Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಭಾರೀ ಮಳೆ, ಸಿಡಿಲಿಗೆ ಯಾದಗಿರಿಯಲ್ಲಿ ನಾಲ್ವರು ಬಲಿಯಾಗಿದ್ದಾರೆ. ಸೋಮವಾರ ಸುರಿದ ದಿಢೀರ್ ಮಳೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ವಸ್ಥಗೊಂಡಿದ್ದು, ಯಾದಗಿರಿಯಲ್ಲಿ ಸಿಡಿಲಿಗೆ ನಾಲ್ವರು ಬಲಿಯಾಗಿದ್ದಾರೆ. ಅವರಲ್ಲಿ ಮೂವರು ಒಂದೇ ಕುಟುಂಬದವರು. ಜೀನಕೇರಾ ತಾಂಡದಲ್ಲಿ ಸಿಡಿಲು ಬಡಿದು ಜೇನು (22), ಕಿಶನ್ (30), ಸುಮಿ ಬಾಯಿ (30) ಹಾಗೂ ನೇನು (18) ಮೃತಪಟ್ಟಿದ್ದಾರೆ. ಆರು ಮಂದಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಕರ್ನಾಟಕದ ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,…
ಬೆಂಗಳೂರು: ಪ್ರಸಕ್ತ ಸಾಲಿನ ರಾಜ್ಯ ಪಠ್ಯಕ್ರಮದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ( SSLC Students ) ಅರ್ಧ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನೀಡುವ ಏಕರೂಪದ ಪ್ರಶ್ನೆ ಪತ್ರಿಕೆಗೆ ಉತ್ತರ ಬರೆಯಬೇಕಿದೆ. ಈ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆಗೂ ( SSLC Exam ) ಏಕರೂಪದ ಪ್ರಶ್ನೆ ಪತ್ರಿಕೆಯನ್ನು ಮಂಡಳಿ ನೀಡುತ್ತಿದೆ. ಕಳೆದ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಶಾಲಾ ಹಂತದಲ್ಲೇ ಪ್ರಶ್ನೆ ಪತ್ರಿಕೆ ತಯಾರಿಸಿ, ಅರ್ಧ ವಾರ್ಷಿಕ ಪರೀಕ್ಷೆ ನಡೆಸಲು ಸೂಚಿಸಲಾಗಿತ್ತು. ಆದರೇ ಈ ವರ್ಷ ಅದಕ್ಕೆ ಬ್ರೇಕ್ ಹಾಕಿದೆ. ಈ ಸಾಲಿನಿಂದ ಸರ್ಕಾರದ ನಿರ್ದೇಶನದಂತೆ ಅರ್ಧ ವಾರ್ಷಿಕ ಪರೀಕ್ಷೆಗೂ ರಾಜ್ಯಾಧ್ಯಂತ ಏಕರೂಪದ ಪ್ರಶ್ನೆಪತ್ರಿಕೆ ನೀಡಲು ಮಂಡಳಿ ತೀರ್ಮಾನಿಸಿದೆ. ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಸೆಪ್ಟೆಂಬರ್.24ರ ಇಂದಿನಿಂದ ಅಕ್ಟೋಬರ್ 1ರವರೆಗೆ ಎಸ್ ಎಸ್ ಎಲ್ ಸಿ ಅರ್ಧವಾರ್ಷಿಕ ಪರೀಕ್ಷೆ ನಡೆಯಲಿದೆ.…
ನವದೆಹಲಿ: ಬಾಂಗ್ಲಾದೇಶದ ಪ್ರಜೆಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಹೇಳಿಕೆಗಳ ವಿರುದ್ಧ ಬಾಂಗ್ಲಾದೇಶ ಸರ್ಕಾರ ಸೋಮವಾರ ಪ್ರತಿಭಟನೆ ದಾಖಲಿಸಿದೆ ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಢಾಕಾದಲ್ಲಿನ ಭಾರತದ ಉಪ ಹೈಕಮಿಷನರ್ಗೆ ಪ್ರತಿಭಟನಾ ಟಿಪ್ಪಣಿಯನ್ನು ಹಸ್ತಾಂತರಿಸಿತು, “ಗಂಭೀರ ಮೀಸಲಾತಿ, ತೀವ್ರ ನೋವು ಮತ್ತು ತೀವ್ರ ಅಸಮಾಧಾನ” ವ್ಯಕ್ತಪಡಿಸಿದೆ. ಕಳೆದ ವಾರ ಜಾರ್ಖಂಡ್ಗೆ ಭೇಟಿ ನೀಡಿದ್ದ ಅಮಿತ್ ಶಾ, ಜಾರ್ಖಂಡ್ನಲ್ಲಿ ಜನರು ಪಕ್ಷವನ್ನು ಅಧಿಕಾರಕ್ಕೆ ಆಯ್ಕೆ ಮಾಡಿದರೆ ಬಿಜೆಪಿ “ಪ್ರತಿಯೊಬ್ಬ ಬಾಂಗ್ಲಾದೇಶಿ ನುಸುಳುಕೋರರನ್ನು ತಲೆಕೆಳಗಾಗಿ ನೇತುಹಾಕುತ್ತದೆ” ಎಂದು ಹೇಳಿದ್ದರು. ಇಂತಹ ಆಕ್ಷೇಪಾರ್ಹ ಮತ್ತು ಸ್ವೀಕಾರಾರ್ಹವಲ್ಲದ ಹೇಳಿಕೆಗಳನ್ನು ನೀಡದಂತೆ ತನ್ನ ರಾಜಕೀಯ ನಾಯಕರನ್ನು ಎಚ್ಚರಿಸುವಂತೆ ಬಾಂಗ್ಲಾದೇಶ ಸರ್ಕಾರ ಭಾರತವನ್ನು ಒತ್ತಾಯಿಸಿದೆ ಎಂದು ಢಾಕಾ ಟ್ರಿಬ್ಯೂನ್ ವರದಿ ಮಾಡಿದೆ. “ಸಚಿವಾಲಯವು ತನ್ನ ಗಂಭೀರ ಮೀಸಲಾತಿ, ಆಳವಾದ ನೋವು ಮತ್ತು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದೆ ಮತ್ತು ಅಂತಹ ಆಕ್ಷೇಪಾರ್ಹ ಮತ್ತು ಸ್ವೀಕಾರಾರ್ಹವಲ್ಲದ ಹೇಳಿಕೆಗಳನ್ನು ನೀಡದಂತೆ ರಾಜಕೀಯ ನಾಯಕರಿಗೆ ಸಲಹೆ ನೀಡುವಂತೆ ಭಾರತ ಸರ್ಕಾರಕ್ಕೆ…
ಬೆಂಗಳೂರು : 545 ಪಿ.ಎಸ್.ಐ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿ/ನೇಮಕಾತಿ ಆದೇಶಗಳನ್ನು ಪ್ರಕಟಿಸದೇ ತಡೆ ಹಿಡಿಯುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದಲ್ಲಿ 545 ಪಿ.ಎಸ್.ಐ (ಸಿವಿಲ್) ಹುದ್ದೆಗಳ ನೇರ ನೇಮಕಾತಿಯ ಅಧಿಸೂಚನೆಯು ದಿನಾಂಕ: 21.01.2021ರಂದು ಹೊರಡಿಸಲ್ಪಟ್ಟಿದ್ದು ಪರಿಶೀಲನೆಯಲ್ಲಿರುವ ದಿನಾಂಕ: 01.02.2023ರ ಸರ್ಕಾರದ ಸುತ್ತೋಲೆಗಿಂತ 2 ವರ್ಷಗಳಷ್ಟು ಮೊದಲೇ ಅಧಿಸೂಚನೆಗೊಂಡಿರುತ್ತದೆ ಪ್ರಸ್ತುತ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯಲ್ಲಿ ದಿನಾಂಕ: 01.02.2023ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆಯ ಸಿಂಧುತ್ವದ ಸಂಬಂಧ ದಾಖಲಾಗಿರುವ ಅರ್ಜಿ ಸಂಖ್ಯೆ: 1970/2023, ದಿನಾಂಕ: 01.01.2024ರ ತೀರ್ಪಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ದಿನಾಂಕ: 01-02-2023ರ ಸುತ್ತೋಲೆಯನ್ನು ರದ್ದುಪಡಿಸಲಾಗಿದೆ. ಸದರಿ ತೀರ್ಪಿನ ವಿರುದ್ಧ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿ ಸಂಖ್ಯೆ: 16343/2024ರಲ್ಲಿ ನೀಡುವ ತೀರ್ಪಿಗೊಳಪಟ್ಟು ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ…
ನವದೆಹಲಿ:ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರೊಂದಿಗಿನ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಕ್ರೇನ್ನಲ್ಲಿ ನಡೆಯುತ್ತಿರುವ ಸಂಘರ್ಷದಲ್ಲಿ ಕದನ ವಿರಾಮ ಮತ್ತು ಶಾಂತಿ ಮತ್ತು ಸ್ಥಿರತೆಯನ್ನು ಪುನಃಸ್ಥಾಪಿಸುವ ಅಗತ್ಯವನ್ನು ಎಲ್ಲರೂ ಒಪ್ಪುತ್ತಾರೆ ಎಂದು ದೃಢಪಡಿಸಿದರು ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಸೋಮವಾರ (ಸ್ಥಳೀಯ ಸಮಯ) ತಿಳಿಸಿದ್ದಾರೆ ಪ್ರಧಾನಿಯವರ ಯುಎಸ್ ಭೇಟಿಯ ಬಗ್ಗೆ ವಿದೇಶಾಂಗ ಕಾರ್ಯದರ್ಶಿಯ ವಿಶೇಷ ಬ್ರೀಫಿಂಗ್ನಲ್ಲಿ, ಮಿಸ್ರಿ ಈ ವಿಷಯಗಳ ಬಗ್ಗೆ ಭಾರತದ ಗಮನವನ್ನು ಮತ್ತು “ಶಾಂತಿ ಮತ್ತು ಈ ಸಂಘರ್ಷದಿಂದ ಹೊರಬರುವ ಮಾರ್ಗವನ್ನು ಕಂಡುಕೊಳ್ಳಲು” ಪ್ರಧಾನಿಯ ಇತ್ತೀಚಿನ ಉಕ್ರೇನ್ ಭೇಟಿಯನ್ನು ಶ್ಲಾಘಿಸಿದರು ಎಂದು ಹೇಳಿದರು. “ಬಹುಶಃ ಮೂರು ತಿಂಗಳ ಅವಧಿಯಲ್ಲಿ ಉಭಯ ನಾಯಕರ ನಡುವಿನ ಮೂರನೇ ಸಭೆ ಇದಾಗಿದೆ… ಎಲ್ಲಾ ವಿಷಯಗಳ ಬಗ್ಗೆ, ದ್ವಿಪಕ್ಷೀಯ ವಿಷಯಗಳು ಮತ್ತು ರಷ್ಯಾ-ಉಕ್ರೇನ್ ಸಂಘರ್ಷದ ಸುತ್ತಲಿನ ವಿಷಯಗಳ ಬಗ್ಗೆ ಅವರ ಚರ್ಚೆಗಳು. ಈ ವಿಷಯಗಳ ಬಗ್ಗೆ ಭಾರತದ ಗಮನವನ್ನು ಅಧ್ಯಕ್ಷ ಜೆಲೆನ್ಸ್ಕಿ ತುಂಬಾ ಶ್ಲಾಘಿಸಿದರು ಮತ್ತು ಪ್ರಧಾನಿಯವರ ಭೇಟಿಯನ್ನು ಹೆಚ್ಚು ಶ್ಲಾಘಿಸಲಾಗಿದೆ ಮತ್ತು…
ಬೆಂಗಳೂರು : ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012 ರನ್ವಯ ಅಧಿಸೂಚಿಸಲ್ಪಟ್ಟ ಅರ್ಹ ದಿನಗೂಲಿ ನೌಕರರಿಗೆ 2024 ಪರಿಷ್ಕೃತ ವೇತನ ಶ್ರೇಣಿಗಳನ್ವಯ ಆರ್ಥಿಕ ಸೌಲಭ್ಯಗಳನ್ನು ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರವು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಮೇಲೆ (1)ರಲ್ಲಿ ಓದಲಾದ ಅಧಿಸೂಚನೆಯನ್ವಯ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ನ್ನು ಜಾರಿಗೆ ತರಲಾಗಿದೆ. ಮೇಲೆ (2)ರಲ್ಲಿ ಓದಲಾದ ದಿನಾಂಕ: 19.09.2014ರ ಸರ್ಕಾರದ ಆದೇಶದಲ್ಲಿ ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ 2012ರಡಿ ಸೇವಾ ಮುಂದುವರಿಕೆಗೆ ಅರ್ಹರಾದ ದಿನಗೂಲಿ ನೌಕರರಿಗೆ ಇವರುಗಳನ್ನು ಅಧಿಸೂಚಿಸಿದ ದಿನಾಂಕದಿಂದ ಅವರನ್ನು ಮುಂದುವರೆಸಿದ ಹುದ್ದೆಯ ಕಾಲಿಕ ವೇತನ ಶ್ರೇಣಿಯ ಕನಿಷ್ಠ ವೇತನ, ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ತುಟ್ಟಿಭತ್ಯೆಯ ಶೇಕಡ 75ರಷ್ಟು, ರಾಜ್ಯ ಸರ್ಕಾರಿ ನೌಕರರಿಗೆ ಕಾಲಕಾಲಕ್ಕೆ ನೀಡಲಾಗುವ ಅವರುಗಳು ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯವಾಗುವ ಮನೆ ಬಾಡಿಗೆ ಭತ್ಯೆಯ ಸಾಮಾನ್ಯ ದರಗಳ ಶೇಕಡ 75ರಷ್ಟನ್ನು ಅರ್ಹ ದಿನಗೂಲಿ ನೌಕರರಿಗೆ, ಅವರನ್ನು ಮುಂದುವರೆಸುವ ಹುದ್ದೆಯ ಕಾಲಿಕ…
ಬೆಂಗಳೂರು : ಇ.ಇ.ಡಿಎಸ್ ತಂತ್ರಾಂಶದಲ್ಲಿ ಶಿಕ್ಷಕರ/ಅಧಿಕಾರಿಗಳ/ಬೋಧಕೇತರ ನೌಕರರ ಸೇವಾವಿವರಗಳನ್ನು ಗಣಕೀಕರಿಸಿ ಅಂತಿಮಗೊಳಿಸುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಸುತ್ತೋಲೆ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಬಟವಾಡೆ ಅಧಿಕಾರಿಗಳಾದ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಜಿಲ್ಲಾ ಉಪನಿರ್ದೇಶಕರು ಹಾಗೂ ಎಲ್ಲಾ ಕಛೇರಿ ಮುಖ್ಯಸ್ಥರುಗಳಿಗೆ ಈ ಮೂಲಕ ಸೂಚಿಸುವುದೇನೆಂದರೆ ಉಲೆಖ-1 ರಲಿ 2023-24ನೇ ಸಾಲಿನಲ್ಲಿ ರಾಜ್ಯದಲ್ಲಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಹಶಿಕ್ಷಕರ ಮತ್ತು ಮುಖ್ಯ ಶಿಕ್ಷಕರ ಹಾಗೂ ತತ್ಸಮಾನ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರ ವಲಯ ವರ್ಗಾವಣೆ, ನಿರ್ದಿಷ್ಟಪಡಿಸಲಾದ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು ಗರಿಷ್ಠ ಅವಧಿ ಪೂರೈಸಿರುವವರ ಹಿಮ್ಮುಖ ವರ್ಗಾವಣೆ, ಶಿಕ್ಷಕರ ಕೋರಿಕೆ ವರ್ಗಾವಣೆ ಪರಸ್ಪರ ವರ್ಗಾವಣೆ ಗಳನ್ನು ಈಗಾಗಲೇ ಯಶಸ್ವಿಯಾಗಿ ನಿರ್ವಹಿಸಲಾಗಿರುತ್ತದೆ. ಅಲ್ಲದೇ ಸರ್ಕಾರದ ಆದೇಶದ ಮೂಲಕ ವರ್ಗಾವಣೆಗಳು ಜಾರಿಗೊಂಡಿರುತ್ತವೆ. ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಪ್ರೌಢಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಎಲ್ಲಾ ಬಟವಾಡೆ ಅಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿಯಿಂದ ಹೊರಗೆ ವರ್ಗಾವಣೆ ಪಡೆದಿರುವ ನೌಕರರುಗಳನ್ನು ತಮ್ಮ…
ನವದೆಹಲಿ: ಲೆಬನಾನ್ ಮೇಲೆ ಸೋಮವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ ,490 ಜನರು ಸಾವನ್ನಪ್ಪಿದ್ದಾರೆ ಮತ್ತು 1,200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯವನ್ನು ಉಲ್ಲೇಖಿಸಿ ಅಲ್ ಜಜೀರಾ ವರದಿ ಮಾಡಿದೆ 2006 ರ ಇಸ್ರೇಲ್-ಹೆಜ್ಬುಲ್ಲಾ ಸಂಘರ್ಷದ ನಂತರ ಇದು ಅತ್ಯಂತ ಭೀಕರ ದಾಳಿಯಾಗಿದ್ದು, ಹೆಜ್ಬುಲ್ಲಾ ವಿರುದ್ಧ ತೀವ್ರವಾದ ವಾಯು ಕಾರ್ಯಾಚರಣೆಯ ಮಧ್ಯೆ ದಕ್ಷಿಣ ಮತ್ತು ಪೂರ್ವ ಲೆಬನಾನ್ ನಿವಾಸಿಗಳಿಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಇಸ್ರೇಲ್ ಪಡೆಗಳು ಎಚ್ಚರಿಕೆ ನೀಡಿವೆ. ಸಾವಿರಾರು ಲೆಬನಾನ್ನರು ದಕ್ಷಿಣದಿಂದ ಪಲಾಯನ ಮಾಡಿದರು ದಕ್ಷಿಣ ಬಂದರು ನಗರವಾದ ಸಿಡಾನ್ ನಿಂದ ಬೈರುತ್ ಗೆ ಹೋಗುವ ಮುಖ್ಯ ಹೆದ್ದಾರಿಯು ವಾಹನಗಳಿಂದ ತುಂಬಿರುವುದರಿಂದ ಸಾವಿರಾರು ಲೆಬನಾನ್ ನಿವಾಸಿಗಳು ದಕ್ಷಿಣದಿಂದ ಪಲಾಯನ ಮಾಡಿದ್ದಾರೆ, ಇದು 2006 ರ ಯುದ್ಧದ ನಂತರದ ಅತಿದೊಡ್ಡ ನಿರ್ಗಮನವಾಗಿದೆ ಎಂದು ಸುದ್ದಿ ಸಂಸ್ಥೆ ಎಎಫ್ ಪಿ ವರದಿ ಮಾಡಿದೆ. ಹಿಜ್ಬುಲ್ಲಾ ಶಸ್ತ್ರಾಸ್ತ್ರ ಸಂಗ್ರಹಣಾ ಸ್ಥಳಗಳನ್ನು ಗುರಿಯಾಗಿಸಿಕೊಂಡು ಸುಮಾರು 300 ತಾಣಗಳನ್ನು ಗುರಿಯಾಗಿಸಿಕೊಂಡಿರುವುದಾಗಿ ಇಸ್ರೇಲ್…
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ನಿಗಮಗಳಾದ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.10 ಕೊನೆಯ ದಿನವಾಗಿದೆ. ಪರಿಶಿಷ್ಟ ಜಾತಿ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-1, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-2, ಉದ್ಯಮಶೀಲತಾ ಅಭಿವೃದ್ಧಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಯ ಕುರಿತು ಸವಿವರವಾಗಿ ಸಮಾಜ ಕಲ್ಯಾಣ ಇಲಾಖೆಯ ಸಾಲ ಸೇವೆಗಳ ಪೋರ್ಟಲ್ ವೆಬ್ಸೈಟ್ https://swdcorp.karnataka.gov.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. 2023-24ನೇ ಸಾಲಿನಲ್ಲಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆಸಕ್ತರು https://sevasindhu.karnataka.govt.in ತಂತ್ರಾAಶದ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ…
ಬೆಂಗಳೂರು : ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ ಅವರ್ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಆ್ಯಂಬುಲೆನ್ಸ್ಗಳ ಸೇವೆಗೆ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಸಾರಿಗೆ ಇಲಾಖೆ ಸಹಕಾರದೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಡ್ ಸುರಕ್ಷತೆ ನಿಧಿಯಡಿ ಯೋಜನೆ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ ಹಂತದಲ್ಲಿ 65 ಆ್ಯಂಬುಲೆನ್ಸ್ಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಿಕೊಟ್ಟಿದ್ದಾರೆ. ಅಪಘಾತಕ್ಕೀಡಾದವರಿಗೆ ಆಪತ್ಬಾಂಧವನ ರೀತಿಯಲ್ಲಿ ಕಾರ್ಯನಿರ್ವಹಿಸಲಿರುವ ಈ ಆ್ಯಂಬುಲೆನ್ಸ್ಗಳಲ್ಲಿ 26 ಅಡ್ವಾನ್ಸ್ ಲೈಫ್ ಸಪೋರ್ಟ್ ತಂತ್ರಜ್ಞಾನವನ್ನು ಅಳವಡಿಸಲಾಗಿದೆ. ರಸ್ತೆ ಸಂಚಾರದಲ್ಲಿ ಹೆಚ್ಚು ಅಪಘಾತ ಸಂಭವಿಸುವ 65 ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಿದ್ದು, ಅಂತಹ ಸ್ಥಳಗಳ ಹತ್ತಿರದಲ್ಲಿರುವ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಿಗೆ ಈ ಆ್ಯಂಬುಲೆನ್ಸ್ಗಳನ್ನು ನೀಡಲಾಗಿದೆ. * ಆ್ಯಂಬುಲೆನ್ಸ್ಗಳು ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳ ಸನಿಹದ ಆಸ್ಪತ್ರೆಗಳಲ್ಲಿ ತಂಗಲಿವೆ. * 65 ಹಾಟ್ಸ್ಪಾಟ್ಗಳನ್ನು ಗುರುತಿಸಲಾಗಿದ್ದು, ಆ ಸ್ಥಳಗಳ ಹತ್ತಿರದ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳಿಗೆ ಆ್ಯಂಬುಲೆನ್ಸ್ಗಳನ್ನು ನೀಡಲಾಗಿದೆ. * ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅಡ್ವಾನ್ಸ್ ಲೈಫ್ ಸಪೋರ್ಟ್…











