Subscribe to Updates
Get the latest creative news from FooBar about art, design and business.
Author: kannadanewsnow57
ಹಾಸನ : ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ವರ್ಷದಲ್ಲಿ ಮೂರು ಬಾರಿ ಬರೆಯಲು ಅವಕಾಶ ನೀಡಲಾಗಿದ್ದು, ಅನುತ್ತೀರ್ಣರದಲ್ಲಿ ಅಂತಹ ವಿದ್ಯಾರ್ಥಿಗಳು ಪುನಃ ಶಾಲಾ ಕಾಲೇಜುಗಳಿಗೆ ದಾಖಲಾಗಿ ಕಲಿಯಲು ಅವಕಾಶ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡಿನ ಕೋಟೆ ನಗರದಲ್ಲಿರುವ “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ” ಹಾಗೂ “ಮಕ್ಕಳ ಮನೆ” ಗೆ ಭೇಟಿ ನೀಡಿ, ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳೂ ಸೇರಿದಂತೆ ಒಟ್ಟು 56 ಸಾವಿರ ಶಾಲೆಗಳಿದ್ದು, 1.08 ಕೋಟಿ ಮಕ್ಕಳಿದರೆ ಕಳೆದ 9 ತಿಂಗಳಲ್ಲಿ 12,500 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ 5800 ಶಿಕ್ಷಕರನ್ನು ನೇಮಕಾತಿ ಮಾಡಲಾಗುವುದು. ರಾಜ್ಯದಲ್ಲಿ 500 ಕೆ.ಪಿ.ಎಸ್. ಶಾಲೆಗಳ ಪ್ರಾರಂಭ ಮಾಡಲಾಗುವುದು. ಇದರಿಂದ ಸುತ್ತಮುತ್ತಲಿನ ಸರ್ಕಾರಿ ಶಾಲೆಗಳು ಕೆ.ಪಿ.ಎಸ್. ಶಾಲೆಗಳಲ್ಲಿ ವೀಲಿನವಾಗುತ್ತವೆ ಎಂದರು.…
ಬೆಂಗಳೂರು : ಚುನಾವಣಾ ಬಾಂಡ್ ಮೂಲಕ ಹಣ ಸುಲಿಗೆ ಮಾಡಿರುವ ಆರೋಪ ಸಂಬಂಧ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶ ನೀಡಿದೆ. ಚುನಾವಣಾ ಬಾಂಡ್ ಗಳ ಮೂಲಕ ಬೆದರಿಸಿ ಹಣವನ್ನು ಸುಲಿಗೆ ಮಾಡಲಾಗಿದೆ. ಹೀಗಾಗಿ ನಿರ್ಮಲಾ ಸೀತಾರಾಮನ್ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. FIR ದಾಖಲಿಸಬೇಕು ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್ತ್ ನ ಆದರ್ಶ್ ಅಯ್ಯರ್ ಎಂಬುವವರು ಕೋರ್ಟ್ ನಲ್ಲಿ ದೂರು ದಾಖಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿರುವ ಕೋರ್ಟ್ ಎಫ್ ಐಆರ್ ದಾಖಲಿಸಿ ಎಂದು ಬೆಂಗಳೂರಿನ ತಿಲಕ್ ನಗರದ ಪೊಲೀಸರಿಗೆ ಆದೇಶ ಮಾಡಿದೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಕೋರ್ಟ್ ಮುಂದೂಡಿದೆ. ಸಚಿವೆ ನಿರ್ಮಲಾ ಸೀತಾರಾಮನ್ ಜತೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿಜೆಪಿ ಮುಖಂಡ ನಳಿನ್ ಕುಮಾರ್ ಕಟೀಲ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಕಚೇರಿ ಮತ್ತು ಇ.ಡಿ. ಇಲಾಖೆ ವಿರುದ್ಧ…
ಕೊಡಗು ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಸಾಲ ಸಾಮಾನ್ಯವಾಗಿ ವಾಣಿಜ್ಯ ಬ್ಯಾಂಕುಗಳಲ್ಲಿ ಮಾತ್ರ ಪಡೆಯಲು ಅವಕಾಶವಿದೆ. ಆದರೆ ಜಿಲ್ಲೆಯ ರೈತರು ಮತ್ತು ಬ್ಯಾಂಕಿನ ಹಾಲಿ ಗ್ರಾಹಕರ ಮಕ್ಕಳು ದೇಶ ಮತ್ತು ವಿದೇಶದಲ್ಲಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದ್ಯಾಭ್ಯಾಸ ಸಾಲ ಪಡೆಯಲು ವಂಚಿತರಾಗಿರುವುದನ್ನು ಪರಿಗಣಿಸಿ ರೈತರ ಮಕ್ಕಳಿಗೆ ಅನುಕೂಲವಾಗುವಂತೆ ಅವಶ್ಯವಿರುವ “ವಿದ್ಯಾ ಸಹಕಾರ” ವೆಂಬ ವಿದ್ಯಾಭ್ಯಾಸ ಸಾಲದ ಯೋಜನೆಯನ್ನು ಬ್ಯಾಂಕಿನಲ್ಲಿ ಪ್ರಪ್ರಥಮವಾಗಿ ಜಾರಿಗೊಳಿಸಿ ವೈಯಕ್ತಿಕ ಗರಿಷ್ಠ ರೂ.60 ಲಕ್ಷ ವರೆಗೆ ಸಾಲ ನೀಡಲಾಗುತ್ತಿದ್ದು, ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕೊಡಗು ಜಿಲ್ಲಾ ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ ಅವರು ತಿಳಿಸಿದ್ದಾರೆ. 2023-24 ನೇ ಸಾಲಿನಲ್ಲಿ ಒಟ್ಟು ವ್ಯವಹಾರ ರೂ.2926.07 ಕೋಟಿ ದಾಖಲಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ರೂ 524.97 ಏರಿಕೆಯನ್ನು ಕಂಡಿದೆ ಎಂದು ಹೇಳಿದ್ದಾರೆ. ರೈತ ಸದಸ್ಯರ ಬೆಳೆ ಸಾಲದ ಬೇಡಿಕೆಯನ್ನು ಪೂರೈಸಲು ಅನುಕೂಲವಾಗುವಂತೆ ಬ್ಯಾಂಕು ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ…
ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ. 2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ. ಪ್ರಸ್ತುತ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಐಟಿ ಮತ್ತು ಜಿಎಸ್ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳಾದ ಪಡಿತರಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಜಿಎಸ್ಟಿ ಇಂದ ನೀಡಲಾದ Order for cancel for Registration ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಅರ್ಜಿದಾರರ ಮನವಿ ಪತ್ರ ಸಲ್ಲಿಸಲು ಕ್ರಮವಹಿಸುವುದು. ಹೆಚ್ಚಿನ ಮಾಹಿತಿಗೆ…
ನವದೆಹಲಿ : ಕೇಂದ್ರ ಸರ್ಕಾರವು ಪ್ರತಿ ವರ್ಷವೂ ರಜೆಯ ಕ್ಯಾಲೆಂಡರ್ ಅನ್ನು ಸರ್ಕಾರ ಬಿಡುಗಡೆ ಮಾಡುತ್ತದೆ. ಕೇಂದ್ರ ಸರ್ಕಾರವು ಮುಂದಿನ ವರ್ಷ 2025 ರ ಸಾರ್ವಜನಿಕ ರಜಾದಿನಗಳನ್ನು ಘೋಷಿಸಿದೆ. ಎಲ್ಲಾ ಕೇಂದ್ರ ಸರ್ಕಾರದ ಇಲಾಖೆಗಳಿಗೂ ಒಂದೇ ಕ್ಯಾಲೆಂಡರ್ ಅನ್ವಯಿಸುತ್ತದೆ. ಗೆಜೆಟೆಡ್ ರಜಾದಿನಗಳು ಮೂಲಭೂತವಾಗಿ ಸಾರ್ವಜನಿಕ ರಜಾದಿನಗಳಾಗಿವೆ. ಆದಾಗ್ಯೂ, ನಿರ್ಬಂಧಿತ ರಜೆ ನಿಯಮಗಳೊಂದಿಗೆ ಬರುತ್ತದೆ. ಸಂಸ್ಥೆ ಮತ್ತು ರಾಜ್ಯದಿಂದ ಅವು ಬದಲಾಗುತ್ತವೆ ಎಂಬುದನ್ನು ಸಹ ಗಮನಿಸಿ. ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು 17 ಗೆಜೆಟೆಡ್ ಮತ್ತು 34 ಐಚ್ಛಿಕ ರಜಾದಿನಗಳನ್ನು ಘೋಷಿಸುವ ಸುತ್ತೋಲೆಯನ್ನು ಪ್ರಕಟಿಸಿದೆ. ಈ ರಜಾದಿನಗಳು ದೇಶದ ಎಲ್ಲಾ ಕೇಂದ್ರ ಸರ್ಕಾರಿ ಸ್ವಾಮ್ಯದ ಉದ್ಯಮಗಳ ಉದ್ಯೋಗಿಗಳಿಗೆ ಅನ್ವಯಿಸುತ್ತವೆ. ಈ ಪಟ್ಟಿಯ ಪ್ರಕಾರ.. ಮುಂದಿನ ವರ್ಷ 2025 ರಲ್ಲಿ ಯಾವ ತಿಂಗಳಲ್ಲಿ ಎಷ್ಟು ದಿನ ರಜೆಗಳಿವೆ ಎಂಬುದರ ಸಂಪೂರ್ಣ ಪಟ್ಟಿ ಇಲ್ಲಿದೆ. ಕೇಂದ್ರ ಸರ್ಕಾರದ `ಸಾರ್ವತ್ರಿಕ ರಜೆ’ ದಿನಗಳ ಪಟ್ಟಿ ಇಲ್ಲಿದೆ ☛ ಜನವರಿ 26 (ಭಾನುವಾರ)- ಗಣರಾಜ್ಯೋತ್ಸವ ☛…
ರಾಜ್ಯ ಸರ್ಕಾರದಿಂದ `ಆಸ್ತಿ’ ಖರೀದಿದಾರರಿಗೆ ಗುಡ್ ನ್ಯೂಸ್ : `ಇ-ಆಸ್ತಿ’ ತಂತ್ರಾಂಶದಿಂದ `ಆಸ್ತಿ’ ಮಾಹಿತಿ ಪಡೆಯಬಹುದು!
ಬೆಂಗಳೂರು : ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದ್ದು ಜಮೀನಿನ ಸರ್ವೆ ನಕ್ಷೆ(ಸ್ಕೆಚ್)- ನಮೂನೆ 11 ಇ ಇರುವ ಮೋಜಣಿ ತಂತ್ರಾಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು 2016 ಅಕ್ಟೋಬರ್ 05 ರಿಂದ ಸಂಯೋಜನೆ ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು 2014 ಜುಲೈ 18 ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ. ಮೇಲಿನ ಆಸ್ತಿಗಳನ್ನು ಹೊರತು ಪಡಿಸಿ ಅಂದರೆ ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ(ತಂತ್ರಾಶ)ವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ-2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ 2020 ಜನವರಿ 01 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ. ನಗರಾಭಿವೃದ್ಧಿ ಇಲಾಖೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ…
ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ಸೆ.29ರಂದು ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು 26: 220/66/11ಕೆವಿ ಎಸ್ಆರ್ಎಸ್ ಪೀಣ್ಯ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್4, ಎನ್5. ಎನ್7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 29.09.2024 ರಂದು ಬೆಳಗ್ಗೆ 09:30 ಯಿಂದ ಮಧ್ಯಾಹ್ನ 15:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿಸಿದೆ. ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ. ಲಗ್ಗೆರೆ ಹಳೆ ಗ್ರಾಮ, ಲವ ಕುಶಾ ನಗರ, ರಾಗೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಬಳಿ,…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ ಯೋಜನೆಗೆ ಚಾಲನೆ ನೀಡಿದ್ದಾರೆ. ಕ್ವಿನ್ ಸಿಟಿಯು ಒಂದೇ ಸ್ಥಳದಲ್ಲಿ ಸುಸ್ಥಿರ ಪರಿಸರದ ನಡುವೆ ಜ್ಞಾನ, ಆರೋಗ್ಯ, ನಾವೀನ್ಯತೆ ಹಾಗೂ ಸಂಶೋಧನೆಯನ್ನು ಒಟ್ಟುಗೂಡಿಸುವ ಹೊಸ ಪರಿಕಲ್ಪನೆಯುಳ್ಳ ನಗರವಾಗಿರಲಿದೆ. ಈ ನಗರ ವಿಶ್ವ ದರ್ಜೆಯ ಶಿಕ್ಷಣ ಸಂಸ್ಥೆಗಳು, ಆಧುನಿಕ ಆರೋಗ್ಯ ಸೇವಾ ಸೌಲಭ್ಯಗಳು, ಅತ್ಯಾಧುನಿಕ ಸಂಶೋಧನಾ ಕೇಂದ್ರಗಳು ಹಾಗೂ ನವೋದ್ಯಮ ಸಂಪ್ರದಾಯಗಳನ್ನು ಒಟ್ಟುಗೂಡಿಸುವ ಮತ್ತು ಸುಸ್ಥಿರ ಮೂಲಸೌಕರ್ಯ ಮತ್ತು ಅತ್ಯುತ್ತಮ ಸಂಪರ್ಕವಿರುವಂತಹ ವಿಶೇಷ ನಗರವಾಗಿರುತ್ತದೆ. ಮೊದಲ ಹಂತದಲ್ಲಿ 2,000 ಎಕರೆಯಲ್ಲಿ ಯೋಜನೆಯನ್ನು ಸಾಕಾರಗೊಳಿಸಲಾಗುತ್ತಿದೆ. 5 ಲಕ್ಷ ಜನವಸತಿ ಸಾಮರ್ಥ್ಯದ ಈ ನಗರದಲ್ಲಿ ಶೇ.40ರಷ್ಟು ಜಾಗವನ್ನು ಉದ್ಯಾನಗಳಿಗೆ ಮೀಸಲಿಡಲಾಗಿದೆ. ಜಲ ಪೂರಣ ವ್ಯವಸ್ಥೆ, 0.69 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಸ್ಥಾಪನೆ, ಹಣ್ಣು-ತರಕಾರಿ ಕೃಷಿ ಕೂಡ ಮಾಡಲಾಗುತ್ತದೆ. ಕ್ವಿನ್ ಸಿಟಿ ಯೋಜನೆ ಮೂಲಕ 1 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು. ಗುಣಮಟ್ಟದ ಶಾಲಾ-ಕಾಲೇಜು, ವಿಶ್ವ…
ಬೆಂಗಳೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದ್ದು, ಇಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಕುಟುಂಬಸ್ಥರ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಎಫ್ ಐಆರ್ ದಾಖಲಾಗಿದೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸುವ ಸಾಧ್ಯತೆ ಇದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದ್ದು, ಸ್ನೇಹಮಯಿ ಕೃಷ್ಣ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ2, ಪತ್ನಿ ಸಹೋದರ ಮಲ್ಲಿಕಾರ್ಜನ್ ಸ್ವಾಮಿ ಎ3, ಜಮೀನು ಮಾರಿದ ದೇವರಾಜು ಎ4 ಹಾಗೂ ಇತರರ ವಿರುದ್ಧ CRPC ಸೆಕ್ಷನ್ ಅಡಿ ದೂರು ದಾಖಲಾಗಿದೆ. ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್ಪಿ ಉದೇಶ್ ಹೈಕೋರ್ಟ್ ಮತ್ತು…
ಹೈದರಾಬಾದ್: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ದೇವಾಲಯ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲು ಒಂಬತ್ತು ಸದಸ್ಯರ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಲು ಆಂಧ್ರಪ್ರದೇಶ ಸರ್ಕಾರ ಔಪಚಾರಿಕವಾಗಿ ಆದೇಶ ಹೊರಡಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಗುಂಟೂರು ವಲಯ ಐಜಿಪಿ ಸರ್ವಶ್ರೇಷ್ಠ ತ್ರಿಪಾಠಿ ನೇತೃತ್ವದ ತನಿಖಾ ಸಮಿತಿಯಲ್ಲಿ ವಿಶಾಖಪಟ್ಟಣಂ ವಲಯ ಡಿಐಜಿ ಗೋಪಿನಾಥ್ ಜತ್ತಿ, ಕಡಪ ಎಸ್ಪಿ ವಿ.ಹರ್ಷವರ್ಧನ್ ರಾಜು, ತಿರುಪತಿ ಹೆಚ್ಚುವರಿ ಎಸ್ಪಿ ವೆಂಕಟ್ ರಾವ್, ಡಿಎಸ್ಪಿಗಳಾದ ಜಿ.ಸೀತಾರಾಮ ರಾವ್, ಜೆ.ಶಿವನಾರಾಯಣ ಸ್ವಾಮಿ, ಇನ್ಸ್ಪೆಕ್ಟರ್ಗಳಾದ ಟಿ.ಸತ್ಯನಾರಾಯಣ (ಅನ್ನಮಯ್ಯ), ಕೆ.ಉಮಾಮಹೇಶ್ವರ್ (ಎನ್ಟಿಆರ್) ಮತ್ತು ಎಂ.ಸೂರ್ಯನಾರಾಯಣ (ಚಿತ್ತೂರು) ಸೇರಿದಂತೆ ಒಂಬತ್ತು ಅಧಿಕಾರಿಗಳು ಇದ್ದಾರೆ. “ಲಎಸ್ಐಟಿ ತನಿಖೆಯ ಸಮಯದಲ್ಲಿ ಸರ್ಕಾರದ ಯಾವುದೇ ಇಲಾಖೆಯಿಂದ ಸಂಬಂಧಿತ ಮಾಹಿತಿ ಮತ್ತು ಸಹಾಯವನ್ನು ಕೋರಬಹುದು. ಎಲ್ಲಾ ಸರ್ಕಾರಿ ಇಲಾಖೆಗಳು ಎಸ್ಐಟಿಯ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ಸಹಕರಿಸಬೇಕು ಮತ್ತು ಯಾವುದೇ ಮಾಹಿತಿ ಅಥವಾ ತಾಂತ್ರಿಕ ಸಹಾಯವನ್ನು ಸರಿಯಾಗಿ ಸಲ್ಲಿಸಬೇಕು. ಅಂತೆಯೇ,…











