Author: kannadanewsnow57

ಬೆಳಗಾವಿ : ಬೆಳಗಾವಿಯಲ್ಲಿ ಕೋರ್ಟ್‌ ಆವರಣದಲ್ಲೇ ವ್ಯಕ್ತಿಯೊಬ್ಬ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಪಾಕ್‌ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಬೆಳಗಾವಿಯ ಕೋರ್ಟ್‌ ಆವರಣದಲ್ಲೇ ಪಾತಕಿಯೊಬ್ಬ ಪಾಕ್‌ ಪರ ಘೋಷಣೆ ಕೂಗಿದ್ದಾನೆ. ಪಾಕ್‌ ಪರ ಘೋಷಣೆ ಕೂಗಿದವನನ್ನು ಜಯೇಶ್‌ ಪೂಜಾರಿ ಎಂದು ಗುರುತಿಸಲಾಗಿದ್ದು, ಪಾಕ್‌ ಪರ ಘೋಷಣೆ ಕೂಗುತ್ತಿದ್ದ ವೇಳೆ ಸಾರ್ವಜನಿಕರು, ವಕೀಲರು ಧರ್ಮದೇಟ ನೀಡಿದ್ದಾರೆ. ಕೂಡಲೇ ಪೊಲೀಸರು ಜಯೇಶ್‌ ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಹಿಂದೆ ಜಯೇಶ್‌ ಕೇಂದ್ರ ಸಚಿವರಾಗಿದ್ದ ನಿತೀನ್‌ ಗಡ್ಕರಿಗೂ ಕೊಲೆ ಬೆದರಿಕೆ ಹಾಕಿದ್ದ. ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ನಿತೀನ್‌ ಗಡ್ಕರಿಗೆ ಕೊಲೆ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿನ 1008 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಯೋಜನಾ ನಿರ್ದೇಶಕರು, ಸಮಗ್ರ ಶಿಕ್ಷಣ ಕರ್ನಾಟಕ ಇವರು ಮೇಲೆ ಓದಲಾದ ಏಕ ಕಡತದಲ್ಲಿ, ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲಾ 7 ಜಿಲ್ಲೆಗಳಲ್ಲಿ ಆಯ್ದ 1008 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (ECCE) ಪ್ರಾರಂಭಿಸಲು ಅನುಮತಿ ನೀಡುವಂತೆ ಮತ್ತು ಇವುಗಳಿಗೆ ಅಗತ್ಯವಿರುವ ಪಠ್ಯಪುಸ್ತಕ, ಕಲಿಕಾ ಸಾಮಗ್ರಿ ಹಾಗೂ ಕಲಿಕಾ ಕಿಟ್ಗಳನ್ನು ಸಮಗ್ರ ಶಿಕ್ಷಣ ಕರ್ನಾಟಕ ಕಛೇರಿಯ ವತಿಯಿಂದ ಒದಗಿಸುವಂತೆ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ, ಇವರು ಕೋರಿದ್ರು. ಸದರಿ ಕಿಟ್‌ಗಳಿಗೆ ಅಗತ್ಯವಿರುವ ಅನುದಾನದ ವಿವರ ಈ ಕೆಳಕಂಡಂತಿದೆ ಎಂದು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಕಲ್ಯಾಣ ಕರ್ನಾಟಕ ಪ್ರದೇಶದ ಎಲ್ಲಾ 7 ಜಿಲ್ಲೆಗಳಲ್ಲಿ ಆಯ್ದ 1008 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು…

Read More

ನವದೆಹಲಿ : ಆಧಾರ್ ಕಾರ್ಡ್ ಉಚಿತ ಅಪ್‌ ಡೇಟ್‌ ಗೆ ಕೇವಲ ಎರಡು ದಿನ ಮಾತ್ರ ಬಾಕಿ ಇದ್ದು, ಇದಕ್ಕಾಗಿ ಗಡುವು ಜೂನ್ 14, 2024 ಆಗಿದೆ. ಈ ಗಡುವನ್ನು ಈ ಹಿಂದೆ ಅನೇಕ ಬಾರಿ ವಿಸ್ತರಿಸಲಾಗಿದೆ. ಯುಐಡಿಎಐ ಕೆಲವು ವಿವರಗಳನ್ನು ಉಚಿತವಾಗಿ ಬದಲಾಯಿಸಲು ಅನುಮತಿಸಿದೆ, ಒಬ್ಬ ವ್ಯಕ್ತಿಯು ಅಪ್‌ ಡೇಟ್ ಆನ್ಲೈನ್ನಲ್ಲಿ ಮಾಡುತ್ತಿದ್ದರೆ, ಆಧಾರ್ ಕೇಂದ್ರಗಳಲ್ಲಿ ಆಫ್ಲೈನ್ನಲ್ಲಿ ಮಾಡಿದ ಯಾವುದೇ ನವೀಕರಣಕ್ಕಾಗಿ, ಶುಲ್ಕಗಳು ಅನ್ವಯವಾಗುತ್ತವೆ. ಆಧಾರ್: ಏನನ್ನು ಉಚಿತವಾಗಿ ನವೀಕರಿಸಬಹುದು ಮೈ ಆಧಾರ್ ಪೋರ್ಟಲ್ ಸಹಾಯದಿಂದ, ಆಧಾರ್ ವಿವರಗಳನ್ನು ನವೀಕರಿಸಬಹುದು, ಆಧಾರ್ ಕೇಂದ್ರಕ್ಕೆ ಭೇಟಿ ನೀಡುವ ಮೂಲಕವೂ ಇದನ್ನು ಮಾಡಬಹುದು. ಆಧಾರ್ನಲ್ಲಿ ಬದಲಾವಣೆಗಳನ್ನು ಮಾಡಲು ಗ್ರಾಹಕರ ಜನಸಂಖ್ಯಾ ಡೇಟಾ, ವಿಳಾಸ, ಹುಟ್ಟಿದ ದಿನಾಂಕ, ಮೊಬೈಲ್ ಸಂಖ್ಯೆ ಮುಂತಾದ ಪ್ರಮುಖ ಮಾಹಿತಿಯನ್ನು ಒದಗಿಸಬೇಕಾಗುತ್ತದೆ. ಆಧಾರ್ನ ಜನಸಂಖ್ಯಾ ಡೇಟಾವನ್ನು ಆನ್ಲೈನ್ನಲ್ಲಿ ನವೀಕರಿಸಬಹುದು, ಆದರೆ ಆಧಾರ್ ಕೇಂದ್ರಕ್ಕೆ ಹೋಗುವ ಮೂಲಕ ಮಾತ್ರ ಹಲವಾರು ಕೆಲಸಗಳನ್ನು ಮಾಡಬಹುದು. ಉದಾಹರಣೆಗೆ, ಐರಿಸ್ ಅಥವಾ ಬಯೋಮೆಟ್ರಿಕ್ ಡೇಟಾದ ನವೀಕರಣವು…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ತನಿಖೆ ವೇಳೆ ಸ್ಪೋಟಕ ಮಾಹಿತಿ ಲಭ್ಯವಾಗಿದ್ದು, ಪ್ರಕರಣದ ಆರೋಪಿ ಪವನ್‌ ಪ್ರಕರಣದ ಮಾಸ್ಟರ್‌ ಮೈಂಡ್‌ ಆಗಿ ಕೆಲಸ ಮಾಡಿದ್ದಾನೆ. ಇನ್ ಸ್ಟಾಗ್ರಾಂನಲ್ಲಿ ಪವಿತ್ರಾಗೌಡಗೆ ಮೆಸೇಜ್‌ ಮಾಡುತ್ತಿದ್ದ ರೇಣುಕಾಸ್ವಾಮಿ ಬಗ್ಗೆ ಮೊದಲು ಪವಿತ್ರಾಗೌಡ ಪವನ್‌ ಗೆ ಹೇಳಿದ್ದಾಳೆ. ಬಳಿಕ ಆರೋಪಿ ಪವನ್‌ ಪವಿತ್ರಾಗೌಡ ಹೆಸರಿನಲ್ಲಿ ನಕಲಿ ಇನ್‌ ಸ್ಟಾಗ್ರಾಂ ಖಾತೆ ಓಪನ್‌ ಮಾಡಿ ರೇಣುಕಾಸ್ವಾಮಿ ಜೊತೆಗೆ ಚಾಟಿಂಗ್‌ ಮಾಡಿದ್ದಾನೆ. ಚಾಟಿಂಗ್‌ ಮೂಲಕವೇ ರೇಣುಕಾಸ್ವಾಮಿಯ ವಿಳಾಸ ತಿಳಿದುಕೊಂಡ ಪವನ್‌ ಬಳಿಕ ಚಿತ್ರದುರ್ಗದ ದರ್ಶನ್‌ ಅಭಿಮಾನಿಗಳ ಸಂಘದ ರಾಘವೇಂದ್ರಗೆ ಅವನ್ನು ಹಿಡಿದುಕೊಡುವಂತೆ ಕೇಳಿದ್ದಾರೆ. ಪವನ್‌ ಸೂಚನೆ ಮೇರೆಗೆ ರಾಘವೇಂದ್ರ ಹಾಗೂ ನಂದೀಶ್‌ ಎಂಬುವರು ಇಬ್ಬರು ಸೇರಿಕೊಂಡು ರೇಣುಕಾಸ್ವಾಮಿಯನ್ನು ಕರೆಸಿಕೊಂಡು ಕಾರಿನಲಿ ಅಪಹರಣ ಮಾಡಿ ಪಟ್ಟದಕೆರೆಯ ಶೆಟ್‌ ಗೆ ಕರೆದುಕೊಂಡು ಬಂದು ಹಗಲು ರಾತ್ರಿ ಹೊಡೆದಿದ್ದಾರೆ. ರಾತ್ರಿ ಶೆಟ್‌ ಗೆ ಬಂದ ದರ್ಶನ್‌ ಬೆಲ್ಟ್‌ ನಲ್ಲಿ ಹೊಡೆದ್ರೆ, ಪವಿತ್ರಾಗೌಡ ಚಪ್ಪಲಿಯಲ್ಲಿ ಹೊಡೆದಿರುವುದಾಗಿ ಆರೋಪಿಗಳು ಪೊಲೀಸರ…

Read More

ಮುಂಬೈ : ಮೊಬೈಲ್ ಫೋನ್ ಗಳಿಂದ ಬರುವ ವಿದ್ಯುತ್ಕಾಂತೀಯ ತರಂಗಗಳು ವಿದ್ಯುತ್ ಪ್ರವಾಹವನ್ನು ಪ್ರಚೋದಿಸಬಹುದು ಮತ್ತು ಹತ್ತಿರದ ಲೋಹದ ವಾಹಕಗಳಲ್ಲಿ ವಿದ್ಯುತ್ ಕಿಡಿಯನ್ನು ಉಂಟುಮಾಡಬಹುದು, ಇದು ಬೆಂಕಿಯನ್ನು ಪ್ರಚೋದಿಸುತ್ತದೆ ಎಂಬ ಭಯದಿಂದಾಗಿ ಪೆಟ್ರೋಲ್ ಪಂಪ್ ಗಳಲ್ಲಿ ಮೊಬೈಲ್ ಫೋನ್ ಗಳನ್ನು ಬಳಸುವುದರ ವಿರುದ್ಧ ಯಾವಾಗಲೂ ಎಚ್ಚರಿಕೆಯ ಸೂಚನೆ ಇರುತ್ತದೆ. ಇತ್ತೀಚೆಗೆ ಛತ್ರಪತಿ ಸಂಭಾಜಿನಗರದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ, ವ್ಯಕ್ತಿಯೊಬ್ಬ ಪೆಟ್ರೋಲ್ ಪಂಪ್ನಲ್ಲಿ ತನ್ನ ಬೈಕ್ನಲ್ಲಿ ಹೋಗುತ್ತಿರುವುದು ಕಂಡುಬರುತ್ತದೆ. ಪೆಟ್ರೋಲ್ ಪಂಪ್ ಅಟೆಂಡೆಂಟ್ ತನ್ನ ಬೈಕಿನಲ್ಲಿ ಪೆಟ್ರೋಲ್ ತುಂಬಿಸಲು ಕೊಳವೆಯನ್ನು ಹೊರತೆಗೆದ ಕೂಡಲೇ, ಆ ವ್ಯಕ್ತಿ ತನ್ನ ಜೇಬಿನಿಂದ ಮೊಬೈಲ್ ಫೋನ್ ಅನ್ನು ಹೊರತೆಗೆಯುತ್ತಾನೆ. ತಕ್ಷಣವೇ, ಕೊಳವೆ ಮತ್ತು ಬೈಕಿಗೆ ಬೆಂಕಿ ಹೊತ್ತಿಕೊಂಡಿತು. ಅಟೆಂಡೆಂಟ್ ಬೆಂಕಿಯನ್ನು ನಂದಿಸಲು ಅಗ್ನಿಶಾಮಕವನ್ನು ಬಳಸುವುದನ್ನು ಕಾಣಬಹುದು. ಮೊಬೈಲ್ ಫೋನ್ನಿಂದ ಬೆಂಕಿ ಸಂಭವಿಸಿದೆಯೇ ಎಂಬುದು ಸ್ಪಷ್ಟವಾಗಿಲ್ಲ, ಆದರೆ ಇದು ಖಂಡಿತವಾಗಿಯೂ ಸಾಕಷ್ಟು ಕಳವಳಗಳನ್ನು…

Read More

ಬೆಂಗಳೂರು: ನಟ ಜಗ್ಗೇಶ್ ದರ್ಶನ್ ಅರೆಸ್ಟ್ ಬೆನ್ನಲ್ಲೇ ಟ್ವೀಟ್ ಮಾಡಿದ್ದಾರೆ.”ಸರ್ವ ಆತ್ಮಾನೇನ ಬ್ರಹ್ಮ’ ‘ಸರ್ವ ಜೀವಿಯಲ್ಲಿ ದೇವರಿದ್ದಾನೆ. ಯಾರನ್ನು ಕೊಲ್ಲುವ ಹಕ್ಕು ಯಾರಿಗೂ ಇಲ್ಲ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ನಟ ದರ್ಶನ್ ಬಗ್ಗೆಯೇ ಅವರು ಹೇಳಿದ್ದಾರೆ ಎನ್ನಲಾಗಿದೆ. ಸರ್ವಆತ್ಮಾನೇನಬ್ರಹ್ಮ ಸರ್ವ ಜೀವಿಯಲ್ಲಿ ದೇವರಿದ್ದಾನೆ ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ! ಕರ್ಮ ಜೀವನನ ಹಿಂದೆ ಹಿಂಬಾಲಿಸುತ್ತದೆ ಅವನ ಪಾಪಕರ್ಮ ಅವನ ಸುಡುತ್ತದೆ! ಕಲಿಯುಗದಲ್ಲಿ ದೇವರು ಕಲ್ಲಲ್ಲಾ ಎಲ್ಲಾ ಕರ್ಮಕ್ಕು ತತಕ್ಷಣ ಪಲಿತಾಂಶ ಉಂಟು! ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ! ಮದಕ್ಕೆ ಕಾರುಣ್ಯದ ಅರಿವಿಲ್ಲಾ! ಕರ್ಮ ಜೀವನವನ್ನು ಹಿಂಬಾಲಿಸುತ್ತದೆ. ಅವನ ಪಾಪಕರ್ಮ ಅವನ ಸುಡುತ್ತದೆ. ಕಲಿಯುಗದಲ್ಲಿ ದೇವರು ಕಲ್ಲಲ್ಲ. ಎಲ್ಲಾ ಕರ್ಮಕ್ಕೂ ತತ್ತಕ್ಷಣ ಫಲಿತಾಂಶ ಉಂಟು. ರಾಮನಾಗು ರಾವಣನಾದರೆ ಅಂತ್ಯ ಎಂದಿದೆ ಸನಾತನ ಕೃತಿ’ ಎಂದು ಅವರು ಬರೆದಿದ್ದಾರೆ. ‘ಮದಕ್ಕೆ ಕಾರುಣ್ಯದ ಅರಿವಿಲ್ಲಾ ಎಂದಿದ್ದಾರೆ. ಸರ್ವಆತ್ಮಾನೇನಬ್ರಹ್ಮ ಸರ್ವ ಜೀವಿಯಲ್ಲಿ ದೇವರಿದ್ದಾನೆ ಯಾರನ್ನು ಕೊಲ್ಲುವ ಹಕ್ಕು ಜೀವನಿಗಿಲ್ಲಾ! ಕರ್ಮ ಜೀವನನ ಹಿಂದೆ…

Read More

ಹೈದರಾಬಾದ್‌ : ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅವರು ದೇವರ ಸಾಕ್ಷಿಯಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.  ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಲಿದ್ದಾರೆ. ಚಂದ್ರಬಾಬು ನಾಯ್ಡು ಅವರೊಂದಿಗೆ ಪವನ್ ಕಲ್ಯಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ದಕ್ಷಿಣ ಭಾರತದ ಚಲನಚಿತ್ರ ತಾರೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಚಿರಂಜೀವಿ, ರಾಮ್ ಚರಣ್, ರಜನಿಕಾಂತ್, ಮೋಹನ್ ಬಾಬು, ಅಲ್ಲು ಅರ್ಜುನ್ ಮುಂತಾದವರು ಭಾಗಿಯಾಗಿದ್ದರು. ವಿಜಯವಾಡದ ಹೊರವಲಯದಲ್ಲಿರುವ ಗನ್ನವರಂ ವಿಮಾನ ನಿಲ್ದಾಣದ ಬಳಿಯ ಕೇಸರಪಲ್ಲಿ ಐಟಿ ಪಾರ್ಕ್ನಲ್ಲಿ ಸಮಾರಂಭ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಎನ್ಡಿಎಯ ಉನ್ನತ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. https://Twitter.com/ANI/status/1800771268423381405 https://Twitter.com/i/status/1800771581469487222

Read More

ಹೈದರಾಬಾದ್‌ : ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅವರು ದೇವರ ಸಾಕ್ಷಿಯಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.  ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರು ನಾಲ್ಕನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಲಿದ್ದಾರೆ. ಚಂದ್ರಬಾಬು ನಾಯ್ಡು ಅವರೊಂದಿಗೆ ಪವನ್ ಕಲ್ಯಾಣ್ ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. https://Twitter.com/ANI/status/1800771268423381405

Read More

ಚಿತ್ರದುರ್ಗ : ನನ್ನ ಮಗನ ಮರ್ಮಾಂಗಕ್ಕೆ ಒದ್ದು, ಸುಟ್ಟು ಕೊಲೆ ಮಾಡಲಾಗಿದೆ ಎಂದು ಕೊಲೆಯಾದ ರೇಣುಕಾಸ್ವಾಮಿ ತಂದೆ ಶಿವನಗೌಡ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗ ಕೊಲೆ ಮಾಡುವಂತಹ ತಪ್ಪು ಮಾಡಿಲ್ಲ. ಪ್ರಕರಣವನ್ನು ಸಿಬಿಐಗೆ ನೀಡಬೇಕು. ನನ್ನ ಸೊಸೆ ಈಗ ಐದು ತಿಂಗಳ ಗರ್ಭಿಣಿ, ಅವಳಿಗೆ ಯಾರು ಆಸರೆ ಆಗ್ತಾರೆ. ಸರ್ಕಾರದಿಂದ ನನ್ನ ಸೊಸೆಗೆ ಪರಿಹಾರ ಕೊಡಬೇಕು. ಪ್ರಕರಣದ ಆರೋಪಿಗಳಾದ ದರ್ಶನ್‌, ಪವಿತ್ರಾಗೌಡಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಮಗನನ್ನು ಕಳೆದುಕೊಂಡ ತಾಯಿ ಆಕ್ರೋಶ ಮುಗಿಲು ಮುಟ್ಟಿದ್ದು ದರ್ಶನ್‌ ಎಲ್ಲಾ ಫಿಲ್ಮ್ನ ಗಳನ್ನು ಬ್ಯಾಣ್‌ ಮಾಡಬೇಕು ಅತನನ್ನು ಚಿತ್ರರಂಗದಿಂದ ನಿಷೇಧಿಸಬೇಕು, ದರ್ಶನ್‌ ಮತ್ತು ಗ್ಯಾಂಗ್‌ ಕಠಿಣ ಶಿಕ್ಷೆಯಾಗಬೇಕು. ನನ್ನ ಮಗ ವಿಲವಿಲ ಒದ್ದಾಡಿ ಸತ್ತಂತೆ ದರ್ಶನ್ ಸಾಯಬೇಕು. ಪವಿತ್ರಾ ಗೌಡಳನ್ನು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ಕೊಲೆಯಾದ ರೇಣುಕಾಸ್ವಾಮಿ ನನ್ನ ಸೊಸೆಗೆ ಅನ್ಯಾಯ ಆಗಿದೆ, ಪರಿಹಾರ ಕೊಡಬೇಕುಉ. ಅವನ ಹತ್ರ ಎಂತಾ ಕಂತ್ರಿ ಬುದ್ದಿ ಇತ್ತು ಗೊತ್ತಾಗಿದೆ.…

Read More

ಬೆಂಗಳೂರು: ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್‌ ನೀಡಲಾಗಿದೆ. ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪಗೆ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಆದರೆ ಯಡಿಯೂರಪ್ಪ ದೆಹಲಿ ಇರುವ ಕಾರಣ ಇಂದು ವಿಚಾರಣೆಗೆ ಹಾಜರಾಗಿಲ್ಲ. ಯಡಿಯೂರಪ್ಪನವರ ಬಳಿ ಸಹಾಯ ಕೋರಿ ಹೋಗಿದ್ದಾಗ ತಮ್ಮ ಪುತ್ರಿಯ ಜೊತೆಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದರೆಂದು ಮಹಿಳೆಯೊಬ್ಬರು ಮಾರ್ಚ್ 14ರಂದು ದೂರು ದಾಖಲಿಸಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಈ ಘಟನೆ ನಡೆದಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಳು. ಯಡಿಯೂರಪ್ಪನವರ ವಿರುದ್ಧ ಈ ಮಹಿಳೆ ಮಾರ್ಚ್ 14ರಂದು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಳು. ಅದರ ಮರುದಿನ, ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ, ಸಿಐಡಿಗೆ ವರ್ಗಾಯಿಸಿತ್ತು. ಸಿಐಡಿ ತಂಡದ ವತಿಯಿಂದ ತನಿಖೆಗೊಳಪಟ್ಟಿರುವ ಈ ಪ್ರಕರಣದಲ್ಲಿ ಅಧಿಕಾರಿಗಳು ಸಂತ್ರಸ್ತೆ ಹೇಳಿಕೆಗಳನ್ನು ಈಗಾಗಲೇ ದಾಖಲಿಸಿಕೊಂಡಿದ್ದಾರೆ.

Read More