Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಅಂತರ ನಿಗಮ ವರ್ಗಾವಣೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದಂತ KSRTC ನೌಕರರ ಅರ್ಜಿಗಳನ್ನು ಪರಿಶೀಲಿಸಿದ ನಂತ್ರ, ವರ್ಗಾವಣೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಟ್ಟಿಗೆ ಆಕ್ಷೇಪಣೆಯನ್ನು ಸಲ್ಲಿಸೋದಕ್ಕೆ ಜುಲೈ.10ರವರೆಗೆ ಅವಕಾಶ ನೀಡಲಾಗಿದೆ. ಈ ಕುರಿತಂತೆ KSRTC ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ಪರಸ್ಪರ 958 ನೌಕರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ 616 ನೌಕರರು ಅವರ ಕೋರಿಕೆ ಮೇರೆಗೆ ಅಂತರ ನಿಗಮ ಪರಸ್ಪರ ವರ್ಗಾವಣೆಗೊಂಡಿರುತ್ತಾರೆ. ಸದರಿ…
ಕುಲ್ಗಾಮ್ : ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಅವಳಿ ಎನ್ಕೌಂಟರ್ಗಳಲ್ಲಿ ಕನಿಷ್ಠ ನಾಲ್ಕು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಫ್ರಿಸಲ್ ಚಿನ್ನಿಗಮ್ ಮತ್ತು ಮೊದರ್ಗಾಮ್ ಪ್ರದೇಶಗಳಲ್ಲಿ ಎನ್ಕೌಂಟರ್ಗಳು ನಡೆದಿವೆ. ಭಯೋತ್ಪಾದಕರ ವಿರುದ್ಧ ಹೋರಾಡುವಾಗ ಇಬ್ಬರು ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರೊಂದಿಗೆ ಸಂಪರ್ಕವನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು. ಅಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಈವರೆಗೆ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ, ಅವರ ಶವಗಳನ್ನು ನೋಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎನ್ಕೌಂಟರ್ ಸ್ಥಳದ ಡ್ರೋನ್ ದೃಶ್ಯಾವಳಿಗಳು ನಾಲ್ಕು ಶವಗಳು ಅಲ್ಲಿ ಬಿದ್ದಿರುವುದನ್ನು ತೋರಿಸಿದೆ, ಆದರೆ ಗುಂಡಿನ ದಾಳಿ ಇನ್ನೂ ನಡೆಯುತ್ತಿರುವುದರಿಂದ ಅವುಗಳನ್ನು ಇನ್ನೂ ಹಿಂಪಡೆಯಲು ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://twitter.com/AdityaRajKaul/status/1809608451938742740?ref_src=twsrc%5Etfw%7Ctwcamp%5Etweetembed%7Ctwterm%5E1809608451938742740%7Ctwgr%5E166c48fd89c993f278b7860025be8beddc8ab338%7Ctwcon%5Es1_c10&ref_url=https%3A%2F%2Fapi-news.dailyhunt.in%2F ಎನ್ಕೌಂಟರ್ ಸ್ಥಳಕ್ಕೆ ಭೇಟಿ ನೀಡಿದ ಕಾಶ್ಮೀರದ ಪೊಲೀಸ್ ಇನ್ಸ್ಪೆಕ್ಟರ್ ಜನರಲ್…
ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಶನಿವಾರ ಒಂದೇ ದಿನ 175 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ 7,000 ಗಡಿ ದಾಟಿದೆ. ಒಂದೇ ತಿಂಗಳಲ್ಲಿ ಆರು ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈ ವರ್ಷ 93012 ಡೆಂಗೆ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. 40918 ಮಂದಿಯ ರಕ್ತ ಪರೀಕ್ಷೆ ನಡೆಸಲಾಗಿದೆ. ಒಟ್ಟು 5,098 ಮಂದಿಗೆ ಡೆಂಗ್ಯೂ ದೃಪಟ್ಟಿದ್ದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 1,908 ಮಂದಿ ಸೇರಿ ಒಟ್ಟು 7006 ಮಂದಿಗೆ ಡೆಂಗ್ಯೂ ಜ್ವರ ಇರುವುದು ದೃಢಪಟ್ಟಿದೆ. ಶನಿವಾರ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 115, ಮಂಡ್ಯ 26, ಗದಗ 8, ವಿಜಯಪುರ 9, ಉಡುಪಿ 2, ಉತ್ತರ ಕನ್ನಡ, ಬಳ್ಳಾರಿ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ. ಈಡಿಸ್ ಸೊಳ್ಳೆಯಿಂದ ಡೆಂಗ್ಯೂ ಹರಡುತ್ತದೆ. ಸೋಂಕಿತ ಸೊಳ್ಳೆ ಕಚ್ಚಿದ ನಾಲ್ಕರಿಂದ ಏಳು ದಿನಗಳಲ್ಲಿ ಹಲವಾರು ಚಿಹ್ನೆಗಳು ಮತ್ತು ರೋಗಲಕ್ಷಣಗಳನ್ನು…
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ತಡರಾತ್ರಿ ಮತ್ತೆ ಭೂಕಂಪ ಸಂಭವಿಸಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಸೋಮದೇವರಹಟ್ಟಿ, ಕಳಕವಟಗಿ, ಹುಬನೂರು, ಟಕ್ಕಳಗಿ ಭಾಗದಲ್ಲಿ ರಾತ್ರಿ ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ರಾತ್ರಿ 9.26 ರ ಸುಮಾರಿಗೆ ಭೂಕಂಪನವಾಗಿದ್ದು, ಮನೆಯಲ್ಲಿ ಮಲಗಿದ್ದ ಜನರು ಭಯಭೀತರಾಗಿ ಹೊರಗೆ ಓಡಿ ಬಂದಿದ್ದು, ರಾತ್ರಿಯಲ್ಲ ಮನೆಯ ಹೊರಗೆ ಕಳೆದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು: ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ fact check ಘಟಕಗಳನ್ನು ಮಾಡಿದ್ದೇವೆ. ಆದರೂ ಫೇಕ್ ನ್ಯೂಸ್ ಗಳು ಹೆಚ್ಚಾಗುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲುತ್ತಿಲ್ಲ ಎಂದು ಪೊಲೀಸರಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕೃತಕ ಬುದ್ದಿಮತ್ತೆ ಬಳಸಿ. ಸ್ವಯಂ ಪ್ರೇರಿತ ದೂರುಗಳನ್ನು ಹೆಚ್ಚೆಚ್ಚು ದಾಖಲಿಸಿ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಡ್ರಗ್ಸ್ ಪೂರ್ತಿ ನಿಂತಿಲ್ಲ ಏಕೆ? ಡ್ರಗ್ಸ್ ಮಾರೋರು ಯಾರು? ರೌಡಿಗಳು ಯಾರು?/ರಿಯಲ್ ಎಸ್ಟೇಟ್ ಮಾಡೋರು ಯಾರು ಎನ್ನುವುದು ಆಯಾ ಠಾಣಾಧಿಕಾರಿಗಳಿಗೆ ಗೊತ್ತಿರತ್ತೆ. ಆದರೂ ಯಾಕೆ ನಿಲ್ಲುತ್ತಿಲ್ಲ ಎಂದು ಪ್ರಶ್ನಿಸಿದರು. ನಿಮಗೆ ಗನ್ ಗಳನ್ನು ಕೊಟ್ಟಿರುವುದು ಏಕೆ ? ಈ ಬಗ್ಗೆ ರೌಡಿಗಳಿಗೆ…
ಬೆಂಗಳೂರು : ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ನಾನು ಜೀರೋ ಟ್ರಾಫಿಕ್ ಬಳಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯ ಪೊಲೀಸ್ ಕಚೇರಿಯಲ್ಲಿ ಶನಿವಾರ ನಡೆದ ಐಪಿಎಸ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜನಸಾಮಾನ್ಯರಿಗೆ ತೊಂದರೆ ಕೊಟ್ಟು ಜೀರೋ ಟ್ರಾಫಿಕ್ ವ್ಯವಸ್ಥೆಯಲಿ ಓಡಾಡುತ್ತಿಲ್ಲ. ಪೊಲೀಸರೇ ನಾನು ಸಂಚರಿಸುವ ವೇಳೆ ಬೇರೆ ವಾಹನಗಳ ಓಡಾಟಕ್ಕೆ ನಿರ್ಬಂಧಿಸುತ್ತಾರೆ. ನಾನು ಯಾವತ್ತೂ ಜೀರೋ ಟ್ರಾಫಿಕ್ ಕೇಳಿಲ್ಲ ಎಂದು ಹೇಳಿದ್ದಾರೆ. ಇನ್ನು ಜೊತೆಯಲ್ಲೇ ಇದ್ದ ಗೃಹಸಚಿವ ಡಾ.ಜಿ. ಪರಮೇಶ್ವರ್ ಅವರೂ ಸಹ ನನಗೂ ಸಹ ಇನ್ಮುಂದೆ ಜೀರೋ ಟ್ರಾಫಿಕ್ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು : ಗರ್ಭಿಣಿ ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರು ಪ್ರತಿ) ಸಲ್ಲಿಸಬೇಕು. ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ. ಮೊದಲ ಮಗುವಿಗೆ…
ಪಾಟ್ನಾ: ಕಳೆದ 24 ಗಂಟೆಗಳಲ್ಲಿ ಬಿಹಾರದ ಆರು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಜೆಹಾನಾಬಾದ್, ಮಾಧೇಪುರ, ಪೂರ್ವ ಚಂಪಾರಣ್, ರೋಹ್ಟಾಸ್, ಸರನ್ ಮತ್ತು ಸುಪಾಲ್ ಜಿಲ್ಲೆಗಳಲ್ಲಿ ಸಿಡಿಲು ಬಡಿದು ಸಾವುಗಳು ವರದಿಯಾಗಿವೆ ಎಂದು ಅವರು ತಿಳಿಸಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಡಿಲು ಬಡಿದು 9 ಜನರು ಸಾವನ್ನಪ್ಪಿರುವ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬ ಸದಸ್ಯರಿಗೆ ತಲಾ 4 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಮುಖ್ಯಮಂತ್ರಿ ಕಚೇರಿ (ಸಿಎಂಒ) ಶನಿವಾರ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಜೆಹಾನಾಬಾದ್ ಜಿಲ್ಲೆಯಲ್ಲಿ ಮೂವರು, ಮಾಧೇಪುರದಲ್ಲಿ ಇಬ್ಬರು, ಪೂರ್ವ ಚಂಪಾರಣ್, ರೋಹ್ಟಾಸ್, ಸರನ್ ಮತ್ತು ಸುಪಾಲ್ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ವಿಪತ್ತು ನಿರ್ವಹಣಾ ಇಲಾಖೆ ಹೊರಡಿಸಿದ ಸಲಹೆಗಳನ್ನು ಅನುಸರಿಸುವಂತೆ ಸಿಎಂ ಜನರನ್ನು ಒತ್ತಾಯಿಸಿದರು.
ಗುವಾಹಟಿ: ಅಸ್ಸಾಂನ ಪ್ರವಾಹ ಪರಿಸ್ಥಿತಿ ಶನಿವಾರ ಗಂಭೀರವಾಗಿದೆ, 30 ಜಿಲ್ಲೆಗಳಲ್ಲಿ 24.50 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ತತ್ತರಿಸಿದ್ದಾರೆ ಮತ್ತು ಹಲವಾರು ಸ್ಥಳಗಳಲ್ಲಿ ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ವರ್ಷದ ಪ್ರವಾಹದಲ್ಲಿ ಸತ್ತವರ ಸಂಖ್ಯೆ 52 ಮತ್ತು ಭೂಕುಸಿತ ಮತ್ತು ಬಿರುಗಾಳಿಯಿಂದಾಗಿ 12 ಜನರು ಪ್ರಾಣ ಕಳೆದುಕೊಂಡಿದ್ದಾರೆ. ತೀವ್ರ ಪೀಡಿತ ದಿಬ್ರುಗಢ ಜಿಲ್ಲೆಯಿಂದ ಹಿಂದಿರುಗಿದ ನಂತರ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶುಕ್ರವಾರ ತಡರಾತ್ರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾಜ್ಯದ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದರು. “ದಿಬ್ರುಗಢದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ, ನಾವು ಅಸ್ಸಾಂ ಆರೋಗ್ಯ ನಿಧಿ – ಆರೋಗ್ಯ ಹಣಕಾಸು ನೆರವು ಯೋಜನೆ ಸೇರಿದಂತೆ ಹಲವಾರು ವಿಷಯಗಳನ್ನು ಪರಿಶೀಲಿಸಿದ್ದೇವೆ” ಎಂದು ಮುಖ್ಯಮಂತ್ರಿ ಹೇಳಿದರು. ಅಸ್ತಿತ್ವದಲ್ಲಿರುವ ಯಾವುದೇ ಯೋಜನೆಯ ವ್ಯಾಪ್ತಿಗೆ ಒಳಪಡದವರಿಂದ ಅಪರೂಪದ ಪ್ರಕರಣಗಳು ಮತ್ತು ಅರ್ಜಿಗಳಿಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದಿಷ್ಟವಾಗಿ ಕೇಳಿದ್ದೇನೆ ಎಂದು ಶರ್ಮಾ ಹೇಳಿದರು.…
ಗಾಝಾ:ಗಾಝಾದಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಸಂಘರ್ಷವು ಮುಂದುವರೆದಿದ್ದು, ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆಗಾಗಿ ಮಾತುಕತೆಗಳನ್ನು ಪ್ರಾರಂಭಿಸಲು ಯುನೈಟೆಡ್ ಸ್ಟೇಟ್ಸ್ ಮುಂದಿಟ್ಟ ಪ್ರಸ್ತಾಪಕ್ಕೆ ಉಗ್ರಗಾಮಿ ಗುಂಪು ಹಮಾಸ್ ಈಗ ಒಪ್ಪಿಕೊಂಡಿದೆ. ಈ ಪ್ರದೇಶದಲ್ಲಿ ಒಂಬತ್ತು ತಿಂಗಳ ಸುದೀರ್ಘ ಯುದ್ಧವನ್ನು ಕೊನೆಗೊಳಿಸುವ ಗುರಿಯನ್ನು ಹೊಂದಿರುವ ಒಪ್ಪಂದವನ್ನು ಪ್ರಾರಂಭಿಸಿದ 16 ದಿನಗಳ ನಂತರ ಈ ನಿರ್ಧಾರ ಬಂದಿದೆ ಎಂದು ಹಮಾಸ್ನ ಹಿರಿಯ ಮೂಲಗಳು ಶನಿವಾರ ರಾಯಿಟರ್ಸ್ಗೆ ತಿಳಿಸಿವೆ. ಒಪ್ಪಂದವನ್ನು ಅಂತಿಮಗೊಳಿಸುವ ಮೊದಲು ಇಸ್ರೇಲ್ ಮೊದಲು ಶಾಶ್ವತ ಕದನ ವಿರಾಮಕ್ಕೆ ಬದ್ಧವಾಗಿರಬೇಕು ಎಂದು ಹಮಾಸ್ ಹೇಳಿದೆ.ಆರಂಭಿಕ ಆರು ವಾರಗಳ ಮಾತುಕತೆಯ ಹಂತದಲ್ಲಿ ಈ ಗುರಿಯನ್ನು ಸಾಧಿಸಲು ಗುಂಪು ಚರ್ಚೆಗಳಿಗೆ ಮುಕ್ತವಾಗಿದೆ. ಕದನ ವಿರಾಮದ ಮಧ್ಯಸ್ಥಿಕೆ ಪ್ರಯತ್ನಗಳಲ್ಲಿ ಭಾಗಿಯಾಗಿರುವ ಫೆಲೆಸ್ತೀನ್ ಅಧಿಕಾರಿಯೊಬ್ಬರು, ಈ ಪ್ರಸ್ತಾಪವನ್ನು ಇಸ್ರೇಲ್ ಅನುಮೋದಿಸಿದರೆ ಸಮಗ್ರ ಚೌಕಟ್ಟು ಒಪ್ಪಂದಕ್ಕೆ ಕಾರಣವಾಗಬಹುದು, ಇದು ಕಳೆದ ವರ್ಷ ಅಕ್ಟೋಬರ್ 7 ರಂದು ಗಾಝಾದಲ್ಲಿ ಪ್ರಾರಂಭವಾದ ಸಂಘರ್ಷವನ್ನು ಕೊನೆಗೊಳಿಸುತ್ತದೆ, ಇದು 38,000 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ…











