Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ರಾಜ್ಯದ ಅನೇಕ ಜನರ ಕನಸು ನಗರದಲ್ಲಿ ಒಂದು ಸೈಟು ಖರೀದಿ ಮಾಡಬೇಕು. ಆ ಬಳಿಕ ಮನೆ ಕಟ್ಟಬೇಕು ಅನ್ನೋದು. ಈ ನಿಮ್ಮ ಕನಸಿಗೆ ರಾಜ್ಯ ಸರ್ಕಾರ ನನಸು ಮಾಡೋದಕ್ಕೆ ಮುಂದಾಗಿದೆ. ರಾಜ್ಯ ಸರ್ಕಾರದಿಂದ ಜಮೀನು ಖರೀದಿಸಿ, ಲೇಔಟ್ ಮಾಡಿ, ಅವುಗಳನ್ನು ಮಾರಾಟಕ್ಕೆ ಮುಂದಾಗೋ ಸುಳಿವನ್ನು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಬಿಚ್ಚಿಟ್ಟಿದ್ದಾರೆ. ಬೆಂಗಳೂರಿನ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳ ಆಯುಕ್ತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ನಡೆದಿರುವ ಕಾಮಗಾರಿಗಳು, ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಈ ವೇಳೆ ಮಾತನಾಡಿದಂತ ಅವರು, ಖಾಸಗಿ ಲೇಔಟ್ ನಿರ್ಮಾಣ ಮಾಡಿರುವವರಿಗೆ ನಕ್ಷೆ ಮತ್ತು ಲೇಔಟ್ ಅನುಮೋದನೆ ನೀಡುವ ಬದಲು ಆಯ ಪ್ರಾಧಿಕಾರಗಳ ವತಿಯಿಂದ ನೀವೆ ಜಮೀನನ್ನು ಗುರುತಿಸಿ ಖರೀದಿ ಮಾಡಿ ಅಭಿವೃದ್ಧಿ ಪಡಿಸಿ ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ನೀಡಲು ಮುಂದಾಗಬೇಕೆಂದು ತಾಕೀತು ಮಾಡಿದರು. ಸಾಧ್ಯವಾದ ಮಟ್ಟಿಗೆ ಸರ್ಕಾರಿ ಜಮೀನುಗಳನ್ನು ಗುರುತಿಸಲು ಪ್ರಾಧಿಕಾರಗಳ ಆಯುಕ್ತರು ಮುಂದಾಗಬೇಕು.…
ಬಳ್ಳಾರಿ : ಪೂರ್ವ ಮುಂಗಾರು ಮಳೆ ಆರಂಭಗೊಂಡಿರುವ ಹಿನ್ನಲೆಯಲ್ಲಿ ಮಳೆ ಹಾನಿಯಿಂದಾಗಿ ಸಂಭವಿಸಬಹುದಾದ ಅವಘಡಗಳನ್ನು ನಿಭಾಯಿಸಲು ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಾಲ್ಲೂಕು ತಹಶೀಲ್ದಾರರೊಂದಿಗೆ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರಂಭಿಕ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿದ್ದು, ಪೂರಕವಾಗಿ ಆರೋಗ್ಯ ಇಲಾಖೆಯು ಪ್ರತಿ ಗ್ರಾಮಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಇದಕ್ಕೆ ಸ್ಥಳೀಯ-ಸಂಸ್ಥೆಗಳು ಕೈಜೋಡಿಸಬೇಕು ಎಂದು ಸೂಚಿಸಿದರು. ಮಳೆಯಿಂದಾಗುವ ಮನೆಹಾನಿ ಮತ್ತು ಗುಡುಗು-ಸಿಡಿಲಿನಿಂದ ಜನ-ಜಾನುವಾರು ಪ್ರಾಣಹಾನಿ ತಡೆಗಟ್ಟಲು ಜಾಗೃತಿ ಮೂಡಿಸಬೇಕು, ಅಲ್ಲದೆ ಮಳೆ, ಸಿಡಿಲಿನಿಂದ ಉಂಟಾಗುವ ಯಾವುದೇ ಹಾನಿ ವರದಿಯನ್ನು ತ್ವರಿತವಾಗಿ ಸಲ್ಲಿಸಲು ಅಧಿಕಾರಿಗಳನ್ನು ನಿಯೋಜಿಸಿದ್ದು, ಸಂಬಂಧಿಸಿದ ಅಧಿಕಾರಿಗಳು ತಕ್ಷಣವೇ ಆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು ವರದಿ ನೀಡಬೇಕು ಎಂದರು. ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಸಮರ್ಪಕವಾಗಿ ಸರಬರಾಜು ಮಾಡಬೇಕು.…
ಬೆಂಗಳೂರು : ರಾಜ್ಯದ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶ ಕಲ್ಪಿಸಲು ವಿಶೇಷ ಮೀಸಲಾತಿಗೆ ಅನುಮೋದನೆ ನೀಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಡಾ|| ಬಿ.ಆರ್. ಅಂಬೇಡ್ಕರ್/ ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ /ಏಕಲವ್ಯ ಮಾದರಿ ವಸತಿ ಶಾಲೆ/ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ 25%ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಹೆಚ್ಐವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳುಗಳಿಗೆ ಶೇ 10% ರಷ್ಟು ಮೀಸಲಾತಿಯನ್ನು ನಿಗದಿಪಡಿಸಿ 6ನೇ ತರಗತಿ ಪ್ರವೇಶ ಕಲ್ಪಿಸಲು ಅನುಮೋದನೆ ನೀಡಿ ಸರ್ಕಾರದ ಆದೇಶಿಸಿದೆ. ವಿಕಲಚೇತನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ರಾಜ್ಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಬೆಂಗಳೂರು : ರಾಜ್ಯದ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆ ಅವಧಿಯನ್ನು ಕಡಿತಗೊಳಿಸಿ ಶಾಲೆ ಆರಂಭಿಸಿರುವ ಕ್ರಮ ಸರಿಯಲ್ಲ. ಪ್ರಸಕ್ತ ಶೈಕ್ಷಣಿಕ ಸಾಲಿನ ಶಾಲೆಗಳನ್ನು ನಿಗದಿಯಂತೆಯೇ ಮೇ 29ರಿಂದಲೇ ಆರಂಭಿಸಬೇಕು ಎಂದು ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯ ಕ್ರಮದ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿಗೆ ಶೈಕ್ಷಣಿಕ ಮಾರ್ಗಸೂಚಿಯನ್ನು ಹೊರಡಿಸುವ ಮೂಲಕ ದಿನಾಂಕ:11.04.2024 ರಿಂದ 28.05.2024ರವರೆಗೆ ಬೇಸಿಗೆ ರಜೆ ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಆದರೆ ಉಲ್ಲೇಖ-2ರನ್ನಯ ರಾಜ್ಯದಲ್ಲಿನ ಕೆಲವು ಖಾಸಗಿ ಶಾಲೆಗಳು ಬೇಸಿಗೆ ರಜೆಯನ್ನು ಕಡಿತಗೊಳಿಸಿ ತರಗತಿಗಳನ್ನು ಪ್ರಾರಂಭಿಸಿದ್ದು, ಈ ಕುರಿತಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈಗಾಗಲೇ ನಿಗಧಿಯಾದಂತೆ ಶೈಕ್ಷಣಿಕ ರಜೆಯನ್ನು ಮುಂದುವರಿಸುವಂತೆ ಕ್ರಮ ಕೈಗೊಳ್ಳುವಂತೆ ಕೋರಿರುತ್ತಾರೆ ಎಂದು ಹೇಳಿದ್ದಾರೆ. ಪರಿಶೀಲಿಸಲಾಗಿ, ಮಕ್ಕಳಿಗೆ ಶೈಕ್ಷಣಿಕ ವರ್ಷದಲ್ಲಿ ಶಾಲಾ ಚಟುವಟಿಕೆಗಳನ್ನು…
ಬೆಂಗಳೂರು: ಕರ್ನಾಟಕ ದ್ವಿತಿಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-3ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಜೂನ್, ಜುಲೈ 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಅಂತಿಮ ವೇಳಾಪಟ್ಟಿ ಈ ಕೆಳಕಂಡಂತೆ ಇದೆ ಅಂತ ಹೇಳಿದೆ. ಹೀಗಿದೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಅಂತಿಮ ವೇಳಾಪಟ್ಟಿ ದಿನಾಂಕ 24-06-2024ರ ಸೋಮವಾರ- ಕನ್ನಡ, ಅರೇಬಿಕ್ ದಿನಾಂಕ 25-06-2024ರ ಮಂಗಳವಾರ – ಇಂಗ್ಲೀಷ್ ದಿನಾಂಕ 26-06-2024ರ ಬುಧವಾರ – ಸಮಾಜಶಾಸ್ತ್ರ, ಜೀವ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ. ದಿನಾಂಕ 27-06-2024ರ ಗುರುವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ ದಿನಾಂಕ 28-06-2024ರ ಶುಕ್ರವಾರ – ಅರ್ಥ ಶಾಸ್ತ್ರ, ರಾಸಾಯನ ಶಾಸ್ತ್ರ ದಿನಾಂಕ 29-06-2024ರ ಶನಿವಾರ – ಇತಿಹಾಸ, ಭೌತಶಾಸ್ತ್ರ ದಿನಾಂಕ 01-07-2024ರ ಸೋಮವಾರ- ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ ದಿನಾಂಕ 02-07-2024ರ ಮಂಗಳವಾರ…
ನವದೆಹಲಿ : ಲಂಡನ್ ನಿಂದ ಸಿಂಗಾಪುರ ಏರ್ಲೈನ್ಸ್ ವಿಮಾನದಲ್ಲಿ ತೀವ್ರ ಪ್ರಕ್ಷುಬ್ಧತೆ ಕಾಣಿಸಿಕೊಂಡ ವೀಡಿಯೊಗಳು ಸಂಪೂರ್ಣ ಭೀತಿ ಮತ್ತು ಭಯಾನಕತೆಯನ್ನು ಸೆರೆಹಿಡಿದಿವೆ. ಕಾಕ್ನಲ್ಲಿ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲು ಕಾರಣವಾದ ಪ್ರಕ್ಷುಬ್ಧತೆಯಲ್ಲಿ ಒಬ್ಬ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪ್ರಕ್ಷುಬ್ಧತೆಯನ್ನು ಎದುರಿಸುವ ಮೊದಲು ವಿಮಾನವು ಥಾಯ್ ವಾಯುಪ್ರದೇಶದಲ್ಲಿ ವಾಯು ಜೇಬಿಗೆ ಬಿದ್ದಿತ್ತು ಎಂದು ಥೈಲ್ಯಾಂಡ್ ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ರಾಯಿಟರ್ಸ್ಗೆ ತಿಳಿಸಿದ್ದಾರೆ. https://twitter.com/i/status/1792894595577029039 ಮೇ 20 ರಂದು ಲಂಡನ್ನಿಂದ ಸಿಂಗಾಪುರಕ್ಕೆ ಕಾರ್ಯನಿರ್ವಹಿಸುತ್ತಿದ್ದ ಎಸ್ಕ್ಯೂ 321 ವಿಮಾನವು ನಿರ್ಗಮಿಸಿದ 10 ಗಂಟೆಗಳ ನಂತರ 37,000 ಅಡಿ ಎತ್ತರದಲ್ಲಿ ಇರಾವತಿ ಜಲಾನಯನ ಪ್ರದೇಶದಲ್ಲಿ ಹಠಾತ್ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತು ಎಂದು ಸಿಂಗಾಪುರ್ ಏರ್ಲೈನ್ಸ್ ತಿಳಿಸಿದೆ. ಪೈಲಟ್ ವೈದ್ಯಕೀಯ ತುರ್ತುಸ್ಥಿತಿಯನ್ನು ಘೋಷಿಸಿದರು ಮತ್ತು ವಿಮಾನವನ್ನು ಬ್ಯಾಂಕಾಕ್ಗೆ ತಿರುಗಿಸಿದರು ಮತ್ತು ಮೇ 21 ರಂದು ಸ್ಥಳೀಯ ಸಮಯ ಮಧ್ಯಾಹ್ನ 3: 45 ಕ್ಕೆ ಇಳಿದರು ಎಂದು ವಿಮಾನಯಾನ…
ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತು ದ್ವೈವಾರ್ಷಿಕ ಚುನಾವಣೆ-2024 ಕ್ಕೆ ಸಂಬಂಧಿಸಿದಂತೆ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳ ಚುನಾವಣೆಯು ಜೂನ್, 03 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳಲ್ಲಿ ಮೇ, 20 ಉಮೇದುವಾರಿಕೆ ಹಿಂಪಡೆಯಲು ಅಂತಿಮ ದಿನವಾಗಿತ್ತು. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 02, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ -01 ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ -01 ಅಭ್ಯರ್ಥಿ ನಾಮಪತ್ರಗಳನ್ನು ಹಿಂಪಡೆದಿದ್ದು, ಅಂತಿಮವಾಗಿ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ವಿವರ ಇಂತಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 11 ಅಭ್ಯರ್ಥಿಗಳು, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ 08 ಅಭ್ಯರ್ಥಿಗಳು ಹಾಗೂ ನೈರುತ್ಯ ಪದವೀಧರರ ಕ್ಷೇತ್ರದಿಂದ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಭಾರತ ಚುನಾವಣಾ ಆಯೋಗ ಸೂಚಿಸಿರುವಂತೆ ಮತದಾರನ ಬೆರಳಿಗೆ ಅಳಿಸಲಾಗದ ಶಾಯಿಯನ್ನು ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಬಲಗೈ…
ಭೋಪಾಲ್: ಅಯೋಧ್ಯೆಯ ರಾಮ ಮಂದಿರ ಅಪೂರ್ಣವಾಗಿದ್ದು, ರಾಜಕೀಯ ಲಾಭಕ್ಕಾಗಿ ಗೋವುಗಳನ್ನು ಬಳಸಿಕೊಳ್ಳುತ್ತಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಪ್ರಧಾನಿ ಮೋದಿ ದೇಶಗಳ ನಡುವಿನ ಯುದ್ಧಗಳನ್ನು ನಿಲ್ಲಿಸಿದ್ದಾರೆ ಎಂದು ನಾನು ಕೇಳಿದ್ದೇನೆ. ಅವರು ಅಷ್ಟು ಪ್ರಸಿದ್ಧರಾಗಿದ್ದರೆ, ಅವರ ಪಕ್ಷವು ಚುನಾವಣೆಯಲ್ಲಿ ಕೇವಲ 400 ಸ್ಥಾನಗಳನ್ನು ಗುರಿಯಾಗಿಸಿಕೊಂಡಿದೆ ಮತ್ತು ಎಲ್ಲಾ 543 ಸ್ಥಾನಗಳನ್ನು ಹೊಂದಿಲ್ಲ ಎಂದು ನನಗೆ ತುಂಬಾ ಆಘಾತವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. https://twitter.com/i/status/1792821120246444525 ಉತ್ತರಾಖಂಡದ ಜೋಶಿಮಠದ ಜ್ಯೋತಿರ್ಮಠದ ಜಗದ್ಗುರು ಶಂಕರಾಚಾರ್ಯ ಎಂಬ ಗೌರವಾನ್ವಿತ ಬಿರುದನ್ನು ಹೊಂದಿರುವ ಸ್ವಾಮಿ ಅವಿಮುಕ್ತೇಶ್ವರಾನಂದ ಅವರು ಅಯೋಧ್ಯೆ ರಾಮ ಮಂದಿರದ ಬಗ್ಗೆ ಮತ್ತೊಮ್ಮೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://twitter.com/i/status/1792823827292152062 ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದಲ್ಲಿ ವೇದಗಳ ಉಲ್ಲಂಘನೆಯ ಬಗ್ಗೆ ತಮ್ಮ ನಿಲುವನ್ನು ಪುನರುಚ್ಚರಿಸಿದ ಶಂಕರಾಚಾರ್ಯ, ಇನ್ನೂ ಸಂಪೂರ್ಣವಾಗಿ ಅಯೋಧ್ಯಯ ರಾಮಮಂದಿರ ನಿರ್ಮಾಣವಾಗಿಲ್ಲ, ಆದರೂ ಹೇಗೆ ಪ್ರಾಣಪ್ರತಿಷ್ಠಾಪನೆ ಮಾಡಿದ್ದಾರೆ (ಜಬ್…
ನವದೆಹಲಿ: ಕಿರ್ಗಿಸ್ತಾನದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿರುವ ಬಗ್ಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಕಳವಳ ವ್ಯಕ್ತಪಡಿಸಿದ್ದು, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದ್ದಾರೆ. ಜನಸಮೂಹ ಹಿಂಸಾಚಾರದ ಭಯದ ನಡುವೆ ವಿದ್ಯಾರ್ಥಿಗಳನ್ನು ಮನೆಯೊಳಗೆ ಇರುವಂತೆ ಒತ್ತಾಯಿಸಿ ಭಾರತ ಮತ್ತು ಪಾಕಿಸ್ತಾನ ದೂತಾವಾಸಗಳು ನೀಡಿದ ಸಲಹೆಗಳನ್ನು ಅನುಸರಿಸಿ ಅವರ ಮನವಿ ಬಂದಿದೆ. ಕಿರ್ಗಿಸ್ತಾನದಲ್ಲಿ ಹಿಂಸಾಚಾರವನ್ನು ಎದುರಿಸುತ್ತಿರುವ ಭಾರತೀಯ ವಿದ್ಯಾರ್ಥಿಗಳ ದುಃಸ್ಥಿತಿಯನ್ನು l ಓವೈಸಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ ನಲ್ಲಿ ತಿಳಿಸಿದರು. ಅವರ ಪ್ರಕಾರ, ಸ್ಥಳೀಯರು ಭಾರತೀಯ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡಿದ್ದಾರೆ, ಉದ್ವಿಗ್ನ ಪರಿಸ್ಥಿತಿಯಿಂದಾಗಿ ಐದು ದಿನಗಳಿಂದ ಆಹಾರವಿಲ್ಲದೆ ಹೋಗಿರುವುದಾಗಿ ಒಬ್ಬ ವಿದ್ಯಾರ್ಥಿ ಹೇಳಿಕೊಂಡಿದ್ದಾನೆ. ಓವೈಸಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಕಿರ್ಗಿಸ್ತಾನದಲ್ಲಿರುವ ಭಾರತೀಯ ವಿದ್ಯಾರ್ಥಿಯೊಬ್ಬರು ಸ್ಥಳಾಂತರಿಸುವ ಕಾರ್ಯವಿಧಾನಗಳ ಬಗ್ಗೆ ವಿಚಾರಿಸಲು ದೂತಾವಾಸವನ್ನು ಸಂಪರ್ಕಿಸುತ್ತಿದ್ದಾರೆ. ವಿದ್ಯಾರ್ಥಿಯು ಮನೆಗೆ ಮರಳಲು ಪ್ರಯತ್ನಿಸಿದರೆ ಭದ್ರತೆಯ ಭರವಸೆಯನ್ನು ಕೋರುತ್ತಾನೆ.
ಸ್ಪೇಸ್ ಎಕ್ಸ್ ತನ್ನ ಬೃಹತ್ ಸ್ಟಾರ್ ಶಿಪ್ ಸೂಪರ್ ಹೆವಿಯ ನಾಲ್ಕನೇ ಪರೀಕ್ಷಾ ಹಾರಾಟಕ್ಕಾಗಿ ಉಡಾವಣಾ ಪೂರ್ವಾಭ್ಯಾಸವನ್ನು ಪೂರ್ಣಗೊಳಿಸಿದೆ. ಯುಎಸ್ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ (ಎಫ್ಎಎ) ನಿಂದ ಅನುಮತಿಗಾಗಿ ಬಾಹ್ಯಾಕಾಶ ನೌಕೆ ಸಿದ್ಧವಾಗಿದೆ, ಇದು ಶೀಘ್ರದಲ್ಲೇ ಉಡಾವಣಾ ಪರವಾನಗಿ ನೀಡುವ ನಿರೀಕ್ಷೆಯಿದೆ. ಮುಂದಿನ ಎರಡು ವಾರಗಳಲ್ಲಿ ಸ್ಟಾರ್ ಶಿಪ್ ಸೂಪರ್ ಹೆವಿಯ ನಾಲ್ಕನೇ ಪರೀಕ್ಷಾ ಹಾರಾಟ ನಡೆಯಬಹುದು ಎಂದು ಸ್ಪೇಸ್ ಎಕ್ಸ್ ಸಂಸ್ಥಾಪಕ ಮತ್ತು ಮುಖ್ಯ ಎಂಜಿನಿಯರ್ ಎಲೋನ್ ಮಸ್ಕ್ ಹೇಳಿದ್ದಾರೆ. ಬಾಹ್ಯಾಕಾಶ ನೌಕೆಯ ಯಶಸ್ವಿ ಉಡಾವಣೆ ಮತ್ತು ಮರಳುವಿಕೆಗೆ ನಿರ್ಣಾಯಕ ಅಂಶವಾದ ಮ್ಯಾಕ್ಸ್ ರೀಎಂಟ್ರಿ ತಾಪನದ ಮೂಲಕ ಬಾಹ್ಯಾಕಾಶ ನೌಕೆಯನ್ನು ಅಚ್ಚುಕಟ್ಟಾಗಿ ಪಡೆಯುವುದು ಪರೀಕ್ಷಾ ಹಾರಾಟದ ಪ್ರಾಥಮಿಕ ಗುರಿಯಾಗಿದೆ ಎಂದು ಅವರು ಹೇಳಿದರು. “ಸುಮಾರು 2 ವಾರಗಳಲ್ಲಿ ಸ್ಟಾರ್ ಶಿಪ್ ಫ್ಲೈಟ್ 4. ಗರಿಷ್ಠ ಮರುಪ್ರವೇಶ ತಾಪನದ ಮೂಲಕ ಪಡೆಯುವುದು ಪ್ರಾಥಮಿಕ ಗುರಿಯಾಗಿದೆ. ಸಂಪೂರ್ಣವಾಗಿ ಮರುಬಳಕೆ ಮಾಡಬಹುದಾದ ಶಾಖ ಕವಚವನ್ನು ರಚಿಸುವಲ್ಲಿ ಯಾರೂ ಎಂದಿಗೂ ಯಶಸ್ವಿಯಾಗಿಲ್ಲ ಎಂಬುದು ಗಮನಿಸಬೇಕಾದ ಅಂಶವಾಗಿದೆ.…