Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ನಿಮ್ಮ ಕಾರು ಅಪಘಾತಕ್ಕೀಡಾದರೆ ನಿಮ್ಮ ವಿಮಾ ಪೂರೈಕೆದಾರರಿಂದ ವಿಮಾ ರಕ್ಷಣೆಯನ್ನು ಹೇಗೆ ಪಡೆಯುವುದು. ವಿಮಾ ಮೊತ್ತವನ್ನು ಕ್ಲೈಮ್ ಮಾಡುವ ಹಂತ-ಹಂತದ ಪ್ರಕ್ರಿಯೆಯನ್ನು ನಾವು ಇಲ್ಲಿ ಹೇಳುತ್ತಿದ್ದೇವೆ. ನೀವು ಉತ್ತಮ ಚಾಲಕರಾಗಿದ್ದರೂ ಸಹ, ರಸ್ತೆ ಅಪಘಾತಕ್ಕೆ ಯಾರಾದರೂ ಬಲಿಯಾಗಬಹುದು. ಮತ್ತು ಕೆಲವೊಮ್ಮೆ ಪರಿಣಾಮಗಳು ತುಂಬಾ ಒತ್ತಡವನ್ನು ಉಂಟುಮಾಡಬಹುದು. ಹೆಚ್ಚುವರಿಯಾಗಿ, ನೈಸರ್ಗಿಕ ವಿಪತ್ತುಗಳು ಅಥವಾ ವಿಪತ್ತುಗಳಿಂದಾಗಿ ನಿಮ್ಮ ಕಾರು ಹಾನಿಗೊಳಗಾಗುವುದನ್ನು ಸಹ ನೀವು ನೋಡಬಹುದು. ನೀವು ಅಪಘಾತದಲ್ಲಿ ತೊಡಗಿಸಿಕೊಂಡಾಗ, ಪ್ರತಿಯೊಬ್ಬರೂ ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ನೀವು ಕ್ರಮಗಳನ್ನು ತೆಗೆದುಕೊಳ್ಳಬೇಕು, ಕಾನೂನನ್ನು ಅನುಸರಿಸಿ ಮತ್ತು ಹಾನಿಗಳನ್ನು ಮರುಪಡೆಯಲು ವಿಮೆ ಕ್ಲೈಮ್ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿಯೂ ಇದೇ ಪ್ರಕ್ರಿಯೆ ಅನ್ವಯಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನಿಮ್ಮ ತಕ್ಷಣದ ಕ್ರಮವು ನಿಮ್ಮ ವಿಮಾ ಕಂಪನಿಗೆ ತಿಳಿಸಬೇಕು ಮತ್ತು ಕಾರ್ ವಿಮೆ ಕ್ಲೈಮ್ ಮಾಡಲು ಸರಿಯಾದ ವಿಧಾನವನ್ನು ಅನುಸರಿಸಬೇಕು. ಅಪಘಾತದ ನಂತರ ನಿಮ್ಮ ವಿಮಾ ಕ್ಲೈಮ್ ಅನ್ನು ಸರಿಯಾಗಿ ಪರಿಹರಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ನಿಮ್ಮ ವಿಮಾ ಕಂಪನಿಯೊಂದಿಗೆ…
ಬೆಂಗಳೂರು : ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ನಿವೃತ್ತಿ ವೇತನ, ಇತರೆ ಭತ್ಯೆಗಳನ್ನು ಪರಿಷ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ, ಮೇಲೆ (2)ರ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳು ಮತ್ತು ಪಿಂಚಣಿಯನ್ನು ಪರಿಷ್ಕರಿಸಿ ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಮುಂದುವರೆದು, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ರ ಅವಕಾಶಗಳಂತೆ ಪರಿಷ್ಕೃತ ವೇತನ ಶ್ರೇಣಿಗಳು ಮತ್ತು ಪರಿಷ್ಕೃತ ಪಿಂಚಣಿಯನ್ನು ಅನುಷ್ಠಾನಗೊಳಿಸಲು ಮೇಲೆ (4)ರಲ್ಲಿ ಓದಲಾದ ದಿನಾಂಕ: 23.08.2024ರಲ್ಲಿ ವಿಸ್ತ್ರತವಾದ ಆದೇಶಗಳನ್ನು ಹೊರಡಿಸಲಾಗಿರುತ್ತದೆ. ರಾಜ್ಯ ಸರ್ಕಾರವು ರಚಿಸಿದ 7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಲಭ್ಯವಿರುವ ಕನಿಷ್ಠ ಮತ್ತು ಗರಿಷ್ಠ ಪಿಂಚಣಿಯನ್ನು ಈ ಕೆಳಕಂಡಂತೆ ಪರಿಷ್ಕರಿಸಲು ಸರ್ಕಾರವು ಹರ್ಷಿಸುತ್ತದೆ. 1. ಕನಿಷ್ಠ ನಿವೃತ್ತಿ ವೇತನ: ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳು ಮತ್ತು ಕರ್ನಾಟಕ ನಾಗರೀಕ ಸೇವಾ (ಅಸಾಧಾರಣ…
ಮುಂಬೈ: ಬಾಂಬೆ ಹೈಕೋರ್ಟ್ನ ಔರಂಗಾಬಾದ್ ಪೀಠವು ಪೊಲೀಸ್ ಠಾಣೆಯೊಳಗೆ ವಿಡಿಯೋ ರೆಕಾರ್ಡ್ ಮಾಡುವುದು ಬೇಹುಗಾರಿಕೆಗೆ ಸಂಬಂಧಿಸಿದ ಅಧಿಕೃತ ರಹಸ್ಯ ಕಾಯಿದೆಯ ಸೆಕ್ಷನ್ 3 ರ ಅಡಿಯಲ್ಲಿ ಬರುವುದಿಲ್ಲ ಎಂದು ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ವಿಭಾ ಕಂಕಣವಾಡಿ ಮತ್ತು ಎಸ್ಜಿ ಚಾಪಲ್ಗಾಂವ್ಕರ್ ಅವರ ಪೀಠವು ಮುಂಬೈ ಪೊಲೀಸ್ ಕಾನ್ಸ್ಟೆಬಲ್ ಸಂತೋಷ್ ಅಥಾರೆ ವಿರುದ್ಧ ದಾಖಲಿಸಲಾದ ಕಾಯಿದೆಯಡಿಯಲ್ಲಿ ಆರೋಪವನ್ನು ತಳ್ಳಿಹಾಕಿದ ಕಾರಣ ಈ ನಿರ್ಧಾರವು ಬಂದಿದೆ. ಅಹಮದ್ನಗರ ಜಿಲ್ಲೆಯ ಪಥರ್ಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಅಥಾರೆ ಮತ್ತು ಆತನ ಸಹೋದರ ಸುಭಾಷ್ ಭಾಗಿಯಾಗಿದ್ದಾರೆ. ಪೋಲೀಸರು ಅಧಿಕೃತ ರಹಸ್ಯ ಕಾಯಿದೆಯನ್ನು ಅನ್ವಯಿಸಿದ್ದಾರೆ, ಆದರೆ ಆಕ್ಟ್ನ ಸೆಕ್ಷನ್ 2(8) “ನಿಷೇಧಿತ ಸ್ಥಳಗಳನ್ನು” ವ್ಯಾಖ್ಯಾನಿಸುತ್ತದೆ ಮತ್ತು ಪೊಲೀಸ್ ಠಾಣೆಗಳನ್ನು ಆ ವ್ಯಾಖ್ಯಾನದಲ್ಲಿ ಸೇರಿಸಲಾಗಿಲ್ಲ ಎಂದು ನ್ಯಾಯಾಲಯವು ಗಮನಿಸಿದೆ. “ಬೇಹುಗಾರಿಕೆಗೆ ದಂಡ” ವನ್ನು ವ್ಯವಹರಿಸುವ ಸೆಕ್ಷನ್ 3, ಪೊಲೀಸ್ ಠಾಣೆಯೊಳಗೆ ತೆಗೆದುಕೊಳ್ಳುವ ಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಆದಾಗ್ಯೂ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ…
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ Cerebral Palsy, Muscular Dystrophy, Parkinson’s and Multiple Sclerosis ಕಾಯಿಲೆಯಿಂದ ಬಳಲುತ್ತಿರುವ ವಿಕಲಚೇತನ ವ್ಯಕ್ತಿಗಳ ಆರೈಕೆ ಮಾಡುತ್ತಿರುವ ಆರೈಕೆದಾರಿಗೆ ಮಾಹೆಯಾನ ರೂ.1 ಸಾವಿರಗಳ ಪ್ರೋತ್ಸಾಹಧನವನ್ನು ನೀಡುವ ಯೋಜನೆಯನ್ನು 2024-25ನೇ ಸಾಲಿನಲ್ಲಿ ಜಾರಿಗೊಳಿಸಲಾಗಿದೆ. ಆದ್ದರಿಂದ ವಿಕಲತೆ ಇರುವವರನ್ನು ಆರೈಕೆ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಗಳನ್ನು ಆಯಾಯ ತಾಲ್ಲೂಕಿನ ಎಂಆರ್ಡಬ್ಲ್ಯುಗಳಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಆಯಾಯ ತಾಲ್ಲೂಕಿನ ಎಂಆರ್ಡಬ್ಲ್ಯುಗಳಿಗೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಇದರ ಪ್ರಯೋಜನವನ್ನು ಕೊಡಗು ಜಿಲ್ಲೆಯಲ್ಲಿ ಈ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರು ಪಡೆದುಕೊಳ್ಳಬೇಕಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಪಂಚಾಯತ್ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್ಡಬ್ಲ್ಯುಗಳಾದ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ.8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ.9900883654 ಹಾಗೂ…
ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್ ಎದುರಾಗಿದ್ದು, ಬೆಳ್ಳುಳ್ಳಿ ಹಾಗೂ ಟೊಮೆಟೊ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಬೆಳ್ಳುಳ್ಳಿ ದರ ಕೆಜಿಗೆ 400 ರೂ. ಗಡಿ ದಾಟಿದ್ರೆ, ಟೊಮೆಟೊ ದರ ಕೆಜಿಗೆ 80 ರೂ.ಗೆ ಮಾರಾಟವಾಗುತ್ತಿದೆ. ದೇಶದ ಒಟ್ಟು ಬೆಳ್ಳುಳ್ಳಿ ಉತ್ಪಾದನೆಯಲ್ಲಿ ಮಧ್ಯಪ್ರದೇಶ ಶೇಕಡ 70ರಷ್ಟು ಪಾಲು ಹೊಂದಿದೆ. ಮಧ್ಯಪ್ರದೇಶದಿಂದ ಆವಕ ಇಳಿಕೆಯಾಗಿರುವುದರಿಂದ ಬೆಳ್ಳುಳ್ಳಿ ಬೆಲೆ 400 ರ ಗಡಿ ದಾಟಿದೆ. ರಾಜ್ಯದಲ್ಲಿ ಮಳೆಯಿಂದ ಬೆಳ್ಳುಳ್ಳಿ ಬೆಳೆ ಹಾಳಾಗಿದ್ದು, ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ. ನವೆಂಬರ್ ವೇಳೆಗೆ ಬೆಳ್ಳುಳ್ಳಿ ದರ ಮತ್ತಷ್ಟು ಏರಿಕೆಯಾಗಲಿದ್ದು, ಗ್ರಾಹಕರಿಗೆ ಹೊರೆಯಾಗಿ ಪರಿಣಮಿಸಲಿದೆ. ಕಳೆದ ಫೆಬ್ರವರಿಯಲ್ಲಿ ಬೆಳ್ಳುಳ್ಳಿ ದರ 500 ರೂ. ಸಮೀಪಿಸಿತ್ತು. ಈಗ ಚಿಲ್ಲರೆ ಮಾರುಕಟ್ಟೆಯಲ್ಲಿ ಉತ್ತಮ ದರ್ಜೆಯ ಬೆಳ್ಳುಳ್ಳಿ ದರ 360 ರಿಂದ 370 ರೂ.ಗೆ ಮಾರಾಟವಾಗುತ್ತಿದೆ. ಕೆಲವು ಕಡೆ ಕೆಜಿಗೆ 400 ರೂ. ತಲುಪಿದೆ. ಕೇಂದ್ರ ಸರ್ಕಾರ ದೇಶದ ರೈತರ ಹಿತ ದೃಷ್ಟಿಯಿಂದ ಬೆಳ್ಳುಳ್ಳಿ ಮೇಲಿನ ಆಮದು ಸುಂಕವನ್ನು 100ರಷ್ಟು ಹೆಚ್ಚಿಸಿದೆ.…
ಬೆಂಗಳೂರು : ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದೆ. ಕೆಲವು ಇಲಾಖೆಗಳಲ್ಲಿ ಹಲವು ದಶಕಗಳಿಂದ ಸಿ ಅಂಡ್ ಆರ್ ತಿದ್ದುಪಡಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್ ಆರ್ ಸಿದ್ಧಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಪರಿಶೀಲಿಸಿ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. ಯುಪಿಎಸ್ಸಿಯಲ್ಲಿ ಕೇವಲ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳನ್ನು ಮಾಡಲು ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್ಸಿ ಕೇವಲ ಗ್ರೂಪ್ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್ ಸಿಯಂತಹ ಬೇರೆ ನೇಮಕಾತಿಗಳನ್ನು ಕೆಇಎ…
ಬೆಂಗಳೂರು: ರೈತರು, ಗ್ರಾಹಕರಿಗೆ ಅಂಚೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗ್ರಾಹಕರ ಮನೆ ಬಾಗಿಲಿಗೆ ಅಂಚೆ ಇಲಾಖೆಯ ಮೂಲಕ ಬೇಳೆಕಾಳು, ಬಿತ್ತನೆ ಬೀಜ ತಲುಪಿಸುವ ವ್ಯವಸ್ಥೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ ಎಂದು ಚೀಫ್ ಪೋಸ್ಟ್ ಮಾಸ್ಟರ್ ಜನರಲ್ ಎಸ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಅಂಚೆ ಇಲಾಖೆ ವತಿಯಿಂದ ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಸೋಮವಾರ ಆಯೋಜಿಸಿದ್ದ ಗ್ರಾಹಕರ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಪೀಡ್ ಪೋಸ್ಟ್ ಗೆ ಸಂಬಂಧಿಸಿದಂತೆ ದ್ವಿದಳ ಧಾನ್ಯಗಳ ಅಭಿವೃದ್ಧಿ ಮಂಡಳಿ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ಗ್ರಾಹಕರಿಗೆ ಬೇಳೆ ಕಾಳು ಮತ್ತು ರೈತರಿಗೆ ಬೆತ್ತಲೆ ಬೀಜಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಗೆ ಶೀಘ್ರವೇ ಚಲನೆ ಸಿಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಬೆಳೆಗಾರರಿಂದ ಗ್ರಾಹಕರಿಗೆ ನೇರವಾಗಿ 350 ಟನ್ ಮಾವಿನಹಣ್ಣು ಪಾರ್ಸೆಲ್ ತಲುಪಿಸಲಾಗಿದೆ. ಅಂಚೆ ಇಲಾಖೆಯ ಈ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದು ತಿಳಿಸಿದ್ದಾರೆ.
ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ ಬರಲಿದ್ದು, ಬೆಳಗ್ಗೆ 7.30 ರಿಂದ ಮತ ಎಣಿಕೆ ಆರಂಭವಾಗಲಿದೆ. ಪ್ರತಿ ಮತ ಎಣಿಕೆ ಸಭಾಂಗಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಅದರ ಮೂಲಕ ಮತ ಎಣಿಕೆ ವೇಳೆ ವಿಡಿಯೋಗ್ರಫಿ ಮಾಡಲಾಗುವುದು. ಅಂಚೆ ಮತಗಳ ಎಣಿಕೆ ಬೆಳಗ್ಗೆ 7:30ಕ್ಕೆ ಆರಂಭವಾಗಲಿದ್ದು, ಇವಿಎಂಗಳ ಎಣಿಕೆ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ ಎಂದು ತಿಳಿಸಿದರು. ಮುಖ್ಯ ಚುನಾವಣಾಧಿಕಾರಿಗಳ ಪ್ರಕಾರ, ಮತಗಟ್ಟೆ ಶಾಂತಿಯುತವಾಗಿ ಕಾರ್ಯನಿರ್ವಹಿಸಲು ಕರ್ತವ್ಯದಲ್ಲಿರುವ ನೌಕರರು, ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳ ಜನರೊಂದಿಗೆ ಸಭೆ ನಡೆಸಲಾಗಿದೆ. ಮಾಹಿತಿ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಒಟ್ಟು 28 ಸ್ಥಳಗಳಲ್ಲಿ ಮತ ಎಣಿಕೆ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಇವಿಎಂ ಯಂತ್ರಗಳನ್ನು ಇರಿಸಲಾಗಿರುವಲ್ಲಿ, ಎಣಿಕೆ ಕೇಂದ್ರಗಳ ರಕ್ಷಣೆಗೆ ಸಿಎಪಿಎಫ್ಗಳು, ಸ್ಥಳೀಯ ಪೊಲೀಸರು ಮತ್ತು ಇತರ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಕಟ್-ಆಫ್ ವಲಯಗಳು ಮತ್ತು ಸಂಚಾರ ರಹಿತ ವಲಯಗಳನ್ನು ಗುರುತಿಸಲಾಗಿದೆ ರಾಜೌರಿ ಎಸ್ಎಸ್ಪಿ ರಂದೀಪ್…
ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ವರದಿಯನ್ನು ಮಂಡಿಸಲಾಗಿತ್ತು. ಇದನ್ನು ಇದೇ ಅಕ್ಟೋಬರ್.18ರಂದು ನಡೆಯುವ ಸಂಪುಟ ಸಭೆಯ ಮುಂದೆ ತರುತ್ತೇನೆ. ಅಕ್ಟೋಬರ್.18ರಂದು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡನೆಯಾಗಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಜಾತಿಗಣತಿ ವರದಿ ಜಾರಿಯ ಬಗ್ಗೆ ಸಂಸದರು, ಶಾಸಕರನ್ನು ಒಳಗೊಂಡ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಗೆ ಶಾಸಕರು, ಸಂಸದರು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ. ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಸಿದ್ಧರಾಮಯ್ಯ ಅವರು, ಜಾತಿಗಣತಿ ವರದಿ ಜಾರಿ ವಿಚಾರವಾಗಿ ಸಂಸದರು, ಶಾಸಕರ ಜೊತೆಗೆ ಸಭೆ ನಡೆಸಿದ್ದೇನೆ. ಜಾತಿಗಣತಿ ವರದಿ ಜಾರಿ ಮಡಾುವಂತೆ ಮನವಿ ಪತ್ರ ನೀಡಿದ್ದಾರೆ ಎಂದರು. ದೇಶದಲ್ಲೇ ಮೊದಲ ಬಾರಿಗೆ ಜಾತಿ ಗಣತಿ ನಡೆಸಲಾಗಿದೆ. 2014ರಲ್ಲಿ ಕಾಂತರಾಜು ನೇತೃತ್ವದಲ್ಲಿ ಜಾತಿಗಣತಿ ನಡೆಸಲಾಗಿದೆ. ಆದರೇ ಜಾತಿಗಣತಿ ವರದಿಯನ್ನು…
ಬೆಂಗಳೂರು: ಇ-ಖಾತಾ ಪಡೆಯಲು ಸಾರ್ವಜನಿಕರು ಕಚೇರಿಗಳಿಗೆ ಬರುವ ಅಗತ್ಯ ಇಲ್ಲ. ಬದಲಾಗಿ ಮನೆಯಿಂದಲೇ ಇ-ಖಾತಾ ಡೌನ್ಲೋಡ್ ಮಾಡಿಕೊಳ್ಳಬಹುದು ಎಂಬುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಇ-ಖಾತಾ ಬಗೆಗಿನ ಗೊಂದಲಗಳ ಬಗ್ಗೆ ಸೋಮವಾರ ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ಬೆನ್ನಿಗೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಬೆಂಗಳೂರಿನಲ್ಲಿ 21 ಲಕ್ಷ ನಿವೇಶನಗಳಿವೆ. ಈ ನಿವೇಶನಗಳ ಡ್ರಾಪ್ಟ್ಗಳನ್ನು ಬಿಬಿಎಂಪಿ ಈಗಾಗಲೇ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. ಆಸ್ತಿ ಮಾಲೀಕರು ಈ ಡ್ರಾಪ್ಟ್ ಗಳನ್ನು ನೋಡಿ, ಅಗತ್ಯ ದಾಖಲೆಗಳನ್ನು ವೆಬ್ಸೈಟ್ ನಲ್ಲೇ ಲಗತ್ತಿಸುವ ಮೂಲಕ ಯಾವುದೇ ಕಚೇರಿಗೆ ಹೋಗದೆ ಮನೆಯಿಂದಲೇ ಶಾಶ್ವತ ಇ-ಖಾತಾ ಪಡೆದುಕೊಳ್ಳಬಹುದು” ಎಂದು ಅವರು ತಿಳಿಸಿದರು. ಇ-ಖಾತಾ ಹೆಲ್ಪ್ ಡೆಸ್ಕ್ ಇ-ಖಾತಾ ಪಡೆಯುವ ಸಂಬಂಧ ಸಾರ್ವಜನಿಕರು ಅನುಭವಿಸುತ್ತಿರುವ ಸಮಸ್ಯೆ ಗಮನದಲ್ಲಿದ್ದು, ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಲ್ಪ್ ಡೆಸ್ಕ್ ಗಳನ್ನು ತೆರೆಯುವ ಮೂಲಕ ಸರ್ಕಾರವೂ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಈ ಬಗ್ಗೆ ಮಾಹಿತಿ ನೀಡಿದ…











