Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶಿಕ್ಷಣ ಇಲಾಖೆ ಅಧೀನದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿಯೊಂದನ್ನು ರಾಜ್ಯ ಸರ್ಕಾರ ರಚನೆ ಮಾಡಿ ಆದೇಶ ಹೊರಡಿಸಿದೆ. ಮಹಿಳಾ ಅಧಿಕಾರಿ, ಶಿಕ್ಷಕಿಯರು ಹಾಗೂ ಸಿಬ್ಬಂದಿಗೆ ಕಿರುಕುಳ, ಮಾನಸಿಕ ಹಿಂಸೆ, ದುರುದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಲೈಂಗಿಕ ದೌರ್ಜನ್ಯ ಮುಂತಾದ ಘಟನೆಗಳ ಪರಿಹಾರಕ್ಕೆ 9 ಮಹಿಳಾ ಅಧಿಕಾರಿಗಳ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿದೆ.ಈ ಸಮಿತಿಯು ಕಾಲಕಾಲಕ್ಕೆ ಶಿಕ್ಷಣ ಇಲಾಖೆ ಅಧೀನದ ಮಹಿಳಾ ಅಧಿಕಾರಿ, ಸಿಬ್ಬಂದಿ ಹಾಗೂ ಶಿಕ್ಷಕಿಯರ ದೂರು ಪರಿಶೀಲನೆ ನಡೆಸುತ್ತದೆ. ಅಲ್ಲದೆ ಇತ್ತೀಚಿಗೆ ಕನ್ನಡ ಚಿತ್ರರಂಗದಲ್ಲಿಯೂ ಕೂಡ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಟ ಚೇತನ ಅಹಿಂಸಾ ಸೇರಿದಂತೆ ಹಲವು ಹಿರಿಯ ನಟ ನಟಿಯರು ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇರಳ ಮಾದರಿಯಲ್ಲಿ ಹೇಮಾ ಸಮಿತಿ ರಚನೆ ಮಾಡಿ ಎಂದು…
ಬೆಂಗಳೂರು : ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ ಪರಿಹರಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇ – ಖಾತಾ ಪಡೆಯಲು ಯಾವುದೇ ಗಡುವು ಇಲ್ಲ. ನಾಗರಿಕರು ಊಹಾಪೋಹಗಳಿಗೆ ಕಿವಿಗೊಡದೆ, ಆತಂಕಗೊಳ್ಳದೆ ಇ-ಖಾತಾ ಮಾಡಿಸಿಕೊಳ್ಳಬಹುದು. ಮಧ್ಯವರ್ತಿಗಳ ಹಾವಳಿ, ನಕಲಿ ನೋಂದಣಿಗಳನ್ನು ತಡೆಯಲು, ಆಸ್ತಿ ಮಾಲೀಕತ್ವವನ್ನು ರಕ್ಷಿಸಲು ಇ-ಖಾತಾ ವ್ಯವಸ್ಥೆ ಶಾಶ್ವತ ಪರಿಹಾರವಾಗಿದೆ ಎಂದು ಹೇಳಿದ್ದಾರೆ. ಇನ್ನು ಆಸ್ತಿ ಮಾರಾಟಕ್ಕಾಗಿ ತುರ್ತಾಗಿ ಇ-ಖಾತಾ ಅಗತ್ಯವಿರುವವರಿಗಾಗಿ ವಾರ್ಡ್ಗಳಲ್ಲಿ ಪ್ರತ್ಯೇಕ ಸಹಾಯ ಕೇಂದ್ರ ತೆರೆಯಲಾಗಿದೆ. ಕಂದಾಯ ಅಧಿಕಾರಿಗಳಿಗೆ ಎಲ್ಲ ರೀತಿಯ ದಾಖಲೆಗಳನ್ನು ನೀಡಿ ಇ-ಖಾತಾ ಪಡೆದುಕೊಳ್ಳಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ನವದೆಹಲಿ : ತನ್ನ 2019 ರ ನಿರ್ಧಾರದ ಮೇಲೆ ಯು-ಟರ್ನ್ ತೆಗೆದುಕೊಂಡು, ಕೇಂದ್ರ ಸರ್ಕಾರ ಶನಿವಾರ ತನ್ನ ಹಿಂದಿನ ನೇಮಕಾತಿ ನೀತಿಯನ್ನು ಮರುಸ್ಥಾಪಿಸಿದೆ ಮತ್ತು UPSC ಗೇವ್ ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆ (CSE) ಮತ್ತು ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ (ESE) ಮೂಲಕ ರೈಲ್ವೆ ಅಧಿಕಾರಿಗಳ ನೇಮಕಾತಿಯನ್ನು ಅನುಮೋದಿಸಿದೆ. ಕಳೆದ ಕೆಲವು ವರ್ಷಗಳಿಂದ, ರೈಲ್ವೆ ಸಚಿವಾಲಯವು ಭಾರತೀಯ ರೈಲ್ವೆ ನಿರ್ವಹಣಾ ವ್ಯವಸ್ಥೆಗೆ (IRMS) ಸಿಎಸ್ಇ ಮೂಲಕ ಮಾತ್ರ ಅಧಿಕಾರಿಗಳನ್ನು ನೇಮಿಸಿಕೊಳ್ಳುತ್ತಿದೆ. ರೈಲ್ವೆ ಮಂಡಳಿಯ ಅಧ್ಯಕ್ಷರಿಗೆ ಕಳುಹಿಸಲಾದ ಕಚೇರಿ ಜ್ಞಾಪಕ ಪತ್ರದಲ್ಲಿ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಅಕ್ಟೋಬರ್ 3, 2024 ರ ರೈಲ್ವೆ ಸಚಿವಾಲಯದ ಪ್ರಸ್ತಾವನೆಯನ್ನು ಪರಿಗಣಿಸಿದ ನಂತರ ESE ಅನ್ನು ಮರುಸ್ಥಾಪಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದೆ. “ರೈಲ್ವೆ ಸಚಿವಾಲಯದಲ್ಲಿ ತಾಂತ್ರಿಕ ಮತ್ತು ತಾಂತ್ರಿಕೇತರ ಮಾನವಶಕ್ತಿಯ ಅಗತ್ಯತೆಗಳನ್ನು ಪರಿಗಣಿಸಿ, ರೈಲ್ವೇ ಸಚಿವಾಲಯವು UPSC-ESE ಮತ್ತು UPSC-CSE ಮೂಲಕ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ” ಎಂದು ಅಕ್ಟೋಬರ್ 5, 2024 ರ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಅದೇ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವಂತ 5,267 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕ 103ರಲ್ಲಿ “ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಹಾಗೂ ಪದವಿ ಪೂರ್ವ ಕಾಲೇಜುಗಳ ವಿವಿಧ ವಿಷಯಗಳ ಶಿಕ್ಷಕರು / ಉಪನ್ಯಾಸಕರುಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು” ಎಂದು ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಅದರಂತೆ, ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮಂಜೂರಾಗಿ ವಸ್ತುತ ಖಾಲಿ ಇರುವ ಒಟ್ಟು 6584 ಶಿಕ್ಷಕರ ಹುದ್ದೆಗಳ ವೈಕಿ ಶೇ. 80 ರಷ್ಟು ಅಂದರೆ ಒಟ್ಟು 5267 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ…
ಬೆಂಗಳೂರು : ಅಪಘಾತಕ್ಕೆ ಕಾರಣವಾಗುವ ವಾಹನವು ಅಪಘಾತದ ಸಮಯದಲ್ಲಿ ಮಾನ್ಯವಾದ ಪರವಾನಗಿ ಮತ್ತು ಫಿಟ್ನೆಸ್ ಪ್ರಮಾಣಪತ್ರವನ್ನು ಹೊಂದಿರದಿದ್ದರೂ, ವಿಮಾ ಕಂಪನಿಯು ಹಕ್ಕುದಾರರಿಗೆ ಪಾವತಿಸಬೇಕಾದ ಪರಿಹಾರದ ಮೊತ್ತವನ್ನು ಪಾವತಿಸಲು ಮತ್ತು ಅದನ್ನು ವಾಹನದಿಂದ ವಸೂಲು ಮಾಡಲು ಹೊಣೆಗಾರನಾಗಿರುತ್ತಾನೆ ಎಂದು ಕರ್ನಾಟಕ ಹೈಕೋರ್ಟ್ ಪುನರುಚ್ಚರಿಸಿದೆ. ಶ್ರೀರಾಮ್ ಜನರಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ನ ವಾದವನ್ನು ಸ್ವೀಕರಿಸಲು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ಏಕಸದಸ್ಯ ಪೀಠವು ಅಪಘಾತದ ಸಮಯದಲ್ಲಿ, ಪ್ರಶ್ನಾರ್ಹ ವಾಹನವು ಮಾನ್ಯ ಪರವಾನಗಿ ಮತ್ತು ಫಿಟ್ನೆಸ್ ಪ್ರಮಾಣಪತ್ರವಿಲ್ಲದೆ ರಸ್ತೆಯಲ್ಲಿ ಚಲಿಸುತ್ತಿತ್ತು. ವಾಹನದ ಮಾಲೀಕರ ಕಡೆಯಿಂದ “ಮೂಲಭೂತ ಉಲ್ಲಂಘನೆ” “ಪ್ರದರ್ಶಿತವಾಗಿದೆ” ಎಂಬ ಕಂಪನಿಯ ವಾದವನ್ನು ನ್ಯಾಯಾಲಯವು ತಿರಸ್ಕರಿಸಿತು, ಆದ್ದರಿಂದ ವಿಮಾ ಕಂಪನಿಯು ತನ್ನ “ಹೊಣೆಗಾರಿಕೆಯನ್ನು ಸಂಪೂರ್ಣವಾಗಿ” ತಪ್ಪಿಸಬಹುದು ಮತ್ತು ಅದರ ಮಾಲೀಕರು ಹಕ್ಕುದಾರರಿಗೆ ಪರಿಹಾರವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದೆ. ವಾಹನದ ಚಾಲಕನ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 56 (ಸಾರಿಗೆ ವಾಹನಗಳ ಫಿಟ್ನೆಸ್ ಪ್ರಮಾಣಪತ್ರ), 66 (ಪರವಾನಗಿಗಳ ಅಗತ್ಯತೆ) ಮತ್ತು ನಿಯಮ 52 (ನೋಂದಣಿ…
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12692 ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿಯನ್ನು ದಿನಾಂಕ: 09-10-2024 ರಂದು ಪ್ರಕಟಗೊಳಿಸಲಾಗುತ್ತಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿರುತ್ತಾರೆ. ಪಾಲಿಕೆ ವ್ಯಾಪ್ತಿಯಲ್ಲಿ ನೇರ ಪಾವತಿ ಅಡಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ‘ಡಿ’ ವೃಂದದ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆಯನ್ನು 2 ಹಂತದಲ್ಲಿ ಮಾಡಲಾಗಿದ್ದು, ಮೊದಲ ಹಂತದಲ್ಲಿ 3673 ಹಾಗೂ ಎರಡನೇ ಹಂತದಲ್ಲಿ 11307 ಹುದ್ದೆಗಳು ಸೇರಿದಂತೆ ಒಟ್ಟು 14980 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಬೇಕಾಗಿದ್ದು, ಇದರಲ್ಲಿ ನಿಯಮಾನುಸಾರ 12692 ಅರ್ಹ ಪೌರಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲು ಕ್ರಮಕೈಗೊಳ್ಳಲಾಗಿದೆ. ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತ್ಯಾಜ್ಯ ವಿಭಾಗದಲ್ಲಿ ನೇರ ಪಾವತಿಯಡಿ(ಡಿಪಿಎಸ್) ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಒಟ್ಟು 15,000ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಈ ಪೈಕಿ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಲಾಗಿದ್ದು, ದೀರ್ಘಾವಧಿ ಸೇವೆ, ರೋಸ್ಟರ್ ಪದ್ದತಿ ಹಾಗೂ ವಿವಿಧ ಮಾನದಂಡಗಳ ಆಧಾರದ…
2024-25 ನೇ ಸಾಲಿನಲ್ಲಿ ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ಡೀಸೆಲ್, ಪೆಟ್ರೋಲ್ ಪಂಪಸೆಟ್ (ಗರಿಷ್ಠ 10 ಎಚ್ಪಿ), ಲಘು ನೀರಾವರಿ ಹಾಗೂ ತಂತಿ ಬೇಲಿ ಘಟಕಗಳನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ಅರ್ಹ ರೈತರಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಸೂಕ್ತ ದಾಖಲಾತಿಗಳೊಂದಿಗೆ ಅಕ್ಟೋಬರ್ 20, 2024 ರೊಳಗಾಗಿ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವದೆಹಲಿ : ಹರಿಯಾಣ ಮತ್ತು ಜಮ್ಮು ಕಾಶ್ಮೀರ ಚುನಾವಣಾ ಫಲಿತಾಂಶದಲ್ಲಿ ಎಎಪಿಗೆ ಬಿಗ್ ಶಾಕ್ ಸಿಕ್ಕಿದೆ. ಇದುವರೆಗೆ ಎಎಪಿ ಅಭ್ಯರ್ಥಿಗಳು ಎರಡು ರಾಜ್ಯಗಳಲ್ಲಿ ಖಾತೆ ತೆರೆದಿಲ್ಲ. ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಎಎಪಿ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದೆ. ಆದರೆ, ಯಾವುದೇ ಪರಿಣಾಮ ತೋರಿಲ್ಲ. ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 48 ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು, ಬಿಜೆಪಿ 36 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ. ಜಮ್ಮುಕಾಶ್ಮೀರದಲ್ಲಿ ಬಿಜೆಪಿ 26 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, 50 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ. ಪಿಡಿಪಿ 4 ಕ್ಷೇತ್ರಗಳಲ್ಲಿ, ಇತರರು 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ನವದೆಹಲಿ:ಕಾಂಗ್ರೆಸ್ ಮತ್ತೊಮ್ಮೆ ಚುನಾವಣಾ ಆಯೋಗದ ವಿರುದ್ಧ ಅಸಮಾಧಾನಗೊಂಡಿದೆ ಮತ್ತು ತಮ್ಮ ವೆಬ್ಸೈಟ್ನಲ್ಲಿ ಸಂಖ್ಯೆಗಳನ್ನು ನವೀಕರಿಸುವಲ್ಲಿ ವಿಳಂಬ ಮತ್ತು ಮತಗಳನ್ನು ಎಣಿಕೆ ಮಾಡುವಾಗ ವಿಳಂಬದ ಬಗ್ಗೆ ಚುನಾವಣಾ ಆಯೋಗಕ್ಕೆ ಅಧಿಕೃತ ದೂರು ನೀಡಿದೆ. ಕಾಂಗ್ರೆಸ್ ವಕ್ತಾರ ಮತ್ತು ಹಿರಿಯ ಮುಖಂಡ ಜೈರಾಮ್ ರಮೇಶ್ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಪೋಸ್ಟ್ ಮಾಡಿ, “ಲೋಕಸಭಾ ಚುನಾವಣೆಯಂತೆಯೇ, ಹರಿಯಾಣದಲ್ಲಿ ನಾವು ಮತ್ತೆ ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ನವೀಕೃತ ಪ್ರವೃತ್ತಿಗಳನ್ನು ಅಪ್ಲೋಡ್ ಮಾಡುವ ನಿಧಾನಗತಿಯನ್ನು ನೋಡುತ್ತಿದ್ದೇವೆ. ಹಳೆಯ ಮತ್ತು ದಾರಿತಪ್ಪಿಸುವ ಪ್ರವೃತ್ತಿಗಳನ್ನು ಹಂಚಿಕೊಳ್ಳುವ ಮೂಲಕ ಆಡಳಿತದ ಮೇಲೆ ಒತ್ತಡ ಹೇರಲು ಬಿಜೆಪಿ ಪ್ರಯತ್ನಿಸುತ್ತಿದೆಯೇ?” ಎಂದು ಕೇಳಿದ್ದಾರೆ. ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಸಂಖ್ಯೆಗಳನ್ನು ನವೀಕರಿಸುವಲ್ಲಿನ ವಿಳಂಬದ ಬಗ್ಗೆ ಅಸಮಾಧಾನಗೊಂಡಿರುವ ಏಕೈಕ ಕಾಂಗ್ರೆಸ್ ನಾಯಕ ಅವರು ಅಲ್ಲ. ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸುಪ್ರಿಯಾ ಶ್ರಿನಾಟೆ, “ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂದು ನನಗೆ ವಿಶ್ವಾಸವಿದೆ. ಕೆಲವು ಸಮಯದಿಂದ ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಅಂಕಿಅಂಶಗಳನ್ನು ನವೀಕರಿಸಲಾಗಿಲ್ಲ”…
ನವದೆಹಲಿ : ಹರಿಯಾಣ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ತಿ ವಿನೇಶ್ ಪೋಗಟ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ವಿನೇಶ್ ಫೋಗಲ್ ಮೊದಲ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿರುವುದು ಗಮನಾರ್ಹ. ಕಾಂಗ್ರೆಸ್ ಪಕ್ಷ ಸೋತರೂ ಹರಿಯಾಣ ಚುನಾವಣೆಯಲ್ಲಿ ಗೆದ್ದಿರುವುದು ಗಮನಾರ್ಹ. ಫಲಿತಾಂಶದಲ್ಲಿ ವಿನೇಶ್ ಫೋಗಟ್ ಮೊದಲ ಸುತ್ತಿನಿಂದ ಮುನ್ನಡೆ ಸಾಧಿಸಿದ್ದಾರೆ. ಮಧ್ಯದಲ್ಲಿ ಕೊಂಚ ಹಿಂದೆ ಬಿದ್ದ ವಿನೇಶ್ ಕೊನೆಯ ಸುತ್ತಿನವರೆಗೂ ಮುನ್ನಡೆ ಕಾಯ್ದುಕೊಂಡರು. ಬಿಜೆಪಿ ಪರವಾಗಿ ಯೋಗೇಶ್ ಬಜರಂಗಿ ಸ್ಪರ್ಧಿಸಿದರೆ, ವಿನೇಶ್ ಫೋಗಟ್ ಸುಲಭವಾಗಿ ಗೆದ್ದರು. ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 48 ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು, ಬಿಜೆಪಿ 36 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ. ಜಮ್ಮುಕಾಶ್ಮೀರದಲ್ಲಿ ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, 51 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ. ಪಿಡಿಪಿ 4 ಕ್ಷೇತ್ರಗಳಲ್ಲಿ, ಇತರರು 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.












