Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ:ಮುಂಬರುವ ದುರ್ಗಾ ಪೂಜಾ ಹಬ್ಬದ ಸಂದರ್ಭದಲ್ಲಿ ಬೇಡಿಕೆಯನ್ನು ಪೂರೈಸಲು ಭಾರತಕ್ಕೆ 3,000 ಟನ್ ಹಿಲ್ಸಾ ಮೀನುಗಳನ್ನು ರಫ್ತು ಮಾಡಲು ಬಾಂಗ್ಲಾದೇಶ ಸರ್ಕಾರ ಶನಿವಾರ ಅನುಮೋದನೆ ನೀಡಿದೆ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಸರ್ಕಾರ ಬದಲಾವಣೆಯ ನಂತರ ನೆರೆಯ ದೇಶವು ಈ ತಿಂಗಳ ಆರಂಭದಲ್ಲಿ ಭಾರತಕ್ಕೆ ಹಿಲ್ಸಾ ರಫ್ತನ್ನು ನಿಷೇಧಿಸಿತ್ತು. ಈಗ, ಬಾಂಗ್ಲಾದೇಶದ ವಾಣಿಜ್ಯ ಸಚಿವಾಲಯವು ಮುಂಬರುವ ದುರ್ಗಾ ಪೂಜೆಯ ಸಂದರ್ಭದಲ್ಲಿ 3,000 ಟನ್ ರಫ್ತು ಮಾಡಲು ಅನುಮೋದನೆ ನೀಡಿದೆ ಎಂದು ಡೈಲಿ ಸ್ಟಾರ್ ವರದಿ ಮಾಡಿದೆ. ಹಿಲ್ಸಾ ಬಾಂಗ್ಲಾದೇಶ ಮತ್ತು ಭಾರತ ಎರಡರಲ್ಲೂ ಜನಪ್ರಿಯ ಮೀನು, ಮತ್ತು ಇದನ್ನು ದುರ್ಗಾ ಪೂಜೆಯ ಸಮಯದಲ್ಲಿ ರುಚಿಕರವೆಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ಎರಡೂ ದೇಶಗಳಲ್ಲಿ ಲಕ್ಷಾಂತರ ಜನರು ಆಚರಿಸುತ್ತಾರೆ, ಮತ್ತು ಹಿಲ್ಸಾಗೆ ಬೇಡಿಕೆ ಹೆಚ್ಚಾಗುವ ನಿರೀಕ್ಷೆಯಿದೆ. ಹಬ್ಬದ ಋತುವಿನಲ್ಲಿ ದೇಶವು ಪದ್ಮಾ ಇಲಿಷ್ ನ ದೊಡ್ಡ ಸರಕನ್ನು ಭಾರತಕ್ಕೆ ಕಳುಹಿಸುತ್ತಿತ್ತು, ಇದನ್ನು ಅವಾಮಿ ಲೀಗ್ ನಾಯಕಿ ಶೇಖ್ ಹಸೀನಾ ಅವರು ಸುಗಮಗೊಳಿಸಿದ ಸದ್ಭಾವನಾ…
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ವಿವಿಧ ಕೋರ್ಸ್ ಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https://swdservices.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಪ್ರಥಮ ದರ್ಜೆ ಕಾಲೇಜು ಪಕ್ಕ, ಬೆಂಗಳೂರು ಉತ್ತರ ತಾಲ್ಲೂಕು / ಯಲಹಂಕ ಅಥವಾ ದೂರವಾಣಿ ಸಂಖ್ಯೆ : 080-28461351 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ :ಜಿಲ್ಲೆಯಲ್ಲಿ ಆಧಾರ ಕಾರ್ಡ ಹೊಂದಿರುವ ನಾಗರೀಕರು ಆಧಾರ್ ನೋಂದಣಿ ಸಮಯದಲ್ಲಿ ನಮೂದಿಸಿದ ವಿಳಾಸ 10 ವರ್ಷ ಮೇಲ್ಪಟ್ಟಿರುವ ಆಧಾರ ಕಾರ್ಡುಗಳು ನಿಷ್ಕ್ರಿಯಗೊಳಿಸಲಾಗುತ್ತಿದೆ. ಕಾರಣ ಇಲ್ಲಿಯವರೆಗೂ ತಮ್ಮ ಆಧಾರ್ ಕಾರ್ಡ ನವೀಕರಿಸದೇ ಇರುವಂತಹ ನಾಗರೀಕರು ತಮ್ಮ ವೈಯಕ್ತಿಕ ಗುರುತಿನ ದಾಖಲೆ ಹಾಗೂ ವಿಳಾಸದ ದಾಖಲೆಗಳನ್ನು ಸಂಬಂಧಿಸಿದ ಹತ್ತಿರದ ಅಟಲ್ ಜೀ ಜನಸ್ನೇಹಿ ಕೇಂದ್ರ, ನಾಡಕಛೇರಿ, ಜಿಲ್ಲಾಧಿಕಾರಿಗಳ ಕಛೇರಿಯ ಸ್ಪಂದನ ಕೇಂದ್ರ, ಅಂಚೆ ಕಛೇರಿ ಹಾಗೂ ಬ್ಯಾಂಕ್ಗಳಲ್ಲಿ ಇರುವ ಆಧಾರ ನೋಂದಣಿ ಕೇಂದ್ರಕ್ಕೆ ಭೇಟಿ ಮಾಡಿ UIDAI ಅವರು ಅಭಿವೃದ್ಧಿಪಡಿಸಿರುವ ಹೊಸ ವೈಶಿಷ್ಟ ದಾಖಲಾತಿ ನವೀಕರಣ (UIDAI has Developed a new feature Document Update) ತಂತ್ರಾಂಶವನ್ನು ಉಪಯೋಗಿಸಿಕೊಂಡು ಆಧಾರ ಕಾರ್ಡುಗಳನ್ನು ನವೀಕರಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸೆಪ್ಟೆಂಬರ್ 22 ರ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11kv IISC ಸಬ್ ಸ್ಟೇಷನ್” 22.09.2024 ರಂದು 10:00ನಿಂದ 15:00hrs ವರೆಗೆ ವಾರ್ಷಿಕ ತುರ್ತು ನಿರ್ವಹಣಾ ಕೆಲಸವನ್ನು ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಸೆ.22ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut ) ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್ಇಎಲ್, ಐಐಎಸ್ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್ಲೈನ್ ರಸ್ತೆ, ಎಲ್ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ. ಮೇಲೆ ಹೇಳಿದ ಪ್ರದೇಶಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಇಂದು ಬೆಳಿಗ್ಗೆ 9.30ರಿಂದ 3.30ರವರೆಗೆ ಈ…
ದಾವಣಗೆರೆ : ದಾವಣಗೆರೆಯಲ್ಲಿ ಗುರುವಾರ ನಡೆದ ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಗಣೇಶ ಮೆರವಣಿಯಲ್ಲಿದ್ದವರನ್ನು ಕೊಲ್ಲುವ ಉದ್ದೇಶದಿಂದಲೇ ಅನ್ಯಕೋಮಿನ ಯುವಕರ ಗುಂಪು ಕಲ್ಲು ತೂರಾಟ ನಡೆಸಿತ್ತು ಎಂಬ ವಿಚಾರ ಪೊಲೀಸ್ ಎಫ್ ಐಆರ್ ನಲ್ಲಿ ದಾಖಲಾಗಿದೆ. ಸೆಪ್ಟೆಂಬರ್ 19 ರಂದು ಸಂಜೆ ಕೆ.ಆರ್. ರಸ್ತೆಯ ಮುದೇಗೌಡ್ರು ಮಲ್ಲಮ್ಮ ಮುರಿಗೆಪ್ಪ ಪ್ರೌಢಶಾಲೆ ಪಕ್ಕದ ಪಾರ್ಕ್ ನಲ್ಲಿ ಸುಮಾರು 70-80 ಅನ್ಯಕೋಮಿನ ಯುವಕರ ಗುಂಪು ಅಜಾದ್ ನಗರದಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಗಣೇಶ ಮೂರ್ತಿಗಳ 13 ನೇ ದಿನದ ವಿಸರ್ಜನಾ ಮೆರವಣಿಗೆ ದಿನ ಈ ಷಡ್ಯಂತ್ರ ನಡೆದಿತ್ತು ಎಂದು ಪೊಲೀಸರ ಎಫ್ ಐಆರ್ ನಲ್ಲಿ ದಾಖಲಿಸಲಾಗಿದೆ. ಗಣೇಶ ಮೆರವಣಿಗೆ ಜಗಳೂರು ಬಸ್ ನಿಲ್ದಾಣದ ಸಮೀಪದ ವಾಟರ್ ಟ್ಯಾಂಕ್ ಸನಿಹ ಬರುತ್ತಿದ್ದಂತೆ ಕಲ್ಲು ತೂರಾಟ ನಡೆದಿದ್ದು, ನರಸರಾಜ ಪೇಟೆ ಮುಖ್ಯ ರಸ್ತೆ ಕಡೆಯಿಂದ ಬಂದ ಸುಮಾರು 70-80 ಯುವಕರು ಏಕಾಏಕಿ ಮೆರವಣಿಗೆ ಕಡೆಗೆ ಕಲ್ಲು ತೂರಿದ್ದು, ಇದರಿಂದ…
ಮಡಿಕೇರಿ : ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಸಹಕಾರ ಬ್ಯಾಂಕ್ಗಳಲ್ಲಿ ಕೃಷಿಕರಿಗೆ ಸರ್ಕಾರದ ನಿರ್ದೇಶನದಂತೆ ಶೂನ್ಯ ಬಡ್ಡಿ ದರದಲ್ಲಿ 3 ರಿಂದ 5 ಲಕ್ಷ ರೂ.ವರೆಗೂ ಸಾಲ ನೀಡಲು ಮುಂದಾಗಲಾಗಿದೆ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಅಧ್ಯಕ್ಷರಾದ ಕೊಡಂದೇರ ಪಿ.ಗಣಪತಿ ಅವರು ತಿಳಿಸಿದ್ದಾರೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ “ಉನ್ನತಿ ಭವನ”ದ ದಿ:ಪಂದ್ಯಂಡ.ಐ.ಬೆಳ್ಯಪ್ಪ ಸ್ಮಾರಕ ಸಭಾಂಗಣದಲ್ಲಿ ಶನಿವಾರ ನಡೆದ ಬ್ಯಾಂಕಿನ 99 ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೃಷಿಕರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆ ನಿಟ್ಟಿನಲ್ಲಿ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂ.ವರೆಗೂ ಸಾಲವನ್ನು ಸಹಕಾರ ಬ್ಯಾಂಕುಗಳ ಮೂಲಕ ವಿತರಿಸಲಾಗುತ್ತಿದೆ ಎಂದು ಬಾಂಡ್ ಗಣಪತಿ ಅವರು ಹೇಳಿದರು. ‘ಪ್ರಸಕ್ತ ಸಾಲಿನಲ್ಲಿ ಸರ್ಕಾರದ ಕೃಷಿ ಅಲ್ವಾವಧಿ ರೂ.5 ಲಕ್ಷಕ್ಕೆ ಏರಿಸಿದೆ. ಹಾಗೆಯೇ ಮಧ್ಯಮಾವಧಿ ಬಡ್ಡಿ ರಿಯಾಯಿತಿ ಯೋಜನೆಯಡಿ ಗರಿಷ್ಠ ಮಿತಿ ರೂ.15 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಕೊಡಗು ಜಿಲ್ಲೆಯ ಖಾಯಂ ನಿವಾಸಿಗಳ…
ನವದೆಹಲಿ:ಮುಂದಿನ ಆರು ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಪ್ರತಿ 1.5 ವರ್ಷಗಳಿಗೊಮ್ಮೆ ಜಿಡಿಪಿಗೆ 1 ಟ್ರಿಲಿಯನ್ ಡಾಲರ್ ಸೇರಿಸಲಿದೆ ಎಂದು ಐಡಿಬಿಐ ಕ್ಯಾಪಿಟಲ್ ವರದಿ ತಿಳಿಸಿದೆ ಭಾರತವು 2032 ರ ವೇಳೆಗೆ 10 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗುವ ಗುರಿಯನ್ನು ಹೊಂದಿದ್ದು, 2030 ರ ವೇಳೆಗೆ ಜಾಗತಿಕವಾಗಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮುವ ಗುರಿಯನ್ನು ಹೊಂದಿದೆ ಎಂದು ವರದಿಯು ಎತ್ತಿ ತೋರಿಸಿದೆ. ಪ್ರತಿ 1.5 ವರ್ಷಗಳಿಗೊಮ್ಮೆ 1 ಬಿಲಿಯನ್ ಡಾಲರ್ ಸೇರಿಸುವ ಮೂಲಕ, ಮುಂದಿನ ಆರು ವರ್ಷಗಳಲ್ಲಿ ಭಾರತವು ಮೂರನೇ ಅತಿದೊಡ್ಡ ಜಾಗತಿಕ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ವರದಿ ಹೇಳಿದೆ. ಈ ವೇಗವರ್ಧಿತ ಬೆಳವಣಿಗೆಯನ್ನು ಹೆಚ್ಚಾಗಿ ಉತ್ಪಾದನಾ ವಲಯವು ನಡೆಸುತ್ತದೆ, ಇದು ಹೆಚ್ಚುತ್ತಿರುವ ಒಟ್ಟು ಮೌಲ್ಯವರ್ಧಿತ (ಜಿವಿಎ) ಗೆ ಶೇಕಡಾ 32 ರಷ್ಟು ಕೊಡುಗೆ ನೀಡುವ ನಿರೀಕ್ಷೆಯಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ವರದಿಯ ಪ್ರಕಾರ ಭಾರತದ ಉತ್ಪಾದನಾ ನೆಲೆಯನ್ನು ಬಲಪಡಿಸಲು ಮತ್ತು ದೇಶವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ ಪರಿವರ್ತಿಸಲು ವಿನ್ಯಾಸಗೊಳಿಸಲಾದ “ಮೇಕ್ ಇನ್ ಇಂಡಿಯಾ”…
ನವದೆಹಲಿ : ಎಲ್ಎಲ್ಬಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರಮುಖ ಪರಿಹಾರವಾಗಿ, ಈ ವರ್ಷ ಅಖಿಲ ಭಾರತ ಬಾರ್ ಪರೀಕ್ಷೆಗೆ (ಎಐಬಿಇ) ಹಾಜರಾಗಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುವಂತೆ ಭಾರತೀಯ ಬಾರ್ ಕೌನ್ಸಿಲ್ (ಬಿಸಿಐ) ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. AIBE ಕಾನೂನು ಪದವೀಧರರನ್ನು ವಕೀಲರಾಗಿ ನೋಂದಾಯಿಸಲು ನಡೆಸುವ ಅರ್ಹತಾ ಪರೀಕ್ಷೆಯಾಗಿದೆ. ಅಂತಿಮ ವರ್ಷದ ಎಲ್ಎಲ್ಬಿ ವಿದ್ಯಾರ್ಥಿಗಳು ಅಸಹಾಯಕರಾಗಲು ಸಾಧ್ಯವಿಲ್ಲ ಮತ್ತು ಈ ವರ್ಷ ಬಾರ್ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡದಿದ್ದರೆ ಅವರ ಒಂದು ವರ್ಷ ಸಮಯವನ್ನು ಕಳೆದುಕೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ಈ ವಿಷಯದ ಕುರಿತು ಐವರು ನ್ಯಾಯಾಧೀಶರ ಸಂವಿಧಾನ ಪೀಠದ 2023 ರ ತೀರ್ಪಿನ ಅನ್ವಯ ಎಐಬಿಇಗೆ ನಿಯಮಗಳನ್ನು ರೂಪಿಸದಿರುವ ಬಗ್ಗೆ ಬಿಸಿಸಿಐ ಅಸಮಾಧಾನ ವ್ಯಕ್ತಪಡಿಸಿದೆ. ಕಳೆದ ವರ್ಷ ಫೆಬ್ರವರಿ 10 ರಂದು ಸುಪ್ರೀಂ ಕೋರ್ಟ್ ಎಐಬಿಇ ನಡೆಸುವ ಹಕ್ಕನ್ನು…
ಧಾರವಾಡ : ಸರಕಾರಿ ಆಸ್ತಿಗಳ ಒತ್ತುವರಿ, ಅತಿಕ್ರಮಣ ತೆರವುಗೊಳಿಸಲು ಮತ್ತು ರಕ್ಷಣೆಗೆ ಸೂಕ್ತ ಆದೇಶ ನೀಡಲು ರಾಜ್ಯ ಸರಕಾರ 2011 ರಲ್ಲಿ ಸ್ಥಾಪಿಸಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಇಲ್ಲಿವರೆಗೆ 3,923 ಎಕರೆ ಸರಕಾರಿ ಭೂಮಿಯನ್ನು ಒತ್ತುವರಿ ಆಗಿರುವುದನ್ನು ತೆರವುಗೊಳಿಸಿ, ಮರಳಿ ಸರಕಾರದ ವಶಕ್ಕೆ ಬರುವಂತೆ ಆದೇಶಿಸಲಾಗಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷರಾಗಿರುವ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕರ್ನಾಟಕ ಭೂ ಕಬಳಿಕೆ ವಿಶೇಷ ನ್ಯಾಯಾಲಯ, ಕಂದಾಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಧಾರವಾಡ ಜಿಲ್ಲಾಡಳಿತ ಸಂಯುಕ್ತವಾಗಿ ಆಯೋಜಿಸಿದ್ದ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದರು. ವಿಶೇಷ ನ್ಯಾಯಾಲಯ ಆರಂಭವಾದಾಗಿನಿಂದ ಇಲ್ಲಿವರೆಗೆ 23,646 ಪ್ರಕರಣಗಳು ನ್ಯಾಯಾಲಯದಲ್ಲಿ ದಾಖಲಾಗಿವೆ. ಇವುಗಳ ಪೈಕಿ 18,601 ಪ್ರಕರಣಗಳನ್ನು ಇತ್ಯರ್ಥ ಪಡಿಸಿ ಆದೇಶಿಸಲಾಗಿದೆ. 5037…
ಪುಣೆ: ಆಘಾತಕಾರಿ ಘಟನೆಯೊಂದರಲ್ಲಿ, ಪುಣೆ ಮಹಾನಗರ ಪಾಲಿಕೆಯ ನೀರಿನ ಟ್ಯಾಂಕರ್ ಕೆಲವೇ ಸೆಕೆಂಡುಗಳಲ್ಲಿ ಇದ್ದಕ್ಕಿದ್ದಂತೆ ರಸ್ತೆಯಲ್ಲಿ ಕಾಣಿಸಿಕೊಂಡ ಬೃಹತ್ ರಂಧ್ರದೊಳಗೆ ಕಣ್ಮರೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವೀಡಿಯೊದಲ್ಲಿ, ಪ್ರದೇಶವನ್ನು ಹಾದುಹೋಗುವಾಗ ಟ್ಯಾಂಕರ್ನ ಹಿಂಭಾಗದಿಂದ ರಸ್ತೆ ಕುಸಿಯುತ್ತಿರುವುದನ್ನು ತೋರಿಸುತ್ತದೆ. ಟ್ರಕ್ ನ ಹಿಂಭಾಗದ ಚಕ್ರಗಳು ಮೊದಲು ಮುಳುಗುತ್ತವೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೆಸರು ನೀರು ತುಂಬಿದ ಬೃಹತ್ ರಂಧ್ರಕ್ಕೆ ಟ್ರಕ್ ಸಂಪೂರ್ಣವಾಗಿ ಮುಳುಗದ ಕಾರಣ ಪುಣೆ ಮುನ್ಸಿಪಲ್ ಕಾರ್ಪೊರೇಷನ್ ಟ್ರಕ್ ಚಾಲಕ ಹೊರಬರುವಲ್ಲಿ ಯಶಸ್ವಿಯಾದರು. ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು. ಪುರಸಭೆಯ ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಗುಂಡಿಗೆ ಏನು ಕಾರಣವಾಗಿರಬಹುದು ಎಂದು ತನಿಖೆ ನಡೆಸುತ್ತಿದ್ದಾರೆ. ನಿವಾಸಿಗಳು ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಇಂತಹ ಘಟನೆಗಳನ್ನು ತಡೆಗಟ್ಟಲು ತಕ್ಷಣದ ದುರಸ್ತಿಗೆ ಒತ್ತಾಯಿಸಿದ್ದಾರೆ. ಕೆಲವು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇಂಟರ್ಲಾಕಿಂಗ್ ಸಿಮೆಂಟ್ ಬ್ಲಾಕ್-ಸುಸಜ್ಜಿತ ನೆಲವು ಕುಸಿದಾಗ ಟ್ರಕ್ ಅದರ ಹಿಂಭಾಗದಿಂದ…













