Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ಮುಂದಾಗಿದ್ದು, ಅನರ್ಹ ಬಿಪಿಎಲ್ ಕಾರ್ಡ್ ಸಿಕ್ಕಿಬಿದ್ದರೆ ದಂಡದ ಜೊತೆಗೆ ಕಾನೂನು ಕ್ರಮ ಎದುರಿಸಬೇಕು. ಹೌದು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಆಹಾರ ಇಲಾಖೆ ಮುಂದಾಗಿದೆ. ಈ ಮೂಲಕ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಡವ ಡವ ಶುರುವಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಇದುವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡೆದ ಅಕ್ಕಿ ಹಾಗೂ ಇತರೆ ಧಾನ್ಯಗಳ ಮೊತ್ತವನ್ನು ಮರಳಿಸಬೇಕು ಜೊತೆಗೆ ಕ್ರಿಮಿನಲ್ ಕೇಸ್ ಎದುರಸಬೇಕು. ರಾಜ್ಯದಲ್ಲಿ ಅಕ್ರಮ ದಾಖಲೆ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದುಕೊಂಡಿರುವವರ ಪತ್ತೆಗೆ ಆಹಾರ ಇಲಾಖೆ ಮುಂದಾಗಿದ್ದು, ರಾಜ್ಯದಲ್ಲಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಈ ಪೈಕಿ 98,431 ಮಂದಿ ಆದಾಯ ತೆರಿಗೆ ಪಾವತಿದಾರರು, 10,04,716 ಮಂದಿ 1.20 ಲಕ್ಷ ರೂ.ಗಳ ಅಧಿಕ ಆದಾಯ ಹೊರಂದಿರುವವರು, 4,036 ಮಂದಿ…
ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್2 ರ ನಾಳೆಯಿಂದ ಲ್ಯಾಂಡ್ ಬೀಟ್ ಆ್ಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ. ಈ ಕುರಿತು ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್ ಆ್ಯಪ್ ಆಧರಿಸಿ ಸೆಪ್ಟೆಂಬರ್ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಕಂದಾಯ, ಅರಣ್ಯ, ಶಿಕ್ಷಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ಸೇರಿ ರಾಜ್ಯಾದ್ಯಂತ 1.41 ಕೋಟಿ ಎಕರೆ ಸರ್ಕಾರಿ ಜಮೀನು ಇದೆ ಎಂಬುದು ಲ್ಯಾಂಡ್ ಬೀಟ್ ಆ್ಯಪ್ ಮೂಲಕ ತಿಳಿದುಬಂದಿದೆ. ರಾಜ್ಯದಲ್ಲಿ ಈವರೆಗೆ 13.17 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿಯಾಗಿರುವುದನ್ನು ಪತ್ತೆಹಚ್ಚಲಾಗಿದ್ದು, ನಾಳೆಯಿಂದ ರಾಜ್ಯಾದ್ಯಂತ ಕಟ್ಟುನಿಟ್ಟಿನ ತೆರವು ಕಾರ್ಯಾಚರಣೆ ಆರಂಭಿಸಲು ಸಜ್ಜಾಗಿದೆ. ರಾಜ್ಯಾದ್ಯಂತ ಒಟ್ಟು 239 ತಹಸೀಲ್ದಾರ್ ಗಳಿದ್ದು, ಪ್ರತಿಯೊಬ್ಬರು ತಮ್ಮ ವ್ಯಾಪ್ತಿಯಲ್ಲಿ ತಿಂಗಳಿಗೆ 10 ರಿಂದ 20 ಒತ್ತುವರಿ ಪ್ರಕರಣಗಳಲ್ಲಿ ತೆರವು ಕಾರ್ಯಾಚರಣೆ ಕೈಗೊಳ್ಳಬೇಕು. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ವಾರಾಂತ್ಯದಲ್ಲಿ ಪ್ರಗತಿ…
ನವದೆಹಲಿ:ನಾಗಾಲ್ಯಾಂಡ್ನ ನೊಕ್ಲಾಕ್ ಪಟ್ಟಣದಲ್ಲಿ ಭಾನುವಾರ ಮುಂಜಾನೆ ಮೂರು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ವರದಿ ಮಾಡಿದೆ. ಎನ್ಸಿಎಸ್ ಎಕ್ಸ್ ಪೋಸ್ಟ್ ಅನ್ನು ಹಂಚಿಕೊಂಡಿದೆ ಮತ್ತು “ಭೂಕಂಪದ ಕೇಂದ್ರಬಿಂದು ನೋಕ್ಲಾಕ್ ಪ್ರದೇಶದಲ್ಲಿ ಮುಂಜಾನೆ 3: 36 ರ ಸುಮಾರಿಗೆ 10 ಕಿಲೋಮೀಟರ್ ಆಳದಲ್ಲಿದೆ’.ಎಂದು ಎನ್ಸಿಎಸ್ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಪೋಸ್ಟ್ನಲ್ಲಿ ತಿಳಿಸಿದೆ. ಹೆಚ್ಚಿನ ವಿವರಗಳನ್ನು ಇನ್ನೂ ನಿರೀಕ್ಷಿಸಲಾಗಿದೆ. ಆಗಸ್ಟ್ 20 ರಂದು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಎನ್ಸಿಎಸ್ ಪ್ರಕಾರ, ಭೂಕಂಪದ ಕೇಂದ್ರಬಿಂದು 34.17 ಉತ್ತರ ಅಕ್ಷಾಂಶ ಮತ್ತು 74.16 ಪೂರ್ವ ರೇಖಾಂಶದಲ್ಲಿ, 5 ಕಿಲೋಮೀಟರ್ ಆಳದಲ್ಲಿತ್ತು
ಬೆಂಗಳೂರು: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. ಎಚ್ಎಸ್ಆರ್ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ ಕಳೆದ ವರ್ಷ ಆಗಸ್ಟ್ನಲ್ಲಿ ಅಧಿಸೂಚನೆ ಹೊರಡಿಸಿತ್ತು. ಹಳೆ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (ಎಚ್ಎಸ್ಆರ್ಪಿ) ಅಳವಡಿಕೆಗೆ ಸೆಪ್ಟೆಂಬರ್ 15ರವರೆಗೆ ಗಡುವು ವಿಸ್ತರಿಸಲಾಗಿದೆ. 2019ರ ಏಪ್ರಿಲ್ 1ಕ್ಕೂ ಮುನ್ನ ನೋಂದಣಿಯಾಗಿರುವ ಎಲ್ಲಾ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸಬೇಕು. ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಇಲ್ಲದ ವಾಹನಗಳಿಗೆ ದಂಡ ವಿಧಿಸಲು ನಿರ್ಧರಿಸಲಾಗಿದೆ. ಅವಧಿಯೊಳಗೆ ಎಚ್ ಎಸ್ ಆರ್…
ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಸಿಹಿಸುದ್ದಿ ನೀಡಿದ್ದು, ಆಗಸ್ಟ್ 31ಕ್ಕೆ ಕೊನೆಯ ದಿನಾಂಕವಾಗಿದ ವಿವಿಧ ಅಭಿವೃದ್ಧಿ ನಿಗಮದ ಸಾಲ ಸೌಲಭ್ಯಗಳ ಅರ್ಜಿಗಳನ್ನು ಸೆಪ್ಟೆಂಬರ್ 15ರವರೆಗೆ ಮುಂದೂಡಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಿ ಸರ್ಕಾರದ ಸೌಲಭ್ಯಗಳನ್ನು ಪಡೆಯಬಹುದು. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅಜರ್ಿ ಆಹ್ವಾನಿಸಲಾಗಿದೆ. ಈ ಎಲ್ಲಾ ಯೋಜನೆಗಳು ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು…
ನವದೆಹಲಿ:ಬೊಕಿಯೊ ಪ್ರಾಂತ್ಯದ ಗೋಲ್ಡನ್ ಟ್ರಯಾಂಗಲ್ ವಿಶೇಷ ಆರ್ಥಿಕ ವಲಯ (ಎಸ್ಇಝಡ್) ದಲ್ಲಿರುವ ಸೈಬರ್ ಹಗರಣ ಕೇಂದ್ರಗಳಲ್ಲಿ ಸಿಲುಕಿದ್ದ 47 ಭಾರತೀಯ ಪ್ರಜೆಗಳನ್ನು ಲಾವೋಸ್ನ ಭಾರತದ ರಾಯಭಾರ ಕಚೇರಿ ಯಶಸ್ವಿಯಾಗಿ ರಕ್ಷಿಸಿದೆ ಈ ವ್ಯಕ್ತಿಗಳನ್ನು ಸುಳ್ಳು ನೆಪದಲ್ಲಿ ಎಸ್ಇಝಡ್ಗೆ ಸೆಳೆಯಲಾಗಿದೆ ಮತ್ತು ಶೋಷಣೆಯ ಪರಿಸ್ಥಿತಿಗಳಿಗೆ ಒಳಪಡಿಸಲಾಗಿದೆ ಎಂದು ರಾಯಭಾರ ಕಚೇರಿ ಇತ್ತೀಚಿನ ಹೇಳಿಕೆಯಲ್ಲಿ ಬಹಿರಂಗಪಡಿಸಿದೆ. ರಕ್ಷಿಸಲಾದ 47 ಮಂದಿಯಲ್ಲಿ 29 ಮಂದಿಯನ್ನು ರಾಯಭಾರ ಕಚೇರಿಗೆ ಹಸ್ತಾಂತರಿಸಲಾಗಿದ್ದು, ಉಳಿದ 18 ಮಂದಿ ನೇರವಾಗಿ ರಾಯಭಾರ ಕಚೇರಿಯನ್ನು ಸಂಪರ್ಕಿಸಿ ಸಹಾಯ ಕೋರಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಹಗರಣವು ಮುಖ್ಯವಾಗಿ ಡೇಟಿಂಗ್ ಅಪ್ಲಿಕೇಶನ್ಗಳ ಮೂಲಕ ಸಂತ್ರಸ್ತರನ್ನು ಗುರಿಯಾಗಿಸಿಕೊಂಡಿದೆ. ಸ್ಕ್ಯಾಮರ್ಗಳು, ಹೆಚ್ಚಾಗಿ ಮಹಿಳೆಯರಂತೆ ನಟಿಸಿ, ಸಂಭಾವ್ಯ ಬಲಿಪಶುಗಳೊಂದಿಗೆ ತೊಡಗುತ್ತಾರೆ ಮತ್ತು ಅಂತಿಮವಾಗಿ ಮೋಸದ ಕ್ರಿಪ್ಟೋಕರೆನ್ಸಿ ಯೋಜನೆಗಳಲ್ಲಿ ಹೂಡಿಕೆ ಮಾಡಲು ಮನವೊಲಿಸುತ್ತಾರೆ. ಈ ತಂತ್ರಗಳ ಮೂಲಕ ಭಾರತದಲ್ಲಿ ಅನೇಕ ವ್ಯಕ್ತಿಗಳು ಮೋಸಹೋದರು. “ಸೈಬರ್ ಗುಲಾಮರು” ಎಂದು ಕರೆಯಲ್ಪಡುವ ಈ ಹಗರಣ ಕೇಂದ್ರಗಳಲ್ಲಿ ಕೆಲಸ ಮಾಡಲು ಒತ್ತಾಯಿಸಲ್ಪಟ್ಟವರು ದೈನಂದಿನ ಗುರಿಗಳನ್ನು ಪೂರೈಸಲು…
ಬೆಂಗಳೂರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕೆಇಎ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 1ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಎರಡನೇ ಪತ್ರಿಕೆಯ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರಬಾರದು ಮತ್ತು ಪರೀಕ್ಷಾ ನಿಯಮಾವಳಿ ರೀತ್ಯ ನಡೆದುಕೊಳ್ಳಬೇಕು. ಕೇಂದ್ರದೊಳಗೆ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಬಿಡಬೇಕಾಗಿರುವುದರಿಂದ ಸಾಕಷ್ಟು ಮುಂಚಿತವಾಗಿ ಕೇಂದ್ರದಲ್ಲಿರಬೇಕಾಗುತ್ತದೆ. ಕೆಇಎ ಯಿಂದ ಪರೀಕ್ಷಾ ಮೇಲ್ವಿಚಾರಕರನ್ನು ನೇಮಕ ಮಾಡಲಿದ್ದು ಜಿಲ್ಲಾ ಮಟ್ಟದಲ್ಲಿ ಪ್ರತಿ ಕೇಂದ್ರಕೆ ಒಬ್ಬರಂತೆ ನೇಮಕ ಮಾಡಲಾಗುತ್ತದೆ. 144 ಸೆಕ್ಷನ್ ಜಾರಿ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವೇಳೆ…
ನವದೆಹಲಿ:ಹಲವಾರು ರಾಜ್ಯಗಳಲ್ಲಿ ಚಾಲ್ತಿಯಲ್ಲಿರುವ ‘ಬುಲ್ಡೋಜರ್ ನ್ಯಾಯ’ದ ಪ್ರವೃತ್ತಿಯನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 2 ರಂದು ವಿಚಾರಣೆ ನಡೆಸಲಿದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳ ಮನೆಗಳ ಮೇಲೆ ಬುಲ್ಡೋಜರ್ ನಡೆಸಲು ಸರ್ಕಾರ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಜಮಿಯತ್ ಉಲೇಮಾ-ಎ-ಹಿಂದ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಭೂಷಣ್ ಆರ್ ಗವಾಯಿ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಲಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚೆಗೆ ಬುಲ್ಡೋಜರ್ಗಳನ್ನು ಓಡಿಸಿದ ಘಟನೆಗಳನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಮತ್ತು ‘ಬುಲ್ಡೋಜರ್ ಕ್ರಮ’ದಲ್ಲಿ ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಸಲಾಗುತ್ತಿದೆ ಎಂದು ಆರೋಪಿಸಿದೆ. ವಕೀಲ ಫಾರೂಕ್ ರಶೀದ್ ಅವರು ಸಲ್ಲಿಸಿದ ಅರ್ಜಿಯಲ್ಲಿ, ಸಮಾಜದಲ್ಲಿನ ಅಂಚಿನಲ್ಲಿರುವ ಜನರ ವಿರುದ್ಧ, ವಿಶೇಷವಾಗಿ ಅಲ್ಪಸಂಖ್ಯಾತರ ವಿರುದ್ಧ ದಬ್ಬಾಳಿಕೆಯ ಚಕ್ರವನ್ನು ನಡೆಸಲು ಮತ್ತು ಅವರನ್ನು ಬೆದರಿಸಲು, ರಾಜ್ಯ ಸರ್ಕಾರಗಳು ಅವರ ಮನೆಗಳು ಮತ್ತು ಆಸ್ತಿಗಳ ಮೇಲೆ ಬುಲ್ಡೋಜರ್ಗಳನ್ನು ಓಡಿಸಲು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿದ್ದಾರೆ. ಸರ್ಕಾರ ಮತ್ತು ಆಡಳಿತವು ಸಂತ್ರಸ್ತರಿಗೆ ತಮ್ಮನ್ನು ರಕ್ಷಿಸಿಕೊಳ್ಳಲು ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ಅವಕಾಶ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪಿಎಫ್ ಖಾತೆದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಬಡ್ಡಿದರಗಳನ್ನು ಶೇ.7.1ಕ್ಕೆ ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ 01-07-2024ರಿಂದ ದಿನಾಂಕ 30-09-2024ರವರೆಗಿನ ಅವಧಿಗೆ ವಾರ್ಷಿಕ ಶೇ.7.1ಕ್ಕೆ ನಿಗದಿಪಡಿಸಲಾಗಿದೆ ಎಂದಿದ್ದಾರೆ.
ಬೆಂಗಳೂರು : ರಾಜ್ಯದ ಪೊಲೀಸರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸಿವಿಲ್ ಸೇವೆಯ ಅಧಿಕಾರಿ ಮತ್ತು ನೌಕರರಿಗರ ಹಾಗೂ ಕರ್ನಾಟಕ ವೃಂದಕ್ಕೆ ಸೇರಿ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಗೃಹ ನಿರ್ಮಾಣ ಮುಂಗಡದ ಮೊತ್ತವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯ ಸಿವಿಲ್ ಸೇವೆಯ ಅಧಿಕಾರಿ ಮತ್ತು ನೌಕರರಿಗರ ಹಾಗೂ ಕರ್ನಾಟಕ ವೃಂದಕ್ಕೆ ಸೇರಿ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಗೃಹ ನಿರ್ಮಾಣ ಮುಂಗಡದ ಮೊತ್ತವನ್ನು ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಈ ಕೆಳಕಂಡಂತೆ ಹೆಚ್ಚಿಸಿ ಆದೇಶಿಸಿದೆ. L ರಾಜ್ಯ ಸಿವಿಲ್ ಸೇವೆಯ ‘ಎ’ ಗುಂಪಿನ ಅಧಿಕಾರಿಗಳಿಗೆ ಅವರು ಪಡೆಯುತ್ತಿರುವ 70 ತಿಂಗಳ (ಮೂಲ ವೇತನ + ತುಟ್ಟಿ ಭತ್ಯೆ) ಯನ್ನು ರೂ.65.00 ಲಕ್ಷಗಳ ಮಿತಿಯೊಳಗೆ ಮತ್ತು ರಾಜ್ಯ ಸಿವಿಲ್ ಸೇವೆಯ ಇತರೆ ಅಧಿಕಾರಿಗಳು ಮತ್ತು ನೌಕರರಿಗೆ 70 ತಿಂಗಳ (ಮೂಲ ವೇತನ + ತುಟ್ಟಿ…













