Subscribe to Updates
Get the latest creative news from FooBar about art, design and business.
Author: kannadanewsnow57
ಭೂಮಿಯ ನೆರಳಿನ ಮೂಲಕ ಹಾದುಹೋಗುವಾಗ ಚಂದ್ರನು ಕೆಂಪು ಬಣ್ಣದಲ್ಲಿ ಹೊಳೆಯುವ ಅಸಾಧಾರಣ ಖಗೋಳ ಘಟನೆಗೆ ಭಾರತ ಸಾಕ್ಷಿಯಾಗಲಿದೆ. ಈ ಘಟನೆಯನ್ನು ಬ್ಲಡ್ ಮೂನ್ ಮತ್ತು ವಿದ್ಯಮಾನವನ್ನು ಸಂಪೂರ್ಣ ಚಂದ್ರ ಗ್ರಹಣ ಎಂದು ಕರೆಯಲಾಗುತ್ತದೆ. ಈ ಅಪರೂಪದ ವಿದ್ಯಮಾನವು ದೇಶದ ಹೆಚ್ಚಿನ ಭಾಗಗಳಲ್ಲಿ ಗೋಚರಿಸುತ್ತದೆ, ಅತ್ಯಂತ ನಾಟಕೀಯ ಹಂತವು ತಡರಾತ್ರಿ ಸಂಭವಿಸುತ್ತದೆ ಮತ್ತು ಒಂದು ಗಂಟೆಗೂ ಹೆಚ್ಚು ಕಾಲ ಇರುತ್ತದೆ. ಭಾರತದಲ್ಲಿ ಗ್ರಹಣ ಸಮಯ ಚಂದ್ರ ಗ್ರಹಣವು ಸೆಪ್ಟೆಂಬರ್ 7 ರಂದು ರಾತ್ರಿ 8:58 ಕ್ಕೆ (ಪೆನಂಬ್ರಲ್ ಹಂತ) ಪ್ರಾರಂಭವಾಗುತ್ತದೆ ಮತ್ತು ಸೆಪ್ಟೆಂಬರ್ 8 ರಂದು ಮುಂಜಾನೆ 2:25 ಕ್ಕೆ ಕೊನೆಗೊಳ್ಳುತ್ತದೆ, ಆದರೆ ಈ ಘಟನೆಯ ಮುಖ್ಯಾಂಶವೆಂದರೆ, ಚಂದ್ರನು ಸಂಪೂರ್ಣವಾಗಿ ಭೂಮಿಯ ನೆರಳಿನಲ್ಲಿ ಮುಳುಗಿರುವಾಗ ಕಾಣುತ್ತದೆ ಸಂಪೂರ್ಣ ಗ್ರಹಣ ಹಂತವು ರಾತ್ರಿ 11:00 ಕ್ಕೆ ಪ್ರಾರಂಭವಾಗುತ್ತದೆ ಮತ್ತು ಭಾರತೀಯ ಕಾಲಮಾನ 12:22 ಕ್ಕೆ ಕೊನೆಗೊಳ್ಳುತ್ತದೆ, ರಾತ್ರಿ 11:41 ರ ಸುಮಾರಿಗೆ ಗರಿಷ್ಠ ಗ್ರಹಣದಲ್ಲಿ ಅದರ ಆಳವಾದ ಕೆಂಪು ಹೊಳಪನ್ನು ತಲುಪುತ್ತದೆ. ಸ್ಪಷ್ಟ ಆಕಾಶವು…
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಆರೋಗ್ಯ ಇಲಾಖೆ ಸಿಹಿಸುದ್ದಿ ನೀಡಿದ್ದು, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 432 ‘ಸ್ಟಾಫ್ ನರ್ಸ್’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ ಸ್ಟಾಫ್ ನರ್ಸ್ ಹುದ್ದೆಗಳಿಗೆ ಅಭ್ಯರ್ಥಿಯು GNM (General Nursing and Midwifery) ಅಥವಾ B.Sc (ನರ್ಸಿಂಗ್) ಪದವಿ ಹೊಂದಿರಬೇಕು. ಅನುಭವ ಮತ್ತು ಇತರೆ ನಿಬಂಧನೆಗಳು ಅಧಿಸೂಚನೆಯಲ್ಲಿ ಸೂಚಿಸಲಾಗುವುದು. ಗ್ರೂಪ್-ಡಿ ಹುದ್ದೆಗಳಿಗೆ ಅಭ್ಯರ್ಥಿಯು ಕನಿಷ್ಠ SSLC (10ನೇ ತರಗತಿ) ಪಾಸ್ ಆಗಿರಬೇಕು. ಕೆಲವು ಹುದ್ದೆಗಳಿಗೆ ITI ಅಥವಾ ಕೆಲಸದ ಅನುಭವದ ಅಗತ್ಯವಿರಬಹುದು. ವಯೋಮಿತಿ ಸಾಮಾನ್ಯವಾಗಿ ಈ ರೀತಿಯ ಭರ್ತಿಗಳಲ್ಲಿ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷಗಳಾಗಿರುತ್ತದೆ. ಎಸ್ಸಿ/ಎಸ್ಟಿ, ಓಬಿಸಿ, ವಿಕಲಾಂಗರು ಮತ್ತು ಇತರೆ ರಕ್ಷಿತ ವರ್ಗದ ಅಭ್ಯರ್ಥಿಗಳಿಗೆ ವಯೋ ಮಿತಿಯಲ್ಲಿ ಸರ್ಕಾರದ ನಿಯಮಗಳಿಗೆ ಅನುಗುಣವಾಗಿ ರಿಯಾಯತಿ ನೀಡಲಾಗುವುದು. ಆಯ್ಕೆ ಪ್ರಕ್ರಿಯೆ ಅಭ್ಯರ್ಥಿಗಳ ಆಯ್ಕೆ ಲಿಖಿತ ಪರೀಕ್ಷೆ (Written Test) ಮತ್ತು ವೈಯಕ್ತಿಕ ಸಂದರ್ಶನ (Personal Interview)…
ಬಾಕಿ ಇರುವ ಸಂಚಾರ ಇ-ಚಲನ್ ಪ್ರಕರಣಗಳ ದಂಡದ ಮೇಲೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದ್ದು ಈ ಅವಕಾಶವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆ ನೀಡಿದರು. ಗುರುವಾರ ಜಿಲ್ಲಾ ನ್ಯಾಯಾಲಯದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿ, ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಲ್ಲಿ ದಂಡ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಿಗೆ ದಂಡವನ್ನು ಪಾವತಿಸಲು ಶೇ.50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದ್ದು ಸೆ.12 ರವರೆಗೆ ಈ ರಿಯಾಯಿತಿ ಅನ್ವಯಿಸುತ್ತದೆ. ಆದ್ದರಿಂದ ಬಾಕಿ ಉಳಿಸಿಕೊಂಡಿರುವವರು ಕೂಡಲೇ ಈ ಅವಕಾಶವನ್ನು ಬಳಕೆ ಮಾಡಿಳ್ಳಬೇಕೆಂದರು. ಪೊಲೀಸ್ ಇಲಾಖೆಯಿಂದ ಆ.23 ರಿಂದ ಸೆ.02 ರವರೆಗೆ ಈ ರಿಯಾಯಿತಿಯಡಿ ಒಟ್ಟು 15,465 ಇ-ಚಲನ್ ಪ್ರಕರಣಗಳನ್ನು ರೂ.63,22,750/- ಮೊತ್ತ ಪಾವತಿಸಿ ಮುಕ್ತಾಯ ಮಾಡಲಾಗಿದೆ. ಇಂದಿನಿAದ ಇನ್ನು ಒಂಭತ್ತು ದಿನಗಳ ಕಾಲದವರೆಗೆ ಮಾತ್ರ ಈ ಅವಕಾಶವಿದ್ದು ಸಾರ್ವಜನಿಕರು ತಮ್ಮ ವಾಹನಗಳ ಮೇಲೆ ಪೊಲೀಸರಿಂದ ನೋಂದಾಯಿಸಲ್ಪಟ್ಟ ದಂಡವನ್ನು ಶೀಘ್ರವಾಗಿ ಪಾವತಿಸುವಂತೆ ಅವರು ತಿಳಿಸಿದರು. ರಾಷ್ಟ್ರೀಯ…
ನವದೆಹಲಿ :ಭಾರತದಲ್ಲಿ ಇತರ ಕಾಯಿಲೆಗಳಿಗಿಂತ ಹೃದಯ ಕಾಯಿಲೆಗಳ ಅಪಾಯ ಹೆಚ್ಚಾಗಿ ಕಂಡುಬರುತ್ತಿದೆ, ಇದು ಪ್ರತಿ ವರ್ಷವೂ ಸಾವಿಗೆ ಪ್ರಮುಖ ಕಾರಣವಾಗಿದೆ. ಕೆಲವು ದಶಕಗಳ ಹಿಂದಿನವರೆಗೆ, ಹೃದಯ ಕಾಯಿಲೆಗಳನ್ನು ವಯಸ್ಸಾದಂತೆ ಬರುವ ಕಾಯಿಲೆಗಳು ಎಂದು ಕರೆಯಲಾಗುತ್ತಿತ್ತು, ಆದರೆ ಈಗ ಕಿರಿಯ ವಯಸ್ಸಿನ ಜನರು, 20 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಹ ಇದಕ್ಕೆ ಬಲಿಯಾಗುತ್ತಿದ್ದಾರೆ. ಅಂಕಿಅಂಶಗಳು ಪ್ರತಿ ವರ್ಷ ಲಕ್ಷಾಂತರ ಭಾರತೀಯರು ಹೃದಯ ಕಾಯಿಲೆಗಳಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಮತ್ತು ಅವರಲ್ಲಿ ಹೆಚ್ಚಿನವರು ಯುವ ಪೀಳಿಗೆಯವರು ಎಂದು ತೋರಿಸುತ್ತವೆ. ತಮ್ಮನ್ನು ತಾವು ಸದೃಢರು ಮತ್ತು ಶಕ್ತಿಯುತರು ಎಂದು ಪರಿಗಣಿಸುತ್ತಿದ್ದ 30-35 ವರ್ಷ ವಯಸ್ಸಿನ ಯುವಕರು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ನೀವು ಪ್ರತಿದಿನ ಸಾಮಾಜಿಕ ಮಾಧ್ಯಮದಲ್ಲಿ ಇಂತಹ ಸುದ್ದಿಗಳನ್ನು ನೋಡುತ್ತಿರಬೇಕು. ಹೃದಯ ಕಾಯಿಲೆ ಮತ್ತು ಅದರಿಂದ ಉಂಟಾಗುವ ಸಾವುಗಳ ಕುರಿತಾದ ಇತ್ತೀಚಿನ ವರದಿಯು ಈ ಅಪಾಯದ ಬಗ್ಗೆ ಎಚ್ಚರಿಸಿದೆ. ಭಾರತದ ರಿಜಿಸ್ಟ್ರಾರ್ ಜನರಲ್ ಅಡಿಯಲ್ಲಿ ನಡೆಸಲಾದ ಮಾದರಿ ನೋಂದಣಿ ಸಮೀಕ್ಷೆಯ ವರದಿಯಲ್ಲಿ, ತಜ್ಞರ ತಂಡವು ಭಾರತದಲ್ಲಿನ ಎಲ್ಲಾ…
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕೊಡಗು ಇವರ ವತಿಯಿಂದ 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದ ಯುವಕ, ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನಿಡುವ ಯೋಜನೆಗಳನ್ನು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಹಯೋಗದೊಂದಿಗೆ ಎಲಿವೇಟ್(ಇಎಲ್ಇವಿಎಟಿಇ)(ಮೈನಾರಿಟೀಸ್)-2025 ರಲ್ಲಿನ ಮಾರ್ಗಸೂಚಿಗಳೊಂದಿಗೆ ಜಾರಿಗೊಳಿಸಲಾಗಿದೆ. ಈ ಯೋಜನೆಗೆ https://eitbt.karnataka.gov.in/en ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.080-2223100 ಅಥವಾ ಇ-ಮೇಲ್ elevate.ktech@ka.gov.in ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಬೆಂಗಳೂರು : ಬೆಂಗಳೂರಿನ ಜನತೆಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ಆರು ಪಥಗಳ 28 ಕಿ.ಮೀ ಉದ್ದದ ಸುರಂಗ ರಸ್ತೆ ನಿರ್ಮಾಣವಾಗಲಿದೆ. ಬೆಂಗಳೂರು ಮಹಾನಗರದ ಸಂಚಾರ ದಟ್ಟಣೆ ಪರಿಹಾರಕ್ಕೆ ಪೂರ್ವ–ಪಶ್ಚಿಮ ಕಾರಿಡಾರ್ ಸುರಂಗ ಮಾರ್ಗದಲ್ಲಿ ‘ಟ್ವಿನ್ ಟ್ಯೂಬ್ ಟನಲ್’ನಲ್ಲಿ (ಡಬಲ್ ಡೆಕ್) ಆರು ಪಥಗಳ 28 ಕಿ.ಮೀ ಉದ್ದದ ಸುರಂಗ ರಸ್ತೆ ನಿರ್ಮಾಣವಾಗಲಿದೆ. ಕೆ.ಆರ್. ಪುರದಿಂದ ನಾಯಂಡಹಳ್ಳಿ ಬಳಿಯ ನೈಸ್ ರಸ್ತೆ ಜಂಕ್ಷನ್ವರೆಗೆ ಪೂರ್ವ–ಪಶ್ಚಿಮ ಕಾರಿಡಾರ್ ಸುರಂಗ ಮಾರ್ಗ ನಿರ್ಮಿಸುವ ಮೂಲಕ ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಮುಕ್ತಿ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಯೋಜನೆ ರೂಪಿಸಿದೆ. https://twitter.com/INCKarnataka/status/1963877906381422995?ref_src=twsrc%5Egoogle%7Ctwcamp%5Eserp%7Ctwgr%5Etweet
ಆಧಾರ್ ಕಾರ್ಡ್ನ ಭೌತಿಕ ಪ್ರತಿಯನ್ನು ಕೊಂಡೊಯ್ಯಬೇಕಂತಿಲ್ಲ. ಮಹಿಳೆಯರ ಮೊಬೈಲ್ ಫೋನ್ ನಲ್ಲಿ ಆಧಾರ್ನ ಡಿಜಿಟಲ್ ನಕಲು ಅಥವಾ ಆಧಾರ್ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿದ ಆಧಾರ್ ಪಿಡಿಎಫ್ನ್ನು ಕಂಡಕ್ಟರ್ಗೆ ತೋರಿಸಬಹುದು. ಇದು ಮಹಿಳೆಯರಿಗೆ ಮತ್ತಷ್ಟು ಅನುಕೂಲವನ್ನು ಕಲ್ಪಿಸಿಕೊಡಲಾಗುತ್ತದೆ ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ ಅವರು ಹೇಳಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶದಿಂದಾಗಿ ಹಿಂದೆ ದ್ವಿಚಕ್ರ ವಾಹನ ಅಥವಾ ಇತರೆ ಖಾಸಗಿ ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ ಅನೇಕ ಮಹಿಳೆಯರು ಈಗ ಬಸ್ಸುಗಳನ್ನು ಆಶ್ರಯಿಸಿದ್ದಾರೆ. ಇದರ ಜೊತೆಗೆ, ತಮ್ಮ ಕುಟುಂಬದ ಮಹಿಳೆಯರೊಂದಿಗೆ ತೆರಳುವ ಪುರುಷರೂ ಸಹ ಬಸ್ ಪ್ರಯಾಣಕ್ಕೆ ಆದ್ಯತೆ ನೀಡುತ್ತಿದ್ದಾರೆ. ಇದು ಒಟ್ಟಾರೆ ಬಸ್ ಪ್ರಯಾಣಿಕರ ಸಂಖ್ಯೆಯನ್ನು ಹೆಚ್ಚಿಸಿದ್ದು, ಪುರುಷರಿಂದ ಟಿಕೆಟ್ ದರದಿಂದ ಆದಾಯ ಸಂಗ್ರಹವಾಗಿ ಸರ್ಕಾರದ ಬೊಕ್ಕಸಕ್ಕೆ ಲಾಭ ತಂದಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ…
ಧಾರವಾಡ : ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಹೊಸದಾಗಿ ಮಂಜೂರಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೊರಾರ್ಜಿ ದೇಸಾಯಿ ವಸತಿ ಕಾಲೇಜು ಗಂಜಿಗಟ್ಟಿ ಇಲ್ಲಿಗೆ 2025-26ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಪಿ.ಯು.ಸಿ. ತರಗತಿ ಪ್ರಾರಂಭವಾಗಿದ್ದು, ಪ್ರಥಮ ಪಿ.ಯು.ಸಿ. ವಿಷಯಗಳ (ವಿಜ್ಞಾನ ವಿಭಾಗ) ಬೋಧನೆಗಾಗಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ 10, 2025 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರಾತಿನಿದ್ಯತೆ ನೀಡಲಾಗುವುದು. ವಸತಿ ಶಾಲೆ, ಕಾಲೇಜುಗಳಲ್ಲಿ ಅತಿಥಿ ಶಿಕ್ಷಕರು ಅಥವಾ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447201, 7411934749 ಹಾಗೂ 7975156674 ಗೆ ಅಥವಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಅಥವಾ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ…
ಬೆಂಗಳೂರು: ಭ್ರಷ್ಟಾಚಾರ ಆರೋಪದ ವೀಡಿಯೋ ವೈರಲ್ ಆಗಿದ್ದರಿಂದ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿಕುಮಾರ್ ಗೆ ಸಿಎಂ ಸಿದ್ಧರಾಮಯ್ಯ ರಾಜೀಮಾಮೆ ಕೊಟ್ಟು ಹೊರ ಹೋಗುವಂತೆ ಖಡಕ್ ಸೂಚಿಸಿದ್ದರು. ಈ ಬೆನ್ನಲ್ಲೇ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರವಿಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವಿ ಕುಮಾರ್ ಅವರು ನಿಗಮದ ಯೋಜನೆಗಳಡಿ ಸೌಲಭ್ಯ ನೀಡಲು ಫಲಾನುಭವಿಗಳಿಂದ ಶೇ.60ರಷ್ಟ ಲಂಚ ಕೇಳಿದ್ದಂತ ವೀಡಿಯೋ ವೈರಲ್ ಆಗಿತ್ತು. ಈ ವೈರಲ್ ವೀಡಿಯೋ ಗಮನಿಸಿದ್ದಂತ ಸಿಎಂ ಸಿದ್ಧರಾಮಯ್ಯ ಗರಂ ಆಗಿದ್ದರು. ಜೊತೆಗೆ ರಾಜೀನಾಮೆಗೂ ಸೂಚಿಸಿದ್ದರು. ಈ ಬೆನ್ನಲ್ಲೇ ಅವರು ರಾಜೀನಾಮೆ ನೀಡಿದ್ದಾರೆ. ಅಂದಹಾಗೇ ರವಿಕುಮಾರ್ ಸಲ್ಲಿಸಿರುವಂತ ರಾಜೀನಾಮೆ ಪತ್ರದಲ್ಲಿ ಭೋವಿ ಅಭಿವೃದ್ಧಿ ನಿಗಮದಲ್ಲಿ ಹಣಕಾಸಿನಲ್ಲಿ ಶಿಸ್ತು, ಪಾರದರ್ಶಕತೆ ರೂಪಿಸಿದ್ದಕ್ಕೆ ನನ್ನ ವಿರುದ್ಧ ಈ ಷಡ್ಯಂತ್ರ ನಡೆದಿದೆ. ಇದಷ್ಟೇ ಅಲ್ಲದೇ ಎಐ ಬಳಸಿ ನನ್ನ ವಿರುದ್ಧ ಪಿತೂರು ಮಾಡಲಾಗಿದೆ. ನಿಗಮದ ಕಚೇರಿಯಲ್ಲಿಯೇ ವೀಡಿಯೋ ಶೂಟ್ ಮಾಡಲಾಗಿದೆ. ಹೀಗಾಗಿ ಪಕ್ಷಕ್ಕೆ ಮುಜುಗರ ಉಂಟಾಗುವುದನ್ನು ತಡೆಯಲು…
ಇಂದೋರ್ : ಇಂದು ಇಂದೋರ್ನಲ್ಲಿ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿತ್ತು. ದೆಹಲಿ ತಲುಪಿದ ವಿಮಾನದ ಒಂದು ಎಂಜಿನ್ ಗಾಳಿಯಲ್ಲಿ ಕೆಲಸ ಮಾಡುವುದನ್ನು ನಿಲ್ಲಿಸಿತ್ತು, ನಂತರ ವಿಮಾನವನ್ನು ತುರ್ತು ಪರಿಸ್ಥಿತಿಯಲ್ಲಿ ಇಳಿಸಲಾಯಿತು. ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ (AXB 1028) ಬಗ್ಗೆ ಇಂದೋರ್ ವಿಮಾನ ನಿಲ್ದಾಣದಲ್ಲಿ ಗದ್ದಲ ಉಂಟಾಯಿತು, ವಿಮಾನದ ಒಂದು ಎಂಜಿನ್ ಕೆಲಸ ಮಾಡುವುದನ್ನು ನಿಲ್ಲಿಸಿದೆ ಎಂದು ಪೈಲಟ್ ATC ಗೆ ತಿಳಿಸಿದಾಗ. ಮಾಹಿತಿ ಪಡೆದ ನಂತರ, ಅಗ್ನಿಶಾಮಕ ದಳ, ಆಂಬ್ಯುಲೆನ್ಸ್ ಮತ್ತು CISF ತಂಡವು ವಿಮಾನ ನಿಲ್ದಾಣದಲ್ಲಿ ಜವಾಬ್ದಾರಿ ವಹಿಸಿಕೊಂಡಿತು. ಅದೃಷ್ಟವಶಾತ್, ವಿಮಾನವನ್ನು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ವಿಮಾನ ನಿಲ್ದಾಣದ ಅಧಿಕಾರಿಗಳ ಪ್ರಕಾರ, ಬೆಳಿಗ್ಗೆ ದೆಹಲಿಯಿಂದ ಇಂದೋರ್ಗೆ ಬಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಎಂಜಿನ್ನಲ್ಲಿ ತಾಂತ್ರಿಕ ದೋಷದಿಂದಾಗಿ ಇಂದೋರ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ATC ನಿಯಂತ್ರಣದಿಂದ ಮಾಹಿತಿ ಬಂದ ತಕ್ಷಣ, ಅಗ್ನಿಶಾಮಕ ದಳ ಮತ್ತು ಆಂಬ್ಯುಲೆನ್ಸ್ ತಂಡಗಳನ್ನು ವಿಮಾನ ನಿಲ್ದಾಣದಲ್ಲಿ…