂಬಂಧಿಸಿದಂತೆ 6 ಎಫ್ಐಆರ್ ದಾಖಲಿಸಲಾಗಿದೆ. 52 ಜನರನ್ನು ವಶಕ್ಕೆ ಪಡೆಯಲಾಗಿದೆ ಎಂದರು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬದರಿಕೊಪ್ಪಲದಲ್ಲಿ ಗಣಪತಿ ವಿಸರ್ಜನೆ ವೇಳೆ ಹಿಂದೂ ಮುಸ್ಲಿಂ ಗಲಾಟೆ ನಡೆದಿದ್ದು,ಗಣಪತಿ ಮೇಲೆ ಮುಸ್ಲಿಂರು ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಪೆಟ್ರೋಲ್ ಬಾಂಬ್ ಎಸೆದು ಮುಸ್ಲಿಮರ ಅಂಗಡಿಗಳಿಗೆ ಬೆಂಕಿ ಹಚ್ಚಿರುವ ವರದಿಯಾಗಿದೆ. ಸೆಪ್ಟಂಬರ್ 14ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.…
ಬೆಂಗಳೂರು : ಇಂದು ಬೆಂಗಳೂರು ನಗರದ ಜನತೆಯ ಅನುಕೂಲಕ್ಕೆ ಮೊದಲ ಹಂತದ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಒಟ್ಟು 840 ನೂತನಬಸ್ ಗಳು BMTC ಸೇರಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ಸಾರಿಗೆ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ನೂತನ BMTC ಬಸ್ ಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಬೆಂಗಳೂರು ನಗರದಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇಲ್ಲಿನ ಹೆಚ್ಚುತ್ತಿರುವ ಶ್ರಮಿಕ ವರ್ಗಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ನೂತನಬಸ್ ಗಳನ್ನು BMTC ಗೆ ಸೇರ್ಪಡೆಗೊಳಿಸುವ ಜೊತೆಗೆ ಹಿಂದಿನ ಸರ್ಕಾರ ಸ್ಥಗಿತಗೊಳಿಸಿದ್ದ ಇಂದಿರಾ ಕ್ಯಾಂಟೀನ್ ಗಳನ್ನು ಆರಂಭಿಸಿದ್ದಲ್ಲದೆ ನೂತನವಾಗಿ ಇನ್ನಷ್ಟು ಕ್ಯಾಂಟೀನ್ ಗಳನ್ನು ಆರಂಭಿಸುತ್ತಿದ್ದೇವೆ. ಇದೇ ಶ್ರಮಿಕ ವರ್ಗದ ಅನುಕೂಲಕ್ಕಾಗಿ ಶಕ್ತಿ ಯೋಜನೆ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಯಶಸ್ವಿಯಾಗಿ ಮುಂದುವರೆಸುತ್ತಿದ್ದೇವೆ. ನಮ್ಮ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದರು. ಬಡವರ ಮತ್ತು ಮಧ್ಯಮ ವರ್ಗದ ವಿರೋಧಿಯಾಗಿರುವ ಬಿಜೆಪಿ ಈ ಗ್ಯಾರಂಟಿ…
ನವದೆಹಲಿ:ಏಪ್ರಿಲ್ 1, 2005 ರಿಂದ ತೆರಿಗೆ ಬಾಕಿಯನ್ನು ಸಂಗ್ರಹಿಸಲು ಅವಕಾಶ ನೀಡುವ ಜುಲೈ 25 ರ ತೀರ್ಪಿಗೆ ಸೀಮಿತ ಪೂರ್ವಾನ್ವಯತೆಯನ್ನು ನೀಡಿದ ಸುಪ್ರೀಂ ಕೋರ್ಟ್ನ ಆಗಸ್ಟ್ 14, 2024 ರ ತೀರ್ಪನ್ನು ಮರುಪರಿಶೀಲಿಸುವಂತೆ ಸರ್ಕಾರ ಕೋರಿತು ತಮ್ಮ ಭೂಮಿಯಿಂದ ಖನಿಜಗಳನ್ನು ಹೊರತೆಗೆಯುವುದರ ಮೇಲೆ ರಾಯಧನ ವಿಧಿಸುವ ರಾಜ್ಯಗಳ ಅಧಿಕಾರವನ್ನು ಎತ್ತಿಹಿಡಿದ ಮತ್ತು ಗಣಿಗಳು ಮತ್ತು ಕ್ವಾರಿಗಳನ್ನು ಒಳಗೊಂಡಿರುವ ಭೂಮಿಗಳಿಗೆ ತೆರಿಗೆ ವಿಧಿಸಬಹುದು ಎಂದು ಹೇಳಿದ ಜುಲೈ 25 ರ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಕೇಂದ್ರವು ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದೆ. ಏಪ್ರಿಲ್ 1, 2005 ರಿಂದ ಯಾವುದೇ ಬಡ್ಡಿ ಅಥವಾ ದಂಡವಿಲ್ಲದೆ ತೆರಿಗೆ ಬಾಕಿಯನ್ನು ಸಂಗ್ರಹಿಸಲು ರಾಜ್ಯಗಳಿಗೆ ಅವಕಾಶ ನೀಡುವ ಜುಲೈ 25 ರ ತೀರ್ಪಿಗೆ ಸೀಮಿತ ಪೂರ್ವಾನ್ವಯತೆಯನ್ನು ನೀಡಿದ ಸುಪ್ರೀಂ ಕೋರ್ಟ್ನ ಆಗಸ್ಟ್ 14, 2024 ರ ತೀರ್ಪನ್ನು ಮರುಪರಿಶೀಲಿಸುವಂತೆ ಸರ್ಕಾರ ಕೋರಿದೆ. “ತೀರ್ಪಿನ ಪೂರ್ವಾನ್ವಯ ಅನ್ವಯದ ಅಂತಿಮ ಪರಿಣಾಮವೆಂದರೆ ಇಡೀ ವಲಯಕ್ಕೆ ಪ್ರಸ್ತುತಪಡಿಸಲಾಗುವ ಅಸಾಧಾರಣ ಬಾಕಿಗಳ ಹೊರೆಯನ್ನು ಸಾಮಾನ್ಯ…
ಬೆಂಗಳೂರು : ಮೀಸಲಾತಿ ಪ್ರಮಾಣವನ್ನು ಈಗಿನ ಶೇಕಡಾ 50ರಿಂದ ಶೇಕಡಾ 75ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಬಹಿರಂಗ ಸಭೆಗಳಲ್ಲಿ ಮಾತ್ರವಲ್ಲ ಲೋಕಸಭೆಯಲ್ಲಿಯೂ ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೀಸಲಾತಿ ಪ್ರಮಾಣವನ್ನು ಈಗಿನ ಶೇಕಡಾ 50ರಿಂದ ಶೇಕಡಾ 75ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಬಹಿರಂಗ ಸಭೆಗಳಲ್ಲಿ ಮಾತ್ರವಲ್ಲ ಲೋಕಸಭೆಯಲ್ಲಿಯೂ ಹೇಳಿದ್ದಾರೆ. ಬಿಜೆಪಿ ನಾಯಕರಿಗೆ ಮೀಸಲಾತಿ ಬಗ್ಗೆ ಅಷ್ಟೊಂದು ಕಾಳಜಿ-ಬದ್ಧತೆ ಇದ್ದರೆ ಮೀಸಲಾತಿಯ ಪ್ರಮಾಣವನ್ನು ಈಗಿನ ಶೇಕಡಾ 50ರಿಂದ ಶೇಕಡಾ 75ಕ್ಕೆ ಹೆಚ್ಚಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಿ ಎಂದು ಆಗ್ರಹಿಸಿದ್ದಾರೆ. ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಮೀಸಲಾತಿ ವಿರೋಧಿ ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿ ಬಿಜೆಪಿ ನಾಯಕರು ಮಾಡುತ್ತಿರುವ ಪ್ರತಿಭಟನೆ, ‘‘ಪ್ರಾಣಿ ಹಿಂಸೆ ವಿರುದ್ಧ ಕಟುಕರು ಪ್ರತಿಭಟನೆ ಮಾಡಿದಂತೆ’’. ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರಿಗೆ, ಸಂವಿಧಾನವನ್ನೇ ಬದಲಾಯಿಸಲು ಹೊರಟವರಿಗೆ…
ಬೆಂಗಳೂರು : ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಕ್ರಮ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ಅಂತಿಮ ಹಂತದ ವಿಚಾರಣೆ ಇಂದು ನಡೆಯಲಿದ್ದು, ರಾಜ್ಯದ ಜನರ ಚಿತ್ತ ಹೈಕೋರ್ಟ್ ನತ್ತ ನೆಟ್ಟಿದೆ. ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ಆರಂಭವಾಗಿದ್ದು, ಇಂದೇ ವಾದ ಮಂಡನೆ ಮುಗಿಸುವಂತೆ ನ್ಯಾ. ಎಂ.ನಾಗಪ್ರಸನ್ನ ಸೂಚನೆ ನೀಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಇಂದು ಹೈಕೋರ್ಟ್ ನಡೆಸುತ್ತಿದೆ.
ನವದೆಹಲಿ : ಮದರಸಾಗಳಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ಹೇಳಿದೆ. ಬುಧವಾರ ಸುಪ್ರೀಂ ಕೋರ್ಟ್ನಲ್ಲಿ ಲಿಖಿತ ವಾದದಲ್ಲಿ, NCPCR ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ವಿಫಲವಾದ ಮೂಲಕ ಉತ್ತಮ ಶಿಕ್ಷಣಕ್ಕಾಗಿ ಮಕ್ಕಳ ಮೂಲಭೂತ ಹಕ್ಕನ್ನು ಮದರಸಾಗಳು ಉಲ್ಲಂಘಿಸುತ್ತಿವೆ ಎಂದು ಹೇಳಿದರು. ಮದರಸಾಗಳಲ್ಲಿ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣ ಸಮಗ್ರವಾಗಿಲ್ಲ ಎಂದು ಆಯೋಗ ಹೇಳುತ್ತದೆ. ಆದ್ದರಿಂದ ಇದು ಶಿಕ್ಷಣ ಹಕ್ಕು ಕಾಯಿದೆ, 2009 ರ ನಿಬಂಧನೆಗಳಿಗೆ ವಿರುದ್ಧವಾಗಿದೆ. ಅಲಹಾಬಾದ್ ಹೈಕೋರ್ಟ್ನಿಂದ ‘ಯುಪಿ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್ 2004’ ರದ್ದತಿ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಎನ್ಸಿಪಿಸಿಆರ್ ತನ್ನ ಲಿಖಿತ ವಾದವನ್ನು ನೀಡಿದೆ. ಮಕ್ಕಳು ಸೂಕ್ತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಮಾತ್ರವಲ್ಲದೆ ಆರೋಗ್ಯಕರ ವಾತಾವರಣ ಮತ್ತು ಅಭಿವೃದ್ಧಿಗೆ ಉತ್ತಮ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆಯೋಗ ಹೇಳಿದೆ. ಇಂತಹ ಸಂಸ್ಥೆಗಳು ಮುಸ್ಲಿಮೇತರರಿಗೂ ಇಸ್ಲಾಮಿಕ್ ಶಿಕ್ಷಣ ನೀಡುತ್ತಿದ್ದು, ಇದು ಸಂವಿಧಾನದ 28 (3)ನೇ ವಿಧಿಯ ಉಲ್ಲಂಘನೆಯಾಗಿದೆ.…
ಬೆಂಗಳೂರು : ಬೆಂಗಳೂರಿಗರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, 100 ಹೊಸ ಬಿಎಂಟಿಸಿ ಬಸ್ ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ಮೂಲಕ ಪ್ರಯಾಣಿಕರಿಗೆ ಗುಡ್ ನ್ಯುಸ್ ನೀಡಿದ್ದಾರೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಬಳಿ ನಡೆದ ಕಾರ್ಯಕ್ರಮದಲ್ಲಿ 100 ಹೊಸ ಬಿಎಂಟಿಸಿ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. https://twitter.com/KarnatakaVarthe/status/1834070398863831214?ref_src=twsrc%5Etfw%7Ctwcamp%5Etweetembed%7Ctwterm%5E1834070398863831214%7Ctwgr%5Ea563e3dc834bdb3f17153f40c5b86f1ff3e1ebb6%7Ctwcon%5Es1_&ref_url=https%3A%2F%2Fkannadadunia.com%2Flive-news%2Fbreaking-good-news-for-commuters-cm-siddaramaiah-inaugurates-100-new-bmtc-buses%2F ರಾಜ್ಯ ಸರ್ಕಾರವು ₹336 ಕೋಟಿ ವೆಚ್ಚದಲ್ಲಿ ಒಟ್ಟು 840 ಹೊಸ ಬಸ್ಗಳ ಖರೀದಿಗೆ ಒಪ್ಪಿಗೆ ನೀಡಿದೆ. ಮೊದಲ ಹಂತದಲ್ಲಿ 100 ಬಿಎಸ್- VI ಬಸ್ಸುಗಳು ರಸ್ತೆಗಿಳಿಯಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಮುಂಭಾಗ ಈ ಬಸ್ಸುಗಳಿಗೆ ಚಾಲನೆ ನೀಡಿದ್ದಾರೆ.
ನವದೆಹಲಿ : ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಸಂಭ್ರಮಂದ ಗಣಪತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಗುಜರಾತ್ ನ ಪೆಂಡಾಲ್ ವೊಂದರಲ್ಲಿ ಟಿ20 ವಿಶ್ವಕಪ್ ನಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಅವರ ಹಿಡಿದ ಅದ್ಭುತ ಕ್ಯಾಚ್ ನ ಥೀಮ್ ಸೃಷ್ಟಿಸಲಾಗಿದೆ. ಸೂರ್ಯಕುಮಾರ್ ಯಾದವ್ ಅವರ ಐಕಾನಿಕ್ ಕ್ಯಾಚ್ ಗುಜರಾತ್ನ ವಾಪಿಯಲ್ಲಿ ಗಣೇಶ್ ಪೂಜೆ ಥೀಮ್ ಪ್ಯಾಂಡಲ್ ಆಗಿ ಮಾರ್ಪಟ್ಟಿತು. ಈ ಕ್ಯಾಚ್ ಭಾರತವನ್ನು 17 ವರ್ಷಗಳ ನಂತರ ಮೊದಲ ಬಾರಿಗೆ ಟಿ20 ಚಾಂಪಿಯನ್ ಮಾಡಿದೆ. ಮೆನ್ ಇನ್ ಬ್ಲೂ 11 ವರ್ಷಗಳ ನಂತರ ಐಸಿಸಿ ಟ್ರೋಫಿಯನ್ನು ಗೆದ್ದುಕೊಂಡಿತು. ಸದ್ಯ ಗುಜರಾತ್ ನ ಗಣೇಶ ಪೆಂಡಾಲ್ ವೊಂದರಲ್ಲಿ ಈ ಅದ್ಭುತ ದೃಶ್ಯವನ್ನು ಸೃಷ್ಟಿಸಲಾಗಿದೆ. https://twitter.com/mufaddal_vohra/status/1833497408724209912?ref_src=twsrc%5Etfw%7Ctwcamp%5Etweetembed%7Ctwterm%5E1833497408724209912%7Ctwgr%5E3d9c3d5b55e4bf6b0c6c400ebcac0a3e5b6c8171%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Flokmatnewshindi-epaper-dh6c29e2ffedb047e1b80846bcde665c62%2Fganeshpujathemepandal2024suryakumarkaaitihasikkaichgujaratmeganeshpujapandalthimmebadaladekhevayaralphoto-newsid-n630451936 ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ವಿಶ್ವಕಪ್ ಫೈನಲ್ನಲ್ಲಿ ಪಂದ್ಯದ ಹಾದಿಯನ್ನು ನಿರ್ಧರಿಸಿದ ಅದ್ಭುತ ಕ್ಯಾಚ್ ಅನ್ನು ಸೂರ್ಯಕುಮಾರ್ ಯಾದವ್ ದೇವರ ಯೋಜನೆ ಎಂದು ಬಣ್ಣಿಸಿದ್ದರು. ಸೂರ್ಯಕುಮಾರ್ ಜಾಗೃತಿ ಮತ್ತು ಏಕಾಗ್ರತೆಯ ಅದ್ಭುತ ಉದಾಹರಣೆಯನ್ನು ಪ್ರದರ್ಶಿಸಿದರು ಮತ್ತು…
ಅದಾನಿ ಗ್ರೂಪ್ ಸೇರಿದಂತೆ ಬಾಂಗ್ಲಾದೇಶದಲ್ಲಿನ ಭಾರತೀಯ ವ್ಯವಹಾರಗಳು ಬಾಕಿಯನ್ನು ತೆರವುಗೊಳಿಸಲು ಕೋರಿವೆ, ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರವು ಒಪ್ಪಂದಗಳನ್ನು ಪರಿಶೀಲಿಸಲು ಸಜ್ಜಾಗಿದೆ ಎಂದು ಅದಾನಿ ಗ್ರೂಪ್ ಬಾಂಗ್ಲಾದೇಶ ಸರ್ಕಾರವನ್ನು ವಿದ್ಯುತ್ ಪೂರೈಕೆಗಾಗಿ ಬಾಂಗ್ಲಾದೇಶ ವಿದ್ಯುತ್ ಅಭಿವೃದ್ಧಿ ಮಂಡಳಿ (ಬಿಪಿಡಿಬಿ) ಪಾವತಿಸಬೇಕಾದ 800 ಮಿಲಿಯನ್ ಡಾಲರ್ ಕ್ಲಿಯರೆನ್ಸ್ ಅನ್ನು ತ್ವರಿತಗೊಳಿಸುವಂತೆ ವಿನಂತಿಸಿದ ನಂತರ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ ಒಪ್ಪಂದದ ನಿಯಮಗಳು ಮತ್ತು ವಿದ್ಯುತ್ ಸರಬರಾಜಿಗೆ ಪಾವತಿಸಲಾಗುತ್ತಿರುವ ಬೆಲೆಗಳನ್ನು ಪರಿಶೀಲಿಸಲು ಬಾಂಗ್ಲಾದೇಶ ಬಯಸಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯನ್ನು ಉಲ್ಲೇಖಿಸಿ ವರದಿ ಹೇಳಿದೆ. “ಅದಾನಿ ವ್ಯವಹಾರದಂತಹ ಭಾರತೀಯ ವ್ಯವಹಾರಗಳ ಪರಿಶೀಲನೆ ಇರುತ್ತದೆ… ಯಾವ ರೀತಿಯ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ, ನಿಯಮಗಳು ಮತ್ತು ಷರತ್ತುಗಳು ಯಾವುವು, ವಿದೇಶಿ ಕಂಪನಿಯು ದೇಶದ ಕಾನೂನನ್ನು ಅನುಸರಿಸಬಾರದು ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಅದಾನಿ ಪವರ್ ಹೊರತುಪಡಿಸಿ, ಪಿಟಿಸಿ ಇಂಡಿಯಾ, ಎನ್ವಿವಿಎಲ್ ಲಿಮಿಟೆಡ್ ಮತ್ತು ಸೆಂಕಾರ್ಪ್ ಎನರ್ಜಿ ಇಂಡಿಯಾ ಸೇರಿದಂತೆ ಭಾರತೀಯ ಸಂಸ್ಥೆಗಳು ಬಾಂಗ್ಲಾದೇಶಕ್ಕೆ ವಿದ್ಯುತ್…









