Author: kannadanewsnow57

ನವದೆಹಲಿ :: ಕೇಂದ್ರ ಸರ್ಕಾರವು ಅಡುಗೆ ಎಣ್ಣೆಗಳ ಮೇಲಿನ ಆಮದು ಸುಂಕವನ್ನು ಶೇ.20ರಷ್ಟು ಹೆಚ್ಚಿಸಿದ್ದು, ಗ್ರಾಹಕರ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಎಲ್ಲ ಬಗೆಯ ಎಣ್ಣೆಗಳ ಬೆಲೆ ಲೀಟರ್ ಗೆ 15-20 ರೂ.ಏರಿಕೆಯಾಗಿದೆ. ತಾಳೆ ಎಣ್ಣೆ ಬೆಲೆ 100 ರಿಂದ 115 ರೂ. ಸೂರ್ಯಕಾಂತಿ ಎಣ್ಣೆ 115 ರೂ.ನಿಂದ 130-140 ರೂ.ಗೆ, ಕಡಲೆ ಎಣ್ಣೆ 155 ರೂ.ನಿಂದ 165 ರೂ.ಗೆ ಏರಿಕೆಯಾಗಿದೆ. ಪೂಜೆಗೆ ಬಳಸುವ ಎಣ್ಣೆಯನ್ನು 110ರಿಂದ 120 ರೂ.ಗೆ ಹೆಚ್ಚಿಸಿ ವ್ಯಾಪಾರಸ್ಥರು ಮಾರಾಟ ಮಾಡುತ್ತಿದ್ದಾರೆ. ನಗರಗಳು ಮತ್ತು ಪಟ್ಟಣಗಳಲ್ಲಿ, ಅಂಗಡಿಗಳು ಮತ್ತು ಆನ್‌ಲೈನ್ ಮಾರಾಟ ಕಂಪನಿಗಳು ಸಹ ಬೆಲೆಗಳನ್ನು ಹೆಚ್ಚಿಸುತ್ತಿವೆ. ಇನ್ನು ಕೆಲವೆಡೆ ತೈಲ ನಿಕ್ಷೇಪಗಳನ್ನು ಕಪ್ಪು ಮಾರುಕಟ್ಟೆಗೆ ಸ್ಥಳಾಂತರಿಸಲಾಗುತ್ತಿದೆ. ಅಡುಗೆ ಎಣ್ಣೆಗಳ ಮೇಲಿನ ಆಮದು ಸುಂಕವನ್ನು ಕೇಂದ್ರ ಸರ್ಕಾರ ಶೇ.20ರಷ್ಟು ಹೆಚ್ಚಿಸಿದೆ. ಇದರೊಂದಿಗೆ ಸೂರ್ಯಕಾಂತಿ, ಸೋಯಾಬೀನ್ ಮತ್ತು ಸಂಸ್ಕರಿಸಿದ ತಾಳೆ ಎಣ್ಣೆ ಮೇಲಿನ ಆಮದು ತೆರಿಗೆ ಶೇ.12.5ರಿಂದ ಶೇ.32.5ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಎಣ್ಣೆಕಾಳುಗಳ ಬೆಲೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ…

Read More

ಬೆಂಗಳೂರು : ಮಹಾನಗರಪಾಲಿಕೆ ವ್ಯಾಪ್ತಿ ಮತ್ತು ನಗರ ಸ್ಥಳೀಯ ಸಂಸ್ಥೆ ಸಿ.ಎಂ.ಸಿ, ಟಿ.ಎಂ.ಸಿ ಸ್ಥಿರಾಸ್ತಿಗಳ ನೋಂದಣಿಗೆ ಇ-ಆಸ್ತಿ ಖಾತಾವನ್ನು ಕಾವೇರಿ 2.0 ತಂತ್ರಾಂಶದಲ್ಲಿ ಸೆ. 23 ರಿಂದ ಸಂಯೋಜನೆಗೊಳಿಸಿಲು ಕಡ್ಡಾಯಮಾಡಿದೆ. ಸಾರ್ವಜನಿಕರು ತಮ್ಮ ಇ-ಸ್ವತ್ತಿಗೆ ಸಂಬಂಧಿಸಿದ ಇ-ಆಸ್ತಿ ಖಾತಾ ಹೊಂದಿರುವುದನ್ನು ಖಚಿತಪಡಿಸಿಕೊಂಡು. ನೋಂದಣಿ ವೇಳೆ ಇ-ಸ್ವತ್ತಿಗೆ ಸಂಬಂಧಿಸಿದ ಗುರುತಿನ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಿಂದ ಪಡೆದು ಕಾವೇರಿ-2 ರಲ್ಲಿ ನೋಂದಣಿ ಮಾಡಲಾಗುವುದು. ಇ-ಆಸ್ತಿ ತಂತ್ರಾಂಶದಿಂದ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೋಸ ಹೋಗುವುದನ್ನು ತಡೆಯುವುದು. ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ. ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ, ಕಾನೂನು ತೊಂದರೆಗಳನ್ನು ತಪ್ಪಿಸುವುದಾಗಿದೆ. ಹಾಗಾಗಿ ಸಾರ್ವಜನಿಕರು ಇ-ಆಸ್ತಿ ಸಂಯೊಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಸೂಚಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಿವಿಲ್ ಸೇವೆಗಳ ನೇರ ನೇಮಕಾತಿಗೂ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ ಒದಗಿಸುವ ಸಂಬಂಧ ಗಜೆಟ್ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 2024ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 2(ಎ) ಉಪ ಪ್ರಕರಣವನ್ನು ಪ್ರಕರಣ 8 ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ:15.02.2024ರ ರಾಜ್ಯ ಪತ್ರ ವಿಶೇಷ ಸಂಚಿಕೆಯ ಭಾಗ-IV-ಎ (ನಂ.84) ರಲ್ಲಿ ಅಧಿಸೂಚನೆ ಸಂಖ್ಯೆ:ಸಿಆಸುಇ 295 ಸನನಿ 2023, ದಿನಾಂಕ:15.02.2024ರಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗಬಹುದಾದಂತಹ ವ್ಯಕ್ತಿಗಳಿಂದ ಅಧಿಕೃತ ರಾಜ್ಯಪತ್ರದಲ್ಲಿ ಆ ಕರಡು ನಿಯಮಗಳು ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿರುವುದರಿಂದ, ಮತ್ತು, ಸದರಿ ರಾಜ್ಯಪತ್ರವನ್ನು ದಿನಾಂಕ:15ನೇ ಫೆಬ್ರವರಿ 2024ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿರುವುದರಿಂದ, ಮತ್ತು ಸ್ವೀಕೃತವಾಗಿರುವ ಆಕ್ಷೇಪಣೆಗಳು ಮತ್ತು…

Read More

ಬೆಂಗಳೂರು : ರಾಜ್ಯದಲ್ಲಿ ಇನ್ನೂ 373 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲಮಾಧ್ಯಮ ತರಗತಿಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಆಧಿಕೃತ ಅದೇಶ ಹೊರಡಿಸಿದೆ. ವಿಷಯಾನ್ವಯವಾಗಿ ರಾಜ್ಯದ ಸನ್ಮಾನ್ಯ ಮುಖ್ಯ ಮಂತ್ರಿಗಳು 2024-25ನೇ ಸಾಲಿನ (ಫೆಬ್ರವರಿ) ಆಯವ್ಯಯ ಭಾಷಣದ ಕಂಡಿಕ-96 (5)ರಲ್ಲಿ ರಾಜ್ಯದಲ್ಲಿ 2000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ (ದ್ವಿಭಾಷಾ) ಶಾಲೆಗಳನ್ನು ಪ್ರಾರಂಭಿಸಲು ಘೋಷಿಸಿದ ಹಿನ್ನೆಲೆಯಲ್ಲಿ ಸರ್ಕಾರವು ಉಲ್ಲೇಖ-1ರನ್ವಯ ಮೊದಲನೇ ಹಂತದಲ್ಲಿ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ/ಇತರೆ ಮಾಧ್ಯಮದ ಜೊತೆಯಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿರುತ್ತದೆ. ಅದರಂತೆ ಈಗಾಗಲೇ ರಾಜ್ಯದ್ಯಂತ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನು ಪ್ರಾರಂಭಿಸಿ ಅನುಷ್ಠಾನಗೊಳಿಸಲಾಗಿರುತ್ತದೆ. ಪ್ರಸ್ತುತ ಎರಡನೇ ಹಂತದಲ್ಲಿ ರಾಜ್ಯಾದ್ಯಂತ 373 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಗುರುತಿಸಿ ಒಂದನೇ ತರಗತಿಯಿಂದ ಹಾಲಿ ನಡೆಯುತ್ತಿರುವ ಕನ್ನಡ / ಇತರೆ…

Read More

ನವದೆಹಲಿ : ಮಹಾರಾಷ್ಟ್ರ ಪ್ರದೇಶ ಯುವ ಕಾಂಗ್ರೆಸ್ (ಮಾಧ್ಯಮ ಕೋಶ) ಅಧ್ಯಕ್ಷ ಅಕ್ಷಯ್ ಜೈನ್ ಇತ್ತೀಚೆಗೆ ಕ್ಯಾಡ್ಬರಿ ಚಾಕೊಲೇಟ್’ನಲ್ಲಿ “ಹುಳುವಿನಂತಹ ಕೀಟ”ವನ್ನು ಕಂಡುಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ಜೈನ್, “ನನ್ನ ಕ್ಯಾಡ್ಬರಿ ಟೆಂಪ್ಟೇಶನ್’ರಮ್’ನಲ್ಲಿ ಹುಳುವಿನಂತಹ ಕೀಟವನ್ನು ಕಂಡುಕೊಂಡೆ! ನಾನು ವರ್ಷಗಳಿಂದ ನಿಷ್ಠಾವಂತ ಗ್ರಾಹಕರಾಗಿದ್ದೇನೆ, ಆದರೆ ಇದು ಅತ್ಯಂತ ಕೆಟ್ಟ ಅನುಭವವಾಗಿದೆ. ತುಂಬಾ ನಿರಾಶೆಯಾಗಿದೆ @CadburyWorld ದಯವಿಟ್ಟು ಇದನ್ನು ಪರಿಹರಿಸಿ!” ಫಾಲೋ-ಅಪ್ ಟ್ವೀಟ್ನಲ್ಲಿ, “ತುಂಬಾ ಕಳಪೆ ಗ್ರಾಹಕ ಬೆಂಬಲ! ಇದುವರೆಗಿನ ಅತ್ಯಂತ ಕೆಟ್ಟ ಅನುಭವ” ಎಂದು ಬರೆದುಕೊಂಡಿದ್ದಾರೆ. https://twitter.com/AkshayJainIYC/status/1836645843383861439?ref_src=twsrc%5Etfw%7Ctwcamp%5Etweetembed%7Ctwterm%5E1836645843383861439%7Ctwgr%5E24359b05ef4542aa0895f89df89ebe3833bb3fe5%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fwatch-video-beware-parents-beware-read-this-story-before-giving-your-kids-cadbury-chocolate%2F ಅವರ ಪೋಸ್ಟ್’ಗೆ ಪ್ರತಿಕ್ರಿಯಿಸಿದ ಕ್ಯಾಡ್ಬರಿ, “ಹಾಯ್, ಮಾಂಡೆಲೆಜ್ ಇಂಡಿಯಾ ಫುಡ್ಸ್ ಪ್ರೈವೇಟ್ ಲಿಮಿಟೆಡ್ (ಹಿಂದೆ ಕ್ಯಾಡ್ಬರಿ ಇಂಡಿಯಾ ಲಿಮಿಟೆಡ್) ಅತ್ಯುನ್ನತ ಗುಣಮಟ್ಟದ ಮಾನದಂಡಗಳನ್ನು ಕಾಪಾಡಿಕೊಳ್ಳಲು ಪ್ರಯತ್ನಿಸುತ್ತದೆ, ಮತ್ತು ನಿಮಗೆ ಅಹಿತಕರ ಅನುಭವವಾಗಿದೆ ಎಂದು ಗಮನಿಸಲು ನಾವು ವಿಷಾದಿಸುತ್ತೇವೆ” ಎಂದು ಹೇಳಿದೆ. “ನಿಮ್ಮ ಕಳವಳವನ್ನು ಪರಿಹರಿಸಲು ನಮಗೆ ಅನುವು ಮಾಡಿಕೊಡಲು, ದಯವಿಟ್ಟು ನಿಮ್ಮ ಪೂರ್ಣ ಹೆಸರು, ವಿಳಾಸ, ಫೋನ್ ಸಂಖ್ಯೆ ಮತ್ತು ಖರೀದಿ ವಿವರಗಳನ್ನು ಒದಗಿಸುವ Suggestions@mdlzindia.com…

Read More

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದ್ದು, ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 20,000 ಕ್ಕೂ ಹೆಚ್ಚುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10 ನೇ ತರಗತಿ ಪಾಸಾದವರಿಂದ ಪದವೀಧರರವರೆಗೂ ಹುದ್ದೆಗಳಿಗೂ ಅರ್ಜಿ ಸಲ್ಲಿಸಬಹುದು. RRB NTPC ಗ್ರಾಜುಯೇಟ್ ಲೆವೆಲ್ ನೇಮಕಾತಿ 2024: 8,113 ಪದವಿ ಮಟ್ಟದ ಹುದ್ದೆಗಳಿಗೆ ನೇಮಕಾತಿ ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕವಲ್ಲದ ಜನಪ್ರಿಯ ವರ್ಗಗಳ (RRB NTPC) ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. NTPC ನೇಮಕಾತಿ ಅಡಿಯಲ್ಲಿ ಒಟ್ಟು 8,113 ಪದವಿ ಮಟ್ಟದ ನೇಮಕಾತಿಯ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 13, 2024 (ಮಧ್ಯಾಹ್ನ 23.59 ರವರೆಗೆ). ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ (rrbapply.gov.in.) ಮೂಲಕ ಅರ್ಜಿ ಸಲ್ಲಿಸಬಹುದು. RRB NTPC ಅಂಡರ್-ಗ್ರಾಜುಯೇಟ್ ಮಟ್ಟದ ನೇಮಕಾತಿ 2024: ಪದವಿಪೂರ್ವ ಮಟ್ಟದಲ್ಲಿ 3,445 ಹುದ್ದೆಗಳಿಗೆ ನೇಮಕಾತಿ ಎರಡನೇ ನೇಮಕಾತಿಯನ್ನು ರೈಲ್ವೇ ನೇಮಕಾತಿ ಮಂಡಳಿಯೂ…

Read More

ಬೆಂಗಳೂರು :ಹೊರಗುತ್ತಿಗೆ ಕಾರ್ಮಿಕರ ಸೇವೆಗಳನ್ನು ಒದಗಿಸುವ ಸೊಸೈಟಿ’ಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸುವ ಮಹತ್ವದ ನಿರ್ಧಾರಕ್ಕೆ ನಮ್ಮ ಕಾರ್ಮಿಕ ಇಲಾಖೆ ಮುಂದಾಗಿದೆ.  ಈ ಕುರಿತು ಸಚಿವ ಸಂತೋಷ್ ಲಾಡ್ ಮಾಹಿತಿ ನೀಡಿದ್ದು,ಪ್ರಸ್ತುತ ಕಲಬುರ್ಗಿ ವಿಭಾಗದ ಬೀದರ್ ಜಿಲ್ಲೆಯಲ್ಲಿ ಮಾತ್ರ ಈ ಮಾದರಿ ಅನುಷ್ಠಾನದಲ್ಲಿತ್ತು. ಈಗ ಇತರ ಮೂರು ವಿಭಾಗಗಳ ಮೈಸೂರು, ಧಾರವಾಡ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಈ ಸೊಸೈಟಿ ರಚಿಸಲು ಪ್ರಸ್ತಾವನೆ ಕೇಳಲಾಗಿದೆ ಎಂದು ತಿಳಿಸಿದ್ದಾರೆ. ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆಯಾಗುವ ಈ ಸೊಸೈಟಿಗಳು ಜಿಲ್ಲೆಯ ಕೌಶಲ್ಯಯುತ ಹಾಗೂ ಕೌಶಲ್ಯ ರಹಿತ ನಿರುದ್ಯೋಗಿಗಳಿಗೆ ಕೆಲಸ ನೀಡಲಿವೆ. ಇದರಿಂದ ನಿರುದ್ಯೋಗ ನಿರ್ಮೂಲನೆಯೊಂದಿಗೆ, ಕಾರ್ಮಿಕರ ಆರ್ಥಿಕ ಶಕ್ತಿಯನ್ನು ಹೆಚ್ಚಿಸಿ, ಸಾಮಾಜಿಕ ಭದ್ರತೆ ಒದಗಿಸಲು ಅನುಕೂಲವಾಗಲಿದೆ‌ ಎಂದು ಹೇಳಿದ್ದಾರೆ. ಈ ಹಿಂದಿನ ಕಲಾಪದಲ್ಲಿ ಈ ಬಗ್ಗೆ ಚರ್ಚೆಯಾದಾಗ, ಆದಷ್ಟು ಬೇಗ ಎಲ್ಲ ಜಿಲ್ಲೆಗಳಿಗೂ ಈ ಸೊಸೈಟಿಯನ್ನು ವಿಸ್ತರಿಸುವ ಬಗ್ಗೆ ತೀರ್ಮಾನಿಸಲಾಗುವುದೆಂದು ಮಾಹಿತಿ ನೀಡಲಾಗಿತ್ತು. ಅದರಂತೆ ಈ ಮೂರು ಜಿಲ್ಲೆಗಳ ಪ್ರಗತಿ ಪರಿಶೀಲಿಸಿ, ರಾಜ್ಯದ ಇತರ ಜಿಲ್ಲೆಗಳಿಗೂ…

Read More

ಬೆಂಗಳೂರು : ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ ಕನಿಷ್ಟ 6 ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಋತುಸ್ರಾವದ ರಜೆ ನೀತಿ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಈ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ. ಈ ಕುರಿತು ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕರ್ನಾಟಕವು ಮಹಿಳೆಯರಿಗೆ ವರ್ಷಕ್ಕೆ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ ಪಡೆಯಲು ಅರ್ಹವಾದ ನೀತಿಯನ್ನು ಅಂತಿಮಗೊಳಿಸುತ್ತಿದೆ, ಈ ಕ್ರಮವು ಲಕ್ಷಾಂತರ ಉದ್ಯೋಗಿಗಳಿಗೆ ಪ್ರಯೋಜನವನ್ನು ನೀಡುತ್ತದೆ ಎಂದರು. ಈ ಯೋಜನೆ ಜಾರಿಯಾದರೆ ಬಿಹಾರ, ಕೇರಳ ಮತ್ತು ಒಡಿಶಾದ ನಂತರ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ ನಾಲ್ಕನೇ ರಾಜ್ಯ ಕರ್ನಾಟಕವಾಗಲಿದೆ. ‘ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ಪ್ರಾಧ್ಯಾಪಕಿ ಸಪ್ನಾ ಎಸ್ ನೇತೃತ್ವದ 18 ಸದಸ್ಯರ ಸಮಿತಿ ವರದಿ ಸಲ್ಲಿಸಿದೆ.” ಎಂದರು. “ಸಪ್ನಾ ಮತ್ತು ಅವರ ತಂಡವು ಉತ್ತಮ ಕೆಲಸ ಮಾಡಿದೆ” ಎಂದು ಲಾಡ್ ಅವರು…

Read More

ಬೆಂಗಳೂರು :  ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 23 ರ ನಾಳೆ ಸೆ.24 ನಾಡಿದ್ದು, ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀಈ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕರ್ನಾಟಕದ ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಳಿದಂತೆ ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More

ಬೆಂಗಳೂರು : 2024-25ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗದಲ್ಲಿ “ಶಿಕ್ಷಣ ಅದಾಲತ್” ಕಾರ್ಯಕ್ರಮವನ್ನು ಏರ್ಪಡಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ. 2024-25ನೇ ಸಾಲಿನ ಅಕ್ಟೋಬರ್ ಮಾಹೆಯಲ್ಲಿ “ಶಿಕ್ಷಣ ಅದಾಲತ್” ಕಾರ್ಯಕ್ರಮವನ್ನು ಕಲಬುರಗಿ ವಿಭಾಗದ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ ಹಾಗೂ ತಾಲೂಕುಗಳಲ್ಲಿ ಹಮ್ಮಿಕೊಳ್ಳಲು ಉತ್ಸುಕರಾಗಿದ್ದೇವೆ. ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ಶಿಕ್ಷಕರ/ಮುಖ್ಯ. ಶಿಕ್ಷಕರ ಇಲಾಖಾ ಶಿಸ್ತು ಪ್ರಕರಣಗಳಲಿನ ವಿಳಂಬ/ಕುಂದುಕೊರತೆಗಳನ್ನು ನಿವಾರಿಸಲು ಶಿಕ್ಷಣ ಅದಾಲತ್ ನಡೆಸಿ ಶಿಕ್ಷಕರ ಶಿಸ್ತು ಪ್ರಕರಣಗಳು ಹಾಗೂ ಇತರೆ ಕುಂದುಕೊರತೆಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕಾಗಿದೆ. ಪ್ರಯುಕ್ತ ಆಯಾ ಜಿಲ್ಲಾ ಉಪನಿರ್ದೇಶಕರು ತಮ್ಮ ಜಿಲ್ಲೆಯ ವ್ಯಾಪ್ತಿಗೆ ಬರುವ ಉಪನಿರ್ದೇಶಕರ ಕಛೇರಿ ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿಗಳಲ್ಲಿ ಬಾಕಿ ಇರುವ ಶಿಸ್ತು ಪ್ರಕರಣದ ಕಡತಗಳನ್ನು ನಿಯಮಾನುಸಾರ ಪರಿಶೀಲಿಸಿ ತ್ವರಿತವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಿದೆ. ಈ ಶಿಕ್ಷಣ ಅದಾಲತ್‌ನಲ್ಲಿ ಅಪರ ಆಯುಕ್ತರು ಖುದ್ದಾಗಿ ಹಾಜರಿದ್ದು, ಕಡತಗಳನ್ನು ವಿಲೇವಾರಿ ಮಾಡುವುದಲ್ಲದೆ ಶಿಕ್ಷಕರ/ಮುಖ್ಯ ಶಿಕ್ಷಕರ ಶಿಸ್ತು ಪ್ರಕರಣಗಳ…

Read More