Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರ ಮನವೊಲಿಕೆಗೆ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆ.5ರಿಂದ ಕರೆ ನೀಡಿರುವ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ನಿರ್ಧಾರವಾಗಲಿದೆ. ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆ.5ರಂದು ಬೆಳಗ್ಗೆ 6 ಗಂಟೆಯಿಂದ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಮುಷ್ಕರ ಹೂಡುವುದಾಗಿ ಈಗಾಗಲೇ ಎಚ್ಚರಿಕೆ ನೀಡಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದು, ನಾಳೆ ನಾಲ್ಕೂ ನಿಗಮಗಳಿಂದ ಒಟ್ಟು 23000 ಬಸ್ಗಳು ರಸ್ತೆಗಿಳಿವುದು ಅನುಮಾನವಾಗಿದ್ದು, 1.2 ಲಕ್ಷ ಕಾರ್ಮಿಕರು ಹೋರಾಟ ನಡೆಸಲಿದ್ದಾರೆ.
ಬೆಂಗಳೂರು : ಇಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಒಳಮೀಸಲು ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲಿಸಲಿದೆ. ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸಲು ಉಪ ಪಂಗಡಗಳ ಅಂಕಿ-ಅಂಶ ಗಳ ಸಮೀಕ್ಷೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ಹೈ ಕೋರ್ಟ್ ನಿವೃತ್ತ ನ್ಯಾಯ ಮೂರ್ತಿ ಎಚ್.ಎನ್.ನಾಗಮೋಹನ ದಾಸ್ನೇತೃತ್ವದ ಏಕಸದಸ್ಯ ಆಯೋಗ ಇಂದು ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಲಿದೆ. ವಿಧಾನಸೌಧದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಯೋಗ ತನ್ನ ವರದಿ ಸಲ್ಲಿಸಲಿದೆ. ಒಳಮೀಸಲಾತಿ ಹಿನ್ನೆಲೆಯಲ್ಲಿ ಸರ್ಕಾರದ ವಿವಿಧ ಇಲಾಖಾ ನೇಮಕಾತಿಗಳು, ಬಡ್ತಿ ವಿಚಾರಗಳಿಗೆ ಕೆಲ ತಿಂಗಳಿಂದ ತಡೆಬಿದ್ದಿದೆ.
ಬೆಂಗಳೂರು : 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪೌಷ್ಠಿಕ ಪುನಶ್ವೇತನ ಕೇಂದ್ರಗಳಲ್ಲಿ ದಾಖಲಾದ ಮಕ್ಕಳ ತಾಯಂದಿರು/ಪೋಷಕರಿಗೆ ದಿನಗೂಲಿ ನಷ್ಟಭತ್ಯೆಯನ್ನು ನೀಡಲಾಗುವುದು. ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನದ ಏಕ ಕಡತದಲ್ಲಿ ಪೌಷ್ಠಿಕ ಪುನಶ್ವೇತನ ಕೇಂದ್ರವು(NRC) ಸಾರ್ವಜನಿಕ ಆರೋಗ್ಯ ಸಂಸ್ಥೆಯ (ಆಸ್ಪತ್ರೆ) ಘಟಕವಾಗಿದ್ದು, ಇಲ್ಲಿ ತೀವು ಅಪೌಷ್ಠಿಕತೆ (SAM) ಹೊಂದಿರುವ ಮಕ್ಕಳನ್ನು ದಾಖಲಿಸಿ ಅಪೌಷ್ಠಿಕತೆಯನ್ನು ನೀಗಿಸಲು ಸೇವೆ ನೀಡಲಾಗುತ್ತಿದೆ. ಮಕ್ಕಳನ್ನು ಪೌಷ್ಠಿಕ ಪುನಶ್ಯತನ ಕೇಂದ್ರಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿರುವ SD Chart-ಪ್ರವೇಶ ಮಾನದಂಡಗಳ ಪ್ರಕಾರ ದಾಖಲಿಸಿ, ವೈದ್ಯಕೀಯ ಮತ್ತು ಪೌಷ್ಠಿಕ ಚಿಕಿತ್ಸಕ ಆರೈಕೆಯನ್ನು ಒದಗಿಸಲಾಗುತ್ತದೆ. ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಅನುದಾನಿತ 33 ಜಿಲ್ಲಾ ಮಟ್ಟದ ಪೌಷ್ಠಿಕ ಪುನಶ್ವೇತನ ಕೇಂದ್ರಗಳು ಮತ್ತು ರಾಜ್ಯ ಅನುದಾನಿತ 86 ತಾಲೂಕು ಮಟ್ಟದ ಪೌಷ್ಠಿಕ ಪುನಶ್ಯತನ ಕೇಂದ್ರಗಳು 6 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಪೌಷ್ಠಿಕತೆಯುಳ್ಳ ಮಕ್ಕಳಿಗೆ ಪೌಷ್ಠಿಕ ಪುನಶ್ಚೇತನ ಸೇವೆಗಳನ್ನು…
ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಆಗಸ್ಟ್ 31 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವೆಬ್ ಸೈಟ್ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ. ಆರಂಭ ದಿನಾಂಕ: ಆಗಸ್ಟ್ 01, 2025 ಕೊನೆಯ ದಿನಾಂಕ: ಆಗಸ್ಟ್ 31, 2025 (ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ) ಹೊಸ ಸದಸ್ಯರ ಸೇರ್ಪಡೆ * ಪೋಟೋ ಬದಲಾವಣೆ * ಹೆಸರು ಡಿಲೆಟ್ * ಅಂಗಡಿ. ನಂ. ಬದಲಾವಣೆ *…
ನವದಹಲಿ: ಅಂಚೆ ಇಲಾಖೆಯು ಸೆಪ್ಟೆಂಬರ್ 1 ರಿಂದ ಸ್ಪೀಡ್ ಪೋಸ್ಟ್ ಮತ್ತು ನೋಂದಾಯಿತ ಪೋಸ್ಟ್ ಸೇವೆಗಳನ್ನು ವಿಲೀನಗೊಳಿಸಲು ಪ್ರಸ್ತಾಪಿಸಿದ್ದು, ಕಾರ್ಯಾಚರಣೆಯನ್ನು ಸುಗಮಗೊಳಿಸಲು ಮತ್ತು ದಕ್ಷತೆಯನ್ನು ಸುಧಾರಿಸಲು ಉದ್ದೇಶಿಸಲಾಗಿದೆ. ಇದರೊಂಧಿಗೆ ಗ್ರಾಹಕರು ಪ್ರಮುಖ ನೋಂದಾಯಿತ ಪೋಸ್ಟ್ ವೈಶಿಷ್ಟ್ಯಗಳನ್ನು ಸೇರಿಸಲು ಮತ್ತು ಸುಂಕಗಳಲ್ಲಿ ಪರಿಷ್ಕರಣೆಗೆ ಮುಂದಾಗಿದೆ. ಅಂಚೆ ಸೇವೆಗಳು , ವಿತರಣಾ ಸೇವೆಗಳನ್ನು ಪ್ರಮಾಣೀಕರಿಸುವುದು ಮತ್ತು ಕಾರ್ಯಾಚರಣೆಯ ವೆಚ್ಚವನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ. ಈ ನಿರ್ಧಾರದಿಂದ ವಿಲೀನವು ವೇಗದ ವಿತರಣೆಯೊಂದಿಗೆ ಉತ್ತಮ ಗ್ರಾಹಕ ಅನುಭವಕ್ಕೆ ಸಹಾಯ ಮಾಡುತ್ತದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 1854 ರಲ್ಲಿ ಬ್ರಿಟಿಷ್ ಆಳ್ವಿಕೆಯಲ್ಲಿ ನೋಂದಾಯಿತ ಅಂಚೆಯನ್ನು ಪರಿಚಯಿಸಲಾಯಿತು: 1854 ರಲ್ಲಿ ಬ್ರಿಟಿಷ್ ಆಳ್ವಿಕೆಯಲ್ಲಿ ಲಾರ್ಡ್ ಡಾಲ್ಹೌಸಿ ಭಾರತ ಅಂಚೆ ಕಚೇರಿ ಕಾಯ್ದೆಯನ್ನು ಜಾರಿಗೆ ತಂದಾಗ ನೋಂದಾಯಿತ ಅಂಚೆಯನ್ನು ಪರಿಚಯಿಸಲಾಯಿತು. ಅದಕ್ಕೂ ಮೊದಲು, 1766 ರಲ್ಲಿ, ವಾರೆನ್ ಹೇಸ್ಟಿಂಗ್ಸ್ ಈಸ್ಟ್ ಇಂಡಿಯಾ ಕಂಪನಿಯ ಅಡಿಯಲ್ಲಿ ಕಂಪನಿ ಮೇಲ್ ಅನ್ನು ಪ್ರಾರಂಭಿಸಿದರು. ಈ ಸೇವೆಯು 171 ವರ್ಷಗಳಿಂದ ಜನರಿಗೆ ದಾಖಲೆಗಳು…
ಶ್ರೀನಗರ : ಈ ವರ್ಷದ ಅತಿದೊಡ್ಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಒಂದಾದ ಆಪರೇಷನ್ ಅಖಾಲ್ ಭಾನುವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬ ಸೈನಿಕ ಗಾಯಗೊಂಡಿದ್ದಾರೆ. ಶನಿವಾರ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ನಂತರ, ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರ ಒಟ್ಟು ಸಂಖ್ಯೆ ಆರಕ್ಕೆ ತಲುಪಿದೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಾಲ್ ಅರಣ್ಯ ಪ್ರದೇಶದಲ್ಲಿ ರಾತ್ರಿಯಿಡೀ ಸ್ಫೋಟಗಳು ಮತ್ತು ಗುಂಡಿನ ಶಬ್ದಗಳು ಮುಂದುವರೆದವು. ಭಯೋತ್ಪಾದಕರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸೇನೆ ಮತ್ತು ಸಿಆರ್ಪಿಎಫ್ನ ಜಂಟಿ ತಂಡದ ನಡುವಿನ ಎನ್ಕೌಂಟರ್ ಇನ್ನೂ ಮುಂದುವರೆದಿದೆ.
ಕೋಲಾರ : ಕೋಲಾರ ಜಿಲ್ಲೆಯಲ್ಲಿ ನಡೆದಿದ್ದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ರಾಹುಲ್, ನಾಗೇಶ್, ಪುನೀತ್ ಎಂಬ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಪ್ರಾಪ್ತ ಬಾಲಕಿ ಮೇಲೆ ಆರು ಜನ ಕಾಮುಕರು ನಿರಂತರ ಅತ್ಯಾಚಾರವೆಸಗಿದ್ದರು. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಾದ ಚೇತನ್, ಕಿರಣ್, ಮಹೇಂದ್ರನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಬಾಲಕಿ ನೀಡಿದ ದೂರಿನ ಮೇರೆಗೆ ಕೋಲಾರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಷ್ಯಾದ ಕುರಿಲ್ ದ್ವೀಪಗಳಲ್ಲಿ ಭಾನುವಾರ 6.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ ತಿಳಿಸಿದೆ. 10 ಕಿ.ಮೀ (6.2 ಮೈಲಿ) ಆಳದಲ್ಲಿ 6.35 ತೀವ್ರತೆಯ ಭೂಕಂಪನವನ್ನು ಏಜೆನ್ಸಿ ಆರಂಭದಲ್ಲಿ ಅಂದಾಜಿಸಿತ್ತು.ರಿಕ್ಟರ್ ಮಾಪಕದಲ್ಲಿ 7 ತೀವ್ರತೆ ದಾಖಲಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದ್ದು, ಸುನಾಮಿ ಎಚ್ಚರಿಕೆ ನೀಡಿದೆ. ಭೂಕಂಪದ ತೀವ್ರತೆಯನ್ನು 7.0 ಎಂದು ಅಳೆಯುವ ಪೆಸಿಫಿಕ್ ಸುನಾಮಿ ಎಚ್ಚರಿಕೆ ವ್ಯವಸ್ಥೆ, ಭೂಕಂಪದ ನಂತರ ಸುನಾಮಿ ಎಚ್ಚರಿಕೆ ಇಲ್ಲ ಎಂದು ಹೇಳಿದೆ.
ಮೈಸೂರು : ಜಿಲ್ಲೆಯ ನಂಜನಗೂಡು ತಾಲೂಕಿನ ಅಡಗಂಚಿ ವಸತಿ ಶಾಲೆಯಲ್ಲಿ ಅವ್ಯವಸ್ಥೆಯಿಂದಾಗಿ ರೊಚ್ಚಿಗೆದ್ದ ಪೋಷಕರು ಅತಿಥಿ ಶಿಕ್ಷಕನಿಗೆ ಗೂಸಾ ಕೊಟ್ಟಿರುವ ಘಟನೆ ನಡೆದಿದೆ. ಅಡಗಂಚಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ಅವ್ಯವಸ್ಥೆ ಖಂಡಿಸಿ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಮೂಲ ಸೌಕರ್ಯ ಇಲ್ಲವೆಂದು ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಧರಣಿ ವೇಳೆ ವಸತಿ ಶಾಲೆಯ ಅತಿಥಿ ಶಿಕ್ಷಕ ಗುರುಸ್ವಾಮಿಗೆ ವಿದ್ಯಾರ್ಥಿಗಳ ಪೋಷಕರು ಥಳಿಸಿದ್ದಾರೆ. ಅತಿಥಿ ಶಿಕ್ಷಕ ಗುರುಸ್ವಾಮಿ ಜಾತಿ ತಾರತಮ್ಯ ಮಾಡುತ್ತಿದ್ದಾನೆ ಎಂದು ಆರೋಪಿಸಿ ಪೋಷಕರು ಧರ್ಮದೇಟು ಕೊಟ್ಟಿದ್ದಾರೆ. ಪ್ರಾಂಶುಪಾಲೆ ವಸಂತಕುಮಾರಿ, ನಿಲಯ ಪಾಲಕ ಮಹದೇವಪ್ಪ,ಅತಿಥಿ ಶಿಕ್ಷಕ ಗುರುಸ್ವಾಮಿಯನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಲ್ಲಿ ರಸ್ತೆಯಿಂದ ಅವಶೇಷಗಳನ್ನು ತೆರವುಗೊಳಿಸುತ್ತಿದ್ದ ಜೆಸಿಬಿ, ಬೆಟ್ಟದಿಂದ ಜಾರಿ 300 ಮೀಟರ್ಗಿಂತಲೂ ಹೆಚ್ಚು ಆಳದ ಕಂದಕಕ್ಕೆ ಬಿದ್ದಿತು. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗುಡ್ಡಗಾಡು ರಸ್ತೆಗಳಿಗೆ ಯಂತ್ರ ಬಿದ್ದು ಕೆಳಗೆ ಬೀಳುತ್ತಿರುವುದು ಕಂಡುಬಂದಿದೆ. ಕುಮಾರ್ಸೈನ್ನ ಶಾನಂದ್ನಲ್ಲಿರುವ ರಾಷ್ಟ್ರೀಯ ಹೆದ್ದಾರಿ-5 ರಲ್ಲಿ ಇತ್ತೀಚಿನ ಮಳೆಯಿಂದಾಗಿ ಪರ್ವತದಿಂದ ಬಿದ್ದ ಕಲ್ಲುಗಳು ಮತ್ತು ಮಣ್ಣಿನಿಂದ ಅಡಚಣೆಯಾಗಿದ್ದರಿಂದ ರಸ್ತೆಯಲ್ಲಿ ವಾಹನಗಳ ಸಾಲು ಇತ್ತು. ಜೆಸಿಬಿ ರಸ್ತೆಯನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತವಾಗಿತ್ತು, ಇದ್ದಕ್ಕಿದ್ದಂತೆ ಕಲ್ಲು ಬಿದ್ದ ಕಾರಣ ಯಂತ್ರವು ನಿಯಂತ್ರಣ ತಪ್ಪಿ ನಿರ್ವಾಹಕರೊಂದಿಗೆ ಆಳವಾದ ಕಂದಕಕ್ಕೆ ಬಿದ್ದಿತು. ಅಪಘಾತಕ್ಕೀಡಾದ ಯಂತ್ರದಿಂದ ಜೆಸಿಬಿ ಚಾಲಕ ದಿನೇಶ್ ಕುಮಾರ್ ಅವರನ್ನು ಹೊರತೆಗೆದು ಕುಮಾರ್ಸೈನ್ನ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ಗಂಭೀರ ಗಾಯಗಳಿಂದಾಗಿ ಅವರು ಸಾವನ್ನಪ್ಪಿದರು. https://twitter.com/DDNewsHimachal/status/1951660588284719455?ref_src=twsrc%5Etfw%7Ctwcamp%5Etweetembed%7Ctwterm%5E1951660588284719455%7Ctwgr%5Efe0a0965ab48149d3b65c12bbc7719cd68d3d68b%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fhindi%2Fforyou%3Fmode%3Dpwalangchange%3Dtruelaunch%3Dtrue https://youtube.com/shorts/lxPb3bmN-O8?si=sEn9ZUgqMfK7YDdI ದಿನೇಶ್ ಮಂಡಿ ಜಿಲ್ಲೆಯ ನಿವಾಸಿ. ಸ್ವಲ್ಪ ಸಮಯದ ನಂತರ, ಅವಶೇಷಗಳನ್ನು ತಲುಪಲು ಒಬ್ಬ ವ್ಯಕ್ತಿ ಇಳಿಜಾರಿನ ಕೆಳಗೆ ಹತ್ತುತ್ತಿರುವುದು ಕಂಡುಬಂದಿದೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ನಿರಂತರವಾಗಿ ಹಾನಿಯನ್ನುಂಟುಮಾಡುತ್ತಿರುವ ಸಮಯದಲ್ಲಿ…