Subscribe to Updates
Get the latest creative news from FooBar about art, design and business.
Author: kannadanewsnow57
ನವದೆಹಲಿ : ಪ್ಲಾಸ್ಟಿಕ್ ಬಾಟಲಿಗಳ ಪ್ರಮುಖ ರಾಸಾಯನಿಕ ಘಟಕಾಂಶವನ್ನು ಟೈಪ್ 2 ಮಧುಮೇಹದ ಹೆಚ್ಚಿನ ಅಪಾಯದೊಂದಿಗೆ ಸಂಪರ್ಕಿಸುವ ನೇರ ಪುರಾವೆಗಳನ್ನು ಹೊಸ ಅಧ್ಯಯನವು ಕಂಡುಹಿಡಿದಿದೆ. ಡಯಾಬಿಟಿಸ್ ಜರ್ನಲ್ನಲ್ಲಿ ಪ್ರಕಟವಾದ ಅಧ್ಯಯನವು, ಪ್ಲಾಸ್ಟಿಕ್ ನೀರಿನ ಬಾಟಲಿಗಳು ಸೇರಿದಂತೆ ಆಹಾರ ಮತ್ತು ಪಾನೀಯ ಪ್ಯಾಕೇಜುಗಳನ್ನು ತಯಾರಿಸಲು ಬಳಸುವ ರಾಸಾಯನಿಕ ಬಿಪಿಎ ದೇಹದ ಸಕ್ಕರೆ ಚಯಾಪಚಯವನ್ನು ನಿಯಂತ್ರಿಸುವ ಇನ್ಸುಲಿನ್ ಹಾರ್ಮೋನ್ಗೆ ಸೂಕ್ಷ್ಮತೆಯನ್ನು ಕಡಿಮೆ ಮಾಡುತ್ತದೆ ಎಂದು ಕಂಡುಹಿಡಿದಿದೆ. ಅಮೆರಿಕನ್ ಡಯಾಬಿಟಿಸ್ ಅಸೋಸಿಯೇಷನ್ನ 2024 ರ ವೈಜ್ಞಾನಿಕ ಅಧಿವೇಶನಗಳಲ್ಲಿ ಪ್ರಸ್ತುತಪಡಿಸಲಿರುವ ಸಂಶೋಧನೆಗಳು, ಬಾಟಲಿಗಳು ಮತ್ತು ಆಹಾರ ಪಾತ್ರೆಗಳಲ್ಲಿ ಬಿಪಿಎಗೆ ಒಡ್ಡಿಕೊಳ್ಳುವ ಸುರಕ್ಷಿತ ಮಿತಿಗಳನ್ನು ಮರುಪರಿಶೀಲಿಸುವಂತೆ ಯುಎಸ್ ಎನ್ವಿರಾನ್ಮೆಂಟಲ್ ಪ್ರೊಟೆಕ್ಷನ್ ಏಜೆನ್ಸಿ (ಇಪಿಎ) ಗೆ ಕರೆ ನೀಡಿವೆ. ಪ್ಲಾಸ್ಟಿಕ್ ಮತ್ತು ಎಪಾಕ್ಸಿ ರೆಸಿನ್ ಗಳನ್ನು ತಯಾರಿಸಲು ಬಳಸುವ ಬಿಸ್ಫೆನಾಲ್ ಎ ರಾಸಾಯನಿಕವು ಮಾನವರಲ್ಲಿ ಹಾರ್ಮೋನುಗಳನ್ನು ಅಡ್ಡಿಪಡಿಸುತ್ತದೆ ಎಂದು ಹಿಂದಿನ ಅಧ್ಯಯನಗಳು ಈಗಾಗಲೇ ತೋರಿಸಿವೆ. ಸಂಶೋಧನೆಯು ಬಿಪಿಎಯನ್ನು ಮಧುಮೇಹದೊಂದಿಗೆ ಸಂಪರ್ಕಿಸಿದ್ದರೂ, ಈ ರಾಸಾಯನಿಕವನ್ನು ಮಾನವರಿಗೆ ನೀಡುವುದರಿಂದ ವಯಸ್ಕರಲ್ಲಿ ಈ ಅಪಾಯವನ್ನು…
ನವದೆಹಲಿ : ದೂರಸಂಪರ್ಕ ಕಾಯ್ದೆ 2023 ರ ಅಡಿಯಲ್ಲಿ ಹೊಸ ನಿಬಂಧನೆಗಳು ಜೂನ್ 26 ರ ಇಂದಿನಿಂದ ಜಾರಿಗೆ ಬರಲಿವೆ. ಹೊಸ ಟೆಲಿಕಾಂ ಕಾನೂನು ಭಾರತೀಯ ಟೆಲಿಗ್ರಾಫ್ ಕಾಯ್ದೆ (1885) ಮತ್ತು ಭಾರತೀಯ ವೈರ್ ಲೆಸ್ ಟೆಲಿಗ್ರಾಫ್ ಕಾಯ್ದೆ (1933) ಎರಡನ್ನೂ ಬದಲಾಯಿಸುತ್ತದೆ. ಹೊಸ ಕಾಯ್ದೆಯು ದೂರಸಂಪರ್ಕ ಕ್ಷೇತ್ರದಲ್ಲಿನ ಗಮನಾರ್ಹ ತಾಂತ್ರಿಕ ಪ್ರಗತಿಯನ್ನು ಪರಿಹರಿಸುತ್ತದೆ. ದೂರಸಂಪರ್ಕ ಕಾಯ್ದೆ, 2023 (2023 ರ 44), ಕೇಂದ್ರ ಸರ್ಕಾರವು ಈ ಮೂಲಕ ಜೂನ್ 26, 2024 ರ 26 ನೇ ದಿನವನ್ನು ನಿಗದಿಪಡಿಸುತ್ತದೆ, ಈ ಕಾಯ್ದೆಯ ಸೆಕ್ಷನ್ 1, 2, 10 ರಿಂದ 30, 42 ರಿಂದ 44, 46, 47, 50 ರಿಂದ 58, 61 ಮತ್ತು 62 ರ ನಿಬಂಧನೆಗಳು ಜಾರಿಗೆ ಬರುತ್ತವೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ. ಜೂನ್ 26 ರಿಂದ ಜಾರಿಗೆ ಬರಲಿರುವ ಈ ನಿಯಮವು ರಾಷ್ಟ್ರೀಯ ಭದ್ರತೆ, ವಿದೇಶಗಳೊಂದಿಗಿನ ಸ್ನೇಹ ಸಂಬಂಧಗಳು ಅಥವಾ ಯುದ್ಧದ ಸಂದರ್ಭದಲ್ಲಿ ಯಾವುದೇ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ನಿವೃತ್ತ ವೇತನದ ಕುರಿತಂತೆ ರಾಜ್ಯ ಸರ್ಕಾರವು ನಿವೃತ್ತಿ ವೇತನ ನಿಯಮಗಳನ್ನು ಸರಳೀಕರಿಸಿದ್ದು, ನಿವೃತ್ತಿ ವೇತನ ಕಡತಗಳನ್ನು ವಿಳಂಬ ಮಾಡದೆ ಸಿದ್ದಪಡಿಸಬೇಕು. ವಿಳಂಬವಾದಲ್ಲಿ ನೌಕರನಿಗೆ ಆರ್ಥಿಕ ತೊಂದರೆಗಳಾಗುತ್ತವೆ ಎಂದು ಸೂಚನೆ ನೀಡಲಾಗಿದೆ. ಕಚೇರಿ ಮುಖ್ಯಸ್ತರು ನಿವೃತ್ತರಾಗುವ ನಾನ್ ಗೆಜೆಟೆಡ್ ನೌಕರನಿಂದ ನಮೂನೆ-1ಬಿ ನಲ್ಲಿ ಒಂದು ವರ್ಷ ಮೊದಲೇ ವಿವರಗಳನ್ನು ಪಡೆದಿರಬೇಕು. ಕಚೇರಿ ಮುಖ್ಯಸ್ತರು ನಿವೃತ್ತರಾಗುವ ಗೆಜೆಟೆಡ್ ನೌಕರನಿಂದ ನಮೂನೆ-1ಬಿ ನಲ್ಲಿ ಒಂದು ವರ್ಷ ಮೊದಲೇ ವಿವರಗಳನ್ನು ಪಡೆದು ಮಹಾಲೇಖಪಾಲರಿಗೆ ಸಲ್ಲಿಸಬೇಕು. ನಿವೃತ್ತನಾಗುವ ಸರ್ಕಾರಿ ನೌಕರನಿಂದ ಪಡೆದ ನಮೂನೆ-1ಬಿ ವಿವರಗಳನ್ನು ಮತ್ತು ಇತರೆ ದಾಖಲೆಗಳನ್ನು ನಿವೃತ್ತಿ ದಿನಾಂಕಕ್ಕಿಂತ ಮೂರು ತಿಂಗಳು ಮುಂಚಿತವಾಗಿ ಮಹಾಲೇಖಪಾಲರಿಗೆ ಕಳುಹಿಸಬೇಕು. 285 ಮೇರೆಗೆ ನಿವೃತ್ತರಾಗುವ ನೌಕರರ ವಿವರಗಳನ್ನು 1 ಬಿ ನಮೂನೆಯಲ್ಲಿ ಸ್ವಯಂ ನಿವೃತ್ತಿ ಅಂಗೀಕಾರ ಆದೇಶ ಬಂದ ನಂತರ ಪಡೆದು ನಿವೃತ್ತಿ ವೇತನ ಕಡತ ತಯಾರಿಸಬೇಕು. ಮಹಾಲೇಖಪಾಲರು ಪ್ರತಿ ವರ್ಷದ ಜನವರಿ31 ಮತ್ತು ಜುಲೈ-31 ನಲ್ಲಿ ಮುಂದಿನ 12 ಮತ್ತು 18…
ಚಿತ್ರದುರ್ಗ : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳ 2024-25ನೇ ಸಾಲಿನ 7, 8 ಮತ್ತು 9ನೇ ತರಗತಿಗಳ ಖಾಲಿ ಸ್ಥಾನಗಳ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 1 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ಸಮೀಪದ ವಸತಿ ಶಾಲೆಗಳಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ವಸತಿ ಶಾಲೆಗಳಲ್ಲಿ ಪ್ರಸ್ತುತ ಖಾಲಿ ಇರುವ ಹಾಗೂ ಮುಂದೆ ಖಾಲಿ ಆಗಬಹುದಾದ ಸ್ಥಾನಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಮತ್ತು ಸರ್ಕಾರದ ಮೀಸಲಾತಿ ಅನುಸಾರ ಆಯ್ಕೆಗೆ ಪರಿಗಣಿಸಲಾಗುವುದು. ವಸತಿ ಶಾಲೆಗಳಲ್ಲಿ ಖಾಲಿ ಇರುವ ಸ್ಥಾನಗಳ ವಿವರ ಇಂತಿದೆ. 7 ತರಗತಿ ಪ್ರವೇಶಾತಿ ಖಾಲಿ ಸ್ಥಾನಗಳಲ್ಲಿ ಎಸ್ಸಿ-4 ಬಾಲಕಿಯರು, ಎಸ್ ಟಿ-1 ಬಾಲಕ, 4 ಬಾಲಕಿಯರು, ಪ್ರವರ್ಗ-2ಎ 1 ಬಾಲಕ ಸೇರಿದಂತೆ ಒಟ್ಟು 10…
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಜೂನ್ 29ರಂದು ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ. ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಜೂನ್ 29ರಂದು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ರವರೆಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೊಮಾ, ಐಟಿಐ ಅಥವಾ ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನವರು ಪಾಲ್ಗೊಳ್ಳಬಹುದು. ಸಂದರ್ಶನಕ್ಕೆ ಆಗಮಿಸುವವರು 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಇತ್ತೀಚಿನ ಪೋಟೋಗಳನ್ನು ತಮ್ಮಮೊಂದಿಗೆ ತರಬೇಕು. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಸ್ಟೇಡಿಯಂ ರಸ್ತೆಯಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ದೂರವಾಣಿ ಸಂಖ್ಯೆ 7022459064, 8310785143, 8105619020 ಹಾಗೂ 9945587060 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು: ನಗರದಲ್ಲಿ ವಿವಿಧ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಜೂನ್ 26 ರ ಇಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯದ ಬಗ್ಗೆ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 26.06.2024 ರ ಇಂದು ಬೆಳಿಗ್ಗೆ 10:30 ಗಂಟೆಯಿಂದ ಮದ್ಯಾಹ್ನ 4:00 ಗಂಟೆಯವರೆಗೆ ‘66/11KV ಯೆಲ್ಲಾರ್ ಬಂಡೆ’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. 26.06.2024 (ಬುಧವಾರ) ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ…
ಬೆಂಗಳೂರು : ಸರ್ಕಾರಿ ಆಸ್ತಿ ಸಂರಕ್ಷಣೆ ನಿಟ್ಟಿನಲ್ಲಿ ಪ್ರತಿ ಮೂರ್ನಾಲ್ಕು ತಿಂಗಳಿಗೊಮ್ಮೆ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರಿ ಆಸ್ತಿ ಇರುವ ಸ್ಥಳಕ್ಕೆ ಭೇಟಿ ನೀಡಿ ತಪಾಸಣೆ ಮಾಡಲು ʼಲ್ಯಾಂಡ್ ಬೀಟ್ʼ ಕಾರ್ಯಕ್ರಮ ಜಾರಿಗೆ ತರಲಾಗುವುದು” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವರು, ಕಂದಾಯ ಇಲಾಖೆಯ 14 ಲಕ್ಷ ಸರ್ಕಾರಿ ಆಸ್ತಿಗಳ ಡಿಜಿಟಲ್ ದಾಖಲೆಗಳನ್ನೊಳಗೊಂಡ (ಸರ್ವೆ ಸಂಖ್ಯೆ, ಭೌಗೋಳಿಕ ಗಡಿ ಸೇರಿದಂತೆ) ಆಪ್ ಅಭಿವೃದ್ಧಿಪಡಿಸಿದ್ದೇವೆ. ಜಿಪಿಎಸ್ ಬಳಸಿಕೊಂಡು ಪ್ರತಿ ಆಸ್ತಿಯನ್ನು ಅಪ್ಲಿಕೇಶನ್ನಲ್ಲಿ ಮ್ಯಾಪ್ ಮಾಡಲಾಗುತ್ತದೆ. ಒತ್ತುವರಿ ಪರಿಶೀಲಿಸಲು ನಮ್ಮ ಅಧಿಕಾರಿಗಳು ಪ್ರತಿ ಸ್ಥಳಕ್ಕೆ ಭೇಟಿ ನೀಡುತ್ತಾರೆ. ಯಾವುದೇ ಸಮಸ್ಯೆಗಳನ್ನು ನೇರವಾಗಿ ಅಪ್ಲಿಕೇಶನ್ ಮೂಲಕ ವರದಿ ಮಾಡುತ್ತಾರೆ. ನಂತರ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಈವರೆಗೆ ಗ್ರಾಮ ಆಡಳಿತ ಅಧಿಕಾರಿಗಳು 5,90,000 ಕ್ಕೂ ಹೆಚ್ಚು ಆಸ್ತಿಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮುಂದೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಯಲಿದೆ. ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಇಲಾಖಾ ಅಧಿಕಾರಿಗಳ ಪರಿಶ್ರಮದಿಂದಾಗಿ,…
ಬೆಂಗಳೂರು : ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5,374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಪ್ರಕರಣಗಳು ವರದಿಯಾಗಿವೆ. ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿವೆ. ಈ ಕಡೆಗಳಲ್ಲಿ ರೋಗ ನಿಯಂತ್ರಣಕ್ಕೆ ಆದ್ಯತೆ ನೀಡಬೇಕು ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. * ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಿಕೊಳ್ಳಬೇಕು. * ಆಶಾ ಕಾರ್ಯಕರ್ತೆಯರು, ನರ್ಸಿಂಗ್ ವಿದ್ಯಾರ್ಥಿಗಳು, ಎನ್.ಎಸ್.ಎಸ್. ವಿದ್ಯಾರ್ಥಿಗಳು ಮತ್ತಿತರ ಸ್ವಯಂ ಸೇವಕರ ನೆರವಿನೊಂದಿಗೆ ಮನೆ…
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ರೈತರು ತಮ್ಮ ಜಮೀನಿನ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಜೋಡಣೆ ಮಾಡುವುದು ಕಡ್ಡಾಯವಾಗಿರುತ್ತದೆ. ರೈತರು ಸರ್ಕಾರದ ಯಾವುದೇ ಸೌಲಭ್ಯದ ಫಲಾನುಭವಿಯಾಗಲು ರೈತರು ತಮ್ಮ ಆರ್ಟಿಸಿ ಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕು. ಈ ಕುರಿತು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದ್ದು ಇದನ್ನು ರೈತರು ತಮ್ಮ ಮೊಬೈಲ್ ಮೂಲಕ ಅಥವಾ ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳನ್ನು ಭೇಟಿ ಮಾಡಿ ಸದರಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿರುತ್ತದೆ. ಆರ್ಟಿಸಿ ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಲು ಉದಾಸೀನ ಮಾಡಿದರೆ ಮುಂದಿನ ದಿನಗಳಲ್ಲಿ ಅಂತಹ ರೈತರಿಗೆ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಕ್ಕೆ ತೊಂದರೆ ಉಂಟಾಗಲಿದೆ. ಆರ್ಟಿಸಿ ಗೆ ಆಧಾರ್ ಜೋಡಣೆ ಮಾಡುವುದರಿಂದ ಜಮೀನಿನ ದಾಖಲೆ ಮತ್ತಷ್ಟು ಸುರಕ್ಷಿತವಾಗಿರುತ್ತದೆ. ಭೂ ದಾಖಲೆ ಪಡೆಯುವುದು ಸುಲಭ. ಸರ್ಕಾರಿ ಯೋಜನೆಗೆ ಅರ್ಜಿ ಸಲ್ಲಿಕೆ ಸರಳವಾಗುತ್ತದೆ. ಖಾತಾ ವಿವಾದವನ್ನು ತಪ್ಪಿಸಲು ಅನುಕೂಲ, ಸಾಲ ಪ್ರಕ್ತಿಯೆ ಸುಲಭ ಹಾಗೂ ಜಮೀನು ಮಾರಾಟ ಸಮಯದಲ್ಲಿ ಹೆಚ್ಚಿನ ಪಾರದರ್ಶಕತೆ…
ಬೆಂಗಳೂರು: ಕೆಎಂಎಫ್ ನಿಂದ ರಾಜ್ಯಾಧ್ಯಂತ ನಂದಿನಿ ಹಾಲಿನ ( Nandini Milk ) ದರ ಏರಿಕೆಯ ನಿರ್ಧಾರವನ್ನು ಪ್ರಕಟಿಸಿದೆ. ಈ ಹಿನ್ನಲೆಯಲ್ಲಿ ನಂದಿನಿ ವಿವಿಧ ಹಾಲಿನ ದರಗಳು ಇಂದಿನಿಂದ ಹೆಚ್ಚಳವಾಗಲಿದ್ದಾವೆ. ಹಾಗಾದ್ರೇ ನಂದಿನಿ ಹಾಲಿನ ಉತ್ಪನ್ನಗಳಲ್ಲಿ ಯಾವುದಕ್ಕೆ ಎಷ್ಟು ಹೆಚ್ಚಾಗಲಿದೆ ಎನ್ನುವ ಮಾಹಿತಿ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ( KMF) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಹಕಾರ ಹಾಲು ಮಹಾಮಂಡಳವಾಗಿ ಹೈನೋದ್ಯಮದಲ್ಲಿ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು ರಾಷ್ಟ್ರದಲ್ಲಿಯೇ ಎರಡನೆಯ ದೊಡ್ಡ ಮಹಾಮಂಡಳವಾಗಿದ್ದು, ದಕ್ಷಿಣ ಭಾರತದ ಕಾರ್ಯನಿರ್ವಹಿಸುತ್ತಿರುತ್ತದೆ. ಕಹಾಮವು ಕಳೆದ 05 ದಶಕಗಳಿಂದಲೂ ತನ್ನ ಸದಸ್ಯ ಹಾಲು ಒಕ್ಕೂಟಗಳ ಮೂಲಕ ರಾಜ್ಯದ 27 ಲಕ್ಷಕ್ಕೂ ಹೆಚ್ಚು ಹೈನುಗಾರರಿಂದ ಹಾಲು ಖರೀದಿಸಿ, ಸಂಸ್ಕರಿಸಿ, “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ಯಾಂಡ್ನಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗ್ರಾಹಕರ ಅಭಿರುಚಿಗೆ ತಕ್ಕಂತೆ ಪರಿಚಯಿಸಿರುತ್ತದೆ ಎಂದಿದೆ. ಪ್ರಸ್ತುತ…













