Subscribe to Updates
Get the latest creative news from FooBar about art, design and business.
Author: kannadanewsnow57
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 7ನೇ ವೇತನ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರವು ಸಿದ್ದವಾಗಿದ್ದು, ವೇತನ ಪರಿಷ್ಕರಣೆ ಸಹಿತ ಹಲವು ಸವಲತ್ತುಗಳನ್ನು ನೀಡುವ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವ ಶಿಫಾರಸುಗಳನ್ನು ಅನುಷ್ಠಾನಿಸಲು ಮುಂದಾಗಿದೆ. ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇಂದು ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ, ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ನೀಡಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ. ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 2022ರ ನವೆಂಬರ್ 19ರಂದು ಆಯೋಗ ರಚಿಸಲಾಗಿತ್ತು. ಆರು ತಿಂಗಳು ನೀಡಿದ್ದ ಅವಧಿಯನ್ನು ಎರಡು ಬಾರಿ ವಿಸ್ತರಿಸಿದ ನಂತರ ಈ ಮಾರ್ಚ್ 16ರಂದು ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ವರದಿ…
ಬೆಂಗಳೂರು : ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ವಿಸ್ತೃತ ಮಾರ್ಗಸೂಚಿ ಪ್ರಕಟಿಸಿದೆ. ಮೇಲೆ ಓದಲಾದ ಉಲ್ಲೇಖ (1)ರ ಸರ್ಕಾರಿ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಕುರಿತಂತೆ ವಿಸ್ತ್ರತ ಮಾರ್ಗಸೂಚಿಗಳನ್ನು ನೀಡಲಾಗಿದೆ. ಸದರಿ ಸರ್ಕಾರಿ ಆದೇಶದಲ್ಲಿ ವಿಶೇಷ ಚೇತನ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಕೈಗೊಳ್ಳುವ ಬಗ್ಗೆ ತಿಳಿಸಲಾಗಿದೆ. ಅಂಗವಿಕಲ ವ್ಯಕ್ತಿಗಳ ಹಕ್ಕು (ಅಧಿನಿಯಮ) 2016ರ ಸೆಕ್ಷನ್ 20(5)ರನ್ನಯ ವಿಶೇಷ ಚೇತನ ನೌಕರರಿಗೆ ಮತ್ತು ವಿಶೇಷ ಚೇತನ ಅವಲಂಬಿತರ ಪಾಲನ ಪೋಷಣೆಯ ಜವಾಬ್ದಾರಿ ಹೊಂದಿರುವ ನೌಕರರಿಗೆ ಸಾಮಾನ್ಯ ಮತ್ತು ಪುನರಾವರ್ತಿತ ವರ್ಗಾವಣೆಗಳಿಂದ ವಿನಾಯಿತಿ ನೀಡುವುದು, ವರ್ಗಾವಣೆ ಮತ್ತು ಪದೋನ್ನತ್ತಿಯ ನಂತರದಲ್ಲಿ ಸ್ಥಳ ನಿಯುಕ್ತಿಯಲ್ಲಿ ಪ್ರಾಶಸ್ತ್ರ ನೀಡುವುದು, ನೇಮಕಾತಿ ನಂತರದಲ್ಲಿ ನೀಡುವ ಆರಂಭಿಕ ಸ್ಥಳ ನಿಯುಕ್ತಿಯನ್ನು ಅವರ ವಾಸಸ್ಥಳದ ಹತ್ತಿರದ ಸ್ಥಳಕ್ಕೆ ನೀಡುವುದನ್ನು ಒಳಗೊಂಡಂತೆ, ಅವರು ಘನತೆಯಿಂದ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ವರ್ಗಾವಣೆ ಮತ್ತು ಸ್ಥಳನಿಯುಕ್ತಿ ನಿಯಮಗಳನ್ನು ರೂಪಿಸುವುದು ಅಗತ್ಯವಾಗಿರುತ್ತದೆ. ಆದ್ದರಿಂದ ವಿಶೇಷ ಚೇತನ ನಿಯಂತ್ರಿಸಲು…
ನವದೆಹಲಿ:ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಭದ್ರತಾ ಕಾರ್ಯಾಚರಣೆಗಳಲ್ಲಿ, ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿರುವ ಇಬ್ಬರು ಭಯೋತ್ಪಾದಕರನ್ನು ಎನ್ಕೌಂಟರ್ ಮಾಡುವ ಮೊದಲು, ಭಯೋತ್ಪಾದಕರು ಹಿರಾನಗರದ ಸೈದಾ ಸುಖಲ್ ಗ್ರಾಮದಲ್ಲಿ ಮನೆ ಮನೆಗೆ ಹೋಗಿ ನೀರು ಕೇಳುತ್ತಿರುವುದು ಕಂಡುಬಂದಿದೆ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಬಾಗಿಲು ಮುಚ್ಚಿ ಎಚ್ಚರಿಕೆ ನೀಡಿದ್ದು, ಭಯೋತ್ಪಾದಕರು ಗಾಳಿಯಲ್ಲಿ ಮತ್ತು ಹಾದುಹೋಗುವ ಗ್ರಾಮಸ್ಥರ ಮೇಲೆ ಯಾದೃಚ್ಛಿಕವಾಗಿ ಗುಂಡು ಹಾರಿಸಲು ಪ್ರೇರೇಪಿಸಿದರು. ಈ ಗೊಂದಲಮಯ ಪರಿಸ್ಥಿತಿಯು ಭದ್ರತಾ ಪಡೆಗಳಿಂದ ತ್ವರಿತ ಪ್ರತಿಕ್ರಿಯೆಗೆ ಕಾರಣವಾಯಿತು. ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಘಟನೆಯ ವಿವರಗಳನ್ನು ಹಂಚಿಕೊಂಡಿದ್ದಾರೆ. “ಗ್ರಾಮಸ್ಥರು ಅನುಮಾನಗೊಂಡು ಗದ್ದಲ ಎಬ್ಬಿಸಿದಾಗ ಭಯೋತ್ಪಾದಕರು ಭಯಭೀತರಾಗಿ ಯಾದೃಚ್ಛಿಕವಾಗಿ ಗುಂಡು ಹಾರಿಸಿದರು. ಪೊಲೀಸರ ಮೇಲೆ ಗ್ರೆನೇಡ್ ಎಸೆಯಲು ಪ್ರಯತ್ನಿಸುತ್ತಿದ್ದಾಗ ಒಬ್ಬ ಭಯೋತ್ಪಾದಕನನ್ನು ರಾತ್ರೋರಾತ್ರಿ ಕೊಲ್ಲಲಾಯಿತು ಮತ್ತು ಎರಡನೇ ಭಯೋತ್ಪಾದಕನನ್ನು ಇಂದು ಬೆಳಿಗ್ಗೆ ಕೊಲ್ಲಲಾಯಿತು” ಎಂದು ಅವರು ಹೇಳಿದರು. ಎನ್ಕೌಂಟರ್ ವೇಳೆ ಅರೆಸೈನಿಕ ಸೈನಿಕನೊಬ್ಬ ಮೃತಪಟ್ಟಿದ್ದಾನೆ. ಗುಂಡಿನ ದಾಳಿಯಲ್ಲಿ ಗಾಯಗೊಂಡ…
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜೂನ್.14 ರ ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ…
ಬೆಂಗಳೂರು: ವಾಹನ ಸವಾರರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಸೆಪ್ಟೆಂಬರ್ ವರೆಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಿಸೋದಕ್ಕೆ ಅನುಮತಿ ನೀಡಿದೆ. ಹೀಗಾಗಿ ವಾಹನ ಸವಾರರು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಸೋದಕ್ಕೆ ಸೆಪ್ಟೆಂಬರ್ ವರೆಗೆ ಗಡುವು ವಿಸ್ತರಣೆಯಾದಂತೆ ಆಗಿದೆ. ಬಿಎನ್ ಡಿ ಎನರ್ಜಿ ಲಿಮಿಟೆಡ್ ಮತ್ತಿತರರು ಹೈಕೋರ್ಟ್ ಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಗಡುವು ವಿಸ್ತರಣೆ ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು, ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ ಅವರನ್ನೊಳಗೊಂಡಂತ ನ್ಯಾಯಪೀಠವು ವಿಚಾರಣೆ ನಡೆಸಿತು. ಈ ಅರ್ಜಿಯ ವಿಚಾರಣೆಯ ಬಳಿಕ ಹೈಕೋರ್ಟ್ ನ್ಯಾಯಪೀಠವು, ಮೇ 21ರಂದು ಎಚ್ಎಸ್ಆರ್ಪಿ ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಯಾವುದೇ ದುರುದ್ದೇಶಿತ ಕ್ರಮಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈಗ ರಾಜ್ಯ ಸರ್ಕಾರವು ಆಗಸ್ಟ್-ಸೆಪ್ಟೆಂಬರ್ವರೆಗೆ ಎಚ್ಎಸ್ಆರ್ಪಿ ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ, ಮೇ 21ರ ಆದೇಶದಲ್ಲಿ…
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆಯ ಸಹೋದರ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ಅವರನ್ನು ಬಂಧಿಸುವಂತೆ ನಿರ್ದೇಶನ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೌದು ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಸಂತ್ರಸಸ್ತೆಯ ಸಹೋದರ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಲೈಂಗಿಕ ದೌರ್ಜನ್ಯ ಘಟನೆ ನಡೆದು ಹಲವು ತಿಂಗಳು ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಇದುವರೆಗೂ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸಿ ಪೊಲೀಸರು ವಿಚಾರಣೆಗೆ ಒಳಪಡಿಸಿಲ್ಲ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮನೆಯ ಸಿಸಿಟಿವಿ ದೃಶ್ಯಾವಳಿ ಸೀಸ್ ಮಾಡಿಲ್ಲ ಕನಿಷ್ಠ 41 ಅಡಿ ನೋಟಿಸ್ ನೀಡಿ ಬಿ ಎಸ್ ವೈ ಅವರನ್ನು ವಿಚಾರಣೆಗೆ ಕರೆಸಬಹುದಾಗಿತ್ತು. ಈ ಮಧ್ಯೆ ದೂರು ನೀಡಿದ ನಂತರ ತಾಯಿ ಕೂಡ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ ನಡೆದು…
ಬೆಂಗಳೂರು : : ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್ಗೆ 21 ಕೆ.ಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್ಗೆ 14 ಕೆ.ಜಿ, ಆದ್ಯತಾ ಹಾಗೂ ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ 3 ಕೆ.ಜಿ ಅಕ್ಕಿ, ರಾಗಿ 2 ಕೆ.ಜಿ ಉಚಿತವಾಗಿ ವಿತರಿಸಲಾಗುತ್ತದೆ. ಸರ್ಕಾರದ ಗ್ಯಾರಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ತಹಶೀಲ್ದಾರ್ ಡಾ.ಎಂ.ಬಿ.ಅಶ್ವಥ್ ತಿಳಿಸಿದ್ದಾರೆ.
ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ. ಉಚಿತ ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲಗಳ ಸಂಗ್ರಹಕ್ಕಾಗಿ ತೀವ್ರ ಕಸರತ್ತು ನಡೆಸುತ್ತಿರುವ ಸರ್ಕಾರ, ದೇಶಿಯ ಮದ್ಯಗಳ ಬೆಲೆ ಏರಿಕೆಗೆ ನಿರ್ಧರಿಸಿದ್ದು, ಲಿಕ್ಕರ್ ದರ ಏರಿಕೆಗೆ ಅಬಕಾರಿ ಇಲಾಖೆ ಪ್ಲಾನ್ ಮಾಡಿದ್ದು, ಶೀಘ್ರವೇ ಅನುಮೋದನೆ ನೀಡಲು ಮುಂದಾಗಿದೆ. ರಾಜ್ಯದಲ್ಲಿ 2023ರ ಜುಲೈನಲ್ಲಿ ದೇಶೀಯ ಮದ್ಯಗಳ ಬೆಲೆ ಹೆಚ್ಚಿಸಲಾಗಿತ್ತು. ನಂತರ ಲಿಕ್ಕರ್ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದವು. ಲಿಕ್ಕರ್ ದರವನ್ನ 20 ರೂಪಾಯಿಗೆ ಏರಿಕೆ ಮಾಡಿತ್ತು. ಈಗ ಮತ್ತೆ ಮದ್ಯದ ಬೆಲೆಯಲ್ಲಿ ಹೆಚ್ಚಳ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ.
ನವದೆಹಲಿ:2018ರಲ್ಲಿ ಬಿಜೆಪಿ ಮುಖಂಡ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ರಾಂಚಿಯ ವಿಶೇಷ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮಧ್ಯಪ್ರದೇಶ ಶಾಸಕ ನ್ಯಾಯಾಲಯ ನೀಡಿದ್ದ ಸಮನ್ಸ್ ನಿಂದ ರಾಹುಲ್ ಗಾಂಧಿ ತಪ್ಪಿಸಿಕೊಂಡಿದ್ದಾರೆ. 2018 ರಲ್ಲಿ ಬಿಜೆಪಿ ಕಾರ್ಯಕರ್ತ ನವೀನ್ ಝಾ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಜೂನ್ 11 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯವು ರಾಹುಲ್ ಗಾಂಧಿಗೆ ಆದೇಶಿಸಿತ್ತು. ಸಮನ್ಸ್ ತಪ್ಪಿಸಿಕೊಂಡ ನಂತರ, ಜುಲೈ 6 ರಂದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಮಂಗಳವಾರ ರಾಹುಲ್ ಗಾಂಧಿಗೆ ನಿರ್ದೇಶನ ನೀಡಿತು. ಬಿಜೆಪಿ ಕಾರ್ಯಕರ್ತ ನವೀನ್ ಝಾ ಅವರ ಪ್ರಕರಣವು ರಾಹುಲ್ ಗಾಂಧಿ ಆಗಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ಹೇಳುತ್ತದೆ, ಕೊಲೆಗಾರನನ್ನು ತನ್ನ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಡುವ ಏಕೈಕ ಪಕ್ಷ ಬಿಜೆಪಿ ಎಂದು ಆರೋಪಿಸಿದ್ದರು ಎಂದು ದೂರಿದ್ದರು. ನ್ಯಾಯಾಲಯದ ಮುಂದೆ ಸೇವಾ ಪ್ರಮಾಣಪತ್ರ ಲಭ್ಯವಿಲ್ಲ ಎಂದು ನವೀನ್ ಝಾ ಅವರ ವಕೀಲ ವಿನೋದ್ ಶಾಹು ಲತಿಳಿಸಿದರು.…
ಕುವೈತ್: ದಕ್ಷಿಣ ಕುವೈತ್ನ ಮಂಗಾಫ್ ನಗರದಲ್ಲಿ ಸಂಭವಿಸಿದ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 35 ಜನರು ಸಾವನ್ನಪ್ಪಿದ್ದಾರೆ ಎಂದು ದೇಶದ ರಾಜ್ಯ ಮಾಧ್ಯಮ ಬುಧವಾರ ವರದಿ ಮಾಡಿದೆ. ವರದಿಗಳ ಪ್ರಕಾರ, ದುರಂತ ಘಟನೆಯಲ್ಲಿ ಕನಿಷ್ಠ ನಾಲ್ಕು ಭಾರತೀಯರು ಸಹ ಸಾವನ್ನಪ್ಪಿದ್ದಾರೆ. ಈ ಕಟ್ಟಡವು ಹೆಚ್ಚಿನ ಮಲಯಾಳಂ ಜನರನ್ನು ಹೊಂದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮೃತರಲ್ಲಿ ಇಬ್ಬರು ತಮಿಳುನಾಡು ಮತ್ತು ಉತ್ತರ ಭಾರತದವರು. ಆದಾಗ್ಯೂ, ಅಧಿಕಾರಿಗಳಿಂದ ಅಧಿಕೃತ ದೃಢೀಕರಣಕ್ಕಾಗಿ ಇನ್ನೂ ಕಾಯಲಾಗುತ್ತಿದೆ. ಕುವೈತ್ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಹೇಳಿಕೆಯ ಪ್ರಕಾರ, ಗಂಭೀರ ಸ್ಥಿತಿಯಲ್ಲಿರುವ ಕೆಲವರು ಸೇರಿದಂತೆ ಗಾಯಗೊಂಡ ಎಲ್ಲರನ್ನು ಅಗತ್ಯ ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಹಲವಾರು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಕಟ್ಟಡದ ಬೆಂಕಿಯಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಆರೈಕೆ ಒದಗಿಸಲು ವೈದ್ಯಕೀಯ ತಂಡಗಳು ತಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿವೆ ಎಂದು ಸಚಿವಾಲಯ ತಿಳಿಸಿದೆ. ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಲಾಗಿದೆ.













