Author: kannadanewsnow57

ಬೆಂಗಳೂರು : 2017-18ನೇ ಸಾಲಿನ ಪೂರ್ವದಲ್ಲಿ ಪ್ರಾರಂಭಗೊಂಡಿರುವ ಖಾಸಗಿ ಶಾಲೆಗಳಿಗೆ 2024-25ನೇ ಸಾಲಿಗೆ ಮಾನ್ಯತೆ ನವೀಕರಣ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಮೇಲಿನ ವಿಷಯ ಹಾಗೂ ಉಲ್ಲೇಖಗಳಂತೆ, ಖಾಸಗಿ ಅನುದಾನಿತ / ಅನುದಾನರಹಿತ ಶಾಲೆಗಳು 2024-25ನೇ ಸಾಲಿಗೆ ಮಾನ್ಯತೆ ನವೀಕರಣಕ್ಕೆ ನಿಯಮಾನುಸಾರ ಎಲ್ಲಾ ಅಗತ್ಯ ದಾಖಲೆ ಮತ್ತು ಮಾಹಿತಿಗಳೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಸಕ್ಷಮ ಪ್ರಾಧಿಕಾರದಿಂದ ಮಾನ್ಯತೆ ನವೀಕರಣ ಪಡೆಯಬೇಕಿರುತ್ತದೆ. ಉಲ್ಲೇಖ [2]ರಲ್ಲಿ ಖಾಸಗಿ ಅನುದಾನಿತ/ಅನುದಾನರಹಿತ ಶಾಲೆಗಳು ಮಾನ್ಯ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ಸುರಕ್ಷತಾ ಪ್ರಮಾಣ ಪತ್ರ ಮತ್ತು ಅಗ್ನಿ ಸುರಕ್ಷತಾ ಸಮಾಪನ ಪತ್ರ ಹಾಗೂ ಸರ್ಕಾರದ ಆದೇಶದಂತೆ ಶಾಲಾ ನಿವೇಶನವು ಶೈಕ್ಷಣಿಕ ಉದ್ದೇಶಕ್ಕಾಗಿ ಭೂ ಪರಿವರ್ತನಾ ಆದೇಶ ಹಾಗೂ ಅನುಮೋದಿತ ಕಟ್ಟಡ ನಕ್ಷೆಯನ್ನು ಪಡೆದು ಮಾನ್ಯತೆ ನವೀಕರಣಕ್ಕಾಗಿ ದಿನಾಂಕ:30-09-2024ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಅದರಂತೆ, ನಿಯಮಾನುಸಾರ ಎಲ್ಲಾ ಸುರಕ್ಷತಾ ಪ್ರಮಾಣ ಪತ್ರಗಳು, ದಾಖಲೆಗಳು ಮತ್ತು ಇತರೆ…

Read More

ದಾವಣಗೆರೆ : ಆಂಧ್ರಪ್ರದೇಶದ ಕರ್ನೂಲ್ ಸ್ಕಂದ ಶಾಪಿಂಗ್ ಮಾಲ್, ಓಲ್ಡ್ ಟಾಕೀಸ್ ವಿಳಾಸದ ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ಕೋಡೆ ರಮಣಯ್ಯ ತಂದೆ ಕೋಡೆ ಶ್ರೀನಿವಾಸಲು ಇವರು ಈ ಪ್ರೈವೇಟ್ ಲಿಮಿಟೆಡ್‍ನಲ್ಲಿ ಠೇವಣಿ ಇಟ್ಟಲ್ಲಿ 60 ದಿನಗಳಲ್ಲಿ ಹಣ ದ್ವಿಗುಣವಾಗಲಿದೆ ಎಂದು ನಂಬಿಸಿ 106 ಗ್ರಾಹಕರಿಂದ ರೂ.4,79,99,000 ಗಳನ್ನು ಹೂಡಿಕೆ ಮಾಡಿಸಿಕೊಂಡು ಮೋಸ ಮಾಡಲಾಗಿದೆ ಎಂದು ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಗ್ರಾಮದ ರಮೇಶಪ್ಪ ಇವರು ನೀಡಿದ ದೂರು ಮೇರೆಗೆ ಪ್ರಕರಣ ದಾಖಲಿಸಿ ದಾವಣಗೆರೆ ಸಿಐಡಿ, ಸಿಐಯು ಘಟಕದಿಂದ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಉಪಾಧೀಕ್ಷಕರಾದ ಮಾಲತೇಶ್ ಎನ್.ಕೂನಬೇವು ತಿಳಿಸಿದ್ದಾರೆ. ರಮೇಶಪ್ಪನಿಗೆ ಪರಿಚಯಸ್ಥರಾದ ಟಿ.ವಿ.ಶೇಷಯ್ಯ ಮತ್ತು ಎಂ.ಏಳುಕೊಂಡಲು ಇವರು ಕ್ರೌಡ್ ಕ್ಲಬ್ ಇಂಟರ್ ನ್ಯಾಷನಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಹಣ ಠೇವಣಿ ಇಟ್ಟಲ್ಲಿ 60 ದಿನಗಳಲ್ಲಿ ಹಣ ದ್ವಿಗುಣವಾಗಲಿದೆ ಎಂದು ತಿಳಿಸಿ ಕಂಪನಿಯ ಙes ಬ್ಯಾಂಕ್ ಖಾತೆ 114563300000374 ಗೆ ಹಣ ವರ್ಗಾವಣೆ ಮಾಡಿದ್ದು 60 ದಿನಗಳ ನಚಿತರ ರಮೇಶಪ್ಪ…

Read More

ಬೆಂಗಳೂರು: ನಗರದಲ್ಲಿ ದಿನಾಂಕ 07-09-2024ರಿಂದ ಆರಂಭಗೊಳ್ಳುವಂತ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ. ಜೊತೆ ಜೊತೆಗೆ ಗಣೇಶೋತ್ಸವದ ವೇಳೆಯಲ್ಲಿ ಆ ನಿಯಮಗಳನ್ನು ಪಾಲಿಸುವುದು ಕಡ್ಡಾಯ ತಪ್ಪಿದ್ರೇ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂಬುದಾಗಿ ಪೊಲೀಸ್ ಇಲಾಖೆ ಎಚ್ಚರಿಸಿದೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ:07/09/2024 ರಿಂದ ಬೆಂಗಳೂರು ನಗರಾದ್ಯಂತ ಸಾರ್ವಜನಿಕರು ಗೌರಿ-ಗಣೇಶ ಹಬ್ಬವನ್ನು ಆಚರಿಸುವರು. ಈ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ. 1. ನಗರದ ಎಲ್ಲಾ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ತಮ್ಮ ವ್ಯಾಪ್ತಿಗಳಲ್ಲಿ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಅರ್ಜಿಗಳನ್ನು ಪಡೆದುಕೊಳ್ಳುವುದು. 2022 ಮತ್ತು 2023ನೇ ಸಾಲಿನಲ್ಲಿ ಪ್ರತಿಷ್ಠಾಪಿಸಲಾದ ಗಣಪತಿ ವಿಗ್ರಹಗಳ ಆಧಾರದ ಮೇಲೆ ಯಾವ ಯಾವ ಸ್ಥಳಗಳಲ್ಲಿ ಪ್ರಸ್ತುತ ಸಾಲಿನಲ್ಲಿ ಪ್ರತಿಷ್ಠಾಪಿಸಬಹುದು ಎಂಬುದನ್ನು ಗುರುತಿಸಿಕೊಳ್ಳುವುದು, ಸಂಘ-ಸಂಸ್ಥೆಗಳು ಗಣಪತಿ ವಿಗ್ರಹವನ್ನು ಪ್ರತಿಷ್ಠಾಪಿಸುವ ಜಾಗ, ದಿನ,…

Read More

ಬೆಂಗಳೂರು : ಸರ್ಕಾರಿ ನೌಕರನು ಒಂದು ಹೊಸ ಹುದ್ದೆಗೆ ಹಾಜರಾಗಲು ಅಥವಾ ಅವನನ್ನು ನಿಯುಕ್ತಿಗೊಳಿಸಿದ ಸ್ಥಳಕ್ಕೆ ಹೋಗಲು ಅನುಮತಿಸಲಾದ ಕಾಲವನ್ನು ನಾವು ಸೇರಿಕೆ ಕಾಲ ಎಂದು ಕರೆಯುತ್ತೆವೆ. ಕರ್ನಾಟಕ ರಾಜ್ಯ ಸೇವಾ ನಿಯಮಗಳು 1958 ರ ನಿಯಮ 8 (24) ಸೇರಿಕೆ ಕಾಲ ಸರ್ಕಾರಿ ನೌಕರನಿಗೆ ಯಾವ ಸಂದರ್ಭದಲ್ಲಿ ಲಭಿಸುತ್ತದೆ? ಯಾರೇ ಒಬ್ಬ ಸರ್ಕಾರಿ ನೌಕರನು ಸರ್ಕಾರದ ಹಿತಾಸಕ್ತಿ ಮೇರೆಗೆ ವರ್ಗಾವಣೆಯಾದಾಗ, ಆತನಿಗೆ ಆ ಹುದ್ದೆಗೆ ಹೋಗಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೇರಿಕೆ ಕಾಲ ಸಿಗುತ್ತದೆ. 3.ಯಾವ ಸಂದರ್ಭದಲ್ಲಿ ಒಬ್ಬ ಸರ್ಕಾರಿ ನೌಕರನಿಗೆ ಸೇರಿಕೆ ಕಾಲ ಲಭಿಸುವದಿಲ್ಲ? ಯಾರೇ ಒಬ್ಬ ಸರ್ಕಾರಿ ನೌಕರನನ್ನು ಯಾವುದೇ ಒಂದು ವಿಶೇಷ ಕರ್ತವ್ಯಕ್ಕೆ ತಾತ್ಕಾಲಿಕವಾಗಿ ನಿಯೋಜಿಸಿದಾಗ ಮತ್ತು ಆತನ ಸ್ವಂತ ಕೋರಿಕೆಯ ಮೇಲೆ ವರ್ಗಾವಣೆಯಾದಾಗ ಆತನಿಗೆ ಆ ಸ್ಥಳವನ್ನು ಹೋಗಿ ತಲುಪಲು ಬೇಕಾಗುವ ಪ್ರಯಾಣದ ಅವಧಿಯನ್ನು ಬಿಟ್ಟು ಆತನಿಗೆ ಯಾವುದೇ ಸೇರಿಕೆ ಕಾಲ ಲಭಿಸುವುವುದಿಲ್ಲ. ವಹಿಸಿಕೊಟ್ಟಿದ್ದರೆ, ಆತನು ತನ್ನ ಮುಂದಿನ ಕರ್ತವ್ಯದ ಕಾರ್ಯಾಭಾರವನ್ನು ಮುಂದಿನ ಕೆಲಸದ…

Read More

ಬೆಂಗಳೂರು: ರಾಜ್ಯಪಾಲರು ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ತಮ್ಮ ಮುಂದೆ ವಿಚಾರಣೆಗೆ ಅನುಮತಿ ಕೋರಿ ಬಾಕಿ ಇರುವ ಪ್ರಕರಣಗಳಲ್ಲೂ ಅನುಮತಿ ನೀಡಬೇಕು ಎಂದು ಮನವಿ ಮಾಡಲು ಕಾಂಗ್ರೆಸ್ ಪಕ್ಷದ ವತಿಯಿಂದ ಇಂದು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ರಾಜ್ಯದ ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಲು ಒತ್ತಾಯಿಸಿ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಕೈಬಿಡಲು ಆಗ್ರಹಿಸಿ ರಾಜಭವನ ಚಲೋ ನಡೆಸಲಿದ್ದು, ಕಾಂಗ್ರೆಸ್ ಪಕ್ಷದ ಎಲ್ಲಾ ಸಂಸದರು, ಸಚಿವರು, ಶಾಸಕರು ಕೂಡ ಭಾಗಿಯಾಗಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ತೆರಲಿ ಮನವಿ ಸಲ್ಲಿಸಲಾಗುವುದು. ಈ ವೇಳೆ ಮುಖ್ಯಮಂತ್ರಿಗಳು, ಎಲ್ಲಾ ಸಚಿವರು, ಕಾಂಗ್ರೆಸ್ ಶಾಸಕರು, ವಿಧಾನಪರಿಷತ್ ಸದಸ್ಯರು ಹಾಗೂ ಸಂಸದರು ಉಪಸ್ಥಿತರಿರಲಿದ್ದಾರೆ.

Read More

ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯಿಂದ 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ.  ಇಂದಿನಿಂದ  ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಸೆಪ್ಟೆಂಬರ್.7 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. 15 ವರ್ಷಗಳಿಗೂ ಹೆಚ್ಚು ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದಂತ ಅನುಭವ, UGC ನಿಗದಿತ ವಿದ್ಯಾರ್ಹತೆ ಹೊಂದಿರುವವರಿಗೆ 40,000 ವರೆಗೆ ವೇತನ ಸಿಗಲಿದೆ. ಈ ಕುರಿತಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ) ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಈ ಕೆಳಕಂಡಂತೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 31-08-2024ರಿಂದ ಆರಂಭಗೊಳ್ಳಲಿದೆ.…

Read More

ನವದೆಹಲಿ : ವಿಶ್ವ ಆರೋಗ್ಯ ಸಂಸ್ಥೆಯ (WHO) ಹೊಸ ವರದಿಯಲ್ಲಿ ಆಘಾತಕಾರಿ ಸಂಗತಿಯೊಂದು ಬಹಿರಂಗವಾಗಿದೆ. ಹದಿಹರೆಯದವರಲ್ಲಿ ಕಾಂಡೋಮ್ ಮತ್ತು ಗರ್ಭನಿರೋಧಕ ಮಾತ್ರೆಗಳ ಬಳಕೆ ಕಡಿಮೆಯಾಗುತ್ತಿದೆ, ಇದು ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದೆ. ಈ ವರದಿಯು ಯುರೋಪಿಯನ್ ದೇಶಗಳಲ್ಲಿ, ಸುಮಾರು ಮೂರನೇ ಒಂದು ಭಾಗದಷ್ಟು ಹುಡುಗರು ಮತ್ತು ಹುಡುಗಿಯರು ಕೊನೆಯ ದೈಹಿಕ ಸಮಯದಲ್ಲಿ ಕಾಂಡೋಮ್ ಅಥವಾ ಗರ್ಭನಿರೋಧಕ ಮಾತ್ರೆಗಳನ್ನು ತೆಗೆದುಕೊಳ್ಳಲಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಹೇಳುತ್ತದೆ. 2018 ರಿಂದ ಈ ಅಭ್ಯಾಸದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಕಾರಣದಿಂದಾಗಿ, ಅಸುರಕ್ಷಿತ ಲೈಂಗಿಕತೆಯಿಂದ ಉಂಟಾಗುವ ರೋಗಗಳು ಮತ್ತು ಅನಗತ್ಯ ಗರ್ಭಧಾರಣೆಯ ಅಪಾಯವು ಹೆಚ್ಚಾಗಿದೆ. WHO ಡೇಟಾ ಏನು ಹೇಳುತ್ತದೆ? WHO ಇತ್ತೀಚೆಗೆ ಯುರೋಪ್ ಮತ್ತು ಮಧ್ಯಪ್ರಾಚ್ಯದ 42 ದೇಶಗಳಲ್ಲಿ ಸಮೀಕ್ಷೆಯನ್ನು ನಡೆಸಿತು. ಇದರಲ್ಲಿ 15 ವರ್ಷ ವಯಸ್ಸಿನ 2,42,000 ಹದಿಹರೆಯದವರು ಸೇರಿದ್ದಾರೆ. ಅವರಿಗೆ ಕೇಳಿದ ಪ್ರಶ್ನೆಗಳ ಪ್ರಕಾರ, ಕೊನೆಯ ಬಾರಿ ಯಾರೊಂದಿಗಾದರೂ ಸಂಬಂಧ ಹೊಂದಿದ್ದಾಗ ಕಾಂಡೋಮ್ ಬಳಸಿದ ಹುಡುಗರ ಸಂಖ್ಯೆ 2014 ರಲ್ಲಿ 70% ರಿಂದ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರಿನ ಕೆ.ಆರ್.ಪುರಂನ ಐಟಿಐ ಗೇಟ್ ಬಳಿ ಬಿಎಂಟಿಸಿ ಬಸ್-ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಕೆ.ಆರ್.ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಗೆ ಒಳಿತಾಗಲಿ ಎಂದು ಹಾರೈಸಿ ಬಳ್ಳಾರಿಯ ಶ್ರೀ ಕನಕದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಹೂವಿನ ಹಾರ ಹಾಕುವ ವೇಳೆ ಅಭಿಮಾನಿಯೊಬ್ಬ ಎಡವಟ್ಟು ಮಾಡಿಕೊಂಡಿದ್ದು, ದೇವಿ ತಲೆ ಮೇಲೆ ಕಾಲಿಟ್ಟಿದ್ದು, ವಿವಾದಕ್ಕೆ ಕಾರಣವಾಗಿದೆ. ಬಳ್ಳಾರಿಯ ಶ್ರೀಕನಕ ದುರ್ಗಮ್ಮ ದೇವಿಗೆ ಹೂವಿನಹಾರ ಹಾಕುವಾಗ ಕ್ರೇನ್ ಬಳಸಲಾಗುತ್ತದೆ. ಆದರೆ ದರ್ಶನ್ ಅಭಿಮಾನಿಗಳು ಮೂರ್ತಿ ಮೇಲೆ ಹತ್ತಿ ಹೂವಿನ ಹಾರ ಹಾಕಿದ್ದು, ವಿವಾದ ಕಾರಣವಾಗಿದೆ. ಈ ಸಂಬಂಧ ಅಭಿಮಾನಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೊಲೀಸರಿಗೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇನ್ನು ದರ್ಶನ್ ಒಳಿತಿಗೆ ಹಾರೈಸಿಕ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ದರ್ಶನ್ ಗೆ ನೀಡಲು ಕಾರಾಗೃಹದ ಬಳಿ ಅಭಿಮಾನಿಗಳು ಬಂದಿದ್ದರು. ಆದರೆ ಪೊಲೀಸರು ಅದಕ್ಕೆ ಅನುಮತಿ ನಿರಾಕರಿಸಿದ್ದು, ನಂತರ ಅಭಿಮಾನಿಗಳು ಪ್ರಸಾದವನ್ನು ಬ್ಯಾರಿಕೇಡ್ ಮೇಲೆ ಇಟ್ಟು ಹೋಗಿದ್ದಾರೆ.

Read More

ಬೆಂಗಳೂರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿನ ಕಂಡಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 1 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದು ಪರೀಕ್ಷಾ ಕೇಂದ್ರಗಳಲ್ಲಿ ನಡೆಯುವ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಕೆಇಎ ನಿರ್ದೇಶನದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಸೆಪ್ಟೆಂಬರ್ 1ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ಮೊದಲ ಪತ್ರಿಕೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ರವರೆಗೆ ಎರಡನೇ ಪತ್ರಿಕೆಯ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಕೇಂದ್ರದೊಳಗೆ ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ತರಬಾರದು ಮತ್ತು ಪರೀಕ್ಷಾ ನಿಯಮಾವಳಿ ರೀತ್ಯ ನಡೆದುಕೊಳ್ಳಬೇಕು. ಕೇಂದ್ರದೊಳಗೆ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಬಿಡಬೇಕಾಗಿರುವುದರಿಂದ ಸಾಕಷ್ಟು ಮುಂಚಿತವಾಗಿ ಕೇಂದ್ರದಲ್ಲಿರಬೇಕಾಗುತ್ತದೆ. ಕೆಇಎ ಯಿಂದ ಪರೀಕ್ಷಾ ಮೇಲ್ವಿಚಾರಕರನ್ನು ನೇಮಕ ಮಾಡಲಿದ್ದು ಜಿಲ್ಲಾ ಮಟ್ಟದಲ್ಲಿ ಪ್ರತಿ ಕೇಂದ್ರಕೆ ಒಬ್ಬರಂತೆ ನೇಮಕ ಮಾಡಲಾಗುತ್ತದೆ. 144 ಸೆಕ್ಷನ್ ಜಾರಿ ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಈ ವೇಳೆ…

Read More