Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ಹೊಸ ಸದಸ್ಯರನ್ನು ನೋಂದಾಯಿಸಲು/ನವೀಕರಣಗೊಳಿಸಲು ಮಾರ್ಚ್ 31 ಕೊನೆಯ ದಿನವಾಗಿದೆ. ರಾಜ್ಯಾದ್ಯಂತ ಯಶಸ್ವಿನಿ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಡಿಸೆಂಬರ್-2024 ಮತ್ತು ಜನವರಿ-2025 ರ ತಿಂಗಳುಗಳಲ್ಲಿ ಹೆಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ / ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ಇತರೆ ಸಹಕಾರ ಸಂಘಗಳ ಆಡಳಿತ ಮಂಡಳಿಗೆ ಚುನಾವಣೆ ನಿಗದಿಯಾಗಿದ್ದು, ಇಲಾಖೆಯ ಕ್ಷೇತ್ರ ಸಿಬ್ಬಂದಿಗಳು / ಅಧಿಕಾರಿಗಳು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಇದರಿಂದಾಗಿ ಯಶಸ್ವಿನಿ ನೋಂದಣಿಯಲ್ಲಿ ಹೆಚ್ಚಿನ ಪ್ರಗತಿ ಆಗಿರುವುದಿಲ್ಲವೆಂದು ಹಾಗೂ ನಿಗದಿಪಡಿಸಿರುವ ಗುರಿಯ ಪೈಕಿ ಇಲ್ಲಿಯವರೆಗೆ ಸುಮಾರು 10 ಲಕ್ಷ ಸದಸ್ಯರ ನೋಂದಣಿ ಮಾತ್ರವಾಗಿದ್ದು, ಇನ್ನೂ ಅನೇಕ ಸದಸ್ಯರು ನೋಂದಾಯಿಸಿಕೊಳ್ಳಲು ಆಸಕ್ತರಾಗಿರುವುದರಿಂದ ಯೋಜನೆಯಡಿ ಹೆಚ್ಚಿನ ರೀತಿಯಲ್ಲಿ ಪ್ರಗತಿ ಸಾಧಿಸಲು 2024-25 ನೇ ಸಾಲಿನ ಯಶಸ್ವಿನಿ ಯೋಜನೆಯಡಿ ಸದಸ್ಯರ ನೋಂದಣಿ/ನವೀಕರಣ ಅವಧಿಯನ್ನು ದಿನಾಂಕ: 01-02-2025 ರಿಂದ ದಿನಾಂಕ: 31-03-2025…
ಲೇಹ್ : ಇಂದು ಮುಂಜಾನೆ ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿ ಭೂಕಂಪನದ ಅನುಭವವಾಯಿತು. ಈ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.6 ರಷ್ಟು ದಾಖಲಾಗಿತ್ತು. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಪ್ರಕಾರ, ಈ ಭೂಕಂಪ ಬೆಳಿಗ್ಗೆ 4:32:58 ಕ್ಕೆ ಸಂಭವಿಸಿದೆ. ಭೂಕಂಪದ ಅನುಭವವಾದ ತಕ್ಷಣ ಜನರು ಮನೆಗಳಿಂದ ಹೊರಗೆ ಓಡಿ ಬಂದರು. ಈ ಬೆಳಗಿನ ಜಾವ ಭೂಕಂಪದ ಕೇಂದ್ರಬಿಂದು ಲಡಾಖ್ನ ರಾಜಧಾನಿ ಲೇಹ್ನಲ್ಲಿ 34.35 ಉತ್ತರ ಅಕ್ಷಾಂಶ ಮತ್ತು 78.06 ಪೂರ್ವ ರೇಖಾಂಶದಲ್ಲಿ, 10 ಕಿ.ಮೀ ಆಳದಲ್ಲಿತ್ತು. ಭೂಕಂಪದ ಅನುಭವವಾದ ತಕ್ಷಣ ಎಚ್ಚರಗೊಂಡು ನಂತರ ಮನೆಗಳಿಂದ ಹೊರಗೆ ಬಂದೆವು ಎಂದು ಸ್ಥಳೀಯ ಜನರು ತಿಳಿಸಿದ್ದಾರೆ. ಆದರೆ, ಈ ಭೂಕಂಪದಿಂದ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆಡಳಿತ ಮತ್ತು ವಿಪತ್ತು ನಿರ್ವಹಣಾ ತಂಡವು ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದೆ. https://twitter.com/NCS_Earthquake/status/1903949326323450317?ref_src=twsrc%5Etfw%7Ctwcamp%5Etweetembed%7Ctwterm%5E1903949326323450317%7Ctwgr%5E9bb387f38d9af5f04033ee46871bddc975bbb962%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fhindi%2Fabplivehindi-epaper-dh280f81350c1b4ce8bd566c530306062e%2Fearthquakeaapakejaganesepahaledolidharatibharatmephirbhukampgharoseuthakarbhagelog-newsid-n657236489 ಲಡಾಖ್ ಹಿಮಾಲಯ ಪರ್ವತಗಳ ಬಳಿ ಇರುವುದರಿಂದ ಇದನ್ನು ಭೂಕಂಪದ ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಲಾಗಿದೆ. ಇಲ್ಲಿ ಸಣ್ಣ ಭೂಕಂಪಗಳು…
ನವದೆಹಲಿ : ಅತ್ಯಂತ ಭಯಾನಕ ಸಾಂಕ್ರಾಮಿಕ ರೋಗಗಳಲ್ಲಿ ಒಂದಾದ ಕ್ಷಯರೋಗವು ನಿಧಾನವಾಗಿ ಪ್ರಾರಂಭವಾಗುತ್ತದೆ ಮತ್ತು ಸಾಂದರ್ಭಿಕವಾಗಿ ನಿರೀಕ್ಷೆಗಿಂತ ಹೆಚ್ಚು ಕಾಲ ಇರುತ್ತದೆ. ಆದಾಗ್ಯೂ, ಸೌಮ್ಯವಾದ ಅಸ್ವಸ್ಥತೆಯು ನಂತರ ಹೋಗದಿರುವ ಆಳವಾದ, ನಿರಂತರ ಕೆಮ್ಮಾಗಿ ಬದಲಾಗಬಹುದು. ಇದು ಮುಂದುವರೆದಂತೆ, ಇದು ಆಯಾಸ, ಅತಿಯಾದ ಬೆವರು, ತೂಕ ನಷ್ಟ, ಜ್ವರ ಮತ್ತು ದೌರ್ಬಲ್ಯವನ್ನು ತರುತ್ತದೆ, ಇದು ಸರಳ ಕೆಲಸಗಳನ್ನು ಸಹ ಆಯಾಸಗೊಳಿಸುತ್ತದೆ. ಕ್ಷಯರೋಗ (ಟಿಬಿ) ಗಂಭೀರ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದು ಪ್ರಾಥಮಿಕವಾಗಿ ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ ಆದರೆ ದೇಹದ ಇತರ ಭಾಗಗಳ ಮೇಲೂ ಪರಿಣಾಮ ಬೀರುತ್ತದೆ. ತಡೆಗಟ್ಟಬಹುದಾದ ಮತ್ತು ಚಿಕಿತ್ಸೆ ನೀಡಬಹುದಾದರೂ, ಟಿಬಿ ಪ್ರಪಂಚದಾದ್ಯಂತ ಸಾವಿಗೆ ಪ್ರಮುಖ ಕಾರಣವಾಗಿದೆ. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಲರ್ಜಿ ಅಂಡ್ ಇನ್ಫೆಕ್ಷಿಯಸ್ ಡಿಸೀಸಸ್ (NIAID) ಕ್ಷಯರೋಗವನ್ನು ಅರ್ಥಮಾಡಿಕೊಳ್ಳುವ ಮತ್ತು ಪರಿಹರಿಸುವ ಮಹತ್ವವನ್ನು ವಿವರಿಸುತ್ತದೆ. ಕ್ಷಯರೋಗ (ಟಿಬಿ) ದೂರದ ಬೆದರಿಕೆಯಂತೆ ತೋರಬಹುದು, ಆದರೆ ಇದು ವಿಶ್ವಾದ್ಯಂತ ಪ್ರಮುಖ ಸಾಂಕ್ರಾಮಿಕ ರೋಗವಾಗಿ ಉಳಿದಿದೆ. ಭಾರತದಲ್ಲಿ, ವಿಶ್ವ ಆರೋಗ್ಯ ಸಂಸ್ಥೆಯ 2023…
ಬೆಂಗಳೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ. ಹೌದು,ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಹಲವು ಸಚಿವರು ಭಾಗಿಯಾಗಲಿದ್ದಾರೆ. ಒಳಮೀಸಲಾತಿಗಾಗಿ ದಶಕಗಳಿಂದ ಹೋರಾಟ ನಡೆಯುತ್ತಿದೆ. ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ. 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ, ಶೇ.90 ರಷ್ಟು ಸಮುದಾಯಗಳಿಗೆ ಸಮಾಧಾನ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಈ ಹಿಂದೆ ಹೇಳಿದ್ದರು.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಗೃಹಲಕ್ಷ್ಮಿ ಯೋಜನೆಯ ಹಣ 2 ತಿಂಗಳ ಹಿಂದಿನ ಕಂತು ಜಮೆ ಆಗಿತ್ತು. ಆದರೆ ಇತ್ತೀಚಿನ 2 ಕಂತುಗಳ ಹಣ ಇನ್ನು ಜಮೆ ಆಗಿಲ್ಲ ಎಂಬುದು ಯಜಮಾನಿಯರ ಆರೋಪವಾಗಿದೆ. ಈ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇನ್ನೊಂದು ವಾರ ಅಂದರೆ ಮಾರ್ಚ್ 31ರ ಬಳಿಕ 2 ಕಂತುಗಳ ಹಣ ಖಾತೆಗೆ ಜಮೆ ಆಗಲಿದೆ ಎಂದ್ ಸ್ಪಷ್ಟನೆ ನೀಡಿದ್ದಾರೆ. ಹೌದು ಈ ಕುರಿತು ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣವನ್ನು ಮಾರ್ಚ್ 31ರ ಬಳಿಕ ಅಂದರೆ ಇನ್ನೊಂದು ವಾರ ಬಿಟ್ಟು ಹಾಕಲಾಗುತ್ತದೆ. ಈಗಾಗಲೇ ಹಿಂದಿನ 2 ಕಂತುಗಳ ಹಣ ಖಾತೆಗೆ ಹಾಕಲಾಗಿದೆ. ಇನ್ನು ಉಳಿದ 2 ಕಂತುಗಳ ಹಣವನ್ನು ಮಾರ್ಚ್ 31 ರ ನಂತರ ಅಕೌಂಟಿಗೆ ಹಾಕಲಾಗುತ್ತದೆ ಎಂದು ಅವರು ಸ್ಪಷ್ಟನೆ ನೀಡಿದರು. ನಮ್ಮ ಸರ್ಕಾರದ ಅವಧಿಯಲ್ಲೆ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 2000 ರೂಪಾಯಿ ಹೆಚ್ಚಿಸಿದೆವು. ಅದಾದ ನಂತರ ಯಾವುದೇ…
ಚಿಕ್ಕಬಳ್ಳಾಪುರ: ಜಿಲ್ಲೆಯ ವಿಶ್ವವಿಖ್ಯಾತ ನಂದಿ ಗಿರಿಧಾಮವನ್ನು ನವೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ಇಂದಿನಿಂದ ಒಂದು ತಿಂಗಳುಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು, ನಂದಿ ಗಿರಿಧಾಮದಲ್ಲಿ ರಸ್ತೆ ಡಾಂಬಾರೀಕರಣ ಕಾಮಗಾರಿ ಸೇರಿದಂತೆ ಇತರೆ ನವೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್.24ರ ಇಂದಿನಿಂದ ಏಪ್ರಿಲ್ 25ರವರೆಗೆ ಒಂದು ತಿಂಗಳವರೆಗೆ ಬಂದ್ ಮಾಡಲಾಗುತ್ತಿದೆ ಎಂದಿದ್ದಾರೆ. ಪ್ರವಾಸಿಗರ ಹಿತದೃಷ್ಠಿಯಿಂದ ವೀಕೆಂಡ್ ಶುಕ್ರವಾರ ಸಂಜೆ 6.30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಮಾತ್ರವೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಇನ್ನುಳಿದಂತೆ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರದಂದು ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಾರಾಂತ್ಯದ ದಿನವಾದಂತ ಶುಕ್ರವಾರ ಸಂಜೆ 6:30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆ ವರೆಗೆ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಉಳಿದಂತೆ ವಾರದ 5 ದಿನಗಳು ಸಂಚಾರಕ್ಕೆ ಸಂಪೂರ್ಣ ನಿರ್ಬಂಧಿಸಲಾಗಿದೆ. ಮಾರ್ಚ್ 24ರ ಇಂದಿನಿಂದ ಏಪ್ರಿಲ್ 25ರ ವರೆಗೂ 1…
ನವದೆಹಲಿ : ಕೇಂದ್ರ ಸರ್ಕಾರವು ಏಪ್ರಿಲ್ 1 ರಿಂದ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಅನ್ನು ಪ್ರಾರಂಭಿಸಲಿದೆ, ನಿವೃತ್ತಿಯ ನಂತರ ಸ್ಥಿರ ಆದಾಯವನ್ನು ಬಯಸುವ ಉದ್ಯೋಗಿಗಳಿಗೆ ಇದು ವಿಶೇಷವಾಗಿ ಪ್ರಯೋಜನಕಾರಿಯಾಗಿದೆ. ಜನವರಿ 24 ರಂದು ಸರ್ಕಾರವು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ಗೆ ಒಂದು ಆಯ್ಕೆಯಾಗಿ ಏಕೀಕೃತ ಪಿಂಚಣಿ ಯೋಜನೆ (UPS) ಅನ್ನು ಅಧಿಕೃತವಾಗಿ ಘೋಷಿಸಿತ್ತು ಮತ್ತು ಈಗ ಈ ಯೋಜನೆಯು ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆ ಎಂಬುದು ಗಮನಿಸಬೇಕಾದ ಸಂಗತಿ. NPS ಅಡಿಯಲ್ಲಿ ಈಗಾಗಲೇ ನೋಂದಾಯಿಸಿಕೊಂಡಿರುವ ಸರ್ಕಾರಿ ನೌಕರರಿಗೆ ಮಾತ್ರ UPS ಅನ್ವಯವಾಗುತ್ತದೆ. ಸರ್ಕಾರಿ ನೌಕರರು NPS ಅಥವಾ UPS ಎರಡರಲ್ಲಿ ಒಂದನ್ನು ಆಯ್ಕೆ ಮಾಡುವ ಆಯ್ಕೆಯನ್ನು ಹೊಂದಿರುತ್ತಾರೆ. ಇದರಿಂದ ಹೇಗೆ ಪ್ರಯೋಜನ ಪಡೆಯಬಹುದು ಎಂಬುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಎಂದರೇನು? ಮೊದಲಿಗೆ, ಯುಪಿಎಸ್ ಎಂದರೇನು ಎಂದು ತಿಳಿಯೋಣ? ಹಾಗಾಗಿ ಯುಪಿಎಸ್ ಅಡಿಯಲ್ಲಿ ಈಗ ಕೇಂದ್ರ ಉದ್ಯೋಗಿಗಳಿಗೆ ಸ್ಥಿರ ಪಿಂಚಣಿ…
ಬೆಂಗಳೂರು : ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅನುಮೋದನೆ ನೀಡುವ ಕುರಿತು ಹೊರಡಿಸಿರುವ ಆದೇಶಗಳಂತೆ ಕ್ರಮವಹಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಸಂಬಂಧಿಸಿದಂತೆ ಉಲ್ಲೇಖ(1) ರ ಆದೇಶದಲ್ಲಿ ವಾಟರ್ ಅಪರೇಟರ್, ಅಟೆಂಡರ್ ಹಾಗೂ ಸ್ವಚ್ಛತಾಗಾರರಿಗೆ ದಿನಾಂಕ:31.10.2017 ಕ್ಕಿಂತ ಹಿಂದೆ ನೇಮಕಗೊಂಡು, ಕನಿಷ್ಠ ವಿದ್ಯಾರ್ಹತೆ ಹೊಂದಿಲ್ಲದ ಕಾರಣಕ್ಕೆ ಅನುಮೋದನೆಗಾಗಿ ಬಾಕಿ ಇರುವ ಸಿಬ್ಬಂದಿಗಳಿಗೆ ಕನಿಷ್ಠ ವಿದ್ಯಾರ್ಹತೆಯನ್ನು ಹೊರತುಪಡಿಸಿ (ಕೈಬಿಟ್ಟು) ಸಭಾ ನಡವಳಿ ವೇತನ ಪಾವತಿ ಹಾಜರಾತಿ ಆಧಾರದ ಮೇಲೆ ಒಂದು ಬಾರಿಗೆ ಜಿಲ್ಲಾ ಪಂಚಾಯತಿಯಿಂದ ಘಟನೋತ್ತರವಾಗಿ ಅನುಮೋದನೆ ನೀಡಲು ಆದೇಶಿಸಲಾಗಿರುತ್ತದೆ. ಉಲ್ಲೇಖ(2)ರಲ್ಲಿ ದಿನಾಂಕ:31.10.2017 ಕ್ಕಿಂತ ಹಿಂದೆ ನೇಮಕಗೊಂಡು, ಎಲ್ಲಾ ದಾಖಲೆಗಳು ಸರಿಯಾಗಿದ್ದು, ಜಿಲ್ಲಾ ಪಂಚಾಯತಿಯಿಂದ ಅನುಮೋದನೆಗೆ ಬಾಕಿ ಇರುವ ಸಿಬ್ಬಂದಿಗಳಿಗೆ ಅನುಮೋದನೆ ನೀಡುವ ಕುರಿತು ಆದೇಶಿಸಲಾಗಿರುತ್ತದೆ. ಉಲ್ಲೇಖ(3) ರಲ್ಲಿ ಮೇಲ್ಕಂಡ ಆದೇಶಗಳನ್ವಯ ವಹಿಸಿರುವ ಕ್ರಮದ ಕುರಿತು ಮಾಹಿತಿಯನ್ನು ನೀಡಲು ಎಲ್ಲಾ ಜಿಲ್ಲಾ ಪಂಚಾಯತಿಗಳಿಗೆ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮುಡಾ ಪ್ರಕರಣದ ಕೇಸ್ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣಕ್ಕೆ ಹೊಸ ತಿರುವು ಎನ್ನುವಂತೆ ತನ್ನ ಕೇಸ್ ತಾನೇ ಇಂದು ದೂರುದಾರ ಸ್ನೇಹಮಯಿ ಕೃಷ್ಣ ವಾದಿಸಲಿದ್ದಾರೆ. ಈ ಬಗ್ಗೆ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡಿರುವಂತ ಸ್ನೇಹಮಯಿ ಕೃಷ್ಣ ಅವರು, ಮುಡಾ ಪ್ರಕರಣದಲ್ಲಿ 1ನೇ ಆರೋಪಿ ಸಿದ್ದರಾಮಯ್ಯ, 2ನೇ ಆರೋಪಿ ಪಾರ್ವತಿ, 3ನೇ ಆರೋಪಿ ಮಲ್ಲಿಕಾರ್ಜುನ ಸ್ವಾಮಿ, 4ನೇ ಆರೋಪಿ ದೇವರಾಜುರವರನ್ನು ಆದಷ್ಟು ಬೇಗ ನಿರಪರಾಧಿಗಳು ಎಂದು ಬಿಂಬಿಸುವ ಸಲುವಾಗಿ ಅಸ್ಪಷ್ಟವಾದ ಮತ್ತು ಸುಳ್ಳಿನಿಂದ ಕೂಡಿದ ವರದಿಯನ್ನು ಸಲ್ಲಿಸಿರುವ ಲೋಕಾಯುಕ್ತ ಅಧಿಕಾರಿಗಳು ಮಾನ್ಯ ನ್ಯಾಯಾಲಯಕ್ಕೆ ಯಾವ ರೀತಿಯಲ್ಲಿ ಸ್ಪಷ್ಟೀಕರಣ ಕೊಡುತ್ತಾರೆ ? ಎಂಬ ಕುತೂಹಲದಿಂದ ನಾಳೆ ನಾನು ಮಾನ್ಯ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದೇನೆ ಎಂದಿದ್ದಾರೆ. ನನ್ನ ತಕರಾರು ಅರ್ಜಿಯಲ್ಲಿನ ಮತ್ತು ನನ್ನ ಮನವಿಯಲ್ಲಿನ ಅಂಶಗಳನ್ನು ಆಧರಿಸಿ ಮಾನ್ಯ ನ್ಯಾಯಾಲಯ ಕೇಳಿರುವ ವಿಚಾರಗಳಿಗೆ ಲೋಕಾಯುಕ್ತ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಸ್ಪಷ್ಟೀಕರಣ ಕೊಟ್ಟರೆ, ಹಾಲಿ ಆರೋಪಿಗಳು ಅಪರಾಧ ಕೃತ್ಯ ಎಸಗಿದ್ದಾರೆ…
BIG NEWS : ಬೆಳಗಾವಿಯಲ್ಲಿ ಇಂದು ಅಪರೂಪದ ಕಾರ್ಯಕ್ರಮ : ಇದೇ ಮೊದಲ ಬಾರಿಗೆ 3,000 ಗರ್ಭಿಣಿಯರಿಗೆ `ಸಾಮೂಹಿಕ ಸೀಮಂತ’.!
ಬೆಳಗಾವಿ: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಇಂದು 3,000 ಸಾವಿರ ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಐತಿಹಾಸಿಕ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿದೆ. 3000 ಮಹಿಳೆಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮ, ವಿಕಲಚೇತನರಿಗೆ ವಿವಿಧ ಸಲಕರಣೆಗಳ ವಿತರಣೆ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ಮಾರ್ಚ್ 24ರಂದು ಬೆಳಿಗ್ಗೆ 3000 ಗರ್ಭಿಣಿಯರಿಗೆ ಸೀರೆ, ಹೂವು, ಹಣ್ಣು ಕಾಯಿ, ಅರಿಶಿನ-ಕುಂಕುಮ, ಬಳೆ ಹೀಗೆ ಪಂಚ ಬಗೆಯ ಮಂಗಳಕರ ಸಾಮಗ್ರಿಗಳನ್ನೊಳಗೊಂಡು ಉಡಿ ತುಂಬುವ ಶಾಸ್ತ್ರದೊಂದಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ. ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ 1000 ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದು, ವಿಕಲಚೇತನರಿಗೆ – ತ್ರಿಚಕ್ರ ಸ್ಕೂಟರ್…